`ಹಳ್ಳಿ ಹಕ್ಕಿʼ ಮನೆಯೊಂದು ಮೂರು ಬಾಗಿಲು: 3ನೇ ಪಕ್ಷದಲ್ಲಿರುವ ವಿಶ್ವನಾಥ್‌ ಮನೆಯಲ್ಲಿ ಮೂರು ಪಾರ್ಟಿ! - Vistara News

ಪ್ರಮುಖ ಸುದ್ದಿ

`ಹಳ್ಳಿ ಹಕ್ಕಿʼ ಮನೆಯೊಂದು ಮೂರು ಬಾಗಿಲು: 3ನೇ ಪಕ್ಷದಲ್ಲಿರುವ ವಿಶ್ವನಾಥ್‌ ಮನೆಯಲ್ಲಿ ಮೂರು ಪಾರ್ಟಿ!

ಕಾಂಗ್ರೆಸ್‌ನಿಂದ ಜೆಡಿಎಸ್‌, ಜೆಡಿಎಸ್‌ನಿಂದ ಬಿಜೆಪಿಗೆ ಆಗಮಿಸಿದ ಮಾಜಿ ಸಚಿವ ಎಚ್‌. ವಿಶ್ವನಾಥ್‌ ಇದೀಗ ಆ ಪಕ್ಷದಲ್ಲೂ ಹೆಚ್ಚು ಹಿಡಿತ ಹೊಂದಿಲ್ಲ. ಇಬ್ಬರು ಪುತ್ರರೂ ತಮ್ಮ ನಿರ್ಧಾರವನ್ನು ತಾವು ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ವಿಸ್ತಾರ ವಿಶೇಷ ವಿಶ್ವನಾಥ್‌

ರಂಗಸ್ವಾಮಿ ಎಂ. ಮಾದಾಪುರ, ಮೈಸೂರು
ಮುತ್ಸದ್ಧಿ ರಾಜಕಾರಣಿ, ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಅವರ ಕುಟುಂಬ ರಾಜಕೀಯವಾಗಿ ‘ಮನೆಯೊಂದು ಮೂರು ಬಾಗಿಲು’ ಆಗಿದೆ. ತಂದೆ ವಿಶ್ವನಾಥ್‌ ಬಿಜೆಪಿಯಲ್ಲಿದ್ದರೆ, ಮೊದಲ ಪತ್ನಿ ಮಗ ಅಮಿತ್ ದೇವರಹಟ್ಟಿ ಸಹಕಾರ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಬಣದಲ್ಲಿದ್ದಾರೆ. ಎರಡನೇ ಪತ್ನಿ ಮಗ ಪೂರ್ವಜ್ ವಿಶ್ವನಾಥ್ ಕಾಂಗ್ರೆಸ್ ಕದ ತಟ್ಟಿದ್ದು, ಶೀರ್ಘದಲ್ಲೇ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಕುರುಬ ಸಮುದಾಯದ ಮುಂಚೂಣಿ ನಾಯಕರಲ್ಲಿ ಒಬ್ಬರಾಗಿದ್ದ ವಿಶ್ವನಾಥ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗಿಂತಲೂ ಒಂದು ಅವಧಿ ಮುಂಚಿತವಾಗಿ ಶಾಸಕರಾಗಿದ್ದವರು. ಸಿದ್ದರಾಮಯ್ಯ 1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ವಿಶ್ವನಾಥ್ 1978ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಕೆ.ಆರ್.ನಗರ ಕ್ಷೇತ್ರದ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದರು. ಇಬ್ಬರೂ ಒಂದೇ ಸಮುದಾಯದವರು. ವಕೀಲರಾಗಿ ವೃತ್ತಿ ಆರಂಭಿಸಿ, ರಾಜಕೀಯ ನಾಯಕರಾಗಿ ಬೆಳೆದವರು. ಒಂದು ಕಾಲಕ್ಕೆ ಆತ್ಮೀಯರೂ ಆಗಿದ್ದರು. ಆದರೆ ಬದಲಾದ ರಾಜಕೀಯ ವಿದ್ಯಮಾನಗಳಲ್ಲಿ ಬದ್ಧವೈರಿಗಳಾಗಿದ್ದಾರೆ.

ಇದೀಗ ವಿಶ್ವನಾಥ್ ಅವರ ಪುತ್ರ ಪೂರ್ವಜ್ ರಾಜಕೀಯ ನೆಲೆ ಕಂಡುಕೊಳ್ಳಲು ಸಿದ್ದರಾಮಯ್ಯ ಮನೆಗೆ ಎಡತಾಕುವ ಸನ್ನಿವೇಶ ನಿರ್ಮಾಣವಾಗಿದೆ. ಸಿದ್ದರಾಮಯ್ಯ ಅವರೂ ತಂದೆ ಮೇಲಿನ ಸಿಟ್ಟನ್ನು ಮಗನ ಮೇಲೆ ತೋರಿಸದೆ ಪಕ್ಷ ಸೇರ್ಪಡೆಗೆ ಹಸಿರು ನಿಶಾನೆ ತೋರಿಸಿದ್ದಾರೆ. ಪೂರ್ವಜ್ ಕಾಂಗ್ರೆಸ್ ಸೇರಲು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಧ್ಯಸ್ಥಿಕೆ ವಹಿಸಿದ್ದಾರೆ ಎಂದು ‘ವಿಸ್ತಾರ ನ್ಯೂಸ್‌’ಗೆ ಗೊತ್ತಾಗಿದೆ.

ಮೂಲೆಗುಂಪಾದ ವಿಶ್ವನಾಥ್

ಅಡಗೂರು ಎಚ್. ವಿಶ್ವನಾಥ್ ಕೆ.ಆರ್. ನಗರ ಕ್ಷೇತ್ರದಿಂದ ನಿರಂತರವಾಗಿ 8 ಬಾರಿ ಸ್ಪರ್ಧಿಸಿ, ಮೂರು ಗೆಲುವು [1978, 1989, 1999] ಹಾಗೂ ಐದು ಸೋಲು[1983, 1985, 1994, 2004, 2008] ಕಂಡವರು. ಎಂ.ವೀರಪ್ಪ ಮೊಯ್ಲಿ, ಎಸ್. ಎಂ. ಕೃಷ್ಣ ಸರ್ಕಾರಗಳಲ್ಲಿ ಸಚಿವರಾಗಿದ್ದವರು. 2009ರಿಂದ 2014ರವರೆಗೆ ಮೈಸೂರು- ಕೊಡಗು ಕ್ಷೇತ್ರದ ಸಂಸದರಾಗಿದ್ದವರು. ಇಷ್ಟೆಲ್ಲವೂ ಆಗಿದ್ದು ಕಾಂಗ್ರೆಸ್ ಪಕ್ಷದಲ್ಲಿ ಇದ್ದಾಗ. ಅಲ್ಲಿವರೆಗೆ ಎಲ್ಲವೂ ಚೆನ್ನಾಗಿತ್ತು. ಆ ನಂತರ ತೆಗೆದುಕೊಂಡ ನಿರ್ಧಾರಗಳು ಅಡಗೂರು ಎಚ್.ವಿಶ್ವನಾಥ್ ಅವರಿಗೆ ತಿರುಗು ಬಾಣವಾದವು.

ಸಿದ್ದರಾಮಯ್ಯ ಜತೆಗೆ ಮುನಿಸಿಕೊಂಡು 2017ರಲ್ಲಿ ಜೆಡಿಎಸ್ ಸೇರಿಕೊಂಡರು. ಕೆ.ಆರ್. ನಗರ ಕ್ಷೇತ್ರದಲ್ಲಿ ಅಷ್ಟೊತ್ತಿಗಾಗಲೇ ಸಾ.ರಾ.ಮಹೇಶ್ ಎರಡು ಬಾರಿ ಶಾಸಕರಾಗಿದ್ದ ಪರಿಣಾಮ, 2018ರಲ್ಲಿ ಹಾಲಿ ಶಾಸಕರಿಗೆ ಅವಕಾಶ ಕೊಟ್ಟಿತು. ಸ್ವಕ್ಷೇತ್ರ ಬಿಟ್ಟು ಹುಣಸೂರಿಗೆ ಪಲಾಯನ ಮಾಡಿದ ವಿಶ್ವನಾಥ್, ಗೆಲುವು ಸಾಧಿಸಿ ಜೆಡಿಎಸ್ ರಾಜ್ಯಾಧ್ಯಕ್ಷರೂ ಆದರು. ಜೆಡಿಎಸ್‌ಗೆ ಒಗ್ಗಿಕೊಳ್ಳಲು ಸಾಧ್ಯವಾಗಲೇ ಇಲ್ಲ.

ಬಾಂಬೆ ಟೀಮ್ ಸೇರುವ ಮೂಲಕ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾದರು. ಶಾಸಕ ಸ್ಥಾನ ರದ್ದಾದ ಹಿನ್ನೆಲೆಯಲ್ಲಿ 2019ರಲ್ಲಿ ಹುಣಸೂರು ಕ್ಷೇತ್ರಕ್ಕೆ ಉಪಚುನಾವಣೆ ನಡೆಯಿತು. ಆಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನ ಪರಿಷತ್ತು ನಾಮ ನಿರ್ದೇಶನ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಸ್ಥಾನದ ಆಫರ್ ನೀಡಿದ್ದರು. ಹಠ ಮಾಡಿ ಬಿಜೆಪಿ ಅಭ್ಯರ್ಥಿಯಾದ ವಿಶ್ವನಾಥ್, ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ. ಮಂಜುನಾಥ್ ವಿರುದ್ಧ ಹೀನಾಯ ಸೋಲು ಅನುಭವಿಸಿದರು. ಈಗ ಸಾಹಿತ್ಯ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಾಮ ನಿರ್ದೇಶನಗೊಂಡಿದ್ದಾರೆ. ಬಿಜೆಪಿಯಲ್ಲಿ ಮೂಲೆ ಗುಂಪಾಗಿದ್ದಾರೆ. ಅತ್ತ ಕೆ.ಆರ್. ನಗರವೂ ಇಲ್ಲ, ಇತ್ತ ಹುಣಸೂರೂ ಇಲ್ಲ.

ಇದನ್ನೂ ಓದಿ | ಜಿ.ಟಿ. ದೇವೇಗೌಡ ಜೆಡಿಎಸ್‌ನಲ್ಲೇ ಉಳಿಯುವಂತೆ ಮನವೊಲಿಸಿದ ಎಚ್‌.ಡಿ. ಕುಮಾರಸ್ವಾಮಿ

ಅಮಿತ್ ಅತಂತ್ರ

ಮೊದಲ ಪತ್ನಿ ಪುತ್ರ ಅಮಿತ್ ದೇವರಹಟ್ಟಿ ಕೆ. ಆರ್. ನಗರ ತಾಲೂಕಿನ ಭೇರ್ಯ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದರು. ಕಾಂಗ್ರೆಸ್ ಜನಪ್ರತಿನಿಧಿಯಾಗಿ ರಾಜಕೀಯ ಜೀವನ ಆರಂಭಿಸಿದ ಅಮಿತ್, ತಂದೆ ಜೆಡಿಎಸ್ ಮತ್ತು ಬಿಜೆಪಿಗೆ ಹೋದಾಗಲೂ ಕಾಂಗ್ರೆಸ್‌ನಲ್ಲೇ ಮುಂದುವರಿದರು. ಇತ್ತೀಚೆಗೆ ಸಿದ್ದರಾಮೋತ್ಸವದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ‘ಸಿದ್ದರಾಮಯ್ಯ ಹೊಳೆಯುವ ವಜ್ರ’ ಎಂದು ಬಣ್ಣಿಸಿದ್ದರು. ಜಿಲ್ಲಾ ಪಂಚಾಯಿತಿ ಅವಧಿ ಮುಕ್ತಾಯವಾಗುವ ಹೊತ್ತಿಗೆ ಮೈಸೂರು ಜಿಲ್ಲಾ ಸಹಕಾರ ಬ್ಯಾಂಕ್ (ಎಂಡಿಸಿಸಿ) ಚುನಾವಣೆ ಎದುರಾಯಿತು. ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಬಣದಲ್ಲಿ ಗುರುತಿಸಿಕೊಂಡು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಜಿ.ಟಿ. ದೇವೇಗೌಡ ಹಾಗೂ ಪುತ್ರ ಜಿ.ಡಿ. ಹರೀಶ್ ಗೌಡ ಜತೆ ನಿಕಟ ಸಂಪರ್ಕ ಹೊಂದಿದ್ದರೂ ರಾಜಕೀಯ ನೆಲೆಯ ಹುಡುಕಾಟದಲ್ಲಿದ್ದಾರೆ.

ಕಾಂಗ್ರೆಸ್ ಹಾದಿಯಲ್ಲಿ ಪೂರ್ವಜ್

ಎರಡನೇ ಪತ್ನಿಯ ಪುತ್ರ ಪೂರ್ವಜ್ ವಿಶ್ವನಾಥ್ ಕಾಂಗ್ರೆಸ್ ಸೇರುವುದಾಗಿ ಘೋಷಿಸಿಕೊಂಡಿದ್ದಾರೆ. ೩೫ ವರ್ಷದ ಪೂರ್ವಜ್ ತಂದೆಯ ಕಾರಣಕ್ಕೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ವೇದಿಕೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಯಾವುದೇ ಪಕ್ಷದಲ್ಲಿ ಹುದ್ದೆ ನಿರ್ವಹಿಸಿಲ್ಲ. ಯಾವುದೇ ಚುನಾವಣೆಯನ್ನೂ ಎದುರಿಸಿಲ್ಲ. ಮಹಾನಗರ ಪಾಲಿಕೆ ಅಥವಾ ಜಿಲ್ಲಾ ಪಂಚಾಯಿತಿ ಸದಸ್ಯನಾಗುವ ಮಹತ್ವಾಕಾಂಕ್ಷೆಯೊಂದಿಗೆ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.

“ಅಮಿತ್ ಜಿಲ್ಲಾ ಪಂಚಾಯಿತಿಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ನಾನು ನನ್ನ ದಾರಿ ನೋಡಿಕೊಳ್ಳುತ್ತಿದ್ದೇನೆ.
ಮೊದಲಿನಿಂದಲೂ ಕಾಂಗ್ರೆಸ್ ನೋಡಿಕೊಂಡು ಬೆಳೆದಿದ್ದೇನೆ. ಸಮುದಾಯಕ್ಕೆ ಸಿದ್ದರಾಮಯ್ಯ ಸಿಂಹ ಇದ್ದಂತೆ. ಮುಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು. ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಬರಲಿ ಬಿಡು ಅಂದಿದ್ದಾರೆ.
ನನ್ನ ತಂದೆ ಮಾರ್ಗದರ್ಶನ ಮಾಡಿಲ್ಲ ಎಂದು ಹೇಳಲ್ಲ. ನಿಮ್ಮ ದಾರಿ ನೀವು ತೆಗೆದುಕೊಳ್ಳಿ ಎಂದಿದ್ದಾರೆ. ಕಾಂಗ್ರೆಸ್‌ನಲ್ಲಿ ಶಾಸಕ, ಮಂತ್ರಿ ಎಲ್ಲವೂ ಆಗಿದ್ದರು. ಅಲ್ಲೇ ಉಳಿಯಬೇಕಿತ್ತು. ಕನಿಷ್ಠ ಜೆಡಿಎಸ್‌ನಲ್ಲಾದರೂ ಇರಬೇಕಿತ್ತು.
ಬಿಜೆಪಿಗೆ ಸೇರಿ ತಪ್ಪು ಮಾಡಿದರು. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಕಾಂಗ್ರೆಸ್ ಸೇರುತ್ತಿದ್ದೇನೆ. ಶೀರ್ಘದಲ್ಲೇ ಪಕ್ಷ ಸೇರ್ಪಡೆ ದಿನಾಂಕ ತಿಳಿಸುತ್ತೇನೆ” ಎಂದು ‘ವಿಸ್ತಾರ ನ್ಯೂಸ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿ | ಅಪ್ಪ ಬಿಜೆಪಿ, ಮಗ ಕಾಂಗ್ರೆಸ್‌: ಕೈ ಪಾಳಯ ಸೇರಲಿದ್ದಾರೆ ಅಡಗೂರು ವಿಶ್ವನಾಥ್‌ ಪುತ್ರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Neha Murder Case: ನೇಹಾಳನ್ನು ಮದುವೆ ಮಾಡಿಸುವಂತೆ ಆಕೆಯ ಹೆತ್ತವರ ಪ್ರಾಣ ತಿಂದಿದ್ದ ಫಯಾಜ್!‌

Neha Murder Case: ಖುದ್ದು ಪೋಷಕರು ನೀಡಿರುವ ದೂರಿನಲ್ಲಿ ಈ ವಿಷಯ ಬಹಿರಂಗವಾಗಿದೆ. ನೇಹಾಳನ್ನು ಪ್ರೀತಿ ಮಾಡುತ್ತಿದ್ದೇನೆ. ತನಗೆ ಮದುವೆ ಮಾಡಿ ಕೊಡುವಂತೆ ನೇಹಾಳ ಪೋಷಕರಿಗೆ ಫಯಾಜ್‌ ಬೆನ್ನು ಬಿದ್ದಿದ್ದ. ನಾಲ್ಕೈದು ತಿಂಗಳಿಂದಲೂ ಮದುವೆಗಾಗಿ ಈತ ಪೀಡಿಸುತ್ತಿದ್ದ ಎಂದು ಗೊತ್ತಾಗಿದೆ.

VISTARANEWS.COM


on

Neha Murder case JDS slams hands for defending love jihad to protect accused
Koo

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದಾರುಣವಾಗಿ (Hubli Murder Case) ಕೊಲೆಯಾದ ನೇಹಾ ಹಿರೇಮಠ (Neha Murder Case) ಅವರನ್ನು ತನಗೆ ಮದುವೆ ಮಾಡಿಕೊಡುವಂತೆ ಕೊಲೆಪಾತಕಿ ಫಯಾಜ್‌ (Fayaz) ಬಹು ದಿನಗಳಿಂದ ಆಕೆಯ ಹೆತ್ತವರನ್ನು ಪೀಡಿಸುತ್ತಿದ್ದ ಎಂಬ ವಿಚಾರ ಬಯಲಾಗಿದೆ. ನೇಹಾ ಹೆತ್ತವರು ನೀಡಿರುವ ದೂರಿನ ಕಾಪಿಯಲ್ಲಿ ಇದು ಉಲ್ಲೇಖವಾಗಿದೆ.

ಖುದ್ದು ಪೋಷಕರು ನೀಡಿರುವ ದೂರಿನಲ್ಲಿ ಈ ವಿಷಯ ಬಹಿರಂಗವಾಗಿದೆ. ನೇಹಾಳನ್ನು ಪ್ರೀತಿ ಮಾಡುತ್ತಿದ್ದೇನೆ. ತನಗೆ ಮದುವೆ ಮಾಡಿ ಕೊಡುವಂತೆ ನೇಹಾಳ ಪೋಷಕರಿಗೆ ಫಯಾಜ್‌ ಬೆನ್ನು ಬಿದ್ದಿದ್ದ. ನಾಲ್ಕೈದು ತಿಂಗಳಿಂದಲೂ ಮದುವೆಗಾಗಿ ಈತ ಪೀಡಿಸುತ್ತಿದ್ದ ಎಂದು ಗೊತ್ತಾಗಿದೆ.

ನಮ್ಮ ಮಗಳು ನಿನ್ನನ್ನು ಇಷ್ಟಪಟ್ಟಿಲ್ಲ ಎಂದು ಪೋಷಕರು ಹೇಳಿದ್ದರು. ಇನ್ನೂ ಹೆಚ್ಚಿನ ವ್ಯಾಸಂಗ ಮಾಡುವುದಿದೆ ಎಂದು ಫಯಾಜ್‌ನ ತಂದೆ, ತಾಯಿಗೆ ದೂರವಾಣಿ ಕರೆ ಮಾಡಿ ನೇಹಾ ಪೋಷಕರು ಹೇಳಿದ್ದರು. ಇಬ್ಬರ ಮತವೂ ಬೇರೆ ಆಗಿರುವುದರಿಂದಲೂ ಸಮಸ್ಯೆ ಉಂಟಾಗಬಹುದು ಎಂಬುದನ್ನು ಕೂಡ ಅವರ ಅರಿವಿಗೆ ತರಲಾಗಿತ್ತು. ಎಫ್‌ಐಆರ್‌ನಲ್ಲಿ ಈ ಬಗ್ಗೆ ವಿವರವಾದ ಉಲ್ಲೇಖವನ್ನು ನೇಹಾಳ ತಾಯಿ ಗೀತಾ ನೀಡಿದ್ದಾರೆ.

ಇಷ್ಟಾದರೂ ನಮ್ಮ ಮಗಳ ಬೆನ್ನು ಬಿದ್ದಿದ್ದ ಫಯಾಜ್, ನಾಲ್ಕೈದು ಬಾರಿ ಬೆದರಿಕೆ ಹಾಕಿದ್ದ. ಮದುವೆಯಾಗದಿದ್ದರೆ ನಿನ್ನನ್ನು ಜೀವಂತವಾಗಿ ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ ಎಂದು ನೇಹಾ ತಮ್ಮ ಗಮನಕ್ಕೆ ತಂದಿದ್ದಳು ಎಂದು ನೇಹಾಳ ಪೋಷಕರು ತಿಳಿಸಿದ್ದಾರೆ. ಆಗಲೇ ಬಹುಶಃ ಇದನ್ನು ಪೊಲೀಸರ ಗಮನಕ್ಕೆ ತಂದಿದ್ದರೆ ನೇಹಾ ಜೀವ ಉಳಿಯುತ್ತಿತ್ತೋ ಏನೋ ಎಂದು ಹೇಳಲಾಗುತ್ತಿದೆ.

“ತಪ್ಪು ಆಕೆಯಲ್ಲೂ ಇದೆ” ಎಂದು ಫಯಾಜ್‌ ತಾಯಿ

ಈ ನಡುವೆ, “ತಪ್ಪು ಆಕೆಯಲ್ಲೂ ಇದೆʼ ಎಂದು ಹೇಳಿರುವ ಆರೋಪಿ ಫಯಾಜ್‌ ತಾಯಿಯ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ವಿಸ್ತಾರ ನ್ಯೂಸ್‌ಗೆ ಹೇಳಿಕೆ ನೀಡಿರುವ ಫಯಾಜ್‌ ತಾಯಿ, ತಪ್ಪು ಒಬ್ಬರಿಂದ ಆಗಲು ಸಾಧ್ಯವೇ ಇಲ್ಲ. ತಪ್ಪು ಇಬ್ಬರಲ್ಲೂ ಇರುತ್ತೆ. ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಅದು ಹೇಗೆ ಒನ್ ಸೈಡ್ ಲವ್ ಆಗುತ್ತೆ?” ಎಂದು ಪ್ರಶ್ನಿಸಿದ್ದಾರೆ.

“ಸತ್ಯಾಸತ್ಯತೆ ಪರಿಶೀಲಿಸಿ, ಸಾಧಕ ಬಾಧಕ ನೋಡಿ ಅವನಿಗೆ ಶಿಕ್ಷೆ ನೀಡಬೇಕು. ಏನೇ ಶಿಕ್ಷೆ ಕೊಟ್ಟರೂ ಸಹ ನಾನು ಒಪ್ಪಿಕೊಳ್ಳುತ್ತೇನೆ. ಇಬ್ಬರೂ ಕ್ಲಾಸ್ ಮೇಟ್ ಆಗಿದ್ದವರು. ಮುಂದೆ ಅವರಲ್ಲಿ ಏನು ನಡೆಯಿತು ಅದು ಗೊತ್ತಿಲ್ಲ. ಪೋನ್‌ನಲ್ಲಿ ಅವಳ ಜೊತೆ ಮಾತನಾಡಿದ ಎಲ್ಲ ರೆಕಾರ್ಡ್‌ಗಳಿವೆ. ಇದರ ಮೇಲೆ ಕಾನೂನು ಯಾವ ರೀತಿ ಕ್ರಮ ಕೈಗೊಳ್ಳುತ್ತೋ ಅದು ತೆಗೆದುಕೊಳ್ಳಲಿ” ಎಂದಿದ್ದಾರೆ.

“ಇರುವೆಯನ್ನೂ ಸಹ ಸಾಯಿಸದ ಅವನಿಗೆ ಇಷ್ಟೊಂದು ಧೈರ್ಯ ಹೇಗೆ ಬಂತು ಅಂತ ನಮಗೆ ಗೊತ್ತಿಲ್ಲ. ಜಿಮ್ ಮಾಡಿ ಒಳ್ಳೆಯ ಬಾಡಿ ಇಟ್ಟುಕೊಂಡಿದ್ದ ಅವನು. ಅವಳ ಜೊತೆಗಿನ ಪ್ರೀತಿ ಸ್ನೇಹದಿಂದಲೇ ಅವನು ಡಿಪ್ರೆಶನ್‌ಗೆ ಹೋದ. ಊಟ ಸಹ ಸರಿಯಾಗಿ ಮಾಡುತ್ತಿರಲಿಲ್ಲ” ಎಂದಿದ್ದಾರೆ.

“ನಾವು ನೂರಾರು ಮಕ್ಕಳಿಗೆ ಶಿಕ್ಷಣ ಕೊಟ್ಟಿದ್ದೇವೆ. ಅವರು ತಪ್ಪು ಮಾಡಿದಾಗ ಹೊಡೆದು ಬುದ್ಧಿ ಹೇಳ್ತೀವಿ. ಆದ್ರೆ ನನ್ನ ಮಗನೇ ಈಗ ತಪ್ಪು ಮಾಡಿದ್ದಾನೆ, ಅದು ತಪ್ಪು ತಪ್ಪೇ. ಕಾನೂನು ಪ್ರಕಾರ ಏನು ಶಿಕ್ಷೆ ಆಗಬೇಕೋ ಅದು ಆಗಲಿ. ಘಟನೆ ನಡೆದು ಸಂಜೆ ಗೊತ್ತಾಗಿದೆ. ಎರಡು ದಿನದಿಂದ ನಂಗೆ ಕರೆ ಸಹ ಮಾಡಿಲ್ಲ ಅವನು. ಅವನ ತಪ್ಪಿಗೆ ಶಿಕ್ಷೆ ಆಗಲೇಬೇಕು, ಅದನ್ನು ಅವನು ಅನುಭವಿಸಬೇಕು” ಎಂದು ಹೇಳಿದ್ದಾರೆ.

“ಐಎಎಸ್ ಆಫೀಸರ್ ಆಗುತ್ತಾನೆ ಅಂತ ನಾವು ಅಂದುಕೊಂಡಿದ್ದೆವು. ಒಬ್ಬನೇ ಮಗ ಎಂದು ಉತ್ತಮ ಶಿಕ್ಷಣ ಕೊಡಿಸಿದ್ದೆವು. ಅವನ ತಪ್ಪಿನಿಂದ ನಾವೆಲ್ಲರೂ ತಲೆ ತಗ್ಗಿಸುವಂತೆ ಆಗಿದೆ” ಎಂದು ಹೇಳಿದ್ದಾರೆ. ಆದರೆ ಅವರು ಫಯಾಜ್‌ ಕೃತ್ಯವನ್ನು ಸಮರ್ಥಿಸಿಕೊಂಡಂತೆ ಮಾತನಾಡಿರುವುದು ಹಾಗೂ ಈ ಕೃತ್ಯದಲ್ಲಿ ನೇಹಾ ಪಾಲೂ ಇದೆ ಎಂಬರ್ಥ ಬರುವಂತೆ ಮಾತನಾಡಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಇದನ್ನೂ ಓದಿ: Neha Murder Case: ನೇಹಾ ಹತ್ಯೆ: ಅಪರಾಧಿಗೆ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ

Continue Reading

ಕ್ರೀಡೆ

IPL 2024 : ಬಿಸಿಸಿಐ ನಿಯಮ ಉಲ್ಲಂಘನೆ; ಋತುರಾಜ್​, ರಾಹುಲ್​ಗೆ ದಂಡ

IPL 2024: ಸಿಎಸ್​ಕೆ ಗಳಿಸಿದ 176 ರನ್​ಗಳ ಗುರಿ ಬೆನ್ನಟ್ಟಿದ ಎಲ್ಎಸ್​ಜಿ 8 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿದೆ. ಆರಂಭಿಕ ಆಟಗಾರರಾದ ಕ್ವಿಂಟನ್ ಡಿ ಕಾಕ್ (54) ಮತ್ತು ಕೆಎಲ್ ರಾಹುಲ್ (82) ಉತ್ತಮ ಜೊತೆಯಾಟದೊಂದಿಗೆ ಅಡಿಪಾಯ ಹಾಕಿದ್ದರು. ನಿಕೋಲಸ್ ಪೂರನ್ ಅಜೇಯ 23* ರನ್ ಗಳಿಸಿ ಗೆಲುವಿಗೆ ಕಾರಣರಾದರು.

VISTARANEWS.COM


on

IPL 2024
Koo

ಲಖನೌ: ಬಿಸಿಸಿಐನ ಕೆಲವು ನಿಯಮಗಳು ಐಪಿಎಲ್​ ಪಂದ್ಯವನ್ನು ನಿಗದಿತ ಸಮಯದಲ್ಲಿ ಮುಗಿಸಲು ಪ್ರೇರಣೆ ನೀಡುತ್ತದೆ. ಆದರೆ, ಪಂದ್ಯದ ಪರಿಸ್ಥಿತಿಯ ಕಾರಣಕ್ಕೆ ನಾಯಕರಿಗೆ ತಮ್ಮ ಪಾಲಿನ ಓವರ್​ಗಳನ್ನು ನಿಗದಿತ ಸಮಯದಲ್ಲಿ ಮುಗಿಸಲು ಸಾಧ್ಯವಾಗುತ್ತಿಲ್ಲ. ಅಂಥವರಿಗೆ ದಂಡ ಶಿಕ್ಷೆ ನೀಡುತ್ತಿದೆ ಬಿಸಿಸಿಐ. ಅಂತೆಯೇ ಇಂಡಿಯನ್ ಪ್ರೀಮಿಯರ್ ಲೀಗ್ 2024 ರ (IPL 2024) 34 ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್​ಕೆ ) ನಡುವಿನ ಮುಖಾಮುಖಿಯಲ್ಲೂ ಇದೇ ನಡೆದಿದೆ. ಕನಿಷ್ಠ ಓವರ್ ರೇಟ್​ಗೆ ಸಂಬಂಧಿಸಿದ ಐಪಿಎಲ್​​ನ ನಿಯಮ ಉಲ್ಲಂಘಿಸಿದ್ದಕ್ಕಾಗಿ ಕೆಎಲ್ ರಾಹುಲ್ (ಲಕ್ನೊ ಸೂಪರ್​ ಜೈಂಟ್ಸ್ ನಾಯಕ) ಮತ್ತು ಋತುರಾಜ್ ಗಾಯಕ್ವಾಡ್ (ಚೆನ್ನೈ ಸೂಪರ್ ಕಿಂಗ್ಸ್​ ನಾಯಕ ) ಇಬ್ಬರಿಗೂ ಬಿಸಿಸಿಐ ದಂಡ ವಿಧಿಸಿದೆ.

ಸಿಎಸ್​ಕೆ ಗಳಿಸಿದ 176 ರನ್​ಗಳ ಗುರಿ ಬೆನ್ನಟ್ಟಿದ ಎಲ್ಎಸ್​ಜಿ 8 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿದೆ. ಆರಂಭಿಕ ಆಟಗಾರರಾದ ಕ್ವಿಂಟನ್ ಡಿ ಕಾಕ್ (54) ಮತ್ತು ಕೆಎಲ್ ರಾಹುಲ್ (82) ಉತ್ತಮ ಜೊತೆಯಾಟದೊಂದಿಗೆ ಅಡಿಪಾಯ ಹಾಕಿದ್ದರು. ನಿಕೋಲಸ್ ಪೂರನ್ ಅಜೇಯ 23* ರನ್ ಗಳಿಸಿ ಗೆಲುವಿಗೆ ಕಾರಣರಾದರು.

ಎಲ್ಎಸ್​ಜಿ ಪಂದ್ಯದ ಮೇಲೆ ಪ್ರಾಬಲ್ಯ ಸಾಧಿಸಿದರೂ, ಅವರ ಓವರ್ ರೇಟ್ ಐಪಿಎಲ್​ನ ಸಮಯದ ಮಿತಿಗಿಂತ ಕಡಿಮೆಯಾಗಿತ್ತು. ಅದರ ಪರಿಣಾಮವಾಗಿ, ನಾಯಕ ಕೆಎಲ್ ರಾಹುಲ್​ಗೆ 12 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ. ಇದು ನೀತಿ ಸಂಹಿತೆಯ ಅಡಿಯಲ್ಲಿ ಹಾಲಿ ಆವೃತ್ತಿಯಲ್ಲಿ ರಾಹುಲ್​ಗೆ ಮೊದಲ ದಂಡ.

ಸಿಎಸ್​ಕೆ ಕೂಡ ತಮ್ಮ ಬ್ಯಾಟಿಂಗ್ ಇನ್ನಿಂಗ್ಸ್​ನಲ್ಲಿ ಅಗತ್ಯ ಓವರ್ ರೇಟ್ ಕಾಯ್ದುಕೊಂಡಿದೆ. ನಾಯಕ ಋತುರಾಜ್ ಗಾಯಕ್ವಾಗೂ ಅದೇ (12 ಲಕ್ಷ ರೂ.) ದಂಡ ವಿಧಿಸಲಾಗಿದೆ ಏಕೆಂದರೆ ಇದು ಸಿಎಸ್​ಕೆ ಮೊದಲ ಅಪರಾಧವಾಗಿದೆ.

ಐಪಿಎಲ್ 2024ರಲ್ಲಿ ವೇಗ ಕಾಯ್ದುಕೊಳ್ಳುವುದು

ಬಿಸಿಸಿಐನ ನೀತಿ ಸಂಹಿತೆಯು ಪಂದ್ಯದುದ್ದಕ್ಕೂ ವೇಗ ಆಟಕ್ಕೆ ಒತ್ತು ನೀಡುತ್ತದೆ. ನಿಧಾನಗತಿಯ ಓವರ್ ರೇಟ್ ಆಟದ ಖುಷಿಗೆ ಅಡ್ಡಿಪಡಿಸುತ್ತದೆ. ಅದೇ ರೀತಿ ಎರಡನೇ ಬ್ಯಾಟಿಂಗ್ ಮಾಡುವ ತಂಡಕ್ಕೆ ಅನಾನುಕೂಲತೆಯನ್ನುಂಟು ಮಾಡುತ್ತದೆ. ಈ ದಂಡಗಳು ತಮ್ಮ ತಂಡಗಳು ನಿಗದಿತ ಓವರ್ ರೇಟ್ಗೆ ಬದ್ಧವಾಗಿರುವುದನ್ನು ಖಚಿತಪಡಿಸುತ್ತದೆ.

ಇದನ್ನೂ ಓದಿ: MS Dhoni : ಸಿಎಸ್​ಕೆ ವಾರ್ಷಿಕೋತ್ಸವದಂದೇ 101 ಮೀಟರ್ ಸಿಕ್ಸರ್ ಬಾರಿಸಿದ ಧೋನಿ!

ಐಪಿಎಲ್ ತನ್ನ ರೋಮಾಂಚಕಾರಿ ಫಲಿತಾಂಶಗಳೊಂದಿಗೆ ಮುಂದುವರಿದಿದೆ. ಎಲ್ಎಸ್​ಜಿ ಮತ್ತು ಸಿಎಸ್ಕೆ ಎರಡೂ ಈ ಹಿನ್ನಡೆಯಿಂದ ಪುಟಿದೇಳಲು ಎದುರು ನೋಡುತ್ತಿವೆ. ಆದಾಗ್ಯೂ, ಹೆಚ್ಚಿನ ದಂಡಗಳನ್ನು ತಪ್ಪಿಸಲು ಇಬ್ಬರೂ ನಾಯಕರು ಮುಂದಿನ ಪಂದ್ಯಗಳಲ್ಲಿ ವೇಗವನ್ನು ಕಾಪಾಡಿಕೊಳ್ಳುವ ಬಗ್ಗೆಯೂ ಗಮನ ಹರಿಸಬೇಕಾಗಿದೆ.

Continue Reading

ಪ್ರಮುಖ ಸುದ್ದಿ

Electoral Bond : ಎನ್​ಡಿಎ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್​ ವ್ಯವಸ್ಥೆ ಮರುಜಾರಿ; ನಿರ್ಮಲಾ ಸೀತಾರಾಮನ್​

Electoral Bond: ಸುಪ್ರೀಂ ಕೋರ್ಟ್​​ ಈಗಷ್ಟೇ ಈ ಯೋಜನೆಯಲ್ಲಿ ಪಾರದರ್ಶಕತೆ ತಂದಿದೆ. ಈ ಮೊದಲು ಎಲ್ಲವೂ ಮೋಸದ ಜಾಲವಾಗಿತ್ತು ಎಂದು ಅವರು ಹೇಳಿದ್ದಾರೆ. ಯೋಜನೆಯ ಕೆಲವು ಅಂಶಗಳನ್ನು ಸುಧಾರಿಸುವ ಅಗತ್ಯವಿದೆ ಎಂದು ಒಪ್ಪಿಕೊಂಡ ಹಣಕಾಸು ಸಚಿವೆ ಸೀತಾರಾಮನ್ ಸಮಾಲೋಚನೆ ಯ ನಂತರ ಅವುಗಳನ್ನು ಮರಳಿ ತರುವ ಸಾಧ್ಯತೆಗಳಿವೆ ಎಂದು ಹೇಳಿದರು.

VISTARANEWS.COM


on

electoral Bond
Koo

ನವದೆಹಲಿ: ಬಿಜೆಪಿ ನೇತೃತ್ವದ ಎನ್​ಡಿಎ ಮತ್ತೆ ಅಧಿಕಾರಕ್ಕೆ ಬಂದರೆ ಈ ಎಲ್ಲ ಪಾಲುದಾರರ ಜತೆ ಸಮಾಲೋಚನೆಯ ಮಾಡಿ ಚುನಾವಣಾ ಬಾಂಡ್ (Electoral Bond) ಯೋಜನೆಯನ್ನು ಮರಳಿ ತರುವ ಸಾಧ್ಯತೆಯ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುಳಿವು ನೀಡಿದ್ದಾರೆ. ಹಿಂದೂಸ್ತಾನ್ ಟೈಮ್ಸ್ ಜೊತೆ ಮಾತನಾಡಿದ ಅವರು “ನಾವು ಇನ್ನೂ ಮಧ್ಯಸ್ಥಗಾರರೊಂದಿಗೆ ಸಾಕಷ್ಟು ಸಮಾಲೋಚನೆ ನಡೆಸಬೇಕಾಗಿದೆ ಮತ್ತು ಎಲ್ಲರಿಗೂ ಸ್ವೀಕಾರಾರ್ಹವಾದ ಚೌಕಟ್ಟನ್ನು ರಚಿಸಲು ಅಥವಾ ತರಲು ನಾವು ಏನು ಮಾಡಬೇಕು ಎಂಬುದನ್ನು ಪರಿಶೀಲಿಸಬೇಕಾಗಿದೆ. ಮುಖ್ಯವಾಗಿ ಪಾರದರ್ಶಕತೆಯ ಮಟ್ಟವನ್ನು ಉಳಿಸಿಕೊಳ್ಳಬೇಕು. ಕಪ್ಪು ಹಣ ಇಲ್ಲಿಗೆ ಪ್ರವೇಶಿಸುವ ಸಾಧ್ಯತೆಯನ್ನು ಸಂಪೂರ್ಣವಾಗಿ ನಿವಾಳಿಸಬೇಕು ಎಂದು ಹೇಳಿದರು. ಆದಾಗ್ಯೂ, ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಮರುಪರಿಶೀಲಿಸಬೇಕೆ ಎಂದು ಕೇಂದ್ರ ಸರ್ಕಾರ ಇನ್ನೂ ನಿರ್ಧರಿಸಿಲ್ಲ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದರು.

ಸುಪ್ರೀಂ ಕೋರ್ಟ್​​ ಈಗಷ್ಟೇ ಈ ಯೋಜನೆಯಲ್ಲಿ ಪಾರದರ್ಶಕತೆ ತಂದಿದೆ. ಈ ಮೊದಲು ಎಲ್ಲವೂ ಮೋಸದ ಜಾಲವಾಗಿತ್ತು ಎಂದು ಅವರು ಹೇಳಿದ್ದಾರೆ. ಯೋಜನೆಯ ಕೆಲವು ಅಂಶಗಳನ್ನು ಸುಧಾರಿಸುವ ಅಗತ್ಯವಿದೆ ಎಂದು ಒಪ್ಪಿಕೊಂಡ ಹಣಕಾಸು ಸಚಿವೆ ಸೀತಾರಾಮನ್ ಸಮಾಲೋಚನೆ ಯ ನಂತರ ಅವುಗಳನ್ನು ಮರಳಿ ತರುವ ಸಾಧ್ಯತೆಗಳಿವೆ ಎಂದು ಹೇಳಿದರು.

ಹಿಂದೆಯೂ ಸಮರ್ಥಿಸಿಕೊಂಡಿದ್ದರು

ಚುನಾವಣಾ ಬಾಂಡ್ ಯೋಜನೆಯನ್ನು ಹಣಕಾಸು ಸಚಿವರು ಸಮರ್ಥಿಸಿಕೊಂಡಿರುವುದು ಇದೇ ಮೊದಲಲ್ಲ. ಈ ಹಿಂದೆ ಅವರು ಈ ಯೋಜನೆಯು “ಹಿಂದಿನ ಕಪ್ಪು ಹಣಕ್ಕಿಂತ ಒಂದು ಹೆಜ್ಜೆ ಉತ್ತಮ” ಎಂದು ಹೇಳಿದ್ದರು. ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್​​ಗೆ ನೀಡಿದ ಸಂದರ್ಶನದಲ್ಲಿ ನಿರ್ಮಲಾ ಸೀತಾರಾಮನ್ ಬಿಜೆಪಿ ಆಡಳಿತವು ಚುನಾವಣಾ ಹಣಕಾಸು ಶುದ್ಧೀಕರಣಕ್ಕಾಗಿ ಕಾನೂನನ್ನು ತಂದಿದೆ ಎಂದು ಹೇಳಿದ್ದರು. ಚುನಾವಣಾ ನಿಧಿಯು ಹೆಚ್ಚು ಪಾರದರ್ಶಕತೆಯನ್ನು ಹೊಂದಿದೆ ಎಂದು ಹೇಳಿದರು.

ಇದನ್ನೂ ಓದಿ: Narendra Modi : ವಿಶ್ವವೇ ನೋಡಿದೆ.. ಯುಪಿ ರ್ಯಾಲಿಯಲ್ಲಿ ಶಮಿಯನ್ನು ಹೊಗಳಿದ ಮೋದಿ

ರಾಜಕೀಯ ನಿಧಿಯಲ್ಲಿ ಪಾರದರ್ಶಕತೆ ತರಲು ರಾಜಕೀಯ ಪಕ್ಷಗಳಿಗೆ ನೀಡಿದ ನಗದು ದೇಣಿಗೆಗಳಿಗೆ ಪರ್ಯಾಯವಾಗಿ ಕೇಂದ್ರ ಸರ್ಕಾರವು ಜನವರಿ 2, 2018 ರಂದು ಚುನಾವಣಾ ಬಾಂಡ್ ಯೋಜನೆಯನ್ನು ಪರಿಚಯಿಸಿತ್ತು. ಫೆಬ್ರವರಿ 2024 ರಲ್ಲಿ, ಐದು ನ್ಯಾಯಾಧೀಶರ ಸಂವಿಧಾನ ಪೀಠವು ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ ಯೋಜನೆಯನ್ನು ಅಸಾಂವಿಧಾನಿಕ ಎಂದು ಘೋಷಿಸಿತು.

Continue Reading

ಪ್ರಮುಖ ಸುದ್ದಿ

MS Dhoni : ಸಿಎಸ್​ಕೆ ವಾರ್ಷಿಕೋತ್ಸವದಂದೇ 101 ಮೀಟರ್ ಸಿಕ್ಸರ್ ಬಾರಿಸಿದ ಧೋನಿ!

MS Dhoni: ಎಲ್ಎಸ್​ಜಿ ವಿರುದ್ಧದ ಪಂದ್ಯದಲ್ಲಿ ಧೋನಿ 9 ಎಸೆತಗಳಲ್ಲಿ 2 ಬೌಂಡರಿ ಮತ್ತು ಅಷ್ಟೇ ಸಿಕ್ಸರ್​ಗಳೊಂದಿಗೆ 28 ರನ್ ಗಳಿಸಿ ಔಟಾಗದೆ ಉಳಿದರು. ಸೂಪರ್ ಕಿಂಗ್ಸ್ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. 18 ನೇ ಓವರ್​ನಲ್ಲಿ ರವಿ ಬಿಷ್ಣೋಯ್ ಮೊಯಿನ್ ಅಲಿಯನ್ನು ಔಟ್ ಮಾಡಿದ ನಂತರ 8 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ 42 ವರ್ಷದ ಧೋನಿ ಪರಿಣಾಮ ಬೀರಿದರು. ಕೆಲವು ಶಕ್ತಿಯುತ ಸ್ಟ್ರೋಕ್​​ಗಳೊಂದಿಗೆ ಇನ್ನಿಂಗ್ಸ್​​ಗೆ ವೇಗ ನೀಡಿದರು.

VISTARANEWS.COM


on

MS Dhoni
Koo

ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರಲ್ಲಿ ಋತುರಾಜ್ ಗಾಯಕ್ವಾಡ್​ಗೆ ನಾಯಕತ್ವ ಹಸ್ತಾಂತರಿಸಿದಾಗಿನಿಂದ ಎಂಎಸ್ ಧೋನಿ (MS Dhoni) ಸ್ವಾತಂತ್ರ್ಯದಿಂದ ಬ್ಯಾಟಿಂಗ್ ಮಾಡುತ್ತಿದ್ದಾರೆ. ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಏಪ್ರಿಲ್ 19 ರ ಶುಕ್ರವಾರ ಕೆಎಲ್ ರಾಹುಲ್ ಅವರ ಎಲ್ಎಸ್​ಜಿ ವಿರುದ್ಧದ ಪಂದ್ಯದಲ್ಲಿ ಅವರು ಅದ್ಭುತ ಫಾರ್ಮ್​ನಲ್ಲಿದ್ದಂತೆ ಕಂಡರು. ಅವರು 101 ಮೀಟರ್ ಸಿಕ್ಸರ್ ಬಾರಿಸಿ ಪ್ರೇಕ್ಷಕರನ್ನು ರಂಜಿಸಿದರು.

ಇದು ಐಪಿಎಲ್​​ನಲ್ಲಿ ಸಿಎಸ್​ಕೆ ಮತ್ತು ಧೋನಿ ತಂಡದ 16 ನೇ ವಾರ್ಷಿಕೋತ್ಸವವೂ ಆಗಿತ್ತು. ಏಪ್ರಿಲ್ 19, 2008 ರಂದು ಮೊಹಾಲಿಯ ಪಿಸಿಎ ಕ್ರೀಡಾಂಗಣದಲ್ಲಿ ನಡೆದ ತನ್ನ ಮೊದಲ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಸೂಪರ್ ಕಿಂಗ್ಸ್ 33 ರನ್​​ಗಳಿಂ ಸೋಲಿಸಿತು. 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಧೋನಿ 2 ರನ್ ಗಳಿಸಿ ಜೇಮ್ಸ್ ಹೋಪ್ಸ್ ಅವರನ್ನು ಮುಂದೆ ಸಿಲುಕಿಸಿದರು.

ಎಲ್ಎಸ್​ಜಿ ವಿರುದ್ಧದ ಪಂದ್ಯದಲ್ಲಿ ಧೋನಿ 9 ಎಸೆತಗಳಲ್ಲಿ 2 ಬೌಂಡರಿ ಮತ್ತು ಅಷ್ಟೇ ಸಿಕ್ಸರ್​ಗಳೊಂದಿಗೆ 28 ರನ್ ಗಳಿಸಿ ಔಟಾಗದೆ ಉಳಿದರು. ಸೂಪರ್ ಕಿಂಗ್ಸ್ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. 18 ನೇ ಓವರ್​ನಲ್ಲಿ ರವಿ ಬಿಷ್ಣೋಯ್ ಮೊಯಿನ್ ಅಲಿಯನ್ನು ಔಟ್ ಮಾಡಿದ ನಂತರ 8 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ 42 ವರ್ಷದ ಧೋನಿ ಪರಿಣಾಮ ಬೀರಿದರು. ಕೆಲವು ಶಕ್ತಿಯುತ ಸ್ಟ್ರೋಕ್​​ಗಳೊಂದಿಗೆ ಇನ್ನಿಂಗ್ಸ್​​ಗೆ ವೇಗ ನೀಡಿದರು.

ಕೊನೆಯ ಓವರ್​ನಲ್ಲಿ ಧೋನಿ ಎಡಗೈ ವೇಗಿ ಮೊಹ್ಸಿನ್ ಖಾನ್ ಅವರ ಮೇಲೆ ದಾಳಿ ನಡೆಸಿದರು. ಡೀಪ್​ ಕವರ್ ಮೂಲಕ ನಾಲ್ಕು ರನ್ ಗಳಿಸಿದರು, ನಂತರ 101 ಮೀಟರ್ ಉದ್ದದ ಬೃಹತ್ ಸಿಕ್ಸರ್ ಬಾರಿಸಿದರು. ಕೊನೆಯ ಓವರ್​ನಲ್ಲಿ ಸಿಎಸ್​ಕೆಗೆ 19 ರನ್ ಗಳಿಸಲು ಅವರು ನೆರವಾದರು.

ಇದನ್ನೂ ಓದಿ: MS Dhoni : ಧೋನಿ ಆಡಲು ಇಳಿದಾಗ ಸ್ಟೇಡಿಯಮ್​ನಲ್ಲಿ ಶಬ್ದ ಮಾಲಿನ್ಯ; ಡಿಕಾಕ್ ಹೆಂಡತಿಯ ಪೋಸ್ಟ್​ ವೈರಲ್​

ಐಪಿಎಲ್​​ನ 20 ನೇ ಓವರ್​ನಲ್ಲಿ ಧೋನಿ ಇದುವರೆಗೆ 65 ಸಿಕ್ಸರ್​ಗಳನ್ನು ಬಾರಿಸಿದ್ದಾರೆ. ಇದು ಅವರು ಎಷ್ಟು ಪ್ರಾಬಲ್ಯ ಮತ್ತು ಕ್ರೂರವಾಗಿದ್ದಾರೆ ಎಂಬುದನ್ನು ತೋರಿಸುತ್ತದೆ. ಪ್ರಸ್ತುತ ನಡೆಯುತ್ತಿರುವ ಟಿ 20 ಲೀಗ್​ನಲ್ಲಿ ಧೋನಿ 5 ಇನ್ನಿಂಗ್ಸ್​​ಗಳಿಂದ 255.88 ಸ್ಟ್ರೈಕ್ ರೇಟ್​​ನಲ್ಲಿ 87 ರನ್ ಗಳಿಸಿದ್ದಾರೆ. ಐಪಿಎಲ್​ನಲ್ಲಿ ವಿಕೆಟ್ ಕೀಪರ್ ಆಗಿ 5000 ರನ್ ಪೂರೈಸಿದ್ದಾರೆ.

Continue Reading
Advertisement
Neha Murder Case Rachita Ram React
ಕ್ರೈಂ15 mins ago

Neha Murder Case: ನೇಹಾ ಹತ್ಯೆ ಆರೋಪಿಯನ್ನು ಜನರ ಕೈಗೆ ಒಪ್ಪಿಸಿ ಎಂದ ಡಿಂಪಲ್‌ ಕ್ವೀನ್‌!

Rain News
ಮಳೆ19 mins ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

gold beauty
ಚಿನ್ನದ ದರ23 mins ago

Gold Rate Today: ಬಂಗಾರದ ದರ ಇಳಿಮುಖ; ರಾಜ್ಯದ ಬೆಲೆಗಳನ್ನು ಇಲ್ಲಿ ಗಮನಿಸಿ

Pragya Misra
ತಂತ್ರಜ್ಞಾನ33 mins ago

Pragya Misra: ಭಾರತದಲ್ಲಿ ತನ್ನ ಮೊದಲ ಉದ್ಯೋಗಿಯನ್ನು ನೇಮಿಸಿದ ಒಪನ್ ಎಐ

Neha Murder case JDS slams hands for defending love jihad to protect accused
ಕ್ರೈಂ36 mins ago

Neha Murder Case: ನೇಹಾಳನ್ನು ಮದುವೆ ಮಾಡಿಸುವಂತೆ ಆಕೆಯ ಹೆತ್ತವರ ಪ್ರಾಣ ತಿಂದಿದ್ದ ಫಯಾಜ್!‌

Drunken Groom
ದೇಶ36 mins ago

Drunken Groom: ಕುಡಿದ ಮತ್ತಿನಲ್ಲಿಯೇ ಮಂಟಪಕ್ಕೆಬಂದ ವರ; ಒದ್ದೋಡಿಸಿದ ವಧು!

Nysa Devgan Kajol shares 3 new pics
ಸಿನಿಮಾ42 mins ago

Nysa Devgan: ಕಾಜೋಲ್‌ ಮಗಳಿಗೆ ಹುಟ್ಟು ಹಬ್ಬದ ಸಂಭ್ರಮ! ನೈಸಾಗೆ ವಯಸ್ಸೆಷ್ಟು?

IPL 2024
ಕ್ರೀಡೆ48 mins ago

IPL 2024 : ಬಿಸಿಸಿಐ ನಿಯಮ ಉಲ್ಲಂಘನೆ; ಋತುರಾಜ್​, ರಾಹುಲ್​ಗೆ ದಂಡ

Neha Murder Case
ಹುಬ್ಬಳ್ಳಿ1 hour ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Lok sabha election-2024
Latest1 hour ago

Lok sabha election-2024: ಶತಾಯುಷಿಗಳೇ ಚುನಾವಣೆಯ ಬ್ರಾಂಡ್​ ಅಂಬಾಸಿಡರ್​ಗಳು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ1 hour ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ21 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20246 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

ಟ್ರೆಂಡಿಂಗ್‌