ಪ್ರೀತಿಸಿ ಮದುವೆಯಾದವರನ್ನು ದೂರ ಮಾಡಿದ ಪೋಷಕರು: ಹುಣಸೂರು ಪೊಲೀಸರ ವಿರುದ್ಧ ಪಕ್ಷಪಾತ ಆರೋಪ - Vistara News

ಕ್ರೈಂ

ಪ್ರೀತಿಸಿ ಮದುವೆಯಾದವರನ್ನು ದೂರ ಮಾಡಿದ ಪೋಷಕರು: ಹುಣಸೂರು ಪೊಲೀಸರ ವಿರುದ್ಧ ಪಕ್ಷಪಾತ ಆರೋಪ

ಪ್ರೇಮಿಗಳಿಗೆ ಸಹಕರಿಸುವ ಬದಲಿಗೆ, ಹಲ್ಲೆಗೆ ಒಳಗಾದವರನ್ನೇ ಪೊಲೀಸರು ಬೆಂಬಲಿಸಿದ್ದಾರೆ ಎಂದು ಅಭಿಷೇಕ್‌ ಹಾಗೂ ಸ್ನೇಹಿತರು ದೂರಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಪ್ರೀತಿಸಿ ಮದುವೆಯಾಗಿರುವ ಪ್ರಾಪ್ತ ವಯಸ್ಕ ನವದಂಪತಿಯನ್ನು ಬೇರೆ ಮಾಡಲು ಪೋಷಕರು ಪ್ರಯತ್ನಿಸಿದರೆ ಇತ್ತ ನ್ಯಾಯ ಕೊಡಿಸಬೇಕಾದ ಹುಣಸೂರು ಪೊಲೀಸರೇ ದಂಪತಿಯನ್ನು ದೂರ ಮಾಡಲು ಸಹಕರಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಕದಬಹಳ್ಳಿ ಗ್ರಾಮದ ಅಭಿಷೇಕ್ ಮತ್ತು ಚೋಳೇನಹಳ್ಳಿ ಗ್ರಾಮದ ಅನನ್ಯಾ ಪ್ರೀತಿಸುತ್ತಿದ್ದರು. ಇಬ್ಬರ ಪೋಷಕರು ಮದುವೆಗೆ ಒಪ್ಪದಿದ್ದಾಗ, ಮಾರ್ಚ್‌ 28ರಂದು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಹೋಬಳಿಯ ನಿಲುವಾಗಿಲು-ಬೆಸೂರಿನಲ್ಲಿರುವ ಶ್ರೀ ಬಾಲ ತ್ರಿಪುರಸುಂದರಿ ಅಮ್ಮನವರ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ವಿವಾಹವಾಗಿದ್ದರು. ವಿವಾಹಕ್ಕೆ ಸ್ನೇಹಿತರು ಸಾಥ್‌ ಕೊಟ್ಟಿದ್ದರು.

ವಿವಾಹ ಮುಗಿಸಿ ಹುಣಸೂರು ಬಳಿಯ ಕೆಫೆ ಕಾಫಿ ಡೇ ಬಳಿ ಆಗಮಿಸುತ್ತಿದ್ದಾಗ ಐದಾರು ಜನರು ಅಡ್ಡಗಟ್ಟಿ ಅಭಿಷೇಕ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಹೋಟೆಲ್‌ ಬಳಿ ಇದ್ದವರು ಹಾಗೂ ಸ್ಥಳೀಯರು ಆಗಮಿಸಿ ನವದಂಪತಿ ಹಾಗೂ ಹಲ್ಲೆಗೆ ಪ್ರಯತ್ನಿಸಿದವರನ್ನು ಸಮೀಪದಲ್ಲಿದ್ದ ಹುಣಸೂರು ಠಾಣೆಗೆ ಕರೆದೊಯ್ದಿದ್ದಾರೆ.

ಈ ಸಂದರ್ಭದಲ್ಲಿ ಪ್ರೇಮಿಗಳಿಗೆ ಸಹಕರಿಸುವ ಬದಲಿಗೆ, ಹಲ್ಲೆಗೆ ಒಳಗಾದವರನ್ನೇ ಪೊಲೀಸರು ಬೆಂಬಲಿಸಿದ್ದಾರೆ ಎಂದು ಅಭಿಷೇಕ್‌ ಹಾಗೂ ಸ್ನೇಹಿತರು ದೂರಿದ್ದಾರೆ. ಠಾಣೆಗೆ ಕರೆತಂದಾಗ, ತಾನು ಅಪ್ಪ ಅಮ್ಮನ ಬಳಿಗೆ ಹೋಗುವುದಿಲ್ಲ ಎಂದು ಅನನ್ಯಾ ಸ್ಪಷ್ಟವಾಗಿ ಹೇಳಿದ್ದಾಳೆ. ಅಭಿಷೇಕ್‌ ಜತೆಗೆ ಕಳಿಸಿಕೊಡುವಂತೆ ಕೇಳಿದರೂ ಪೊಲೀಸರು, ಹಲ್ಲೆ ಮಾಡಿದವರ ಜತೆಗೇ ಯುವತಿಯನ್ನು ಕಳಿಸಿಕೊಟ್ಟಿದ್ದಾರೆ. ಒಂದು ದಿನ ಕಳೆದರೂ ಅವರ ಕಡೆಯವರು ಯಾರೂ ಬಂದಿಲ್ಲ. ಪೊಲೀಸರೂ ಸರಿಯಾಗಿ ಸ್ಪಂದಿಸುತ್ತಿಲ್ಲ. ಅಭಿಷೇಕ್‌ಗೆ ಏನಾದರೂ ಆದರೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅನನ್ಯಾ ಹೇಳುತ್ತಿದ್ದಳು. ಈಗ ಪೊಲೀಸರ ವರ್ತನೆಯಿಂದ ಬೇಸತ್ತು ಆಕೆ ಅಪಾಯ ಮಾಡಿಕೊಂಡರೆ ಪೊಲೀಸರೇ ಹೊಣೆ ಹೊರಬೇಕಾಗುತ್ತದೆ ಎಂದು ಠಾಣೆ ಎದುರು ಆರೋಪ ಮಾಡಿದ್ದಾರೆ. ತನಗೆ ತನ್ನ ಪತ್ನಿಯನ್ನು ಮರಳಿಸಿ ನ್ಯಾಯ ಕೊಡಿಸಿ ಎಂದು ಯುವಕ ಅಭಿಷೇಕ್‌ ಅಂಗಲಾಚಿದ್ದಾನೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಲಬುರಗಿ

Physical Abuse : ಸಂಜೆಯಾದರೆ ರೂಮಿಗೆ ಬಾ ಅಂತಾರೆ! ಕೇಂದ್ರೀಯ ವಿವಿಯ ವಿದ್ಯಾರ್ಥಿನಿಗೆ ಪಿಎಚ್‌ಡಿ ಗೈಡ್ ಮಾನಸಿಕ ಕಿರುಕುಳ

Central University Of Karnataka : ಸಂಜೆಯಾಗುತ್ತಿದ್ದಂತೆ ಸಂಶೋಧನೆಗಾಗಿ ‌ತಮ್ಮ ಕೊಠಡಿಗೆ ಬರುವಂತೆ ಸಹಾಯಕ ಪ್ರಾಧ್ಯಾಪಕನೊಬ್ಬ ವಿದ್ಯಾರ್ಥಿನಿಗೆ ಮಾನಸಿಕ ಹಿಂಸೆ ನೀಡುತ್ತಿರುವ ಆರೋಪವೊಂದು (Physical Abuse) ಕೇಳಿಬಂದಿದೆ. ಹೀಗಾಗಿ ಸಂತ್ರಸ್ತೆ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಳೆ.

VISTARANEWS.COM


on

By

Physical Abuse
ಸಾಂದರ್ಭಿಕ ಚಿತ್ರ
Koo

ಕಲಬುರಗಿ : ವಿದ್ಯಾಕಾಶಿಯಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಕೇಂದ್ರೀಯ ವಿವಿಯಲ್ಲಿ ವಿದ್ಯಾರ್ಥಿನಿಗೆ ಸಹಾಯಕ ಪ್ರಾಧ್ಯಾಪಕನಿಂದ ಮಾನಸಿಕ ಕಿರುಕುಳ (Physical Abuse) ನೀಡಲಾಗುತ್ತಿದೆ ಎನ್ನಲಾಗಿದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿವಿಯಲ್ಲಿ (Central University Of Karnataka) ಘಟನೆ ನಡೆದಿದೆ.

ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾದ್ಯಾಪಕ ಪ್ರೊ. ವಿಜಯಕುಮಾರ್ ಎಂಬುವವರಿಂದ ವಿದ್ಯಾರ್ಥಿನಿಯರಿಗೆ ಮಾನಸಿಕ‌ ಕಿರುಕುಳ ನೀಡಲಾಗುತ್ತಿದೆ ಅಂತೆ. ಪಿ.ಎಚ್.ಡಿ ಗೈಡ್ ಆಗಿರುವ ಪ್ರೊ. ವಿಜಯಕುಮಾರ್‌, ಸಂಜೆ ಆಗುತ್ತಿದ್ದಂತೆ ವಿದ್ಯಾರ್ಥಿನಿಯರನ್ನು ಸಂಶೋಧನೆಗಾಗಿ ಕರೆಯುತ್ತಾರೆ.

ಸಂಜೆ ಹೊತ್ತಿಗೆ ಸಂಶೋಧನೆಗಾಗಿ ‌ತಮ್ಮ ಕೊಠಡಿಗೆ ಕರೆಯುತ್ತಿದ್ದರು ಎಂದು ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಆರೋಪಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಈತನ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಜತೆಗೆ ರಾಷ್ಟ್ರಪತಿಗಳಿಗೂ ಪತ್ರ ಬರೆದಿದ್ದು ಕ್ರಮವಹಿಸುವಂತೆ ಒತ್ತಾಯಿಸಿದ್ದಾರೆ.

ಭಾನುವಾರ ಮತ್ತು ರಜಾದಿನದಲ್ಲೂ ಕೊಠಡಿಗೆ ಬರುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಹೋಗದೆ ಇದ್ದರೆ ಶಿಷ್ಯವೇತನ ಅರ್ಜಿಗೆ ಸಹಿ ಹಾಕುತ್ತಿರಲಿಲ್ಲ ಎಂದು ಪತ್ರದಲ್ಲಿ ವಿದ್ಯಾರ್ಥಿನಿ ಉಲ್ಲೇಖಿಸಿದ್ದಾಳೆ. ಇನ್ನೂ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡುತ್ತಿದ್ದರು ಎಂದು ಮಹಿಳಾ‌ ಆಯೋಗಕ್ಕೆ ದೂರು ನೀಡಿದ್ದಾರೆ. ಜತೆಗೆ ಗರ್ಭಿಣಿ ಎಂಬುದು ತಿಳಿದರೂ ವಿನಾಕಾರಣ ಮಾರ್ಗದರ್ಶಕರಿಂದ ತೊಂದರೆ ಆಗುತ್ತಿದೆ. ಮಾರ್ಗದರ್ಶಕರನ್ನು ಬದಲಾವಣೆ ಮಾಡಿ, ಸಂಶೋಧನಾ ಅಧ್ಯಯನಕ್ಕೆ ಸಹಾಯ ಮಾಡುವಂತೆ ಮಹಿಳಾ ಆಯೋಗಕ್ಕೆ ವಿನಂತಿಸಿದ್ದಾರೆ.

ವಿಶ್ವವಿದ್ಯಾಲಯಕ್ಕೆ ಬಂದಾಗಿನಿಂದಲೂ ಉದ್ದೇಶಪೂರ್ವಕವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ನನ್ನ ವೈಯಕ್ತಿಕ ವಿಷಯ ಮಾತಾಡಿ ನಿಂದಿಸುವುದು, ಹಣದ ಆಮಿಷ ತೋರಿಸುವುದು, ವಿವಿಗೆ ರಜಾದಿನಗಳಲ್ಲಿ ಮತ್ತು ಭಾನುವಾರವೂ ವಿಭಾಗಕ್ಕೆ ಬರಬೇಕೆಂದು ಹೇಳುವುದು. ಅವಾಚ್ಯ ಶಬ್ಧಗಳಿಂದ ಬೈಯುತ್ತಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.

ಇದನ್ನೂ ಓದಿ: Deep fake Scam : ಸೆಲೆಬ್ರಿಟಿಗಳ ಬಳಿಕ ಈಗ ಬೆಂಗಳೂರು ಶಾಲಾ ವಿದ್ಯಾರ್ಥಿನಿಯರಿಗೆ ಡೀಪ್‌ಫೇಕ್‌ ಕಾಟ; ನಗ್ನ ಫೋಟೋ ವೈರಲ್

ನೀಲಿಚಿತ್ರಗಳ ತಾರೆಗೆ ಹಣ ನೀಡಿದ ಪ್ರಕರಣ; ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್‌ ತಪ್ಪಿತಸ್ಥ ಎಂದ ಕೋರ್ಟ್‌

ವಾಷಿಂಗ್ಟನ್‌: ಮಹತ್ವದ ಬೆಳವಣಿಗೆಯೊಂದರಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ. ನ್ಯಾಯಾರ್ಕ್‌ನ ನ್ಯಾಯಾಲಯ ಡೊನಾಲ್ಡ್ ಟ್ರಂಪ್ ಅವರು ʼಹಷ್‌ ಮನಿʼ (Hush Money) ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದೆ. ಇದರೊಂದಿಗೆ ನೀಲಿಚಿತ್ರಗಳ ತಾರೆ ಸ್ಟಾರ್ಮಿ ಡೇನಿಯಲ್ಸ್‌ (Stormy Daniels) ಜತೆ ಲೈಂಗಿಕ ಸಂಪರ್ಕ ಬೆಳೆಸಿ, ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ 77 ವರ್ಷದ ಟ್ರಂಪ್‌ 34 ಆರೋಪಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಮತ್ತೊಮ್ಮೆ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಟ್ರಂಪ್‌ಗೆ ಇದು ಬಹು ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಲಾಗುತ್ತಿದೆ. ನವೆಂಬರ್‌ನಲ್ಲಿ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್‌, ತೀರ್ಪನ್ನು ʼಅವಮಾನʼ ಮತ್ತು ʼಮೋಸ” ಎಂದು ಕರೆದಿದ್ದಾರೆ. ನವೆಂಬರ್ 5ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಮತದಾರರಿಂದ ʼನಿಜವಾದ ತೀರ್ಪುʼ ಹೊರ ಬರಲಿದೆ ಎಂದು ಹೇಳಿದ್ದಾರೆ. ಅದಾಗ್ಯೂ ಈ ಪ್ರಕರಣದಲ್ಲಿ ಟ್ರಂಪ್‌ ಜೈಲು ಸೇರುವ ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ. ವ್ಯವಹಾರ ದಾಖಲೆಗಳನ್ನು ತಿರುಚಿದ್ದಕ್ಕಾಗಿ ಟ್ರಂಪ್‌ ಅವರಿಗೆ ಜುಲೈ 11ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗುವುದು ಎಂದು ವಿಚಾರಣೆಯ ಅಧ್ಯಕ್ಷತೆ ವಹಿಸಿದ್ದ ನ್ಯಾಯಾಧೀಶರು ತಿಳಿಸಿದ್ದಾರೆ. 12 ಸದಸ್ಯರ ತೀರ್ಪುಗಾರರು ಎರಡು ದಿನಗಳಲ್ಲಿ 11 ಗಂಟೆಗಳಿಗೂ ಹೆಚ್ಚು ಕಾಲ ಚರ್ಚಿಸಿ ಗುರುವಾರ ಟ್ರಂಪ್‌ ದೋಷಿ ಎಂದು ಘೋಷಿಸಿದ್ದರು.

ʼʼನಾನು ಮುಗ್ಧ ವ್ಯಕ್ತಿ, ಮತ್ತು ಯಾವುದೇ ತಪ್ಪು ಮಾಡಿಲ್ಲ. ನಾನು ನಮ್ಮ ದೇಶಕ್ಕಾಗಿ ಮತ್ತು ನಮ್ಮ ಸಂವಿಧಾನಕ್ಕಾಗಿ ಹೋರಾಡುತ್ತಿದ್ದೇನೆ. ಯಾವುದು ಸತ್ಯ, ಯಾವುದು ಸುಳ್ಳು ಎನ್ನುವುದು ಜನರಿಗೆ ಗೊತ್ತಿದೆ. ಹೀಗಾಗಿ ಅವರು ನನ್ನ ಕೈ ಬಿಡುವುದಿಲ್ಲʼʼ ಎಂದು ಟ್ರಂಪ್‌ ಹೇಳಿದ್ದಾರೆ.

ಏನಿದು ಪ್ರಕರಣ?

ಟ್ರಂಪ್‌ ಅವರು ನಟಿ ಸ್ಟ್ರಾಮಿ ಡೇನಿಯಲ್ಸ್‌ಗೆ ಹಣ ಪಾವತಿಸಿದ ಆರೋಪ ಎದುರಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಹಷ ಮನಿ ಪ್ರಕರಣ ದಾಖಲಾಗಿದೆ. ಗೋಪ್ಯತೆ ರಕ್ಷಿಸಲು ನೀಡುವ ಹಣಕ್ಕೆ ಹಷ್‌ ಮನಿ ಎಂದು ಕರೆಯಲಾಗುತ್ತದೆ. ಸ್ಟಾರ್ಮಿ ಡೇನಿಯಲ್ಸ್‌ ಜತೆಗೆ ಟ್ರಂಪ್‌ 2006ರಲ್ಲಿ ಲೈಂಗಿಕ ಸಂಬಂಧ ಹೊಂದಿದ್ದರು. 2011ರಲ್ಲಿ ಸ್ಟಾರ್ಮಿ ಈ ವಿಷಯವನ್ನು ಬಹಿರಂಗಪಡಿಸಿದ್ದರು.

2016ರಲ್ಲಿ ಟ್ರಂಪ್‌ ಚುನಾವಣಾ ಕಣಕ್ಕೆ ಇಳಿದ ವೇಳೆ ಲೈಂಗಿಕ ಸಂಪರ್ಕದ ವಿಷಯ ಬಹಿರಂಗ ಮಾಡದಂತೆ ತಮ್ಮ ವಕೀಲರ ಮೂಲಕ ಸ್ಟಾರ್ಮಿಗೆ 1 ಕೋಟಿ ರೂ. ಹಣ ನೀಡಿದ್ದರು. ಬಳಿಕ ಟ್ರಂಪ್‌ ಹಣ ನೀಡಿದ ವಿಷಯ ಬೆಳಕಿಗೆ ಬಂದು ಪ್ರಕರಣ ದಾಖಲಾಗಿತ್ತು. ಮೊದಲು ಹಣ ನೀಡಿದ ಆರೋಪವನ್ನು ನಿರಾಕರಿಸಿದ್ದ ಟ್ರಂಪ್‌ ಬಳಿಕ ಒಪ್ಪಿಕೊಂಡಿದ್ದರು. ಇದನ್ನು ಖಾಸಗಿ ವಹಿವಾಟು ಎಂದು ಕರೆದಿದ್ದರು. ಸದ್ಯ ಅವರ ಮುಂದಿನ ನಡೆ ಕುತೂಹಲ ಕೆರಳಿಸಿದೆ. ಚುನಾವಣಾ ಪ್ರಚಾರದ ವೇಳೆ ಎದುರಾಳಿಗಳು ಟ್ರಂಪ್‌ ವಿರುದ್ಧದ ವಿಚಾರದಲ್ಲಿ ವಾಗ್ದಾಳಿ ನಡೆಸುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

Theft Case : ದಾವಣಗೆರೆ ಹಾಗೂ ತುಮಕೂರಿನ ಪ್ರತ್ಯೇಕ ಕಡೆಗಳಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ. ದಾವಣಗೆರೆಯಲ್ಲಿ ರಾತ್ರೋ ರಾತ್ರಿ ದೇವರ ಹರಕೆ ಕುರಿಯನ್ನೇ ಕಳ್ಳರು ಕದ್ಯೊಯ್ದರೆ, ಇತ್ತ ತುಮಕೂರಿನ ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರನ್ನು ಹಿಡಿಯಲು ಹೋದರೆ ಹಲ್ಲೆ ಮಾಡಿ ಎಸ್ಕೇಪ್‌ ಆಗಿದ್ದಾರೆ.

VISTARANEWS.COM


on

By

theft Case
Koo

ದಾವಣಗೆರೆ/ತುಮಕೂರು: ದೇವರ ಹರಕೆಗಾಗಿ ತಂದಿದ್ದ ಕುರಿಯನ್ನೇ ಕಳ್ಳರು (Theft Case) ಹೊತ್ತೊಯ್ದಿದ್ದಾರೆ. ದಾವಣಗೆರೆ (Davanagere news) ತಾಲೂಕಿನ ಮಾಯಾಕೊಂಡದಲ್ಲಿ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ‌ ಕಿರಾತಕರು ರಾತ್ರೋ ರಾತ್ರಿ ಕುರಿಯನ್ನು ಕದ್ದಿದ್ದಾರೆ.

ಸುಮಾರು 8 ಮಂದಿ ಖದೀಮರ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾಯಾಕೊಂಡದ ನಿವಾಸಿ ಪ್ರಭು ಎಂಬುವರಿಗೆ ಸೇರಿದ ಕುರಿಯನ್ನು ಬೆಳಗಿನ‌ ಜಾವ 3ಗಂಟೆ ಸುಮಾರಿಗೆ ಬೈಕ್‌ನಲ್ಲಿ ಬಂದು ಎಗರಿಸಿದ್ದಾರೆ. ಸದ್ಯ ಪ್ರಭು ಅವರು ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಆಧಾರದ ಮೇಲೆ ಖದೀಮರನ್ನು ಹಿಡಿಲು ಮುಂದಾಗಿದ್ದಾರೆ.

ತುಮಕೂರಿನ 2 ಸೂಪರ್ ಮಾರ್ಕೆಟ್‌ಗಳಲ್ಲಿ ಕಳ್ಳತನ

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಶ್ರೀನಿವಾಸ ಹೈಪರ್ ಮಾರ್ಕೆಟ್ ಹಾಗೂ ಜಿಎಮ್‌ಆರ್ ಮೆಗಾ ಮಾರ್ಟ್‌ನಲ್ಲಿ ಕಳ್ಳತನವಾಗಿದೆ. ಕಳ್ಳರು ಜಿಎಮ್‌ಆರ್ ಮೆಗಾ ಮಾರ್ಟ್‌ನ ಬೀಗ ಮುರಿಯುವಾಗ ಮಾಲೀಕನ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಕಳ್ಳತನ ತಡೆಯಲು ಬಂದವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಅಂಗಡಿ ಮಾಲೀಕರನ್ನೇ ಹೆದರಿಸಿ ಕಳ್ಳರು ಪರಾರಿಯಾಗಿದ್ದಾರೆ.

theft Case

50 ಸಾವಿರ ರೂ. ನಗದು ಹಾಗೂ 10ಕ್ಕೂ ಹೆಚ್ಚು ಅಕ್ಕಿ ಚೀಲಗಳನ್ನು ಕದ್ದಿದ್ದು, ಜತೆಗೆ ಸಿಸಿಟಿವಿಯ ಡಿವಿಆರ್ ಕದ್ದಿದ್ದಾರೆ. ಸುಮಾರು ನಾಲ್ಕೈದು ಕಳ್ಳರ ತಂಡ ಲಗ್ಗೆ ಇಟ್ಟ ಪೂರ್ತಿ ದೃಶ್ಯವು ಮತ್ತೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Huligemma Temple : ಹುಲಿಗೆಮ್ಮ ದೇವಿ ಜಾತ್ರೆಗೆ ಹೊರಟಿದ್ದ ಪಾದಯಾತ್ರಿ ಮೇಲೆ ಹರಿದ ಲಾರಿ; ಓರ್ವ ಸಾವು, ಮತ್ತೋರ್ವ ಗಂಭೀರ

ಏರ್ ಇಂಡಿಯಾ ವಿಮಾನ 20 ಗಂಟೆ ವಿಳಂಬ; ಎಸಿ ಇಲ್ಲದೆ ಪ್ರಜ್ಞೆ ತಪ್ಪಿ ಬಿದ್ದ ಪ್ರಯಾಣಿಕರು

ನವದೆಹಲಿ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಗುರುವಾರ ಮಧ್ಯಾಹ್ನ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ (Air India Flight) 20 ಗಂಟೆಗಳ ಕಾಲ ವಿಳಂಬವಾಗಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಹವಾ ನಿಯಂತ್ರಣ ವ್ಯವಸ್ಥೆ ಇಲ್ಲದೆ ವಿಮಾನದೊಳಗೆ ಕೆಲವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಮಾನ ಇಂದು (ಶುಕ್ರವಾರ) ಬೆಳಿಗ್ಗೆ 11 ಗಂಟೆಗೆ ಹೊರಡಲಿದೆ.

ಗುರುವಾರ ಪತ್ರಕರ್ತೆ ಶ್ವೇತಾ ಪುಂಜ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಎಸಿ ಇಲ್ಲದೆ ಪ್ರಯಾಣಿಕರು ಪರದಾಡುತ್ತಿರುವ ಫೋಟೊವನ್ನು ಪೋಸ್ಟ್‌ ಮಾಡಿದ್ದಾರೆ. ʼʼಫ್ಲೈಟ್ ನಂ. ಎಐ 183 ವಿಮಾನಕ್ಕೆ ಪ್ರಯಾಣಿಕರನ್ನು ಹತ್ತಿಸಲಾಯಿತು. ಹವಾ ನಿಯಂತ್ರಣವಿಲ್ಲದೆ ಹಲವರು ಪರದಾಡಿದರು. ಈ ವೇಳೆ ಕೆಲವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ನಂತರ ಪ್ರಯಾಣಿಕರಿಗೆ ವಿಮಾನದಿಂದ ನಿರ್ಗಮಿಸಲು ತಿಳಿಸಲಾಯಿತುʼʼ ಎಂದು ಅವರು ಬರೆದುಕೊಂಡಿದ್ದಾರೆ.

ದೆಹಲಿಯಲ್ಲಿ ಉಷ್ಣಾಂಶ ದಾಖಲೆಯ ಮಟ್ಟಕ್ಕೆ ಏರಿದೆ. ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ 52.9 ಡಿಗ್ರಿ ಸೆಲ್ಶಿಯಸ್‌ ತಾಪಮಾನ ಕಂಡು ಬಂದಿತ್ತು. ʼʼಇದು ಖಾಸಗೀಕರಣ ವಿಫಲವಾಗಿದೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆ. ಎಐ 183 ವಿಮಾನವು ಎಂಟು ಗಂಟೆಗಳಿಗಿಂತ ಹೆಚ್ಚು ವಿಳಂಬವಾಗಿದೆ. ಪ್ರಯಾಣಿಕರನ್ನು ಹವಾನಿಯಂತ್ರಣ ವ್ಯವಸ್ಥೆ ಇಲ್ಲದ ವಿಮಾನವನ್ನು ಹತ್ತಿಸಿದ್ದು ಅಮಾನವೀಯ” ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಟ್ಯಾಗ್ ಮಾಡಿ ಶ್ವೇತಾ ಪುಂಜ್ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಏರ್‌ ಇಂಡಿಯಾ ಹೇಳಿದ್ದೇನು?

ಶ್ವೇತಾ ಪುಂಜ್ ಅವರ ಪೋಸ್ಟ್‌ ವೈರಲ್‌ ಆದ ಬೆನ್ನಲ್ಲೇ ಏರ್‌ ಇಂಡಿಯಾ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ʼʼಈ ಘಟನೆಗಾಗಿ ವಿಷಾಧ ವ್ಯಕ್ತಪಡಿಸುತ್ತಿದ್ದೇವೆ. ನಮ್ಮ ತಂಡದವರು ಸೂಕ್ತವಾಗಿ ಸ್ಪಂದಿಸಲಿದ್ದಾರೆ. ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಮ್ಮ ಸಿಬ್ಬಂದಿ ಕ್ರಮ ಕೈಗೊಳ್ಳಲಿದ್ದಾರೆʼʼ ಎಂದು ತಿಳಿಸಿದ್ದಾರೆ.

ಮತ್ತೊಬ್ಬ ಪ್ರಯಾಣಿಕ ಅಭಿಷೇಕ್ ಶರ್ಮಾ ತ್ವರಿತ ಕ್ರಮಕ್ಕಾಗಿ ವಿಮಾನಯಾನ ಸಂಸ್ಥೆಗೆ ಮನವಿ ಮಾಡಿದ್ದಾರೆ. ಬೋರ್ಡಿಂಗ್ ಪ್ರದೇಶದಲ್ಲಿ ಸಿಲುಕಿರುವ ಹಿರಿಯ ನಾಗರಿಕರಿಗೆ ಮನೆಗೆ ಹೋಗಲು ಅವಕಾಶ ನೀಡುವಂತೆ ಆಗ್ರಹಿಸಿದ್ದಾರೆ. ಅನೇಕ ಪ್ರಯಾಣಿಕರು ಪೋಸ್ಟ್ ಮಾಡಿದ ದೃಶ್ಯಗಳಲ್ಲಿ ಮಕ್ಕಳು ಸೇರಿದಂತೆ ಹಿರಿಯ ನಾಗರಿಕರು ನೆಲದ ಮೇಲೆ ಕುಳಿತಿರುವುದನ್ನು ಕಂಡು ಬಂದಿದೆ.

ಇದನ್ನೂ ಓದಿ: Air India: ನಿಯಮ ಉಲ್ಲಂಘಿಸಿದ ಏರ್‌ ಇಂಡಿಯಾಕ್ಕೆ ಬಿತ್ತು ಭಾರೀ ದಂಡ

ಕೆಲವು ತಿಂಗಳ ಹಿಂದೆ ಇಂತಹದ್ದೇ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿತ್ತು. ಬೆಂಗಳೂರಿಗೆ ಡಿ. 23ರ ರಾತ್ರಿ 8.15ಕ್ಕೆ ಮಂಗಳೂರಿನಿಂದ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನ ಕೊನೇ ಕ್ಷಣದಲ್ಲಿ ರದ್ದಾಗಿತ್ತು. ಇದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಕೆಂಜಾರಿನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾತ್ರಿ 8.15ಕ್ಕೆ ಏರ್ ಇಂಡಿಯಾ ವಿಮಾನ ಬೆಂಗಳೂರಿಗೆ ಹೊರಡಬೇಕಿತ್ತು. ಆದರೆ ವಿಮಾನ ಬಾರದ ಕಾರಣದಿಂದ ಆಕ್ರೋಶಗೊಂಡಿದ್ದರು. ಅಮೆರಿಕಕ್ಕೆ ಪ್ರಯಾಣ ಬೆಳೆಸಬೇಕಿದ್ದವರು, ಪರೀಕ್ಷೆ ಬರೆಯಲು ಹೊರಟವರು ಹಾಗೂ ಕ್ರಿಸ್ಮಸ್ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು ವಿಮಾನ ಬಾರದ ಕಾರಣ ಮಂಗಳೂರು ವಿಮಾನ ನಿಲ್ದಾಣದಲ್ಲೇ ಬಾಕಿ ಆಗಿದ್ದರು. ರಾತ್ರಿ 8.15ಕ್ಕೆ ಹೊರಡಬೇಕಿದ್ದ ವಿಮಾನಕ್ಕಾಗಿ ಬಂದಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆಗಾಗಿ ವಿಮಾನ ನಿಲ್ದಾಣದಲ್ಲಿಯೇ ನಡುರಾತ್ರಿಯವರೆಗೆ ಕಾದು ಕುಳಿತು ಬಳಿಕ ಪ್ರಯಾಣಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Bhavani Revanna: ʼತನಿಖೆ ಬೇಕಿದ್ರೆ ಮನೆಗೇ ಬನ್ನಿʼ ಎಂದ ಭವಾನಿ ರೇವಣ್ಣ; ʼಆಯ್ತು ಅಲ್ಲಿಗೇ ಬರ್ತೀವಿʼ ಎಂದ ಎಸ್‌ಐಟಿ!

Bhavani Revanna: ಇಂದು ಭವಾನಿ ರೇವಣ್ಣ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತೀರ್ಪಿಗೆ ಬರುತ್ತಿದೆ. ಅದರ ಬೆನ್ನಲ್ಲೇ ಎಸ್‌ಐಟಿ ಮತ್ತೊಂದು ನೋಟೀಸ್ ನೀಡಿದೆ. ಕೆ.ಆರ್ ನಗರ ಠಾಣೆಯಲ್ಲಿ ದಾಖಲಾಗಿದ್ದ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ನೊಟೀಸ್ ನೀಡಿದೆ.

VISTARANEWS.COM


on

bhavani revanna sit notice
Koo

ಬೆಂಗಳೂರು: ಕೆ.ಆರ್‌ ನಗರದಲ್ಲಿ ಲೈಂಗಿಕ ದೌರ್ಜನ್ಯ (Physical abuse) ಸಂತ್ರಸ್ತೆಯನ್ನು ಅಪಹರಿಸಿದ (kidnap) ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ (Bhavani Revanna) ಅವರಿಗೆ ವಿಶೇಷ ತನಿಖಾ ಸಂಸ್ಥೆ (SIT) ಮತ್ತೊಂದು ನೋಟೀಸ್‌ (Notice) ಜಾರಿ ಮಾಡಿದೆ. ಈ ಬಾರಿ, ನೋಟೀಸನ್ನು ಅವರ ಮನೆಯ ಬಾಗಿಲಿಗೆ ಅಂಟಿಸಲಾಗಿದ್ದು, ತನಿಖೆಗೆ ಮನೆಗೇ ಬರುವುದಾಗಿ ತಿಳಿಸಲಾಗಿದೆ.

ಒಂದೆಡೆ ಮಗ ಪ್ರಜ್ವಲ್‌ ರೇವಣ್ಣ (prajwal revanna case) ನಿನ್ನೆ ರಾತ್ರಿ ಬಂಧನವಾಗಿದ್ದು, ಇಂದು ಮೆಡಿಕಲ್‌ ಟೆಸ್ಟ್‌ ನಡೆಸಲಾಗುತ್ತಿದೆ. ಇಂದೇ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸ್‌ ಕಸ್ಟಡಿಗೆ ಪಡೆಯಲು ಸಿದ್ಧತೆ ನಡೆಸಲಾಗಿದೆ. ಇಂದು ಭವಾನಿ ರೇವಣ್ಣ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತೀರ್ಪಿಗೆ ಬರುತ್ತಿದೆ. ಅದರ ಬೆನ್ನಲ್ಲೇ ಎಸ್‌ಐಟಿ ಮತ್ತೊಂದು ನೋಟೀಸ್ ನೀಡಿದೆ. ಕೆ.ಆರ್ ನಗರ ಠಾಣೆಯಲ್ಲಿ ದಾಖಲಾಗಿದ್ದ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ನೊಟೀಸ್ ನೀಡಿದೆ. “ಪ್ರಕರಣಕ್ಕೆ ಸಂಬಂಧಿಸಿ 01/06/2024ರಂದು ತನಿಖೆಗೆ ತನಿಖಾಧಿಕಾರಿಗಳು ಬರಲಿದ್ದು, ತಾವು ನೀಡಿದ ಈ ವಿಳಾಸದಲ್ಲಿ ತಮ್ಮನ್ನು ತನಿಖೆಗೆ ಒಳಪಡಿಸಲಾಗುವುದು. ಅಗತ್ಯ ಸಹಕಾರ ನೀಡಬೇಕು” ಎಂದು ನೊಟೀಸ್ ನೀಡಿದ್ದಾರೆ.

“ಈ ಹಿಂದೆ ನೀಡಿದ್ದ ನೋಟೀಸ್‌ಗೆ ನೀವು ಉತ್ತರಿಸಿಲ್ಲ. 15-05-24ರಂದು ನೀಡಿದ ನೋಟೀಸ್‌ಗೆ, ಹೊಳೆನರಸೀಪುರದ ಚನ್ನಾಂಭಿಕ ನಿವಾಸದಲ್ಲಿ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದೀರಿ. ಈ ಪ್ರಕರಣದಲ್ಲಿ ನಿಮ್ಮನ್ನು ವಿಚಾರಣೆಗೆ ಒಳಪಡಿಸುವ ಅವಶ್ಯಕತೆ ಇದೆ. ಆದ್ದರಿಂದ ನೀವು ಹೇಳಿರುವಂತೆ ನಾವು ನಿಮ್ಮನ್ನು 01-06-24ರಂದು ವಿಚಾರಣೆಗೆ ಒಳಪಡಿಸಲಿದ್ದು, ಖುದ್ದು ಹಾಜರಿರಬೇಕು. ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಆಗಮಿಸುತ್ತೇವೆ. ಆ ಸಂದರ್ಭ ಖುದ್ದು ಮನೆಯಲ್ಲಿ ಹಾಜರಿರಬೇಕು” ಎಂದು ಎಸ್‌ಐಟಿ ಮುಖ್ಯಸ್ಥ ಹೇಮಂತ್‌ಕುಮಾರ್‌ ಆದೇಶಿಸಿದ್ದಾರೆ.

ಭವಾನಿ ರೇವಣ್ಣ ಅವರಿಗೆ ಇದುವರೆಗೆ ಎರಡು ನೋಟೀಸ್‌ಗಳನ್ನು ನೀಡಲಾಗಿದೆ. ನಂತರ ಎಸ್ಐಟಿಗೆ ಪತ್ರ ಬರೆದಿದ್ದ ಭವಾನಿ, ಅವಶ್ಯವಿದ್ದರೆ ತನಿಖೆಗೆ ತಮ್ಮ ಮನೆಯಲ್ಲಿ ಲಭ್ಯವಿರುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ತಾವು ವಿಚಾರಣೆಗೆ ಬರುತ್ತಿರುವುದಾಗಿ ಎಸ್ಐಟಿಯಿಂದ ನೊಟೀಸ್‌ ಹೋಗಿದೆ. ಹಾಸನ ಹೊಳೆನರಸೀಪುರದ ಹೆಚ್.ಡಿ ರೇವಣ್ಣ ಹಾಗೂ ಭವಾನಿ ನಿವಾಸದ ಬಾಗಿಲಿಗೆ SIT ಟೀಂ ನೋಟೀಸ್ ಅಂಟಿಸಿದೆ. ಹೀಗಾಗಿ ನಾಳೆ ಹೊಳೆನರಸೀಪುರದಲ್ಲಿ ಭವಾನಿ ರೇವಣ್ಣ ಅವರ ಮೊದಲ ಸುತ್ತಿನ ವಿಚಾರಣೆ ನಡೆಯಲಿದೆ.

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ (Prajwal Revanna Case) ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ (Bhavani Revanna) ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮೇ 31ರಂದೇ ಆದೇಶವನ್ನು ಹೊರಡಿಸುವುದಾಗಿ ತಿಳಿಸಿದೆ. ಅತ್ತ, ತಮ್ಮ ವಿರುದ್ಧ ದಾಖಲಾದ ಎರಡೂ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಎಚ್‌.ಡಿ.ರೇವಣ್ಣ ಕೂಡ ಅರ್ಜಿ ಸಲ್ಲಿಸಿದ್ದಾರೆ.

Prajwal Revanna Case

ಇದಕ್ಕೂ ಮೊದಲು ಭವಾನಿ ರೇವಣ್ಣ ಪರ ವಾದ ಮಂಡಿಸಿದ ವಕೀಲ ಸಂದೇಶ ಚೌಟ, “ಎಫ್ಐಆರ್ ದಾಖಲಿಸಿ 27 ದಿನಗಳಾದರೂ ಭವಾನಿ ರೇವಣ್ಣ ಅವರಿಗೆ ಎಸ್ಐಟಿ ನೋಟಿಸ್ ನೀಡಿಲ್ಲ. ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ನಂತರ ಬೆಟ್ಟದಷ್ಟು ದಾಖಲೆ ಇವೆ ಎನ್ನುತ್ತಿದ್ದಾರೆ. ಹಾಗಿದ್ದರೆ ಇದುವರೆಗೂ ಏಕೆ ವಿಚಾರಣೆಗೆ ಕರೆಯಲಿಲ್ಲ? ತನಿಖೆಗೆ ಸಹಕರಿಸುವುದಾಗಿ ಈ ಹಿಂದೆಯೇ ಎಸ್ಐಟಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಭವಾನಿಗೆ ನಿರೀಕ್ಷಣಾ ಜಾಮೀನು ನೀಡಬೇಕು” ಎಂದರು.

ಇದನ್ನೂ ಓದಿ: Prajwal Revanna Case: ಕೆ ಆರ್‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌; ಭವಾನಿ ರೇವಣ್ಣ ಕಾರು ಚಾಲಕನಿಗೆ‌ SIT ಸಮನ್ಸ್

Continue Reading

ದೇಶ

Gold Smuggling: ಗುದನಾಳದಲ್ಲಿ 1ಕೆಜಿ ಚಿನ್ನ; ಕೇರಳದಲ್ಲಿ ಗಗನಸಖಿ ಅರೆಸ್ಟ್‌

Gold Smuggling:ಬಂಧಿತ ಗಗನಸಖಿಯನ್ನು ಕೋಲ್ಕತ್ತಾ ಮೂಲದ ಸುರಭಿ ಖತುನ್‌ ಎಂದು ಗುರುತಿಸಲಾಗಿದ್ದು, ಆಕೆ ತನ್ನ ಗುದನಾಳದಲ್ಲಿ ಬರೋಬ್ಬರಿ 960 ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ತಂದಿದ್ದಾಳೆ. ಆಕೆ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಕ್ಯಾಬಿನ್‌ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾಳೆ. ಮಸ್ಕತ್‌ನಿಂದ ಕಣ್ಣೂರಿಗೆ ಮೇ 28ರಂದು ಬಂದಿದ್ದ ವಿಮಾನದಲ್ಲಿ ಆಕೆ ಬಂದಿದ್ದಳು.

VISTARANEWS.COM


on

Gold Smuggling
Koo

ಕೇರಳ: ಅಕ್ರಮ ಚಿನ್ನ ಸಾಗಾಟ(Gold Smuggling) ಮಾಡುತ್ತಿದ್ದ ಗಗನಸಖಿಯನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಅಚ್ಚರಿಯ ವಿಚಾರವೆಂದರೆ 960 ಗ್ರಾಂ ಚಿನ್ನವನ್ನು ಆಕೆ ತನ್ನ ಗುದನಾಳದಲ್ಲಿಟ್ಟುಕೊಂಡು ಬಂದಿದ್ದಳು ಎನ್ನಲಾಗಿದೆ. ಇದೀಗ ಆಕೆಯನ್ನು ಅರೆಸ್ಟ್‌ ಮಾಡಿರುವ ಕಂದಾಯ ಗುಪ್ತಚರ ನಿರ್ದೇಶನಾಲಯ(DRI) ಆಕೆಯನ್ನು 14 ದಿನಗಳ ಕಾಲ ತನ್ನ ವಶಕ್ಕೆ ಪಡೆದಿದೆ.

ಬಂಧಿತ ಗಗನಸಖಿಯನ್ನು ಕೋಲ್ಕತ್ತಾ ಮೂಲದ ಸುರಭಿ ಖತುನ್‌ ಎಂದು ಗುರುತಿಸಲಾಗಿದ್ದು, ಆಕೆ ತನ್ನ ಗುದನಾಳದಲ್ಲಿ ಬರೋಬ್ಬರಿ 960 ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ತಂದಿದ್ದಾಳೆ. ಆಕೆ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಕ್ಯಾಬಿನ್‌ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ. ಮಸ್ಕತ್‌ನಿಂದ ಕಣ್ಣೂರಿಗೆ ಮೇ 28ರಂದು ಬಂದಿದ್ದ ವಿಮಾನದಲ್ಲಿ ಆಕೆ ಬಂದಿದ್ದಳು. DRI ಅಧಿಕಾರಿಗಳು ಚೆಕ್ಕಿಂಗ್‌ ಮಾಡುವಾಗ ಆಕೆಯ ಬಳಿಕ ಚಿನ್ನ ಇರುವ ವಿಚಾರ ಬಯಲಾಗಿದೆ. ತಕ್ಷಣ ಆಕೆಯನ್ನು ಅರಸ್ಟ್‌ ಮಾಡಲಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಾದ ಬಳಿಕ ಆಕೆಯನ್ನು ಮ್ಯಾಜಿಸ್ಟ್ರೇಟ್‌ ಎದುರು ಹಾಜರುಪಡಿಸಲಾಗಿದ್ದು, ಆಕೆಯನ್ನು 14 ದಿನಗಳ ಕಾಲ DRI ಕಸ್ಟಡಿಗೆ ಒಪ್ಪಿಸಲಾಗಿದೆ.

ಇನ್ನು ಗಗನಸಖಿಯೊಬ್ಬಳು ತನ್ನ ಗುದನಾಳದಲ್ಲಿ ಚಿನ್ನ ಅಡಗಿಸಿಟ್ಟುಕೊಂಡು ಅಕ್ರಮ ಸಾಗಾಟ ಮಾಡಿರುವುದು ಇದೇ ಮೊದಲ ಪ್ರಕರಣ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನು ನಿನ್ನೆಯಷ್ಟೇ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಕಾಂಗ್ರೆಸ್‌ ಮುಖಂಡ ಶಶಿ ತರೂರ್‌ ಅವರ ಆಪ್ತ ಸಹಾಯಕನನ್ನು ಅರೆಸ್ಟ್‌ ಮಾಡಲಾಗಿತ್ತು. ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣ(IGI Airport)ದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಶಶಿ ತರೂರ್‌ ಅವರ ಪಿಎ ಶಿವ ಪ್ರಸಾದ್‌ ಅವರನ್ನು ವಶಕ್ಕೆ ಪಡೆಸಿದ್ದಾರೆ. ಶಿವ ಕುಮಾರ್‌ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಕಸ್ಟಮ್ಸ್‌ ಅಧಿಕಾರಿಗಳು ಟರ್ಮಿನಲ್‌ 3ರಲ್ಲಿ ಅವರನ್ನು ಪರಿಶೀಲನೆ ನಡೆಸಿ ಬಂಧಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಕಸ್ಟಮ್ಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದು, ದುಬೈನಿಂದ ತಮ್ಮ ಸಹಾಯಕನ ಮೂಲಕ ಅಕ್ರಮವಾಗಿ ಚಿನ್ನವನ್ನು ಶಿವಕುಮಾರ್‌ ತರಿಸಿದ್ದರು. ಇದನ್ನು ಪಡೆಯುವ ವೇಳೆ ಕಸ್ಟಮ್ಸ್‌ ಅಧಿಕಾರಿಗಳು ಅವರನ್ನು ಅರೆಸ್ಟ್‌ ಮಾಡಿದ್ದಾರೆ. ಇನ್ನು 30ಲಕ್ಷ ರೂ.ಗೂ ಅಧಿಕ ಮೊತ್ತದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಈ ಬಗ್ಗೆ ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Huligemma Temple : ಹುಲಿಗೆಮ್ಮ ದೇವಿ ಜಾತ್ರೆಗೆ ಹೊರಟಿದ್ದ ಪಾದಯಾತ್ರಿ ಮೇಲೆ ಹರಿದ ಲಾರಿ; ಓರ್ವ ಸಾವು, ಮತ್ತೋರ್ವ ಗಂಭೀರ

ಕುಮಾರ್‌ ದುಬೈನಿಂದ ದೆಹಲಿ ಏರ್‌ಪೋರ್ಟ್‌ಗೆ ಬಂದಿಳಿಯುತ್ತಿದ್ದಂತೆ ಕಸ್ಟಮ್ಸ್‌ ಆದಿಕಾರಿಗಳು ಅವರನ್ನು ವಿಚಾರಣೆಗೊಳಪಡಿಸಿದ್ದು, ಚಿನ್ನ ಎಲ್ಲಿಂದ ಬಂತು ಹೇಗೆ ಬಂದು ಎಂಬ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಆಗ ಕುಮಾರ್‌ ಅಧಿಕಾರಿಗಳ ಪ್ರಶ್ನೆಗೆ ಸಮಾಧಾನಕರ ಉತ್ತರ ನೀಡಿಲ್ಲ. ಹೀಗಾಗಿ ಅವರನ್ನು ಅರೆಸ್ಟ್‌ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Continue Reading
Advertisement
Bhavani Reavanna
ಕರ್ನಾಟಕ26 mins ago

Bhavani Reavanna : ಭವಾನಿ ರೇವಣ್ಣಗೆ ಬಂಧನ ಭೀತಿ; ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ

Gold Rate Today
ಚಿನ್ನದ ದರ27 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಆಭರಣ ಖರೀದಿಗೆ ಮುನ್ನ ಬೆಲೆ ಗಮನಿಸಿ

Physical Abuse
ಕಲಬುರಗಿ28 mins ago

Physical Abuse : ಸಂಜೆಯಾದರೆ ರೂಮಿಗೆ ಬಾ ಅಂತಾರೆ! ಕೇಂದ್ರೀಯ ವಿವಿಯ ವಿದ್ಯಾರ್ಥಿನಿಗೆ ಪಿಎಚ್‌ಡಿ ಗೈಡ್ ಮಾನಸಿಕ ಕಿರುಕುಳ

Spelling Bee
ವಿದೇಶ33 mins ago

Spelling Bee: ಅಮೆರಿಕದ ಪ್ರತಿಷ್ಠಿತ ಸ್ಪೆಲ್ಲಿಂಗ್‌ ಬೀ ಸ್ಪರ್ಧೆ; ಭಾರತ ಮೂಲಕ ಬೃಹತ್‌ಗೆ ಚಾಂಪಿಯನ್‌ ಪಟ್ಟ

Nivetha Pethuraj heated argument video with cops
ಟಾಲಿವುಡ್41 mins ago

Nivetha Pethuraj: ಪೊಲೀಸ್ ಅಧಿಕಾರಿಯೊಂದಿಗೆ ಬಹುಭಾಷಾ ನಟಿ ಕಿರಿಕ್‌; ವಿಡಿಯೊ ವೈರಲ್‌!

T20 World Cup 2024
ಕ್ರಿಕೆಟ್46 mins ago

T20 World Cup 2024: ಟಿ20 ವಿಶ್ವಕಪ್​ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?

Rameshwaram Cafe
ವೈರಲ್ ನ್ಯೂಸ್1 hour ago

Rameshwaram Cafe: ಗ್ರಾಹಕರ ಕ್ಷಮೆ ಕೋರಿದರೂ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಾಮೇಶ್ವರಂ ಕೆಫೆ ಮಾಲೀಕ; ಕಾರಣ ಇದು

Kannada Serials TRP Colors Kannada serials not in top 5 Shravani Subramanya is back on track
ಕಿರುತೆರೆ1 hour ago

Kannada Serials TRP: ಟಾಪ್‌ 5ನಲ್ಲಿಲ್ಲ ಕಲರ್ಸ್‌ ಕನ್ನಡ ಧಾರಾವಾಹಿಗಳು: ಟ್ರ್ಯಾಕ್‌ಗೆ ಮರಳಿದ ʻಶ್ರಾವಣಿ ಸುಬ್ರಮಣ್ಯʼ!

theft Case
ಕ್ರೈಂ1 hour ago

Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

bhavani revanna sit notice
ಕ್ರೈಂ1 hour ago

Bhavani Revanna: ʼತನಿಖೆ ಬೇಕಿದ್ರೆ ಮನೆಗೇ ಬನ್ನಿʼ ಎಂದ ಭವಾನಿ ರೇವಣ್ಣ; ʼಆಯ್ತು ಅಲ್ಲಿಗೇ ಬರ್ತೀವಿʼ ಎಂದ ಎಸ್‌ಐಟಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ24 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌