Site icon Vistara News

Road Accident : ಲಾರಿ- ಬೈಕ್‌ ನಡುವೆ ಡಿಕ್ಕಿ; ಕಿತ್ತು ಬಂತು ಸವಾರನ ಕರುಳು

Lorry And bike Accident

ಮೈಸೂರು: ಕಬ್ಬಿನ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ (Road Accident) ಸಂಭವಿಸಿದೆ. ಲಾರಿಯಡಿ ಸಿಲುಕಿದ ಬೈಕ್ ಸವಾರ ಸ್ಥಳದಲ್ಲೇ ನರಳಾಡಿ ಮೃತಪಟ್ಟಿದ್ದಾರೆ. ಮೈಸೂರಿನ ತಿ. ನರಸೀಪುರ ತಾಲೂಕಿನ ವಿಜಯಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.

ತಿ.ನರಸೀಪುರ ತಾಲೂಕಿನ ಕುಕ್ಕೂರು ಗ್ರಾಮದ ನಿವಾಸಿ ಪ್ರಶಾಂತ್ (31) ಮೃತ ದುರ್ದೈವಿ. ಧರ್ಮಸ್ಥಳ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಪ್ರಶಾಂತ್, ಏಳು ತಿಂಗಳ ಹಿಂದಷ್ಟೆ ವಿವಾಹವಾಗಿದ್ದರು. ಆದರೆ ಇದೀಗ ಭೀಕರ ಅಪಘಾತದಲ್ಲಿ ಅಸುನೀಗಿದ್ದು, ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳಕ್ಕೆ ತಲಕಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ರಭಸಕ್ಕೆ ಪ್ರಶಾಂತ್‌ರ ದೇಹದಿಂದ ಕರುಳು ಹೊರಬಂದಿತ್ತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ತಲಕಾಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆಯಲ್ಲೇ ಕೆಟ್ಟು ನಿಂತ ಬಿಎಂಟಿಸಿ

ಬೆಂಗಳೂರಿನ ಕೆ.ಜಿ ರಸ್ತೆಯ ಮಧ್ಯದಲ್ಲಿ ಬಿಎಂಟಿಸಿ ಬಸ್ ಬ್ರೇಕ್ ಡೌನ್ ಆಗಿ, ನಡುರಸ್ತೆಯಲ್ಲೇ ಕೆಟ್ಟು ನಿಂತಿತ್ತು. ಡಿಪೋ 33ಕ್ಕೆ ಸೇರಿದ ಬಸ್‌ನಲ್ಲಿ ಬ್ರೇಕ್ ಪೈಪ್ ಸಮಸ್ಯೆಯಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version