ಮೈಸೂರು: ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು (Drowned in water) ಮೃತಪಟ್ಟಿದ್ದಾಳೆ. ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ಘಟನೆ ನಡೆದಿದೆ. ಮೆಹನಾಜ್ (17) ಮೃತ ದುರ್ದೈವಿ.
ಬೆಂಗಳೂರಿನ ಬನ್ನೇರುಘಟ್ಟ ನಿವಾಸಿಯಾದ ಮೆಹನಾಜ್ ತಲಕಾಡಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ. ಈಜು ಬಾರದೆ ಇದ್ದರೂ, ನೀರಿನಲ್ಲಿ ಆಟವಾಡುಲು ನದಿಗೆ ಇಳಿದಿದ್ದಾಳೆ. ಆದರೆ ನೀರಿನ ಸೆಳತಕ್ಕೆ ಸಿಲುಕಿ ಮೃತಪಟ್ಟಿದ್ದಾಳೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಲಕಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನಲ್ಲಿ ಮುಳುಗಿದ್ದ ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ತಲಕಾಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Engineering Student : ಎಕ್ಸಾಂನಲ್ಲಿ ಫೇಲ್; ಕೆರೆಗೆ ಹಾರಿ ಆರ್ವಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಕೆರೆಯಲ್ಲಿ ಈಜುವ ಸವಾಲು; ಜೋಶ್ನಲ್ಲಿ ನೀರಿಗೆ ಇಳಿದ ಟೆಕ್ಕಿ ಮೃತ್ಯು
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಾಟದಹೊಸಳ್ಳಿ ಕೆರೆಯಲ್ಲಿ ಈಜಲು ಹೋದ ಟೆಕ್ಕಿ ನೀರಲ್ಲಿ (Drowned in water) ಮುಳುಗಿ ಮೃತಪಟ್ಟಿದ್ದಾರೆ. ನಿನ್ನೆ ಶನಿವಾರ ಮಧ್ಯಾಹ್ನ ನೀರಿನಲ್ಲಿ ಮುಳುಗಿ ವಿನಯ್ ರಮೇಶ್ (42) ಎಂಬುವವರು ಮೃತಪಟ್ಟಿದ್ದರು. ಅಗ್ನಿಶಾಮಕ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಭಾನುವಾರ ಟೆಕ್ಕಿ ಮೃತದೇಹವು ಪತ್ತೆಯಾಗಿದೆ.
ಬೆಂಗಳೂರಿನ ಇಂದಿರಾನಗರ ನಿವಾಸಿಯಾದ ವಿನಯ್ ರಮೇಶ್, ಐದು ಜನ ಸ್ನೇಹಿತರೊಟ್ಟಿಗೆ ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಕೆಲವರು ಈ ದಡದಿಂದ ಆ ದಡಕ್ಕೆ ಯಾರು ಮೊದಲು ಈಜಿಕೊಂಡು ಬರುತ್ತಾರೆ ನೋಡೋಣಾ ಎಂದು ಸವಾಲು ಹಾಕಿಕೊಂಡಿದ್ದಾರೆ. ಈ ಚಾಲೆಂಜ್ ಅನ್ನು ಸ್ವೀಕರಿಸಿದ ರಮೇಶ್ ಜೋಶ್ನಲ್ಲಿ ನೀರಿಗೆ ಇಳಿದಿದ್ದಾರೆ. ಆದರೆ ವಿನಯ್ ರಮೇಶ್ ವಾಪಸ್ ಬಂದಿರಲಿಲ್ಲ.
ಹೀಗಾಗಿ ಜತೆಗೆ ಇದ್ದ ಸ್ನೇಹಿತರು ಗಾಬರಿಯಾಗಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ವಿನಯ್ ರಮೇಶ್ ವಿಮಾನದಲ್ಲಿ ಚೆನ್ನೈ ನಿಂದ ಬೆಂಗಳೂರಿಗೆ ಬಂದು ಅಲ್ಲಿಂದ ನೇರವಾಗಿ ಸ್ನೇಹಿತರೊಟ್ಟಿಗೆ ಚಿಕ್ಕಬಳ್ಳಾಪುರಕ್ಕೆ ಬಂದಿದ್ದರು. ನಿರಂತರ ಪ್ರಯಾಣದಿಂದ ಬಳಲಿದ್ದ ವಿನಯ್ ಈಜಲು ಕೆರೆಗೆ ಇಳಿದಾಗ ಸುಸ್ತಾಗಿ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಈಜುವ ಚಾಲೆಂಜ್ ವಿನಯ್ ರಮೇಶ್ಗೆ ಮುಳುವಾಯ್ತಾ ಎಂಬ ಪ್ರಶ್ನೆ ಕಾಡುತ್ತಿದೆ. 24 ಗಂಟೆ ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಕೆರೆಯಿಂದ ಹೊರಗೆ ತಂದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ