Mysuru Pak : ಸಿದ್ದರಾಮಯ್ಯಗೆ ಸಿದ್ಧವಾಗುತ್ತಿದೆ 1,000 ಕೆ.ಜಿ. ತೂಕದ ಮೈಸೂರು ಪಾಕ್‌ ಹಾರ - Vistara News

ಮೈಸೂರು

Mysuru Pak : ಸಿದ್ದರಾಮಯ್ಯಗೆ ಸಿದ್ಧವಾಗುತ್ತಿದೆ 1,000 ಕೆ.ಜಿ. ತೂಕದ ಮೈಸೂರು ಪಾಕ್‌ ಹಾರ

ಜೆಡಿಎಸ್‌ನಿಂದ ಆಯೋಜಿಸಿರುವ ಪಂಚರತ್ನ ಯಾತ್ರೆಯಲ್ಲಿ ವಿವಿಧ ಬಗೆಯ ಹಣ್ಣು, ತರಕಾರಿ, ಸೊಪ್ಪುಗಳಿಂದ ಹಾರ ನಿರ್ಮಿಸಿ ಎಚ್‌.ಡಿ. ಕುಮಾರಸ್ವಾಮಿಯವರಿಗೆ ಅರ್ಪಿಸಲಾಗಿತ್ತು. ಇದೀಗ ಕಾಂಗ್ರೆಸ್‌ನಲ್ಲಿ ಮೈಸೂರು ಪಾಕ್‌ (Mysuru Pak) ಹಾರ ತಯಾರಿಸಲಾಗುತ್ತಿದೆ.

VISTARANEWS.COM


on

mysuru-pak-Garland for siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವಂತೆ ರಾಜಕೀಯ ನಾಯಕರಿಗೆ ವಿಭಿನ್ನ ಬಗೆಯ ಹಾರಗಳನ್ನು ಹಾಕುವ ಸಂಪ್ರದಾಯ ಜೋರಾಗಿದೆ. ಬೃಹತ್‌ ಹಾರಗಳಿಂದಲೇ ದಾಖಲೆ ಬರೆದಿರುವ ಜೆಡಿಎಸ್‌ಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರು ಇದೀಗ ಮೈಸೂರು ಪಾಕ್‌ ( Mysuru Pak) ಹಾರ ಸಿದ್ಧಪಡಿಸುತ್ತಿದ್ದಾರೆ.

ಸದ್ಯ ಮೈಸೂದು ಹಾಗೂ ಚಾಮರಾಜನಗರ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರಿಗೆ ಉಡುಗೊರೆಯಾಗಿ ಈ ಬೃಹತ್‌ ಹಾರವನ್ನು ಮೈಸೂರಿನ ಧನರಾಜ್‌ ಎನ್ನುವವರು ಮಾಡಿಸುತ್ತಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಕಾಳಿಸಿದ್ದನ ಹುಂಡಿಯ ವ್ಯಾಪಾರಿ ಜೈ ಸ್ವಾಮಿಯವರ ತಂಡ ಸಿದ್ಧಪಡಿಸುತ್ತಿದೆ.

ಬೃಹತ್ ಹಾರಕ್ಕಾಗಿ ಬರೊಬ್ಬರಿ 750 ಕೆ.ಜಿ. ಮೈಸೂರು ಪಾಕ್ ಬಳಕೆ ಮಾಡಲಾಗಿದೆ. ಜತೆಗೆ 250ಕೆ.ಜಿ. ಹೂವು ಸೇರಿ 1,000 ಕೆ.ಜಿ. ತೂಕದ ಬೃಹತ್ ಹಾರ ಸಿದ್ಧವಾಗುತ್ತಿದೆ. ಸುಮಾರು 2.5 ಲಕ್ಷ ರೂ. ವೆಚ್ಚದಲ್ಲಿ ಈ ಮೈಸೂರು ಪಾಕ್ ಹಾರ ನಿರ್ಮಾಣವಾಗುತ್ತಿದೆ. 20 ಜನರ ತಂಡದಿಂದ ಸುಮಾರು 15 ಗಂಟೆಗಳ ಪರಿಶ್ರಮದಿಂದ ಮೈಸೂರು ಪಾಕ್ ಹಾರ ತಯಾರಿಯಾಗಲಿದೆ.

ಶುಕ್ರವಾರ ಮೈಸೂರಿನಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯಲ್ಲಿ ಈ ಹಾರವನ್ನು ಸಮರ್ಪಣೆ ಮಾಡಲಾಗುತ್ತದೆ. ಅಲ್ಲಿ ನೆರೆಯುವ ಕಾರ್ಯಕರ್ತರಿಗೆ ಮೈಸೂರು ಪಾಕನ್ನು ಹಂಚಲಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮೈಸೂರು

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Actor Darshan : ಕೊಲೆ ಕೇಸ್‌ನಲ್ಲಿ ಲಾಕ್‌ ಆಗಿರುವ ನಟ ದರ್ಶನ್‌ಗೆ ಒಂದರ ಮೇಲೊಂದು ಸಂಕಷ್ಟ ಎದುರಾಗಿದೆ. ಹಳೇ ಕೇಸ್‌ಗಳೆಲ್ಲವೂ ಇದೀಗ ತೆರೆದುಕೊಳ್ಳುತ್ತಿದ್ದು, ನಿಯಮ ಬಾಹಿರವಾಗಿ ಬಾರ್-ಹೆಡ್ ಬಾತುಕೋಳಿ ಸಾಕಿದ ಪ್ರಕರಣವನ್ನು ಅರಣ್ಯ ಇಲಾಖೆ ಚುರುಕುಗೊಳಿಸಿದೆ.

VISTARANEWS.COM


on

By

Actor Darshan
ಸಾಂದರ್ಭಿಕ ಚಿತ್ರ
Koo

ಮೈಸೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಮತ್ತೊಂದು ಸಂಕಷ್ಟ ಎದುರಾಗಿದೆ. ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾರ್ ಹೆಡ್ ಬಾತುಕೋಳಿ (bar-headed goose) ಸಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ 2 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ನಿರ್ಧರಿಸಿದೆ.

ಈ ಕೇಸ್‌ನಲ್ಲಿ ನಟ ದರ್ಶನ್‌ ಮಾತ್ರವಲ್ಲದೆ ಪತ್ನಿ ವಿಜಯಲಕ್ಷ್ಮಿ ಕೂಡ ಆರೋಪಿಯಾಗಿದ್ದಾರೆ. ಮೈಸೂರು ಜಿಲ್ಲೆಯ ತಿ.ನರಸೀಪುರದಲ್ಲಿರುವ ದರ್ಶನ್ ತೋಟದಲ್ಲಿ ಕಾನೂನು ಬಾಹಿರ‌ವಾಗಿ ಬಾರ್ ಹೆಡ್ ಬಾತುಕೋಳಿ ಸಾಕಲಾಗಿತ್ತು. ಈ ಸಂಬಂಧ ಎಫ್ಐಆರ್ ದಾಖಲಾಗಿತ್ತು. ದರ್ಶನ್‌ ಪತ್ನಿ ವಿಜಯಲಕ್ಷ್ಮಿ A1 ಹಾಗೂ ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ ಅಲಿಯಾಸ್ ನಾಗ A2 ಹಾಗೂ ನಟ ದರ್ಶನ್ A3 ಆರೋಪಿ ಆಗಿದ್ದರು. ಐದು ಬಾರಿ ನೋಟಿಸ್ ಕೊಟ್ಟರು ನಟ ದರ್ಶನ್‌ ವಿಚಾರಣೆಗೆ ಹಾಜರಾಗಿ ಇರಲಿಲ್ಲ.

ಇತ್ತ ಪ್ರಕರಣ ಸಂಬಂಧ ದರ್ಶನ್‌ನನ್ನು ಬಂಧಿಸದೆ ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿತ್ತು. ಸೆಲೆಬ್ರಿಟಿ ಆಗಿದ್ದರಿಂದ ತಲೆಮರೆಸಿಕೊಳ್ಳದ ಕಾರಣ ಬಲವಂತವಾಗಿ ಬಂಧಿಸದೇ, ವಿಚಾರಣೆಗೆ ಅವಕಾಶ‌‌ ಕೊಟ್ಟಿತ್ತು. ಇದೀಗ ಅರಣ್ಯ ಇಲಾಖೆಯು ಈ ಪ್ರಕರಣವನ್ನು ಚುರುಕುಗೊಳಿಸಿದೆ.

ಇದನ್ನೂ ಓದಿ: Actor Darshan: ದರ್ಶನ್ ಪ್ರಕರಣ; ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯ ನಟ ಚಿಕ್ಕಣ್ಣಗೂ ನೋಟಿಸ್‌?

ಪ್ಲೀಸ್‌ ಪವಿತ್ರಾಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿರುವ ದರ್ಶನ್‌?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯ‌ (Renuka Swamy Murder) ನಂತರ ಆಸುಪಾಸಿನ ಸ್ಥಳಗಳಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ (CCTV recording) ದಾಖಲಾಗಿದ್ದ ಎಲ್ಲ ದೃಶ್ಯಗಳನ್ನು ಡಿಲೀಟ್‌ (Delete) ಮಾಡಲಾಗಿದೆ ಎಂಬ ಆಘಾತಕಾರಿ ಸಂಗತಿ ಬಯಲಾಗಿದೆ. ಇದರ ಜತೆಗೆ ದರ್ಶನ್‌ (Actor Darshan) ಅವರು ಸ್ಥಳ ಮಹಜರು ವೇಳೆ ತನಿಖಾಧಿಕಾರಿಗಳಿಗೆ ಪವಿತ್ರ ಗೌಡಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿದ್ದಾರೆ ಎನ್ನಲಾಗಿದೆ.

ಸ್ಥಳ ಮಹಜರು ವೇಳೆ ತನಿಖಾಧಿಕಾರಿಗೆ ದರ್ಶನ್‌ ಮನವಿ ಮಾಡಿದ್ದಲ್ಲದೇ ಪೊಲೀಸ್ ಠಾಣೆಯಲ್ಲೂ ಪವಿತ್ರಾ ಗೌಡಳನ್ನು ಕೇಸ್‌ನಿಂದ ಕೈ ಬಿಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಪವಿತ್ರಾ ಗೌಡಳಿಗೂ ಈ ಕೊಲೆ ಕೇಸ್‌ಗೂ ಸಂಬಂಧವಿಲ್ಲವೆಂದು ದರ್ಶನ್ ಪದೇ ಪದೇ ಹೇಳುತ್ತಿದ್ದು, ಪವಿತ್ರ ಗೌಡಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿದ್ದಾರೆ ಎನ್ನಲಾಗಿದೆ. ಆದರೆ ದರ್ಶನ್‌ ಎಷ್ಟೇ ಮನವಿ ಮಾಡಿಕೊಂಡರೂ ಪೊಲೀಸರು ಮಾತ್ರ ಜಗ್ಗದೇ ಇನ್ನಷ್ಟು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಿಸಿಟಿವಿ ದಾಖಲೆ ಸಂಪೂರ್ಣ ನಾಶ ಮಾಡಿದ ಪಾತಕಿಗಳು

ಕೊಲೆಯ ಬಳಿಕ, ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಹಾಗೂ ಹಲ್ಲೆ ನಡೆದ ಪಟ್ಟಣಗೆರೆಯ ಶೆಡ್‌ನ ದೃಶ್ಯಗಳನ್ನು ಡಿಲೀಟ್‌ ಮಾಡಿಸಲಾಗಿದೆ. ಆರೋಪಿಗಳು ಕಳೆದ ಒಂದು ವರ್ಷದ ಸಿಸಿ ಟಿವಿ ದೃಶ್ಯಗಳನ್ನು ಡಿಲೀಟ್ ಮಾಡಿಸಿದ್ದಾರೆ. ಸಿಸಿ ಟಿವಿ ದೃಶ್ಯಗಳೇ ಕೊಲೆಯ ಪ್ರಮುಖ ಸಾಕ್ಷಿ ಆಗಲಿವೆ ಎಂಬ ಹಿನ್ನೆಲೆಯಲ್ಲಿ, ಇವುಗಳನ್ನು ಪೂರ್ತಿಯಾಗಿ ಡಿಲೀಟ್‌ ಮಾಡಲು ಆರೋಪಿಗಳು ಅಪರಾಧ ಪರಿಣಿತರ ಸಲಹೆ ಪಡೆದೇ ಈ ಕೃತ್ಯ ಎಸಗಿದ್ದಾರೆ ಎಂದು ತರ್ಕಿಸಲಾಗಿದೆ.

ಇದನ್ನೂ ಓದಿ: Actor Darshan: ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿದ್ದಾರೆ; ಬರ್ತ್‌ಡೇ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್!

ರೇಣುಕಾಸ್ವಾಮಿ ಕೊಲೆಯ ಮೊದಲಿನ ಹಾಗೂ ನಂತರದ ಎಲ್ಲಾ ಸಿಸಿ ಕ್ಯಾಮರಾ ದೃಶ್ಯಗಳನ್ನು ಡಿಲೀಟ್‌ ಮಾಡಿಸಿದ್ದಾರೆ. ತನಿಖೆಗೆ ಇವು ಅತ್ಯಂತ ಅಗತ್ಯವಾಗಿದ್ದು, ಶೆಡ್ ಹಾಗೂ ರೆಸ್ಟೋರೆಂಟ್‌ನ ಸಿಸಿ ಟಿವಿ‌ ರೆಕಾರ್ಡಿಂಗ್‌ ರಿಕವರಿ ಮಾಡಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ದರ್ಶನ್‌ ಸೇರಿದಂತೆ ಆರೋಪಿಗಳ ಬಂಧನ ಆದ ಬಳಿಕ ಈ ರೆಕಾರ್ಡಿಂಗ್‌ ಡಿಲೀಟ್‌ ಮಾಡಲಾಗಿದೆಯೇ ಅಥವಾ ಮೊದಲೇ ಮಾಡಲಾಗಿದೆಯೇ ಎಂದು ತಿಳಿದುಬರಬೇಕಿದೆ.

ಕೊಲೆಯ ಪ್ರಮುಖ ಸಾಕ್ಷಿಗಳನ್ನೇ ಖತರ್‌ನಾಕ್ ಆರೋಪಿಗಳು ಡಿಲೀಟ್ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸಾಕ್ಷಿ ನಾಶಕ್ಕೆ ಪೊಲೀಸ್‌ ಇಲಾಖೆಯಲ್ಲಿರುವವರಿಂದಲೂ ಆರೋಪಿಗಳು ಸಲಹೆ ಪಡೆದಿದ್ದಾರೆಯೇ ಎಂಬುದು ಕೂಡ ತನಿಖಾಧಿಕಾರಿಗಳಿಗೆ ಕುತೂಹಲ ಮೂಡಿಸಿದೆ. ಈಗಾಗಲೇ ಪ್ರಶ್ನೆಗೆ ಒಳಗಾಗುತ್ತಿರುವವರ ಪಟ್ಟಿಯಲ್ಲಿ ಒಬ್ಬ ಪೊಲೀಸ್‌ ಅಧಿಕಾರಿ ಕೂಡ ಇದ್ದಾರೆ ಎಂಬುದನ್ನು ಇಲ್ಲಿ ಗಮನಿಸಬಹುದು.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಪಟ್ಟಣಗೆರೆಯ ಶೆಡ್‌ನಲ್ಲಿ ಕೂಡಿಹಾಕಿ ಥಳಿಸಿ ಸಾಯಿಸಲಾಗಿತ್ತು. ನಂತರ ಇದನ್ನು ಮುಚ್ಚಿಹಾಕುವುದು ಹೇಗೆ ಎಂಬ ಕುರಿತು ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ನಟ ಹಾಗೂ ಆರೋಪಿಗಳು ಕೂತು ಮಾತನಾಡಿದ್ದರು. ಇಲ್ಲೇ 30 ಲಕ್ಷ ರೂಪಾಯಿಯ ಡೀಲ್‌ ಕೂಡ ನಡೆದಿತ್ತು. ಇದೀಗ ಎರಡೂ ಕಡೆಗಳ ಸಿಸಿಟಿವಿ ಹಾರ್ಡ್ ಡ್ರೈವ್‌ಗಳು ಕೂಡ ನಾಶವಾಗಿವೆ ಎಂದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಮಾಲಿಕ‌ ವಿನಯ್‌ನನ್ನು ಕೂಡ ಪ್ರಶ್ನಿಸಲಾಗುತ್ತಿದೆ. ‌

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Bakrid 2024 : ನಾವೆಲ್ಲರೂ ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವ ಬೆಳಸಿಕೊಳ್ಳಬೇಕು. ಆಗಲೇ ರಾಷ್ಟ್ರ ಹಾಗೂ ಸಮಾಜದ ಏಳಿಗೆ ಸಾಧ್ಯವಾಗುತ್ತದೆ ಎಂದು ಬಕ್ರೀದ್‌ ( Eid al Adha ) ಪ್ರಾರ್ಥನೆಯಲ್ಲಿ ಪಾಲ್ಗೊಂಡು ಸಿದ್ದರಾಮಯ್ಯ ಮಾತನಾಡಿದರು.

VISTARANEWS.COM


on

By

Bakrid 2024
Koo

ಬೆಂಗಳೂರು: ಸಮಾಜದಲ್ಲಿ ನಾವೆಲ್ಲರೂ ಅಣ್ಣ ತಮ್ಮಂದಿರ ರೀತಿ ಬಾಳಬೇಕು. ನಾವೆಲ್ಲರೂ ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವ ಬೆಳಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಕ್ರೀದ್ (Eid al Adha) ಅಂಗವಾಗಿ ಚಾಮರಾಜಪೇಟೆ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ (Bakrid 2024 ) ಪಾಲ್ಗೊಂಡು ಮಾತನಾಡಿದರು.

ತ್ಯಾಗ ಬಲಿದಾನದ ಪ್ರತೀಕವಾಗಿರುವ ಬಕ್ರೀದ್ ಹಬ್ಬವನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಒಬ್ಬರಿಗೊಬ್ಬರು ಶುಭಕೋರಿದರು. ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾವಿರಾರು ಜನರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು. ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಉಪಸ್ಥಿತಿ ಇದ್ದರು. ಮುಸಲ್ಮಾನರ ಅಮಾಮ್ ಶಾಲು (ಟೋಪಿ) ಹಾಕಿ ಸಿದ್ದರಾಮಯ್ಯರಿಗೆ ಸನ್ಮಾನ ಮಾಡಿದರು.

bakrid 2024

ಬಳಿಕ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಇಡೀ ಭಾರತದಲ್ಲಿ ಬಕ್ರೀದ್ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ನೀವೆಲ್ಲರೂ ಪ್ರಾರ್ಥನೆ ಮಾಡಿದ್ದೀರಿ. ಸಮಾಜದಲ್ಲಿ ನಾವೆಲ್ಲರೂ ಅಣ್ಣ ತಮ್ಮಂದಿರ ರೀತಿ ಬಾಳಬೇಕು. ಎಲ್ಲಾ ಭಾಷೆ, ಧರ್ಮಕ್ಕೆ ಸಮಾನತೆ ಕೊಡುವ ಬಹುತ್ವದ ದೇಶವಿದು. ನಾವೆಲ್ಲರೂ ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವ ಬೆಳಸಿಕೊಳ್ಳಬೇಕು. ಆಗಲೇ ರಾಷ್ಟ್ರ ಹಾಗೂ ಸಮಾಜದ ಏಳಿಗೆ ಸಾಧ್ಯವಾಗುತ್ತದೆ. ನಾವು ಸಂವಿಧಾನದ ಮೇಲೆ ನಂಬಿಕೆ ಇಟ್ಟವರು, ಯಾವುದೇ ತಾರತಮ್ಯ ಮಾಡಲ್ಲ ಎಂದರು.

ಕೊಪ್ಪಳದಲ್ಲೂ ತ್ಯಾಗ ಬಲಿದಾನದ ಪ್ರತೀಕವಾಗಿರುವ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು. ಈದ್ಗಾ ಮೈದಾನದಲ್ಲಿ ಸಾವಿರಾರು ಜನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಸಂಸದ ಕೆ. ರಾಜಶೇಖರ ಹಿಟ್ನಾಳ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸೇರಿ ಹಲವರು ಭಾಗಿಯಾಗಿದ್ದರು.

ಇದನ್ನೂ ಓದಿ: Bakrid: ಬಕ್ರೀದ್ ಹಿನ್ನೆಲೆಯಲ್ಲಿ ಮಾರಾಟಕ್ಕಿಟ್ಟಿದ್ದ ಈ ಮೇಕೆಯ ಬೆಲೆ 69 ಲಕ್ಷ ರೂ!

ಬೆಳಗಾವಿ ಅಂಜುಮಾನ ಮೈದಾನ ಹಾಗೂ ಶಿವಮೊಗ್ಗ, ವಿಜಯನಗರ ಹೊಸಪೇಟೆಯ ಅಂಬೇಡ್ಕರ್ ಸರ್ಕಲ್ ಬಳಿ ಇರುವ ಈದ್ಗಾ ಮೈದಾನದಲ್ಲೂ ಸಾಮೂಹಿಕ ಪ್ರಾರ್ಥನೆ ನಡೆಯಿತು. ಹೂಡಾ ಅಧ್ಯಕ್ಷ ಇಮಾಮ್, ಆನಂದ್ ಸಿಂಗ್ ಪುತ್ರ ಸಿದ್ದಾರ್ಥ ಸಿಂಗ್ ಸೇರಿ ಹಲವರು ಭಾಗಿಯಾಗಿದ್ದರು.

ಬಳ್ಳಾರಿ ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆದಿದೆ. ಇದೇ ವೇಳೆ ಧರ್ಮಗುರುಗಳಿಂದ ಪ್ರವಾದಿ ಮಹಮದ್ ಪೈಗಂಬರರ ಜೀವನದ ಮಹತ್ವ ಬೋಧನೆ ಮಾಡಲಾಯಿತು. ತ್ಯಾಗ ಹಾಗೂ ಬಲಿದಾನಗಳ ಬಗ್ಗೆ ಧರ್ಮ ಗುರು ವಿವರಿಸಿದರು. ಪ್ರಾರ್ಥನೆ ನಂತರ ಪರಸ್ಪರ ಶುಭಾಶಯ ಕೋರಿದರು.

ಬಾಗಲಕೋಟೆಯ ಮುಧೋಳ ನಗರದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಧೋಳ ಶಾಸಕ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಭಾಗಿಯಾದರು. ಪ್ರಾರ್ಥನೆ ಬಳಿಕ ಮುಸ್ಲಿಂ ಬಾಂಧವರಿಗೆ ಶುಭಾಶಯ ತಿಳಿಸಿದರು. ಹುಬ್ಬಳ್ಳಿಯ ರಾಣಿ ಚೆನ್ನಮ್ಮ ವೃತ್ತದ ಈದ್ಗಾ ಮೈದಾನದಲ್ಲೂ ನಮಾಜ್‌ ಮಾಡಲಾಯಿತು.

ಮೈಸೂರು ಹಾಗೂ ಮಂಡ್ಯದಲ್ಲೂ ಬಕ್ರೀದ್ ಅಂಗವಾಗಿ ವಿವಿಧೆಡೆಗಳಲ್ಲಿರುವ ಮಸೀದಿಗಳಲ್ಲಿ ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ ನಡೆಯಿತು. ಮೈಸೂರಿನ ತಿಲಕ್ ನಗರದಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಧರ್ಮಗುರು ಉಸ್ಮಾನ್ ಷರೀಫ್ ಅವರು ಭಾಗಿಯಾಗಿದ್ದರು. ಮಂಡ್ಯದ ಈದ್ಗಾ ಮೈದಾನದಲ್ಲಿ ನಗರಸಭೆ ಸದಸ್ಯ ನಹೀಮ್ ಪ್ರಾರ್ಥನೆ ಸಲ್ಲಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Drowned: ಈಜಲು ಹೋಗಿ ಬಾಲಕರು ನೀರುಪಾಲು; ಕಮಲ ಕೊಯ್ಯಲು ಹೋಗಿ ಕೆಸರಿನಲ್ಲಿ ವ್ಯಕ್ತಿ ಸಮಾಧಿ

Drowned: ಮುಸ್ಸಂಜೆ ವೇಳೆ ಈಜಲು ತೆರಳಿದ್ದ ಈ ಯುವಕರು ಈಜುವ ವೇಳೆ ದುರ್ಘಟನೆ ನಡೆದಿದೆ. ನಡು ಕೆರೆಯಲ್ಲಿದ್ದಾಗ ಬಳಲಿ ತೀರಕ್ಕೆ ಬರಲಾಗದೆ ಮುಳುಗಿ ಮೃತಪಟ್ಟಿದ್ದಾರೆ

VISTARANEWS.COM


on

Drowned in river
Koo

ಮೈಸೂರು: ಈಜಲು (Swimming) ಹೋಗಿ ಇಬ್ಬರು ಬಾಲಕರು ನೀರು ಪಾಲಾದ ಘಟನೆ (Drowned) ಮೈಸೂರಿನ ಸೌಕಾರಹುಂಡಿ ಕೆರೆಯಲ್ಲಿ (Lake) ನಡೆದಿದೆ. ಹೂಟಗಳ್ಳಿ ಹೌಸಿಂಗ್ ಬೋರ್ಡ್ ನಿವಾಸಿ ವರುಣ್ (16) ಹಾಗೂ ಬಸವನಪುರ ನಿವಾಸಿ ಜಸ್ವಂತ್ (14) ಮೃತ ದುರ್ದೈವಿಗಳು.

ಮುಸ್ಸಂಜೆ ವೇಳೆ ಈಜಲು ತೆರಳಿದ್ದ ಈ ಯುವಕರು ಈಜುವ ವೇಳೆ ದುರ್ಘಟನೆ ನಡೆದಿದೆ. ನಡು ಕೆರೆಯಲ್ಲಿದ್ದಾಗ ಬಳಲಿ ತೀರಕ್ಕೆ ಬರಲಾಗದೆ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾವರೆ ಕೊಯ್ಯಲು ಹೋಗಿ ಹೂವಿನ ವ್ಯಾಪಾರಿ ಸಾವು

ತುಮಕೂರು: ಕೆರೆಯಲ್ಲಿದ್ದ ಕಮಲ ಕೀಳಲು ಹೋಗಿದ್ದ ವ್ಯಕ್ತಿ ಕೆಸರಿನಲ್ಲಿ ಸಿಲುಕಿ ಸಾವಿಗೀಡಾದ ಘಟನೆ ತುಮಕೂರು ತಾಲೂಕಿನ ಅರಕೆರೆ ಕೆರೆಯಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಮಧ್ಯವೆಂಕಟಪುರದ ನಿವಾಸಿ ಶ್ರೀನಿವಾಸ್ (35) ಮೃತ ದುರ್ದೈವಿ.

ಹೂವಿನ ವ್ಯಾಪಾರಿಯಾಗಿದ್ದ ಶ್ರೀನಿವಾಸ್ ಅವರು, ಅದೇ ಊರಿನ ಕೆಂಪರಾಮಯ್ಯ, ಚಿಕ್ಕಹನುಮಯ್ಯ ಜೊತೆ ಕಮಲದ ಹೂ ಕೀಳಲು ಹೋಗಿದ್ದರು. ಈ ವೇಳೆ ಕೆಸರಲ್ಲಿ ಸಿಲುಕಿ ಮೇಲೇಳಲಾಗದೆ ಸಾವನ್ನಪ್ಪಿದ್ದಾರೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ ದುರ್ಘಟನೆ ನಡೆದಿದ್ದು, ಜೊತೆಗಿದ್ದವರು ಊರಿಗೆ ಹೋಗಿ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅತ್ತಿಬೆಲಯಲ್ಲಿ ಬಾಲಕ ನೀರುಪಾಲು

ಆನೇಕಲ್: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲಾಗಿರುವ ಘಟನೆ (Drowns in lake) ಬೆಂಗಳೂರಿನ ಹೊರವಲಯದ ಆನೇಕಲ್ ತಾಲೂಕಿನ ಬಳ್ಳೂರು ಅತ್ತಿಬೆಲೆ ಸಮೀಪದ ಬಳ್ಳೂರು ಕೆರೆಯಲ್ಲಿ ನಡೆದಿದೆ. ಅತ್ತಿಬೆಲೆ ವಾಸಿ ಧನುಷ್ (14) ಮೃತ ಬಾಲಕ.

ರೈನ್ ಬೋ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕ, ಭಾನುವಾರ ಶಾಲೆಗೆ ರಜೆ ಇದಿದ್ದದ್ದರಿಂದ ಸ್ನೇಹಿತರ ಜತೆ ಈಜಲು ಕೆರೆಗೆ ಹೋಗಿದ್ದ. ಈ ವೇಳೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಬಾಲಕನ ಮೃತ ದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರತೆಗೆದಿದ್ದು, ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಖಾಸಗಿ ಬಸ್- ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

ಕೊಡಗು: ಖಾಸಗಿ ಬಸ್ ಹಾಗೂ ದ್ವಿಚಕ್ರ ನಡುವೆ ಭೀಕರ ಅಪಘಾತ (Road Accident) ಸಂಭವಿಸಿ, ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸುಂಟಿಕೊಪ್ಪದ ಗದ್ದೆಹಳ್ಳ ಬಳಿ‌ ನಡೆದಿದೆ. ಸುಂಟಿಕೊಪ್ಪ‌ ನಿವಾಸಿ ಪಟ್ಟೆಮನೆ ಲೋಕೇಶ್ ಕುಮಾರ್ (59) ಮೃತ ದುರ್ದೈವಿ.

ಕಳೆದ ಹಲವು ವರ್ಷಗಳಿಂದ ಲೋಕೇಶ್‌ ವಾಹನ ಚಾಲಕರಾಗಿದ್ದರು. ಸುಂಟಿಕೊಪ್ಪದ ಗದ್ದೆಹಳ್ಳ ಬಳಿ‌ ತೆರಳುತ್ತಿದ್ದಾಗ ಖಾಸಗಿ ಬಸ್‌ನೊಂದಿಗೆ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

ವಿಜಯಪುರ: ಭೀಮಾ ತೀರದಲ್ಲಿ ಗುಂಡಿನ ದಾಳಿ ನಡೆದು, ರೌಡಿಶೀಟರ್‌ ಮೃತಪಟ್ಟಿದ್ದಾನೆ. ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆಯ ಮನೆ ಬಳಿ ಇದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ (Shootout Case) ನಡೆಸಿ ರೌಡಿಶೀಟರ್‌ನ ಕೊಲ್ಲಲಾಗಿದೆ.

ಅಶೋಕ ಮಲ್ಲಪ್ಪ ಗಂಟಗಲ್ಲಿ ಮೃತ. ಮನೆಯಿಂದ ಚಡಚಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಹಂತಕರು ದಾಳಿ ಮಾಡಿದ್ದಾರೆ. ಅಶೋಕ‌ ಬೆನ್ನಿಗೆ ಮೂರಕ್ಕೂ ಅಧಿಕ ಗುಂಡಿಗಳು ತಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಅಶೋಕ ಹೊರಬಂದಿದ್ದ. ಕೊಲೆ ಹಾಗೂ ಇತರೆ ಕೇಸ್‌ಗಳಲ್ಲಿ ಅಪರಾಧಿಯಾಗಿದ್ದ ವ್ಯಕ್ತಿಯನ್ನು ಹಳೆ ದ್ವೇಷದಿಂದ ಕೊಲೆ ಮಾಡಿರೋ ಸಂಶಯ ಮೂಡಿದೆ. ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್ 2ರ ಬಿಜೆಪಿ ಸದಸ್ಯೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಚಡಚಣ ಪೊಲೀಸರ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Electric Shock: ಕುಷ್ಟಗಿಯಲ್ಲಿ ವಿದ್ಯುತ್ ತಂತಿ ತಗುಲಿ ರೈತ, 2 ಎತ್ತುಗಳ ಸಾವು

Continue Reading

ಮಳೆ

Karnataka weather : ಇಂದು ಕರಾವಳಿ, ಮಲೆನಾಡಿನಲ್ಲಿ ಹಗುರ, ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

Karnataka Weather Forecast : ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲಗೊಂಡಿದೆ. ಇದರ ನಡುವೆಯೂ ಕರಾವಳಿ, ಮಲೆನಾಡು ಭಾಗದಲ್ಲಿ ಹಗುರದಿಂದ ಕೂಡಿದ ಮಳೆಯಾದರೆ, ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನ ಕೆಲವು ಭಾಗಗಳಲ್ಲಿ ಹಗುರದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯೊಂದಿಗೆ (Rain News) ಗುಡುಗು ಸಾಥ್‌ ನೀಡಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಸ್ಥಳದಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಆದರೆ ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಇದನ್ನೂ ಓದಿ: Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

ಆರೋಗ್ಯಕರ ಆಗಿರಬೇಕಿದ್ದರೆ ನಮ್ಮ ಬೆಳಗಿನ ತಿಂಡಿ ಹೇಗಿರಬೇಕು?

ಹೆಚ್ಚಿನ ಜನಕ್ಕೆ ಬೆಳಗಿನ ತಿಂಡಿಯ ಮಹತ್ವವೇ ತಿಳಿದಿರುವುದಿಲ್ಲ. ಈ ಮಾತನ್ನು ಹೇಳುವುದಕ್ಕೂ ಕಾರಣವಿದೆ. ಬೆಳಗ್ಗೆ (Morning Nutrition) ತಿಂಡಿಯನ್ನು ಎದ್ದ ನಾಲ್ಕು ತಾಸುಗಳ ನಂತರ ತಿನ್ನುವುದು, ಕೆಲವೊಮ್ಮೆ ತಿಂಡಿಯನ್ನೇ ತಿನ್ನದಿರುವುದು, ದಿನದ ಪ್ರಾರಂಭಕ್ಕೆ ಸೂಕ್ತ ಅಲ್ಲದ್ದನ್ನು ತಿನ್ನುವುದು, ಕೇವಲ ಕಾಫಿ/ಟೀ ಕುಡಿದು ಮಧ್ಯಾಹ್ನ ಊಟ ಮಾಡುವುದು- ಇಂಥ ಉದಾಹರಣೆಗಳು ಕಡಿಮೆಯೇನಿಲ್ಲ. ಆದರೆ ಬೆಳಗಿನ ತಿಂಡಿಯನ್ನು ದಿನದ ಅತ್ಯಂತ ಆರೋಗ್ಯಕರ ಊಟವನ್ನಾಗಿ ಮಾಡುವುದು ಮಹತ್ವದ್ದು ಎನ್ನುತ್ತಾರೆ ಪೌಷ್ಟಿಕಾಂಶ ತಜ್ಞರು. ರಾತ್ರಿಡೀ ದೇಹಕ್ಕೆ ಅಗತ್ಯವಾದ ವಿಶ್ರಾಂತಿಯನ್ನು ನೀಡಿದ್ದಾಗಿದೆ. ಇನ್ನೀಗ ಮುಂಜಾನೆದ್ದು ದಿನವನ್ನು ಪ್ರಾರಂಭಿಸಬೇಕು ಎನ್ನುವಾಗ, ದೇಹಕ್ಕೆ ನೀಡುವಂಥ ಗ್ರಾಸ ಹೇಗಿರಬೇಕು? ಅಧಿಕ ಸತ್ವಗಳನ್ನು ಹೊಂದಿದ ಆಹಾರವನ್ನೇ ತಿನ್ನಬೇಕು ಎಂದಾದರೆ, ಏಕೆ ಹಾಗೆ? ಬೆಳಗ್ಗೆ ತಿಂಡಿ ತಿನ್ನದಿದ್ದರೆ ತೂಕ ಇಳಿಸುವುದು ಸಾಧ್ಯವಿಲ್ಲವೇ? ಇಂತಹ ಹಲವಾರು ಪ್ರಶ್ನೆಗಳು ಮನದಲ್ಲಿದ್ದರೆ, ಅವಕ್ಕೆಲ್ಲ ಉತ್ತರ ಹುಡುಕುವ ಪ್ರಯತ್ನ ಇಲ್ಲಿದೆ. ಬೆಳಗಿನ ತಿಂಡಿಗೆ ಆರೋಗ್ಯಕರ ಕೊಬ್ಬುಗಳು, ಸಂಕೀರ್ಣ ಪಿಷ್ಟ ಮತ್ತು ಪ್ರೊಟೀನ್‌ ಇರುವಂಥ ಆಹಾರ ಅಗತ್ಯ. ಈ ಸತ್ವಗಳ ಮಿಶ್ರಣವು ದೇಹವು ದೀರ್ಘಕಾಲದವರೆಗೆ ಬಳಲದಂತೆ ನೋಡಿಕೊಳ್ಳುತ್ತದೆ. ದಿನವಿಡೀ ಅಗತ್ಯವಾದ ಚೈತನ್ಯವನ್ನು ದೇಹಕ್ಕೆ ನೀಡುತ್ತದೆ ಮತ್ತು ಆಹಾರ ತಿಂದ ತೃಪ್ತಿಯನ್ನು ಒದಗಿಸುತ್ತದೆ. ಜೊತೆಗೆ, ಬೇಗ ಹಸಿವಾಗುವುದನ್ನು ತಡೆಯುತ್ತದೆ. ಇಂಥ ಆಹಾರವು ದೇಹಕ್ಕೆ ಮಾತ್ರವಲ್ಲ, ಮನಸ್ಸಿಗೂ ಬೇಕಾದ ಗ್ರಾಸವನ್ನು ಒದಗಿಸಿಕೊಡುತ್ತದೆ. ಈ ಬಗ್ಗೆ ವಿವರಣೆ ಇಲ್ಲಿದೆ.

South Indian breakfast

ಸಂಕೀರ್ಣ ಪಿಷ್ಟಗಳು

ನಮ್ಮೆಲ್ಲ ಚಟುವಟಿಕೆಗಳನ್ನು ಮಾಡುವುದಕ್ಕೆ ನಮಗೆ ಪಿಷ್ಟ ಅಥವಾ ಕಾರ್ಬೊಹೈಡ್ರೇಟ್‌ಗಳು ಬೇಕು. ಆದರೆ ಮೈದಾ ಅಥವಾ ಸಂಸ್ಕರಿತ ತಿನಿಸುಗಳಿಂದ ಬರುವಂಥ ಸರಳ ಪಿಷ್ಟವಲ್ಲ, ದೀರ್ಘ ಕಾಲದವರೆಗೆ ಶಕ್ತಿಯನ್ನು ಉಣಿಸುವಂಥ ಸಂಕೀರ್ಣವಾದ ಪಿಷ್ಟಗಳು ಬೇಕು. ಇದನ್ನು ಇಡೀ ಧಾನ್ಯಗಳು, ಓಟ್ಸ್‌, ಸಿರಿ ಧಾನ್ಯಗಳು, ಕಿನೊವಾ, ರಾಗಿ ಮುಂತಾದ ನಾರುಭರಿತ ಅಂದರೆ ತೌಡು ಸಹಿತವಾದ ಧಾನ್ಯಗಳಿಂದ ಪಡೆಯಬಹುದು. ಈ ಧಾನ್ಯಗಳಿಂದ ಉಪ್ಪಿಟ್ಟು, ಅವಲಕ್ಕಿ, ದೋಸೆ, ಇಡ್ಲಿ, ಚಿತ್ರಾನ್ನ… ನಿಮಗೆ ಇಷ್ಟವಾದ ಯಾವುದನ್ನಾದರೂ ಮಾಡಿ.

ಪ್ರೊಟೀನ್‌

ಬೆಳಗಿನ ತಿಂಡಿಗೆ ಹೆಚ್ಚಿನ ಪ್ರಮಾಣದ ಪ್ರೊಟೀನ್‌ ಅಗತ್ಯ. ಇದರಿಂದ ದೇಹದ ರಿಪೇರಿ ಕೆಲಸ, ಹಾರ್ಮೋನುಗಳ ಕ್ಷಮತೆ, ಕಿಣ್ವಗಳ ಉತ್ಪಾದನೆ ಮುಂತಾದ ಮಹತ್ವದ ಕೆಲಸಗಳೆಲ್ಲವೂ ಮಟ್ಟಸವಾಗಿ ಇರುತ್ತದೆ. ಇದಕ್ಕಾಗಿ ಹಾಲು, ಮೊಸರು, ಗ್ರೀಕ್‌ ಯೋಗರ್ಟ್‌, ಪನೀರ್‌, ತೋಫು, ಮೊಟ್ಟೆ, ಕಾಳುಗಳು, ಸೋಯಾ, ಕಾಯಿ ಮತ್ತು ಬೀಜಗಳು ಬೆಳಗಿನ ಆಹಾರದಲ್ಲಿ ಇರಬೇಕು. ಆಮ್ಲೆಟ್‌ ಜೊತೆಗೆ ಇಡೀಧಾನ್ಯದ ಬ್ರೆಡ್‌ ಅಥವಾ ಚಪಾತಿಯಂಥವು ಬೇಕು ಎನ್ನುವುದು ಸ್ಪಷ್ಟವಾಗಿದೆಯಲ್ಲವೇ?

ಆರೋಗ್ಯಕರ ಕೊಬ್ಬು

ಇದು ಸಹ ಅತಿ ಮುಖ್ಯವಾದ ಸತ್ವ. ದೇಹದ ತೂಕವನ್ನು ನಿಯಂತ್ರಿಸಲು, ಹೆಚ್ಚಿನ ಕೊಬ್ಬು ದೇಹದಲ್ಲಿ ಜಮೆಯಾಗದಂತೆ ಕಾಯ್ದುಕೊಳ್ಳಲು ಇದು ಅಗತ್ಯ. ದೇಹದ ಅಂಗಾಂಗಗಳೆಲ್ಲ ಸರಿಯಾಗಿ ಕೆಲಸ ಮಾಡಲು ಈ ಕೊಬ್ಬು ಬೇಕೇಬೇಕು. ಇದಕ್ಕಾಗಿ ಅವಕಾಡೊ, ಕಾಯಿ-ಬೀಜಗಳು, ತುಪ್ಪ, ಕೊಬ್ಬರಿ ಎಣ್ಣೆಯಂಥ ಆರೋಗ್ಯಕರ ತೈಲಗಳು, ಪೀನಟ್‌ಬಟರ್‌ ಅಥವಾ ಇನ್ನಾವುದಾದರೂ ಬೀಜಗಳ ತುಪ್ಪ- ಇವೆಲ್ಲ ಶರೀರಕ್ಕೆ ಬೇಕು. ಮೆದುಳಿನ ಆರೋಗ್ಯ ರಕ್ಷಣೆಗಂತೂ ಇವು ತೀರಾ ಅಗತ್ಯವಾದವು. ಇವುಗಳಲ್ಲಿರುವ ಒಮೇಗಾ ೩ ಕೊಬ್ಬಿನಾಮ್ಲವು ಇಡೀ ದೇಹದ ಸ್ವಾಸ್ಥ್ಯಕ್ಕೆ ಅಗತ್ಯವಾಗಿದ್ದು.

drinking water

ನೀರು

ಇದಿಷ್ಟರ ಜೊತೆಗೆ ದಿನಕ್ಕೆ ಮೂರು ಲೀ. ನೀರು ಕುಡಿಯುವುದು ಬಹುಮುಖ್ಯ. ರಾತ್ರಿಡೀ ನೀರಿಲ್ಲದೆ ಇರುವಂಥ ದೇಹಕ್ಕೆ ಬೆಳಗಿನ ಹೊತ್ತು ಒಂದೆರಡು ಗ್ಲಾಸ್‌ ನೀರು ಕುಡಿಸಿ. ಬರೀ ನೀರು ಕುಡಿಯುವುದು ಕಷ್ಟ ಎನಿಸಿದರೆ, ಸಕ್ಕರೆ ರಹಿತವಾದ ಯಾವುದೇ ರಸಗಳನ್ನು ಸೇರಿಸಿಕೊಳ್ಳಬಹುದು. ಜೊತೆಗೆ, ದಿನವಿಡೀ ಹರ್ಬಲ್‌ ಚಹಾಗಳು, ಎಳನೀರು, ರಸಭರಿತ ಹಣ್ಣು-ತರಕಾರಿಗಳು, ಮಜ್ಜಿಗೆ- ಇಂಥವೆಲ್ಲ ದಿನದ ಮೂರು ಲೀ. ನೀರು ಕುಡಿಯುವ ಗುರಿಯನ್ನು ಪೂರ್ಣಗೊಳಿಸಲು ನೆರವಾಗುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
NEETPG 2024
ಶಿಕ್ಷಣ23 seconds ago

NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

DK Shivakumar
ಪ್ರಮುಖ ಸುದ್ದಿ18 mins ago

DK Shivakumar: ಇವಿಎಂ ಸತ್ಯಾಸತ್ಯತೆ ಪ್ರಪಂಚಕ್ಕೇ ಅರ್ಥವಾಗಿದೆ; ಮಸ್ಕ್ ಅನುಮಾನ ಸಮರ್ಥಿಸಿಕೊಂಡ ಡಿಕೆಶಿ

Viral Video
Latest35 mins ago

Viral Video: 7 ಅಜ್ಜಂದಿರ ಜೊತೆ ಸಂಸಾರ ನಡೆಸುತ್ತಿರುವ ಯುವತಿ; ಆಕೆಯ ಪ್ಲ್ಯಾನ್ ಇಂಟರೆಸ್ಟಿಂಗ್!

Malaika Vasupal experimented with a halter neck blouse for a traditional saree
ಫ್ಯಾಷನ್38 mins ago

Malaika Vasupal: ಟ್ರೆಡಿಷನಲ್‌ ಸೀರೆಗೆ ಹಾಲ್ಟರ್‌ ನೆಕ್‌ ಬ್ಲೌಸ್‌ ಪ್ರಯೋಗಿಸಿದ ನಟಿ ಮಲೈಕಾ ವಸುಪಾಲ್‌

Air India Food
ದೇಶ41 mins ago

Air India Food:‌ ಪ್ರಯಾಣಿಕರೇ ಎಚ್ಚರ; ವಿಮಾನದ ಊಟದಲ್ಲಿ ಸಿಕ್ತು ಮೆಟಲ್‌ ಬ್ಲೇಡ್!

Viral news
ವೈರಲ್ ನ್ಯೂಸ್52 mins ago

Viral News: ಕಾಯಿಲೆ ಗುರುತು ಹಿಡಿಯಲು ಖ್ಯಾತ ವೈದ್ಯರ ತಿಣುಕಾಟ; ಹತ್ತೇ ಸೆಕೆಂಡ್ ನಲ್ಲಿ ಪತ್ತೆಹಚ್ಚಿದ ಕೆಲಸದ ಮಹಿಳೆ!

T20 World Cup Super 8
ಕ್ರೀಡೆ52 mins ago

T20 World Cup Super 8 Stage: ಸೂಪರ್​-8 ಪಂದ್ಯಕ್ಕೂ ಮಳೆ ಭೀತಿ; ಭಾರತ-ಆಸೀಸ್​ ಪಂದ್ಯ ಅನುಮಾನ!

Rakshit Shetty Ekam web series release date announce
ಸ್ಯಾಂಡಲ್ ವುಡ್53 mins ago

Rakshit Shetty: ʻಏಕಂʼ ವೆಬ್ ಸಿರೀಸ್​ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ!

Dawood Ibrahim
ವಿದೇಶ1 hour ago

Dawood Ibrahim: ವೃದ್ಧ ಡಾನ್‌ ದಾವೂದ್‌ ಇಬ್ರಾಹಿಂ ಈಗ ಅಮೆರಿಕದ ಕೇಂದ್ರ ಗುಪ್ತಚರ ಸಂಸ್ಥೆಯ ಕೈಗೊಂಬೆ?

Two drown in quarry
ಕರ್ನಾಟಕ1 hour ago

Drown in Quarry: ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರ ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು5 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ24 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌