ನಗರಸಭೆ ಆಯುಕ್ತರ ಮೇಲೆ ಹಲ್ಲೆ ಮಾಡಿದವರ ಬಂಧಿಸದಿದ್ದರೆ ಮುಸ್ಲಿಮರಿಗೆ ಹಳ್ಳಿಯಲ್ಲೂ ವ್ಯಾಪಾರಕ್ಕೆ ಅವಕಾಶವಿಲ್ಲ; ಪ್ರತಿಭಟನಾಕಾರರ ಎಚ್ಚರಿಕೆ - Vistara News

ಕರ್ನಾಟಕ

ನಗರಸಭೆ ಆಯುಕ್ತರ ಮೇಲೆ ಹಲ್ಲೆ ಮಾಡಿದವರ ಬಂಧಿಸದಿದ್ದರೆ ಮುಸ್ಲಿಮರಿಗೆ ಹಳ್ಳಿಯಲ್ಲೂ ವ್ಯಾಪಾರಕ್ಕೆ ಅವಕಾಶವಿಲ್ಲ; ಪ್ರತಿಭಟನಾಕಾರರ ಎಚ್ಚರಿಕೆ

ಮಾರಿಕಾಂಬಾ ದೇವಸ್ಥಾನದ ಆವರಣದ ಮುಂದೆ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಿಯೊಬ್ಬನ ಅಂಗಡಿಯನ್ನು ಎತ್ತಂಗಡಿ ಮಾಡಿಸುವಾಗ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ನಡೆದಿದ್ದ ಪ್ರತಿಭಟನೆಯು ಉಗ್ರ ಸ್ವರೂಪವನ್ನು ಪಡೆದುಕೊಂಡಿದೆ.

VISTARANEWS.COM


on

ಸಾಗರ ನಗರಸಭೆ ಪ್ರತಿಭಟನೆ ಮುಸ್ಲಿಂ ವ್ಯಾಪಾರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಾಗರ: ಇಲ್ಲಿನ ಬೀದಿಬದಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಯೊಬ್ಬನ ಮೇಲೆ ಬುಧವಾರ (ನ.೩೦) ದೌರ್ಜನ್ಯ ನಡೆಸಿ ಅಂಗಡಿ ತೆರವು ಮಾಡಿಸಲಾಗಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಪ್ರತಿಭಟನೆ ಆರಂಭಿಸಿತ್ತು. ಈ ವೇಳೆ ಗಲಾಟೆಯು ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದ್ದು, ಕೋಮು ಬಣ್ಣಕ್ಕೆ ತಿರುಗುವ ಲಕ್ಷಣ ಗೋಚರಿಸಿದೆ. ನಗರಸಭೆ ಆಯುಕ್ತರ ಮೇಲೆ ಪ್ರತಿಭಟನಾಕಾರರ ಗುಂಪು ಹಲ್ಲೆ ನಡೆಸಿದೆ ಎಂದು ಒಂದು ಸಮುದಾಯದವರು ಪ್ರತಿಭಟನೆ ನಡೆಸಿದ್ದು, ತಪ್ಪಿತಸ್ಥರ ಬಂಧನಕ್ಕೆ ಆಗ್ರಹಪಡಿಸಿತ್ತು. ಪೊಲೀಸರ ಮಧ್ಯಪ್ರವೇಶದಿಂದ ಸದ್ಯಕ್ಕೆ ಪರಿಸ್ಥಿತಿ ಶಾಂತಗೊಂಡಿದೆ.

ಸಾಗರ ನಗರಸಭೆ ಪ್ರತಿಭಟನೆ ಮುಸ್ಲಿಂ ವ್ಯಾಪಾರ
ಸಾಗರ ನಗರಸಭೆ ಪ್ರತಿಭಟನೆ ಮುಸ್ಲಿಂ ವ್ಯಾಪಾರ

ಕಾಂಗ್ರೆಸ್‌ ಜತೆ ಹೋರಾಟದಲ್ಲಿ ಭಾಗಿಯಾಗಿದ್ದ ಮುಸ್ಲಿಂ ಸಮುದಾಯದವರು ಸೇರಿ ಇತರರು ಹೋರಾಟದಲ್ಲಿ ಭಾಗಿಯಾಗಿದ್ದರು. ಈ ವೇಳೆ ನಗರಸಭೆ ಆಯುಕ್ತರ ಕಚೇರಿಗೆ ಪ್ರತಿಭಟನಾನಿರತರ ಗುಂಪು ನುಗ್ಗಿದೆ. ಅದೇ ವೇಳೆ ಇನ್ನೊಂದು ಗುಂಪು ಆಯುಕ್ತರ ಪರವಾಗಿ ನಿಂತಿದೆ. ಈ ನಡುವೆ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ಆಯುಕ್ತರ ಮೇಲೆ ಹಲ್ಲೆ ನಡೆದಿದೆ. ಇದನ್ನು ಖಂಡಿಸಿ ಈಡಿಗ ಸಮುದಾಯದವರು ನಗರಸಭೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಆಯುಕ್ತರ ಸಹೋದರ ಗಣಪತಿ ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಇದು ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳಲು ಕಾರಣವಾಗಿತ್ತು.

ಏನಿದು ಪ್ರಕರಣ?
ಬೀದಿ ಬದಿಯ ಹಣ್ಣು ವ್ಯಾಪಾರಿ ಮೇಲೆ ದೌರ್ಜನ್ಯ ನಡೆಸಿ, ಅಂಗಡಿ ತೆರವುಗೊಳಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಬುಧವಾರ ಪ್ರತಿಭಟನೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ನಗರಸಭೆ ಆಯುಕ್ತರ ಕೊಠಡಿಯಲ್ಲಿ ಎರಡು ಗುಂಪಿನ ನಡುವೆ ಜಟಾಪಟಿಯೂ ನಡೆದಿತ್ತು. ನಗರಸಭೆ ಪ್ರಭಾರ ಆಯುಕ್ತ ನಾಗಪ್ಪ ಅವರ ಮೇಲೆ ಇದೇ ವೇಳೆ ಹಲ್ಲೆ ನಡೆದಿದೆ. ಇದಕ್ಕೆ ಪ್ರತಿಯಾಗಿ ಈಡಿಗ ಸಮುದಾಯದ ಜನ ಪ್ರತಿಭಟನೆ ನಡೆಸುವಾಗ ಆಯುಕ್ತರ ಸಹೋದರ ಗಣಪತಿ ಹೃದಯಾಘಾತದಿಂದ ನಿಧನರಾಗಿದ್ದರು. ಇದು ಪ್ರಕರಣ ಜಟಿಲಗೊಳ್ಳಲು ಕಾರಣವಾಗಿದೆ.

ಇದನ್ನೂ ಓದಿ | Muslim college | ವಕ್ಫ್‌ ಅಧ್ಯಕ್ಷರ ಹೇಳಿಕೆ ವೈಯಕ್ತಿಕ, ಮಹಿಳಾ ಕಾಲೇಜಿನ ಪ್ರಸ್ತಾಪವಿಲ್ಲ ಎಂದ ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ

ಗುರುವಾರ ಶವ ಇಟ್ಟು ಪ್ರತಿಭಟನೆ
ನಗರಸಭೆ ಎದುರು ಪ್ರಭಾರ ಆಯುಕ್ತ ಎಚ್.ಕೆ. ನಾಗಪ್ಪ ಸಹೋದರ ಗಣಪತಿ ಶವ ಇಟ್ಟು ಗುರುವಾರ (ಡಿ.೧) ಪತ್ರಿಭಟನೆ ನಡೆಸಲಾಗಿದೆ. ಆಯುಕ್ತರ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪ್ರತಿಭಟನಾಕಾರರು‌ ಆಗ್ರಹಿಸಿದರು. ಗಣಪತಿ ಶವ ಸಂಸ್ಕಾರ ಮಾಡಲು ನಿರಾಕರಿಸಿದ ಪ್ರತಿಭಟನಾಕಾರರು, ಆರೋಪಿಗಳನ್ನು ಬಂಧಿಸುವಂತೆ ಪಟ್ಟುಹಿಡಿದರು. ಪೊಲೀಸರು ಆರೋಪಿಗಳನ್ನು ಬಂಧಿಸದೆ ಇದ್ದರೆ ಮುಸ್ಲಿಮರಿಗೆ ಹಳ್ಳಿ ಹಳ್ಳಿಗಳಲ್ಲೂ ವ್ಯಾಪಾರಕ್ಕೆ ಬಿಡುವುದಿಲ್ಲ. ಹಳ್ಳಿಗಳಿಗೆ ಮೀನು ಮಾರಾಟಕ್ಕೆ ಬರುವವರಿಗೂ ತಡೆ ಒಡ್ಡುತೇವೆ ಎಂದರು. ಕೊನೆಗೆ ಪೊಲೀಸರು ಮನವೊಲಿಸುವಲ್ಲಿ ಯಶಸ್ವಿಯಾದ ನಂತರ, ನಗರದಲ್ಲಿ ಶವದ ಮೆರವಣಿಗೆ ನಡೆಸಿ ಅಂತಿಮ ಸಂಸ್ಕಾರ ನಡೆಸಲಾಯಿತು.

ಸಾಗರ ನಗರಸಭೆ ಪ್ರತಿಭಟನೆ ಮುಸ್ಲಿಂ ವ್ಯಾಪಾರ
ಸಾಗರ ನಗರಸಭೆ ಪ್ರತಿಭಟನೆ ಮುಸ್ಲಿಂ ವ್ಯಾಪಾರ

ಹಲ್ಲೆಗೆ ಆಕ್ರೋಶ
ಸಾಗರದ ಮಾರಿಕಾಂಬ ದೇವಸ್ಥಾನದಲ್ಲಿ ತಳ್ಳುವ ಗಾಡಿಗಳನ್ನು ಬುಧವಾರ ತೆರವುಗೊಳಿಸಿರುವ ವಿಚಾರ ರಾಜಕೀಯ ಬಣ್ಣಪಡೆದು ನಂತರ ಆಯುಕ್ತರ ಕಚೇರಿ ಒಳಗೆ ನುಗ್ಗಿ ದಾಂಧಲೆ ನಡೆದ ಘಟನೆಯು ನಗರಸಭೆ ಸಿಬ್ಬಂದಿಯ ಆಕ್ರೋಶಕ್ಕೆ ಕಾರಣವಾಗಿತ್ತು. ದಾಂಧಲೆ ನಡೆಸಿದ ಆರೋಪಿಗಳನ್ನು ಬಂಧಿಸುವ ತನಕ ನಗರಸಭೆಯ ಪೌರಕಾರ್ಮಿಕರು ಕಸ ತೆಗೆಯುವುದಿಲ್ಲ ಮತ್ತು ಕುಡಿಯುವ ನೀರು ಬಿಡುವುದಿಲ್ಲವೆಂದು ಹೇಳಿ ಗುರುವಾರ ಬೆಳಗ್ಗೆಯಿಂದಲೇ ಪ್ರತಿಭಟನೆ ನಡೆಸಿದರು. ಆಯುಕ್ತರಿಗೇ ರಕ್ಷಣೆಯಿಲ್ಲದಿದ್ದರೆ ನಮ್ಮ ಗತಿ ಏನು ಎಂದು ಪ್ರಶ್ನಿಸಿದ್ದಾರೆ.

ಬಂಧನವಾಗದಿದ್ದರೆ ಮತ್ತೆ ಪ್ರತಿಭಟನೆ ಎಚ್ಚರಿಕೆ
ಈಗ ನಗರಸಭೆ ಆಯುಕ್ತರ ಮೇಲೆ ಹಲ್ಲೆ ಮಾಡಿದವರನ್ನು ಬಂಧನ ಮಾಡಬೇಕು. ಇಲ್ಲದಿದ್ದರೆ ಮತ್ತೆ ಪ್ರತಿಭಟನೆ ನಡೆಸುವುದಲ್ಲದೆ, ಮುಸ್ಲಿಂ ವ್ಯಾಪಾರಿಗಳ್ಯಾರಿಗೂ ಯಾವ ಪ್ರದೇಶದಲ್ಲಿಯೂ, ತಾಲೂಕಿನ ಯಾವ ಹಳ್ಳಿಯಲ್ಲಿಯೂ ವ್ಯಾಪಾರ ಮಾಡಲು ಬಿಡುವುದಿಲ್ಲ ಎಂಬ ಎಚ್ಚರಿಕೆಯನ್ನು ಪ್ರತಿಭಟನಾಕಾರರು ರವಾನಿಸಿದ್ದಾರೆ.

ಇದನ್ನೂ ಓದಿ | Muslim college | ವಕ್ಫ್‌ ಬೋರ್ಡ್‌ನಲ್ಲಿ ಚರ್ಚೆ ಆಗಿದೆ, ಕಾಲೇಜು ಮುಸ್ಲಿಂ ಹೆಣ್ಮಕ್ಕಳಿಗೆ ಸೀಮಿತವಲ್ಲ ಎಂದ ವಕ್ಫ್‌ ಅಧ್ಯಕ್ಷ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Wayanad Landslide: ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ: ಸಿಎಂ ಸಿದ್ದರಾಮಯ್ಯ

Wayanad Landslide: ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತ (Wayanad Landslide) ದುರಂತದಲ್ಲಿ ಮೃತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ. ನೂರಾರು ಮಂದಿ ಅವಶೇಷದಡಿಯಲ್ಲಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

VISTARANEWS.COM


on

Wayanad Landslide
Koo

ಬೆಂಗಳೂರು: ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ದೇವರನಾಡು ಕೇರಳ (Kerala) ಮತ್ತೊಮ್ಮೆ ಭಾರಿ ಮಳೆಯ ಹೊಡೆತಕ್ಕೆ ಸಿಲುಕಿ ನಲುಗಿದೆ. ಅದರಲ್ಲಿಯೂ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತ (Wayanad Landslide) ದುರಂತದಲ್ಲಿ ಮೃತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ. ನೂರಾರು ಮಂದಿ ಅವಶೇಷದಡಿಯಲ್ಲಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಗುಡ್ಡಗಾಡು ಪ್ರದೇಶವಾಗಿರುವ ಮೆಪ್ಪಡಿ (Meppadi) ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಭೀತಿ ಎದುರಾಗಿದೆ. ಇದೀಗ ಎಲ್ಲಿ ನೋಡಿದರೂ ಮಣ್ಣಿನ ರಾಶಿಯೇ ಕಂಡು ಬಂದಿದ್ದು, ರಸ್ತೆ, ಸೇತುವೆ, ಮನೆಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿವೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜತೆ ನಾವು ನಿಲ್ಲಲಿದ್ದೇವೆ ಎಂದು ಹೇಳಿದ್ದಾರೆ.

ವಯನಾಡು ಭೂಕುಸಿತ; ಈವರೆಗೆ 250 ಜನರ ರಕ್ಷಣೆ

ವಯನಾಡಿನಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ಸಿಬ್ಬಂದಿ, ಸರ್ಕಾರಿ ಸಂಸ್ಥೆ ಸಿಬ್ಬಂದಿ ಸೇರಿದಂತೆ ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಸಹಾಯ ಮಾಡಲು 43 ಭಾರತೀಯ ಸೇನಾ ಸಿಬ್ಬಂದಿಯ ತಂಡವನ್ನು ಸಹ ಸಜ್ಜುಗೊಳಿಸಲಾಗಿದೆ. ಇದೇ ವೇಳೆ ಸೇತುವೆ ಕುಸಿದಿರುವುದು ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿ ಪರಿಣಮಿಸಿದೆ. ಸರ್ಕಾರಿ ಮೂಲಗಳ ಪ್ರಕಾರ, ಈವರೆಗೆ ಗುಡ್ಡಗಾಡು ಪ್ರದೇಶಗಳಿಂದ 250 ಜನರನ್ನು ರಕ್ಷಿಸಲಾಗಿದೆ.

ಇದನ್ನೂ ಓದಿ | Kodi Mutt Swamiji: ಕೆಟ್ಟದ್ದೇ ಜಾಸ್ತಿ, ಪ್ರಕೃತಿ ವಿಕೋಪಗಳು ಮುಂದುವರಿಯುತ್ತವೆ: ಭಯಾನಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಮಂಗಳವಾರ ಮುಂಜಾನೆ 2ರಿಂದ4 ಗಂಟೆಯ ನಡುವೆ ಸಂಭವಿಸಿದ ಭೂಕುಸಿತದಿಂದ ಮುಂಡಕೈ ಮತ್ತು ಚೂರಲ್‌ಮಾಲಾ ಪ್ರದೇಶದಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. ಕುಸಿದ ಸೇತುವೆ, ಕೊಚ್ಚಿ ಹೋದ ರಸ್ತೆ ಮುಂಡಕೈಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿ ಪರಿಣಮಿಸಿದೆ. ಚೂರಲ್‌ಮಾಲಾದಲ್ಲಿ ಒಟ್ಟು 250 ಸಿಬ್ಬಂದಿ ಕಾರ್ಯ ಪ್ರವೃತ್ತರಾಗಿದ್ದಾರೆ.

Continue Reading

ಬೆಂಗಳೂರು

UGCET 2024 : ಯುಜಿಸಿಇಟಿ ಆಪ್ಶನ್ ದಾಖಲಿಸಲು ಮತ್ತಷ್ಟು ದಿನ ಅವಕಾಶ

UGCET 2024 : ಯುಜಿಸಿಇಟಿ ಆಪ್ಶನ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತಷ್ಟು ದಿನ ಅವಕಾಶ ಕಲ್ಪಿಸಿದೆ.

VISTARANEWS.COM


on

By

UGCET 2024
Koo

ಬೆಂಗಳೂರು: ಯುಜಿಸಿಇಟಿ-24ರ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ನ್ಯಾಚುರೋಪಥಿ- ಯೋಗ, ಪಶು ವೈದ್ಯಕೀಯ ಇತ್ಯಾದಿ ಕೋರ್ಸುಗಳ ಪ್ರವೇಶಕ್ಕೆ ಆಪ್ಶನ್ (ಇಚ್ಛೆ) ಗಳನ್ನು (UGCET 2024) ದಾಖಲಿಸಲು ಮತ್ತಷ್ಟು ದಿನ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ.

ಈ ಮೊದಲು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಏಳು ದಿನ ಅವಕಾಶ ನೀಡಿದ್ದು ಅದು ಇವತ್ತಿಗೆ (ಜು.30) ಕೊನೆ ಆಗಬೇಕಿತ್ತು. ಅಭ್ಯರ್ಥಿಗಳ ಮನವಿ ಮೇರೆಗೆ ಮತ್ತೂ ಅವಕಾಶ ನೀಡಿದ್ದು ಅಭ್ಯರ್ಥಿಗಳು ಎಚ್ಚರಿಕೆಯಿಂದ ಇಚ್ಛೆಗಳನ್ನು ದಾಖಲು ಮಾಡಬೇಕು. ಮುಂದಿನ ಆದೇಶದ ವರೆಗೆ ಅವಕಾಶ ಕಲ್ಪಿಸಲಾಗದೆ. ಯೋಗ ಮತ್ತು ನ್ಯಾಚುರೋಪತಿ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅದಕ್ಕೂ ಆಯ್ಕೆಗಳನ್ನು ದಾಖಲಿಸಲು ಈಗ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

ಪ್ರಕಟಿಸಲಾದ ಸೀಟ್ ಮ್ಯಾಟ್ರಿಕ್ಸ್‌ ಅನ್ನು ಪರಿಶೀಲಿಸಿ ಇಚ್ಚೆ / ಆಯ್ಕೆಗಳನ್ನು ದಾಖಲಿಸುವ ಸಮಯದಲ್ಲಿ ಆದ್ಯತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ. ಆಪ್ಶನ್‌ಗಳನ್ನು ದಾಖಲಿಸುವ ಬಗ್ಗೆ, ಸೀಟು ಹಂಚಿಕೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಯುಜಿಸಿಇಟಿ-24ರ ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ರಾಷ್ಟ್ರೀಯ ವೈದ್ಯಕೀಯ ಮಂಡಳಿ, ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.

ಚಟುವಟಿಕೆಗಳ ವಿವರ ಹೀಗಿದೆ
-ಜು.23ರಿಂದಲೇ Option Entry ಪೋರ್ಟಲ್‌ ತೆರೆಯಲಾಗಿದೆ. ಅಭ್ಯರ್ಥಿಗಳು ಆದ್ಯತಾ ಕ್ರಮದಲ್ಲಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು. ಆಯ್ಕೆಗಳನ್ನು ದಾಖಲಿಸಲು 7 ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು. ಇದೀಗ ಮತ್ತಷ್ಟು ದಿನ ವಿಸ್ತರಣೆ ಆಗಿದೆ.

-ಇಚ್ಛೆ/ಆಯ್ಕೆಗಳನ್ನು ದಾಖಲಿಸುವುದಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದ 3 ದಿನಗಳ ನಂತರ ಅಣುಕು ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

-ಅಣುಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಣೆಯ ನಂತರ ಇಚ್ಛೆ-ಆಯ್ಕೆಗಳನ್ನು ಸೇರಿಸಲು/ಅಳಿಸಲು/ಬದಲಾಯಿಸಲು/ಮಾರ್ಪಡಿಸಲು 3 ದಿನಗಳ ಕಾಲಾವಕಾಶ ನೀಡಲಾಗುತ್ತದೆ.

ಈ ಮೇಲಿನ ಪ್ರಕ್ರಿಯೆ ಮುಕ್ತಾಯವಾದ 3 ದಿನಗಳ ನಂತರ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Hindu Girl Murder: ಯುವತಿ ಬರ್ಬರ ಕೊಲೆ ಪ್ರಕರಣ; ಹಂತಕ ದಾವೂದ್‌ ಶೇಖ್‌ ಹಿಂಬಾಲಿಸುತ್ತಿದ್ದ ಸಿಸಿಟಿವಿ ದೃಶ್ಯ ಪತ್ತೆ

Hindu Girl Murder: ಮುಂಬಯಿಯ ಉರಾನ್‌ನ ಯಶಶ್ರೀ ಶಿಂಧೆ ಕೊಲೆ ಪ್ರಕರಣದ (Murder Case) ತನಿಖೆ ನಡೆಸುತ್ತಿದ್ದ ವೇಳೆ ಸಿಸಿಟಿವಿ ದೃಶ್ಯಾವಳಿಗಳು ಪತ್ತೆಯಾಗಿದ್ದು, ಇದರಲ್ಲಿ ಯುವತಿಯನ್ನು ಆರೋಪಿ ಹಿಂಬಾಲಿಸುತ್ತಿರುವ ದೃಶ್ಯವಿದೆ. ಪ್ರಕರಣದ ಆರೋಪಿ ದಾವುದ್ ಶೇಖ್‌ನನ್ನು ಬಂಧಿಸಿದ ಕೆಲವೇ ಗಂಟೆಗಳ ಅನಂತರ ಈ ವಿಡಿಯೋ ಸಿಕ್ಕಿದೆ.

VISTARANEWS.COM


on

By

Hindu Girl Murder
Koo

ನವಿ ಮುಂಬಯಿ: ಯಶಶ್ರೀ ಶಿಂಧೆ ಕೊಲೆ ಪ್ರಕರಣಕ್ಕೆ (Hindu Girl Murder) ಮಹತ್ವದ ಸಾಕ್ಷಿಯೊಂದು ಲಭ್ಯವಾಗಿದೆ. ಆರೋಪಿ ದಾವೂದ್‌ ಶೇಖ್ (Accused Daud Shaikh) ಯುವತಿಯನ್ನು ಹಿಂಬಾಲಿಸುತ್ತಿರುವ ಸಿಸಿಟಿವಿ ದೃಶ್ಯಗಳು (CCTV footage) ಪತ್ತೆಯಾಗಿದೆ. ದಾವುದ್‌ ಶೇಖ್‌ನನ್ನು ಈಗಾಗಲೇ ಕರ್ನಾಟಕದ ಗುಲ್ಬರ್ಗದಲ್ಲಿ ನವಿ ಮುಂಬೈ ಕ್ರೈಂ ಬ್ರಾಂಚ್ (Navi Mumbai Crime Branch) ಘಟಕದ ಪೊಲೀಸರು ಬಂಧಿಸಿದ್ದಾರೆ.

ಉರಾನ್‌ನ 20 ವರ್ಷದ ಯಶಶ್ರೀ ಶಿಂಧೆ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವಾಗ ಹೊಸ ಸಿಸಿಟಿವಿ ದೃಶ್ಯಾವಳಿಗಳು ಕಂಡು ಬಂದಿವೆ. ಇದರಲ್ಲಿ ಯಶಶ್ರೀಯನ್ನು ಆರೋಪಿ ಹಿಂಬಾಲಿಸುತ್ತಿರುವ ದೃಶ್ಯವಿದೆ. ಪ್ರಕರಣದ ಆರೋಪಿ ದಾವೂದ್‌ ಶೇಖ್‌ನನ್ನು ಬಂಧಿಸಿದ ಕೆಲವೇ ಗಂಟೆಗಳ ಅನಂತರ ಈ ವಿಡಿಯೋ ಸಿಕ್ಕಿದೆ.

Murder Case
Murder Case


ಜುಲೈ 25ರ ಸಿಸಿಟಿವಿ ದೃಶ್ಯಾವಳಿಯಲ್ಲಿ ಯಶಶ್ರೀ ಶಿಂಧೆ ಮುಂಬಯಿಯ ಉರಾನ್ ಮಾರುಕಟ್ಟೆಯ ಹಿಂದಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಕೆಲವೇ ನಿಮಿಷಗಳಲ್ಲಿ ಆರೋಪಿ ದಾವುದ್‌ ಶೇಖ್ ಆಕೆಯನ್ನು ಹಿಂಬಾಲಿಸಿಕೊಂಡು ಅದೇ ಸ್ಥಳದಿಂದ ಹಾದುಹೋಗುವುದನ್ನು ಕಾಣಬಹುದು. ಜುಲೈ 25ರಿಂದ ನಾಪತ್ತೆಯಾಗಿದ್ದ ಯಶಶ್ರೀ ಮೃತ ದೇಹ ಜುಲೈ 27ರ ಮುಂಜಾನೆ ಉರಾನ್ ರೈಲು ನಿಲ್ದಾಣದ ಬಳಿಯ ಪೊದೆಗಳಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಕರ್ನಾಟಕದಲ್ಲಿ ಆರೋಪಿಯ ಬಂಧನ

ಪ್ರಕರಣದ ತನಿಖೆ ನಡೆಸಿಕೊಂಡು ಕರ್ನಾಟಕಕ್ಕೆ ಬಂದ ನವಿ ಮುಂಬಯಿ ಅಪರಾಧ ವಿಭಾಗದ ಕೇಂದ್ರ ಘಟಕವು 24 ವರ್ಷದ ದಾವುದ್ ಶೇಖ್‌ನನ್ನು ಗುಲ್ಬರ್ಗ ಜಿಲ್ಲೆಯ ಶಾಹಪುರ್ ಬೆಟ್ಟದ ಪ್ರದೇಶದಿಂದ ಬಂಧಿಸಿದೆ.

2019ರಲ್ಲಿ ಯಶಶ್ರೀಯ ಬಗ್ಗೆ ತಿಳಿದಿದ್ದ ಶೇಖ್ ಆಕೆಯೊಂದಿಗೆ ಸ್ನೇಹ ನಡೆಸಲು ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಆತನ ವಿರುದ್ಧ ಸಂತ್ರಸ್ತೆಯ ತಂದೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಅನಂತರ ಬಂಧಿಸಲಾಗಿತ್ತು. ಸುಮಾರು ಆರು ತಿಂಗಳು ಜೈಲಿನಲ್ಲಿದ್ದ ಶೇಖ್ ಬಿಡುಗಡೆಯಾದ ಬಳಿಕ ತನ್ನ ತವರೂರು ಕರ್ನಾಟಕಕ್ಕೆ ಬಂದು ಡ್ರೈವರ್ ಕೆಲಸ ಮಾಡಿಕೊಂಡಿದ್ದ.

ತ್ರಿಕೋನ ಪ್ರೇಮ

ಪೊಲೀಸರ ಪ್ರಕಾರ ತ್ರಿಕೋನ ಪ್ರೇಮದಿಂದಾಗಿ ಶೇಖ್ ಮತ್ತು ಶಿಂಧೆ ನಡುವಿನ ಸಂಬಂಧವು ಹದಗೆಡಲು ಪ್ರಾರಂಭಿಸಿತು. ಸಂತ್ರಸ್ತೆ ಬೇರೊಬ್ಬ ಹುಡುಗನನ್ನು ಪ್ರೀತಿಸುತ್ತಿದ್ದಳು ಎಂದು ಹೇಳಲಾಗಿದ್ದು, ಇದು ಶೇಖ್‌ನನ್ನು ಕೆರಳಿಸಿತು ಎನ್ನಲಾಗಿದೆ. ಜುಲೈ 22ರಂದು ಕರೆ ದಾಖಲೆಗಳ ಪ್ರಕಾರ ಶೇಖ್ ಉರಾನ್‌ಗೆ ಬಂದು ಜುಲೈ 25ರಿಂದ ಫೋನ್ ಸ್ವಿಚ್ ಆಫ್ ಮಾಡಿದ್ದ ಎಂದು ಅಪರಾಧ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಶೇಖ್ ಹತಾಶೆಗೊಂಡಿರುವುದು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ಸ್ಪಷ್ಟವಾಗಿದೆ. ಜುಲೈ 25ರಂದು ಶಿಂಧೆಯನ್ನು ಇರಿದು ಕೊಲೆ ಮಾಡಲು ಕಾರಣವಾದ ನಿಖರವಾದ ಘಟನೆಗಳು ಇನ್ನೂ ತಿಳಿದು ಬರಬೇಕಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ನವಿ ಮುಂಬೈಗೆ ಕರೆದುಕೊಂಡು ಹೋಗಲಾಗಿದೆ.

ಇದನ್ನೂ ಓದಿ: Brutal Murder: ಮುಂಬಯಿ ಯುವತಿಯನ್ನು ಬರ್ಬರವಾಗಿ ಕೊಂದ ಪಾತಕಿ ದಾವೂದ್ ಯಾದಗಿರಿಯಲ್ಲಿ ಆರೆಸ್ಟ್‌

ಶಿಂಧೆಯ ಹತ್ಯೆಯನ್ನು ‘ಕ್ರೂರ’ ಎಂದು ವಿವರಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಸುಳ್ಳು ಎಂದು ವಲಯ I ರ ಉಪ ಪೊಲೀಸ್ ಆಯುಕ್ತ ವಿವೇಕ್ ಪನ್ಸಾರೆ ಸ್ಪಷ್ಟಪಡಿಸಿದ್ದಾರೆ. ಶಿಂಧೆಯವರನ್ನು ಇರಿದು ಸಾಯಿಸಲಾಗಿದೆ. ಆದರೆ ಆಕೆಯ ಖಾಸಗಿ ಅಂಗಗಳಿಗೆ ಗಾಯವಾಗಿದೆ. ಆಕೆಯ ತಲೆಯನ್ನು ಒಡೆದು ಹಾಕಲಾಗಿದೆ, ಆಕೆಯ ಸ್ತನಗಳು, ಕೈಗಳನ್ನು ಕತ್ತರಿಸಲಾಗಿದೆ ಎಂಬ ಹೇಳಿಕೆಗಳು ತಪ್ಪುದಾರಿಗೆಳೆಯುವ ಮತ್ತು ಸುಳ್ಳು ಮಾಹಿತಿ. ಕೊಲೆಯ ಹಿಂದಿನ ಉದ್ದೇಶ ತ್ರಿಕೋನ ಪ್ರೇಮವೇ ಹೊರತು ಲವ್ ಜಿಹಾದ್ ಅಲ್ಲ ಎನ್ನುವುದು ಪೊಲೀಸರ ಹೇಳಿಕೆಯಾಗಿದೆ.

Continue Reading

ಕರ್ನಾಟಕ

Kodi Mutt Swamiji: ಕೆಟ್ಟದ್ದೇ ಜಾಸ್ತಿ, ಪ್ರಕೃತಿ ವಿಕೋಪಗಳು ಮುಂದುವರಿಯುತ್ತವೆ: ಭಯಾನಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

Kodi Mutt Swamiji: ನನ್ನ ಪ್ರಕಾರ ಅಮಾವಾಸ್ಯೆವರೆಗೆ ಮಳೆ ಇರುತ್ತದೆ, ಬಳಿಕ ಬೇರೆ ಭಾಗಕ್ಕೆ ಹೋಗುತ್ತದೆ. ಇದು ಕ್ರೋಧಿನಾಮ ಸಂವತ್ಸರ, ಕ್ರೋಧಿ ಅಂದರೆ ಸಿಟ್ಟು, ಇದರಲ್ಲಿ ಒಳ್ಳೆಯದು, ಕೆಟ್ಟದ್ದು ಇದೆ. ಆ ಪೈಕಿ ಕೆಟ್ಟದ್ದೇ ಜಾಸ್ತಿ ಇರುತ್ತದೆ ಎಂದು ಕೋಡಿಮಠ ಸ್ವಾಮೀಜಿ ತಿಳಿಸಿದ್ದಾರೆ.

VISTARANEWS.COM


on

Kodi Mutt Swamiji
Koo

ಬೆಳಗಾವಿ: ಭಾರಿ ಮಳೆಯಿಂದ ದೇಶದ ವಿವಿಧೆಡೆ ಪ್ರವಾಹ, ಭೂಕುಸಿತದಿಂದ ಅಪಾರ ಪ್ರಮಾಣದ ಸಾವು-ನೋವು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭಯಾನಕ ಭವಿಷ್ಯ ನುಡಿದಿದ್ದಾರೆ. ಕಳೆದ ಇಪ್ಪತ್ತು ದಿನಗಳ ಹಿಂದೆ ನಾನು ಧಾರವಾಡದಲ್ಲಿ ಈ ರೀತಿ ಆಗುತ್ತೆ ಅಂತ ಹೇಳಿದ್ದೆ. ಮಳೆ ಆಗುತ್ತೆ, ಗುಡ್ಡ ಉರುಳುತ್ತೆ, ಜನರು ಸಾಯುತ್ತಾರೆ, ರೋಗರುಜಿನಗಳು ಹೆಚ್ಚಾಗುತ್ತವೆ ಅಂತ ಹೇಳಿದ್ದೆ. ಇದು ಕ್ರೋಧಿನಾಮ ಸಂವತ್ಸರ, ಪ್ರಾಕೃತಿಕ ವಿಕೋಪಗಳು ಮುಂದುವರಿಯುತ್ತೆವೆ ಎಂದು ಕೋಡಿಮಠ ಸ್ವಾಮೀಜಿ (Kodi Mutt Swamiji) ತಿಳಿಸಿದ್ದಾರೆ.

ಕೇರಳದ ವಯನಾಡು ಭೂಕುಸಿತ ಬಗ್ಗೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಮಾತ್ರವಲ್ಲ, ಜಾಗತಿಕ ಮಟ್ಟದಲ್ಲಿ ಕೆಲವು ರಾಜ್ಯಗಳು ಮುಳುಗುತ್ತವೆ ಅಂತ ಹೇಳಿದ್ದೆ. ನನ್ನ ಪ್ರಕಾರ ಅಮಾವಾಸ್ಯೆವರೆಗೆ ಮಳೆ ಇರುತ್ತದೆ, ಬಳಿಕ ಬೇರೆ ಭಾಗಕ್ಕೆ ಹೋಗುತ್ತದೆ. ಇದು ಕ್ರೋಧಿನಾಮ ಸಂವತ್ಸರ, ಕ್ರೋಧಿ ಅಂದರೆ ಸಿಟ್ಟು, ಇದರಲ್ಲಿ ಒಳ್ಳೆಯದು, ಕೆಟ್ಟದ್ದು ಇದೆ. ಆ ಪೈಕಿ ಕೆಟ್ಟದ್ದೇ ಜಾಸ್ತಿ ಇರುತ್ತದೆ ಎಂದು ನುಡಿದಿದ್ದಾರೆ.

ಇದನ್ನೂ ಓದಿ | Shiradi Landslide: ಕೇರಳದ ಬೆನ್ನಿಗೇ ಶಿರಾಡಿ ಘಾಟಿಯಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ ಸಿಲುಕಿದ ಕಾರುಗಳು, ಟ್ಯಾಂಕರ್‌

ಈ ವರ್ಷದಲ್ಲಿ ಪ್ರಾಕೃತಿಕ ದೋಷಗಳು ಮುಂದುವರಿಯುತ್ತವೆ. ಅಮವಾಸ್ಯೆಗೆ ಒಂದು ಭಾಗಕ್ಕೆ ಮಳೆ ನಿಲ್ಲುತ್ತೆ, ಮತ್ತೊಂದು ಭಾಗಕ್ಕೆ ಹೋಗುತ್ತೆ. ಮುಂದೆ ಅನಿಷ್ಟ ಜಾಸ್ತಿ ಇದೆ, ಕತ್ತಲು ಬೆಳಕು ಎರಡು ಇರುತ್ತದೆ, ಅದರಲ್ಲಿ ಕತ್ತಲು ಜಾಸ್ತಿ ಇರುತ್ತೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾಗಲ್ಲ

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸ್ವಾಮೀಜಿ ಪ್ರತಿಕ್ರಿಯಿಸಿ, ಸದ್ಯಕ್ಕೆ ಏನು ತೊಂದರೆ ಕಾಣುತ್ತಿಲ್ಲ ಎಂದು ಹೇಳಿದರು. ಮುಂದೆ ತೊಂದರೆ ಆಗುತ್ತಾ ಎಂಬ ಪ್ರಶ್ನೆಗೆ, ‘ಬೇಡ ಸನ್ಯಾಸಿ’ ಕತೆಯನ್ನು ಸ್ವಾಮೀಜಿ ಹೇಳಿದರು.

ಏನಾದರೂ ಹೇಳಿದರೆ ಮುಂದೆ ಓಡಾಡದ ಹಾಗೆ ಮಾಡಿಬಿಟ್ಟೀರಾ? ಜನರು ಎಲ್ಲವನ್ನೂ ಮನಶಾಂತಿಯಿಂದ ತೆಗೆದುಕೊಳ್ಳುತ್ತಿಲ್ಲ, ದ್ವೇಷ ಭಾಷೆಯಿಂದ ತೆಗೆದುಕೊಳ್ಳುತ್ತಿದ್ದಾರೆ. ಆತ್ಮಸಾಕ್ಷಿಯಾಗಿ ಜನರು‌ ಮತ ನೀಡುತ್ತಿಲ್ಲ, ಎಲ್ಲಿಯವರೆಗೆ ಮತ ಮಾರಾಟ ಮಾಡಿಕೊಳ್ಳುತ್ತಾರೋ, ಅಲ್ಲಿಯವರೆಗೆ ಲಾಭ ನಷ್ಟ ಇರುತ್ತದೆ. ಹಿಂದಿನ‌ ಕಾಲದಲ್ಲಿ ಧರ್ಮದ ಅನುಮತಿ ಪಡೆದು ರಾಜಕಾರಣ ಮಾಡುತ್ತಿದ್ದರು. ಈಗ ಧರ್ಮವೂ ಇಲ್ಲ, ಗುರಿಯೂ ಇಲ್ಲ, ದುಡ್ಡು ಮಾಡೋದಷ್ಟೇ ಗುರಿ. ಹಾಗಾಗಿ ಬಹುಬೇಗ ಇವರಿಗೆ ಅಪಘಾತಗಳು ಆಗುತ್ತಿವೆ ಎಂದು ಹೇಳಿದರು.

ಇದನ್ನೂ ಓದಿ | ಕುದಿಯುತ್ತಿರುವ ಹಾಲಿನ ಮಡಿಕೆಯೊಳಗೆ ಮಗುವನ್ನು ಮುಳುಗಿಸಿದ ಅರ್ಚಕ! ಗಾಬರಿಗೊಳಿಸುವ ವಿಡಿಯೊ

ಮನುಷ್ಯ ಯಾವುದೇ ಅಪೇಕ್ಷೆ ಇಲ್ಲದೇ ಯಾವಾಗ ಮತ ಹಾಕುತ್ತಾನೋ, ಅಲ್ಲಿಯವರೆಗೆ ರಾಮರಾಜ್ಯ ಸಿಗಲ್ಲ. ಬರುವ ದಿನಗಳಲ್ಲಿ ರೋಗರುಜಿನಗಳು ಸ್ವಲ್ಪ ಜಾಸ್ತಿಯಾಗುತ್ತೆ, ಅಲ್ಪಾಯಸ್ಸು ಇರುತ್ತೆ, ಜನರು ಮಾನಸಿಕ ಸ್ಥೈರ್ಯ ಕಳೆದುಕೊಳ್ಳುತ್ತಿದ್ದಾರೆ. ಬರುವ ದಿನಗಳು ಅಷ್ಟೊಂದು ಶುಭವಾಗಿಲ್ಲ. ಒಳ್ಳೆಯದು ಇದೆ, ಆದರೆ, ಬೆಳಕು ಕಪ್ಪು ಓರೆ ಮಾಡಿದಾಗ ಕಪ್ಪೇ ಜಾಸ್ತಿ ಎಂದು ಸ್ವಾಮೀಜಿ ಹೇಳಿದರು.

Continue Reading
Advertisement
Wayanad Landslide
ಕರ್ನಾಟಕ22 seconds ago

Wayanad Landslide: ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ: ಸಿಎಂ ಸಿದ್ದರಾಮಯ್ಯ

Viral Video
Latest10 mins ago

Viral Video: ಹಾವನ್ನೇ ಮಣಿಸಿ ʼಸ್ನೇಹಿತʼನ ಜೀವ ಉಳಿಸಿದ ಹಲ್ಲಿ! ಅದ್ಭುತ ವಿಡಿಯೊ; ತಪ್ಪದೇ ನೋಡಿ!

Double Ismart
ಸಿನಿಮಾ14 mins ago

Double Ismart: ‘ಡಬಲ್ ಇಸ್ಮಾರ್ಟ್’ ಚಿತ್ರದ ಮೂರನೇ ಹಾಡು ರಿಲೀಸ್; ರೋಮ್ಯಾಂಟಿಕ್ ಆಗಿ ಹೆಜ್ಜೆ ಹಾಕಿದ ರಾಮ್ ಪೋತಿನೇನಿ-ಕಾವ್ಯಾ ಥಾಪರ್

Olympics 2024
ಕ್ರೀಡೆ24 mins ago

Olympics 2024: ಕಂಚು ಗೆದ್ದ ಮನು-ಸರಬ್ಜೋತ್​ ಜೋಡಿಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಐಒಸಿ ಸದಸ್ಯೆ ನೀತಾ ಅಂಬಾನಿ ಅಭಿನಂದನೆ

Viral News
Latest26 mins ago

Street Girlfriends: 115 ರೂ.ಗೆ ಚುಂಬನ, 11 ರೂ.ಗೆ ಬಿಸಿ ಅಪ್ಪುಗೆಯ ಸುಖ; ಸ್ಟ್ರೀಟ್‌ ಗರ್ಲ್‌ಫ್ರೆಂಡ್ ಟ್ರೆಂಡ್‌!

Pavel Durov
ವಿದೇಶ31 mins ago

Pavel Durov: ಮದುವೆಯಾಗದೆ 100 ಮಕ್ಕಳಿಗೆ ತಂದೆಯಾದ ಟೆಲಿಗ್ರಾಂ ಸಿಇಒ ಪಾವೆಲ್‌ ದುರೋವ್! ಈತ ರಿಯಲ್‌ ಲೈಫ್‌ ‘ವಿಕ್ಕಿ ಡೋನರ್’

UGCET 2024
ಬೆಂಗಳೂರು33 mins ago

UGCET 2024 : ಯುಜಿಸಿಇಟಿ ಆಪ್ಶನ್ ದಾಖಲಿಸಲು ಮತ್ತಷ್ಟು ದಿನ ಅವಕಾಶ

Viral Video
Latest34 mins ago

Viral Video: ಪ್ರೇಮಿಯೊಂದಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ; ಗ್ರಾಮಸ್ಥರು ನೀಡಿದರು ಅಮಾನುಷ ಶಿಕ್ಷೆ

Murder Attempt
ಕ್ರೈಂ44 mins ago

Murder Attempt: ದಟ್ಟ ಅರಣ್ಯದಲ್ಲಿ ಮಹಿಳೆಯನ್ನು ಸರಪಳಿಯಿಂದ ಕಟ್ಟಿ ಪರಾರಿಯಾದ ಮಾಜಿ ಪತಿ!

Viral Video
ವೈರಲ್ ನ್ಯೂಸ್51 mins ago

Viral Video: ಯೋಗಿ ಆದಿತ್ಯನಾಥ್‌ ಕಾಲಿಗೆ ಎರಗಿದ ರಾಜಾ ಭಯ್ಯಾ; ಉತ್ತರ ಪ್ರದೇಶ ರಾಜಕೀಯದಲ್ಲಿ ಹೊಸ ಅಧ್ಯಾಯ ಎಂದ ನೆಟ್ಟಿಗರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ22 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ23 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌