Site icon Vistara News

Lok Sabha Election 2024: ಡಿ.ಕೆ. ಸುರೇಶ್ ಗೆಲುವಿಗಾಗಿ ಚಾಮುಂಡಿ ಬೆಟ್ಟ ಹತ್ತಿ ಪ್ರಾರ್ಥಿಸಿದ ಅಭಿಮಾನಿಗಳು

Bangalore Rural Lok Sabha Constituency Congress candidate DK Suresh fans prayed in sri Chamundeshwari hill

ಮೈಸೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ (Lok Sabha Election 2024) ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಗೆಲುವು ಸಾಧಿಸಲಿ ಎಂದು ಅವರ ಅಭಿಮಾನಿಗಳು ಚಾಮುಂಡೇಶ್ವರಿ ಬೆಟ್ಟದ ಮೆಟ್ಟಿಲು ಹತ್ತಿ ಪ್ರಾರ್ಥನೆ ಸಲ್ಲಿಸಿದರು.

ಡಿ.ಕೆ. ಬ್ರದರ್ಸ್ ಅಭಿಮಾನಿ ಬಳಗದ ಸುಮಾರು 300 ಸದಸ್ಯರು ಗುರುವಾರ ಬೆಳಗ್ಗೆ ಮೈಸೂರಿನಲ್ಲಿ ಶ್ರೀ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಆ ಮೂಲಕ ಡಿ.ಕೆ ಸುರೇಶ್ ಅವರು ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸಬೇಕು, ರಾಜ್ಯದ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಬೇಕು ಎಂದು ಪ್ರಾರ್ಥಿಸಿದರು.

ಇದನ್ನೂ ಓದಿ: LSG vs CSK: ಗೆಲುವಿನ ಹಳಿ ಏರೀತೇ ಲಕ್ನೋ?; ಚೆನ್ನೈ ಎದುರಾಳಿ

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಾದಯಾತ್ರಿಗಳು. ಡಿ.ಕೆ. ಸುರೇಶ್ ಅವರು ಮತ್ತೊಮ್ಮೆ ಸಂಸದರಾಗಿ ಆಯ್ಕೆಯಾಗಬೇಕು ಎಂದು ಸಣ್ಣ ಮಕ್ಕಳಿಂದ ದೊಡ್ಡವರವರೆಗೂ ಎಲ್ಲರೂ ಹರಕೆ ಹೊತ್ತು ಬಂದಿದ್ದೇವೆ. ನಮ್ಮಂತಹ ಗದ್ದೆ, ಹೊಲ ಇಲ್ಲದವರಿಗೆ ಪ್ರತಿ ತಿಂಗಳು ಕಾಂಗ್ರೆಸ್ ಸರ್ಕಾರ 2 ಸಾವಿರ ರೂ. ನೀಡುತ್ತಿದೆ. ಜತೆಗೆ ಅನ್ನಭಾಗ್ಯ ಯೋಜನೆ ಮೂಲಕ ಅಕ್ಕಿ ನೀಡುತ್ತಿದ್ದಾರೆ. ಇದರಿಂದ ನಮ್ಮ ಸಂಸಾರವನ್ನು ನಡೆಸಲು ಸಹಾಯವಾಗುತ್ತಿದೆ. ಸರ್ಕಾರದ ಈ ಯೋಜನೆಗಳು ನಮಗೆ ಅನುಕೂಲವಾಗಿವೆ. ಈ ಯೋಜನೆಗಳಿಂದ ರಾಜ್ಯಕ್ಕೆ ಯಾವುದೇ ತೊಂದರೆ ಇಲ್ಲ. ಬಿಜೆಪಿ ನಮ್ಮಂತಹ ಬಡವರಿಗಾಗಿ ಏನು ಮಾಡಿದೆ?

ಇದನ್ನೂ ಓದಿ: Navya Naveli Nanda: ಆರಾಧ್ಯ ಬಚ್ಚನ್‌ ನನಗಿಂತ ಹೆಚ್ಚು ಬುದ್ಧಿವಂತೆ ಎಂದ ಶ್ವೇತಾ ಬಚ್ಚನ್ ಮಗಳು!

ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಶಕ್ತಿ ತುಂಬುವಂತಹ ಕಾರ್ಯಕ್ರಮವನ್ನು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಉಚಿತ ಬಸ್ ವ್ಯವಸ್ಥೆ, 2 ಸಾವಿರ ಹಣ, ಉಚಿತ ವಿದ್ಯುತ್ ಸೌಕರ್ಯ, ಅನ್ನಭಾಗ್ಯ ಯೋಜನೆ ಎಲ್ಲವನ್ನು ಜಾರಿ ಮಾಡಿದ್ದಾರೆ. ಆ ಮೂಲಕ ನುಡಿದಂತೆ ನಡೆದಿದೆ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಕು ಎಂದು ನಾವು ಮನವಿ ಮಾಡುತ್ತೇವೆ ಎಂದು ತಿಳಿಸಿದರು.

Exit mobile version