Site icon Vistara News

Ram Charan: ಮೈಸೂರಿನ ಚಾಮುಂಡೇಶ್ವರಿ ದರ್ಶನ ಪಡೆದ ರಾಮ್​ ಚರಣ್​!

am charan visits Chamundeshwari Temple Mysuru

ಮೈಸೂರು: ಟಾಲಿವುಡ್‌ ನಟ ರಾಮ್‌ಚರಣ್‌ ಅವರು ಡಿಸೆಂಬರ್​ 3ರಂದು ಮೈಸೂರಿನ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ‘ಗೇಮ್​ ಚೇಂಜರ್​’ (Ram Charan) ಸಿನಿಮಾದ ಶೂಟಿಂಗ್​ ಸಲುವಾಗಿ ರಾಮ್​ ಚರಣ್​ ಅವರು ಹಲವು ದಿನಗಳಿಂದ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದರು. ‘ಗೇಮ್​ ಚೇಂಜರ್​’ ಸಿನಿಮಾದ ಶೂಟಿಂಗ್​ ಮೈಸೂರಿನಲ್ಲಿ ನಡೆಯುತ್ತಿದೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಸಲುವಾಗಿ ಅವರು ಸಣ್ಣ ಬ್ರೇಕ್​ ಪಡೆದುಕೊಂಡಿದ್ದರು. ನವೆಂಬರ್​ 30ರಂದು ಮತದಾನ ಮಾಡಿದ ಬಳಿಕ ಅವರು ಮೈಸೂರಿಗೆ ವಾಪಸಾಗಿದ್ದರು.

ಇದೀಗ ರಾಮ್‌ಚರಣ್‌ ಅವರು ಚಿತ್ರತಂಡದೊಂದಿಗೆ ದೇವಾಲಯಕ್ಕೆ ಆಗಮಿಸಿ ನಾಡಿನ ಅಧಿದೇವತೆ ದರ್ಶನ ಪಡೆದಿದ್ದಾರೆ. ಮಾರ್ಚ್‌ 27ರ ಬೆಳಗ್ಗೆ RC 15 ಗೇಮ್ ಚೇಂಜರ್‌ ಎಂದು ಶಿರ್ಷಿಕೆ ಅನಾವರಣ ಮಾಡಿತ್ತಿ. ಚಿತ್ರತಂಡ ಟೈಟಲ್‌ ಟೀಸರ್‌ ಕೂಡ ಹಂಚಿಕೊಂಡಿತ್ತು. 2019 ರಲ್ಲಿ ಬಿಡುಗಡೆಯಾದ ವಿನಯ ವಿಧೇಯ ರಾಮ ಚಿತ್ರದ ನಂತರ ರಾಮ್ ಚರಣ್ ಮತ್ತು ಕಿಯಾರಾ ಆಡ್ವಾಣಿ ಈ ಸಿನಿಮಾದಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

ಜಯರಾಮ್, ಅಂಜಲಿ ಸುನೀಲ್, ಶ್ರೀಕಾಂತ್, ನವೀನ್ ಚಂದ್ರ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಎಸ್ ಥಮನ್ ಚಿತ್ರದ ಹಾಡುಗಳು ಮತ್ತು ಹಿನ್ನೆಲೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ತಿರು ಮತ್ತು ಆರ್.ರತ್ನವೇಲು ಛಾಯಾಗ್ರಹಣ, ಶಮೀರ್ ಮಹಮ್ಮದ್ ಸಂಕಲನ ಚಿತ್ರಕ್ಕಿದೆ.ಈ ಪ್ರಾಜೆಕ್ಟ್ ಅನ್ನು ಪ್ಯಾನ್-ಇಂಡಿಯಾ ಬಿಡುಗಡೆಗಾಗಿ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ಮತ್ತು ಶಿರೀಶ್ ಗಾರು ಜಂಟಿಯಾಗಿ ನಿರ್ಮಿಸಿದ್ದಾರೆ. ಗೇಮ್ ಚೇಂಜರ್ ತೆಲುಗು, ತಮಿಳು ಮತ್ತು ಹಿಂದಿ ಮೂರು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Ram Charan: ಈಜುಕೊಳದಲ್ಲಿ ರಾಮ್‌ಚರಣ್‌ ಮಗಳ ಪ್ರತಿಬಿಂಬ; ಇಟಲಿಯಲ್ಲಿದೆ ಮೆಗಾ ಕುಟುಂಬ!

ಬುಚ್ಚಿ ಬಾಬು ಸನಾ ಜತೆ ಕೈ ಜೋಡಿಸಿದ ರಾಮ್‌ಚರಣ್‌

ನಟ ರಾಮ್ ಚರಣ್ (Ram Charan) ಅವರ ಮುಂದಿನ ಚಿತ್ರ ಸೂಪರ್ ಹಿಟ್ ‘ಉಪ್ಪೆನ’ ಸಿನಿಮಾ ನೀಡಿದ್ದ ನಿರ್ದೇಶಕ (Uppena director Buchi Babu Sana) ಬುಚ್ಚಿ ಬಾಬು ಸನಾ(Buchi Babu Sana) ಅವರೊಂದಿಗೆ ಎಂಬುದು ವರದಿಯಾಗಿದೆ. ಮುಂದಿನ ವರ್ಷ ಜನವರಿಯಲ್ಲಿ ಬುಚ್ಚಿ ಬಾಬು ಸನಾ ಮತ್ತು ರಾಮ್ ಚರಣ್ ತಮ್ಮ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ. ಚಿತ್ರದ ತಾರಾಬಳಗಕ್ಕೆ ಸಂಬಂಧಿಸಿದಂತೆ ಇನ್ನಷ್ಟು ರೋಚಕ (Ram Charan and Vijay Sethupathi) ಸುದ್ದಿ ಹೊರಬೀಳುತ್ತಿದೆ. ಚಿತ್ರದಲ್ಲಿ ವಿಜಯ್ ಸೇತುಪತಿ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ವಿಜಯ್ ಸೇತುಪತಿ ಈಗಾಗಲೇ ದೇಶದ ಪ್ರಮುಖ ಸ್ಟಾರ್ ನಟರ ಎದುರು (Ramcharan upcoming project) ಖಳನಾಗಿ ಅಬ್ಬರಿಸಿದ್ದಾರೆ. ದಳಪತಿ ವಿಜಯ್‌ನಿಂದ ಶಾರುಖ್ ಖಾನ್, ಕಮಲ್ ಹಾಸನ್, ರಜನಿಕಾಂತ್ ಈ ಎಲ್ಲಾ ಸೂಪರ್‌ಸ್ಟಾರ್‌ಗಳ ಜತೆಗೆ ಕೆಲಸ ಮಾಡಿದ್ದಾರೆ.

ಟಾಲಿವುಡ್‌ನಲ್ಲಿ ಹರಿದಾಡುತ್ತಿರುವ ವರದಿಗಳ ಪ್ರಕಾರ ನಾಯಕ ಮತ್ತು ಖಳನಾಯಕರಾಗಿ ರಾಮ್ ಚರಣ್ ಮತ್ತು ವಿಜಯ್ ಸೇತುಪತಿ ಅವರನ್ನು ನೋಡುವುದು ಸಕತ್ ಅನುಭವವೆ ಆಗಿದೆ. ಈ ಹೊಸ ಸಿನಿಮಾದ ಮತ್ತೊಂದು ಮಾಹಿತಿ ಎಂದರೆ ಚಿತ್ರಕ್ಕೆ ಎ ಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡುವ ನಿರೀಕ್ಷೆ ಇದೆ. ಸಿನಿಮಾಗೆ ಘಟಾನುಘಟಿಗಳ ದಂಡು ಒಂದಾಗುತ್ತಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುತ್ತಿದೆ.

Exit mobile version