CM Siddaramaiah : ಮಲೆ ಮಹದೇಶ್ವರನಿಗೆ 700 ಕೆ.ಜಿ. ಬೆಳ್ಳಿ ಕಾಣಿಕೆ ಕೊಟ್ರಾ ಸಿದ್ದರಾಮಯ್ಯ? - Vistara News

ಮೈಸೂರು

CM Siddaramaiah : ಮಲೆ ಮಹದೇಶ್ವರನಿಗೆ 700 ಕೆ.ಜಿ. ಬೆಳ್ಳಿ ಕಾಣಿಕೆ ಕೊಟ್ರಾ ಸಿದ್ದರಾಮಯ್ಯ?

CM Siddaramaiah : ಬಿಜೆಪಿಯವರಿಂದ ಹಿಂದೂ ವಿರೋಧಿ ಎಂಬ ಪಟ್ಟಕ್ಕೆ ಗುರಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರು ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ 700 ಕೆಜಿ ತೂಕದ ಚಿನ್ನಾಭರಣಗಳನ್ನು ನೀಡಿದ್ದಾರೆ ಎಂದಿದ್ದಾರೆ ಮಾಜಿ ಶಾಸಕರೊಬ್ಬರು.

VISTARANEWS.COM


on

CM Siddaramaiah Male Mahadeshwara swami
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮಲೆ ಮಹದೇಶ್ವರ ಸ್ವಾಮಿಗೆ (Male Mahadeshwara Swamy) 700 ಕೆಜಿ ಬೆಳ್ಳಿಯನ್ನು ಕಾಣಿಕೆಯಾಗಿ (Siddaramaiah Gifted 700 KG Silver to Male Mahadeshwara Temple) ಕೊಟ್ಟಿದ್ದಾರಾ? ಬಿಜೆಪಿಯವರು ಧರ್ಮ ವಿರೋಧಿ, ಹಿಂದೂ ವಿರೋಧಿ ಎಂದೆಲ್ಲ ಆಪಾದಿಸುವ ಸಿದ್ದರಾಮಯ್ಯ ಅವರು ಇಷ್ಟೊಂದು ದೊಡ್ಡ ಪ್ರಮಾಣದ ಬೆಳ್ಳಿಯನ್ನು ದೇವಸ್ಥಾನಕ್ಕೆ ಕೊಟ್ಟಿದ್ದಾರಾ?

ಈ ಪ್ರಶ್ನೆ ಹುಟ್ಟಿಕೊಂಡಿರುವುದು ಮಾಜಿ ಶಾಸಕ ಎಚ್‌.ಪಿ. ಮಂಜುನಾಥ್‌ (Former Congress MLA HP Manjunath) ಅವರ ಹೇಳಿಕೆಯ ಬಳಿಕ. ಶನಿವಾರ ಮೈಸೂರಿನಲ್ಲಿ ಕಾಂಗ್ರೆಸ್ ಮಾಧ್ಯಮ ಸಂವಾದ ನಡೆದಿತ್ತು. ಅದರಲ್ಲಿ ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ. ಲಕ್ಷ್ಮಣ್, ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್‌ಗೌಡ, ಮಾಜಿ ಶಾಸಕರಾದ ಎಚ್.ಪಿ.ಮಂಜುನಾಥ್, ಎಂ.ಕೆ.ಸೋಮಶೇಖರ್, ಆಕಾಂಕ್ಷಿಗಳಾಗಿದ್ದ ಡಾ.ಬಿ.ಜೆ.ವಿಜಯಕುಮಾರ್, ಡಾ.ಸುಶೃತ್ ಗೌಡ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಎಚ್‌.ಪಿ ಮಂಜುನಾಥ್‌ ಅವರು, ಸಿಎಂ ಸಿದ್ದರಾಮಯ್ಯ ಅವರು ಮಲೆ ಮಹದೇಶ್ವರನಿಗೆ 700 ಕೆ.ಜಿ. ಬೆಳ್ಳಿ ಗಿಫ್ಟ್ ಕೊಟ್ಟಿದ್ದಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರಿಗೆ ಸಭೆ, ಸಮಾರಂಭಗಳಲ್ಲಿ ಸಾಕಷ್ಟು ಉಡುಗೊರೆ ಬಂದಿತ್ತು. ಬೆಳ್ಳಿ ಗದೆ, ಬೆಳ್ಳಿ ಕತ್ತಿ ಹೀಗೆ ಅನೇಕ ಗಿಫ್ಟ್‌ಗಳು ಸಿಕ್ಕಿದ್ದವು. ಅದೆಲ್ಲವನ್ನೂ ಸಿಎಂ ಮಲೆ ಮಹದೇಶ್ವರ ಬೆಟ್ಟಕ್ಕೆ ಕೊಟ್ಟುಬಿಟ್ಟಿದ್ದಾರೆ. ಹಾಗಂತ ಅದನ್ನು ಪ್ರಚಾರ ಮಾಡಿಕೊಳ್ಳಲಿಲ್ಲ ಎಂದರು,

ಕಾಂಗ್ರೆಸ್‌ನವರು ಹಿಂದೂ ದೇವರ ವಿರೋಧಿಗಳು ಎಂಬಂತೆ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ನಿಜಕ್ಕೂ ನಾವೇ ನಿಜವಾದ ದೈವ ಭಕ್ತರು ಮತ್ತು ಹಿಂದುಗಳು ಎಂದು ಎಚ್‌.ಪಿ. ಮಂಜುನಾಥ್‌ ಹೇಳಿದರು.

ನಾವು ಸೀತಾರಾಮ ಅಂತ ನಮಸ್ಕಾರ ಮಾಡುತ್ತೇವೆ. ಬಿಜೆಪಿಯವರು ಜೈ ಶ್ರೀರಾಮ್ ಅಂತ ಕೂಗುತ್ತಾರೆ. ಯಾವ ರೀತಿ ಭಕ್ತಿ ಬೇಕು ಅಂತ ನಾವು ಡಿಸೈಡ್ ಮಾಡಬೇಕು ಎಂದು ಭಕ್ತಿಯ ವಿಚಾರದಲ್ಲಿ ಹೋಲಿಕೆ ಮಾಡಿದರು.

ಸಾಮಾನ್ಯ ಕಾರ್ಯಕರ್ತರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದೆ ಎಂದ ಶಾಸಕ ತನ್ವೀರ್ ಸೇಠ್

ಮೈಸೂರಿಗೆ ಘೋಷಿಸಿರುವ ಬಿಜೆಪಿ ಅಭ್ಯರ್ಥಿ ಬಗ್ಗೆ ನಾನು ಮಾತನಾಡುವುದಿಲ್ಲ. ಹಾಲಿ ಸಂಸದರಾದ ಪ್ರತಾಪ್ ಸಿಂಹಗೆ ಟಿಕೆಟ್ ಸಿಕ್ಕಿಲ್ಲ. ಅದರ ಬಗ್ಗೆಯೂ ನಾವು ಮಾತನಾಡಲ್ಲ ಎಂದು ಹೇಳಿದ ಶಾಸಕ ತನ್ವೀರ್‌ ಸೇಠ್‌, ಜನರ ಸಮಸ್ಯೆಗೆ ಸ್ಪಂದಿಸಲು ನಮ್ಮ ಅಭ್ಯರ್ಥಿ ಲಭ್ಯವಾಗುತ್ತಾರೆ. ಬಡತನ, ಹಸಿವು ಮುಕ್ತಗೊಳಿಸಲು ರಾಜ್ಯ ಸರ್ಕಾರ ಕೊಟ್ಟಿರುವ ಯೋಜನೆಗಳು ಸಹಕಾರಿ ಆಗಲಿವೆ. ʻʻಪಂಚ ಗ್ಯಾರಂಟಿ ಯೋಜನೆಗಳು ನಮಗೆ ಶ್ರೀರಕ್ಷೆ. ಎಂದರು.

ತಂಬಾಕು ಬೆಳೆಗಾರರ ಸಮಸ್ಯೆ, ಮೈಸೂರಿಗೆ ಅಂತಾರಾಷ್ಟ್ರೀಯ ಮನ್ನಣೆ, ಉದ್ಯೋಗ ಸೃಷ್ಟಿ ನಮ್ಮ ಆದ್ಯತೆ.
ದ್ವೇಷ, ವಿಷ ಬೀಜ ಬಿತ್ತುವುದು ನಮ್ಮ ಕೆಲಸ ಅಲ್ಲ. ಮೌಲ್ಯಾಧಾರಿತ ರಾಜಕಾರಣ ಮಾಡುತ್ತೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.

ಇದನ್ನೂ ಓದಿ : Lok Sabha Election 2024: ಸುಮಲತಾ ಆಗ್ತಾರಾ ರೆಬೆಲ್?;‌ 3 ಕ್ಷೇತ್ರದಲ್ಲೂ ಜೆಡಿಎಸ್‌ಗೆ ಬಂಡಾಯದ ಟ್ರಬಲ್‌!

ಒಕ್ಕಲಿಗರಿಗೆ ಟಿಕೆಟ್‌ ಕೊಟ್ಟಿದ್ದೇವೆ, ಸಮಾಜ ಒಗ್ಗಟ್ಟಾಗಲಿ ಎಂದ ಹರೀಶ್‌ ಗೌಡ

ʻʻಕಾಂಗ್ರೆಸ್ ಪಕ್ಷದಲ್ಲಿ ಒಕ್ಕಲಿಗರಿಗೆ ಮಣೆ ಹಾಕಲ್ಲ ಅಂತ ಆರೋಪ ಮಾಡುತ್ತಿದ್ದರು. ಆದರೆ ಕಾಂಗ್ರೆಸ್ ಪಕ್ಷ ಅತಿ ಹೆಚ್ಚು ಒಕ್ಕಲಿಗ ಸಮಾಜಕ್ಕೆ ಅವಕಾಶ ಕೊಟ್ಟಿದೆ. ನಿಜವೆಂದರೆ ಬಿಜೆಪಿಯಲ್ಲಿ ಒಕ್ಕಲಿಗ ಸಮಾಜಕ್ಕೆ ಪ್ರಾಧಾನ್ಯತೆ ಸಿಗುತ್ತಿಲ್ಲʼʼ ಎಂದು ಹೇಳಿದರು ಶಾಸಕ ಕೆ. ಹರೀಶ್‌ಗೌಡ.

ʻʻ47 ವರ್ಷಗಳ ನಂತರ ಕಾಂಗ್ರೆಸ್ ಪಕ್ಷ ಮೈಸೂರಿನಲ್ಲಿ ಒಕ್ಕಲಿಗ ಅಭ್ಯರ್ಥಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಪಕ್ಷ ಒಕ್ಕಲಿಗ ಸಮಾಜಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡುತ್ತಿದೆ. ನಮ್ಮ ಒಕ್ಕಲಿಗ ಸಮಾಜ ಒಗ್ಗಟ್ಟಿನಿಂದ ಕೆಲಸ ಮಾಡಬೇಕು‌. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆ.ವೆಂಕಟೇಶ್ ಅವರನ್ನು ಮಂತ್ರಿ ಮಾಡಿ ಚಾಮರಾಜನಗರ ಉಸ್ತುವಾರಿ ಮಾಡಿದ್ದಾರೆ. ಮಂಡ್ಯದಲ್ಲಿ ಚಲುವರಾಯಸ್ವಾಮಿಗೆ ಮಂತ್ರಿ ಮಾಡಿ ಮಂಡ್ಯ ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದಾರೆ. ಬೇರೆ ಪಕ್ಷದಲ್ಲಿ ಒಕ್ಕಲಿಗ ಸಮಾಜಕ್ಕೆ ಪ್ರಾಧಾನ್ಯತೆ ನೀಡಿಲ್ಲ ಅನ್ನೋದನ್ನು ಅರ್ಥಮಾಡಿಕೊಳ್ಳಬೇಕು.ʼʼ ಎಂದು ಹರೀಶ್‌ ಗೌಡ ವಿವರಣೆ ನೀಡಿದರು.

ಕೂಲಿ ಮಾಡಿದ್ದೇವೆ, ಸಂಬಳ ಕೊಡಿ ಎಂದ ಅಭ್ಯರ್ಥಿ ಎಂ ಲಕ್ಷ್ಮಣ್‌

ʻʻನಾವು ಕೂಲಿ ಮಾಡಿದ್ದೇವೆ, ಕೂಲಿಗೆ ಸಂಬಳ ಕೇಳುತ್ತೇವೆʼʼ ಎಂದು ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್ ಹೇಳಿದರು.

ʻʻಅಭಿವೃದ್ಧಿಯ ಮೇಲೆ ಜನರ ಬಳಿ ಮತ ಕೇಳುತ್ತೇವೆ. ಕಾಂಗ್ರೆಸ್ ಪಕ್ಷ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಬಂದಿದೆ. ಕಾಂಗ್ರೆಸ್ ಪಕ್ಷದ ಸರ್ಕಾರದ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಪಟ್ಟಿ ಸದ್ಯದಲ್ಲೇ ಬಿಡುಗಡೆ ಮಾಡುತ್ತೇವೆʼʼ ಎಂದು ಹೇಳಿದರು ಲಕ್ಷ್ಮಣ್.

‌ʻʻಕಾಂಗ್ರೆಸ್ ನ ಹಿರಿಯ ಶಾಸಕ ತನ್ವೀರ್ ಸೇಠ್ ಮಾರ್ಗದರ್ಶನದಲ್ಲಿ ನಡೆಯುತ್ತೇನೆ. ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರ ಸಹಕಾರದೊಂದಿಗೆ ಮುಂದೆ ಸಾಗುತ್ತೇನೆʼʼ ಎಂದು ಹೇಳಿದ ಲಕ್ಷ್ಮಣ್‌ ಅವರು, ನನ್ನ ವಿರುದ್ಧ ಯಾವುದೇ ರೀತಿಯ ಗುರುತರ ಆರೋಪಗಳಿಲ್ಲ. ಶಾಸಕರು ಈ ಬಾರಿ ನಮ್ಮ ಅಭ್ಯರ್ಥಿ ಗೆಲ್ಲಿಸಬೇಕೆಂದು ತೀರ್ಮಾನ ಮಾಡಿದ್ದಾರೆ. ನಮ್ಮ ಶಾಸಕರ ಅನುಮತಿಯ ಬಳಿಕವೇ ಕೆಲಸ ಮಾಡುತ್ತೇನೆ. ಅಭ್ಯರ್ಥಿ ಗೆಲುವಿಗೆ ಶಾಸಕರ ಪಾತ್ರ ಮುಖ್ಯʼʼ ಎಂದು ಸಂವಾದದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷಣ್ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

Accident News: ಪ್ರತ್ಯೇಕ ಕಡೆಗಳಲ್ಲಿ ನಡೆದ ಅವಘಡದಲ್ಲಿ ಮೂವರು ಮೃತಪಟ್ಟಿದ್ದಾರೆ. ಮೈಸೂರಲ್ಲಿ ಮಳೆ ಸಹಿತ ಜೋರಾಗಿ ಬೀಸಿದ ಗಾಳಿಗೆ ಕೂಲಿಂಗ್‌ ಶೀಟ್‌ ತಲೆ ಮೇಲೆ ಬಿದ್ದು ವ್ಯಕ್ತಿಯೊಬ್ಬರು ದಾರುಣ ಅಂತ್ಯ ಕಂಡಿದ್ದಾರೆ. ಇತ್ತ ರಾಯಚೂರಲ್ಲಿ ರಣ ಬಿಸಿಲಿಗೆ ಇಬ್ಬರು ಬಲಿಯಾಗಿದ್ದಾರೆ.

VISTARANEWS.COM


on

By

Accident news
Koo

ಮೈಸೂರು/ರಾಯಚೂರು: ನಿನ್ನೆ ಶುಕ್ರವಾರ ಬೀಸಿದ ಬಿರುಗಾಳಿಗೆ ಕೂಲಿಂಗ್‌ ಶೀಟ್‌ ಕಳಚಿ ವ್ಯಕ್ತಿಯೊಬ್ಬರ ತಲೆ ಮೇಲೆ ಬಿದ್ದಿದೆ. ಬಿದ್ದ ರಭಸಕ್ಕೆ ಕುಸಿದು ಬಿದ್ದ ವ್ಯಕ್ತಿ ಸ್ಥಳದಲ್ಲೇ (Accident News) ಮೃತಪಟ್ಟಿದ್ದಾರೆ. ಮೈಸೂರಿನ ಆಲನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಿವಕುಮಾರ್ (34) ಮೃತ ದುರ್ದೈವಿ.

ಮಾರಶೆಟ್ಟಹಳ್ಳಿ ಗ್ರಾಮದ ನಿವಾಸಿಯಾದ ಶಿವಕುಮಾರ್‌ ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ. ಈ ವೇಳೆ ಜೋರಾಗಿ ಬಿರುಗಾಳಿ ಬೀಸಿದ್ದು, ಕೂಲಿಂಗ್ ಶೀಟ್ ನೇರವಾಗಿ ಶಿವಕುಮಾರ್‌ ತಲೆ ಮೇಲೆ ಬಿದ್ದಿದೆ. ಪರಿಣಾಮ ಗಂಭೀರ ಗಾಯಗೊಂಡ ಶಿವಕುಮಾರ್‌ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇಬ್ಬರನ್ನು ಬಲಿ ಪಡೆದ ರಾಯಚೂರು ರಣ ಬಿಸಿಲು

ಒಂದು ಕಡೆ ಬಿರುಗಾಳಿ ಸಹಿತ ಮಳೆ ಮತ್ತೊಂದು ಕಡೆ ರಣ ಬಿಸಿಲಿಗೆ ಜನರು ತತ್ತರಿಸಿ ಹೋಗಿದ್ದಾರೆ. ರಾಯಚೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅತಿಯಾದ ಬಿಸಿಲಿನ ತಾಪಮಾನದಿಂದ ಮಲ್ಲಯ್ಯ ಹಾಗೂ ಆಂಜನೇಯ ಎಂಬುವವರು ಮೃತಪಟ್ಟಿದ್ದಾರೆ.

ರಾಯಚೂರಿನ ಮಸ್ಕಿ ಪಟ್ಟಣದಲ್ಲಿ ಬಿಸಿಲಿನ ತಾಪಕ್ಕೆ ಬಿಎಂಟಿಸಿ ಬಸ್ ಕಂಡಕ್ಟರ್ ಮೃತಪಟ್ಟಿದ್ದಾರೆ. ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದ ಮಲ್ಲಯ್ಯ (45) ಬಿಸಿಲಿನ ತಾಪ ತಾಳಲಾರದೆ ಕುಸಿದು ಬಿದ್ದಿದ್ದು, ಪ್ರಾಣಪಕ್ಷಿ ಹಾರಿ ಹೋಗಿದೆ.

ಮಲ್ಲಯ್ಯ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಮೇಲೆ ಸ್ವಗ್ರಾಮ ಮಸ್ಕಿಯ ಹಸಮಕಲ್‌ಗೆ ಬಂದಿದ್ದರು. ಮಧ್ಯಾಹ್ನ ಮಸ್ಕಿ ಪಟ್ಟಣದಲ್ಲಿ ಕಿರಾಣಿ ಸಾಮಾನು ತರಲು ಬಂದಾಗ ರಸ್ತೆಯಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ. ಆರೋಗ್ಯವಾಗಿದ್ದ ವ್ಯಕ್ತಿ ಬಿಸಿಲತಾಪಕ್ಕೆ ಜೀವಬಿಟ್ಟಿದ್ದಾರೆ.

ಇತ್ತ ರಾಯಚೂರು ತಾಲೂಕಿನ ಜಾಲಿಬೆಂಚಿಯಲ್ಲೂ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಜಾಲಿಬೆಂಚಿಯ ಆಂಜನೇಯ (45) ಮೃತ ದುರ್ದೈವಿ. ಆಂಜನೇಯ ಹೊಲದಿಂದ ಕೆಲಸ ಮುಗಿಸಿ ಮನೆಗೆ ಬರುವಾಗ ಸುಸ್ತಾಗಿ ಬಿದ್ದು ಮೃತಪಟ್ಟಿದ್ದಾರೆ. ನಿತ್ಯ 44-46°C ತಾಪಮಾನ ದಾಖಲಾಗುತ್ತಿದೆ. ಹೀಗಾಗಿ ಅನಾವಶ್ಯಕವಾಗಿ ಹೊರಗೆ ಓಡಾಡದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಮೈಸೂರಿನಲ್ಲಿ ಏಕಾಏಕಿ ಹೊತ್ತಿ ಉರಿದ ಬೈಕ್

ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ನಿನ್ನೆ ಶುಕ್ರವಾರ ಮಧ್ಯಾಹ್ನ ಏಕಾಏಕಿ ಬೈಕ್‌ವೊಂದು ಹೊತ್ತಿ ಉರಿದಿದೆ. ಬಿಸಿಲ ತಾಪಕ್ಕೆ ಇದ್ದಕ್ಕಿದ್ದಂತೆ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್‌ ಯಾರಿಗೂ ಪ್ರಾಣಹಾನಿ ಆಗಿಲ್ಲ.

ಇದನ್ನೂ ಓದಿ: Drama Artist: ಶಕುನಿಯಾಗಿ ಗರ್ಜಿಸುತ್ತಿರುವಾಗಲೇ ಹೃದಯಾಘಾತ; ಮೊಬೈಲ್‌ನಲ್ಲಿ ಸೆರೆಯಾಯ್ತು ಕಲಾವಿದನ ಕೊನೆಯ ಕ್ಷಣ

ರಾಯಚೂರಲ್ಲಿ ಬಿಸಿಲಾಜ್ಞೆ; ಮಧ್ಯಾಹ್ನ 12-4ರ ವರೆಗೆ ಹೊರಬರದಂತೆ ಡಿಸಿ ಕಟ್ಟಾಜ್ಞೆ!

ರಾಯಚೂರು/ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಉರಿ ಬಿಸಿಲು ಜನರನ್ನು ಸುಸ್ತು (Karnataka Weather Forecast) ಮಾಡಿದೆ. ಅದರಲ್ಲೂ ಉತ್ತರ ಕರ್ನಾಟಕದ ಮಂದಿ ಕುಂತರೂ ನಿಂತರೂ ಬೆವರು ಸುರಿಸುವಂತಾಗಿದೆ. ಬಿಸಿಲಿನ ಆಜ್ಞೆಗೆ ಜನರು ಹೊರಬರಲು ಆಗದೆ ಅಘೋಷಿತ ಬಂದ್‌ ನಿರ್ಮಾಣವಾಗಿದೆ. ಸದ್ಯ ಅತಿಯಾದ ಬಿಸಿಲಿಗೆ ತತ್ತರಿಸಿದ ರಾಯಚೂರು ಜನರು ಮಧ್ಯಾಹ್ನ ಹೊರಗೆ ಬಾರದಂತೆ ರಾಯಚೂರು ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.

ಮುಂದಿನ ಒಂದು ವಾರ ಮತ್ತಷ್ಟು ಗರಿಷ್ಠ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ 44 ರಿಂದ 46 ಡಿ.ಸೆ ನಷ್ಟು ತಾಪಮಾನ ದಾಖಲಾಗುತ್ತಿದೆ. ಇದರಿಂದ ಅನಾರೋಗ್ಯ ಸಮಸ್ಯೆ ಜತೆಗೆ ಬಿಸಿಲಾಘಾತಕ್ಕೆ ಸಾವು ಸಂಭವಿಸಬಹುದು. ಹಾಗಾಗಿ ಮಧ್ಯಾಹ್ನ 12 ರಿಂದ 4 ಗಂಟೆವರೆಗೂ ಹೊರಗೆ ಹೋಗದಿರಿ ಎಂದು ಡಿಸಿ ಎಲ್ ಚಂದ್ರಶೇಖರ ನಾಯಕ್ ಸಲಹೆ ನೀಡಿದ್ದಾರೆ. ಹೊರಗೆ ಹೋಗಲೇಬೇಕಾದ ಅವಶ್ಯಕತೆ ಇದ್ದರೆ ಶುದ್ಧ ಕುಡಿಯುವ ನೀರಿನ ಬಾಟಲ್ ಕೊಂಡೊಯ್ಯಿರಿ. ಟೋಪಿ ಅಥವಾ ಛತ್ರಿ ಬಳಸಿ, ಆದಷ್ಟು ನೆರಳಿನ ಪ್ರದೇಶಗಳಲ್ಲಿ ಓಡಾಡಿ. ಬಾಯಾರಿಕೆ ಆಗದಿದ್ದರೂ ಆಗಾಗ ನೀರು ಕುಡಿಬೇಕು. ಯಾವಾಗಲೂ ನಿಮ್ಮ ಬಳಿ ನೀರು ಇಟ್ಟುಕೊಂಡಿರಿ ಎಂದು ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ ನಾಯಕ್ ಸಲಹೆ ನೀಡಿದ್ದಾರೆ. ಹಾಗೆಯೇ ಮನೆ- ಕಚೇರಿಗಳಲ್ಲಿ ಪಕ್ಷಿಗಳಿಗೂ ನೀರನ್ನು ತುಂಬಿ ಇಡಿ ಎಂದಿದ್ದಾರೆ.

karnataka weather forecast

ತುಮಕೂರಲ್ಲಿ ಬಿಸಿ ಗಾಳಿ; ಹಸುಗಳಿಗೆ ತೇವದ ಗೋಣಿಚೀಲದ ಹೊದಿಕೆ

ತುಮಕೂರು ಜಿಲ್ಲೆಯಲ್ಲೂ ಬಿಸಿ ಗಾಳಿಯು ಆತಂಕವನ್ನು ಹೆಚ್ಚಿಸಿದೆ. ಪಾವಗಡ ತಾಲೂಕಿನಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಬಿಸಿಲ ಬೇಗೆಗೆ ಪ್ರಾಣಿ ಪಕ್ಷಿಗಳೂ ಹೈರಾಣಾಗಿವೆ. ಇತ್ತ ರೈತರು ದನ ಕರುಗಳಿಗೆ ಒದ್ದೆ ಮಾಡಿದ ಗೋಣಿಚೀಲ ಹಾಕುತ್ತಿದ್ದಾರೆ. ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ಹಸುಗಳಿಗೆ ತೇವದ ಗೋಣಿಚೀಲದ ಹೊದಿಕೆ ಹಾಕಿ, ತಂಪು ಮಾಡುತ್ತಿದ್ದಾರೆ.

ಬಿಸಿಲಿನ ಹೊಡೆತ- ಚಿಕ್ಕಬಳ್ಳಾಪುರ ಪ್ರವಾಸಿತಾಣ ಖಾಲಿ ಖಾಲಿ

ಇತ್ತ ಚಿಕ್ಕಬಳ್ಳಾಪುರದಲ್ಲೂ ಅತಿಯಾದ ತಾಪಮಾನದಿಂದಾಗಿ ಪ್ರವಾಸಿ ತಾಣಗಳು ಪ್ರವಾಸಿಗರು ಇಲ್ಲದೆ ಬಣಗುಡುತ್ತಿದೆ. ನಂದಿ ಬೆಟ್ಟ, ಈಶಾ ಫೌಂಡೇಶನ್ ಜನರಿಲ್ಲದೆ ಖಾಲಿ ಖಾಲಿಯಾಗಿದೆ. ಬಿಸಿಲಿನ ತಾಪಕ್ಕೆ ಜನರು ಮನೆ ಬಿಟ್ಟು‌ ಕದಲದ ಕಾರಣಕ್ಕೆ ಮಧ್ಯಾಹ್ನ 12 ಗಂಟೆ ಬಳಿಕ ಚಿಕ್ಕಬಳ್ಳಾಪುರದಲ್ಲಿ ಆಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಪ್ರತಿನಿತ್ಯ ಪ್ರವಾಸಿಗರಿಂದ ಗಿಜುಗುಡುತಿದ್ದ ನಂದಿಬೆಟ್ಟ ಖಾಲಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather: ಯೆಲ್ಲೋ ಅಲರ್ಟ್‌; ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ಬೆಂಗಳೂರು (Bengaluru Rains) ಸೇರಿದಂತೆ ಹಲವೆಡೆ ಗುಡುಗು ಸಿಡಿಲು ಸಹಿತ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದ್ದು, ಹೀಟ್‌ ವೇವ್‌ ಅಲರ್ಟ್‌ ನೀಡಲಾಗಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗಬಹುದು. ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ಅಲ್ಲಲ್ಲಿ ಮಳೆಯಾಗಲಿದೆ.

ಗುಡುಗು ಸಹಿತ ಮಳೆಗೆ ಯೆಲ್ಲೋ ಅಲರ್ಟ್

ರಾಮನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯು ಅಬ್ಬರಿಸಲಿದ್ದರೆ, ಇತ್ತ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಪ್ರಮುಖವಾಗಿ ತುಮಕೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ರಾಯಚೂರು ಸೇರಿ ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: Prajwal Revanna Case‌: ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌? ಎಫ್‌ಐಆರ್‌ನಲ್ಲಿದೆ ಇಂಚಿಂಚು ಡಿಟೇಲ್ಸ್!

ಉರಿ ಬಿಸಿಲಿನಲ್ಲಿ ಗಮನ ಸೆಳೆವ ನಟ ಶೈನ್‌ ಶೆಟ್ಟಿಯ ಕೂಲ್‌ ಸ್ಮೈಲ್‌ & ಸ್ಟೈಲ್‌!

ನಟ ಹಾಗೂ ಬಿಗ್‌ಬಾಸ್‌ ಕಂಟೆಸ್ಟಂಟ್‌ ಶೈನ್‌ ಶೆಟ್ಟಿ ಈ ಸಮ್ಮರ್‌ನಲ್ಲಿ (Summer Fashion) ಸಖತ್‌ ಕೂಲ್‌ ಆಗಿ ಕಾಣಿಸಿಕೊಂಡಿದ್ದಾರೆ.ಹೌದು, ಶೈನ್‌ ಶೆಟ್ಟಿಯವರ ಈ ಸೀಸನ್‌ನ ಸ್ಟೈಲ್‌ ಸ್ಟೇಟ್‌ಮೆಂಟ್ಸ್‌ ಯಾವ ಮಟ್ಟಿಗೆ ಪುರುಷರಿಗೆ ಇಷ್ಟವಾಗಿದೆ ಎಂದರೇ, ಇವರ ಫ್ಯಾನ್‌ ಫಾಲೋವಿಂಗ್‌ ಹುಡುಗರು ಮಾತ್ರವಲ್ಲ, ಕಾರ್ಪೋರೇಟ್‌ ಕ್ಷೇತ್ರದ ಹುಡುಗರು ಕೂಡ ಇವರ ಫ್ಯಾಷನ್‌ ಸ್ಟೇಟ್‌ಮೆಂಟ್‌ಗೆ ಮಾರು ಹೋಗಿದ್ದಾರೆ.

Shine Shetty Summer Fashion

ಶೈನ್‌ ಶೆಟ್ಟಿ ನ್ಯಾಚುರಲ್‌ ಲುಕ್‌

“ಶೈನ್‌ ಶೆಟ್ಟಿ ಮೊದಲಿನಿಂದಲೂ ನ್ಯಾಚುರಲ್‌ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇವರು ಮೂಲತಃ ಮಂಗಳೂರಿನವರಾಗಿರುವುದರಿಂದಲೋ ಏನೋ ಬಿಸಿಲಲ್ಲೂ ಆರಾಮಾಗಿ ಕಾಣಿಸಿಕೊಳ್ಳುತ್ತಾರೆ. ಅಲ್ಲದೇ, ತಮ್ಮ ಸಿಂಪಲ್‌ ಸ್ಟೈಲ್‌ ಸ್ಟೇಟ್‌ಮೆಂಟ್‌ನಿಂದಲೇ ಎಲ್ಲರನ್ನು ಸೆಳೆಯುತ್ತಾರೆ. ಹುಡುಗಿಯರು ಮಾತ್ರವಲ್ಲ, ಹುಡುಗರು ಕೂಡ ಇವರ ಲುಕ್‌ಗೆ ಫಿದಾ ಆಗುತ್ತಾರಂತೆ. ತೀರಾ ಫ್ಯಾಷನ್‌ ಕಾನ್ಶಿಯಸ್‌ ಕೂಡ ಅಲ್ಲದ ಇವರ ಪ್ರತಿಯೊಂದು ಫ್ಯಾಷನ್‌ ಸ್ಟೇಟ್‌ಮೆಂಟ್‌ಗಳು ಕೂಡ ಇವರನ್ನು ಸದಾ ನ್ಯಾಚುರಲ್‌ ಲುಕ್‌ನಲ್ಲಿ ಬಿಂಬಿಸುತ್ತವಂತೆ. ಇನ್ನು, ಇವರ ತಿಳಿ ವರ್ಣದ ಸ್ಕಿನ್‌ ಟೋನ್‌ನಿಂದಾಗಿ ಅವರು ಧರಿಸುವ ಎಲ್ಲಾ ಬಗೆಯ ಔಟ್‌ಫಿಟ್ಸ್‌ ಕೂಡ ಇವರಿಗೆ ಮ್ಯಾಚ್‌ ಆಗುತ್ತವಂತೆ. ಎಲ್ಲದಕ್ಕಿಂತ ಹೆಚ್ಚಾಗಿ ಇವರ ಯೂನಿಕ್‌ ಫ್ಯಾಷನ್‌ನಲ್ಲಿ ಸೇರಿರುವ ಸಿಂಪಲ್‌ ಸ್ಮೈಲ್‌ ಇಡೀ ಲುಕ್‌ಗೆ ಸಾಥ್‌ ನೀಡುವುದನ್ನು ಗಮನಿಸಬಹುದು” ಎನ್ನುತ್ತಾರೆ ಫ್ಯಾಷನ್‌ ವಿಮರ್ಶಕರಾದ ಅಮಿತ್‌ ಪಾಂಡ್ಯಾ ಅವರ ಪ್ರಕಾರ, ಕೆಲವು ನಟರು ತಮ್ಮ ನ್ಯಾಚುರಲ್‌ ಲುಕ್‌ನಿಂದಾಗಿಯೇ ಆಕರ್ಷಕವಾಗಿ ಕಾಣಿಸುತ್ತಾರೆ. ಇದು ಅವರ ಪ್ಲಸ್‌ ಪಾಯಿಂಟ್‌ ಎನ್ನುತ್ತಾರೆ.

Shine Shetty Summer Fashion

ಶೈನ್‌ ಶೆಟ್ಟಿ ಸಮ್ಮರ್‌ ಲುಕ್‌ನಲ್ಲಿ ಏನಿದೆ?

ಮನಸ್ಸಿಗೆ ಮುದ ನೀಡುವಂತಹ ಶೇಡ್‌ನ ಔಟ್‌ಫಿಟ್‌! ವೈಟ್‌ ಪ್ಯಾಂಟ್‌ ಕಾಟನ್‌ ಪ್ರಿಂಟೆಡ್‌ ಶರ್ಟ್.‌ ಜೊತೆಗೆ ಅದಕ್ಕೆ ಹೊಂದುವ ಹೇರ್‌ಸ್ಟೈಲ್‌, ಸಿಂಪಲ್‌ ಚಪ್ಪಲಿ ಎಲ್ಲವೂ ಶೈನ್‌ ಸಮ್ಮರ್‌ ಲುಕ್‌ನಲ್ಲಿ ಸೇರಿದೆ. ಸನ್‌ ಗ್ಲಾಸ್‌ ಇವರನ್ನು ಮತ್ತಷ್ಟು ಹ್ಯಾಂಡ್‌ಸಮ್‌ ಆಗಿ ಕಾಣುವಂತೆ ಬಿಂಬಿಸಿದೆ. ಇವರ ಒಟ್ಟಾರೆ ಲುಕ್ಗೆ ಫ್ಯಾಷನ್‌ ಸ್ಟೈಲಿಸ್ಟ್‌ಗಳಾದ ತೇಜಸ್ವಿನಿ ಹಾಗೂ ಖುಷಿಯವರ ಸ್ಟೈಲಿಂಗ್‌ ಸಪೋರ್ಟ್‌ ಇದೆ.

Shine Shetty Summer Fashion

ಶೈನ್‌ ಶೆಟ್ಟಿ ಫ್ಯಾಷನ್‌ ಮಂತ್ರ

ಇನ್ನು, ಕಳೆದ ಬಾರಿ ವಿಸ್ತಾರ ನ್ಯೂಸ್‌ನೊಂದಿಗೆ ತಮ್ಮ ಫ್ಯಾಷನ್‌ ಹಾಗೂ ಸ್ಟೈಲ್‌ಸ್ಟೇಟ್‌ಮೆಂಟ್‌ ಬಗ್ಗೆ ಮಾತನಾಡಿದ್ದ ಶೈನ್‌ ಶೆಟ್ಟಿ, ನಾನಂತೂ ಇದುವೆರಗೂ ಇಂತಹದ್ದೇ ಫ್ಯಾಷನ್‌ ಹಾಗೂ ಸ್ಟೈಲ್‌ ಫಾಲೋಮಾಡಬೇಕೆಂಬ ರೂಲ್ಸ್‌ ಹಾಕಿಕೊಂಡಿಲ್ಲ! ಯಾವುದಾದರೂ ಸರಿಯೇ ನೋಡುಗರಿಗೆ ಪ್ಲೆಸೆಂಟ್‌ ಆಗಿ ಕಾಣಿಸಬೇಕು. ಧರಿಸಿದ ಮನಕ್ಕೂ ಮುದ ನೀಡಬೇಕು. ಸೀಸನ್‌ಗೆ ತಕ್ಕಂತೆ ಉಡುಪುಗಳನ್ನು ಆಯ್ಕೆ ಮಾಡಿ ಧರಿಸಬೇಕು. ಇನ್ನು ಕಲರ್‌ಗಳ ವಿಷಯಕ್ಕೆ ಬಂದಲ್ಲಿ, ನಮ್ಮ ಮುಖಕ್ಕೆ ಹಾಗೂ ಸಿನ್‌ ಟೋನ್‌ಗೆ ಹೊಂದುವಂತಹ ಬಣ್ಣದ ಉಡುಗೆಗಳನ್ನು ಸೆಲೆಕ್ಟ್‌ ಮಾಡುವುದು ಉತ್ತಮ ಎಂದಿದ್ದರು. ಇನ್ನು, ತಾರೆಯರ ಫ್ಯಾಷನ್‌ ಫಾಲೋ ಮಾಡಲು ಬಯಸುವ ಹುಡುಗರು, ಮೊದಲಿಗೆ ತಾವು ಕಾಪಿ ಮಾಡುತ್ತಿರುವ ಸ್ಟೈಲಿಂಗ್‌ ಮ್ಯಾಚ್‌ ಆಗುತ್ತವೆಯೇ! ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಅದನ್ನು ಬಿಟ್ಟು, ಸುಖಸುಮ್ಮನೇ, ಕಂಡ ಕಂಡ ಫ್ಯಾಷನ್‌ ಫಾಲೋ ಮಾಡುವುದಲ್ಲ. ಇಮಿಟೇಟ್‌ ಮಾಡುವಾಗಲು ಅದು ತಮಗೆ ಹೊಂದುತ್ತದೆಯೇ ಎಂಬುದನ್ನು ಅರಿಯಬೇಕು ಎಂದು ಹುಡುಗರಿಗೆ ಸಲಹೆ ನೀಡಿದ್ದರು.

ಹುಡುಗರಿಗೆ ಫ್ಯಾಷನ್‌ ವಿಮರ್ಶಕರ ಟಿಪ್ಸ್‌

ಶೈನ್‌ ಶೆಟ್ಟಿಯಂತೆ ಸಮ್ಮರ್‌ ಫ್ಯಾಷನ್‌ ಫಾಲೋ ಮಾಡುವವರು ಕೆಲವು ವಿಷಯಗಳನ್ನು ಮನದಲ್ಲಿಟ್ಟುಕೊಳ್ಳಬೇಕು.

  • 1. ಲೈಟ್‌ ಶೇಡ್‌ ಆಯ್ಕೆ ಮಾಡಬೇಕು.
  • 2. ಕಾಟನ್‌ ಶರ್ಟ್‌ ಆಯ್ಕೆ ಉತ್ತಮ.
  • 3. ಗಾಳಿಯಾಡುವಂತಹ ಪಾದರಕ್ಷೆಗಳು ಕೂಲ್‌ ಆಗಿರಿಸುತ್ತವೆ.
  • 4. ಸನ್‌ಗ್ಲಾಸ್‌ ಬಿಸಿಲಿನಿಂದ ಕಣ್ಣುಗಳನ್ನು ಸಂರಕ್ಷಿಸುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: ರೇವಣ್ಣ ಮೇಲೆ ಕಿಡ್ನ್ಯಾಪ್‌ ಕೇಸ್;‌ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ, ನಾಳೆ SIT ಮುಂದೆ ಹಾಜರ್‌?

Prajwal Revanna Case: ಈ ವೇಳೆ ಎಚ್.ಡಿ. ರೇವಣ್ಣ ಪರ ವಕೀಲರಾದ ಮೂರ್ತಿ ಡಿ ನಾಯ್ಕ್ ವಾದ ಮಂಡಿಸಿದ್ದು, ಕೆ.ಆರ್. ನಗರ ಠಾಣೆಯ ಎಫ್ಐಆರ್‌ನಲ್ಲಿ ಜಾಮೀನು ರಹಿತ ಸೆಕ್ಷನ್‌ಗಳಿವೆ. 364 A, ಅಪಹರಣ, 364 ಅಕ್ರಮ ಬಂಧನದಡಿ ಕೇಸ್‌ ದಾಖಲು ಮಾಡಲಾಗಿದೆ. ಇವುಗಳು ಜಾಮೀನು ರಹಿತವಾಗಿವೆ ಎಂದು ದೂರಿನ ಸಾರಾಂಶವನ್ನು ಓದಿ ತಿಳಿಸಿದರು. ಅಲ್ಲದೆ, ಈ ದೂರಿನಲ್ಲಿ ಮಹಿಳೆಯ ಹೆಸರನ್ನೇ ಉಲ್ಲೇಖಿಸಿಲ್ಲ. ಇನ್ನು ನಾಳೆ ಎಸ್ಐಟಿ ಮುಂದೆ ಎಚ್.ಡಿ. ರೇವಣ್ಣ ಹಾಜರಾಗಲು ಸಿದ್ಧರಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

VISTARANEWS.COM


on

Prajwal Revanna Case Kidnapping case filed against Revanna Anticipatory bail plea postponed
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರಕ್ಕೆ ಮುಂದೂಡಿದೆ. ಇದೇ ವೇಳೆ ರೇವಣ್ಣ ಶನಿವಾರ ಎಸ್‌ಐಟಿ ಮುಂದೆ ಹಾಜರಾಗಲು ಸಿದ್ಧರಿದ್ದಾರೆ ಎಂದು ಅವರ ಪರ ವಕೀಲರು ಕೋರ್ಟ್‌ಗೆ ತಿಳಿಸಿದ್ದಾರೆ.

ಎರಡನೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ನೋಟಿಸ್‌ ನೀಡಿದೆ. ಬಳಿಕ ವಿಚಾರಣೆಯನ್ನು ಶನಿವಾರಕ್ಕೆ (ಮೇ 4) ಮುಂದೂಡಿದೆ.

ನಾಳೆ ಎಸ್‌ಐಟಿ ಮುಂದೆ ರೇವಣ್ಣ ಹಾಜರ್

ಈ ವೇಳೆ ಎಚ್.ಡಿ. ರೇವಣ್ಣ ಪರ ವಕೀಲರಾದ ಮೂರ್ತಿ ಡಿ ನಾಯ್ಕ್ ವಾದ ಮಂಡಿಸಿದ್ದು, ಕೆ.ಆರ್. ನಗರ ಠಾಣೆಯ ಎಫ್ಐಆರ್‌ನಲ್ಲಿ ಜಾಮೀನು ರಹಿತ ಸೆಕ್ಷನ್‌ಗಳಿವೆ. 364 A, ಅಪಹರಣ, 364 ಅಕ್ರಮ ಬಂಧನದಡಿ ಕೇಸ್‌ ದಾಖಲು ಮಾಡಲಾಗಿದೆ. ಇವುಗಳು ಜಾಮೀನು ರಹಿತವಾಗಿವೆ ಎಂದು ದೂರಿನ ಸಾರಾಂಶವನ್ನು ಓದಿ ತಿಳಿಸಿದರು. ಅಲ್ಲದೆ, ಈ ದೂರಿನಲ್ಲಿ ಮಹಿಳೆಯ ಹೆಸರನ್ನೇ ಉಲ್ಲೇಖಿಸಿಲ್ಲ. ಇನ್ನು ನಾಳೆ ಎಸ್ಐಟಿ ಮುಂದೆ ಎಚ್.ಡಿ. ರೇವಣ್ಣ ಹಾಜರಾಗಲು ಸಿದ್ಧರಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್, ಶನಿವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಯನ್ನು ಮುಂದೂಡಿದ್ದು, ಎಸ್ಐಟಿ ಪರ ಎಸ್‌ಪಿಪಿಗೆ ಕೋರ್ಟ್ ನೋಟಿಸ್ ನೀಡಿದ್ದಾರೆ.

ದೇಶ ಬಿಟ್ಟು ಹೋಗಲು ಸಜ್ಜಾದರೇ ಎಚ್.ಡಿ. ರೇವಣ್ಣ? ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ SIT!

ಎಚ್‌.ಡಿ. ರೇವಣ್ಣ (HD Revanna) ವಿರುದ್ಧವೂ ಈಗ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ.

ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

ಏನಿದು ಲುಕ್ ಔಟ್ ನೋಟಿಸ್? ಜಾರಿ ಅಧಿಕಾರ ಯಾರಿಗೆ? ಇದಕ್ಕೂ ತಡೆ ತರಬಹುದಾ?

ಲುಕ್‌ಔಟ್ ನೋಟಿಸ್‌ಗಳನ್ನು ಲುಕ್‌ಔಟ್ ಸರ್ಕ್ಯುಲರ್‌ಗಳು (LOC) ಎಂದೂ ಕರೆಯಲಾಗುತ್ತದೆ. ತಲೆಮರೆಸಿಕೊಂಡಿರುವ ಅಪರಾಧಿಗಳನ್ನು ಪತ್ತೆಹಚ್ಚಲು ಇವುಗಳನ್ನು ಇಶ್ಯೂ ಮಾಡಲಾಗುತ್ತದೆ. ಇದನ್ನು ದೇಶದ ವಲಸೆ ಬ್ಯೂರೋ (Bureau of Immigration) ಹಾಗೂ ಗೃಹ ಸಚಿವಾಲಯ (MHA) ಮಾತ್ರ ನೀಡಬಹುದು. ವಿಮಾನ ನಿಲ್ದಾಣ (Airport) ಮತ್ತಿತರ ಸಂಚಾರ ಪಾಯಿಂಟ್‌ಗಳಲ್ಲಿ ಕಾನೂನು ಜಾರಿ ಅಧಿಕಾರಿಗಳಿಗೆ ಅಗತ್ಯವಿರುವ ವ್ಯಕ್ತಿಗಳ ಪ್ರವೇಶ ಮತ್ತು ನಿರ್ಗಮನದ ಮೇಲೆ ನಿಗಾ ಇಡಲು, ಪರಿಣಾಮಕಾರಿಯಾಗಿ ತಡೆಗಟ್ಟಲು ಇದನ್ನು ಹೊರಡಿಸಲಾಗುತ್ತದೆ.

ಒಂದು ದೇಶದ ವಲಸೆ ಅಧಿಕಾರಿಗಳು ಯಾವುದೇ ತಲೆಮರೆಸಿಕೊಂಡಿರುವ ಅಪರಾಧಿಯ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಿದರೆ, ಆ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಬಹುದು. ಅಪರಾಧಿಗಳು ಇದರಿಂದಾಗಿ ವಿಮಾನ ನಿಲ್ದಾಣ ಅಥವಾ ಬಂದರಿನಲ್ಲಿ ಸಿಕ್ಕಿಬಿದ್ದಿರುವ ಸುದ್ದಿಯನ್ನು ನಾವು ಆಗಾಗ ಕೇಳುತ್ತಿರುತ್ತೇವೆ.

ಮಾರ್ಗಸೂಚಿಗಳು

ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಈ ಸರ್ಕ್ಯುಲರ್‌ಗಳ ಮೂಲ ಮಾರ್ಗಸೂಚಿಗಳನ್ನು ಗೃಹ ವ್ಯವಹಾರಗಳ ಸಚಿವಾಲಯ (MHA) ಹೊರಡಿಸಿದೆ. ಈ ಮಾರ್ಗಸೂಚಿಗಳು ಹೀಗಿವೆ:

1) LOC ನೀಡುವ ವಿನಂತಿಯನ್ನು ಭಾರತ ಸರ್ಕಾರದ ಉಪ ಕಾರ್ಯದರ್ಶಿ, ರಾಜ್ಯ ಸರ್ಕಾರದ ಜಂಟಿ ಕಾರ್ಯದರ್ಶಿ, ಜಿಲ್ಲಾ ಮಟ್ಟದಲ್ಲಿ ಸಂಬಂಧಿಸಿದ ಪೊಲೀಸ್ ವರಿಷ್ಠಾಧಿಕಾರಿಗಳ ಶ್ರೇಣಿಯ ಅಧಿಕಾರಿಗಳು ಮಾತ್ರ ಮಾಡಬಹುದು.

2) ಯಾವುದೇ ಭಾರತೀಯ ವ್ಯಕ್ತಿಯ ವಿರುದ್ಧ ಎಲ್ಲಾ ವಲಸೆ ಚೆಕ್‌ಪೋಸ್ಟ್‌ಗಳಿಗೆ ಲುಕ್‌ಔಟ್ ನೋಟೀಸ್ ಅನ್ನು ಗೃಹ ಸಚಿವಾಲಯ ಸಿದ್ಧಪಡಿಸಿದ ಸ್ವರೂಪದಲ್ಲಿ ಮಾತ್ರ ನೀಡಬಹುದು.

3) ನೋಟಿಸ್ ನೀಡುವ ಏಜೆನ್ಸಿಯು ಆರೋಪಿಯ ಸಂಪೂರ್ಣ ಗುರುತಿನ ವಿವರಗಳನ್ನು ನಿಗದಿತ ನಮೂನೆಯಲ್ಲಿ ನೀಡಬೇಕು. ಆರೋಪಿಯ ಹೆಸರನ್ನು ಹೊರತುಪಡಿಸಿ ಮೂರಕ್ಕಿಂತ ಕಡಿಮೆ ಗುರುತಿನ ಮಾನದಂಡಗಳಿದ್ದಲ್ಲಿ LOC ನೀಡಲಾಗುವುದಿಲ್ಲ.

4) ಸಾಮಾನ್ಯವಾಗಿ ಲುಕ್‌ಔಟ್ ನೋಟೀಸ್ ವಿತರಣೆಯ ದಿನಾಂಕದಿಂದ ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ. ಏಜೆನ್ಸಿಯು ಈ ಸೂಚನೆಯ ಅವಧಿಯನ್ನು ಹೆಚ್ಚಿಸಲು ಬಯಸಿದರೆ, ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮಾಡಬಹುದು. ಒಂದು ವರ್ಷದ ನಿಗದಿತ ಅವಧಿಯೊಳಗೆ LOCಯನ್ನು ವಿಸ್ತರಿಸಲು ಯಾವುದೇ ವಿನಂತಿ ಮಾಡದಿದ್ದರೆ, LOC ಅನ್ನು ಅಮಾನತುಗೊಳಿಸಲು ಸಂಬಂಧಿಸಿದ ವಲಸೆ ಅಧಿಕಾರಿಗೆ ಅಧಿಕಾರವಿದೆ.

ಕೋರ್ಟ್ ಮತ್ತು ಇಂಟರ್‌ಪೋಲ್‌ನಿಂದ ಲುಕ್‌ಔಟ್ ನೋಟಿಸ್‌ಗಳನ್ನು ನೀಡಿದರೆ, ಲುಕ್‌ಔಟ್ ನೋಟೀಸ್‌ಗಳು ಒಂದು ವರ್ಷದೊಳಗೆ ಮುಕ್ತಾಯಗೊಳ್ಳುವುದಿಲ್ಲ.

ಲುಕ್‌ಔಟ್ ನೋಟಿಸ್‌ನ ದುರ್ಬಳಕೆ

ಹಲವು ಪ್ರಕರಣಗಳಲ್ಲಿ ಲುಕ್‌ಔಟ್‌ ನೋಟಿಸ್‌ ದುರ್ಬಳಕೆಯಾಗಿದೆ. ಯಾರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದೆಯೋ ಅವರಿಗೂ ಲುಕ್‌ಔಟ್ ನೋಟಿಸ್ ಬಗ್ಗೆ ಕೆಲವೊಮ್ಮ ತಿಳಿದಿರುವುದಿಲ್ಲ. ವ್ಯಕ್ತಿ ತನ್ನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವುದನ್ನು ನಿರೀಕ್ಷಿಸದೇ ಇರಬಹುದು. ವಿಮಾನ ನಿಲ್ದಾಣ/ಗಡಿ ಇತ್ಯಾದಿಗಳಲ್ಲಿ ವಲಸೆ ಅಧಿಕಾರಿಗಳು ತಡೆದಾಗ ಅಥವಾ ಬಂಧಿಸಿದಾಗ ಮಾತ್ರ ಆರೋಪಿಗೆ ತಿಳಿಯುತ್ತದೆ.

ಆದರೆ ಮಾಹಿತಿ ತಂತ್ರಜ್ಞಾನ ಕ್ರಾಂತಿಯ ಯುಗದಲ್ಲಿ ಹೀಗಾಗದು. ಕೆಲವೊಮ್ಮೆ ಲುಕ್‌ಔಟ್ ನೋಟಿಸ್‌ಗಳನ್ನು ಎಲ್ಲಾ ನಿಯಮಗಳ ಪಾಲನೆಯಾಗದೆ ನೀಡಲಾಗುತ್ತದೆ. ಈ ಪ್ರಕರಣಗಳು ಶಂಕಿತ ವ್ಯಕ್ತಿಗಳು, ದೇಶ ವಿರೋಧಿ ಅಂಶಗಳು ಇತ್ಯಾದಿಗಳೊಂದಿಗೆ ಸಂಬಂಧ ಹೊಂದಿವೆ. ಇಂತಹ ಪ್ರಕರಣಗಳಿಂದ ಬಾಧಿತರಾದ ಯಾವುದೇ ವ್ಯಕ್ತಿ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಪರಿಹಾರ ಪಡೆಯಲು ಮಾನವ ಹಕ್ಕುಗಳ ಆಯೋಗ ಅಥವಾ ಹೈಕೋರ್ಟ್‌ಗಳನ್ನು ಸಂಪರ್ಕಿಸಬಹುದು. ಆದರೆ ಈ ಪ್ರಕ್ರಿಯೆ ಹಲವು ವರ್ಷಗಳನ್ನು ತೆಗೆದುಕೊಳ್ಳಬಹುದು ಮತ್ತು ತುಂಬಾ ದುಬಾರಿಯಾಗಬಹುದು.

ಇದನ್ನೂ ಓದಿ: Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

ಲುಕ್‌ಔಟ್ ನೋಟಿಸ್‌ಗಳು ಅಪರಾಧಿಗಳಲ್ಲಿ ಭಯವನ್ನು ಉಂಟುಮಾಡುತ್ತವೆಯೇ? ಅನೇಕ ಪ್ರಕರಣಗಳಲ್ಲಿ ಅನೇಕ ಅಪರಾಧಿಗಳು ಮತ್ತು ಆರೋಪಿಗಳು ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಅವರ ವಿರುದ್ಧ ಭಾರತದಲ್ಲಿ ಲುಕ್‌ಔಟ್ ನೋಟಿಸ್‌ಗಳನ್ನು ಹೊರಡಿಸಲಾಗಿದೆ. ಆದರೆ ಇದರಿಂದ ಅವರು ವಿಚಲಿತರಾದಂತಿಲ್ಲ. ಇಲ್ಲಿಯವರೆಗೆ ಎಷ್ಟು ಲುಕ್‌ಔಟ್ ನೋಟಿಸ್‌ಗಳನ್ನು ನೀಡಲಾಗಿದೆ ಎಂಬುದಕ್ಕೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ.

Continue Reading

ಕರ್ನಾಟಕ

Prajwal Revanna Case: ರೇವಣ್ಣ ಮನೆ ಕೆಲಸದ ಮಹಿಳೆ ಕಿಡ್ನ್ಯಾಪ್‌ ಕೇಸ್; 2ನೇ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

Prajwal Revanna Case: ಎಚ್‌.ಡಿ. ರೇವಣ್ಣ ಮನೆ ಕೆಲಸದ ಮಹಿಳೆ ಅಪಹರಣ ಪ್ರಕರಣದ 2ನೇ ಆರೋಪಿ ಸತೀಶ್‌ ಬಾಬುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

VISTARANEWS.COM


on

Prajwal Revanna Case
Koo

ಮೈಸೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣ (Prajwal Revanna Case) ದೇಶಾದ್ಯಂತ ಸದ್ದು ಮಾಡುತ್ತಿರುವ ನಡುವೆ ದಾಖಲಾಗಿದ್ದ ಎಚ್‌.ಡಿ.ರೇವಣ್ಣ ಮನೆ ಕೆಲಸದ ಮಹಿಳೆ ಅಪಹರಣ ಪ್ರಕರಣದಲ್ಲಿ 2ನೇ ಆರೋಪಿ ಸತೀಶ್‌ ಬಾಬುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ತಾಯಿಯನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ರೇವಣ್ಣ ಮನೆ ಕೆಲಸದ ಮಹಿಳೆಯ ಪುತ್ರ ಕೆ.ಆರ್‌.ನಗರ ಠಾಣೆಗ ದೂರು ನೀಡಿದ್ದರು. ಪ್ರಜ್ವಲ್ ರೇವಣ್ಣ ಅವರಿಂದ ನನ್ನ ತಾಯಿ ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟಿದ್ದರು.‌ ಈ ಸಂಬಂಧ ಫೋಟೊಗಳು ಬಹಿರಂಗ ಆಗಿದ್ದವು. ಬಳಿಕ ನನ್ನ ತಾಯಿ ನಾಪತ್ತೆ ಆಗಿದ್ದಾರೆ. ಎ1 ಶಾಸಕ ಎಚ್.ಡಿ.ರೇವಣ್ಣ ಹಾಗೂ ಎ2 ಸತೀಶ್‌ ಬಾಬು ಅಪಹರಣ ಮಾಡಿಸಿದ್ದಾರೆ ಎಂದು ದೂರು ನೀಡಲಾಗಿತ್ತು.

ಮನೆಗೆಲಸದಾಕೆ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಶಾಸಕ ಎಚ್‌.ಡಿ.ರೇವಣ್ಣ ಸಲಹೆ ಮೇರೆಗೆ ಮಹಿಳೆಯನ್ನು ಸತೀಶ್‌ ಬಾಬು ಅಪಹರಣ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ರೇವಣ್ಣ ಮನೆ ಕೆಲಸದ ಮಹಿಳೆಯ ಪುತ್ರ ನೀಡಿದ ದೂರಿನ ಮೇರೆಗೆ ಕಿಡ್ನ್ಯಾಪ್‌ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ | Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

ದೂರಿನ ಹಿನ್ನೆಲೆಯಲ್ಲಿ ಪ್ರಕರಣದ ಎರಡನೇ ಆರೋಪಿ ಸತೀಶ್‌ ಬಾಬು ಅವರನ್ನು ನೆನ್ನೆ ರಾತ್ರಿಯೇ ಪೊಲೀಸರು ಬಂಧಿಸಿದ್ದರು. ಇದೀಗ ಅವರನ್ನು ಕೆ.ಆರ್‌.ನಗರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು? ಎಸ್‌ಐಟಿಗೆ ಸಾಕ್ಷಿ ಕೊಟ್ಟ ದೇವರಾಜೇಗೌಡ!

Prajwal Revanna Case Who leaked the pen drive Devaraje Gowda gives evidence to SIT

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಎಸ್‌ಐಟಿ ಮುಂದೆ ಹಾಜರಾಗಿ ಕೆಲವು ಮಹತ್ವದ ದಾಖಲೆಗಳನ್ನು ನೀಡಿದ್ದಾರೆ ಎನ್ನಲಾಗಿದೆ. ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು ಎಂಬ ಬಗ್ಗೆಯೂ ಹೇಳಿಕೆ ನೀಡಿದ್ದೇನೆ. ಇದನ್ನು ಇಲ್ಲಿ ಹೇಳಲಾಗುವುದಿಲ್ಲ. ಆದರೆ, ಇನ್ನೊಂದು ವಾರದಲ್ಲಿ ಎಲ್ಲವೂ ಹೊರಗೆ ಬರಲಿದೆ ಎಂದು ಹೇಳಿದ್ದಾರೆ.

ಎಸ್‌ಐಟಿ ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ವಕೀಲ ದೇವರಾಜೇಗೌಡ, ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ಗುರುವಾರ ನೋಟಿಸ್‌ ನೀಡಿದ್ದರು. ಅದರಂತೆ ಇಂದು ಹಾಜರಾಗಿ ನಾನು ಎಲ್ಲ ಸಂಗತಿಗಳನ್ನು ಹೇಳಿದ್ದೇನೆ. ಈ ವಿಡಿಯೊಗಳನ್ನು ವೈರಲ್ ಮಾಡಿದವರು ಯಾರು ಎನ್ನುವ ಮಾಹಿತಿ ನನಗೆ ಗೊತ್ತಿದೆ. ಅದನ್ನು ಎಸ್‌ಐಟಿ ಅಧಿಕಾರಿಗಳಿಗೆ ಹೇಳಿದ್ದೇನೆ. ಯಾರು ಎಂಬುದನ್ನು ನಾನು ಇಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.

ಎಚ್‌ಡಿಕೆಯಿಂದ ಮಹತ್ವದ ನಿರ್ಧಾರ

ಹಾಸನದಲ್ಲಿ ಒಕ್ಕಲಿಗ ನಾಯಕತ್ವಕ್ಕೆ ಇಷ್ಟೆಲ್ಲ ಆಗುತ್ತಲಿದೆ. ಮುಂದಿನ ಒಂದು ವಾರದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮಹತ್ವದ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಆಗ ಎಲ್ಲವನ್ನೂ ಪ್ರಕಟಿಸುವವರಿದ್ದಾರೆ. ಯಾರು ವಿಡಿಯೊಗಳನ್ನು ಬಿಡುಗಡೆ ಮಾಡಿದ್ದಾರೋ ಆ ಎಲ್ಲವೂ ಒಂದು ವಾರದಲ್ಲಿ ಹೊರಗೆ ಬರತ್ತದೆ ಎಂದು ದೇವರಾಜೇಗೌಡ ತಿಳಿಸಿದರು.

ನನ್ನ ಬಳಿ ಇದ್ದ ಎಲ್ಲ ಸಾಕ್ಷಿಗಳನ್ನು ನೀಡಿದ್ದೇನೆ. ನಿನ್ನೆ ನನ್ನನ್ನು ಸಾಕ್ಷಿಯಾಗಿ ಮಾಡಿಕೊಂಡಿದ್ದಾರೆ. ಸರ್ಕಾರ ಮತ್ತು ಎಸ್‌ಐಟಿ ಅಧಿಕಾರಿಗಳು ತೀವ್ರ ಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ದೇವರಾಜೇಗೌಡ ಹೇಳಿದರು.
ರಾಜಕೀಯಕ್ಕಾಗಿಯೇ ಇದೆಲ್ಲ ನಡೆಯುತ್ತಿದೆ.

ಇದನ್ನೂ ಓದಿ | Prajwal Revanna Case: ಪ್ರಜ್ವಲ್ ದುಬೈ ಅಲ್ಲ, ಎಲ್ಲಿ ಎಸ್ಕೇಪ್‌ ಆದ್ರೂ ಅಲ್ಲಿಂದ್ಲೇ ಹಿಡಿದುಕೊಂಡು ಬರುತ್ತೇವೆ: ಸಿಎಂ ಸಿದ್ದರಾಮಯ್ಯ

ಈ ಎಲ್ಲ ಬೆಳವಣಿಗೆಗಳು ರಾಜಕೀಯ ಕುತಂತ್ರದಿಂದ ನಡೆದಿದೆಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ದೇವರಾಜೇಗೌಡ, ಇದೆಲ್ಲ ನಡೆಯುತ್ತಿರುವುದೇ ರಾಜಕೀಯವಾಗಿ. ಎಲ್ಲ ದಿಕ್ಕಿನಲ್ಲಿಯೂ ತನಿಖೆ ನಡೆಸುತ್ತಿರುವುದು ಖುಷಿಯನ್ನು ತಂದಿದೆ. ಯಾರೂ ಈ ತನಿಖೆಯಿಂದ ತಪ್ಪಿಸಿಕೊಳ್ಳುತ್ತಾರೆ ಎಂದು ಅನ್ನಿಸುತ್ತಿಲ್ಲ ಎಂದು ಹೇಳಿದರು.

Continue Reading
Advertisement
IPL 2024
ಕ್ರೀಡೆ6 mins ago

IPL 2024: ಕೆಎಸ್‌ಸಿಎಗೆ ಮತ್ತೆ ಸಂಕಷ್ಟ; ಚಿನ್ನಸ್ವಾಮಿ ಸ್ಟೇಡಿಯಂನ ಎಲ್ಲ ನೀರಿನ ಮೂಲದ ವಿವರ ಕೇಳಿದ ಎನ್‌ಜಿಟಿ!

Amith Shah
ದೇಶ16 mins ago

Amit Shah: ಕಾಂಗ್ರೆಸ್ ಹಿಂದುಳಿದ, ಪರಿಶಿಷ್ಟರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಿದೆ; ನಾವು ತೆಗೆದುಹಾಕುತ್ತೇವೆ: ಅಮಿತ್ ಶಾ

Bribery Case in Bengaluru news
ಬೆಂಗಳೂರು18 mins ago

Bribery Case : ಕಾಸಿನ ಜತೆಗೆ ಎಣ್ಣೆ ಕೊಟ್ರಷ್ಟೇ ಫೈಲ್‌ ಮೂಮ್ಮೆಂಟ್‌ ; ಇದು ಕುಡುಕ ಪಂಚಾಯಿತಿ ಪಿಡಿಓ ಲಂಚಾವತಾರ

HD Deve gowda prajwal revanna case
ಬೆಂಗಳೂರು22 mins ago

Prajwal Revanna Case: ಮೊಮ್ಮಗನ ದೆಸೆಯಿಂದ ದೇವೇಗೌಡರ ಆರೋಗ್ಯ ಏರುಪೇರು, ಕುಟುಂಬದಿಂದ ತೀವ್ರ ನಿಗಾ

MP High Court
ದೇಶ29 mins ago

MP High Court: ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ; ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್‌

Aishwarya Rajinikanth new house priceless reaction Rajinikanth
ಕಾಲಿವುಡ್35 mins ago

Aishwarya Rajinikanth: ಮಗಳ ಹೊಸ ಮನೆ ಕಂಡು ಹುಬ್ಬೇರಿಸಿದ ರಜನಿಕಾಂತ್!

Josh Baker
ಕ್ರೀಡೆ37 mins ago

Josh Baker: 6 ವಿಕೆಟ್‌ ಪಡೆದು ಸ್ನೇಹಿತನ ಮನೆಯಲ್ಲಿ ಶವವಾಗಿ ಪತ್ತೆಯಾದ ಇಂಗ್ಲೆಂಡ್ ಕ್ರಿಕೆಟಿಗ

International Firefighters Day 2024
ಪ್ರಮುಖ ಸುದ್ದಿ53 mins ago

International Firefighters Day 2024: ಇಂದು ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನ; ಜೀವ ರಕ್ಷಕರಿಗೊಂದು ಸಲಾಂ

Nijjar Killling
ವಿದೇಶ55 mins ago

Nijjar Killing: ನಿಜ್ಜರ್‌ ಹಂತಕರ ಫೊಟೋ ರಿಲೀಸ್‌; ಭಾರತದತ್ತ ಮತ್ತೆ ಬೊಟ್ಟು ಮಾಡಿದ ಕೆನಡಾ

Vettaiyan Movie Rajinikanth And Amitabh Bachchan Poses Together
ಸಿನಿಮಾ57 mins ago

Vettaiyan Movie: ಸೂಟು ಬೂಟು ಹಾಕಿಕೊಂಡು ಸ್ಟೈಲಿಶ್‌ ಆಗಿ ಪೋಸ್‌ ಕೊಟ್ಟ ರಜನಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ20 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌