ಪ್ರೀತಿಸಿ ಮದುವೆಯಾದವರನ್ನು ದೂರ ಮಾಡಿದ ಪೋಷಕರು: ಹುಣಸೂರು ಪೊಲೀಸರ ವಿರುದ್ಧ ಪಕ್ಷಪಾತ ಆರೋಪ Vistara News
Connect with us

ಕ್ರೈಂ

ಪ್ರೀತಿಸಿ ಮದುವೆಯಾದವರನ್ನು ದೂರ ಮಾಡಿದ ಪೋಷಕರು: ಹುಣಸೂರು ಪೊಲೀಸರ ವಿರುದ್ಧ ಪಕ್ಷಪಾತ ಆರೋಪ

ಪ್ರೇಮಿಗಳಿಗೆ ಸಹಕರಿಸುವ ಬದಲಿಗೆ, ಹಲ್ಲೆಗೆ ಒಳಗಾದವರನ್ನೇ ಪೊಲೀಸರು ಬೆಂಬಲಿಸಿದ್ದಾರೆ ಎಂದು ಅಭಿಷೇಕ್‌ ಹಾಗೂ ಸ್ನೇಹಿತರು ದೂರಿದ್ದಾರೆ.

VISTARANEWS.COM


on

Koo

ಮೈಸೂರು: ಪ್ರೀತಿಸಿ ಮದುವೆಯಾಗಿರುವ ಪ್ರಾಪ್ತ ವಯಸ್ಕ ನವದಂಪತಿಯನ್ನು ಬೇರೆ ಮಾಡಲು ಪೋಷಕರು ಪ್ರಯತ್ನಿಸಿದರೆ ಇತ್ತ ನ್ಯಾಯ ಕೊಡಿಸಬೇಕಾದ ಹುಣಸೂರು ಪೊಲೀಸರೇ ದಂಪತಿಯನ್ನು ದೂರ ಮಾಡಲು ಸಹಕರಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಕದಬಹಳ್ಳಿ ಗ್ರಾಮದ ಅಭಿಷೇಕ್ ಮತ್ತು ಚೋಳೇನಹಳ್ಳಿ ಗ್ರಾಮದ ಅನನ್ಯಾ ಪ್ರೀತಿಸುತ್ತಿದ್ದರು. ಇಬ್ಬರ ಪೋಷಕರು ಮದುವೆಗೆ ಒಪ್ಪದಿದ್ದಾಗ, ಮಾರ್ಚ್‌ 28ರಂದು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಹೋಬಳಿಯ ನಿಲುವಾಗಿಲು-ಬೆಸೂರಿನಲ್ಲಿರುವ ಶ್ರೀ ಬಾಲ ತ್ರಿಪುರಸುಂದರಿ ಅಮ್ಮನವರ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ವಿವಾಹವಾಗಿದ್ದರು. ವಿವಾಹಕ್ಕೆ ಸ್ನೇಹಿತರು ಸಾಥ್‌ ಕೊಟ್ಟಿದ್ದರು.

ವಿವಾಹ ಮುಗಿಸಿ ಹುಣಸೂರು ಬಳಿಯ ಕೆಫೆ ಕಾಫಿ ಡೇ ಬಳಿ ಆಗಮಿಸುತ್ತಿದ್ದಾಗ ಐದಾರು ಜನರು ಅಡ್ಡಗಟ್ಟಿ ಅಭಿಷೇಕ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಹೋಟೆಲ್‌ ಬಳಿ ಇದ್ದವರು ಹಾಗೂ ಸ್ಥಳೀಯರು ಆಗಮಿಸಿ ನವದಂಪತಿ ಹಾಗೂ ಹಲ್ಲೆಗೆ ಪ್ರಯತ್ನಿಸಿದವರನ್ನು ಸಮೀಪದಲ್ಲಿದ್ದ ಹುಣಸೂರು ಠಾಣೆಗೆ ಕರೆದೊಯ್ದಿದ್ದಾರೆ.

ಈ ಸಂದರ್ಭದಲ್ಲಿ ಪ್ರೇಮಿಗಳಿಗೆ ಸಹಕರಿಸುವ ಬದಲಿಗೆ, ಹಲ್ಲೆಗೆ ಒಳಗಾದವರನ್ನೇ ಪೊಲೀಸರು ಬೆಂಬಲಿಸಿದ್ದಾರೆ ಎಂದು ಅಭಿಷೇಕ್‌ ಹಾಗೂ ಸ್ನೇಹಿತರು ದೂರಿದ್ದಾರೆ. ಠಾಣೆಗೆ ಕರೆತಂದಾಗ, ತಾನು ಅಪ್ಪ ಅಮ್ಮನ ಬಳಿಗೆ ಹೋಗುವುದಿಲ್ಲ ಎಂದು ಅನನ್ಯಾ ಸ್ಪಷ್ಟವಾಗಿ ಹೇಳಿದ್ದಾಳೆ. ಅಭಿಷೇಕ್‌ ಜತೆಗೆ ಕಳಿಸಿಕೊಡುವಂತೆ ಕೇಳಿದರೂ ಪೊಲೀಸರು, ಹಲ್ಲೆ ಮಾಡಿದವರ ಜತೆಗೇ ಯುವತಿಯನ್ನು ಕಳಿಸಿಕೊಟ್ಟಿದ್ದಾರೆ. ಒಂದು ದಿನ ಕಳೆದರೂ ಅವರ ಕಡೆಯವರು ಯಾರೂ ಬಂದಿಲ್ಲ. ಪೊಲೀಸರೂ ಸರಿಯಾಗಿ ಸ್ಪಂದಿಸುತ್ತಿಲ್ಲ. ಅಭಿಷೇಕ್‌ಗೆ ಏನಾದರೂ ಆದರೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅನನ್ಯಾ ಹೇಳುತ್ತಿದ್ದಳು. ಈಗ ಪೊಲೀಸರ ವರ್ತನೆಯಿಂದ ಬೇಸತ್ತು ಆಕೆ ಅಪಾಯ ಮಾಡಿಕೊಂಡರೆ ಪೊಲೀಸರೇ ಹೊಣೆ ಹೊರಬೇಕಾಗುತ್ತದೆ ಎಂದು ಠಾಣೆ ಎದುರು ಆರೋಪ ಮಾಡಿದ್ದಾರೆ. ತನಗೆ ತನ್ನ ಪತ್ನಿಯನ್ನು ಮರಳಿಸಿ ನ್ಯಾಯ ಕೊಡಿಸಿ ಎಂದು ಯುವಕ ಅಭಿಷೇಕ್‌ ಅಂಗಲಾಚಿದ್ದಾನೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ

Road Accident: ಅಪಘಾತದಲ್ಲಿ ಮೈಸೂರು ಬಿಜೆಪಿ ಮುಖಂಡ ಮರಣ; ಶಿವಮೊಗ್ಗ, ಕೊಡಗಿನಲ್ಲೂ ಹಾರಿಹೋಯ್ತು ಪ್ರಾಣ

Road Accident: ಊಟಿ ಪ್ರವಾಸಕ್ಕೆ ಹೋಗಿದ್ದ ಬಿಜೆಪಿ ಮುಖಂಡರೊಬ್ಬರ (BJP leader) ಕಾರು (Car Accident) ಅಪಘಾತಕ್ಕೀಡಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದಲ್ಲಿ ಆಟೋಗೆ ಬೊಲೆರೋ ವಾಹನ ಡಿಕ್ಕಿಯಾಗಿ ವೃದ್ಧ ಮೃತಪಟ್ಟಿದ್ದರೆ, 12 ಮಂದಿ ಗಾಯಗೊಂಡಿದ್ದಾರೆ.

VISTARANEWS.COM


on

Edited by

Car Accident in Ooty
Koo

ಮೈಸೂರು/ಶಿವಮೊಗ್ಗ/ಕೊಡಗು: ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಸಾವು-ನೋವಿಗೆ ಕಾರಣವಾಗಿದೆ. ಕಾರು ಅಪಘಾತದಲ್ಲಿ ಮೈಸೂರಿನ ಬಿಜೆಪಿ ಮುಖಂಡ ಮೃತಪಟ್ಟಿರುವ ದುರ್ಘಟನೆ ಊಟಿಯಲ್ಲಿ ನಡೆದಿದೆ. ಮೈಸೂರಿನ ನರಸಿಂಹರಾಜ ಕ್ಷೇತ್ರದ ಬಿಜೆಪಿ ಮುಖಂಡ ಸ್ವಾಮಿಗೌಡ ಎಂಬುವವರು ಮೃತಪಟ್ಟಿದ್ದಾರೆ.

ಕಾರು ಪಲ್ಟಿಯಾಗಿ ಮೈಸೂರಿನ ಬಿಜೆಪಿ ಮುಖಂಡ ಮೃತ್ಯು

ಸ್ವಾಮಿಗೌಡ ಅವರು ನರಸಿಂಹರಾಜ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದು, ಸ್ನೇಹಿತರೊಂದಿಗೆ ಊಟಿ ಪ್ರವಾಸಕ್ಕೆ ತೆರಳಿದಾಗ ಈ ಘಟನೆ ನಡೆದಿದೆ. ಕಾರು ಪಲ್ಟಿಯಾದ ಪರಿಣಾಮ ಸ್ವಾಮಿಗೌಡ ಅವರ ತಲೆಗೆ ಗಂಭೀರ ಪೆಟ್ಟಾಗಿದೆ. ತೀವ್ರ ರಕ್ತಸ್ರಾವವಾಗಿ ಸ್ವಾಮಿಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾರಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಉಳಿದ ಮೂವರಿಗೆ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾರು ಅಪಘಾತದಲ್ಲಿ ಮೃತಪಟ್ಟ ಬಿಜೆಪಿ ಮುಖಂಡ ಸ್ವಾಮಿಗೌಡ

ಲಗೇಜು ಆಟೋಗೆ ಡಿಕ್ಕಿ ಹೊಡೆದ ಬೊಲೆರೋ

ಶಿವಮೊಗ್ಗದ ಶಿಕಾರಿಪುರದ ಜಕ್ಕನಹಳ್ಳಿ ಸಮೀಪ ಲಗೇಜು ಆಟೋಗೆ ಹಿಂಬದಿಯಿಂದ ಬಂದ ಬೊಲೆರೋ ವಾಹನವು ಡಿಕ್ಕಿ ಹೊಡೆದಿದೆ. ಪರಿಣಾಮ ವೃದ್ಧರೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಬಿದರಕೊಪ್ಪ ತಾಂಡ ವಾಸಿ ರಾಮ್‌ಜಿ ನಾಯ್ಕ (72) ಮೃತ ದುರ್ದೈವಿ.

ತೊಟ್ಟಿಲು ಶಾಸ್ತ್ರ ಕಾರ್ಯಕ್ರಮಕ್ಕಾಗಿ ಆಟೋದಲ್ಲಿ ಬಿದರಕೊಪ್ಪ ತಾಂಡದಿಂದ ಎಳನೀರುಕೊಪ್ಪ ಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದು, ಆಟೋದಲ್ಲಿದ್ದವರೆಲ್ಲ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಂಸದ ಬಿವೈರಾಘವೇಂದ್ರ

ವಿಚಾರ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ, ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಇನ್ನು ಆಟೋದಲ್ಲಿ ಕಾಲು ಹೊರಕ್ಕೆ ಹಾಕಿ ಕುಳಿತಿದ್ದವರ ಕಾಲಿಗೆ ಬೊಲೆರೋ ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡಿದ್ದಾರೆ. ಹಲವರನ್ನು ಶಿವಮೊಗ್ಗ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: Road Accident: ಕಾರಿಗೆ ಗುದ್ದಿ ಪರಾರಿಯಾದ ಲಾರಿ ಚಾಲಕ, ಬೈಕ್‌ಗೆ ಗುದ್ದಿ ಮೂವರ ಜೀವ ತೆಗೆದ

ಅಪಘಾತದಲ್ಲಿ ಮೃತಪಟ್ಟ ಸವಾರ ಅಪ್ಪಾಜಿ

ಭೀಕರ ಅಪಘಾತದಲ್ಲಿ ಸವಾರ ಸಾವು

ಕೊಡಗಿನ ನಾಪೋಕ್ಲು-ಮೂರ್ನಾಡು ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸ್ಕೂಟರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೂರ್ನಾಡು ರಸ್ತೆಯ ಹೊದವಾಡ ಗ್ರಾಮದ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ. ನಾಪೋಕ್ಲುವಿನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಪ್ಪಾಜಿ (19) ಮೃತ ದುರ್ದೈವಿ. ಸ್ಕೂಟರ್‌ನ ಹಿಂಬದಿ ಸವಾರನಿಗೂ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನಾಫೋಕ್ಲು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಪ್ರಕರಣವನ್ನು ದಾಖಲಿಸಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕ್ರೈಂ

Me too case:‌ ಮೀಟೂ ಪ್ರಕರಣದಲ್ಲಿ ನಟಿ ಶೃತಿ ಹರಿಹರನ್‌ಗೆ ನೋಟಿಸ್‌

ತಮ್ಮ ಮೀಟೂ ಪ್ರಕರಣದಲ್ಲಿ ಪೊಲೀಸರು ನೀಡಿದ ಬಿ ರಿಪೋರ್ಟ್ ಚಾಲೆಂಜ್ ಮಾಡಿದ್ದ ಶೃತಿ ಹರಿಹರನ್‌ಗೆ, ಸಾಕ್ಷ್ಯಾಧಾರ ನೀಡುವಂತೆ ನೋಟಿಸ್ ಕೊಡಲಾಗಿದೆ.

VISTARANEWS.COM


on

Edited by

shruthi hariharan me too case against arjun sarja
Koo

ಬೆಂಗಳೂರು: ನಟಿ ಶೃತಿ ಹರಿಹರನ್‌ (sruthi hariharan) ಅವರ ಮೀಟೂ ಕೇಸ್‌ಗೆ (Me too case) ಮತ್ತೆ ಟ್ವಿಸ್ಟ್ ದೊರೆತಿದೆ. ಬಿ ರಿಪೋರ್ಟ್ ಚಾಲೆಂಜ್ ಮಾಡಿದ್ದ ಶೃತಿ ಹರಿಹರನ್‌ಗೆ, ಸಾಕ್ಷ್ಯಾಧಾರ ನೀಡುವಂತೆ ನೋಟಿಸ್ ಕೊಡಲಾಗಿದೆ.

2018ರಲ್ಲಿ ಅರ್ಜುನ್ ಸರ್ಜಾ (arjun sarja) ವಿರುದ್ಧ ನಟಿ ಶೃತಿ ಹರಿಹರನ್‌ ಮೀಟೂ ಆರೋಪ ಮಾಡಿದ್ದರು. ತನಿಖೆ ನಡೆಸಿದ್ದ ಕಬ್ಬನ್ ಠಾಣೆಯ ಪೊಲೀಸರು, ಅರ್ಜುನ್ ಸರ್ಜಾ ವಿರುದ್ಧ ಆರೋಪ ಸಾಬೀತುಪಡಿಸುವ ಯಾವುದೇ ಸಾಕ್ಷ್ಯಾಧಾರ ಇಲ್ಲ ಎಂದು ಬಿ ರಿಪೋರ್ಟ್ ಸಲ್ಲಿಸಿದ್ದರು.

ಪೊಲೀಸರು ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಶೃತಿ ಹರಿಹರನ್ ಅರ್ಜಿ ಸಲ್ಲಿಸಿದ್ದರು. ಕೋರ್ಟ್‌ನಲ್ಲಿ ಅರ್ಜಿ ಕುರಿತ ವಿಚಾರಣೆ ಬಳಿಕ, ಪೊಲೀಸರಿಗೆ ಈ ಬಗೆಗಿನ ಸಾಕ್ಷ್ಯಾಧಾರ ನೀಡುವಂತೆ ಸೂಚನೆ ನೀಡಲಾಗಿದೆ.

ಏನಿದು ಪ್ರಕರಣ?

‘ವಿಸ್ಮಯ’ ಸಿನಿಮಾ ಚಿತ್ರೀಕರಣ ವೇಳೆ ಲೈಂಗಿಕ ಕಿರುಕುಳ ಆಗಿತ್ತು ಎಂದು ನಟಿ ಶೃತಿ ಹರಿಹರನ್ ಅವರು​ ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ಧ ಆರೋಪಿಸಿದ್ದರು. ವಿಸ್ಮಯ ಚಿತ್ರದಲ್ಲಿ ನಟ ಅರ್ಜುನ್ ಸರ್ಜಾ ಹಾಗೂ ನಟಿ ಶೃತಿ ಹರಿಹರನ್ ಇಬ್ಬರೂ ಗಂಡ-ಹೆಂಡತಿ ಪಾತ್ರದಲ್ಲಿ ನಟಿಸಿದ್ದರು. ಚಿತ್ರೀಕರಣದ ವೇಳೆ ಅರ್ಜುನ್​ ಸರ್ಜಾ ಅವರು ತಮಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ನಟಿ ಶೃತಿ ಹರಿಹರನ್​ ಆರೋಪ ಹೊರಿಸಿದ ಬಳಿಕ ಸ್ಯಾಂಡಲ್​ವುಡ್​ನಲ್ಲಿ ವಿವಾದದ ಬೆಂಕಿ ಹೊತ್ತಿಕೊಂಡಿತ್ತು. ಈ ಸಂದರ್ಭದಲ್ಲಿ ಕೆಲವರು ನಟಿ ಶೃತಿ ಪರವಾಗಿ ಮಾತನಾಡಿದ್ದರೆ, ಅನೇಕರು ಅರ್ಜುನ್​ ಸರ್ಜಾಗೆ ಬೆಂಬಲ ನೀಡಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿಯೂ ಕೂಡ ಈ ಬಗ್ಗೆ ಸಭೆ ನಡೆಸಲಾಗಿತ್ತು.

ಇದನ್ನೂ ಓದಿ: Tanushree Dutta | ಮೀಟೂ ನಂತರ ಕೊಲೆ ಯತ್ನದ ಬಗ್ಗೆ ಭಯಾನಕ ಸತ್ಯ ಬಾಯ್ಬಿಟ್ಟ ನಟಿ ತನುಶ್ರೀ ದತ್ತಾ!

Continue Reading

ಕ್ರೈಂ

Murder Case: ಕೋಪದಿಂದ ಅಜ್ಜಿಯ ಕೊಲೆ ಮಾಡಿದ, ಹೆಣ ಕಾರಿನಲ್ಲಿ ಇಟ್ಟುಕೊಂಡು ಮಿಸ್ಸಿಂಗ್‌ ಕಂಪ್ಲೇಂಟ್‌ ನೀಡಿದ!

ಅಜ್ಜಿಯನ್ನು ಕೊಲೆ ಮಾಡಿದ ಮೊಮ್ಮಗ ಹೆಣವನ್ನು ಪ್ಯಾಕ್ ಮಾಡಿ ಕಾರಿನಲ್ಲಿಟ್ಟುಕೊಂಡು ದಿನವಿಡೀ ಓಡಾಡಿದ್ದು, ಪೊಲೀಸ್‌ ಠಾಣೆಗೂ ಹೋಗಿ ಕಂಪ್ಲೇಂಟ್‌ ನೀಡಿದ್ದಾನೆ! ಶವ ಸುಡಲು ಕೊರಿಯನ್ ವೆಬ್ ಸೀರಿಸ್ ನೋಡಿ ಪ್ರೇರಣೆ ಪಡೆದಿದ್ದಾನೆ.

VISTARANEWS.COM


on

Edited by

murderd grandmother sulochana mysore
Koo

ಮೈಸೂರು: ಕೆಆರ್‌ಎಸ್ ಹಿನ್ನಿರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಸಿಕ್ಕಿದ ಪ್ರಕರಣವನ್ನು ಮೈಸೂರು ಪೊಲೀಸರು ಭೇದಿಸಿದ್ದಾರೆ. ಸ್ವಂತ ಅಜ್ಜಿಯನ್ನು ಮೊಮ್ಮಗನೇ ಹತ್ಯೆ ಮಾಡಿರುವ ಬೆಚ್ಚಿಬೀಳಿಸುವ ಸಂಗತಿ ಬೆಳಕಿಗೆ ಬಂದಿದೆ.

ಮೈಸೂರಿನ ಗಾಯತ್ರಿಪುರಂ ನಿವಾಸಿ ಸುಲೋಚನ (75) ಮೃತ ಮಹಿಳೆ. ಸುಪ್ರೀತ್ (23) ಅಜ್ಜಿಯನ್ನು ಕೊಂದ ಮೊಮ್ಮಗನಾಗಿದ್ದಾನೆ. ಮೈಸೂರು ತಾಲೂಕಿನ ಸಾಗರಕಟ್ಟೆ ಗ್ರಾಮದ ಬಳಿ ಮೇ 30ರಂದು ಶವ ಪತ್ತೆಯಾಗುವ ಮೂಲಕ ಘಟನೆ ತನಿಖೆಗೆ ಚಾಲನೆ ನೀಡಲಾಗಿತ್ತು. ಗುರುತು ಸಿಗದಂತೆ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು.

ಮೃತ ದೇಹದ ತಲೆ ಕೂದಲು ಹಾಗೂ ಕನ್ನಡಕದಿಂದ ಮೈಸೂರು ದಕ್ಷಿಣ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದರು. ನಜರ್‌ಬಾದ್ ಠಾಣೆಯಲ್ಲಿ ದಾಖಲಾಗಿದ್ದ ಮಿಸ್ಸಿಂಗ್ ಕಂಪ್ಲೇಂಟ್ ಜೊತೆಗೆ ಸಾಮ್ಯತೆ ಕಂಡುಬಂದಿತ್ತು. ಕೊಲೆ ಮಾಡಿದ ಮೊಮ್ಮಗನೇ ಮಿಸ್ಸಿಂಗ್‌ ಕಂಪ್ಲೇಂಟ್‌ ಕೂಡ ನೀಡಿದ್ದ. ಆತನನ್ನು ವಿವರವಾದ ತನಿಖೆಗೆ ಒಳಪಡಿಸಿದಾಗ ಸತ್ಯ ಹೊರಬಂದಿದೆ.

ಅಜ್ಜಿ ಬೈಯುತ್ತಿದ್ದರು, ಹಾಗಾಗಿ ಕೊಲೆ ಮಾಡಿದೆ ಎಂದು ಹೇಳಿದ್ದಾನೆ ಈ ಕೊಲೆಗಾರ ಮೊಮ್ಮಗ. ಮೇ 28ರಂದು ಮನೆಯಲ್ಲಿ ಮಾತಿಗೆ ಮಾತು ಬೆಳೆದು, ಬೈದ ಅಜ್ಜಿ ಸುಲೋಚನ ಅವರನ್ನು ಸುಪ್ರೀತ್‌ ತಳ್ಳಿದ್ದಾನೆ. ಹೊಡೆದು ಬೀಳಿಸಿ ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ, ರಟ್ಟಿನ ಬಾಕ್ಸ್‌ನಲ್ಲಿ ಹಾಕಿದ್ದ. ಶವವನ್ನು ಏನು ಮಾಡುವುದು ಎಂಬುದಕ್ಕೆ ಕೊರಿಯನ್ ವೆಬ್ ಸೀರಿಸ್ ನೋಡಿ ಪ್ರೇರಣೆ ಪಡೆದಿದ್ದಾನೆ. ಹೆಣ ಸುಟ್ಟು ಬಚಾವಾಗಲು ಯತ್ನಿಸಿದ್ದಾನೆ.

ಕಾರಿನಲ್ಲಿ ಕೆಆರ್‌ಎಸ್ ಹಿನ್ನೀರು ಪ್ರದೇಶಕ್ಕೆ ಶವ ಕೊಂಡೊಯ್ದು ಗುಂಡಿಯಲ್ಲಿ ಹಾಕಿ ಶವವನ್ನು ಸುಟ್ಟು ಹಾಕಿದ್ದಾನೆ. ಅದಕ್ಕೂ ಮುನ್ನ ಹೆಣವನ್ನು ಪ್ಯಾಕ್ ಮಾಡಿ ಕಾರಿನಲ್ಲಿಟ್ಟುಕೊಂಡು ದಿನವಿಡೀ ಓಡಾಡಿದ್ದು, ಹಾಗೇ ಪೊಲೀಸ್‌ ಠಾಣೆಗೂ ಹೋಗಿ ಕಂಪ್ಲೇಂಟ್‌ ನೀಡಿದ್ದಾನೆ!

ಇದನ್ನೂ ಓದಿ: Crime News : ಹಾಸ್ಟೆಲ್‌ನಲ್ಲೇ ಯುವತಿಯ ಅತ್ಯಾಚಾರ, ಕೊಲೆ; ಹಳಿ ಮೇಲೆ ಪತ್ತೆಯಾಯ್ತು ಮತ್ತೊಂದು ಶವ!

Continue Reading

ಕರ್ನಾಟಕ

Medical Negligence: ವೈದ್ಯರ ನಿರ್ಲಕ್ಷ್ಯಕ್ಕೆ ಮೂರು ತಿಂಗಳ ಮಗು ಸಾವು? ಲಸಿಕೆ ಹಾಕಿ ಗಂಟೆಯೊಳಗೇ ಮರಣ!

Child Death: ಮೂರು ತಿಂಗಳ ಮಗುವನ್ನು ಚುಚ್ಚುಮದ್ದು ಹಾಕಿಸಿಕೊಂಡು ಹೋಗಲು ಸರ್ಕಾರಿ ಆಸ್ಪತ್ರೆಗೆ ಕರೆ ತಂದಿದ್ದು, ವೈದ್ಯರು ನೀಡಿದ ಚುಚ್ಚುಮದ್ದಿನಿಂದ ಕೆಲವೇ ಗಂಟೆಯಲ್ಲಿ ಮಗು ಮೃತಪಟ್ಟಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪೋಷಕರು, ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ.

VISTARANEWS.COM


on

Edited by

Medical Negligence in tumkur
Koo

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹೊಯ್ಸಳಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ (Medical Negligence) ಮೂರು ತಿಂಗಳ ಮಗುವೊಂದು ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಲಸಿಕೆ ಹಾಕಿದ ಒಂದು ಗಂಟೆಯೊಳಗೆ ಮಗು ಮೃತಪಟ್ಟಿದ್ದು, ಪೋಷಕರು, ಸಂಬಂಧಿಕರು ಪ್ರತಿಭಟನೆ (Protest) ನಡೆಸಿದ್ದಾರೆ.

ಚುಚ್ಚುಮದ್ದು ಪಡೆದು ಮನೆಗೆ ತೆರಳುವ ಮಾರ್ಗ ಮಧ್ಯದಲ್ಲೇ ಮಗು ಮೃತಪಟ್ಟಿದೆ. ಇದು ವೈದ್ಯರ ನಿರ್ಲಕ್ಷ್ಯದಿಂದ ಆಗಿದೆ. ಮಗು ಅಲ್ಲಿಯವರೆಗೆ ಆರೋಗ್ಯವಾಗಿಯೇ ಇತ್ತು ಎಂದು ಆರೋಪಿಸಿ ಆಸ್ಪತ್ರೆ ಎದುರು ಮೃತ ಮಗುವಿನ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಭೇಟಿ ನೀಡಿ ಮೃತ ಮಗುವಿನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Video Viral: ತಲಕಾಡಿನ ಕಾವೇರಿ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವಕರ ರಕ್ಷಣೆ!

ವೈದ್ಯರು ಹಾಗೂ ಸಿಬ್ಬಂದಿ ಸೇರಿ ಐವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಡಾ. ಮಧು, ಸಿಬ್ಬಂದಿ ಸಾನಿಯಾ, ಮಮತಾ, ಶೋಭಾ, ಲಕ್ಷ್ಮೀದೇವಿ, ಚಂದ್ರಪ್ರಭಾ ವಿರುದ್ಧ ದೂರು ದಾಖಲು ಮಾಡಲಾಗಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿಯಲ್ಲಿ ಗರ್ಭಿಣಿಗೆ ಸಿಗದ ಚಿಕಿತ್ಸೆ; ಹೊಟ್ಟೆಯಲ್ಲೇ ಶಿಶು ಸಾವು

ಯಾದಗಿರಿ: ತಾಲೂಕಿನ ಹೊನಗೇರಾದಲ್ಲಿನ ಪ್ರಾಥಮಿಕ ಆಸ್ಪತ್ರೆಗೆ ಹೆರಿಗೆಗೆಂದು ತೆರಳಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ದೊರೆಯದ ಹಿನ್ನೆಲೆಯಲ್ಲಿ ಅವರ ಹೊಟ್ಟೆಯಲ್ಲಿಯೇ ಶಿಶು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿತ್ತು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಯಾದಗಿರಿ ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದರು. ಸೂಕ್ತ ನ್ಯಾಯಕ್ಕಾಗಿ ಒತ್ತಾಯಿಸಿದ್ದರು.

ಇದನ್ನೂ ಓದಿ: Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ

ಆಶನಾಳ ಗ್ರಾಮದ ಗರ್ಭಿಣಿ ಲಕ್ಷ್ಮಿ ಎಂಬುವವರಿಗೆ ಸರಿಯಾದ ಚಿಕಿತ್ಸೆ ಸಿಕ್ಕಿಲ್ಲ. ವೈದ್ಯರ ನಿರ್ಲಕ್ಷ್ಯದಿಂದಲೇ ಹೀಗೆ ಆಗಿದೆ ಎಂದು ಆರೋಪ ಮಾಡಲಾಗಿತ್ತು. ಮೊದಲಿಗೆ ಆಶಾ ಕಾರ್ಯಕರ್ತೆಯು ಇವರನ್ನು ಪ್ರಾಥಮಿಕ‌ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಅಲ್ಲಿ ವೈದ್ಯರು ಇರದ ಹಿನ್ನೆಲೆಯಲ್ಲಿ ಯಾದಗಿರಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆನ್ನಲಾಗಿದೆ. ಗರ್ಭಿಣಿ ಲಕ್ಷ್ಮಿಯ ಸ್ಕ್ಯಾನಿಂಗ್ ಮಾಡಿಸಿದಾಗ ಹೊಟ್ಟೆಯಲ್ಲಿ ಶಿಶು ಮೃತಪಟ್ಟಿದ್ದ ಬಗ್ಗೆ ತಿಳಿದುಬಂದಿದೆ. ಕೊನೆಗೆ ಮೃತ ಶಿಶುವನ್ನು ಶಸ್ತ್ರಚಿಕಿತ್ಸೆ ‌ಮೂಲಕ ವೈದ್ಯರು ಹೊರ ತೆಗೆದಿದ್ದಾರೆ. ಬಳಿಕ ಬಾಣಂತಿ ಲಕ್ಷ್ಮಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ.

Continue Reading
Advertisement
Manja Thread dead person
ಕರ್ನಾಟಕ1 min ago

Manja Thread: ಯಾರೋ ಹಾರಿಸಿದ ಗಾಳಿಪಟದ ಮಾಂಜಾ ದಾರ ತೆಗೆಯಿತು ಅಮಾಯಕನ ಪ್ರಾಣ!

Lock and unlock of aadhar services through online
ತಂತ್ರಜ್ಞಾನ4 mins ago

Aadhaar Services: ಆನ್‌ಲೈನ್ ಮೂಲಕ ಆಧಾರ್ ‘ಲಾಕ್’ ಮತ್ತು ‘ಅನ್‌ಲಾಕ್’ ಮಾಡುವುದು ಹೇಗೆ?

Gujarat High Court On Termination Of Pregnancy
ದೇಶ12 mins ago

17 ವರ್ಷದ ಹೆಣ್ಣುಮಕ್ಕಳು ಮಗು ಹೆರುವ ಕಾಲವಿತ್ತು; ರೇಪ್‌ ಸಂತ್ರಸ್ತೆಯ ಗರ್ಭಪಾತ ಬೇಡವೆಂದ ಹೈಕೋರ್ಟ್

Virat Kohli troll
ಕ್ರಿಕೆಟ್23 mins ago

WTC Final 2023: ಹಣಕ್ಕಾಗಿ ಅಲ್ಲ, ದೇಶಕ್ಕಾಗಿ ಆಡು; ಔಟಾದ ಬಳಿಕ ಊಟದ ಜತೆ ಬೈಗುಳ ತಿಂದ ಕೊಹ್ಲಿ

Appeals to CM not to increase liquor prices
ಕರ್ನಾಟಕ47 mins ago

Viral News: ಮುಖ್ಯಮಂತ್ರಿಗಳೇ ಎಣ್ಣೆ ರೇಟ್‌ ಜಾಸ್ತಿ ಮಾಡ್ಬೇಡಿ; BPL ಕಾರ್ಡ್‌ದಾರನ ವಾರ್ಷಿಕ ಲೆಕ್ಕ ಮುಂದಿಟ್ಟ ಕುಡುಕರ ಸಂಘ!

A new country is ready in just Rs 15 lakh and the name is Slowjamastan
ಪ್ರಮುಖ ಸುದ್ದಿ55 mins ago

New Country: ಕೇವಲ 15 ಲಕ್ಷ ರೂ.ನಲ್ಲಿ ರೆಡಿ ಆಯ್ತು ಹೊಸ ದೇಶ, ಹೆಸರು ಸ್ಲೋಜಾಮ್‌ಸ್ತಾನ!

water issuse
ಉಡುಪಿ59 mins ago

Viral News: ಶಾಲೆಗೆ ನೀರು ಪೂರೈಸಲು ಹೊರಟಿದ್ದ ಟ್ಯಾಂಕರ್‌ ವಾಪಸ್‌; ನೀರು ಕೊಡ್ಬೇಡ ಎಂದು ಗ್ರಾಪಂ ಅಧ್ಯಕ್ಷ ಅವಾಜ್‌

ICC World Test Championship Final 2023
Live News1 hour ago

WTC Final 2023: ಭಾರತ-ಆಸೀಸ್​ ಮೂರನೇ ದಿನದಾಟದ ಹೈಲೆಟ್ಸ್​

vidhana soudha
ಕರ್ನಾಟಕ1 hour ago

Karnataka Govt: ಜಿಲ್ಲಾ ಉಸ್ತುವಾರಿ ನೇಮಕದಲ್ಲಿ ಬಿಜೆಪಿ ನೀತಿಯನ್ನು ಕಿತ್ತೆಸೆದ ಕಾಂಗ್ರೆಸ್‌ ಸರ್ಕಾರ: ಇಬ್ಬರು ಸಚಿವರಿಗೆ ಜಿಲ್ಲೆ ಇಲ್ಲ

Brij Bhushan Sharan Singh
ಕ್ರಿಕೆಟ್1 hour ago

Wrestlers Protest: ಬ್ರಿಜ್ ಭೂಷಣ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಮಹತ್ವದ ತಿರುವು

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ11 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Cancellation of tenders for 108 ambulances and Dinesh Gundu rao
ಆರೋಗ್ಯ4 hours ago

Dinesh Gundu Rao: ಬಿಜೆಪಿ ಅವಧಿಯ 108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಟೆಂಡರ್‌ ರದ್ದು; ಆರೋಗ್ಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ

Meghalaya Villagers Chase Bangladesh soldiers
ದೇಶ4 hours ago

Viral Video : ಗಡಿ ದಾಟಿ ಭಾರತಕ್ಕೆ ನುಗ್ಗಿದ ಬಾಂಗ್ಲಾ ಯೋಧರು! ಅಟ್ಟಾಟಿಸಿಕೊಂಡು ಒದ್ದೋಡಿಸಿದ ಹಳ್ಳಿಗರು

snake mate in chamarajnagar 2
ಕರ್ನಾಟಕ4 hours ago

Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

Rain in mangalore
ಉಡುಪಿ5 hours ago

Rain News: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ಮಂಗಳೂರಲ್ಲಿ ಚಿಟಪಟ ಮಳೆ

Rain in koppal
ಉಡುಪಿ20 hours ago

Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ

youths rescued in Kaveri river
ಕರ್ನಾಟಕ22 hours ago

Video Viral: ತಲಕಾಡಿನ ಕಾವೇರಿ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವಕರ ರಕ್ಷಣೆ!

Elephant attack in muttunga wildlife sanctuary
ಕರ್ನಾಟಕ1 day ago

Viral Video: ವನ್ಯಧಾಮದಲ್ಲಿ ಮೂತ್ರಕ್ಕೆಂದು ಕಾಡಿಗೆ ಹೋದ; ಆನೆ ದಾಳಿಗೆ ಹೆದರಿ ಪ್ಯಾಂಟ್‌ ಹಿಡಿದು ಓಡೋಡಿ ಬಂದ!

abhishek ambareesh wedding Reception
ಕರ್ನಾಟಕ2 days ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ2 days ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

ಟ್ರೆಂಡಿಂಗ್‌

error: Content is protected !!