Lok Sabha Election 2024: ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ: ವಿಜಯೇಂದ್ರ - Vistara News

ಮೈಸೂರು

Lok Sabha Election 2024: ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ: ವಿಜಯೇಂದ್ರ

Lok Sabha Election 2024: ಏ. 14ರಂದು ಸಂಜೆ 4 ಗಂಟೆಗೆ ಮೈಸೂರಿನ ಮಹಾರಾಜರ ಮೈದಾನದಲ್ಲಿ ನಡೆಯಲಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

VISTARANEWS.COM


on

BJP state president B Y Vijayendra latest statement in mysore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಏ. 14ರಂದು ಮೈಸೂರಿನ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (Lok Sabha Election 2024) ತಿಳಿಸಿದರು.

ಮೈಸೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ, ಮಂಡ್ಯ, ಚಾಮರಾಜನಗರ ಕ್ಷೇತ್ರವನ್ನು ಒಳಗೊಂಡ ಬೃಹತ್‌ ಚುನಾವಣಾ ಪ್ರಚಾರ ಸಭೆಯನ್ನು ಏ. 14ರಂದು ಸಂಜೆ 4 ಗಂಟೆಗೆ ಮೈಸೂರಿನ ಮಹಾರಾಜರ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ: Kodagu News: ಕಾವೇರಿ ತವರು ಕೊಡಗಿನಲ್ಲಿ ವರುಣನ ಕೃಪೆಗಾಗಿ ದೇವರ ಮೊರೆ ಹೋದ ಜನತೆ

ವಿಶ್ವ ಮೆಚ್ಚಿದ ನಾಯಕ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸುತ್ತಿದ್ದು, ಈ ಭಾಗದ ಲೋಕಸಭಾ ಕ್ಷೇತ್ರಗಳಲ್ಲಿ ದೊಡ್ಡ ಶಕ್ತಿ ತಂದುಕೊಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಮಾಜಿ ಮುಖ್ಯಮಂತ್ರಿ ಮತ್ತು ಮಂಡ್ಯದ ಎನ್‍ಡಿಎ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ- ಜೆಡಿಎಸ್ ಹಿರಿಯ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಈಗಾಗಲೇ 3 ಕ್ಷೇತ್ರಗಳಲ್ಲಿ ಎನ್‍ಡಿಎ ಪರ ಅಲೆ ಇದೆ. ಪ್ರಧಾನಿಯವರ ಭೇಟಿಯಿಂದ ದೊಡ್ಡ ಅಂತರದ ಗೆಲುವು ನಮ್ಮದಾಗಲಿದೆ ಎಂದು ತಿಳಿಸಿದರು. ಬಿಜೆಪಿ- ಜೆಡಿಎಸ್ ಪಕ್ಷಗಳ ಲಕ್ಷಾಂತರ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪಾದಸ್ವಾಮಿ ಅವರು ಮೋದಿಯವರ ನಾಯಕತ್ವಕ್ಕೆ ಮೆಚ್ಚುಗೆ ಸೂಚಿಸಿ ಅವರನ್ನು ಬೆಂಬಲಿಸಿ, ಯಾವುದೇ ಷರತ್ತು ಇಲ್ಲದೆ ಬಿಜೆಪಿ ಸೇರಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Candidates Chess: ಪ್ರಜ್ಞಾನಂದ, ವಿದಿತ್​ಗೆ ಗೆಲುವು; ವೈಶಾಲಿ, ಹಂಪಿಗೆ ಸೋಲು

ಈ ವೇಳೆ ನಗರ ಜಿಲ್ಲಾಧ್ಯಕ್ಷ ನಾಗೇಂದ್ರ, ಗ್ರಾಮಾಂತರ ಜಿಲ್ಲಾಧ್ಯಕ್ಷ ಎಲ್. ಆರ್. ಮಹದೇವಸ್ವಾಮಿ, ಶಾಸಕ ಶ್ರೀವತ್ಸ, ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮೈಸೂರು

Electric shock : ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದವನಿಗೆ ಕರೆಂಟ್‌ ಶಾಕ್‌; ಕ್ಷಣಾರ್ಧದಲ್ಲಿ ಹಾರಿಹೋಯ್ತು ಪ್ರಾಣ

Electric shock : ಜಮೀನು ಕೆಲಸಕ್ಕೆ ಹೊರಟಿದ್ದ ಯುವಕನೊಬ್ಬ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ವಿದ್ಯುತ್‌ ನಿಗಮದ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

By

Electric shock
Koo

ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ (Electric shock) ತುಳಿದು ಯುವಕನೊರ್ವ ದಾರುಣವಾಗಿ ಮೃತಪಟ್ಟಿದ್ದಾನೆ. ಮೈಸೂರಿನ ಹುಣಸೂರು ತಾಲೂಕಿನ ಹೊಸರಾಮನಹಳ್ಳಿಯಲ್ಲಿ ಘಟನೆ ನಡೆದಿದೆ. ಮಂಚೂನಾಯಕ (18) ಮೃತ ದುರ್ದೈವಿ.

ಮಂಚೂನಾಯಕ ತಮ್ಮ ಜಮೀನಿನಲ್ಲಿ ಬಾಳೆ ಗೊನೆ ಕೊಯ್ಯಲು ತೆರಳಿದಾಗ ಈ ದುರ್ಘಟನೆ ನಡೆದಿದೆ. ವಿದ್ಯುತ್ ತಂತಿ ತುಂಡಾಗಿ ಬಿದ್ದು ಎರಡು ದಿನ ಕಳೆದರೂ ಇಲಾಖಾ ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲವೆಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಎರಡು ದಿನಗಳಿಂದ ಹಲವು ಬಾರಿ ತುಂಡಾಗಿ ಬಿದ್ದ ವಿದ್ಯುತ್ ತಂತಿಯ ಸಂಪರ್ಕ ಕಡಿತಗೊಳಿಸುವಂತೆ ಮನವಿ ಮಾಡಿದ್ದರೂ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದೆ. ಲೈನ್ ಮ್ಯಾನ್‌ ವಸಂತ್ ಎಂಬಾತನ ನಿರ್ಲಕ್ಷ್ಯದಿಂದ ಯುವಕ ಮೃತಪಟ್ಟಿದ್ದಾಗಿ ಆರೋಪಿಸಿದ್ದಾರೆ.

ಸ್ಥಳಕ್ಕೆ ವಿದ್ಯುತ್ ಇಲಾಖೆಯ ಎಇ ಜಯರತ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಲಾಖೆಯಿಂದ ಪರಿಹಾರ ತಲುಪಿಸುವ ಭರವಸೆ ನೀಡಿದ್ದಾರೆ. ಕುಟುಂಬದ ಒಬ್ಬ ವ್ಯಕ್ತಿಗೆ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಕೊಡಿಸುವ ಭರವಸೆ ನೀಡಿದ್ದಾರೆ. ಜತೆಗೆ ನಿರ್ಲಕ್ಷ್ಯತೆಗೆ ಕಾರಣರಾದ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆದರೆ ಗ್ರಾಮಸ್ಥರು ಕುಟುಂಬದ ಒಬ್ಬರಿಗೆ ಶಾಶ್ವತ ಕೆಲಸ ಕೊಡಿಸುವಂತೆ ಒತ್ತಾಯಿಸಿದರು.

ಇದನ್ನೂ ಓದಿ: Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಧಾರವಾಡದಲ್ಲಿ ವಿದ್ಯುತ್ ತಂತಿ ತಗುಲಿ ಜಾನುವಾರು ಸಾವು

ವಿದ್ಯುತ್ ತಂತಿ ತಗುಲಿ ಜಾನುವಾರು ಮೃತಪಟ್ಟಿದೆ. ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಮನಗುಂಡಿ ರೈತ ಮಡಿವಾಳಪ್ಪ ಎಂಬುವವರಿಗೆ ಸೇರಿದ ಒಂದು ಎಮ್ಮೆ ಹಾಗೂ ಎಮ್ಮೆ ಕರು ಮೃತಪಟ್ಟಿದೆ. ಜಾನುವಾರುಗಳನ್ನು ಮೇಯಿಸಲು ಹೋದಾಗ ಬೋರವೆಲ್ ಮೋಟರ್ ಆರಂಭಿಸುವ ವಿದ್ಯುತ್ ತಗುಲಿ ಮೃತಪಟ್ಟಿವೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Bangalore Mysore Expressway: ಬೆಂಗಳೂರು- ಮೈಸೂರು ಹೈವೇಯಲ್ಲಿ ಓವರ್‌ಸ್ಪೀಡ್‌ ಹೋದರೆ ಬೀಳಲಿದೆ ಪೊಲೀಸ್‌ ಕೇಸ್!‌

Bangalore Mysore Expressway: ನಿನ್ನೆ ಮೈಸೂರು ಬೆಂಗಳೂರು ಹೈವೇ ಸಿಸಿಟಿವಿಗಳನ್ನು ಸಂಚಾರಿ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಪರಿಶೀಲನೆ ಮಾಡಿದ್ದರು. ಪರಿಶೀಲನೆ ವೇಳೆ ಒಂದೇ ದಿನ‌ 150ಕ್ಕೂ ಹೆಚ್ಚು ಅತಿ ವೇಗದ ಚಾಲನೆ ಕೇಸ್‌ಗಳು ಪತ್ತೆಯಾಗಿವೆ. ಇದರಿಂದ ಓವರ್‌ಸ್ಪೀಡ್‌ಗೆ ಬ್ರೇಕ್ ಹಾಕಲು ಎಡಿಜಿಪಿ ಅಲೋಕ್ ಕುಮಾರ್ ಹೊಸ ಅಸ್ತ್ರ ಕೈಗೆತ್ತಿಕೊಂಡಿದ್ದು, ಆಗಸ್ಟ್‌ 1ರಿಂದ ಅದನ್ನು ಚಲಾಯಿಸಲಿದ್ದಾರೆ.

VISTARANEWS.COM


on

bangalore mysore highway
Koo

ಬೆಂಗಳೂರು: ಇನ್ನು ಮುಂದೆ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bangalore Mysore Expressway) ಓವರ್‌ಸ್ಪೀಡ್‌ನಲ್ಲಿ (Overspeed) ಚಲಾಯಿಸುವವರು ಹುಷಾರಾಗಿರಬೇಕು. ರ್ಯಾಶ್‌ ಡ್ರೈವಿಂಗ್‌ (Rash Driving) ಮಾಡುವವರು ಕಂಬಿ ಎಣಿಸುವ ದಿನಗಳು ಬಂದಿವೆ. ಹೈವೇಯಲ್ಲಿ ಹಿಡಿಯೋರಿಲ್ಲ ಎಂದು ಓವರ್‌ಸ್ಪೀಡ್ ಹೋದರೆ ನಿಮ್ಮ ಮೇಲೆ ಎಫ್‌ಐಆರ್‌ (FIR) ದಾಖಲಾಗಲಿದೆ.

ಬೆಂಗಳೂರು-ಮೈಸೂರು ಹೈವೇಯಲ್ಲಿ ಟ್ರಾಫಿಕ್‌ ಪೊಲೀಸರು ಹಲವು ಕ್ರಮಗಳನ್ನು ಕೈಗೊಂಡಿದ್ದರೂ ರ್ಯಾಶ್ ಡ್ರೈವಿಂಗ್ ನಿಲ್ಲುತ್ತಿಲ್ಲ. 130 ಕಿಮೀಗೂ ಅಧಿಕ ಸ್ಪೀಡ್‌ನಲ್ಲಿ ವಾಹನಗಳು ಸಂಚರಿಸುತ್ತಿವೆ. ಇಂಟರ್‌ಸೆಪ್ಟರ್‌ಗಳು ಇದ್ದರೂ ಹಲವರು ಕ್ಯಾರೇ ಮಾಡುತ್ತಿಲ್ಲ. ಹೀಗಾಗಿ ಅಪಘಾತಗಳಾಗುತ್ತಿವೆ. ಅತಿ ವೇಗದ ಚಾಲನೆಯಿಂದಲೇ 90%ರಷ್ಟು ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ ಅತಿ ವೇಗದಲ್ಲಿ ಚಾಹನ ಚಲಾಯಿಸುವವರ ವಿರುದ್ಧ ಕೇಸ್ ದಾಖಲು ಮಾಡಲು ಪೊಲೀಸರು ಮುಂದಾಗಿದ್ದಾರೆ.

ನಿನ್ನೆ ಮೈಸೂರು ಬೆಂಗಳೂರು ಹೈವೇ ಸಿಸಿಟಿವಿಗಳನ್ನು ಸಂಚಾರಿ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಪರಿಶೀಲನೆ ಮಾಡಿದ್ದರು. ಪರಿಶೀಲನೆ ವೇಳೆ ಒಂದೇ ದಿನ‌ 150ಕ್ಕೂ ಹೆಚ್ಚು ಅತಿ ವೇಗದ ಚಾಲನೆ ಕೇಸ್‌ಗಳು ಪತ್ತೆಯಾಗಿವೆ. ಇದರಿಂದ ಓವರ್‌ಸ್ಪೀಡ್‌ಗೆ ಬ್ರೇಕ್ ಹಾಕಲು ಎಡಿಜಿಪಿ ಅಲೋಕ್ ಕುಮಾರ್ ಹೊಸ ಅಸ್ತ್ರ ಕೈಗೆತ್ತಿಕೊಂಡಿದ್ದು, ಆಗಸ್ಟ್‌ 1ರಿಂದ ಅದನ್ನು ಚಲಾಯಿಸಲಿದ್ದಾರೆ.

ಮಿತಿ ಮೀರಿದ ವೇಗದಿಂದ ಚಾಲನೆ ಮಾಡುವವರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ. ಸ್ಪೀಡ್‌ನಲ್ಲಿ 130 ಕಿಮೀ ದಾಟಿದರೆ ಎಫ್ಐಆರ್ ದಾಖಲಾಗಲಿದೆ. ನಂತರ ಚಾಲಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ವಾಹನ ಚಾಲನೆ ಪರವಾನಗಿಯೂ ರದ್ದಾಗಬಹುದು. ಹೀಗೆಂದು ಎಕ್ಸ್ ಖಾತೆ ಮೂಲಕ ಅಲೋಕ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ.

ಹೆದ್ದಾರಿಯಲ್ಲಿ ಸ್ಮಾರ್ಟ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್

ವಾಹನ ಸಂಚಾರ ನಿಯಮ ಉಲ್ಲಂಘನೆ ಹಾಗೂ ರಸ್ತೆ ಅಪಘಾತಗಳ ತಡೆಗಾಗಿ ಸಂಚಾರ ಪೊಲೀಸ್‌ ವಿಭಾಗ, ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಳ್ಳುತ್ತಿದೆ. ಇದರ ಭಾಗವಾಗಿ ಜುಲೈ 1ರಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ (Bangalore–Mysore Expressway) ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್‌ (ITMS) ಅಳವಡಿಸಲಾಗಿದೆ.

ಈ ಮಾರ್ಗದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡವನ್ನು ನೇರವಾಗಿ ಫಾಸ್ಟ್ಯಾಗ್‌ ಖಾತೆಯಿಂದಲೇ ಕಡಿತಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಕ್ಯಾಮೆರಾಗಳು, ಸ್ಪೀಡ್‌ ಗನ್‌ಗಳು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ನೆರವಾಗಲಿವೆ. ಜುಲೈ 1ರಿಂದ ಮೈಸೂರು-ಬೆಂಗಳೂರು ಹೆದ್ದಾರಿಯು ಸಂಪೂರ್ಣವಾಗಿ ಕ್ರಿಯಾತ್ಮಕ ಐಟಿಎಂಎಸ್ ಕಾರಿಡಾರ್ (ITMS Corridor) ಆಗಲಿದೆ ಎಂದು ಕರ್ನಾಟಕ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ ಅಲೋಕ್ ಕುಮಾರ್ ಇತ್ತೀಚೆಗೆ ತಿಳಿಸಿದ್ದರು.

ಐಟಿಎಂಎಸ್ ಅಥವಾ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಅನ್ನು ಡಿಸೆಂಬರ್ 2022ರಲ್ಲಿ ಬೆಂಗಳೂರಿನಲ್ಲಿ ಚಾಲನೆಗೆ ತರಲಾಯಿತು. ಅದಕ್ಕಾಗಿ 250 ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್‌ಪಿಆರ್) ಕ್ಯಾಮೆರಾಗಳು ಮತ್ತು 80 ರೆಡ್ ಲೈಟ್ ಉಲ್ಲಂಘನೆ ಪತ್ತೆ (ಆರ್‌ಎರ್‌ವಿಡಿ) ಕ್ಯಾಮೆರಾಗಳನ್ನು ನಗರದ 50 ಜಂಕ್ಷನ್ ಗಳಲ್ಲಿ ಅಳವಡಿಸಲಾಗಿದೆ. ಈಗ ಐಟಿಎಂಎಸ್ ಅಡಿಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳನ್ನು ಮೈಸೂರಿನ ಪ್ರಮುಖ ರಸ್ತೆಗಳಲ್ಲಿ 8.5 ಕೋಟಿ ರೂ. ಅಂದರೆ ಮೈಸೂರು ನಗರಕ್ಕೆ ರೂಪಾಯಿ 4 ಕೋಟಿ ಮತ್ತು ಮೈಸೂರು ಜಿಲ್ಲೆಗೆ ರೂ.4.5 ಕೋಟಿ ಅಂದಾಜು ವೆಚ್ಚದಲ್ಲಿ ಅಳವಡಿಸಲಾಗಿದೆ. ಅಲ್ಲದೇ ಜುಲೈ 1ರಿಂದ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಚಲನ್ ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದರು.

ಅಲ್ಲದೇ ಕ್ಯಾಮೆರಾಗಳನ್ನು ಮೈಸೂರು ಜಿಲ್ಲೆಯ ಹುಣಸೂರು, ಎಚ್ ಡಿ ಕೋಟೆ, ನಂಜನಗೂಡು ಮತ್ತು ಟಿ ನರಸೀಪುರದಂತಹ ಹಲವಾರು ಪ್ರದೇಶಗಳಲ್ಲಿ ಅಳವಡಿಸಲಾಗುವುದು. ಹಾಗಾಗಿ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಸರಿಯಾದ ಸಮಯಕ್ಕೆ ಎಸ್ ಎಂಎಸ್ ಕಳುಹಿಸಲಾಗುವುದು ಎಂದು ಅವರು ಹೇಳಿದ್ದರು.
ಹೆಚ್ಚುವರಿಯಾಗಿ ಈ ವರ್ಷ ಬೆಂಗಳೂರಿನಿಂದ ಹತ್ತಿರದ ತಾಲೂಕುಗಳು ಮತ್ತು ಜಿಲ್ಲೆಗಳಿಗೆ ಸಂಪರ್ಕಿಸುವ ನಾಲ್ಕು ಪ್ರಮುಖ ಹೆದ್ದಾರಿಗಳಲ್ಲಿ (ತುಮಕೂರು ರಸ್ತೆ, ಕನಕಪುರ ರಸ್ತೆ, ಹೊಸೂರು ರಸ್ತೆ ಮತ್ತು ಹೊಸಕೋಟೆ) ಐಟಿಎಂಎಸ್ ಕ್ಯಾಮೆರಾಗಳನ್ನು ಅಳವಡಿಸಲು ಎಡಿಜಿಪಿ ಪ್ರಸ್ತಾಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಐಟಿಎಂಎಸ್ ಕ್ಯಾಮೆರಾಗಳ ಜೊತೆಗೆ ಅವರು ಈ ರಸ್ತೆಗಳಲ್ಲಿ ವೇರಿಯಬಲ್ ಮೆಸೇಜಿಂಗ್ ಚಿಹ್ನೆಗಳನ್ನು ಸೇರಿಸಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ. ಈ ಸೈನ್ ಬೋರ್ಡ್ ಗಳು ಸರಿಯಾದ ಸಮಯಕ್ಕೆ ಟ್ರಾಫಿಕ್ ಪರಿಸ್ಥಿತಿಯ ಕುರಿತು ಡಿಜಿಟಲ್ ಸಂದೇಶವನ್ನು ಪ್ರದರ್ಶಿಸುತ್ತದೆ. ಈ ಪ್ರಸ್ತಾವನೆಯನ್ನು ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರವು ಅನುಮೋದಿಸಿದ್ದು, ಜುಲೈನಲ್ಲಿ ಟೆಂಡರ್ ಶುರುವಾಗಲಿದೆ. ಗದಗ ಪಟ್ಟಣದಲ್ಲಿಯೂ ಐಟಿಎಂಎಸ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಬಗ್ಗೆ ಜೂನ್ 1ರಂದು ರಾಜ್ಯ ಪೊಲೀಸ್ ನ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗವು ಪ್ರಾದೇಶಿಕ ಎನ್ ಹೆಚ್ಎಐ ಅಧಿಕಾರಿಯೊಂದಿಗೆ ಸಭೆ ನಡೆಸಿತ್ತು. ಹಾಗೇ ಎಡಿಜಿಪಿ ಅವರು ಈ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯುವ ಚಿಂತನೆ ಕೂಡ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Robbery Case: ಬೆಂಗಳೂರು- ಮೈಸೂರು ದಶಪಥದಲ್ಲಿ ಲಾಂಗ್‌ ತೋರಿಸಿ ಸುಲಿಗೆ

Continue Reading

ಪ್ರಮುಖ ಸುದ್ದಿ

Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

Kaveri Aarti: ನಾಡಿನ ಪುಣ್ಯನದಿ ಕಾವೇರಮ್ಮನಿಗೆ ಕಾವೇರಿ ಆರತಿ ಮಾಡುವ ಯೋಜನೆ ಬಗ್ಗೆ ಸರ್ಕಾರದಿಂದ ಚಿಂತನೆ ನಡೆದಿದ್ದು, ಕಾವೇರಿ ಆರತಿಗಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸೂಚನೆ ನೀಡಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದ ಸಮಿತಿ ರಚಿಸಿದೆ.

VISTARANEWS.COM


on

kaveri aarti
Koo

ಬೆಂಗಳೂರು: ಹಿಮಾಲಯದ (Himalayas) ತಪ್ಪಲು ಪುಣ್ಯಕ್ಷೇತ್ರಗಳಾದ ಹರಿದ್ವಾರ, ಹೃಷಿಕೇಶ, ಕಾಶಿಯಲ್ಲಿ ನಡೆಯುವ ಮನಮೋಹಕ ಗಂಗಾರತಿ (Ganga Aarti) ಮಾದರಿಯಲ್ಲಿ ಕರ್ನಾಟಕದಲ್ಲಿಯೂ ʼಕಾವೇರಿ ಆರತಿʼ (Kaveri Aarti) ಏರ್ಪಡಿಸಲು ರಾಜ್ಯ ಸರಕಾರ (Karnataka Govt) ಸಜ್ಜಾಗಿದ್ದು, ಮುಂದಿನ ದಸರಾ (Dussehra) ಅವಧಿಯ ಹೊತ್ತಿಗೆ ಅದನ್ನು ಕಾರ್ಯಗತಗೊಳಿಸಲು ಚಿಂತಿಸಿದೆ.

ನಾಡಿನ ಪುಣ್ಯನದಿ ಕಾವೇರಮ್ಮನಿಗೆ ಕಾವೇರಿ ಆರತಿ ಮಾಡುವ ಯೋಜನೆ ಬಗ್ಗೆ ಸರ್ಕಾರದಿಂದ ಚಿಂತನೆ ನಡೆದಿದ್ದು, ಕಾವೇರಿ ಆರತಿಗಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸೂಚನೆ ನೀಡಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದ ಸಮಿತಿ ರಚಿಸಿದೆ.

ಆಗಸ್ಟ್ ಮೊದಲ ವಾರ ಮಧ್ಯಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಪ್ರವಾಸ ಕೈಗೊಳ್ಳಲಿರುವ ಸಮಿತಿ, ವಾರಾಣಸಿ, ಹೃಷಿಕೇಶ ಮತ್ತು ಗಯಾಕ್ಕೆ ತೆರಳಿ ಅಲ್ಲಿ ಮಾಡಲಾಗುವ ಆರತಿ ಸಂಪ್ರದಾಯಗಳನ್ನು ವೀಕ್ಷಿಸಿ‌ ವರದಿ‌ ನೀಡಲಿದೆ. ಸಮಿತಿಯಲ್ಲಿ ಶಾಸಕರಾದ ರವಿ ಗಾಣಿಗ, ದಿನೇಶ್ ಗೂಳಿಗೌಡ ಸೇರಿದಂತೆ 10ಕ್ಕೂ ಹೆಚ್ಚಿನ ಶಾಸಕರು ಇದ್ದಾರೆ.

ಮುಂದಿನ ದಸರಾ ಹಬ್ಬದ ಸಂದರ್ಭದಲ್ಲಿ ಕಾವೇರಿ ಆರತಿ ಆಯೋಜಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಸಮಿತಿಯ ಅಧ್ಯಯನ ಪ್ರವಾಸದ ಅಂತಿಮ ಹಂತದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಸಮಿತಿಯೊಂದಿಗೆ ಸೇರುವ ಸಾಧ್ಯತೆ ಇದೆ.

ಕಾವೇರಿ ಆರತಿ ಆಯೋಜನೆಗೆ ಕೆಆರ್‌ಎಸ್ ಜಲಾಶಯ ಸೂಕ್ತ ಎನ್ನಲಾಗಿತ್ತು. ಆದರೆ ಅಲ್ಲಿ ಸ್ಥಳಾವಕಾಶದ ಕೊರತೆ ಎದುರಾಗುವ ಸಾಧ್ಯತೆ ಇರುವುದರಿಂದ ತಲಕಾಡು ಅಥವಾ ಸಂಗಮದಲ್ಲಿ ಕಾವೇರಿ ಆರತಿ ಆಯೋಜಿಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ. ಇನ್ನೊಂದು ಕಡೆಯಿಂದ, ಕಾವೇರಿಯ ಉಗಮ ಸ್ಥಾನವಾದ ಭಾಗಮಂಡಲದಲ್ಲಿಯೇ ಆರತಿ ನಡೆಸಬೇಕು ಎಂಬ ಸಲಹೆಯೂ ಬಂದಿದೆ.

ಚಲುವರಾಯಸ್ವಾಮಿ ನೇತೃತ್ವದ ಸಮಿತಿ ವರದಿ ನೀಡಿದ ನಂತರ ಜಾಗ ಅಂತಿಮವಾಗಲಿದೆ. ಕಾವೇರಿ ಆರತಿ ಆಯೋಜನೆಗೂ ಮುನ್ನ ಕಾವೇರಿ ತಾಯಿಗೆ ದೇವಸ್ಥಾನ ನಿರ್ಮಾಣ ಮಾಡುವ ಚಿಂತನೆಯಿದೆ. ಕಾವೇರಿ ಆರತಿಯ ವರದಿ ಪಡೆಯುವುದು, ಕಾರ್ಯಕ್ರಮ ಆಯೋಜನೆ ಹೊಣೆ ಜಲಸಂಪನ್ಮೂಲ ಇಲಾಖೆಯದ್ದಾಗಿರಲಿದೆ. ಧಾರ್ಮಿಕ ದತ್ತಿ, ಲೋಕೋಪಯೋಗಿ ಇಲಾಖೆಗಳು ಸಹಕಾರ ನೀಡಲಿವೆ.

ಕಾವೇರಿ ಆರತಿಯನ್ನು ಪ್ರವಾಸಿಗರ ಕಣ್ಮನ ಸೆಳೆಯುವ ಬೃಹತ್ ಕಾರ್ಯಕ್ರಮವನ್ನಾಗಿ ಮಾಡಲು ಸರ್ಕಾರ ನಿರ್ಧರಿಸಿದೆ. ಕನಿಷ್ಠ 5ರಿಂದ 6 ಸಾವಿರ ಜನರು ಸೇರುವಂತೆ ಮಾಡುವುದು ಉದ್ದೇಶ. ಪ್ರವಾಸೋದ್ಯಮಕ್ಕೆ ಅನುಕೂಲವಾಗುವಂತೆ ಆಯೋಜಿಸಲು ಚಿಂತಿಸಲಾಗಿದೆ. ಆರಂಭದಲ್ಲಿ ವಾರಕ್ಕೆ ಒಂದು ಬಾರಿ, ನಂತರ ಎರಡು ಬಾರಿ, ಮೂರು ಬಾರಿ ಹೀಗೆ ಹೆಚ್ಚಿಸುತ್ತ ಹೋಗುವ ಬಗ್ಗೆ ಚಿಂತಿಸಲಾಗಿದೆ.

ಕೊಡಗಿನಲ್ಲಿ ನಡೆಯುತ್ತಿದೆ

ಕೊಡಗಿನಲ್ಲಿ 2011ರಿಂದಲೇ ಕಾವೇರಿ ಆರತಿ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ನಮಾಮಿ ಕಾವೇರಿ ಎಂಬ ಸಂಘಟನೆ ಪ್ರತಿ ತಿಂಗಳು ಹುಣ್ಣಿಮೆಯಂದು ಕಾವೇರಿಗೆ ಆರತಿ ಕಾರ್ಯಕ್ರಮ ಮಾಡುತ್ತ ಬಂದಿದ್ದು, ಇತ್ತೀಚೆಗೆ 161 ನೇ ಕಾವೇರಿ ಆರತಿ ಕಾರ್ಯಕ್ರಮ ಕೊಡಗಿನ 14 ಕಡೆಗಳಲ್ಲಿ ಏಕಕಾಲದಲ್ಲಿ ನಡೆದಿದೆ. ಕಲುಷಿತಗೊಳ್ಳುತ್ತಿರುವ ಕಾವೇರಿ ನದಿ ಮೇಲೆ ಧಾರ್ಮಿಕ ಭಾವನೆ ಬರಲಿ, ಅದರ ಪಾವಿತ್ರ್ಯತೆಯನ್ನು ಪ್ರತಿಯೊಬ್ಬರೂ ಕಾಪಾಡುವಂತಾಗಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಈವರೆಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಸ್ವಾಮೀಜಿಗಳು, ತಮಿಳುನಾಡಿನ ಸ್ವಾಮೀಜಿಗಳೂ ಪಾಲ್ಗೊಂಡಿದ್ದಾರೆ. ಹಿಂದೊಮ್ಮೆ ಸರಕಾರದಿಂದಲೂ ‘ಕಾವೇರಿ ಉತ್ಸವ” ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾವೇರಿ ನೀರಾವರಿ ನಿಗಮದ ಮೂಲಕ ಅದ್ದೂರಿ ಆರತಿ ಮತ್ತು ಧಾರ್ಮಿಕ ಕಾರ್ಯಕ್ರಮಗಳು ನಡೆದಿದೆ.

ಇದನ್ನೂ ಓದಿ: Cauvery Dispute: ತಮಿಳುನಾಡಿಗೆ ನಿತ್ಯ 1 ಟಿಎಂಸಿ ಕಾವೇರಿ ನೀರು ಬಿಡಲು ಸೂಚನೆ; ಸರ್ವಪಕ್ಷ‌ ಸಭೆ ಕರೆದ ಸಿಎಂ ಸಿದ್ದರಾಮಯ್ಯ

Continue Reading

ಮಳೆ

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ವಾರಾಂತ್ಯದಲ್ಲಿ 7 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರದಿಂದ ಮಧ್ಯಮದೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ (Rain News) ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಸೇರಿದಂತೆ ತುಮಕೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲೂ ಮಳೆಯಾಗಲಿದೆ.

ಇದನ್ನೂ ಓದಿ: Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಜತೆಗೆ ಭಾರಿ ಮಳೆಯೊಂದಿಗೆ 40-50 ಕಿ.ಮೀ ಗಾಳಿಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
PARIS 2024 OLYMPICS
ಕ್ರೀಡೆ8 mins ago

PARIS 2024 OLYMPICS: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಸೋಲು

Road Accident
ದೇಶ15 mins ago

Road Accident: ಕಣಿವೆಗೆ ಉರುಳಿದ ಕಾರು; ಐವರು ಮಕ್ಕಳು ಸೇರಿ 8 ಮಂದಿ ಸಾವು

Ashwini Puneeth Rajkumar launched Appu Cup season 2
ಕ್ರಿಕೆಟ್19 mins ago

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Money Guide
ಮನಿ-ಗೈಡ್39 mins ago

Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

Womens Asia Cup Final
ಕ್ರೀಡೆ1 hour ago

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

dk shivakumar hd kumarswamy
ಪ್ರಮುಖ ಸುದ್ದಿ1 hour ago

DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

karnataka high court
ಪ್ರಮುಖ ಸುದ್ದಿ2 hours ago

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Ghuspaithia Hindi movie release on August 9
ಕರ್ನಾಟಕ2 hours ago

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

2nd International Airport in Bengaluru Another round of discussion was held by Minister MB Patil
ಕರ್ನಾಟಕ2 hours ago

MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

Kanwar Yatra
ದೇಶ2 hours ago

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಮಸೀದಿ ಕಾಣದಂತೆ ಪರದೆ; ವ್ಯಾಪಕ ವಿರೋಧದ ಬಳಿಕ ತೆರವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ2 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ21 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ22 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ23 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌