Murugha Seer case HC quashes appointment of administrator for Murugha Mutt Murugha Seer: ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ರದ್ದು ಮಾಡಿದ ಹೈಕೋರ್ಟ್‌; ಸರ್ಕಾರಕ್ಕೆ ಚಾಟಿ - Vistara News

ಕರ್ನಾಟಕ

Murugha Seer: ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ರದ್ದು ಮಾಡಿದ ಹೈಕೋರ್ಟ್‌; ಸರ್ಕಾರಕ್ಕೆ ಚಾಟಿ

High Court: ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ಜೈಲು ಸೇರಿರುವ ಕಾರಣ ಶ್ರೀಮಠಕ್ಕೆ ಆಡಳಿತಾಧಿಕಾರಿಯನ್ನು ಸರ್ಕಾರ ನೇಮಿಸಿತ್ತು. ಇದೀಗ ಹೈಕೋರ್ಟ್‌ ಆದೇಶವನ್ನು ರದ್ದುಪಡಿಸಿದೆ.

VISTARANEWS.COM


on

Murugha Mutt PS Vastrada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿತ್ರದುರ್ಗ ಮುರುಘಾಮಠ ಶ್ರೀಗಳ (Murugha Seer) ಪೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಐಎಎಸ್‌ ಅಧಿಕಾರಿ ಪಿ.ಎಸ್‌.ವಸ್ತ್ರದ ಅವರನ್ನು ಮಠದ‌ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ರದ್ದು ಪಡಿಸಿದೆ.

ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ (ಎಸ್‌ಜೆಎಂ) ಪೀಠಾಧಿಪತಿ ಬಂಧನವಾಗಿದ್ದ ಹಿನ್ನೆಲೆಯಲ್ಲಿ ಐಎಎಸ್‌ ಅಧಿಕಾರಿ ಪಿ.ಎಸ್‌.ವಸ್ತ್ರದ ಅವರನ್ನು ಮಠದ‌ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: Opposition Unity: ಪ್ರತಿಪಕ್ಷಗಳ ಒಗ್ಗಟ್ಟಿಗಾಗಿ ಕಾಂಗ್ರೆಸ್ ಅಧ್ಯಕ್ಷ ಖರ್ಗೆಯನ್ನು ಭೇಟಿ ಮಾಡಲಿದ್ದಾರೆ ಬಿಹಾರ ಸಿಎಂ ನಿತೀಶ್

ಸರ್ಕಾರದ ಆದೇಶ ಪ್ರಶ್ನಿಸಿ ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ, ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಸಲ್ಲಿಸಿರುವ ರಿಟ್‌ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಮನವಿಯನ್ನು ಪುರಸ್ಕರಿಸಿದೆ. ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ನೇತೃತ್ವದ ನ್ಯಾಯಪೀಠವು ರಾಜ್ಯ ಸರ್ಕಾರದ ಆದೇಶವನ್ನು ರದ್ದು ಪಡಿಸಿದೆ.

ನೇಮಕ ಅಧಿಕಾರ ಸರ್ಕಾರಕ್ಕೆ ಇಲ್ಲ

ವಾದ-ಪ್ರತಿವಾದ ಆಲಿಸಿದ ಕೋರ್ಟ್‌ ಈ ಆದೇಶವನ್ನು ನೀಡಿದ್ದು, ಮಠದ ಆಡಳಿತಾಧಿಕಾರಿಯಾಗಿ ನೇಮಕ ಮಾಡುವ ಅಧಿಕಾರ ಸರ್ಕಾರಕ್ಕೆ ಇಲ್ಲ ಎಂದು ಅಭಿಪ್ರಾಯಪಟ್ಟಿದೆ. ಮಠ ಮತ್ತು ಶೈಕ್ಷಣಿಕ ಆಡಳಿತ ನಿರ್ವಹಣೆಗೆ ಯೋಜನೆ ರೂಪಿಸಲು ಮಠದ ಭಕ್ತಾದಿಗಳು ಮತ್ತು ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ಮುಖಂಡರು ನಿರ್ಧರಿಸಬಹುದು ಎಂದೂ ಹೇಳಿದೆ.

ನಾಲ್ಕು ವಾರದವರೆಗೆ ಮುಂದುವರಿಯಬಹುದು

ಇಂತಹ ಸಮಸ್ಯೆಗಳು ಉದ್ಭವಿಸಿದಾಗ ನಾಲ್ಕು ವಾರದವರೆಗೆ ಸರ್ಕಾರ ನೇಮಿಸಿದ ಆಡಳಿತಾಧಿಕಾರಿ ಮುಂದುವರಿಯಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಇದರಿಂದ ಕೂಡಲೇ ಮಠದ ಚುಕ್ಕಾಣಿ ಮುರುಘಾ ಶರಣರ ಸುಪರ್ದಿಗೆ ಹೋಗುವುದು ತಪ್ಪಿದಂತಾಗಿದೆ.

ಇದನ್ನೂ ಓದಿ: Assembly session : 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭ, 2 ದಿನ ಶಾಸಕರ ಪ್ರಮಾಣ

ಸರ್ಕಾರದ ಆದೇಶದಲ್ಲೇನಿತ್ತು?

2022ರ ಡಿಸೆಂಬರ್‌ 13ರಂದು ಮುರುಘಾ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿರುವುದರಿಂದ ಸದರಿ ಸಂಸ್ಥೆಯ ನಿರ್ವಹಣೆಯಲ್ಲಿ ಈ ಸಂಸ್ಥೆಯ ದಿನನಿತ್ಯದ ಕಾರ್ಯಚಟುವಟಿಕೆಗೆ ಹಾಗೂ ಮೇಲುಸ್ತುವಾರಿ ನಡೆಸಲು ಸಾರ್ವಜನಿಕ ಹಿತದೃಷ್ಟಿಯಿಂದ ಮಠದ ಚರಾ-ಸ್ಥಿರ ಆಸ್ತಿಗಳನ್ನು ಸಂರಕ್ಷಿಸುವ ಹಿತದೃಷ್ಟಿಯಿಂದ ಹಾಗೂ ಸಂಸ್ಥೆಯ ಹಣ ದುರುಪಯೋಗ ಆಗದಂತೆ ಲೆಕ್ಕಪತ್ರಗಳನ್ನು ನಿರ್ವಹಿಸುವ ಹಾಗೂ ಒಟ್ಟಾರೆ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಡೆಸುವ ಹಿತದೃಷ್ಟಿಯಿಂದ ಪಿ.ಎಸ್.ವಸ್ತ್ರದ್ ಅವರನ್ನು ಮುಂದಿನ ಆದೇಶದವರೆಗೆ ಸದರಿ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗೆ ಆಡಳತಾಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ಸರ್ಕಾರ ಆದೇಶವನ್ನು ಹೊರಡಿಸಿತ್ತು. ಈಗ ಹೈಕೋರ್ಟ್‌ ಆದೇಶವನ್ನು ರದ್ದುಪಡಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

Moral policing: ಈರಜ್ಜನ ಹಟ್ಟಿ ನಿವಾಸಿ ಉಮೇಶ್ (25) ಹಲ್ಲೆಗೆ ಒಳಗಾದವರು. ಅವರ ಮರ್ಮಾಂಗ ಸೇರಿದಂತೆ ಹಲವೆಡೆ ಮಾರಕ ಹಲ್ಲೆಯನ್ನು ನಡೆಸಲಾಗಿದೆ. ಉಮೇಶ್ ಹಾಗೂ ಅವರು ಡ್ರಾಪ್ ಮಾಡಿದ ಮುಸ್ಲಿಂ ಯುವತಿ ಒಂದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅಂತೆಯೇ ಅವರು ಬೈಕ್​ನಲ್ಲಿ ಜತೆಯಾಗಿ ಹೋಗುತ್ತಿದ್ದಾಗ ಪುಂಡರ ಗುಂಪು ನಗರದ SJM ಕಾಲೇಜು ಬಳಿ ಅಡ್ಡಗಟ್ಟಿ ಹಲ್ಲೆ ನಡೆಸಿದೆ.

VISTARANEWS.COM


on

Moral policing
Koo

ಚಿತ್ರದುರ್ಗ: ಜತೆಗೆ ಕೆಲಸ ಮಾಡುವ ಮುಸ್ಲಿಂ ಯುವತಿಯೊಬ್ಬಳನ್ನು ಬೈಕ್​ನಲ್ಲಿ ಡ್ರಾಪ್ ಮಾಡಿರುವುದನ್ನು ಆಕ್ಷೇಪಿಸಿ ಮುಸ್ಲಿಂ ಯುವಕರ ಗುಂಪು ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ ನೈತಿಕ ಪೊಲೀಸ್​ಗಿರಿ (Moral policing) ಪ್ರದರ್ಶಿಸಿದ ಪ್ರಕರಣ ಚಿತ್ರದುರ್ಗದಲ್ಲಿ ವರದಿಯಾಗಿದೆ. ಈ ಬಗ್ಗೆ ವಿರೋಧ ವ್ಯಕ್ತಗೊಂಡಿದ್ದು ನೈತಿಕ ಪೊಲೀಸ್​ಗಿರಿ ಪ್ರದರ್ಶಿಸಿದವರನ್ನು ಶಿಕ್ಷಿಸಬೇಕು ಎಂಬ ಒತ್ತಾಯ ಕೇಳಿ ಬಂದಿದ.

ಈರಜ್ಜನ ಹಟ್ಟಿ ನಿವಾಸಿ ಉಮೇಶ್ (25) ಹಲ್ಲೆಗೆ ಒಳಗಾದವರು. ಅವರ ಮರ್ಮಾಂಗ ಸೇರಿದಂತೆ ಹಲವೆಡೆ ಮಾರಕ ಹಲ್ಲೆಯನ್ನು ನಡೆಸಲಾಗಿದೆ. ಉಮೇಶ್ ಹಾಗೂ ಅವರು ಡ್ರಾಪ್ ಮಾಡಿದ ಮುಸ್ಲಿಂ ಯುವತಿ ಒಂದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅಂತೆಯೇ ಅವರು ಬೈಕ್​ನಲ್ಲಿ ಜತೆಯಾಗಿ ಹೋಗುತ್ತಿದ್ದಾಗ ಪುಂಡರ ಗುಂಪು ನಗರದ SJM ಕಾಲೇಜು ಬಳಿ ಅಡ್ಡಗಟ್ಟಿ ಹಲ್ಲೆ ನಡೆಸಿದೆ.

ಉಮೇಶ್ ನ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸತತವಾಗಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ತೆಲೆ, ಮರ್ಮಾಂಗ ಭಾಗಕ್ಕೆ ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉಮೇಶ್​ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ

ಕಾರ್ಪೋರೇಟರ್‌ ಮಗಳ ಕೊಲೆ; ಪ್ರೀತಿಸಲು ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಫಯಾಜ್‌!

ಹುಬ್ಬಳ್ಳಿ: ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿಯೊಬ್ಬ ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್‌ವೊಬ್ಬರ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದಾನೆ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ.

ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿಯಾಗಿದ್ದಾಳೆ. ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ. ಫೈಜಲ್ ಎಂಬಾತ ಆರೋಪಿ ಎಂದು ಗುರುತಿಸಲಾಗಿದೆ.
ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.

ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಿದ್ದಾರೆ.

Continue Reading

ಪ್ರಮುಖ ಸುದ್ದಿ

Lok Sabha Election : ಕಾಂಗ್ರೆಸ್​​ಗೆ ಹಿನ್ನಡೆಯಾದರೆ ಸಿದ್ದರಾಮಯ್ಯ ಸ್ಥಾನಕ್ಕೆಕಂಟಕ​​​; ಚರ್ಚೆ ಹುಟ್ಟು ಹಾಕಿದ ಬೈರತಿ ಸುರೇಶ್​ ಹೇಳಿಕೆ

Lok Sabha Election: ಕೋಲಾರ ನಗರದ ಹಾಲಿಸ್ಟರ್ ಭವನದಲ್ಲಿ ನಡೆದ ಕುರುಬ ಸಮುದಾಯದ ಮುಖಂಡ ಸಭೆಯಲ್ಲಿ ಮಾತನಾಡುವಾಗ ಒಂದು ವೇಳೆ ಕಾಂಗ್ರೆಸ್ ಅಭ್ಯರ್ಥಿಗಳು ಸೋಲು ಕಂಡರೆ ಸಿದ್ದರಾಮಯ್ಯ ಅವರು ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

VISTARANEWS.COM


on

lok Sabha Election
Koo

ಕೋಲಾರ : ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ (Lok Sabha Election) ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಅವರ ಸಿಎಂ ಸ್ಥಾನಕ್ಕೆ ಕುತ್ತು ಬರುತ್ತದೆ ಎಂದು ಸಚಿವ ಬೈರತಿ ಸುರೇಶ್​ ನೀಡಿರುವ ಹೇಳಿಕೆ ಚರ್ಚೆ ಹುಟ್ಟು ಹಾಕಿದೆ. ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಕೋಲಾರ ನಗರದ ಹಾಲಿಸ್ಟರ್ ಭವನದಲ್ಲಿ ನಡೆದ ಕುರುಬ ಸಮುದಾಯದ ಮುಖಂಡ ಸಭೆಯಲ್ಲಿ ಮಾತನಾಡುವಾಗ ಒಂದು ವೇಳೆ ಕಾಂಗ್ರೆಸ್ ಅಭ್ಯರ್ಥಿಗಳು ಸೋಲು ಕಂಡರೆ ಸಿದ್ದರಾಮಯ್ಯ ಅವರು ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಕುರುಬ ಸಮುದಾಯ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು. ಅವರು ಸಿಎಂ ಕುರ್ಚಿಯಲ್ಲಿ ಇರಬೇಕು ಎಂದು ಸುರೇಶ್ ಅವರು ಹೇಳಿದ್ದಾರೆ. ನಿಮ್ಮ ಬೆಂಬಲ ಕಾಂಗ್ರೆಸ್​ ಪಕ್ಷದ ಮೇಲಿರಬೇಕು. ಸಿದ್ದರಾಮಯ್ಯ ನವರ ಮೇಲಿರಬೇಕು. ಅದಕ್ಕಾಗಿ ಅಭ್ಯರ್ಥಿ ಗೌತಮ್​ ಅವರನ್ನು ಗೆಲ್ಲಿಸಬೇಕು ಎಂದು ಸುರೇಶ್ ಅವರು ಹೇಳಿದ್ದಾರೆ.

ಇದನ್ನೂ ಓದಿ: Yadgiri News: ಸುರಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ರಾಜುಗೌಡ ನಾಮಪತ್ರ ಸಲ್ಲಿಕೆ

ಸಮುದಾದಯ ಜನರು ಬೇರೆ ಮನಸ್ಸು ಮಾಡಿ ಬೇರೆಯವನ್ನು ಗೆಲ್ಲಿಸಿದರೆ ಸಿದ್ದರಾಮಯ್ಯನವರ ಸೀಟಿಗೆ ಕಂಟಕವಾಗಲಿದೆ ಎಂದು ಸಚಿವ ಬಿ.ಎಸ್​.ಸುರೇಶ್​ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಕೈಗೊಂಬೆ ಐಟಿ ಅಧಿಕಾರಿಗಳಿಂದ ಕಾರ್ಯಕರ್ತರ ಮೇಲೆ ದೌರ್ಜನ್ಯ: ಡಿ.ಕೆ. ಸುರೇಶ್

ಆನೇಕಲ್: ಬಿಜೆಪಿ (BJP) ಹಾಗೂ ಮಾಜಿ ಪ್ರಧಾನಿಗಳ ಕೈಗೊಂಬೆಯಾಗಿರುವ ಐಟಿ ಅಧಿಕಾರಿಗಳು ನಮ್ಮ ಕಾರ್ಯಕರ್ತರ ಮನೆಯಲ್ಲಿ ಯುವಕರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ (Lok Sabha Election 2024) ಆರೋಪಿಸಿದ್ದಾರೆ.

ಆನೇಕಲ್‌ನಲ್ಲಿ ಗುರುವಾರ ಚುನಾವಣಾ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಭೀತಿಯಿಂದ ಐಟಿ, ಇಡಿ ಮೂಲಕ ನಮ್ಮ ಕಾರ್ಯಕರ್ತರನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದೆ. ನಿನ್ನೆ ಕೆಲವು ಅಧಿಕಾರಿಗಳು ಬಂದು ನಮ್ಮ ಕಾರ್ಯಕರ್ತರನ್ನು, ಅವರ ಕುಟುಂಬದ ಹೆಣ್ಣುಮಕ್ಕಳನ್ನು ಬೆದರಿಸಿದ್ದಾರೆ ಎಂದು ಆರೋಪಿಸಿದ ಅವರು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಬರೆಯುತ್ತಿದ್ದು, ಐಟಿ ಇಲಾಖೆ ಮುಖ್ಯಸ್ಥರ ಗಮನಕ್ಕೆ ತರುತ್ತೇನೆ. ಅವರ ಕೆಲಸ ಕೇವಲ ಪರಿಶೀಲನೆ ಮಾಡುವುದು ಮಾತ್ರ. ಅದನ್ನು ಬಿಟ್ಟು ಬಿಜೆಪಿ ಪರ ಪ್ರಚಾರ ಮಾಡುವುದು ಸರಿಯಲ್ಲ. ಇದು ಅಕ್ಷಮ್ಯ ಅಪರಾಧ. ಹೀಗೆ ಮುಂದುವರಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನನ್ನ ಚಾಲಕರ ಮನೆಯಲ್ಲಿ ಅವರ ಕುಟುಂಬದವರನ್ನು ಎಳೆದಾಡಿದ್ದಾರೆ. ಮಹಿಳೆಯರನ್ನು ತೀಕ್ಷ್ಣವಾಗಿ ಕಂಡು, ಯುವಕರನ್ನು ಒಂಟಿ ಕಾಲಲ್ಲಿ ನಿಲ್ಲಿಸಿದ್ದಾರೆ. ಮಾಜಿ ಪ್ರಧಾನಮಂತ್ರಿಗಳು ಹಾಗೂ ಬಿಜೆಪಿಯವರ ಕೈಗೊಂಬೆಯಾಗಿ ಐಟಿ ಅಧಿಕಾರಿಗಳ ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗಿದೆ. ಅವರು ಚುನಾವಣೆಯಲ್ಲಿ ಜನರ ಮುಂದೆ ಹೋಗಿ ಹೋರಾಟ ಮಾಡಬೇಕು. ಅದನ್ನು ಬಿಟ್ಟು ಈ ರೀತಿ ಅಧಿಕಾರಿಗಳ ದುರ್ಬಳಕೆ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಚುನಾವಣೆ ನಿಷ್ಪಕ್ಷಪಾತ ಚುನಾವಣೆ ಮಾಡಬೇಕು. ನಾನು ನನ್ನ ಕೆಲಸದ ಆಧಾರದ ಮೇಲೆ ಮತ ಕೇಳುತ್ತಿದ್ದೇನೆ ಹೊರತು, ನನಗೆ ಯಾರನ್ನು ಬೆದರಿಸುವ ಅಗತ್ಯವಿಲ್ಲ ಎಂದು ಸಂಸದ ಡಿ.ಕೆ ಸುರೇಶ್‌ ತಿಳಿಸಿದ್ದಾರೆ.

ಜನತಾದಳ ಹಾಗೂ ಜೆಡಿಎಸ್‌ನವರು ಕ್ಷುಲ್ಲಕ ರಾಜಕಾರಣ ಮಾಡುವುದರಲ್ಲಿ ಹೆಸರುವಾಸಿ. ಅವರು ಹಿರಿಯರಿದ್ದು, ಅವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಅವರು ಮಾಡಿರುವ ಆರೋಪಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದ ಅವರು, ನಾನು ಹಾಗೂ ಶಿವಕುಮಾರ್ ಅವರಿಗೆ ಕಲ್ಲು ಹೊಡೆದಿದ್ದಾರೆ ಎಂದು ಹೇಳುತ್ತಾರಲ್ಲ, ಅವರ ಕುಟುಂಬದಲ್ಲಿ ಯಾರೆಲ್ಲಾ ಎಲ್ಲಿ ಕಲ್ಲು ಹೊಡೆದಿದ್ದಾರೆ ಎಂದು ನಾನು ತೋರಿಸುತ್ತೇನೆ. ಅವರು ಯಾರ ಜಮಿನುಗಳನ್ನು ಯಾರ ಹೆಸರಲ್ಲಿ ಹಾಕಿಕೊಂಡಿದ್ದಾರೆ ಎಂಬುದನ್ನು ತೋರಿಸಬಹುದು. ಆದರೆ ಅದರ ಅಗತ್ಯ ನಮಗಿಲ್ಲ ಎಂದು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Hubli murder case : ನೇಹಾಳನ್ನು ಕೊಲ್ಲಲೆಂದೇ ಕಾಲೇಜಿಗೆ ಸಜ್ಜಾಗಿ ಬಂದಿದ್ದ ಶಿಕ್ಷಕರ ಪುತ್ರ ಫಯಾಜ್!

Hubli murder case : ಆರೋಪಿ ಫಯಾಜ್ ಮೂಲತಃ ಸವದತ್ತಿ ತಾಲೂಕಿನ ಮುನವಳ್ಳಿ ನಿವಾಸಿಯಾಗಿದ್ದಾನೆ. ತಂದೆ ಬಾಬಾಸಾಬ್, ತಾಯಿ ಮುಮ್ತಾಜ್ ಇಬ್ಬರೂ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದಾರೆ. ಫಯಾಜ್​ ಫೇಲ್ ಆಗಿದ್ದರಿಂದ ಕಾಲೇಜ್ ಬಿಟ್ಟಿದ್ದ. ಆತ ಅದೇ ಕಾಲೇಜಿನಲ್ಲಿ ಬಿಸಿಎ ಕೋರ್ಸ್​ನಲ್ಲಿ ಫೇಲ್ ಆಗಿದ್ದ. ಬಿಸಿಎ ಕಲಿಯುವಾಗ ವೇಳೆ ನೇಹಾ ಆತನ ಕ್ಲಾಸ್​ಮೇಟ್ ಆಗಿದ್ದರು.

VISTARANEWS.COM


on

Hubli Murder Case
Koo

ಹುಬ್ಬಳ್ಳಿ: ಇಲ್ಲಿನ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ (Hubli murder case) ಆರೋಪಿ ಫಯಾಜ್​ನ ಪೋಷಕರಿಬ್ಬರೂ ಶಾಲಾ ಶಿಕ್ಷಕರು ಎಂಬ ಮಾಹಿತಿ ಗೊತ್ತಾಗಿದೆ. ಆದರೆ, ವಿದ್ಯೆ ತಲೆಗೆ ಹತ್ತಿಸಿಕೊಳ್ಳದ ಆತ ಕಾಲೇಜಿನಿಂದ ಫೇಲ್ ಆಗಿ ಹೊರಕ್ಕೆ ಬಿದಿದ್ದ. ಇದೀಗ ಹಳೇ ಸಹಪಾಠಿಯನ್ನೇ ಕೊಲೆ ಮಾಡಿದ್ದಾನೆ. ಆಕೆಯನ್ನು ಕೊಲ್ಲಲೆಂದೇ ಚಾಕು ಹಿಡಿದುಕೊಂಡು ಕಾಲೇಜ್​ ಕ್ಯಾಂಪ್​ಸ್​ಗೆ ಬಂದಿದ್ದ ಎಂಬ ಮಾಹಿತಿ ಗೊತ್ತಾಗಿದೆ.

ಆರೋಪಿ ಫಯಾಜ್ ಮೂಲತಃ ಸವದತ್ತಿ ತಾಲೂಕಿನ ಮುನವಳ್ಳಿ ನಿವಾಸಿಯಾಗಿದ್ದಾನೆ. ತಂದೆ ಬಾಬಾಸಾಬ್, ತಾಯಿ ಮುಮ್ತಾಜ್ ಇಬ್ಬರೂ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದಾರೆ. ಫಯಾಜ್​ ಫೇಲ್ ಆಗಿದ್ದರಿಂದ ಕಾಲೇಜ್ ಬಿಟ್ಟಿದ್ದ. ಆತ ಅದೇ ಕಾಲೇಜಿನಲ್ಲಿ ಬಿಸಿಎ ಕೋರ್ಸ್​ನಲ್ಲಿ ಫೇಲ್ ಆಗಿದ್ದ. ಬಿಸಿಎ ಕಲಿಯುವಾಗ ವೇಳೆ ನೇಹಾ ಆತನ ಕ್ಲಾಸ್​ಮೇಟ್ ಆಗಿದ್ದರು.

ಹಲವು ಸಮಯದಿಂದ ಆಕೆಯ ಹಿಂದೆ ಬಿದ್ದಿದ್ದ ಫಯಾಜ್​ ಪ್ರೀತಿ ಮಾಡುವಂತೆ ಸತಾಯಿಸಿದ್ದ. ಆದರೆ ಅದಕ್ಕೆ ನಿರಾಕರಿಸಿದ್ದಳು. ಅಂತೆಯೇ ಗುರುವಾರ ಕಾಲೇಜಿಗೆ ಚಾಕು ಸಮೇತ ಬಂದಿದ್ದ ಆತ ಕೊಲೆ ಮಾಡಿದ್ದಾನೆ.

ಏನಿದು ಪ್ರಕರಣ?

ಫಯಾಜ್​ ಪಾಗಲ್‌ ಪ್ರೇಮಿಯಾಗಿದ್ದು, ನೇಹಾ ಅವರನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದಾನೆ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.

ಇದನ್ನೂ ಓದಿ: Wild Animals Attack: ನಿಟ್ಟೂರು ಗ್ರಾಮದಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ; ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಸಾವು

ನೇಹಾಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಆರೋಪಿ ಫಯಾಜ್​ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.

ಪೊಲೀಸ್ ಠಾಣೆ ಎದುರು ಹಿಂದೂ ಸಂಘಟನೆಗಳ ಪ್ರತಿಭಟನೆ

ನೇಹಾಳನ್ನು ಕೊಂದ ಆರೋಪಿಯನ್ನು ಎನ್​ಕೌಂಟರ್ ಮಾಡಬೇಕು ಎಂದು ಒತ್ತಾಯಿಸಿ ಹಿಂದೂ ಕಾರ್ಯಕರ್ತರು ಪೊಲೀಸ್​ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆದಿದೆ. ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಆರೋಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನು ಎನ್ಕೌಂಟರ್ ಮಾಡುವಂತೆ ಒತ್ತಾಯಿಸಿದ್ದಾರೆ. ಪಯಾಜ್‌ನನ್ನು ತಮ್ಮ ವಶಕ್ಕೆ ನೀಡುವಂತೆ ಒತ್ತಾಯ ಮಾಡಿದ್ದಾರೆ. ಈ ವೇಳೆ ಡಿಸಿಪಿ ರಾಜೀವ್ ಮತ್ತು ಸಂಘಟನೆಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

Continue Reading

ವಿಜಯನಗರ

Lok Sabha Election 2024: ಬಳ್ಳಾರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಗೆಲ್ಲಿಸಲು ಸಂತೋಷ್‌ ಲಾಡ್‌ ಮನವಿ

Lok Sabha Election 2024: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಅವರ ಪರ ಚುನಾವಣಾ ಪ್ರಚಾರದ ಅಂಗವಾಗಿ ಕೂಡ್ಲಿಗಿ ಶಾಸಕರ ಜನಸಂಪರ್ಕ ಕಛೇರಿಯಲ್ಲಿ ಗುರುವಾರ ಕಾರ್ಯಕರ್ತರ ಸಭೆ ನಡೆಯಿತು.

VISTARANEWS.COM


on

congress workers meeting in kudligi
Koo

ವಿಜಯನಗರ: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಅವರ ಪರ ಚುನಾವಣಾ ಪ್ರಚಾರದ ಅಂಗವಾಗಿ ಕೂಡ್ಲಿಗಿ ಶಾಸಕರ ಜನಸಂಪರ್ಕ ಕಛೇರಿಯಲ್ಲಿ ಗುರುವಾರ ಕೂಡ್ಲಿಗಿ ಪಟ್ಟಣ ಹಾಗೂ ಬಡೇಲಡಕು ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯನ್ನು (Lok Sabha Election 2024) ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: Lok Sabha Election 2024: ಬೆಲೆ ಏರಿಕೆ ಮಾಡಿದ್ದೇ ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆ: ಸಂತೋಷ್‌ ಲಾಡ್‌

ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಅವರಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ: DRDO Test: ದೇಶೀಯ ತಂತ್ರಜ್ಞಾನದ ಕ್ರೂಸ್‌ ಕ್ಷಿಪಣಿಯ ಯಶಸ್ವಿ ಪರೀಕ್ಷೆ

ಈ ಸಂದರ್ಭದಲ್ಲಿ ಕೂಡ್ಲಿಗಿ ಶಾಸಕ ಡಾ.ಎನ್‌.ಟಿ. ಶ್ರೀನಿವಾಸ್‌, ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯ್ಕ್, ಮಾಜಿ ಶಾಸಕ ನಬಿಸಾಬ್, ವಿಧಾನ ಪರಿಷತ್ ಸದಸ್ಯ ಕೆಎಸ್‌ಎಲ್‌ ಸ್ವಾಮಿ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶಿವಯೋಗಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Continue Reading
Advertisement
Moral policing
ಪ್ರಮುಖ ಸುದ್ದಿ14 mins ago

Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

Rishab Shetty
ಸಿನಿಮಾ33 mins ago

Rishab Shetty: ರಿಷಬ್‌ ಮೀಟ್ಸ್‌ ಮೋಹನ್‌ಲಾಲ್‌; ʼಕಾಂತಾರʼ ಪ್ರೀಕ್ವೆಲ್​ನಲ್ಲಿ ಅಭಿನಯಿಸುತ್ತಾರಾ ಮಾಲಿವುಡ್‌ ಸೂಪರ್‌ ಸ್ಟಾರ್‌?

lok Sabha Election
ಪ್ರಮುಖ ಸುದ್ದಿ36 mins ago

Lok Sabha Election : ಕಾಂಗ್ರೆಸ್​​ಗೆ ಹಿನ್ನಡೆಯಾದರೆ ಸಿದ್ದರಾಮಯ್ಯ ಸ್ಥಾನಕ್ಕೆಕಂಟಕ​​​; ಚರ್ಚೆ ಹುಟ್ಟು ಹಾಕಿದ ಬೈರತಿ ಸುರೇಶ್​ ಹೇಳಿಕೆ

Hubli Murder Case
ಪ್ರಮುಖ ಸುದ್ದಿ1 hour ago

Hubli murder case : ನೇಹಾಳನ್ನು ಕೊಲ್ಲಲೆಂದೇ ಕಾಲೇಜಿಗೆ ಸಜ್ಜಾಗಿ ಬಂದಿದ್ದ ಶಿಕ್ಷಕರ ಪುತ್ರ ಫಯಾಜ್!

congress workers meeting in kudligi
ವಿಜಯನಗರ1 hour ago

Lok Sabha Election 2024: ಬಳ್ಳಾರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಗೆಲ್ಲಿಸಲು ಸಂತೋಷ್‌ ಲಾಡ್‌ ಮನವಿ

Indian Railways
ದೇಶ2 hours ago

Indian Railways: ಹಿರಿಯ ನಾಗರಿಕ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಲೋವರ್ ಬರ್ತ್ ಕಾಯ್ದಿರಿಸುವಿಕೆಗೆ ಹೊಸ ನಿಯಮ

Man death in tiger attack in Nittur village
ಕೊಡಗು2 hours ago

Wild Animals Attack: ನಿಟ್ಟೂರು ಗ್ರಾಮದಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ; ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಸಾವು

Surapura Assembly Constituency By election BJP candidate Raju Gowda filed nomination
ಯಾದಗಿರಿ2 hours ago

Yadgiri News: ಸುರಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ರಾಜುಗೌಡ ನಾಮಪತ್ರ ಸಲ್ಲಿಕೆ

Preity Zinta
ಕ್ರೀಡೆ2 hours ago

Preity Zinta : ರೋಹಿತ್​ ಶರ್ಮಾಗಾಗಿ ಪ್ರಾಣ ಪಣಕ್ಕಿಡಲು ಸಿದ್ಧ; ಪ್ರೀತಿ ಜಿಂಟಾ ಹೇಳಿಕೆ ಸಿಕ್ಕಾಪಟ್ಟೆ ವೈರಲ್​

Lok Sabha Election 2024 Malikayya Guttedar Joining Congress April 19
Lok Sabha Election 20242 hours ago

Lok Sabha Election 2024: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್ ಬಿಜೆಪಿಗೆ ಗುಡ್‌ ಬೈ; ನಾಳೆ ಕಾಂಗ್ರೆಸ್‌ ಸೇರ್ಪಡೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ7 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌