‌MCC Election | ಮೈಸೂರು ಪಾಲಿಕೆ ಗದ್ದುಗೆ ಫೈಟ್‌: ಜಯಗಳಿಸುವ ವಿಶ್ವಾಸದಲ್ಲಿ ಬಿಜೆಪಿ - Vistara News

ಮೈಸೂರು

‌MCC Election | ಮೈಸೂರು ಪಾಲಿಕೆ ಗದ್ದುಗೆ ಫೈಟ್‌: ಜಯಗಳಿಸುವ ವಿಶ್ವಾಸದಲ್ಲಿ ಬಿಜೆಪಿ

65 ಸದಸ್ಯರ ಪಾಲಿಕೆಯಲ್ಲಿ ಸಂಖ್ಯಾ ಬಲದಲ್ಲಿ ಬಿಜೆಪಿ ಮುಂದಿದೆ. ಎರಡನೇ ಹಾಗೂ ಮೂರನೇ ಸ್ಥಾನದಲ್ಲಿ ಕಾಂಗ್ರೆಸ್, ಜೆಡಿಎಸ್ ಇದ್ದು, ಈ ಬಾರಿ ಮೂರೂ ಪಕ್ಷಗಳ ನಡುವೆ ಅಧಿಕೃತವಾಗಿ ಯಾವುದೇ ಮೈತ್ರಿ ಏರ್ಪಟ್ಟಿಲ್ಲ.

VISTARANEWS.COM


on

Mysuru city Corporation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ದಸರಾ ಉತ್ಸವ ಹತ್ತಿರದಲ್ಲಿರುವಂತೆಯೇ ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಮೇಯರ್‌ ಹಾಗೂ ಉಪಮೇಯರ್‌ ಹುದ್ದೆಗೆ ಮಂಗಳವಾರ ಚುನಾವಣೆ ನಡೆಯಲಿದೆ. ಈ ಹಿಂದೆ ಅಧಿಕಾರ ಹೊಂದಿದ್ದ ಬಿಜೆಪಿ ತನ್ನ ಆಡಳಿತವನ್ನು ಮುಂದುವರಿಸಿಕೊಂಡು ಹೋಗುವ ತವಕದಲ್ಲಿದ್ದರೆ ಇತ್ತ ಕಾಂಗ್ರೆಸ್‌ ಸ್ವಂತ ಬಲದ ಮೇಲೆ ಅಧಿಕಾರಕ್ಕೇರುವ ಪ್ರಯತ್ನದಲ್ಲಿದೆ. ಜೆಡಿಎಸ್‌ನಲ್ಲಿ ಅಡ್ಡಮತದಾನದ ಆತಂಕ ಎದುರಾಗಿದೆ. ಇಲ್ಲಿವರೆಗಿನ ಕಾರ್ಯತಂತ್ರದ ಆಧಾರದಲ್ಲಿ ಬಿಜೆಪಿ ಮೇಯರ್‌ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಾಗಿದೆ.

ಪ್ರಾದೇಶಿಕ ಆಯುಕ್ತ ಡಾ. ಪ್ರಕಾಶ್‌ ಸಮ್ಮುಖದಲ್ಲಿ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಮೂರೂ ಪಕ್ಷಗಳಿಂದ ನಾಮಪತ್ರ ಸಲ್ಲಿಕೆಯಾಗಿದೆ. ಮೇಯರ್‌ ಸ್ಥಾನಕ್ಕೆ ಬಿಜೆಪಿಯಿಂದ ಶಿವಕುಮಾರ್, ಕಾಂಗ್ರೆಸ್‌ನಿಂದ ಸೈಯದ್ ಅಶ್ರತ್‌ ಉಲ್ಲಾ ಖಾನ್, ಗೋಪಿ ಹಾಗೂ ಜೆಡಿಎಸ್‌ನಿಂದ ಕೆ.ವಿ.ಶ್ರೀಧರ್ ನಾಮಪತ್ರ ಸಲ್ಲಿಸಿದ್ದಾರೆ.

ಉಪಮೇಯರ್‌ ಸ್ಥಾನಕ್ಕೆ ಬಿಜೆಪಿಯಿಂದ ಜೆ. ರೂಪಾ, ಕಾಂಗ್ರೆಸ್‌ನಿಂದ ಶೋಭಾ ಸುನೀಲ್ ಹಾಗೂ ಜೆಡಿಎಸ್‌ನಿಂದ ರೇಷ್ಮಾ ಬಾನು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

65 ಸದಸ್ಯರ ಪಾಲಿಕೆಯಲ್ಲಿ ಸಂಖ್ಯಾ ಬಲದಲ್ಲಿ ಬಿಜೆಪಿ ಮುಂದಿದೆ. ಎರಡನೇ ಹಾಗೂ ಮೂರನೇ ಸ್ಥಾನದಲ್ಲಿ ಕಾಂಗ್ರೆಸ್, ಜೆಡಿಎಸ್ ಇದ್ದು, ಈ ಬಾರಿ ಮೂರೂ ಪಕ್ಷಗಳ ನಡುವೆ ಅಧಿಕೃತವಾಗಿ ಯಾವುದೇ ಮೈತ್ರಿ ಏರ್ಪಟ್ಟಿಲ್ಲ. ಹಾಗಾಗಿ ಎಲ್ಲ ಪಕ್ಷಗಳೂ ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾಗಿವೆ.

ಕೆಲ ಸದಸ್ಯರಿಂದ ಅಡ್ಡ ಮತದಾನದ ಭೀತಿ ಎದುರಾಗಿದ್ದು, ಜೆಡಿಎಸ್, ಕಾಂಗ್ರೆಸ್ ಸದಸ್ಯರಲ್ಲಿ ಆತಂಕ ಹೆಚ್ಚಾಗಿದೆ. ಮೂರು ದಿನಗಳ ಮುಂಚೆಯೇ ಕಾಂಗ್ರೆಸ್‌ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿದೆ. ಸೋಮವಾರ ತಡರಾತ್ರಿ ಜೆಡಿಎಸ್‌ನಿಂದಲೂ ವಿಪ್ ಜಾರಿ ಮಾಡಲಾಗಿದೆ. ಅಪರೇಷನ್ ಕಮಲ ಭೀತಿ ನಡುವೆಯೂ ಕಾಂಗ್ರೆಸ್-ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆದಿದೆ.
ಜೆಡಿಎಸ್‌ ಸದಸ್ಯರು ಕೈಕೊಟ್ಟರೂ ಪಕ್ಷೇತರರ ಬೆಂಬಲ ಪಡೆದು ಅಧಿಕಾರ ಹಿಡಿಯುವ ಹಂಬಲದಲ್ಲಿ ಕಾಂಗ್ರೆಸ್‌ ಇದ್ದು, ಜೆಡಿಎಸ್‌ ಸದಸ್ಯರು ಬಿಜೆಪಿಯೊಂದಿಗೆ ಸಖ್ಯದಲ್ಲಿದ್ದಾರೆ ಎನ್ನಲಾಗಿದೆ.

ಮದ್ಯಾಹ್ನ 12ಕ್ಕೆ ಚುನಾವಣೆ

ಮದ್ಯಾಹ್ನ 12ರ ಸುಮಾರಿಗೆ ಪ್ರಾದೇಶಿಕ ಆಯುಕ್ತ ಡಾ. ಪ್ರಕಾಶ್‌ ಸಮ್ಮುಖದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಬಾರಿಗೆ ವಿಧಾನ ಪರಿಷತ್‌ನ ನಾಲ್ವರು ಮತದಾನ ಮಾಡಲಿದ್ದಾರೆ. ಕಾಂಗ್ರೆಸ್‌ನ ಮೂರು ಹಾಗೂ ಜೆಡಿಎಸ್‌ನ ಒಬ್ಬ ಪರಿಷತ್ತು ಸದಸ್ಯರಿಂದ ಮೊದಲ ಬಾರಿಗೆ ಮತದಾನ ನಡೆಯಲಿದೆ. ಕಾಂಗ್ರೆಸ್‌ನ ಮಧು ಜಿ. ಮಾದೇಗೌಡ, ಡಾ. ಡಿ. ತಿಮ್ಮಯ್ಯ, ದಿನೇಶ್ ಗೂಳಿಗೌಡ, ಜೆಡಿಎಸ್‌ನ ಸಿ.ಎನ್. ಮಂಜೇಗೌಡ ಮತ ಚಲಾಯಿಸಲಿದ್ದಾರೆ. ಬಿಜೆಪಿ ಎಂಎಲ್‌ಸಿ ಎಚ್. ವಿಶ್ವನಾಥ್ ಅತಿ ಹಿರಿಯ ಸದಸ್ಯರಾಗಿದ್ದಾರೆ.

ಸುರಾನಾ ವಿಶ್ವಾಸ

ಪರಿಶಿಷ್ಟ ಸಮುದಾಯದ ಶಿವಕುಮಾರ್‌ ಅವರನ್ನು ಮೇಯರ್‌ ಸ್ಥಾನಕ್ಕೆ ಬಿಜೆಪಿ ಕಣಕ್ಕಿಳಿಸಿದ್ದು, ಜಯಗಳಿಸುವ ವಿಶ್ವಾಸದಲ್ಲಿದೆ. ಈ ಕುರಿತು ವಿಸ್ತಾರ ನ್ಯೂಸ್‌ ಜತೆಗೆ ಮಾತನಾಡಿದ ಚುನಾವಣಾ ಉಸ್ತುವಾರಿ ನಿರ್ಮಲ್‌ ಕುಮಾರ್‌ ಸುರಾನಾ, ಬಿಜೆಪಿ ಮೇಯರ್ ಸ್ಥಾನ ಪಡೆಯಲಿದೆ. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ, ಒಂದು ಸಂಖ್ಯೆ ಹೆಚ್ಚಾಗಿದ್ದೇವೆ. ನಾವು ಚುನಾವಣೆ ಗೆಲ್ಲಲು ಅಷ್ಟೇ ಸಾಕು. ಈಗಾಗಲೇ ಎಲ್ಲ ಕಾರ್ಯತಂತ್ರ ಸಿದ್ಧವಾಗಿದೆ, ಆದರೆ ಅದೇನೆಂದು ಹೇಳಲು ಸಾಧ್ಯವಿಲ್ಲ.
ಬೆಂಗಳೂರು ನಂತರ ಮೈಸೂರು ಅತಿ ಪ್ರಮುಖವಾದ ಸ್ಥಾನ. ಆದ್ಧರಿಂದ ನಾವು ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದಲೂ ಇದು ಮಹತ್ವದ ಚುನಾವಣೆ‌ ಎಂದಿದ್ದಾರೆ.

ಇದನ್ನೂ ಓದಿ | ʼಪ್ರತಾಪ್‌ ಸಿಂಹ ಅವರಿಗೆ ಮಾಹಿತಿ ಇರಲಿಲ್ಲ ಅದಕ್ಕೆ ಹೇಳಿದೆʼ: ಮೈಸೂರಲ್ಲಿ ಮತ್ತೆ ಶಾಸಕ VS ಸಂಸದ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Karnataka Weather : ತುಮಕೂರಿನಲ್ಲಿ ಸಿಡಿಲಿಗೆ ಜಾನುವಾರೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯಗಳಾಗಿವೆ. ಚಿಕ್ಕಮಗಳೂರಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ರಾಯಚೂರು, ವಿಜಯಪುರ ಸೇರಿದಂತೆ ಹಲವೆಡೆ ಮಳೆಯು ಅವಾಂತರವನ್ನೇ (Rain News) ಸೃಷ್ಟಿಸಿದೆ.

VISTARANEWS.COM


on

By

karnataka weather Forecast
Koo

ತುಮಕೂರು/ ಚಿಕ್ಕಮಗಳೂರು: ರಾಜ್ಯದ ಹಲವೆಡೆ ಮಳೆಯು (Karnataka Weather) ಅಬ್ಬರಿಸುತ್ತಿದ್ದು, ಅವಾಂತರವನ್ನೇ ಸೃಷ್ಟಿ ಮಾಡಿದೆ. ತುಮಕೂರಲ್ಲಿ ಸಿಡಿಲಿಗೆ ಹಸುವೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯವಾಗಿವೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದಲ್ಲಿ ಘಟನೆ ನಡೆದಿದೆ.

ಕರಿಯಪ್ಪ ಎಂಬುವರಿಗೆ ಸೇರಿದ ಜಾನುವಾರುಗಳನ್ನು ತೋಟದಲ್ಲಿದ್ದ ಗುಡಿಸಿಲಿನ ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಆದರೆ ಸಿಡಿಲು ಬಡಿದು ಕೊಟ್ಟಿಗೆ ಹೊತ್ತಿ ಉರಿದಿದೆ. ಈ ವೇಳೆ ಬೆಂಕಿ ನಂದಿಸಲು ಹೋದ ಮಹಾಲಿಂಗನಿಗೂ ಗಾಯವಾಗಿದೆ. ಕರಿಯಪ್ಪ ಹಾಗೂ ಆತನ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಡಿಲು ಬಡಿದ ಪರಿಣಾಮ ಗುಡಿಸಲು ಭಸ್ಮವಾಗಿದೆ. ಅರಸಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Weather Forecast

ಚಿಕ್ಕಮಗಳೂರಲ್ಲಿ ಮಳೆ ಅವಾಂತರ

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿತ್ತು. ಇದರಿಂದಾಗಿ ಮೇಲ್ಪಾಲ್, ಕೊಪ್ಪ, ಬಾಳೆಹೊನ್ನೂರು ರಸ್ತೆ ಸಂಪರ್ಕ ಕಡಿತವಾಗಿದೆ. ಎನ್‌ಆರ್ ಪುರ ತಾಲೂಕಿನ ಅರಳಿ ಕೊಪ್ಪ ತಿರುವಿನಲ್ಲಿ ಘಟನೆ ನಡೆದಿದೆ. ರಸ್ತೆಗೆ ಮರ ಬಿದ್ದ ಕಾರಣಕ್ಕೆ ಮಾರ್ಗ ಬಂದ್‌ ಆಗಿದ್ದು, ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಬದಲಿ ಮಾರ್ಗದಲ್ಲಿ ಸುತ್ತಾಡಿ ಸಂಚರಿಸುವಂತಾಯಿತು.

ಇತ್ತ ಭಾರಿ ಗಾಳಿ ಮಳೆಗೆ ಚಿಕ್ಕಮಗಳೂರು ತಾಲೂಕಿನ ಗಾಳಿಹಳ್ಳಿ, ತಿಮ್ಮನಹಳ್ಳಿ ಗ್ರಾಮಗಳು ತತ್ತರಿಸಿ ಹೋಗಿವೆ. ರಸ್ತೆಯ ಮೇಲೆ ನದಿಯಂತೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸಂಚಾರ ಸ್ಥಗಿತವಾಗಿತ್ತು.

ಇದನ್ನೂ ಓದಿ: Murder case : ಬಯಲು ಶೌಚಾಲಯಕ್ಕೆ ಹೋದ ಬಾಲಕನ ದೊಣ್ಣೆಯಿಂದ ಹೊಡೆದು ಕೊಂದರು

Karnataka Weather Forecast

ರಾಯಚೂರಿನಲ್ಲಿ ಮಳೆಗೆ ಕೊಚ್ಚಿ ಹೋದ ರಸ್ತೆ

ರಾಯಚೂರಿನಲ್ಲಿ ಗುರುವಾರ ರಾತ್ರಿ ಸುರಿದ ಮಳೆಗೆ ರಸ್ತೆಯೇ ಕೊಚ್ಚಿ ಹೋಗಿದೆ. ರಾಯಚೂರು ಗ್ರಾಮೀಣ ತಾಲೂಕಿನ ಬಿ ಯದ್ಲಾಪುರ ಗ್ರಾಮದಲ್ಲಿ ಹಳ್ಳದ ನೀರಿನ ರಭಸಕ್ಕೆ ರಸ್ತೆ ಕೊಚ್ಚಿ ಹೋಗಿದೆ. ಸದ್ಯ ಬಿ ಯದ್ಲಾಪುರ ಮತ್ತು ಗಿಲ್ಲೆಸಗೂರು ಕ್ಯಾಂಪ್ ನಡುವಿನ ಸಂಪರ್ಕ ಕಡಿತವಾಗಿದೆ. ರಸ್ತೆ ಕಡಿತವಾಗಿದ್ದರಿಂದ ರಾಯಚೂರು ಮತ್ತು ಮಂತ್ರಾಲಯಕ್ಕೆ ತೆರಳುವವರಿಗೆ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪರದಾಡಬೇಕಾಯಿತು.

Karnataka Weather Forecast

ವಿಜಯಪುರದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮರ

ವಿಜಯಪುರ ನಗರದ ನಾಲಬಂದ್ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಭಾರಿ ಮಳೆಯಿಂದಾಗಿ ತೆಂಗಿನ ಗರಿಯು ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ತೆಂಗಿನ ಮರದಲ್ಲಿ ಬೆಂಕಿ ಆವರಿಸಿತ್ತು. ಇದರಿಂದಾಗಿ ಕೆಲಕಾಲ ಆತಂಕ ಉಂಟಾಗಿತ್ತು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು, ಕೊಪ್ಪಳದಲ್ಲಿ ಮಳೆಗೆ ತುಂಬಿ ಹರಿದ ಹಳ್ಳ ಕೊಳ್ಳಗಳು

ಚಿಕ್ಕಮಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿದವು. ಕಳಸಾಪುರ, ಬೆಳವಾಡಿ, ಕೆ.ಬಿ ಹಾಳ್, ಈಶ್ವರ ಹಳ್ಳಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ತುಂಗ, ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಆಗಿದೆ. ಕುದುರೆಮುಖ ಪರ್ವತ ಶ್ರೇಣಿಯಲ್ಲಿ ಭಾರಿ ಮಳೆ ಹಿನ್ನೆಲೆ ತುಂಗಾ ಹಾಗೂ ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಅಲ್ಪ ಪ್ರಮಾಣದ ಏರಿಕೆ ಆಗಿದೆ.

ಕೊಪ್ಪಳದಲ್ಲೂ ಭಾರಿ ಮಳೆಯಾಗುತ್ತಿದ್ದು, ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ಬ್ರಿಡ್ಜ್ ಮುಳುಗಡೆಗೆ ಕೆಲವೇ ಅಡಿಗಳು ಬಾಕಿ ಇದೆ. ಲಕ್ಷ್ಮೀ ಕ್ಯಾಂಪ್-ಗುಂಡೂರು ರಸ್ತೆ ಸಂಪರ್ಕ ಸೇತುವೆ‌ ಇದಾಗಿದೆ. ಇನ್ನೂ ಬ್ರಿಡ್ಜ್ ಮೇಲೆ ನಿಂತು ತುಂಬಿ ಹರಿಯುತ್ತಿರುವ ಹಳ್ಳವನ್ನು ಕಣ್ತುಂಬಿಕೊಂಡರು.

ರಾಯಚೂರಿನಲ್ಲಿ ವಾಹನ ಸವಾರರ ಪರದಾಟ

ರಾಯಚೂರಲ್ಲಿ ರಾತ್ರಿ ಸುರಿದ ಮಳೆಗೆ ವಾಹನ ಸವಾರರು ಪರದಾಡಿದರು. ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ರೈಲ್ವೆ ಬಿಡ್ಜ್ ಕೆಳಗೆ ನೀರು ನಿಂತು, ತಗ್ಗು ಗುಂಡಿ ತಪ್ಪಿಸಿ ವಾಹನ ಚಲಾಯಿಸಲು ಸವಾರರು ಹರಸಾಹಸ ಪಟ್ಟರು. ರಾಯಚೂರು-ಹೈದ್ರಬಾದ್ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. 2 ಬದಿಯಲ್ಲಿ ಕಿಲೋ ಮೀಟರ್ ಗಟ್ಟಲೆ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಮಳೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲದೆ ಇರುವುದೇ ಈ ಅವಾಂತರಕ್ಕೆ ಕಾರಣ ಎನ್ನಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lokayukta Raid: ಲೋಕಾಯುಕ್ತ ದಾಳಿ; 30 ಸಾವಿರ ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಎಫ್‌ಡಿಎ

Lokayukta Raid: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ, ಲಂಚ ಸ್ವೀಕಾರ ಮಾಡುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

VISTARANEWS.COM


on

Lokayukta Raid
Koo

ಮೈಸೂರು: ಆಹಾರ ಸರಬರಾಜು ಮಾಡಿದ ಬಿಲ್ ಪಾವತಿಸಲು 30 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಪಿರಿಯಾಪಟ್ಟಣ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಲೋಕಾಯುಕ್ತ ಬಲೆಗೆ (Lokayukta Raid) ಬಿದ್ದಿದ್ದಾರೆ.

ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮದ ನಟೇಶ್ ಎಂಬುವರಿಗೆ ಆಹಾರ ಪೂರೈಕೆ ಮಾಡಿದ ಬಿಲ್ ಪಾವತಿಸಲು 30 ಸಾವಿರ ಲಂಚಕ್ಕೆ ವಿಜಯ್ ಕುಮಾರ್ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತ ಪೊಲೀರಿಗೆ ನಟೇಶ್‌ ದೂರು ನೀಡಿದ್ದರು.

ಮೊದಲೇ ನಡೆದಿದ್ದ ಮಾತುಕತೆಯಂತೆ ಎಫ್‌ಡಿಎ ವಿಜಯ್‌ ಕುಮಾರ್‌, ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಜಿತ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್‌ಪಿ ವಿ.ಕೃಷ್ಣಯ್ಯ ಲೋಕಾಯುಕ್ತ ಪೊಲೀಸ್‌ ಇನ್ಸ್‌ಪೆಕ್ಟರ್‌ಗಳಾದ ರವಿಕುಮಾರ್‌, ರೂಪಶ್ರೀ, ಲೋಕೇಶ್‌, ಸಿಬ್ಬಂದಿಯಾದ ಮೋಹನ್‌ ಗೌಡ, ವೀರಭದ್ರಸ್ವಾಮಿ, ಆಶಾ, ತ್ರಿವೇಣಿ, ಪುಷ್ಪಲತಾ, ದಿನೇಶ್‌, ಲೋಕೇಶ್‌, ಪೃಥ್ವೀಶ್‌, ಶೇಖರ್‌ ಇದ್ದರು.

ಇದನ್ನೂ ಓದಿ | Murder case : ಕಳ್ಳನೆಂದು ಹಿಡಿಯಲು ಹೋದ ಸೆಕ್ಯೂರಿಟಿ ಗಾರ್ಡ್‌ಗಳು; ನೂಕಾಟದಲ್ಲಿ ಬಿದ್ದ ಯುವಕ, ಕರೆಂಟ್‌ ಶಾಕ್‌ನಿಂದ ಸಾವು

ದೊಡ್ಡಬಳ್ಳಾಪುರ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ

shoot out doddaballapur murder case

ದೊಡ್ಡಬಳ್ಳಾಪುರ: ಕೊಲೆ ಆರೋಪಿಯೊಬ್ಬನ (Murder Suspect) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Encounter) ಬಂಧಿಸಿದ್ದಾರೆ. ಹೇಮಂತ್‌ ಕುಮಾರ್‌ ಗೌಡ ಎಂಬ ಯುವಕನ ಕೊಲೆ (Murder Case) ಆರೋಪಿ ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಮಿಟ್ಟೆ ಕಾಲಿಗೆ ಗುಂಡು ಹಾರಿಸಿ (Shoot out) ಬಂಧಿಸಲಾಗಿದೆ.

ಯಲಹಂಕ ತಾಲೂಕಿನ ಶ್ರೀರಾಮನಹಳ್ಳಿ ಬಳಿ ಘಟನೆ ನಡೆದಿದೆ. ರೌಡಿ‌ ಶೀಟರ್ ಬಂಧನಕ್ಕೆ ತೆರಳಿದ ವೇಳೆ ಪೊಲೀಸ್ ಕಾನ್‌ಸ್ಟೇಬಲ್ ಚಂದ್ರು ಮೇಲೆ ಈತ ಹಲ್ಲೆ‌ ನಡೆಸಿದ್ದಾನೆ. ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್ ಸಾಧಿಕ್ ಪಾಷ ಅವರಿಂದ ಫೈರಿಂಗ್ ನಡೆದಿದೆ.

ಈತ ಕೊಲೆ ಕೇಸ್‌ನ 2ನೇ ಆರೋಪಿಯಾಗಿದ್ದಾನೆ. ಮೇ 11ರಂದು ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ಹೇಮಂತ್ ಕುಮಾರ್ ಗೌಡ (27) ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹೇಮಂತ್ ಅವರನ್ನು ಅಟ್ಟಾಡಿಸಿ ಕೊಲೆ ಮಾಡಿ ಆರೋಪಿಗಳು ಕಾರಿನಲ್ಲಿ ಶವದ ಜೊತೆ ರೌಂಡ್ಸ್ ಹಾಕಿದ್ದರು. ಪ್ರಕರಣ ದಾಖಲಿಸಿಕೊಂಡ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಅಧಿಕಾರಿಗಳು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಬಂಧನಕ್ಕಾಗಿ ಬಲೆ ಬೀಸಿದ್ದರು.

ಪ್ರಕರಣದ ಪ್ರಮುಖ ಆರೋಪಿ ನರಸಿಂಹಮೂರ್ತಿ ಅಲಿಯಾಸ್​ ಮಿಟ್ಟೆ ಎಂಬಾತನನ್ನು ಈಗಾಗಲೇ ದಸ್ತಗಿರಿ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ರವಿಕುಮಾರ್, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಸಲಾಗಿತ್ತು.

ಸಾಫ್ಟ್‌ವೇರ್‌ ಎಂಜಿನಿಯರ್‌ ಪತ್ನಿಯ ಅನುಮಾನಾಸ್ಪದ ಸಾವು

ಬೆಂಗಳೂರು: ರಾಜಧಾನಿಯ (bengaluru crime) ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ (woman self harming) ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತರು ಸಾಫ್ಟ್‌ವೇರ್‌ ಎಂಜಿನಿಯರ್‌ (Software engineer) ಪತ್ನಿಯಾಗಿದ್ದು, ಇದೊಂದು ಅಸಹಜ ಸಾವು (UDR Case) ಎಂದು ಮೃತಳ ತವರಿನವರು ಶಂಕಿಸಿದ್ದಾರೆ.

ಮಂಜುನಾಥ ನಗರದ ಸಂಧ್ಯಾ ಮೃತ ಮಹಿಳೆ. ನೆನ್ನೆ ರಾತ್ರಿ ಘಟನೆ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಮೃತ ದೇಹ ಪತ್ತೆಯಾಗಿದೆ. ಇವರಿಗೆ ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗುವೂ ಇತ್ತು. ಅಳಿಯ ಜಯಪ್ರಕಾಶ್‌ ಮೈತುಂಬಾ ಸಾಲ ಮಾಡಿ ಅದನ್ನು ತೀರಿಸಲು ಕಿರುಕುಳ ನೀಡುತ್ತಿದ್ದ. ನನ್ನ ಮಗಳಿಗೆ ಈ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಎಂದು ಸಂಧ್ಯಾ ತಂದೆ ಆಪಾದಿಸಿದ್ದಾರೆ. ಸದ್ಯ ಬಸವೇಶ್ವರನಗರ ಪೊಲೀಸ್ ಠಾಣಾ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Continue Reading

ಮೈಸೂರು

Mysore News: ಮೈಸೂರಿನಲ್ಲಿ ಪಾಲಿಕೆಯಿಂದ ನಿಷೇಧಿತ ಪ್ಲಾಸ್ಟಿಕ್‌ ವಶ; 1.61 ಲಕ್ಷ ರೂ. ದಂಡ

Mysore News: ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಗರದ ನಾನಾ ಕಡೆ ದಾಳಿ ನಡೆಸಿ ಅಪಾರ ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್‌ ವಶಪಡಿಸಿಕೊಂಡು ದಂಡ ವಿಧಿಸಿದ್ದಾರೆ. ಪಾಲಿಕೆಯ ಆಯುಕ್ತರ ನೇತೃತ್ವದಲ್ಲಿ ನಗರದ 9 ವಲಯ ಕಚೇರಿ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಸಿ, ಸುಮಾರು 1515 ಕೆಜಿ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, 1.61 ಲಕ್ಷ ರೂ. ದಂಡ ವಸೂಲಿ ಮಾಡಿದೆ.

VISTARANEWS.COM


on

banned plastic seized by corporation in Mysore
Koo

ಮೈಸೂರು: ನಗರದ ನಾನಾ ಕಡೆ ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ, ಅಪಾರ ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್‌ ವಶಪಡಿಸಿಕೊಂಡು ದಂಡ (Mysore News) ವಿಧಿಸಿದ್ದಾರೆ.

ಪಾಲಿಕೆಯ ಆಯುಕ್ತರ ನೇತೃತ್ವದಲ್ಲಿ ನಗರದ 9 ವಲಯ ಕಚೇರಿ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಸಿ, ಸುಮಾರು 1515 ಕೆಜಿ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, 1.61 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.

ಇದನ್ನೂ ಓದಿ: RCB vs CSK: ವಾಹನ ಸವಾರರೇ ಗಮನಿಸಿ, ನಾಳೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

ಸೂಕ್ತ ಮಾಹಿತಿಯ ಮೇರೆಗೆ ಆಯಕ್ತರ ಆದೇಶದಂತೆ ನಗರದ ಧನ್ವಂತ್ರಿ ರಸ್ತೆಯಲ್ಲಿರುವ, ಮಲ್ಲೇಶ್‌ ಎಂಬುವವರಿಗೆ ಸೇರಿದ ಧನ್ವಂತ್ರಿ ಎಂಟರ್‌ಪ್ರೈಸಸ್‌ ಗೋದಾಮಿಗೆ ವಲಯ ಆಯುಕ್ತರ ನೇತೃತ್ವದಲ್ಲಿ ದಾಳಿ ನಡೆಸಿ, ಗೋದಾಮಿನಲ್ಲಿ ಸಂಗ್ರಹಿಸಿದ್ದ ನಿಷೇಧಿತ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡು 25 ಸಾವಿರ ರೂ ದಂಡ ವಿಧಿಸಿದ್ದಾರೆ.

ನಿಗದಿತ ಸ್ಥಳದಲ್ಲಿ ಕಟ್ಟಡ ತ್ಯಾಜ್ಯ ವಿಲೇವಾರಿ ಮಾಡಿ

ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ, ದುರಸ್ತಿ ಮತ್ತು ತೆರವುಗೊಳಿಸುವಿಕೆಯಿಂದ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಅನೇಕ ಕಡೆ ಸಾರ್ವಜನಿಕರು ರಸ್ತೆ ಬದಿಯಲ್ಲಿ, ಖಾಲಿ ನಿವೇಶನಗಳಲ್ಲಿ ಹಾಕುತ್ತಿರುವುದನ್ನು ನಿಯಂತ್ರಿಸಲು ಪಾಲಿಕೆಯು ಮೈಸೂರು ನಗರದ ಹೊರವಲಯದಲ್ಲಿನ ಸಿ.ಎ.05, ಹಂಚ್ಯಾ-ಸಾತಗಳ್ಳಿ `ಎ’ ವಲಯದಲ್ಲಿ ಖಾಲಿ ಪ್ರದೇಶವನ್ನು ಕಟ್ಟಡ ತ್ಯಾಜ್ಯದ ವಿಲೇವಾರಿಗೆಂದು ಗುರುತಿಸಿದೆ.

ಇದನ್ನೂ ಓದಿ: Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

ಮುಂದಿನ ದಿನಗಳಲ್ಲಿ ಸಾರ್ವಜನಿಕರು ಹಾಗೂ ಖಾಸಗಿ ವ್ಯಕ್ತಿಗಳು ನಗರ ಪಾಲಿಕೆಯಿಂದ ನಿಗದಿಗೊಳಿಸಿರುವ ಸ್ಥಳದಲ್ಲೇ ಕಡ್ಡಾಯವಾಗಿ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡಬೇಕೆಂದು ಸೂಚಿಸಲಾಗಿದೆ. ಒಂದು ವೇಳೆ ನಗರ ಪ್ರದೇಶದ ಇತರೆ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಕಂಡುಬoದಲ್ಲಿ ಸಂಬoಧಪಟ್ಟ ಕಟ್ಟಡದ ಮಾಲೀಕರಿಗೆ ಮತ್ತು ವಾಹನದ ಮಾಲೀಕರಿಗೆ ಭಾರೀ ಮೊತ್ತದ ದಂಡ ವಿಧಿಸುವುದಲ್ಲದೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Continue Reading

ಬೆಂಗಳೂರು

Road Accident : ಮೈಸೂರು- ಬೆಂಗಳೂರಲ್ಲಿ ಮೂವರ ಪ್ರಾಣ ಕಸಿದ ಮೂರು ಪ್ರತ್ಯೇಕ ಅಪಘಾತ

Road Accident : ಬೆಂಗಳೂರು-ಮೈಸೂರಲ್ಲಿ ಪ್ರತ್ಯೇಕ ಕಡೆಗಳಲ್ಲಿ ನಡೆದ ಅಪಘಾತದಲ್ಲಿ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಯುವಕನೊರ್ವ ಬೈಕ್‌ ಅಪಘಾತದಲ್ಲಿ ಮೃತಪಟ್ಟರೆ, ಮೈಸೂರಲ್ಲಿ ಎರಡು ಅಪಘಾತದಲ್ಲಿ ಇಬ್ಬರು ಜೀವ ಕಳೆದುಕೊಂಡಿದ್ದಾರೆ.

VISTARANEWS.COM


on

By

road Accident in Bengaluru mysore
Koo

ಮೈಸೂರು/ಬೆಂಗಳೂರು: ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಅಪಘಾತ (Road Accident) ನಡೆದಿದ್ದು, ಇಬ್ಬರು ಮೃತಪಟ್ಟರೆ, ಬೆಂಗಳೂರಲ್ಲಿ ಬರ್ತ್‌ ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಯುವಕ ಸ್ವಯಂ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.

ಬೈಕ್‌ಗಳ ನಡುವೆ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹಿರಿಕ್ಯಾತನಹಳ್ಳಿಯಲ್ಲಿ ಅಪಘಾತ ನಡೆದಿದೆ.

ಹುಣಸೂರು ತಾಲೂಕಿನ ಮರೂರುಕಾವಲ್ ಗ್ರಾಮದ ನಿವಾಸಿ ಸಾಗರ್ (35) ಮೃತ ದುರ್ದೈವಿ. ಹಿಂಬದಿ ಕುಳಿತಿದ್ದ ಅರಸು ಕಲ್ಲಹಳ್ಳಿ ಗ್ರಾಮದ ಹರೀಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಹರೀಶ್‌ನನ್ನು ಹುಣಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮತ್ತೊಂದು ವಾಹನದ ಸವಾರ ಕೆಸ್ತೂರು ಕೊಪ್ಪಲು ಗ್ರಾಮದ ನಿವಾಸಿ ಕೆಂಡಗಣ್ಣ ಅವರು ತೀವ್ರ ಗಾಯವಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಕಾರು-ಸ್ಕೂಟರ್‌ ಅಪಘಾತ; ಮಹಿಳೆ ಸಾವು

ಕಾರು- ಸ್ಕೂಟರ್ ನಡುವೆ ಭೀಕ ಅಪಘಾತ ಸಂಭವಿಸಿದ್ದು, ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಮೈಸೂರಿನ ಕೆಆರ್‌ಎಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಹೆಬ್ಬಾಳು ಬಡಾವಣೆ ನಿವಾಸಿ ರಾಧಾ (34) ಮೃತ ದುರ್ದೈವಿ.

ಸ್ಥಳಕ್ಕೆ ವಿವಿ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Student Death : ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ಎಂಜಿನಿಯರಿಂಗ್‌ ವಿದ್ಯಾರ್ಥಿನಿ; ಕಾಲೇಜು ಕಿರುಕುಳಕ್ಕೆ ಬೇಸತ್ತಳೇ?

ಹೆಲ್ಮೆಟ್‌ರಹಿತ ಸವಾರಿಗೆ ಯುವಕ ಬಲಿ

ಬೆಂಗಳೂರಿನ ನಾಗವಾರ ಕಡೆಯಿಂದ ಮೂಡಲಪಾಳ್ಯ ಕಡೆಗೆ ಬೈಕ್‌ನಲ್ಲಿ ಬರುವಾಗ ಯುವಕನೊರ್ವ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ವರುಣ್‌ ಮೃತ ದುರ್ದೈವಿ.

ಮೂಲತಃ ಕೋಲಾರದ ವರುಣ್ ಬೆಂಗಳೂರು ಪೀಣ್ಯ ಇಂಡಸ್ಟ್ರಿಯಲ್‌ ಏರಿಯಾದಲ್ಲಿ ಏಷಿಯನ್ ಪೈಂಟ್ಸ್‌ನಲ್ಲಿ ಮ್ಯಾನೆಜರ್ ಆಗಿ ಕೆಲಸ ಮಾಡುತ್ತಿದ್ದ. ಗುರುವಾರ ರಾತ್ರಿ ಸ್ನೇಹಿತನ ಬರ್ತ್ ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ವರುಣ್ ಬಳಿಕ ಹಾಸ್ಟೆಲ್‌ಗೆ ತೆರಳಿ ಸ್ನೇಹಿತರ ಭೇಟಿಯಾಗಿ ಬರುತ್ತಿದ್ದ. ಈ ವೇಳೆ ಮಾಳಗಾಳ ಬಳಿ ಸೆಲ್ಫ್‌ ಆ್ಯಕ್ಸಿಡೆಂಟ್‌ ಆಗಿದೆ. ಹೆಲ್ಮೆಟ್ ಧರಿಸದೇ ಇದ್ದಿದ್ದರಿಂದ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ವರುಣ್‌ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ತಂದೆ ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದಾರೆ. ವರುಣ್‌ ತಮ್ಮ ಇನ್ನೂ ವಿದ್ಯಾಭ್ಯಾಸ ಮಾಡುತ್ತಿದ್ದು, ಇಡೀ ಕುಟುಂಬಕ್ಕೆ ವರುಣ್‌ ಆಧಾರವಾಗಿದ್ದ. ತಾಯಿಯ ಆಸ್ಪತ್ರೆ ಖರ್ಚಿಗೂ ಈತನೇ ಆಧಾರವಾಗಿದ್ದ. ವರುಣ್‌ ಸಾವು ಇಡೀ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
HD Revanna case Hearing in Holenarasipura sexual assault case adjourned to Monday
ಹಾಸನ2 mins ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ; ರೇವಣ್ಣಗೆ ಜೈಲಾ? ಬೇಲಾ?

Kanguva Film Suriya-Bobby Deol's war scene with 10,000 people
ಕಾಲಿವುಡ್5 mins ago

Kanguva Film: 10,000 ಜನರನ್ನು ಒಳಗೊಂಡಿತ್ತು ʻಕಂಗುವʼ ಚಿತ್ರದ ಸೂರ್ಯ-ಬಾಬಿ ಡಿಯೋಲ್‌ರ ಈ ದೃಶ್ಯ!

karnataka weather Forecast
ಮಳೆ6 mins ago

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Narendra Modi
ದೇಶ8 mins ago

ಪಾಕ್‌ ಬಳಿ ಅಣು ಬಾಂಬ್‌ ಇದೆ, ಆದ್ರೆ, ಮೆಂಟೇನ್ ಮಾಡೋಕೂ ಅವರ ಬಳಿ ದುಡ್ಡಿಲ್ಲ ಎಂದ ಮೋದಿ; ಕಾಂಗ್ರೆಸ್‌ಗೆ ಚಾಟಿ

IPL 2024
ಪ್ರಮುಖ ಸುದ್ದಿ10 mins ago

IPL 2024 : ಆರ್​ಸಿಬಿ ವಿರುದ್ಧ ವೇಗದ ಬೌಲರ್​ ಕಣಕ್ಕೆ; ಚೆನ್ನೈ ತಂಡದಲ್ಲಿ ಸಂಭ್ರಮ

SubAir facility
ಕ್ರೀಡೆ20 mins ago

SubAir facility: ಸಬ್‌ ಏರ್‌ ಸಿಸ್ಟಮ್‌ ಹೇಗೆ ಕಾರ್ಯನಿರ್ವಹಿಸುತ್ತದೆ?; ಮಳೆ ನಿಂತು ಎಷ್ಟು ಗಂಟೆಯಲ್ಲಿ ಪಂದ್ಯ ಆರಂಭ?

Lokayukta Raid
ಕರ್ನಾಟಕ26 mins ago

Lokayukta Raid: ಲೋಕಾಯುಕ್ತ ದಾಳಿ; 30 ಸಾವಿರ ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಎಫ್‌ಡಿಎ

Health Tips Kannada sleepy is good
ಆರೋಗ್ಯ28 mins ago

Health Tips Kannada: ಕೂತಲ್ಲೇ ತೂಕಡಿಸುತ್ತೀರಾ? ಇದು ಒಳ್ಳೆಯದು!

Jr NTR and Prashanth Neel get the title Dragon from Karan
ಬಾಲಿವುಡ್33 mins ago

Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

Narendra Modi
ದೇಶ44 mins ago

Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ11 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌