Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ - Vistara News

ಮೈಸೂರು

Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

Physical Abuse : 17 ವರ್ಷದ ಬಾಲಕಿಗೆ ಮೊಬೈಲ್‌ ಫೋನ್‌ ಕೊಡಿಸುವುದಾಗಿ ಪುಸಲಾಯಿಸಿ ಕರೆದುಹೋದ ಸೋದರ ಮಾವ ಮಣ್ಣು ತಿನ್ನುವ ಕೆಲಸ ಮಾಡಿದ್ದಾನೆ. ರೌಡಿಶೀಟರ್‌ ಆಗಿರುವ ಕಿರಾತಕ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ, ಅಜ್ಜಿ ಮನೆಗೆ ಬಿಟ್ಟು ಹೋಗಿದ್ದಾನೆ.

VISTARANEWS.COM


on

Physical abuse
ಪರಾರಿಯಾಗಿರುವ ಆರೋಪಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಬಾಲಕಿ ಮೇಲೆ ಸೋದರ ಮಾವನಿಂದಲೇ ಅತ್ಯಾಚಾರ (Physical Abuse) ನಡೆದಿದೆ. ಮೈಸೂರಿನಲ್ಲಿ ಇಂತಹದೊಂದು ಪೈಶಾಚಿಕ ಕೃತ್ಯ ನಡೆದಿದೆ. ಆರೋಪಿ ರಾಜೇಶ್ ಅಲಿಯಾಸ್ ದೈತ್ಯರಾಜ್‌ 17 ವರ್ಷದ ಬಾಲಕಿಯನ್ನು ಕಾರಿನಲ್ಲಿ ನಂಜನಗೂಡಿಗೆ ಕರೆದೊಯ್ದಿದ್ದು ಲೈಂಗಿಕ ಕಿರುಕುಳ ಕೊಟ್ಟಿದ್ದಾನೆ.

ಅತ್ಯಾಚಾರ ಎಸಗಿ ವಾಪಸ್‌ ಊರಿಗೆ ಬಂದ ಕಾಮುಕ ಮೊಬೈಲ್ ಫೋನ್ ಕೊಡಿಸುತ್ತೇನೆ, ಈ ವಿಷಯವನ್ನು ಯಾರಿಗೂ ಹೇಳಬೇಡ ಎಂದು ಬಾಲಕಿಯನ್ನು ಪುಸಲಾಯಿಸಿ ಅಜ್ಜಿ ಮನೆಗೆ ಬಿಟ್ಟಿದ್ದಾನೆ. ಬಾಲಕಿ ಮಂಕಾಗಿರುವುದು ಗಮನಿಸಿದ ತಾಯಿ ವಿಚಾರಿಸಿದಾಗ ವಿಷಯ ಬೆಳೆಕಿಗೆ ಬಂದಿದೆ.

ಸದ್ಯ ಬಾಲಕಿ ತಾಯಿ ಸ್ವಂತ ಅಣ್ಣನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸಚಿವ ಡಾ.ಮಹದೇವಪ್ಪ, ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರಿಗೂ ಪರಿಚಿತ ರೌಡಿಶೀಟರ್ ರಾಜೇಶ್‌ ಎಸ್ಕೇಪ್‌ ಆಗಿದ್ದಾನೆ. ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ದೈತ್ಯರಾಜ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರಿನ ಮಹಾ ನಾಯಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷನಾಗಿದ್ದ ಎನ್ನಲಾಗಿದೆ. ಜತೆಗೆ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಪುತ್ರ ಸುನಿಲ್ ಬೋಸ್ ಜತೆ ಸಂಪರ್ಕ ಹೊಂದಿದ್ದ.

ಇತ್ತೀಚೆಗ ನಡೆದ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಸುನಿಲ್ ಬೋಸ್ ಜತೆ ಚುನಾವಣಾ ಪ್ರಚಾರದಲ್ಲೂ ಭಾಗಿಯಾಗಿದ್ದ. ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ರಾಜೇಶ್‌ ಪರಾರಿ ಆಗಿದ್ದಾನೆ. ಸದ್ಯ ಪೊಲೀಸರು ಈತನಿಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Physical Abuse: ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸದ್ದಾಂ ಹುಸೇನ್‌ ಕಾಲಿಗೆ ಗುಂಡೇಟು

ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ; ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್‌

ಭೋಪಾಲ್‌: ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ (MP High Court) ತೀರ್ಪು ನೀಡಿದೆ. ವೈವಾಹಿಕ ಅತ್ಯಾಚಾರವು ಭಾರತೀಯ ದಂಡ ಸಂಹಿತೆಯಡಿ ಅಪರಾಧವಲ್ಲದ ಕಾರಣ, ಈ ಪ್ರಕರಣದಲ್ಲಿ ಹೆಂಡತಿಯ ‘ಸಮ್ಮತಿ’ ಎಂಬ ಪರಿಕಲ್ಪನೆಯು ‘ಮುಖ್ಯವಲ್ಲ’ ಎಂದು ಅದು ಹೇಳಿದೆ. ಐಪಿಸಿ ಸೆಕ್ಷನ್‌ 377 (ಅಸ್ವಾಭಾವಿಕ ಲೈಂಗಿಕತೆ) ಮತ್ತು 506 (ಕ್ರಿಮಿನಲ್‌ ಬೆದರಿಕೆ) ಅಡಿಯಲ್ಲಿ ತನ್ನ ಪತಿ ವಿರುದ್ಧ ವಿಚ್ಛೇದಿತ ಪತ್ನಿ ದಾಖಲಿಸಿದ ದೂರನ್ನು ರದ್ದುಗೊಳಿಸುವಾಗ ನ್ಯಾಯಮೂರ್ತಿ ಜಿ.ಎಸ್‌.ಅಹ್ಲುವಾಲಿಯಾ ಈ ತೀರ್ಪು ನೀಡಿದ್ದಾರೆ.

ಸುಪ್ರೀಂ ಕೋರ್ಟ್, ಹೈಕೋರ್ಟ್‌ಗಳ ಹಲವು ತೀರ್ಪುಗಳು ಮತ್ತು ಐಪಿಸಿಯ ಸೆಕ್ಷನ್ 375ರ ಅಡಿಯಲ್ಲಿನ ಅತ್ಯಾಚಾರದ ವ್ಯಾಖ್ಯಾನವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಜಿ.ಎಸ್.ಅಹ್ಲುವಾಲಿಯಾ ಅವರು, ಪತಿಯು ತನ್ನ ಪತ್ನಿಯೊಂದಿಗೆ ಗುದ ಸಂಭೋಗದಲ್ಲಿ ತೊಡಗುವುದು ಅತ್ಯಾಚಾರವಲ್ಲ ಎಂದು ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ

ದಂಪತಿಯು 2019ರ ಮೇಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಅದಾಗಿ ಒಂದು ವರ್ಷದ ಮೊದಲೇ ಅಂದರೆ 2020ರ ಫೆಬ್ರವರಿಯಿಂದ ಪತ್ನಿ ಅವರ ಪೋಷಕರ ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ಪತಿ ಹೇಳಿದ್ದಾರೆ. ಇತ್ತ ಪತ್ನಿ ಪತಿ ಮತ್ತು ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ದಾಖಲಿಸಿದ್ದಾರೆ. ಸದ್ಯ ಇದು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಈ ಮಧ್ಯೆ 2022ರ ಜುಲೈಯಲ್ಲಿ ಪತ್ನಿ ಮತ್ತೆ ಅಸ್ವಾಭಾವಿಕ ಲೈಂಗಿಕತೆಯ ಆರೋಪ ಹೊರಿಸಿ ಪತಿಯ ವಿರುದ್ಧ ಮತ್ತೊಂದು ಎಫ್‌ಆರ್‌ಐ ದಾಖಲಿಸಿದ್ದರು.

“ವೈವಾಹಿಕ ಅತ್ಯಾಚಾರವನ್ನು ಇಲ್ಲಿಯವರೆಗೆ ಗುರುತಿಸಲಾಗಿಲ್ಲ” ಎಂದು ನ್ಯಾಯಮೂರ್ತಿ ಅಹ್ಲುವಾಲಿಯಾ ಹೇಳಿ ಅರ್ಜಿದಾರರ ವಿರುದ್ಧದ ಎಫ್ಐಆರ್ ಅನ್ನು ರದ್ದುಗೊಳಿಸಿದರು. ಐಪಿಸಿ ಸೆಕ್ಷನ್‌ 375ರ ಅಡಿಯಲ್ಲಿ ಅತ್ಯಾಚಾರದ ತಿದ್ದುಪಡಿ ವ್ಯಾಖ್ಯಾನವನ್ನು ಉಲ್ಲೇಖಿಸಿ, ಕೆಲವು ಸಂದರ್ಭಗಳಲ್ಲಿ ಅಸಹಜ ಕೃತ್ಯಕ್ಕೆ ಪತ್ನಿಯ ಒಪ್ಪಿಗೆ ಪಡೆಯುವುದು ಪ್ರಾಮುಖ್ಯತೆಯನ್ನು ಕಳೆದುಕೊಳ್ಳುವಂತೆ ಮಾಡುತ್ತದೆ ಎಂದೂ ಹೈಕೋರ್ಟ್‌ ಹೇಳಿದೆ.

ಇದನ್ನೂ ಓದಿ: Covishield Vaccine: ಭಾರತದಲ್ಲೂ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ವಿಧಿಬದ್ಧವಾಗಿ ನಡೆಯದ ಮದುವೆಗೆ ಮಾನ್ಯತೆ ಇಲ್ಲ: ಸುಪ್ರೀಂ ಕೋರ್ಟ್‌

ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ಅಥವಾ ವಿಧಿಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ ಎಂದು ಸುಪ್ರೀಂಕೋರ್ಟ್‌ ಇತ್ತೀಚೆಗೆ ಸ್ಪಷ್ಟಪಡಿಸಿದೆ. ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಅಂದರೆ ಕೇವಲ ಸಂಗೀತ, ನೃತ್ಯ ಸಂಭ್ರಮ ಅಲ್ಲ ಅಥವಾ ವ್ಯವಹಾರ ಅಲ್ಲ. ಕೆಲವು ವಿಧಿ ವಿಧಾನಗಳು, ಸಂಪ್ರದಾಯಗಳ ಮೂಲಕ ನಡೆದರೆ ಮಾತ್ರ ವಿವಾಹಕ್ಕೆ ಮಾನ್ಯತೆ ಇರುತ್ತದೆ. ಹಿಂದೂ ವಿವಾಹ ಕಾಯ್ದೆ ಪ್ರಕಾರ ಈ ವಿಧಿವಿಧಾನಗಳು, ಸಂಪ್ರದಾಯಗಳು ನಡೆದರೆ ಮಾತ್ರ ಮದುವೆಗೆ ಮಾನ್ಯತೆ ದೊರೆಯುತ್ತದೆ ಎಂದು ಕೋರ್ಟ್‌ ಹೇಳಿದೆ.

ಇತ್ತೀಚೆಗೆ ಇಬ್ಬರು ಪೈಲಟ್‌ ಆಗಿ ಕೆಲಸ ಮಾಡುತ್ತಿದ್ದ ದಂಪತಿ ಸಲ್ಲಿಸಿದ್ದ ವಿಚ್ಛೇದನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗರತ್ನ ಮತ್ತು ಅಗಸ್ಟಿನ್‌ ಜಾರ್ಜ್‌ ಮಸಿಹ್‌ ಇದ್ದ ಪೀಠ, ಹಿಂದೂ ವಿವಾಹವು ಸೂಕ್ತವಾದ ಆಚರಣೆಗಳು ಇಲ್ಲದೆಯೇ ಆಗಿದ್ದಲ್ಲಿ, ಅಂತಹ ವಿವಾಹವನ್ನು ‘ಹಿಂದೂ ವಿವಾಹವೆಂದು ಪರಿಗಣಿಸಲಾಗದು’ ಎಂದು ಏಪ್ರಿಲ್‌ 19ರ ಆದೇಶದಲ್ಲಿ ಹೇಳಿತ್ತು. ‘ಹಿಂದೂ ವಿವಾಹದಲ್ಲಿ ಸಪ್ತಪದಿ ಅಂದರೆ ಋಗ್ವೇದದ ಪ್ರಕಾರ, ಏಳನೆಯ ಹೆಜ್ಜೆಯನ್ನು ಪೂರ್ಣಗೊಳಿಸಿದ ನಂತರ ವರನು ವಧುವಿಗೆ ‘ಏಳು ಹೆಜ್ಜೆಗಳ ಮೂಲಕ ನಾವು ಸಖರಾಗಿದ್ದೇವೆ. ಹೀಗಾಗಿ ವೈವಾಹಿಕ ಜೀವನಕ್ಕೆ ಕಾಲಿಡುವ ಮುನ್ನ ಚೆನ್ನಾಗಿ ಯೋಚಿಸಿ ನಿರ್ಧಾರಕ್ಕೆ ಬರಬೇಕು. ಹಿಂದೂ ವಿವಾಹ ಅಂದರೆ ಅದೊಂದು ಸಂಸ್ಕಾರ. ಭಾರತೀಯ ಸಮಾಜದಲ್ಲಿ ಮದುವೆಗೆ ಅದರದ್ದೇ ಆದ ಮೌಲ್ಯಗಳಿವೆ ಎಂದು ಹೇಳಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

Kaveri Aarti: ನಾಡಿನ ಪುಣ್ಯನದಿ ಕಾವೇರಮ್ಮನಿಗೆ ಕಾವೇರಿ ಆರತಿ ಮಾಡುವ ಯೋಜನೆ ಬಗ್ಗೆ ಸರ್ಕಾರದಿಂದ ಚಿಂತನೆ ನಡೆದಿದ್ದು, ಕಾವೇರಿ ಆರತಿಗಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸೂಚನೆ ನೀಡಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದ ಸಮಿತಿ ರಚಿಸಿದೆ.

VISTARANEWS.COM


on

kaveri aarti
Koo

ಬೆಂಗಳೂರು: ಹಿಮಾಲಯದ (Himalayas) ತಪ್ಪಲು ಪುಣ್ಯಕ್ಷೇತ್ರಗಳಾದ ಹರಿದ್ವಾರ, ಹೃಷಿಕೇಶ, ಕಾಶಿಯಲ್ಲಿ ನಡೆಯುವ ಮನಮೋಹಕ ಗಂಗಾರತಿ (Ganga Aarti) ಮಾದರಿಯಲ್ಲಿ ಕರ್ನಾಟಕದಲ್ಲಿಯೂ ʼಕಾವೇರಿ ಆರತಿʼ (Kaveri Aarti) ಏರ್ಪಡಿಸಲು ರಾಜ್ಯ ಸರಕಾರ (Karnataka Govt) ಸಜ್ಜಾಗಿದ್ದು, ಮುಂದಿನ ದಸರಾ (Dussehra) ಅವಧಿಯ ಹೊತ್ತಿಗೆ ಅದನ್ನು ಕಾರ್ಯಗತಗೊಳಿಸಲು ಚಿಂತಿಸಿದೆ.

ನಾಡಿನ ಪುಣ್ಯನದಿ ಕಾವೇರಮ್ಮನಿಗೆ ಕಾವೇರಿ ಆರತಿ ಮಾಡುವ ಯೋಜನೆ ಬಗ್ಗೆ ಸರ್ಕಾರದಿಂದ ಚಿಂತನೆ ನಡೆದಿದ್ದು, ಕಾವೇರಿ ಆರತಿಗಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸೂಚನೆ ನೀಡಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದ ಸಮಿತಿ ರಚಿಸಿದೆ.

ಆಗಸ್ಟ್ ಮೊದಲ ವಾರ ಮಧ್ಯಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಪ್ರವಾಸ ಕೈಗೊಳ್ಳಲಿರುವ ಸಮಿತಿ, ವಾರಾಣಸಿ, ಹೃಷಿಕೇಶ ಮತ್ತು ಗಯಾಕ್ಕೆ ತೆರಳಿ ಅಲ್ಲಿ ಮಾಡಲಾಗುವ ಆರತಿ ಸಂಪ್ರದಾಯಗಳನ್ನು ವೀಕ್ಷಿಸಿ‌ ವರದಿ‌ ನೀಡಲಿದೆ. ಸಮಿತಿಯಲ್ಲಿ ಶಾಸಕರಾದ ರವಿ ಗಾಣಿಗ, ದಿನೇಶ್ ಗೂಳಿಗೌಡ ಸೇರಿದಂತೆ 10ಕ್ಕೂ ಹೆಚ್ಚಿನ ಶಾಸಕರು ಇದ್ದಾರೆ.

ಮುಂದಿನ ದಸರಾ ಹಬ್ಬದ ಸಂದರ್ಭದಲ್ಲಿ ಕಾವೇರಿ ಆರತಿ ಆಯೋಜಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಸಮಿತಿಯ ಅಧ್ಯಯನ ಪ್ರವಾಸದ ಅಂತಿಮ ಹಂತದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಸಮಿತಿಯೊಂದಿಗೆ ಸೇರುವ ಸಾಧ್ಯತೆ ಇದೆ.

ಕಾವೇರಿ ಆರತಿ ಆಯೋಜನೆಗೆ ಕೆಆರ್‌ಎಸ್ ಜಲಾಶಯ ಸೂಕ್ತ ಎನ್ನಲಾಗಿತ್ತು. ಆದರೆ ಅಲ್ಲಿ ಸ್ಥಳಾವಕಾಶದ ಕೊರತೆ ಎದುರಾಗುವ ಸಾಧ್ಯತೆ ಇರುವುದರಿಂದ ತಲಕಾಡು ಅಥವಾ ಸಂಗಮದಲ್ಲಿ ಕಾವೇರಿ ಆರತಿ ಆಯೋಜಿಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ. ಇನ್ನೊಂದು ಕಡೆಯಿಂದ, ಕಾವೇರಿಯ ಉಗಮ ಸ್ಥಾನವಾದ ಭಾಗಮಂಡಲದಲ್ಲಿಯೇ ಆರತಿ ನಡೆಸಬೇಕು ಎಂಬ ಸಲಹೆಯೂ ಬಂದಿದೆ.

ಚಲುವರಾಯಸ್ವಾಮಿ ನೇತೃತ್ವದ ಸಮಿತಿ ವರದಿ ನೀಡಿದ ನಂತರ ಜಾಗ ಅಂತಿಮವಾಗಲಿದೆ. ಕಾವೇರಿ ಆರತಿ ಆಯೋಜನೆಗೂ ಮುನ್ನ ಕಾವೇರಿ ತಾಯಿಗೆ ದೇವಸ್ಥಾನ ನಿರ್ಮಾಣ ಮಾಡುವ ಚಿಂತನೆಯಿದೆ. ಕಾವೇರಿ ಆರತಿಯ ವರದಿ ಪಡೆಯುವುದು, ಕಾರ್ಯಕ್ರಮ ಆಯೋಜನೆ ಹೊಣೆ ಜಲಸಂಪನ್ಮೂಲ ಇಲಾಖೆಯದ್ದಾಗಿರಲಿದೆ. ಧಾರ್ಮಿಕ ದತ್ತಿ, ಲೋಕೋಪಯೋಗಿ ಇಲಾಖೆಗಳು ಸಹಕಾರ ನೀಡಲಿವೆ.

ಕಾವೇರಿ ಆರತಿಯನ್ನು ಪ್ರವಾಸಿಗರ ಕಣ್ಮನ ಸೆಳೆಯುವ ಬೃಹತ್ ಕಾರ್ಯಕ್ರಮವನ್ನಾಗಿ ಮಾಡಲು ಸರ್ಕಾರ ನಿರ್ಧರಿಸಿದೆ. ಕನಿಷ್ಠ 5ರಿಂದ 6 ಸಾವಿರ ಜನರು ಸೇರುವಂತೆ ಮಾಡುವುದು ಉದ್ದೇಶ. ಪ್ರವಾಸೋದ್ಯಮಕ್ಕೆ ಅನುಕೂಲವಾಗುವಂತೆ ಆಯೋಜಿಸಲು ಚಿಂತಿಸಲಾಗಿದೆ. ಆರಂಭದಲ್ಲಿ ವಾರಕ್ಕೆ ಒಂದು ಬಾರಿ, ನಂತರ ಎರಡು ಬಾರಿ, ಮೂರು ಬಾರಿ ಹೀಗೆ ಹೆಚ್ಚಿಸುತ್ತ ಹೋಗುವ ಬಗ್ಗೆ ಚಿಂತಿಸಲಾಗಿದೆ.

ಕೊಡಗಿನಲ್ಲಿ ನಡೆಯುತ್ತಿದೆ

ಕೊಡಗಿನಲ್ಲಿ 2011ರಿಂದಲೇ ಕಾವೇರಿ ಆರತಿ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ನಮಾಮಿ ಕಾವೇರಿ ಎಂಬ ಸಂಘಟನೆ ಪ್ರತಿ ತಿಂಗಳು ಹುಣ್ಣಿಮೆಯಂದು ಕಾವೇರಿಗೆ ಆರತಿ ಕಾರ್ಯಕ್ರಮ ಮಾಡುತ್ತ ಬಂದಿದ್ದು, ಇತ್ತೀಚೆಗೆ 161 ನೇ ಕಾವೇರಿ ಆರತಿ ಕಾರ್ಯಕ್ರಮ ಕೊಡಗಿನ 14 ಕಡೆಗಳಲ್ಲಿ ಏಕಕಾಲದಲ್ಲಿ ನಡೆದಿದೆ. ಕಲುಷಿತಗೊಳ್ಳುತ್ತಿರುವ ಕಾವೇರಿ ನದಿ ಮೇಲೆ ಧಾರ್ಮಿಕ ಭಾವನೆ ಬರಲಿ, ಅದರ ಪಾವಿತ್ರ್ಯತೆಯನ್ನು ಪ್ರತಿಯೊಬ್ಬರೂ ಕಾಪಾಡುವಂತಾಗಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಈವರೆಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಸ್ವಾಮೀಜಿಗಳು, ತಮಿಳುನಾಡಿನ ಸ್ವಾಮೀಜಿಗಳೂ ಪಾಲ್ಗೊಂಡಿದ್ದಾರೆ. ಹಿಂದೊಮ್ಮೆ ಸರಕಾರದಿಂದಲೂ ‘ಕಾವೇರಿ ಉತ್ಸವ” ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾವೇರಿ ನೀರಾವರಿ ನಿಗಮದ ಮೂಲಕ ಅದ್ದೂರಿ ಆರತಿ ಮತ್ತು ಧಾರ್ಮಿಕ ಕಾರ್ಯಕ್ರಮಗಳು ನಡೆದಿದೆ.

ಇದನ್ನೂ ಓದಿ: Cauvery Dispute: ತಮಿಳುನಾಡಿಗೆ ನಿತ್ಯ 1 ಟಿಎಂಸಿ ಕಾವೇರಿ ನೀರು ಬಿಡಲು ಸೂಚನೆ; ಸರ್ವಪಕ್ಷ‌ ಸಭೆ ಕರೆದ ಸಿಎಂ ಸಿದ್ದರಾಮಯ್ಯ

Continue Reading

ಮಳೆ

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ವಾರಾಂತ್ಯದಲ್ಲಿ 7 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರದಿಂದ ಮಧ್ಯಮದೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ (Rain News) ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಸೇರಿದಂತೆ ತುಮಕೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲೂ ಮಳೆಯಾಗಲಿದೆ.

ಇದನ್ನೂ ಓದಿ: Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಜತೆಗೆ ಭಾರಿ ಮಳೆಯೊಂದಿಗೆ 40-50 ಕಿ.ಮೀ ಗಾಳಿಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಧಾರಾಕಾರ ಮಳೆ ಹಿನ್ನೆಲೆ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ

Karnataka Weather Forecast: ರಾಜ್ಯಾದ್ಯಂತ ಮಳೆ (rain News) ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಶನಿವಾರದಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಚಿಕ್ಕಮಗಳೂರು/ಕೊಡಗು: ಭಾರಿ ಗಾಳಿ-ಮಳೆ (Karnataka Weather Forecast) ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ (School Holiday) ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶನಿವಾರ ಮಾತ್ರ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್‌.ಪುರ ತಾಲೂಕಿನ ಅಂಗನವಾಡಿ ,ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಇನ್ನೂ ಕಡೂರು, ತರೀಕೆರೆ ಹಾಗೂ ಅಜ್ಜಂಪುರ ತಾಲೂಕಿಗೆ ಯಾವುದೇ ರಜೆ ಇಲ್ಲ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕೊಡಗಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಲಕ್ಷ್ಮಣ ತೀರ್ಥ‌ನದಿಯಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಹರಿಹರ-ಬಲ್ಯಮುಂಡೂರು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ನದಿ ನೀರು ರಸ್ತೆ ಮೇಲೆ ಹರಿದಿದೆ. ಪೊನ್ನಂಪೇಟೆ ತಾಲೂಕಿನ ಗ್ರಾಮಗಳ ಗದ್ದೆಪ್ರದೇಶಗಳು ಮುಳುಗಡೆಯಾಗಿದೆ.

ಇನ್ನೂ ಕೊಡಗು ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜ ಆದೇಶ ಹೊರಡಿಸಿದ್ದಾರೆ.

ಬೆಳಗಾವಿಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ರಜೆ ಮುಂದುವರಿದಿದೆ. ರಾಮದುರ್ಗ ತಾಲೂಕು ಹೊರತುಪಡಿಸಿ ಎಲ್ಲ ಕಡೆ ಶಾಲಾ‌-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಮೊಹ್ಮದ್ ರೋಷನ್‌ರಿಂದ ರಜೆ‌ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲೂ ಮಳೆ ಜತೆಗೆ ಶೀತಗಾಳಿ ಮುಂದುವರಿದಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪಿಯುಸಿ ಕಾಲೇಜುಗಳಿಗೆ ರಜೆ ಇದೆ. ಮುಂದಿನ ಸಾರ್ವಜನಿಕ ರಜಾ ದಿನಗಳಲ್ಲಿ ಹೆಚ್ಚುವರಿ ವರ್ಗಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ (ಘಟ್ಟ ಪ್ರದೇಶಗಳು) ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು 40-50ಕಿ.ಮೀ ತಲುಪುವ ಸಾಧ್ಯತೆಯಿದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ವೇಗದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain : ಕರಾವಳಿ ಹಾಗೂ ಮಲೆನಾಡು ಸುತ್ತಮುತ್ತ ಮಳೆಯು ಅಬ್ಬರಿಸುತ್ತಿದೆ. ಉಕ್ಕಿ ಹರಿಯುತ್ತಿದ್ದ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸುವೊಂದನ್ನು ರಕ್ಷಣೆ ಮಾಡಲಾಗಿದೆ. ಕಾರವಾರದಲ್ಲಿ ಅಲೆಗಳ ಅಬ್ಬರಕ್ಕೆ ಕಾಂಕ್ರೀಟ್ ರಸ್ತೆ ಕೊಚ್ಚಿಹೋಗಿತ್ತು.

VISTARANEWS.COM


on

By

karnataka rain
Koo

ಮಂಗಳೂರು: ಭಾರಿ ಮಳೆಗೆ ಜನರು ಮಾತ್ರವಲ್ಲ ಜಾನುವಾರುಗಳು ತತ್ತರಿಸಿ ಹೋಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ‌ ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಕೊಚ್ಚಿಕೊಂಡು (Karnataka Rain) ಹೋಗುತ್ತಿದ್ದ ಹಸುವನ್ನು ರಕ್ಷಣೆ ಮಾಡಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಧಾವಿಸಿದ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ರಕ್ಷಣಾ ತಂಡ ದೋಣಿಯಲ್ಲಿ ಸಾಗಿ ಹಗ್ಗ ಹಾಕಿ ಹಸುವನ್ನು ಜೀವಂತವಾಗಿ ರಕ್ಷಿಸಿ ಕರೆತಂದಿದ್ದಾರೆ.

ಇತ್ತ ಮಂಗಳೂರಿನಲ್ಲೂ ಬಿಟ್ಟು ಬಿಟ್ಟು ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಮನೆಯೊಂದು ಕುಸಿದು ಬಿದ್ದಿದೆ. ಮಂಗಳೂರು ಹೊರವಲಯದ ಕಾಜಿಲ ನೂಯಿ ಎಂಬಲ್ಲಿ ಧನಲಕ್ಷ್ಮೀ ಅವರ ಮನೆ ಸಂಪೂರ್ಣ ಕುಸಿದಿದೆ. ಮನೆಯವರೆಲ್ಲ ಅಂಗಳದಲ್ಲಿದ್ದಾಗ ಮನೆ ಕುಸಿದಿದೆ, ಹೀಗಾಗಿ ಭಾರಿ ದುರಂತವೊಂದು ತಪ್ಪಿದೆ. ಮನೆ ಸಾಮಾಗ್ರಿ ಸೇರಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಅಲೆಗಳ ಅಬ್ಬರಕ್ಕೆ ಕೊಚ್ಚಿಹೋದ ಕಾಂಕ್ರೀಟ್ ರಸ್ತೆ

ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳ್ ಗ್ರಾಮದಲ್ಲಿ ಅಲೆಗಳ ಅಬ್ಬರಕ್ಕೆ ಕಾಂಕ್ರೀಟ್‌ ರಸ್ತೆಯು ಕೊಚ್ಚಿ ಹೋಗಿದೆ. ಸುಮಾರು ನೂರು ಅಡಿ ರಸ್ತೆ ಕಡಲಕೊರತಕ್ಕೆ ಬಲಿಯಾಗಿದೆ. ದೇವಭಾಗ್ ನಿಂದ ಮಾಜಾಳಿ ಸಂಪರ್ಕ ಮಾಡುವ ರಸ್ತೆಯನ್ನು ನಾಲ್ಕು ವರ್ಷದ ಹಿಂದೆ ನಿರ್ಮಿಸಲಾಗಿತ್ತು. ಆದರೆ ಮಳೆ ಗಾಳಿಗೆ ಹೆಚ್ಚಾದ ಕಡಲ ಕೊರೆತಕ್ಕೆ ಕೊಚ್ಚಿಹೋಗಿದೆ. ಇದರಿಂದಾಗಿ ಬಾವಳ್, ಮಾಜಾಳಿ,‌ ದೇವಭಾಗ ಗ್ರಾಮಸ್ಥರು ರಸ್ತೆ ಸಂಪರ್ಕ ಕಳೆದುಕೊಂಡಿದ್ದಾರೆ.

ಶಿವಮೊಗ್ಗದಲ್ಲಿ ಜೋರು ಗಾಳಿ, ಮಳೆಗೆ ಕೋಳಿ ಫಾರಂ ಧರಶಾಹಿ

ಶಿವಮೊಗ್ಗದ ಮೋಜಪ್ಪ ಹೊಸೂರು ಗ್ರಾಮದಲ್ಲಿ ಏಜಾಜ್ ಎಂಬುವವರಿಗೆ ಸೇರಿದ್ದ ಕೋಳಿ ಫಾರಂ ಧರಶಾಹಿ ಆಗಿದೆ. ಫಾರಂ ಮಾಲೀಕ ಸುಮಾರು 6 ಸಾವಿರ ಕೋಳಿಗಳನ್ನು ಸಾಕಿದ್ದರು. ಭಾರಿ ಮಳೆ ಗಾಳಿಗೆ ಕೋಳಿ ಫಾರಂ ನೆಲಚ್ಚಿದ್ದು, ಸುಮಾರು 3 ಸಾವಿರಕ್ಕೂ ಹೆಚ್ಚು ಕೋಳಿಗಳು ಮೃತಪಟ್ಟಿವೆ. ಜೀವನೋಪಾಯಕ್ಕಾಗಿ ಕೋಳಿ ಫಾರಂ ನಡೆಸುತ್ತಿದ್ದ ಏಜಾಜ್ ಕುಟುಂಬ ಕಂಗಲಾಗಿದ್ದಾರೆ. ಇತ್ತ ಮಳೆ ಅಬ್ಬರಕ್ಕೆ ಕುಣೆಗದ್ದೆಯಿಂದ ಹಲಸೆ ದೇವಸ್ಥಾನಕ್ಕೆ ಹೋಗುವ ರಸ್ತೆ ಕುಸಿದು ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಸ್ತೆ ಕುಸಿತದಿಂದ ವಾಹನ ಸಂಚಾರ ವ್ಯತ್ಯಯವಾಗಿತ್ತು.

ಇದನ್ನೂ ಓದಿ: Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಪ್ರವಾಹದ ನೀರಿನಲ್ಲಿ ಮುಳುಗಿದ ಎಪಿಎಂಸಿ ಮಾರುಕಟ್ಟೆ

ಹಾಸನದ ಹೊಳೆನರಸೀಪುರ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಸಂಪೂರ್ಣ ಜಲಾವೃತಗೊಂಡಿತ್ತು. ಮಾರುಕಟ್ಟೆ ಪ್ರಾಂಗಣ ಸ್ವಿಮ್ಮಿಂಗ್ ಪೂಲ್‌ನಂತೆ ಭಾಸವಾಗಿತ್ತು. ಹೊಳೆನರಸೀಪುರ – ಮಡಿಕೇರಿ ರಾಜ್ಯ ಹೆದ್ದಾರಿ ಸಮೀಪ ಇರುವ ಎಪಿಎಂಸಿ ಮಾರುಕಟ್ಟೆ ಉದ್ಘಾಟನೆಗೂ ಮೊದಲೇ ಹೇಮಾವತಿ ನದಿ ಪ್ರವಾಹದ ನೀರಿನಲ್ಲಿ ಮುಳುಗಿದೆ.

ರಾಯಚೂರಿನಲ್ಲಿ ನದಿ ತೀರದಲ್ಲಿ ಮೊಸಳೆಗಳ ಓಡಾಟ

ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರೀ‌ ಮಳೆಯಿಂದಾಗಿ ತುಂಗಭದ್ರಾ ನದಿಯಲ್ಲಿ ಇದ್ದ ಮೊಸಳೆಗಳು ನದಿ ತೀರಕ್ಕೆ ಬಂದಿವೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಿಕಲಪರ್ವಿ ಗ್ರಾಮದ ಬಳಿ ಬೃಹತ್ ಮೊಸಳೆ ಪ್ರತ್ಯಕ್ಷವಾಗಿತ್ತು. ತುಂಗಭದ್ರಾ ನದಿ ತೀರದ ಗ್ರಾಮಗಳಿಗೆ ಮೊಸಳೆ ನುಗ್ಗುವ ಆತಂಕ ಎದುರಾಗಿದ್ದು, ನದಿ ದಂಡೆಗೆ ತೆರಳದಂತೆ ,ಜಾನುವಾರುಗಳನ್ನು ಬಿಡದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಇತ್ತೀಚೆಗೆ ಮೊಸಳೆಯೊಂದು ಹಸುವಿ‌ನ ಕರು ಮೇಲೆ ದಾಳಿ ಮಾಡಿತ್ತು.

ಗ್ರಾಮಗಳನ್ನು ತೊರೆಯುತ್ತಿರುವ ಜನರು

ಕೃಷ್ಣಾ ನದಿಗೆ ಕೊಯ್ನಾ ಜಲಾಶಯದ ನೀರು ಬಿಡುಗಡೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರವಾ‌ಹ ಆತಂಕ ತೀವ್ರಗೊಂಡಿದೆ. ಪ್ರವಾಹದ ಭೀತಿಯಿಂದ ಜನರು ಗ್ರಾಮಗಳನ್ನು ತೊರೆಯುತ್ತಿದ್ದಾರೆ. ಬೆಳಗಾವಿ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ ಐನಾಪೂರ ರಸ್ತೆ ಮೇಲೆ ನೀರು ಬರುತ್ತಿರುವುದರಿಂದ ಜಾನುವಾರುಗಳೊಂದಿಗೆ ಜನರು ಸ್ಥಳಾಂತರಗೊಂಡಿದ್ದಾರೆ.

ರಸ್ತೆಗೆ ಬಿದ್ದ ಮರ

ಕೊಡಗಿನ ಸೋಮವಾರಪೇಟೆ ವ್ಯಾಪ್ತಿಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹದಾಕಾರದ ಮರ ಬಿದ್ದಿತ್ತು. ಇದರಿಂದಾಗಿ ಸೋಮವಾರಪೇಟೆ ಸಮೀಪದ ಯಡವನಾಡು ಸಂಪರ್ಕ ರಸ್ತೆಯು ಬಂದ್‌ ಆಗಿತ್ತು. ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು. ಸ್ಥಳೀಯರಿಂದಲೆ ರಸ್ತೆ ಅಡ್ಡಲಾಗಿ ಬಿದ್ದ ಮರ ತೆರವು ಮಾಡಲಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
PARIS OLYMPICS
ಕ್ರೀಡೆ16 mins ago

Paris Olympics: ಶರತ್ ಕಮಲ್​ಗೆ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ಎದುರಾಳಿ

Viral Video
ವೈರಲ್ ನ್ಯೂಸ್16 mins ago

Viral Video: ಅಪಘಾತವಾದ ಲಾರಿಯಿಂದ ಜ್ಯೂಸ್‌ ಪ್ಯಾಕ್‌ ಎತ್ತಿಕೊಂಡ ಐಫೋನ್‌ಧಾರಿ! ದೊಡ್ಡವರ ಸಣ್ಣತನ ಎಂದ ನೆಟ್ಟಿಗರು

Ajith Kumar Neel not collaborating for a film
ಕಾಲಿವುಡ್17 mins ago

Ajith Kumar: ಪ್ರಶಾಂತ್ ನೀಲ್- ಅಜಿತ್ ಭೇಟಿಯಾಗಿದ್ದು ನಿಜ; ಸಿನಿಮಾ ಬಗ್ಗೆ ಮ್ಯಾನೇಜರ್ ಹೇಳಿದ್ದೇನು?

shiradi ghat train karnataka rian news
ಪ್ರಮುಖ ಸುದ್ದಿ38 mins ago

Karnataka Rain News: ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ, ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌

UGCET 2024 seat allotment process begins Only a few days left for the option to enter
ಬೆಂಗಳೂರು43 mins ago

UGCET 2024 : ಯುಜಿಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ; ಆಪ್ಶನ್ ಎಂಟ್ರಿ ಮಾಡಲು ಕೆಲವೇ ದಿನಗಳು ಬಾಕಿ!

Actor Darshan Lata Jaiprakash says that since Darshan is a devotee of God,
ಸಿನಿಮಾ58 mins ago

Actor Darshan: ದರ್ಶನ್ ದೈವ ಭಕ್ತ, ಜೈಲಿಗೆ ಸೇರಿದ್ದಾಗಿನಿಂದ ವಿಜಯಲಕ್ಷ್ಮಿ ಅತ್ತಿಗೆ ಹೋರಾಟ ಜಾಸ್ತಿ ಆಗಿದೆ ಎಂದ ಲತಾ ಜೈಪ್ರಕಾಶ್!

Paris Olympics
ಕ್ರೀಡೆ1 hour ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

illicit relationship raichur siravara
ಕ್ರೈಂ1 hour ago

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Gold Rate Today
ಚಿನ್ನದ ದರ1 hour ago

Gold Rate Today: ಬಜೆಟ್‌ ಬಳಿಕ ಇದೇ ಮೊದಲ ಬಾರಿ ಏರಿಕೆ ಕಂಡ ಚಿನ್ನದ ದರ; ಇಂದು ಇಷ್ಟು ದುಬಾರಿ

Actor Darshan Astrologer Chanda Pandey Said Facing Problems Because Of His vig
ಕ್ರೈಂ2 hours ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ17 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ18 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ19 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ20 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌