Mysuru News : ಪತಿಗೆ ಬ್ಯಾಂಕ್‌ನಿಂದ ನೋಟಿಸ್; ಹೆದರಿ ಟಾಯ್ಲೆಟ್‌ನಲ್ಲಿ ಪತ್ನಿ ಆತ್ಮಹತ್ಯೆ - Vistara News

ಮೈಸೂರು

Mysuru News : ಪತಿಗೆ ಬ್ಯಾಂಕ್‌ನಿಂದ ನೋಟಿಸ್; ಹೆದರಿ ಟಾಯ್ಲೆಟ್‌ನಲ್ಲಿ ಪತ್ನಿ ಆತ್ಮಹತ್ಯೆ

Self harming : ಪತಿ ಮಾಡಿದ ಸಾಲಕ್ಕೆ ಬ್ಯಾಂಕ್‌ನವರು ನೋಟಿಸ್‌ (Bank Notice) ಕೊಟ್ಟಿದ್ದಕ್ಕೆ ಹೆದರಿದ ಪತ್ನಿ ಆತ್ಮಹತ್ಯೆ (Mysuru News) ಮಾಡಿಕೊಂಡಿದ್ದಾರೆ.

VISTARANEWS.COM


on

Bank issues notice to husband Wife commits suicide in toilet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಪತಿಗೆ ಬ್ಯಾಂಕ್ ನೋಟಿಸ್ (Bank Notice) ಕೊಟ್ಟಿದ್ದಕ್ಕೆ ಹೆದರಿ ಪತ್ನಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನ (Mysuru News) ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ರಂಗಮ್ಮ (70) ಮೃತ ದುರ್ದೈವಿ.

ಪತಿ ಮಾಡಿದ ಸಾಲಕ್ಕೆ ಬ್ಯಾಂಕ್‌ನವರು ನೋಟಿಸ್ ಕಳುಹಿಸಿದ್ದರು. ಈ ನೋಟಿಸ್‌ಗೆ ಹೆದರಿದ ಪತ್ನಿ ರಂಗಮ್ಮ, ಮನೆಯ ಹಿಂಭಾಗದ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪತಿ ಯಣ್ಣೇಗೌಡ 6 ವರ್ಷಗಳ ಹಿಂದೆ ಹೊಳೆನರಸೀಪುರ ತಾಲೂಕಿನ ಸೋಮನಹಳ್ಳಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಜಮೀನು, ಹೊಗೆಸೊಪ್ಪಿನ ಬ್ಯಾರನ್ ಆಧಾರದ ಮೇಲೆ ಸಾಲವನ್ನು ಪಡೆದಿದ್ದರು. ಅಸಲು, ಬಡ್ಡಿಯಿಂದ 8.50 ಲಕ್ಷ ರೂ. ಕಟ್ಟುವಂತೆ ಬ್ಯಾಂಕ್‌ನವರು ನೋಟಿಸ್ ನೀಡಿದ್ದರು.

ಬ್ಯಾಂಕ್‌ ನೋಟಿಸ್‌ಗೆ ಕಂಗಲಾಗಿ ಭಯಗೊಂಡ ರಂಗಮ್ಮ, ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಕುಟುಂಬಸ್ಥರು ಶೌಚಾಲಯಕ್ಕೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ರಂಗಮ್ಮ ಪುತ್ರ ಶೆಟ್ಟಿಗೌಡ ಸಾಲಿಗ್ರಾಮ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Road Accident : ಟೆಂಪೋಗೆ ಸ್ಕೂಟರ್‌ ಡಿಕ್ಕಿ; ತಾಯಿ ಕಣ್ಣೇದರು ಒದ್ದಾಡಿ ಜೀವ ಬಿಟ್ಟ ಮಗ

ಚೈತ್ರಾ ಹೆಬ್ಬಾರ್‌ ಮಿಸ್ಸಿಂಗ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್‌; ಪ್ರಿಯಕರ ಹಿಮಾಚಲದಲ್ಲಿ; ಅವಳೆಲ್ಲಿ?

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವಿಶ್ವವಿದ್ಯಾಲಯಲ್ಲಿ (Private University) ಪಿಎಚ್‌ಡಿ ಅಧ್ಯಯನ (PhD Study) ನಡೆಸುತ್ತಿದ್ದು ಕಳೆದ ಫೆಬ್ರವರಿ 17ರಿಂದ ನಾಪತ್ತೆಯಾಗಿದ್ದ ಪುತ್ತೂರು ಮೂಲದ ಬ್ರಾಹ್ಮಣ ಯುವತಿ ಚೈತ್ರಾ ಹೆಬ್ಬಾರ್‌ (Chaithra Hebbar Missing Case) ಮಿಸ್ಸಿಂಗ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಅದೇನೆಂದರೆ ಚೈತ್ರಾ ಹೆಬ್ಬಾರ್‌ ಯಾರ ಜತೆ ಓಡಿ ಹೋಗಿದ್ದಾಳೆ ಎಂದು ನಂಬಲಾಗಿತ್ತೋ ಆ ಯುವಕ ಈಗ ಹಿಮಾಚಲ ಪ್ರದೇಶದಲ್ಲಿ ಪತ್ತೆಯಾಗಿದ್ದಾನೆ. ಆದರೆ, ಚೈತ್ರಾ ಹೆಬ್ಬಾರ್‌ ಆತನ ಜತೆಗಿಲ್ಲ. ಆಕೆ ವಿಸಿಟಿಂಗ್‌ ವಿಸಾ ಪಡೆದು ಕತಾರ್‌ಗೆ ಹಾರಿದ್ದಾಳೆ ಎಂದು ಹೇಳಲಾಗುತ್ತಿದೆ.

ಆಕೆ ನಾಪತ್ತೆಯಾದ ದಿನದಿಂದ ಆಕೆಯೊಂದಿಗೆ ಆತ್ಮೀಯತೆಯಿಂದ ಇದ್ದ ಶಾರುಖ್‌ ಶೇಖ್‌ (Sharukh Shekh) ಎಂಬಾತ ಕೂಡಾ ನಾಪತ್ತೆಯಾಗಿದ್ದಾನೆ. ಹೀಗಾಗಿ ಇದು ಹಿಂದು-ಮುಸ್ಲಿಂ ಜೋಡಿ (Hindu Muslim) ಪಲಾಯನ, ಲವ್‌ ಜಿಹಾದ್‌ (Love Jihad) ಎಂಬಿತ್ಯಾದಿ ವ್ಯಾಖ್ಯಾನಗಳಿಗೂ ಕಾರಣವಾಗಿತ್ತು. ಹೀಗಾಗಿ ಇಬ್ಬರನ್ನೂ ಪೊಲೀಸರು ನಿರಂತರವಾಗಿ ಹುಡುಕಾಟ ನಡೆಸಿದ್ದರು.

ಚೈತ್ರಾ ಹೆಬ್ಬಾರ್‌ ಮೂಲತಃ ಪುತ್ತೂರಿನ ಪುರುಷರ ಕಟ್ಟೆ ನಿವಾಸಿ. ತಂದೆಯ ನಿಧನದ ಬಳಿಕ ಆಕೆ ಮಂಗಳೂರಿನ ದೊಡ್ಡಪ್ಪನ ಮನೆಯಲ್ಲಿದ್ದು, ಎಂಎಸ್‌ಸಿ ಮಾಡಿದ್ದಳು. ಮುಂದೆ ದೇರಳಕಟ್ಟೆಯ ಖಾಸಗಿ ವಿವಿಯಲ್ಲಿ ಪಿಎಚ್‌ಡಿ ಮಾಡಲು ಆರಂಭಿಸಿದ್ದಳು. ಅದಕ್ಕೆ ಅನುಕೂಲವಾಗಲಿ ಎಂಬಂತೆ ಮಾಡೂರಿನಲ್ಲಿ ಪಿಜಿ ಒಂದಕ್ಕೆ ಸೇರಿದ್ದಳು.

Chaithra Hebbar Missing Case

ಚೈತ್ರಾ ಪಿಜಿಯಲ್ಲಿ ಉಳಿದುಕೊಂಡಿದ್ದಾಗ ಆಕೆಯನ್ನು ಭೇಟಿಯಾಗಲು ಒಬ್ಬ ಮುಸ್ಲಿಂ ಹುಡುಗ ಬರುತ್ತಿದ್ದ ಎನ್ನಲಾಗಿದೆ. ಆತನ ಹೆಸರು ಶಾರುಖ್‌ ಶೇಖ್‌. ಶಾರುಖ್‌ ಶೇಖ್‌ ಮೂಲತಃ ಬಂಟ್ವಾಳ ತಾಲೂಕಿನ ನೇರಳ ಕಟ್ಟೆಯವನು. ಆದರೆ, ಅವನು ಇದ್ದದ್ದು ಪುತ್ತೂರಿನ ಕೂರ್ನಡ್ಕದ ಚಿಕ್ಕಮ್ಮನ ಮನೆಯಲ್ಲಿ. ಕೂರ್ನಡ್ಕ ಮತ್ತು ಪುರುಷರ ಕಟ್ಟೆ ಹತ್ತಿರ ಹತ್ತಿರ. ಹೀಗಾಗಿ ಚೈತ್ರಾ ಪುತ್ತೂರಿನಲ್ಲಿ ಇದ್ದಾಗಲೇ ಅವರಿಬ್ಬರಿಗೆ ಪರಿಚಯವಾಗಿರಬಹುದು ಎಂದು ಹೇಳಲಾಗಿದೆ.

ಶಾರುಖ್‌ ಶೇಖ್‌ ಚೈತ್ರಾ ಹೆಬ್ಬಾರ್‌ಳನ್ನು ಭೇಟಿಯಾಗುತ್ತಿರುವುದು ಮಾಡೂರಿನ ಬಜರಂಗ ದಳದ ಯುವಕರ ಕಣ್ಣಿಗೆ ಬಿದ್ದಿತ್ತು, ಇದರಿಂದ ಮುಂದೆ ಅಪಾಯವಿದೆ ಎಂದು ಅರಿತ ಅವು ಚೈತ್ರಾಳ ದೊಡ್ಡಪ್ಪನಿಗೆ ವಿಷಯ ತಿಳಿಸಿದ್ದರು ಎನ್ನಲಾಗಿದೆ. ದೊಡ್ಡಪ್ಪ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದರು. ಈ ನಡುವೆ ಕಳೆದ ಫೆಬ್ರವರಿ 17ರಂದು ಆಕೆ ನಾಪತ್ತೆಯಾಗಿದ್ದಾಳೆ.

ಇದನ್ನೂ ಓದಿ: Chaithra Hebbar : ಪಿಎಚ್‌ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್‌ ನಿಗೂಢ ನಾಪತ್ತೆ; ಯಾರು ಈ ಶಾರುಖ್‌ ಶೇಖ್‌?

ಆಕೆ ಶಾರುಖ್‌ ಶೇಖ್‌ ಜತೆ ಸ್ಕೂಟರ್‌ನಲ್ಲಿ ಹೋಗಿದ್ದು ತಿಳಿದುಬಂದಿತ್ತು. ಆ ಸ್ಕೂಟರ್‌ ಮಂಗಳೂರಿನಲ್ಲಿ ಪತ್ತೆಯಾಗಿತ್ತು. ಆಕೆಯ ಮೊಬೈಲ್‌ ಕೂಡಾ ಸ್ವಿಚ್‌ ಆಫ್‌ ಆಗಿತ್ತು. ಚೈತ್ರಾ ನಾಪತ್ತೆಯಾದ ಬಳಿಕ ಆಕೆಯ ಸುರತ್ಕಲ್‌ನ ಎಟಿಎಂನಲ್ಲಿ ಆಕೆಯ ಅಕೌಂಟ್‌ನಿಂದ ಹಣ ಡ್ರಾ ಮಾಡಲಾಗಿತ್ತು. ಈಗ ಪೊಲೀಸರು ಅಕೌಂಟ್‌ ಬ್ಲಾಕ್‌ ಮಾಡಿದ್ದಾರೆ.

ಶಾರುಖ್‌ ಶೇಖರ್‌ಗೆ ಡ್ರಗ್ಸ್‌ ಜಾಲದ ಜತೆ ಸಂಪರ್ಕವಿದ್ದು ಆತ ಚೈತ್ರಾ ಹೆಬ್ಬಾರ್‌ಗೂ ಡ್ರಗ್ಸ್‌ ಆಸೆ ತೋರಿಸಿ ಆಕೆಯನ್ನು ಬುಟ್ಟಿಗೆ ಹಾಕಿಕೊಂಡಿದ್ದ ಎಂಬ ಗುಮಾನಿ ಇದೆ. ಐಟಿಐ ವಿದ್ಯಾಭ್ಯಾಸ ಪಡೆದ ಆತ ಕತಾರ್‌ಗೆ ಹೋಗಿದ್ದ. ಅಲ್ಲಿ ಯಾವುದೇ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿ ಸಿಕ್ಕಿಬಿದ್ದಿದ್ದ. ಜೈಲು ಸೇರಿ ಬಳಿಕ ಬಿಡುಗಡೆಯಾಗಿ ಊರಿಗೆ ಬಂದವನೇ ಇಲ್ಲೂ ಅಂತಹುದೇ ಕೃತ್ಯದಲ್ಲಿ ತೊಡಗಿಕೊಂಡಿದ್ದ ಎನ್ನಲಾಗಿದೆ.

Chaithra Hebbar : ಹಿಮಾಚಲ‌ ಪ್ರದೇಶದಲ್ಲಿ ಸಿಕ್ಕಿಬಿದ್ದ ಶಾರುಖ್‌

ಈ ನಡುವೆ, ಮಂಗಳೂರು ಪೊಲೀಸರು ನಾನಾ ತನಿಖಾ ತಂಡಗಳನ್ನು ರಚಿಸಿ ಚೈತ್ರಾ ಮತ್ತು ಶಾರುಖ್‌ ಶೇಖ್‌ ಪತ್ತೆಗೆ ಪ್ರಯತ್ನ ನಡೆಸಿದ್ದರು. ಅದರ ಫಲವಾಗಿ ಈಗ ಶಾರುಖ್‌ ಶೇಖ್‌ ಹಿಮಾಚಲ ಪ್ರದೇಶದಲ್ಲಿ ಪತ್ತೆಯಾಗಿದ್ದಾನೆ.

ಆದರೆ, ಚೈತ್ರಾ ಆತನ ಜತೆಗೆ ಇರಲಿಲ್ಲ. ಪೊಲೀಸರಿಗೆ ಸಿಕ್ಕಿರುವ ಮಾಹಿತಿ ಪ್ರಕಾರ ಚೈತ್ರಾ ವಿಸಿಟಿಂಗ್ ವೀಸಾ ಪಡೆದು ಕತಾರ್ಗೆ ತೆರಳಿದ್ದಾಳೆ. ಹಾಗಿದ್ದರೆ ಆಕೆ ಶಾರುಖ್‌ ಶೇಖ್‌ ಜತೆ ಹೋಗಿರಲಿಲ್ಲವಾ? ಆಕೆ ನಾಪತ್ತೆಯಾಗುತ್ತಿದ್ದಂತೆಯೇ ಶಾರುಖ್‌ ಕೂಡಾ ಕಣ್ಮರೆಯಾಗಿದ್ದೇಕೆ? ಆಕೆಯನ್ನು ಮೊದಲು ಕತಾರ್‌ಗೆ ಕಳುಹಿಸಿ ತಾನು ಬಳಿಕ ತೆರಳಲು ಪ್ಲ್ಯಾನ್‌ ಮಾಡಿದ್ದನಾ? ಎನ್ನುವ ಹಲವು ಪ್ರಶ್ನೆಗಳಿಗೆ ಈಗ ಉಳ್ಳಾಲ ಪೊಲೀಸರು ಉತ್ತರ ಹುಡುಕುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

karnataka Weather : ಇಂದು ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ; ಸಂಜೆಗೆ ಭಾರಿ ವರ್ಷಧಾರೆ

Karnataka Weather Forecast : ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮಳೆಯು (Rain News) ಅಬ್ಬರಿಸಲಿದೆ. ಜೋರಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಗುಡುಗು ಸಹಿತ ಮಳೆಯಾಗಲಿದ್ದು, ಬಿರುಗಾಳಿಯು ಜತೆಗೆ ಇರಲಿದೆ. ಹೀಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆಗೆ ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ.

ಆಲಿಕಲ್ಲು ಮಳೆ ಎಚ್ಚರಿಕೆ

ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ರಾಮನಗರದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಗುಡುಗು ಸಹಿತ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ. ಮಲೆನಾಡಿನಲ್ಲಿ ಮಾಯವಾಗಿದ್ದ ಮಳೆಯು ಮತ್ತೆ ಹಾಜರಾತಿ ಹಾಕಿದೆ. ಮಲೆನಾಡಿನ ಕೊಡಗು ಹಾಗೂ ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯದಲ್ಲಿ ಕೆಲವೆಡೆ ಭಾರೀ ಮಳೆಯೊಂದಿಗೆ ಅಬ್ಬರಿಸಲಿದೆ.

ಕರಾವಳಿಯಲ್ಲೂ ಮಳೆಯಿಲ್ಲದೇ ತಾಪಮಾನ ಹೆಚ್ಚಾಗಿತ್ತು. ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸೇರಿ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಬಳ್ಳಾರಿಯಲ್ಲೂ ಮಳೆ ಅಬ್ಬರಿಸಲಿದೆ. ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗುಡುಗು ಇರಲಿದೆ.

ಬೆಂಗಳೂರಲ್ಲಿ ಸಂಜೆ ಮಳೆ

ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದೊಂದಿಗೆ ಸಾಧಾರಣ ಮಳೆಯಾಗಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಗುಡುಗು ಸಹಿತ ಮಳೆಗೆ ಯೆಲ್ಲೋ ಅಲರ್ಟ್

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

ಮಳೆ ನಡುವೆಯೂ ಈ ಜಿಲ್ಲೆಗಳಿಗೆ ಹೀಟ್‌ ವೇವ್‌

ಒಂದು ಕಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಹೀಟ್‌ ವೇವ್‌ ಎಚ್ಚರಿಕೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ಏ.7ರಂದು ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗುವ ಸಾದ್ಯತೆ ಇದೆ.

ಶಾಖ ತರಂಗಕ್ಕೆ ಈ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಎಚ್ಚರಿಕೆ

ವಿಜಯನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ಯಾದಗಿರಿ, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆಯ ಜಿಲ್ಲೆಗಳಲ್ಲಿ ತಾಪಮಾನ ದುಪ್ಪಟ್ಟು ಆಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Rain News : ಬೆಂಗಳೂರಲ್ಲಿ ಎರಡು ದಿನಗಳಿಂದ ಕಾಣೆಯಾಗಿದ್ದ, ಸೋಮವಾರ (ಮೇ.6) ಸಂಜೆ ಆಗುತ್ತಿದ್ದಂತೆ ಮಳೆಯು (Bengaluru Rains) ಮತ್ತೆ ಅಬ್ಬರಿಸಿದೆ. ಭಾರಿ ಗಾಳಿಯೊಂದಿಗೆ ಗುಡುಗು, ಸಿಡಿಲಿನ ಮಳೆಯಾಗಿದೆ. ಇನ್ನೊಂದು ವಾರ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ರಾಜ್ಯಾದ್ಯಂದ ಬಿಡುವು ಕೊಟ್ಟ ಮಳೆರಾಯ ಮತ್ತೆ ಅಬ್ಬರಿಸಲು ಸಜ್ಜಾಗುತ್ತಿದ್ದಾನೆ. ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನತೆಗೆ ಸಂಜೆ ಆಗುತ್ತಿದ್ದಂತೆ ಮಳೆಯು ಧರೆಗಿಳಿದಿತ್ತು. ಬೆಂಗಳೂರು (Benagluru Rains), ದೇವನಹಳ್ಳಿ, ಏರ್‌ಪೋರ್ಟ್‌ ಸುತ್ತಮುತ್ತ ಜೋರು ಗಾಳಿಯೊಂದಿಗೆ ಮಳೆ ಶುರುವಾಯಿತು. ಆಗಾಗ ಗುಡುಗು ಸಿಡಿಲು ಬಂದು ಹೋಗಿತ್ತು. ಇನ್ನೊಂದು ವಾರ ಬಿರುಗಾಳಿ ಜತೆಗೆ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸಚನೆಯನ್ನು (Karnataka Weather Forecast) ನೀಡಿದೆ.

ಆನೇಕಲ್‌ನ ವಣಕನಹಳ್ಳಿ, ಸೋಲೂರು ಗೊಮ್ಮಾಳಾಪುರ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಆನೇಕಲ್, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಕಳೆದ ಅರ್ಧ ಗಂಟೆಯಿಂದ ಮಳೆಯು ಸುರಿಯುತ್ತಿದ್ದು, ಕಾದ ಕೆಂಡವಾಗಿದ್ದ ವಾತಾವರಣ ತಂಪಾಗಿದೆ. ಬೆಂಗಳೂರು ನಗರದ ವಿಧಾನಸೌಧ, ಚಾಲುಕ್ಯ ಸರ್ಕಲ್, ಆನಂದ್ ರಾವ್ ಸರ್ಕಲ್, ಮೆಜೆಸ್ಟಿಕ್ ಸೇರಿ ಶಿವಾಜಿನಗರ, ಕೆಂಗೇರಿ ಅಸುಪಾಸು ಮಳೆಯಾಗುತ್ತಿದೆ. ಇನ್ನೂ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಮಳೆಯಲ್ಲಿ ಸಿಲುಕಿಕೊಂಡರು. ಇತ್ತ ದಿಢೀರ್‌ ಮಳೆಗೆ ಬಸ್‌ ನಿಲ್ದಾಣ, ಸೇತುವೆ ಕೆಳಗೆ ಆಶ್ರಯಿಸಿದರು.

ಇದನ್ನೂ ಓದಿ: Summer Holiday Fashion: ಸೀಸನ್‌ ಟ್ರೆಂಡ್‌ನ ಟಾಪ್‌ ಲಿಸ್ಟ್‌ನಲ್ಲಿ ಸಮ್ಮರ್‌ ಹಾಲಿಡೇ ಫ್ಯಾಷನ್‌

ದೇವನಹಳ್ಳಿ ಸುತ್ತಮುತ್ತ ತುಂತುರು ಮಳೆ

ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನತೆಗೆ ಸ್ವಲ್ಪ ಮಟ್ಟಿಗೆ ವರುಣ ತಂಪೆರದಿದ್ದಾನೆ. ಮಳೆ ಆರಂಭವಾಗುತ್ತಿದ್ದಂತೆ ಜನರು ತಮ್ಮ ಮೊಬೈಲ್‌ಗಳಲ್ಲಿ ಮಳೆ ಸೆರೆ ಹಿಡಿಯಲು ಮುಂದಾದ ದೃಶ್ಯ ಕಂಡು ಬಂತು.

ಮೇ 10ರವರೆಗೆ ಮಳೆಯಾರ್ಭಟ

ಚಾಮರಾಜನಗರ ಮತ್ತು ರಾಮನಗರದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಒಂದು ಅಥವಾ ಎರಡು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಮೈಸೂರು ಮತ್ತು ಮಂಡ್ಯದಲ್ಲೂ ಕೆಲವೆಡೆ ವ್ಯಾಪಕ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ಗುಡುಗು ಸಾಥ್‌ ನೀಡಲಿದೆ.

ಮತದಾನಕ್ಕೆ ಮಳೆ ಅಡ್ಡಿ

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಹೀಗಾಗಿ ಮತದಾನಕ್ಕೆ ಮಳೆರಾಯ ಅಡ್ಡಿಯಾಗಲಿದ್ದನ್ನಾ ಎಂಬ ಅನುಮಾನವಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident : ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಮೃತ್ಯು; 30ಕ್ಕೂ ಹೆಚ್ಚು ಮಂದಿಗೆ ಗಾಯ

Road Accident : ಚಿತ್ರದುರ್ಗದಲ್ಲಿ ಕಾರು ಪಲ್ಟಿಯಾಗಿ ವೃದ್ಧರಿಬ್ಬರು ಮೃತಪಟ್ಟರೆ, ಚಿಕ್ಕಮಗಳೂರಿನಲ್ಲಿ ಬೈಕ್‌ ಸವಾರರಿಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮೈಸೂರಿನಲ್ಲಿ ಪ್ರಯಾಣಿಕರಿದ್ದ ಬಸ್ಸಿನ ಸ್ಟೇರಿಂಗ್‌ ಕಟ್‌ ಆಗಿ ಗದ್ದೆಗೆ ನುಗ್ಗಿದೆ. ಪರಿಣಾಮ ಬಸ್ಸಿನಲ್ಲಿದ್ದವರು ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Road Accident
Koo

ಚಿತ್ರದುರ್ಗ/ಚಿಕ್ಕಮಗಳೂರು/ಮೈಸೂರು: ಪ್ರತ್ಯೇಕ ಕಡೆಗಳಲ್ಲಿ ನಡೆದ ಅಪಘಾತಗಳಲ್ಲಿ (Road Accident) ಸಾವು-ನೋವು ಸಂಭವಿಸಿದೆ. ಅತಿ ವೇಗ ಚಾಲನೆಗೆ ನಾಲ್ವರು ಪ್ರಾಣವನ್ನೇ ತೆತ್ತಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಚರಂಡಿಗೆ ಪಲ್ಟಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರು ವೃದ್ಧರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ದಾವಣಗೆರೆ ತಾಲೂಕಿನ ಹುಣಸೇಕಟ್ಟೆ ಗ್ರಾಮದ ಪಕ್ಕದಲ್ಲಿರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದೆ. ಹರಿಹರದ ಸಾರಥಿ ಗ್ರಾಮದ ಕೊಟ್ರೇಶಪ್ಪ (65), ಹುಬ್ಬಳ್ಳಿಯ ಪುಷ್ಟ (55) ಮೃತ ದುರ್ದೈವಿಗಳು.

ಚಿತ್ರದುರ್ಗದಲ್ಲಿ ಮದುವೆ ಮುಗಿಸಿಕೊಂಡು ವಾಪಸ್‌ ಬರುವಾಗ ಈ ದುರ್ಘಟನೆ ನಡೆದಿದೆ. ಅತಿ ವೇಗದ ಚಾಲನೆಯಿಂದ‌ಲೇ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಗಾಯಗೊಂಡವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

Road Accident

ಇದನ್ನೂ ಓದಿ: Drowned In water : ಈಜಲು 20 ಅಡಿ ಎತ್ತರದಿಂದ ನೀರಿನ ಬುಗ್ಗೆಗೆ ಜಿಗಿದವನು ಮತ್ತೆ ಏಳಲೇ ಇಲ್ಲ!

ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರಿನ ಎನ್‌ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ ಸವಾರರು ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಗುದ್ದಿದ್ದಾರೆ. ಪರಿಣಾಮ ಬೈಕ್‌ನಿಂದ ಹಾರಿ ಕೆಳಗೆ ಬಿದ್ದಿದ್ದು, ತಲೆಗೆ ಗಂಭೀರ ಪೆಟ್ಟಾಗಿದೆ.

ಇದರಿಂದಾಗಿ ಹೊರನಾಡು ಗ್ರಾಮದ ಉಮೇಶ್, ಮುಂಡಗದ ಮನೆ ಗ್ರಾಮದ ಸುನಿಲ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಡಿಗೆರೆ ತಾಲೂಕಿನ ಮುಂಡಗದ ಮನೆ ಗ್ರಾಮದ ಉಮೇಶ್, ಸುನೀಲನನ್ನು ಶಿವಮೊಗ್ಗಕ್ಕೆ ಬಿಡಲು ಹೋಗುತ್ತಿದ್ದರು. ತಿರುವಿನಲ್ಲಿ ನಿಯಂತ್ರಣಕ್ಕೆ ಬೈಕ್ ನೇರ ವಿದ್ಯುತ್‌ ಕಂಬಕ್ಕೆ ಗುದ್ದಿದೆ.

Road Accident

ಸ್ಥಳಕ್ಕೆ ಎನ್‌.ಆರ್ ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ತಾಲೂಕಿನಲ್ಲಿ ಘಟನೆ ನಡೆದಿದೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Drowned In water : ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

ಸ್ಟೇರಿಂಗ್‌ ಕಟ್‌ ಆಗಿ ಗದ್ದೆಗೆ ನುಗ್ಗಿದ ಕೆಎಸ್ಆರ್‌ಟಿಸಿ ಬಸ್

30ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಸ್ಟೇರಿಂಗ್‌ ಕಟ್ಟಿಂಗ್‌ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದೆ. ಘಟನೆಯಲ್ಲಿ 30 ಪ್ರಯಾಣಿಕರು ಗಾಯಗೊಂಡಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕೆಸ್ತೂರು ಗೇಟ್ ಬಳಿ ನಡೆದಿದೆ.

Road Accident

ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕೆ.ಆರ್.ನಗರ ಮತ್ತು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಕೆಆರ್‌ನಗರ ಡಿಪೋಗೆ ಸೇರಿದ ಬಸ್ ಕೇರಳಾಪುರದಿಂದ ಸಾಲಿಗ್ರಾಮ, ಚುಂಚನಕಟ್ಟೆ ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದರು. ಕೆಆರ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Drowned In water : ಈಜಲು 20 ಅಡಿ ಎತ್ತರದಿಂದ ನೀರಿನ ಬುಗ್ಗೆಗೆ ಜಿಗಿದವನು ಮತ್ತೆ ಏಳಲೇ ಇಲ್ಲ!

Drowned In water : ಪುತ್ತೂರು ಘಟನೆ ಮಾಸುವ ಮೈಸೂರಿನಲ್ಲೂ ಯುವಕನೊಬ್ಬ ಕೆರೆಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದಾನೆ. ಹರಿಯುತ್ತಿರುವ ಕೆರೆಗೆ ಸುಮಾರು 20 ಅಡಿ ಎತ್ತರದಿಂದ ಜಿಗಿದಿದ್ದಾನೆ. ಆದರೆ ಮತ್ತೆ ಮೇಲೆ ಬರಲಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

VISTARANEWS.COM


on

By

Drowned in water mysuru
ಮೃತ ದುರ್ದೈವಿ
Koo

ಮೈಸೂರು: ರಣ ಬೇಸಿಗೆ ಹಿನ್ನೆಲೆಯಲ್ಲಿ ಸೆಕೆ ತಾಳಲಾರದೆ ಯುವಕನೊಬ್ಬ ಕೆರೆಯಲ್ಲಿ ಈಜಲು (Drowned In water) ಹೋಗಿ ನೀರುಪಾಲಾಗಿದ್ದಾನೆ. ಮೈಸೂರಿನ ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದ ಕೆರೆಯಲ್ಲಿ ಘಟನೆ ನಡೆದಿದೆ. ಚಾಮರಾಜನಗರದ ರಾಮಸಮುದ್ರ ಗ್ರಾಮದ ದೊಡ್ಡ ಬೀದಿ ನಿವಾಸಿ ಗುಣಶೇಖರ್(22) ಮೃತ ದುರ್ದೈವಿ.

ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದ ಗುಣಶೇಖರ್‌ ಕಪಿಲಾ ನದಿಯಿಂದ ಕೆರೆಗೆ ನೀರು ಹರಿಯುತ್ತಿತ್ತು. ಈ ವೇಳೆ ನೀರಿನ ಬುಗ್ಗೆಯ ಮೇಲೆ ಜಿಗಿದಿದ್ದಾನೆ. ಸುಮಾರು 20 ಅಡಿ ಎತ್ತರವಿದ್ದ ನೀರು ಚಿಮ್ಮುವ ಬುಗ್ಗೆಗೆ ಮೇಲಿನಿಂದ ಕೆಳಗೆ ಜಂಪ್ ಮಾಡಿದ್ದಾನೆ. ಮೇಲಿಂದ ಜಂಪ್ ಮಾಡಿದ ಪರಿಣಾಮ ಕೆಳಗಡೆ ಬಿದ್ದವನು ಮತ್ತೆ ಮೇಲೆ ಏಳಲೇ ಇಲ್ಲ.

ಸ್ಥಳಕ್ಕೆ ಕವಲಂದೆ ಪೊಲೀಸ್ ಠಾಣೆಯ ಪಿಎಸ್ಐ ಕೃಷ್ಣಕಾಂತ ಕೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮೇಲೆಯೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಲಿದ್ದಾರೆ. ಕವಲಂದೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

ಪುತ್ತೂರು: ಪೋಷಕರ ಎದುರೇ ಮಕ್ಕಳಿಬ್ಬರು ನೀರುಪಾಲಾಗಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳದ ನಾವೂರು ಎಂಬಲ್ಲಿ ಈ ದುರಂತ (Drowned In water) ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಎಂಬುವವರ ಪುತ್ರಿ ಆಶ್ರಾ (11), ಇಲಿಯಾಸ್ ಎಂಬುವವರ ಪುತ್ರಿ ನಾಶಿಯಾ (14) ನೀರುಪಾಲಾಗಿದ್ದಾರೆ.

ಎರಡು ಕುಟುಂಬಗಳು ತಮ್ಮ ಮಕ್ಕಳೊಂದಿಗೆ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಈ ವೇಳೆ ನೀರಿನಲ್ಲಿ ಆಟವಾಡುವಾಗ ಏಕಾಏಕಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾರೆ. ಪೋಷಕರ ಮುಂದೆಯೇ ಬಾಲಕಿಯರು ನೀರುಪಾಲಾಗಿದ್ದಾರೆ. ಈಜು ಬಾರದ ಹಿನ್ನೆಲೆಯಲ್ಲಿ ಮಕ್ಕಳನ್ನು ರಕ್ಷಿಸಲಾಗದೆ ಪೋಷಕರು ಅಸಹಾಯಕರಾಗಿದ್ದರು.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

ಗದಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ತಂಗಿಯ ಮಗನೊಂದಿಗೆ ಮಹಿಳೆಯೊಬ್ಬರು ನೀರು ತರಲು‌ ಕೃಷಿ ಹೊಂಡಕ್ಕೆ ಹೋದಾಗ ಘಟನೆ ನಡೆದಿದೆ.

ಗೀತಾ ಹೆಸರೂರು (34), ಮನೋಜ ಕವಲೂರು (5) ಮೃತರು. ಮೊದಲಿಗೆ ಮನೋಜ್ ಹೊಂಡದಲ್ಲಿ ಕಾಲು‌ ಜಾರಿ ಬಿದ್ದಿದ್ದಾನೆ. ಬಾಲಕನ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ನೀರಿನಲ್ಲಿ ಮುಳುಗಿದ್ದಾರೆ. ಶಾಲೆ ರಜೆ ಹಿನ್ನೆಲೆ ದೊಡ್ಡಮ್ಮನ ಮನೆಗೆ ಮನೋಜ್ ಬಂದಿದ್ದ. ಬಾಲಕನ ಜತೆಗೆ ಕೃಷಿ ಹೊಂಡಕ್ಕೆ ಗೀತಾ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
MS Dhoni
ಪ್ರಮುಖ ಸುದ್ದಿ10 mins ago

MS Dhoni : ಮಹೇಂದ್ರ ಸಿಂಗ್​ ಧೋನಿಗೆ ಗಾಯ, ಆಂತರಿಕ ಮಾಹಿತಿ ಬಹಿರಂಗ

Lok sabha Election 2024
Lok Sabha Election 202413 mins ago

Lok Sabha Election 2024: ಮತದಾನಕ್ಕೆ ಬಂದು ಇವಿಎಂಗೆ ಬೆಂಕಿ ಹಾಕಿದ ಯುವಕ; ಸುರಪುರದಲ್ಲಿ ಕಲ್ಲು ತೂರಾಟ

Lok Sabha Election 2024
ಕರ್ನಾಟಕ15 mins ago

Lok Sabha Election 2024: ರಾಜ್ಯದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 54.20 ಮತದಾನ; ಯಾವ ಕ್ಷೇತ್ರದಲ್ಲಿ ಎಷ್ಟು?

viral news
ಕ್ರೀಡೆ17 mins ago

Viral News: ದೆಹಲಿ To ಗೋವಾ ವಿಮಾನ ಟಿಕೆಟ್​​ ಬೆಲೆಗಿಂತ ದುಬಾರಿ ಟೀಮ್​ ಇಂಡಿಯಾದ ಟಿ20 ವಿಶ್ವಕಪ್​ ಜೆರ್ಸಿ

Met Gala Fashion
ಫ್ಯಾಷನ್17 mins ago

Met Gala Fashion: ಮೆಟ್‌ ಗಾಲಾದಲ್ಲಿ ಹೈಲೈಟಾದ ಭಾರತೀಯ ಫ್ಯಾಷೆನಬಲ್‌ ತಾರೆಯರಿವರು!

Lalu Prasad Yadav
ದೇಶ18 mins ago

ಎಲ್ಲ ಮೀಸಲಾತಿಯನ್ನು ಮುಸ್ಲಿಮರಿಗೇ ಕೊಡಬೇಕು ಎಂದ ಲಾಲು ಪ್ರಸಾದ್‌ ಯಾದವ್;‌ ಕೆಂಡವಾದ ಮೋದಿ!

IPL 2024
ಕ್ರೀಡೆ32 mins ago

ICC Ban : ಮ್ಯಾಚ್​ ಫಿಕಿ ವೆಸ್ಟ್ ಇಂಡೀಸ್​ ಆಟಗಾರನಿಗೆ ಐದು ವರ್ಷ ಬ್ಯಾನ್​

lok sabha Election 2024
Lok Sabha Election 202437 mins ago

Lok Sabha Election 2024: ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ; ಮತದಾನಕ್ಕೆ ಬಂದು ಟ್ರೀಟ್‌ ಮಾಡಿದ ಡಾಕ್ಟರ್‌

West Bengal
ದೇಶ1 hour ago

West Bengal: ಬಂಗಾಳದಲ್ಲಿ ಮತದಾನದ ವೇಳೆ ಹಿಂಸೆ; ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ!

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 hour ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 hour ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ22 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ23 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ23 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ4 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

ಟ್ರೆಂಡಿಂಗ್‌