ಮುರುಘಾಶ್ರೀ ಪ್ರಕರಣ | ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ; ನವೆಂಬರ್‌ 3ರವರೆಗೆ ಜೈಲೇ ಗತಿ - Vistara News

ಕರ್ನಾಟಕ

ಮುರುಘಾಶ್ರೀ ಪ್ರಕರಣ | ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ; ನವೆಂಬರ್‌ 3ರವರೆಗೆ ಜೈಲೇ ಗತಿ

ಮುರುಘಾಶ್ರೀ ಪ್ರಕರಣ | ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮುರುಘಾ ಮಠದ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಗೊಂಡಿದೆ.

VISTARANEWS.COM


on

ಮುರುಘಾಶ್ರೀ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಮಠದ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ಚಿತ್ರದುರ್ಗ 2ನೇ ಅಪರ & ಸತ್ರ ನ್ಯಾಯಾಲಯವು, ನವೆಂಬರ್ 3ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ. ಇನ್ನು ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ಮಹಿಳಾ ವಾರ್ಡನ್ ರಶ್ಮಿ ನ್ಯಾಯಾಂಗ ಬಂಧನವೂ ವಿಸ್ತರಣೆಯಾಗಿದೆ. ಒಟ್ಟಾರೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದಂತಾಗಿದೆ.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಮಠದ ವಿದ್ಯಾರ್ಥಿನಿಲಯದಲ್ಲಿದ್ದ ಅಷ್ಟೂ ಹೆಣ್ಣು ಮಕ್ಕಳ ಆಪ್ತ ಸಮಾಲೋಚನೆಗೆ ಆದೇಶ

ಪ್ರಕರಣದ ಸಾರಾಂಶ
ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣವೊಂದರಲ್ಲಿ ಮುರುಘಾಶರಣರು ಜೈಲಿನಲ್ಲಿ ಇರುವ ಬೆನ್ನಲ್ಲೇ ಶುಕ್ರವಾರ (ಅ.೧೪) ಮೈಸೂರಲ್ಲಿ ಮಠದ ಅಡುಗೆ ಸಹಾಯಕಿಯೊಬ್ಬರು ತನ್ನಿಬ್ಬರು ಮಕ್ಕಳು ಸೇರಿದಂತೆ ಮತ್ತಿಬ್ಬರು ಮಕ್ಕಳ ಮೇಲೆ ಮುರುಘಾಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ದಾಖಲು ಮಾಡಿದ್ದರು. ಈ ವೇಳೆ ಪೊಲೀಸರು ಹಾಗೂ ಸಿಡಬ್ಲ್ಯೂಸಿ ಅಧಿಕಾರಿಗಳು ಆಕೆಯ ಹಾಗೂ ಒಬ್ಬಳು ಮಗಳ ಹೇಳಿಕೆಯನ್ನು ಪಡೆದುಕೊಂಡಿದ್ದರು. ನಾಲ್ಕು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ತಾಯಿ ಹೇಳಿದ್ದಾರೆ. “ಪತಿ ಇಲ್ಲದ ಕಾರಣ ತಾನು ಮಠದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದೆ. ನನ್ನ ಮಕ್ಕಳು ಮಠದ ವಸತಿ ಶಾಲೆಯಲ್ಲಿ ಓದುತ್ತಿದ್ದರು. ನನ್ನ ಇಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಮುರುಘಾ ಶರಣರು ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಪ್ರಭಾವ ಹೊಂದಿರುವ ಕಾರಣ ತಡವಾಗಿ ದೂರು ನೀಡುತ್ತಿದ್ದೇನೆ” ಎಂದೂ ಸಹ ಸಂತ್ರಸ್ತ ಬಾಲಕಿಯರಿಬ್ಬರ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದರು.

ಈ ಸಂಬಂಧ ಮೈಸೂರಿ‌ನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಒಟ್ಟು 7 ಮಂದಿ ಮೇಲೆ ಕೇಸ್‌ ಹಾಕಲಾಗಿತ್ತು. ಸ್ವಾಮೀಜಿಯವರ ಸಹಾಯಕರಾದ ಮಹಾಲಿಂಗ, ಅಡುಗೆ ಸಹಾಯಕ ಕರಿಯಪ್ಪ ಎಂಬ ಇಬ್ಬರ ಮೇಲೆ ಹೊಸದಾಗಿ ಎಫ್‌ಐಆರ್ ದಾಖಲಾದಂತಾಗಿತ್ತು.

ಶಿವಮೂರ್ತಿ ಮುರುಘಾ ಶರಣರು ಮೊದಲ ಆರೋಪಿಯಾಗಿದ್ದು, ಉಳಿದವರಾದ ಲೇಡಿ ಹಾಸ್ಟೆಲ್ ವಾರ್ಡನ್, ಮಠದ ಉತ್ತರಾಧಿಕಾರಿ, ಮಠದ ಕಾರ್ಯದರ್ಶಿ ಪರಮಶಿವಯ್ಯ, ವಕೀಲ ಗಂಗಾಧರಯ್ಯ, ಮುರುಘಾಶ್ರೀ ಸಹಾಯಕ ಮಹಾಲಿಂಗ, ಮುರುಘಾಶ್ರೀ ಅಡುಗೆಭಟ್ಟ ಕರಿಬಸಪ್ಪ ವಿರುದ್ಧ ಕ್ರಮವಾಗಿ ಕೇಸ್ ದಾಖಲಾಗಿದೆ.

ಏನಿದು ಮೊದಲ ಲೈಂಗಿಕ ಕಿರುಕುಳ ಪ್ರಕರಣ?
ಚಿತ್ರದುರ್ಗ ಜಿಲ್ಲೆಯ ಮುರುಘಾ ಮಠದ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪ ಕೇಳಿಬಂದಿತ್ತು. ವಸತಿ ಶಾಲೆಯಲ್ಲಿದ್ದ ಈ ಈ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆಂದು ದೂರು ನೀಡಲಾಗಿತ್ತು. ಅಲ್ಲದೆ, ಇದಕ್ಕೆ ಅಲ್ಲಿನ ವಾರ್ಡನ್‌ ಸೇರಿ ಹಲವರು ಸಹಕಾರ ನೀಡುತ್ತಿದ್ದಾರೆ ಎಂದು ಆಗಸ್ಟ್‌ ೨೭ರಂದು ಇಬ್ಬರು ವಿದ್ಯಾರ್ಥಿನಿಯರು ಒಡನಾಡಿ ಸಂಸ್ಥೆಯ ಮೂಲಕ ಮೈಸೂರಿನ ನಜರ್‌ಬಾದ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಒಬ್ಬಳು ವಿದ್ಯಾರ್ಥಿನಿ ಮೇಲೆ ೩ ವರ್ಷದಿಂದ ಹಾಗೂ ಇನ್ನೊಬ್ಬ ವಿದ್ಯಾರ್ಥಿನಿಯ ಮೇಲೆ ಕಳೆದ ಒಂದೂವರೆ ವರ್ಷದಿಂದ ಲೈಂಗಿಕ ದೌರ್ಜನ್ಯವನ್ನು ನಡೆಸುತ್ತಾ ಬರಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಯಾರೆಲ್ಲ ಭಾಗಿಗಳು?
ಡಾ. ಶಿವಮೂರ್ತಿ ಮುರುಘಾಶರಣರ ಮೇಲೆ ಅತ್ಯಾಚಾರ ಆರೋಪವನ್ನು ಹೊರಿಸಲಾಗಿದ್ದು, ಅವರಿಗೆ ಸಹಕಾರ ನೀಡಿದ ಆರೋಪದಡಿ ವಸತಿ ಶಾಲೆಯ ವಾರ್ಡನ್‌ ರಶ್ಮಿ, ಮಠದ ಮರಿಸ್ವಾಮಿ ಬಸವಾದಿತ್ಯ, ಕಾರ್ಯದರ್ಶಿ ಪರಮಶಿವಯ್ಯ, ವಕೀಲ ಗಂಗಾಧರ್‌ ಮೇಲೆ ದೂರು ದಾಖಲಾಗಿತ್ತು. ಈ ಇಬ್ಬರು ವಿದ್ಯಾರ್ಥಿನಿಯರನ್ನು ಒತ್ತಾಯಪೂರ್ವಕವಾಗಿ ಸ್ವಾಮೀಜಿ ಬಳಿ ಕಳುಹಿಸಲಾಗುತ್ತಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಲೈಂಗಿಕ ಕ್ರಿಯೆಗೆ ಒಪ್ಪದೇ ಇದ್ದರೆ ಹಣ್ಣು, ಸಿಹಿಯಲ್ಲಿ ಮತ್ತುಬರುವ ಔಷಧವನ್ನು ಬೆರೆಸಿ ಅತ್ಯಾಚಾರ ನಡೆಸಲಾಗುತ್ತದೆ ಎಂದೂ ಹೇಳಲಾಗಿದೆ.

ಬಂಧನದ ಬಳಿಕ
ಆಗಸ್ಟ್‌ ೨೭ರಂದು ದೂರು ದಾಖಲಾಗಿತ್ತಾದರೂ ಮುಂದಿನ ನಾಲ್ಕು ದಿನಗಳ ಕಾಲ ಕಾನೂನು ಪ್ರಕ್ರಿಯೆಯನ್ನು ತೆಗೆದುಕೊಂಡಿರಲಿಲ್ಲ. ಸೆಪ್ಟೆಂಬರ್‌ ೧ರಂದು ರಾತ್ರಿ ಸ್ವಾಮೀಜಿಯನ್ನು ಬಂಧನ ಮಾಡಲಾಯಿತು. ಎರಡನೇ ಆರೋಪಿ, ಹಾಸ್ಟೆಲ್‌ ವಾರ್ಡನ್‌ ರಶ್ಮಿಯನ್ನು ಸಹ ಬಳಿಕ ಬಂಧನ ಮಾಡಿ ಶಿವಮೊಗ್ಗದ ಜೈಲಿಗೆ ಕಳುಹಿಸಲಾಗಿದೆ. ಇದರ ಜತೆಗೆ ಉಳಿದ ಆರೋಪಿಗಳ ಪೈಕಿ ಬಸವಾದಿತ್ಯ ಮತ್ತು ಪರಮಶಿವಯ್ಯ ತಲೆಮರೆಸಿಕೊಂಡಿದ್ದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ, ಕೋರ್ಟ್‌ ಅದನ್ನು ಪುರಸ್ಕರಿಸದೆ ವಿಚಾರಣೆಯನ್ನು ಮುಂದೂಡುತ್ತಲೇ ಬಂದಿದೆ. ಇದರ ನಡುವೆ, ವಕೀಲರಾಗಿರುವ ಗಂಗಾಧರಯ್ಯ ಅವರನ್ನು ಪೊಲೀಸರು ವಿಚಾರಣೆ ನಡೆಸಿ, ಕರೆದಾಗ ಬರುವ ಷರತ್ತಿನೊಂದಿಗೆ ಬಿಟ್ಟುಕಳುಹಿಸಲಾಗಿದೆ.

ಇದನ್ನೂ ಓದಿ | ಮುರುಘಾ ಶ್ರೀ | ಒಡನಾಡಿ ಸೇವಾ ಸಂಸ್ಥೆಯಿಂದ ಮತ್ತೊಂದು ದೂರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಪ್ರಜ್ವಲ್‌ ವಿಡಿಯೊ ಕೇಸ್‌; ವಿಡಿಯೊದಲ್ಲಿರುವ ಮಹಿಳಾ ಅಧಿಕಾರಿಗಳಿಗೆ SIT ನೋಟಿಸ್‌: ‘ನಾನವಳಲ್ಲ’ ಎಂದು ಹೇಳಿಕೆ!

Prajwal Revanna Case: ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ವಿಡಿಯೊದಲ್ಲಿ ಸಾಕಷ್ಟು ಮಹಿಳಾ ಅಧಿಕಾರಿಗಳೂ ಇದ್ದಾರೆ ಎಂಬ ಬಗ್ಗೆ ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೊಗಳಲ್ಲಿ ಕಂಡ ಮುಖವನ್ನಾಧರಿಸಿ ಅವರ ಗುರುತನ್ನು ಪತ್ತೆ ಹಚ್ಚಿರುವ ಎಸ್‌ಐಟಿ ಅಧಿಕಾರಿಗಳು ಆ ಸಂತ್ರಸ್ತ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ.

VISTARANEWS.COM


on

Prajwal Revanna Case Women officers say face morphed in video
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಆ ವಿಡಿಯೊದಲ್ಲಿ ಇದ್ದಾರೆ ಎನ್ನಲಾದ ಮೂವರು ಮಹಿಳಾ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಒಬ್ಬೊಬ್ಬರೂ, “ನಾನವಳಲ್ಲ” ಎಂಬ ಉತ್ತರವನ್ನು ನೀಡಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ವಿಡಿಯೊದಲ್ಲಿ ಸಾಕಷ್ಟು ಮಹಿಳಾ ಅಧಿಕಾರಿಗಳೂ ಇದ್ದಾರೆ ಎಂಬ ಬಗ್ಗೆ ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೊಗಳಲ್ಲಿ ಕಂಡ ಮುಖವನ್ನಾಧರಿಸಿ ಅವರ ಗುರುತನ್ನು ಪತ್ತೆ ಹಚ್ಚಿರುವ ಎಸ್‌ಐಟಿ ಅಧಿಕಾರಿಗಳು ಆ ಸಂತ್ರಸ್ತ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ.

ಆದರೆ, ಈಗಾಗಲೇ ಈ ಪ್ರಕರಣದಲ್ಲಿ ಸಂಪೂರ್ಣ ಮುಜುಗರವನ್ನು ಅನುಭವಿಸಿರುವ ಮಹಿಳಾ ಅಧಿಕಾರಿಗಳು ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಪೊಲೀಸ್ ಅಧಿಕಾರಿಗಳ ವಿಡಿಯೊ ಹಾಗೂ ಫೋಟೊಗಳು ಸಹ ವೈರಲ್ ಆಗಿದ್ದವು. ಇದರಿಂದ ಅವರು ತೀವ್ರ ಆಘಾತವನ್ನು ಎದುರಿಸಿದ್ದಾರೆ.

ಈಗ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ನೀಡಿದ್ದರಿಂದ ಮತ್ತಷ್ಟು ಕಂಗೆಟ್ಟಿರುವ ಮಹಿಳಾ ಅಧಿಕಾರಿಗಳು, ಆ ವಿಡಿಯೊ ಹಾಗೂ ಫೋಟೊಗಳು ನಮ್ಮದಲ್ಲ. ಅದನ್ನು ಮಾರ್ಫ್‌ ಮಾಡಲಾಗಿದೆ ಎಂದು ನೋಟಿಸ್‌ಗೆ ಉತ್ತರ ಕೊಟ್ಟಿದ್ದಾರೆ ಎನ್ನಲಾಗಿದೆ.

ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ

ಒಂದು ವೇಳೆ ಈ ಮಹಿಳಾ ಅಧಿಕಾರಿಗಳು ಎಸ್‌ಐಟಿ ಮುಂದೆ ಬಂದು ತಮ್ಮ ಮೇಲೆ ಪ್ರಜ್ವಲ್‌ ದೌರ್ಜನ್ಯ ಮಾಡಿದ್ದಾರೆ. ಆಮಿಷವೊಡ್ಡುವ ಮೂಲಕ ಇಲ್ಲವೇ ಕಿರುಕುಳ ನೀಡುವ ಮೂಲಕ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದರೆ, ಈ ಕೇಸ್‌ ಮತ್ತಷ್ಟು ಬಲಿಷ್ಠವಾಗುತ್ತಿತ್ತು. ಆದರೆ, ಈಗ ಈ ಮಹಿಳಾ ಅಧಿಕಾರಿಗಳು ಆ ವಿಡಿಯೊ ಹಾಗೂ ಫೋಟೊದಲ್ಲಿರುವುದು ನಾವೇ ಅಲ್ಲ ಎಂದು ಹೇಳಿಬಿಟ್ಟಿದ್ದಾರೆ. ಹಾಗಾಗಿ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ ಇದೆ. ಒಂದು ವೇಳೆ ಎಸ್‌ಐಟಿ ಅಧಿಕಾರಿಗಳು ಅವರ ಮನವೊಲಿಕೆ ಮಾಡಿದಲ್ಲಿ ಗೌಪ್ಯ ಸ್ಥಳದಲ್ಲಿ ಹೇಳಿಕೆ ಪಡೆಯಲಿದ್ದಾರೆ ಎನ್ನಲಾಗಿದೆ.

ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

ಇಂದು (ಭಾನುವಾರ – ಮೇ 5) ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ಗೆ ಪ್ರಜ್ವಲ್‌ ರೇವಣ್ಣ ಆಗಮಿಸುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಏರ್‌ಪೋರ್ಟ್‌ ಬಳಿ ಬೀಡು ಬಿಟ್ಟಿರುವ ಎಸ್‌ಐಟಿ ತಂಡವು ಪ್ರಜ್ವಲ್‌ ಆಗಮಿಸುತ್ತಿದ್ದಂತೆ ವಶಕ್ಕೆ ಪಡೆಯುವ ಸಾಧ್ಯತೆ ದಟ್ಟವಾಗಿದೆ.

ಇಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಜ್ವಲ್‌ ಯಾವುದೇ ಸಮಯದಲ್ಲಿ ಬೇಕಿದ್ದರೂ ಭಾರತಕ್ಕೆ ಬರಬಹುದು ಎಂಬ ನಿಟ್ಟಿನಲ್ಲಿ ಶನಿವಾರ ರಾತ್ರಿಯಿಂದಲೇ ಏರ್‌ಪೋರ್ಟ್‌ನಲ್ಲಿ ಎಸ್‌ಐಟಿ ಟೀಂ ಬೀಡುಬಿಟ್ಟಿದೆ. ಆದರೆ, ಪ್ರಜ್ವಲ್‌ ರೇವಣ್ಣ ಈವರೆಗೂ ಆಗಮಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗಾಗಿ ಕಾದು ಕಾದು ಅಧಿಕಾರಿಗಳು ಸುಸ್ತಾಗಿದ್ದಾರೆ.

ಆದರೆ, ಈಗಿನ ಮಾಹಿತಿ ಪ್ರಕಾರ, ಪ್ರಜ್ವಲ್‌ ರೇವಣ್ಣ ಅವರು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ ಎನ್ನಲಾಗಿದೆ. ಪ್ರಜ್ವಲ್‌ಗಾಗಿ ಎಸ್ಐಟಿ, ಗುಪ್ತಚರ ತಂಡಗಳು ಕಾದು ಕುಳಿತಿದ್ದು, ವಿದೇಶಿ ವಿಮಾನಗಳ ಪ್ಯಾಸೆಂಜರ್ ಲಿಸ್ಟ್ ಅನ್ನು ಪರಿಶೀಲನೆ ನಡೆಸಲಾಗುತ್ತಿದೆ. ದುಬೈ, ಮಸ್ಕಟ್, ಪ್ರಾಂಕ್ ಫರ್ಟ್ ವಿಮಾನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.

ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಸಂಸದ ಪ್ರಜ್ವಲ್‌ ರೇವಣ್ಣ ಅವರು ಹಾಸನದ ತಮ್ಮ ನಿವಾಸದಲ್ಲೇ ಅತ್ಯಾಚಾರ (Physical abuse) ನಡೆಸಿರುವ ಬಗ್ಗೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಸಂಸದರ ನಿವಾಸವನ್ನು ಲಾಕ್‌ ಮಾಡಲಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರಿಗೆ ಸರ್ಕಾರ ನೀಡಿದ್ದ ಈ ನಿವಾಸವನ್ನು ಪ್ರಜ್ವಲ್‌ ಬಳಸಿಕೊಳ್ಳುತ್ತಿದ್ದರು.

ಎಸ್‌ಐಟಿ ಅಧಿಕಾರಿಗಳು ಇದೀಗ ಈ ನಿವಾಸವನ್ನು ವಶಕ್ಕೆ ಪಡೆದಿದ್ದಾರೆ. ಸಂಸದರ ನಿವಾಸದ ರೂಮ್‌ನಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಪ್ರಜ್ವಲ್ ರೇವಣ್ಣ‌ ವಿರುದ್ಧ ಆರೋಪ ಹೊರಿಸಿದ್ದ ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಮಾಜಿ ಪ್ರಧಾನಿ ಎಂಬ ಕಾರಣಕ್ಕೆ ದೇವೇಗೌಡ ಅವರಿಗೆ ಸರ್ಕಾರ ಈ ಬಂಗಲೆಯನ್ನು ನೀಡಿತ್ತು. ಇಂದಿಗೂ ದೇವೇಗೌಡರಿಗೆ ಮೀಸಲಾಗಿರುವ ಸಂಸದರ ನಿವಾಸವನ್ನು ಸದ್ಯ ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದಾರೆ.

2019ರಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರಿಗಾಗಿಯೇ ಈ ನಿವಾಸ‌ವನ್ನು ನಿರ್ಮಾಣ ಮಾಡಲಾಗಿತ್ತು. ಹಾಸನಕ್ಕೆ ಬಂದಾಗ ತಂಗಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ನಿವಾಸವನ್ನು ನಿರ್ಮಿಸಲಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ದೇವೇಗೌಡರಿಗೆ ನೀಡಿದ್ದ ನಿವಾಸವನ್ನು ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದರು.

ದೇವೇಗೌಡರು ಹಾಸನ ನಗರಕ್ಕೆ ಬಂದಾಗ ತಂಗುತ್ತಿದ್ದ ಇದೇ ನಿವಾಸದಲ್ಲಿ ವಾರದಲ್ಲಿ ನಾಲ್ಕು ದಿನ ಪ್ರಜ್ವಲ್‌ ವಾಸ್ತವ್ಯ ಹೂಡುತ್ತಿದ್ದರು. ಸದ್ಯ ಈ ನಿವಾಸದಲ್ಲೇ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ. ಅಶ್ಲೀಲ ವಿಡಿಯೊ ರೆಕಾರ್ಡ್ ಕೂಡ ಇದೇ ನಿವಾಸದ ರೂಮ್‌ನಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ನಿವಾಸ ಹಾಸನದ ಆರ್‌.ಸಿ. ರಸ್ತೆಯಲ್ಲಿದೆ.

ಹೊಳೆನರಸೀಪುರದಲ್ಲಿ ನೀರವ ಮೌನ

ಮಾಜಿ ಸಚಿವ ರೇವಣ್ಣ ಬಂಧನದ ಬಳಿಕ ಹೊಳೆನರಸೀಪುರದಲ್ಲಿ ನೀರವ ಮೌನ ಆವರಿಸಿದೆ. ಸದಾ ಜನರಿಂದ ತುಂಬಿರುತ್ತಿದ್ದ ರೇವಣ್ಣರ ಹೊಳೆನರಸೀಪುರದ ಮನೆ ಖಾಲಿ ಖಾಲಿ ಎನಿಸಿದೆ. ಸದ್ಯ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಮನೆಯಲ್ಲಿಯೇ ಇದ್ದಾರೆ. ಶನಿವಾರ ರೇವಣ್ಣ ಅವರ ಮನೆಯಲ್ಲಿ ಮಹಜರು ನಡೆಸಿದ್ದ ಎಸ್‌ಐಟಿ ತಂಡ ವಶಕ್ಕೆ ಪಡೆದಿತ್ತು. ಹಾಸನ ರಸ್ತೆಯಲ್ಲಿ ರೇವಣ್ಣ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಒಂದು ಕೆಎಸ್ಆರ್‌ಪಿ ತುಕಡಿಯನ್ನ ಮನೆ ಬಳಿ ನಿಯೋಜನೆ ಮಾಡಿ ಭದ್ರತೆ ಖಚಿತಪಡಿಸಲಾಗಿದೆ.

ಇದನ್ನೂ ಓದಿ: Prajwal Revanna Case: ಹಾಸನ ಸಂಸದರ ನಿವಾಸದ ಗೇಟಿಗೆ ಬೀಗ; ನಿವಾಸದ ಕೀ ನಾಪತ್ತೆ! ಎಚ್‌ಡಿ ರೇವಣ್ಣ ಕೂಡ ಗಾಯಬ್!‌

ಈ ಮಧ್ಯೆ ರೇವಣ್ಣ ಅವರನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ತಂಡ ಮತ್ತೆ ಇಂದು ವಿಚಾರಣೆಗೆ ಒಳಪಡಿಸಲಿದೆ. ಶನಿವಾರ ರಾತ್ರಿ ತಡರಾತ್ರಿವರೆಗೆ ವಿಚಾರಣೆ ನಡೆಸಿದ್ದ ಅಧಿಕಾರಿಗಳು ಮತ್ತೆ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ಮಹಿಳೆಯ ಅಪಹರಣ ಪ್ರಕರಣದ ಬಗ್ಗೆ ಕೂಲಂಕಷ ವಿಚಾರಣೆ ನಡೆಸಲಿದ್ದಾರೆ. ಇಂದು ಸಂಜೆ ಕೋರಮಂಗಲದ ಎನ್‌ಜಿವಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ರೇವಣ್ಣ ಅವರನ್ನು ಹಾಜರುಪಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ನಿವಾಸದ ಎದುರು ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Continue Reading

ಬೆಂಗಳೂರು

108 Ambulance : 3 ತಿಂಗಳ ವೇತನ ಬಾಕಿ; ನಾಳೆ ರಾತ್ರಿಯಿಂದಲೇ 108 ಆಂಬ್ಯುಲೆನ್ಸ್‌ ಸೇವೆ ಬಂದ್‌!

Ambulance Service: ಜನರಿಗೆ ತುರ್ತು ಚಿಕಿತ್ಸೆ ಸಿಗಲೆಂದು ಆರಂಭವಾದ 108 ಆ್ಯಂಬುಲೆನ್ಸ್ (108 ambulance) ಸೇವೆಗೆ ಮಂಕು ಕವಿದಿದೆ. ಪದೇಪದೆ ಆಂಬ್ಯುಲೆನ್ಸ್‌ ಸಿಬ್ಬಂದಿಗೆ ವೇತನ ಸಮಸ್ಯೆಯು ಉದ್ಭವಿಸುತ್ತಿದೆ. ಇದೀಗ 3 ತಿಂಗಳ ಬಾಕಿ ಸಂಬಳ ನೀಡಲು ವಿಳಂಬ ಮಾಡುತ್ತಿರುವುದಕ್ಕೆ ಸಿಟ್ಟಾಗಿರುವ 108 ಆಂಬ್ಯುಲೆನ್ಸ್‌ ಸಿಬ್ಬಂದಿ ಪ್ರತಿಭಟನೆಗೆ ಕರೆಕೊಟ್ಟಿದ್ದಾರೆ.

VISTARANEWS.COM


on

By

108 ambulance
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರೋಗ್ಯ ಕವಚ 108 ಆಂಬ್ಯುಲೆನ್ಸ್‌ (108 Ambulance) ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ (Salary Problem) ಕಾರಣಕ್ಕೆ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ನಾಳೆ ಅಂದರೆ ಮೇ.6ರ ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ ಆಂಬ್ಯುಲೆನ್ಸ್ ಸೇವೆ ಬಂದ್ (Ambulance Service) ಆಗಲಿದೆ.

ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಬ್ಬಂದಿ ತಿರುಗಿ ಬಿದ್ದಿದ್ದಾರೆ. ಮೂರು ತಿಂಗಳಿಂದ ವೇತನ ಸಿಗದೆ 108 ಸಿಬ್ಬಂದಿ ಜೀವನ ಹೈರಾಣಾಗಿದೆ. ಒಂದು ಕಡೆ ಮೂರು ತಿಂಗಳಿಂದ ಸಂಬಳವಿಲ್ಲ. ಮತ್ತೊಂದು ಕಡೆ ಜಿವಿಕೆ ಸಂಸ್ಥೆ ವೇತನ ಕಡಿತಗೊಳಿಸಿದೆ ಎಂದು ಕಿಡಿಕಾರಿದ್ದಾರೆ.

ಈ ಎಲ್ಲ ಕಾರಣಗಳಿಗೆ ಸೋಮವಾರ ರಾತ್ರಿಯಿಂದ ಆಂಬ್ಯುಲೆನ್ಸ್‌ ಓಡಾಟವನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಕಳೆದ ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳ ವೇತನ ಬಾಕಿ ಇದೆ. ಜಿವಿಕೆ ಸಂಸ್ಥೆ ಈಗಾಗಲೇ ಡಿಸೆಂಬರ್, ಜನವರಿ ತಿಂಗಳ ವೇತನವನ್ನು 30 ಸಾವಿರ ರೂ. ಕಡಿತ ಮಾಡಿ, ಕೇವಲ 13 ಸಾವಿರ ರೂ. ವೇತನ ನೀಡುತ್ತಿದೆ.

ಇದನ್ನೂ ಓದಿ: Accident News: ಸೆಕೆ ಎಂದು ಕೆರೆಗೆ ಜಿಗಿದ ವ್ಯಕ್ತಿ ಸಾವು; ವಿದ್ಯುತ್‌ ತಂತಿ ತುಳಿದು ಪ್ರಾಣಬಿಟ್ಟ ರೈತ

ಹೀಗಾಗಿ ನಾಳೆ ಸಂಜೆಯೊಳಗೆ ವೇತನ ಪಾವತಿ ಮಾಡುವಂತೆ ಆರೋಗ್ಯ ಇಲಾಖೆಗೆ ಮನವಿ ಮಾಡಲಾಗಿದೆ. ಕಡಿತ ಮಾಡಿದ ವೇತನವನ್ನು ಬಿಡುಗಡೆ ಮಾಡಬೇಕು. ಒಂದು ವೇಳೆ ವೇತನ ಪಾವತಿ ಮಾಡದಿದ್ದರೆ ಮುಷ್ಕರದ ಎಚ್ಚರಿಕೆಯನ್ನು ಕರ್ನಾಟಕ ರಾಜ್ಯ ಆರೋಗ್ಯ ಕವಚ 108 ನೌಕರರ ಸಂಘ ನೀಡಿದೆ.

ರಸ್ತೆಗಿಳಿಯಲ್ಲ ಆಂಬ್ಯುಲೆನ್ಸ್‌

ಸೋಮವಾರ ರಾತ್ರಿ (ಮೇ 6) 8 ಗಂಟೆಯಿಂದ ರಾಜ್ಯದ 3,500 ಆರೋಗ್ಯ ಕವಚ ಸಿಬ್ಬಂದಿ ಮುಷ್ಕರ ನಡೆಸಲಿದ್ದಾರೆ. ರಾಜ್ಯದಲ್ಲಿ ಒಟ್ಟು 711 ಆಂಬ್ಯುಲೆನ್ಸ್‌ಗಳು ಕಾರ್ಯ ನಿರ್ವಹಿಸುತ್ತಿದೆ. ರಾತ್ರಿಯಿಂದ ಸಂಪೂರ್ಣ ಬಂದ್‌ ಆಗಲಿದ್ದು, ರೋಗಿಗಳಿಗೆ ತೊಂದರೆ ಆದರೆ ಸರ್ಕಾರವೇ ನೇರ ಹೊಣೆ ಎಂದು ಆಂಬ್ಯುಲೆನ್ಸ್‌ ನೌಕರರ ಸಂಘದ ಉಪಾಧ್ಯಕ್ಷ ದಯಾನಂದ ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

Prajwal Revanna Case: ಈಗಿನ ಮಾಹಿತಿ ಪ್ರಕಾರ, ಪ್ರಜ್ವಲ್‌ ರೇವಣ್ಣ ಅವರು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ ಎನ್ನಲಾಗಿದೆ. ಪ್ರಜ್ವಲ್‌ಗಾಗಿ ಎಸ್ಐಟಿ, ಗುಪ್ತಚರ ತಂಡಗಳು ಕಾದು ಕುಳಿತಿದ್ದು, ವಿದೇಶಿ ವಿಮಾನಗಳ ಪ್ಯಾಸೆಂಜರ್ ಲಿಸ್ಟ್ ಅನ್ನು ಪರಿಶೀಲನೆ ನಡೆಸಲಾಗುತ್ತಿದೆ. ದುಬೈ, ಮಸ್ಕಟ್, ಪ್ರಾಂಕ್ ಫರ್ಟ್ ವಿಮಾನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಪ್ರಜ್ವಲ್‌ ಅವರು ಹಾಸನದ ತಮ್ಮ ನಿವಾಸದಲ್ಲೇ ಅತ್ಯಾಚಾರ ನಡೆಸಿರುವ ಬಗ್ಗೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಸಂಸದರ ನಿವಾಸವನ್ನು ಲಾಕ್‌ ಮಾಡಲಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರಿಗೆ ಸರ್ಕಾರ ನೀಡಿದ್ದ ಈ ನಿವಾಸವನ್ನು ಪ್ರಜ್ವಲ್‌ ಬಳಸಿಕೊಳ್ಳುತ್ತಿದ್ದರು.

VISTARANEWS.COM


on

Prajwal Revanna Case Prajwal likely to arrive in Bengaluru today SIT decides to arrest him at airport
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣವು (Hassan Pen Drive Case) ದಿನೇ ದಿನೆ ಜಟಿಲವಾಗುತ್ತಾ ಸಾಗಿದೆ. ಈ ನಡುವೆ ಅವರ ತಂದೆ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ಪ್ರಜ್ವಲ್‌ ಅವರನ್ನು ಭಾರತಕ್ಕೆ ಬರುವಂತೆ ಜೆಡಿಎಸ್‌ ಮುಖಂಡರು ಮನವೊಲಿಸಿದ್ದು, ಅವರು ಇಂದು (ಭಾನುವಾರ – ಮೇ 5) ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ಗೆ ಆಗಮಿಸುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಏರ್‌ಪೋರ್ಟ್‌ ಬಳಿ ಬೀಡು ಬಿಟ್ಟಿರುವ ಎಸ್‌ಐಟಿ ತಂಡವು ಪ್ರಜ್ವಲ್‌ ಆಗಮಿಸುತ್ತಿದ್ದಂತೆ ವಶಕ್ಕೆ ಪಡೆಯುವ ಸಾಧ್ಯತೆ ದಟ್ಟವಾಗಿದೆ.

ಇಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಜ್ವಲ್‌ ಯಾವುದೇ ಸಮಯದಲ್ಲಿ ಬೇಕಿದ್ದರೂ ಭಾರತಕ್ಕೆ ಬರಬಹುದು ಎಂಬ ನಿಟ್ಟಿನಲ್ಲಿ ಶನಿವಾರ ರಾತ್ರಿಯಿಂದಲೇ ಏರ್‌ಪೋರ್ಟ್‌ನಲ್ಲಿ ಎಸ್‌ಐಟಿ ಟೀಂ ಬೀಡುಬಿಟ್ಟಿದೆ. ಆದರೆ, ಪ್ರಜ್ವಲ್‌ ರೇವಣ್ಣ ಈವರೆಗೂ ಆಗಮಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗಾಗಿ ಕಾದು ಕಾದು ಅಧಿಕಾರಿಗಳು ಸುಸ್ತಾಗಿದ್ದಾರೆ.

ಆದರೆ, ಈಗಿನ ಮಾಹಿತಿ ಪ್ರಕಾರ, ಪ್ರಜ್ವಲ್‌ ರೇವಣ್ಣ ಅವರು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ ಎನ್ನಲಾಗಿದೆ. ಪ್ರಜ್ವಲ್‌ಗಾಗಿ ಎಸ್ಐಟಿ, ಗುಪ್ತಚರ ತಂಡಗಳು ಕಾದು ಕುಳಿತಿದ್ದು, ವಿದೇಶಿ ವಿಮಾನಗಳ ಪ್ಯಾಸೆಂಜರ್ ಲಿಸ್ಟ್ ಅನ್ನು ಪರಿಶೀಲನೆ ನಡೆಸಲಾಗುತ್ತಿದೆ. ದುಬೈ, ಮಸ್ಕಟ್, ಪ್ರಾಂಕ್ ಫರ್ಟ್ ವಿಮಾನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.

ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಸಂಸದ ಪ್ರಜ್ವಲ್‌ ರೇವಣ್ಣ ಅವರು ಹಾಸನದ ತಮ್ಮ ನಿವಾಸದಲ್ಲೇ ಅತ್ಯಾಚಾರ (Physical abuse) ನಡೆಸಿರುವ ಬಗ್ಗೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಸಂಸದರ ನಿವಾಸವನ್ನು ಲಾಕ್‌ ಮಾಡಲಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರಿಗೆ ಸರ್ಕಾರ ನೀಡಿದ್ದ ಈ ನಿವಾಸವನ್ನು ಪ್ರಜ್ವಲ್‌ ಬಳಸಿಕೊಳ್ಳುತ್ತಿದ್ದರು.

ಎಸ್‌ಐಟಿ ಅಧಿಕಾರಿಗಳು ಇದೀಗ ಈ ನಿವಾಸವನ್ನು ವಶಕ್ಕೆ ಪಡೆದಿದ್ದಾರೆ. ಸಂಸದರ ನಿವಾಸದ ರೂಮ್‌ನಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಪ್ರಜ್ವಲ್ ರೇವಣ್ಣ‌ ವಿರುದ್ಧ ಆರೋಪ ಹೊರಿಸಿದ್ದ ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಮಾಜಿ ಪ್ರಧಾನಿ ಎಂಬ ಕಾರಣಕ್ಕೆ ದೇವೇಗೌಡ ಅವರಿಗೆ ಸರ್ಕಾರ ಈ ಬಂಗಲೆಯನ್ನು ನೀಡಿತ್ತು. ಇಂದಿಗೂ ದೇವೇಗೌಡರಿಗೆ ಮೀಸಲಾಗಿರುವ ಸಂಸದರ ನಿವಾಸವನ್ನು ಸದ್ಯ ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದಾರೆ.

2019ರಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರಿಗಾಗಿಯೇ ಈ ನಿವಾಸ‌ವನ್ನು ನಿರ್ಮಾಣ ಮಾಡಲಾಗಿತ್ತು. ಹಾಸನಕ್ಕೆ ಬಂದಾಗ ತಂಗಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ನಿವಾಸವನ್ನು ನಿರ್ಮಿಸಲಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ದೇವೇಗೌಡರಿಗೆ ನೀಡಿದ್ದ ನಿವಾಸವನ್ನು ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದರು.

ದೇವೇಗೌಡರು ಹಾಸನ ನಗರಕ್ಕೆ ಬಂದಾಗ ತಂಗುತ್ತಿದ್ದ ಇದೇ ನಿವಾಸದಲ್ಲಿ ವಾರದಲ್ಲಿ ನಾಲ್ಕು ದಿನ ಪ್ರಜ್ವಲ್‌ ವಾಸ್ತವ್ಯ ಹೂಡುತ್ತಿದ್ದರು. ಸದ್ಯ ಈ ನಿವಾಸದಲ್ಲೇ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ. ಅಶ್ಲೀಲ ವಿಡಿಯೊ ರೆಕಾರ್ಡ್ ಕೂಡ ಇದೇ ನಿವಾಸದ ರೂಮ್‌ನಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ನಿವಾಸ ಹಾಸನದ ಆರ್‌.ಸಿ. ರಸ್ತೆಯಲ್ಲಿದೆ.

ಹೊಳೆನರಸೀಪುರದಲ್ಲಿ ನೀರವ ಮೌನ

ಮಾಜಿ ಸಚಿವ ರೇವಣ್ಣ ಬಂಧನದ ಬಳಿಕ ಹೊಳೆನರಸೀಪುರದಲ್ಲಿ ನೀರವ ಮೌನ ಆವರಿಸಿದೆ. ಸದಾ ಜನರಿಂದ ತುಂಬಿರುತ್ತಿದ್ದ ರೇವಣ್ಣರ ಹೊಳೆನರಸೀಪುರದ ಮನೆ ಖಾಲಿ ಖಾಲಿ ಎನಿಸಿದೆ. ಸದ್ಯ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಮನೆಯಲ್ಲಿಯೇ ಇದ್ದಾರೆ. ಶನಿವಾರ ರೇವಣ್ಣ ಅವರ ಮನೆಯಲ್ಲಿ ಮಹಜರು ನಡೆಸಿದ್ದ ಎಸ್‌ಐಟಿ ತಂಡ ವಶಕ್ಕೆ ಪಡೆದಿತ್ತು. ಹಾಸನ ರಸ್ತೆಯಲ್ಲಿ ರೇವಣ್ಣ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಒಂದು ಕೆಎಸ್ಆರ್‌ಪಿ ತುಕಡಿಯನ್ನ ಮನೆ ಬಳಿ ನಿಯೋಜನೆ ಮಾಡಿ ಭದ್ರತೆ ಖಚಿತಪಡಿಸಲಾಗಿದೆ.

ಇದನ್ನೂ ಓದಿ: Prajwal Revanna Case: ಹಾಸನ ಸಂಸದರ ನಿವಾಸದ ಗೇಟಿಗೆ ಬೀಗ; ನಿವಾಸದ ಕೀ ನಾಪತ್ತೆ! ಎಚ್‌ಡಿ ರೇವಣ್ಣ ಕೂಡ ಗಾಯಬ್!‌

ಈ ಮಧ್ಯೆ ರೇವಣ್ಣ ಅವರನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ತಂಡ ಮತ್ತೆ ಇಂದು ವಿಚಾರಣೆಗೆ ಒಳಪಡಿಸಲಿದೆ. ಶನಿವಾರ ರಾತ್ರಿ ತಡರಾತ್ರಿವರೆಗೆ ವಿಚಾರಣೆ ನಡೆಸಿದ್ದ ಅಧಿಕಾರಿಗಳು ಮತ್ತೆ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ಮಹಿಳೆಯ ಅಪಹರಣ ಪ್ರಕರಣದ ಬಗ್ಗೆ ಕೂಲಂಕಷ ವಿಚಾರಣೆ ನಡೆಸಲಿದ್ದಾರೆ. ಇಂದು ಸಂಜೆ ಕೋರಮಂಗಲದ ಎನ್‌ಜಿವಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ರೇವಣ್ಣ ಅವರನ್ನು ಹಾಜರುಪಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ನಿವಾಸದ ಎದುರು ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Continue Reading

ವಿಜಯಪುರ

Accident News: ಸೆಕೆ ಎಂದು ಕೆರೆಗೆ ಜಿಗಿದ ವ್ಯಕ್ತಿ ಸಾವು; ವಿದ್ಯುತ್‌ ತಂತಿ ತುಳಿದು ಪ್ರಾಣಬಿಟ್ಟ ರೈತ

Accident News : ಪ್ರತ್ಯೇಕ ಕಡೆಗಳಲ್ಲಿ ನಡೆದ ಅವಘಡದಲ್ಲಿ ಇಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ವಿಜಯಪುರದಲ್ಲಿ ಈಜಲು ಹೋಗಿದ್ದ ವ್ಯಕ್ತಿಯೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟರೆ, ಮೈಸೂರಲ್ಲಿ ರೈತರೊಬ್ಬರು ವಿದ್ಯುತ್‌ ತಂತಿ ತುಳಿದು ಜೀವ ಕಳೆದುಕೊಂಡಿದ್ದಾರೆ.

VISTARANEWS.COM


on

By

Accident News Drowned in water
Koo

ವಿಜಯಪುರ: ವಿಜಯಪುರ ತಾಲೂಕಿನ ಮಖಣಾಪುರ ಗ್ರಾಮದಲ್ಲಿ ಸ್ನೇಹಿತರ ಜತೆಗೆ ಕೆರೆಯಲ್ಲಿ (Drowned in water) ಈಜಲು ಹೋದ ವ್ಯಕ್ತಿ ನೀರಲ್ಲಿ ಮುಳುಗಿ (Accident News) ಮೃತಪಟ್ಟಿದ್ದಾರೆ. ರಾಜಶೇಖರ (37) ಮೃತ ದುರ್ದೈವಿ.

ವಿಜಯಪುರದಲ್ಲಿ ರಣ ಬಿಸಿಲಿನಿಂದ ಸೆಕೆ ಹೆಚ್ಚಾಗಿದ್ದಕ್ಕೆ ರಾಜಶೇಖರ ಮಖಣಾಪುರ ಗ್ರಾಮದಲ್ಲಿನ ಕೆರೆಯಲ್ಲಿ ಈಜಲು ಹೋಗಿದ್ದರು. ಎಂಟು ಮಂದಿ ಸ್ನೇಹಿತರ ಜತೆಯಾಗಿ ಕೆರೆಯಲ್ಲಿ ಈಜಲು ಹೋದಾಗ ಘಟನೆ ನಡೆದಿದೆ.

ಕೆರೆಗೆ ಇಳಿದಾಗ ನೀರಿನಿಂದ ಹೊರಬರಲು ಆಗದೆ ರಾಜಶೇಖರ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಜತೆಗೆ ಇದ್ದವರು ರಕ್ಷಣೆಗೆ ಮುಂದಾದರೂ ಯಾವುದೇ ಪ್ರಯೋಜನ ಆಗಲಿಲ್ಲ. ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಮೈಸೂರಲ್ಲಿ ವಿದ್ಯುತ್ ತಂತಿ ತುಳಿದು ರೈತ ಸಾವು

ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಮೇದಿನಿ ಗ್ರಾಮದಲ್ಲಿ ರೈತರಿಬ್ಬರು ವಿದ್ಯುತ್‌ ತಂತಿ ತುಳಿದು ಮೃತಪಟ್ಟಿದ್ದಾರೆ. ರಾಚನಾಯಕ (70) ಮೃತ ದುರ್ದೈವಿ. ಮೇದಿನಿ ಗ್ರಾಮದ ನಿವಾಸಿ ರಾಚನಾಯಕ ಅವರು ಗದ್ದೆಗೆ ನೀರು ಹಾಯಿಸಲು ಹೋಗಿದ್ದರು.

ಇತ್ತೀಚೆಗೆ ಸುರಿದ ಧಾರಾಕಾರ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಕೆಳಗೆ ಬಿದ್ದಿತ್ತು. ಆದರೆ ಇದನ್ನು ಗಮನಿಸಿದ ರಾಚನಾಯಕ ವಿದ್ಯುತ್ ತುಳಿದಿದ್ದಾರೆ. ದಿಢೀರ್‌ ವಿದ್ಯುತ್‌ ಪ್ರವಹಿಸಿದ್ದು ಕ್ಷಣಾರ್ಧದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ತಲಕಾಡು ಪೊಲೀಸರು ಹಾಗೂ ಸೆಸ್ಕ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಈ ಸಂಬಂಧ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder case : ಪತಿ ಮೇಲಿನ ಸಿಟ್ಟಿಗೆ ಮೂಕ ಮಗುವನ್ನೇ ಕಾಲುವೆಗೆ ಎಸೆದಳು; ಮೊಸಳೆ ಬಾಯಲ್ಲಿತ್ತು ಮೃತದೇಹ!

ಸಡನ್‌ ಬ್ರೇಕ್‌ಗೆ ಸರಣಿ ಅಪಘಾತ

ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 5 ಕಾರುಗಳು ಜಖಂಗೊಂಡಿವೆ. ಕಾರೊಂದು ಸಡನ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬಂದ ನಾಲ್ಕು ಕಾರುಗಳು ಪರಸ್ಪರ ಡಿಕ್ಕಿಯಾಗಿವೆ. ಸರಣಿ ಅಪಘಾತದಿಂದ 1 ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

accident News

ಹೆದ್ದಾರಿಯಲ್ಲಿ ಪಲ್ಟಿಯೊಡೆದ ಪೆಟ್ರೋಲ್ ಟ್ಯಾಂಕರ್

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಮುಗುಚಿ ಬಿದ್ದ ಘಟನೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ. ಟ್ಯಾಂಕರ್ ಮಗುಚಿ ಬೀಳುತ್ತಿದ್ದಂತೆ ಪೆಟ್ರೋಲ್ ಸೋರಿಕೆಯಾಗಿತ್ತು.

ಕೂಡಲೇ ಸ್ಥಳಕ್ಕಾಗಮಿಸಿದ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಸಿಬ್ಬಂದಿ ಮಗುಚಿ ಬಿದ್ದ ಟ್ಯಾಂಕರ್ ಕ್ರೈನ್ ಮೂಲಕ ಮೇಲೆತ್ತಿದ್ದರು. ಇನ್ನೂ ರಸ್ತೆಯಲ್ಲಿ ಅಪಾರ ಪ್ರಮಾಣದಲ್ಲಿ ಸೋರಿಕೆಯಾಗಿದ್ದ ಪೆಟ್ರೋಲ್ ತೆರವು ಮಾಡಲಾಯಿತು. ಮಂಗಳೂರಿನಿಂದ ಅತ್ತಿಬೆಲೆ ಕಡೆಗೆ ಬರುತ್ತಿದ್ದ ಟ್ಯಾಂಕರ್‌ ಹೆದ್ದಾರಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case Women officers say face morphed in video
ಕ್ರೈಂ18 seconds ago

Prajwal Revanna Case: ಪ್ರಜ್ವಲ್‌ ವಿಡಿಯೊ ಕೇಸ್‌; ವಿಡಿಯೊದಲ್ಲಿರುವ ಮಹಿಳಾ ಅಧಿಕಾರಿಗಳಿಗೆ SIT ನೋಟಿಸ್‌: ‘ನಾನವಳಲ್ಲ’ ಎಂದು ಹೇಳಿಕೆ!

arrest
ದೇಶ9 mins ago

ಹಿಂದೂ ಸಂಘಟನೆಯ ನಾಯಕನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಮೌಲ್ವಿಯ ಬಂಧನ

108 ambulance
ಬೆಂಗಳೂರು12 mins ago

108 Ambulance : 3 ತಿಂಗಳ ವೇತನ ಬಾಕಿ; ನಾಳೆ ರಾತ್ರಿಯಿಂದಲೇ 108 ಆಂಬ್ಯುಲೆನ್ಸ್‌ ಸೇವೆ ಬಂದ್‌!

Viral Video
ವೈರಲ್ ನ್ಯೂಸ್12 mins ago

Viral Video: ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿ ಕೊಂದೇ ಬಿಟ್ಟ ಜನ; ಶಾಕಿಂಗ್‌ ವಿಡಿಯೋ ವೈರಲ್‌

Prajwal Revanna Case Prajwal likely to arrive in Bengaluru today SIT decides to arrest him at airport
ಕ್ರೈಂ20 mins ago

Prajwal Revanna Case: ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

viral news
ಕ್ರೀಡೆ36 mins ago

Viral News: ಎಐ ತಂತ್ರಜ್ಞಾನದ ಮೂಲಕ ತಂಡ ಆಯ್ಕೆ ಮಾಡಿ ಟಿ20 ಸರಣಿ ಗೆದ್ದ ಇಂಗ್ಲೆಂಡ್​ ಮಹಿಳಾ ತಂಡ

Kareena Kapoor appointed Unicef India National Ambassador
ಸಿನಿಮಾ37 mins ago

Kareena Kapoor: ʻಯುನಿಸೆಫ್ ಇಂಡಿಯಾʼಗೆ ರಾಯಭಾರಿಯಾದ ಕರೀನಾ ಕಪೂರ್

Accident News Drowned in water
ವಿಜಯಪುರ50 mins ago

Accident News: ಸೆಕೆ ಎಂದು ಕೆರೆಗೆ ಜಿಗಿದ ವ್ಯಕ್ತಿ ಸಾವು; ವಿದ್ಯುತ್‌ ತಂತಿ ತುಳಿದು ಪ್ರಾಣಬಿಟ್ಟ ರೈತ

Sunidhi Chauhan audience member throws bottle at her
ಬಾಲಿವುಡ್1 hour ago

Sunidhi Chauhan: ಗಾಯಕಿ ಸುನಿಧಿ ಚೌಹಾಣ್ ಮೇಲೆ ಬಾಟಲಿ ಎಸೆತ: ವಿಡಿಯೊ ವೈರಲ್‌!

Vijay Sankeshwar
Lok Sabha Election 20241 hour ago

Vijay Sankeshwar: 2014ರಲ್ಲಿ ಮೋದಿ ಕೈಗೆ ಮೌನಿ ಬಾಬಾ ಖಾಲಿ ಚೊಂಬು ಕೊಟ್ಟಿದ್ದರು; ಉದ್ಯಮಿ ವಿಜಯ ಸಂಕೇಶ್ವರ ವಾಗ್ದಾಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌