Site icon Vistara News

Self Harming : 6 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ನವ ವಿವಾಹಿತೆ ಶವವಾಗಿ ಪತ್ತೆ; ಕೊಂದವರು ಯಾರು?

Self Harming

ಮೈಸೂರು: ಮದುವೆಯಾದ ಆರೇ ತಿಂಗಳಿಗೆ ನವವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ (Self Harming) ಪತ್ತೆಯಾಗಿದ್ದಾಳೆ. ಮೈಸೂರಿನ ಮಾನಸಿ ನಗರ ಬಿಎಸ್ಎನ್ಎಲ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ಸೌಮ್ಯಾಶ್ರೀ (27) ಮೃತ ದುರ್ದೈವಿ.

ಆರು ತಿಂಗಳ ಹಿಂದೆ ಮೈಸೂರಿನ ಮಂಜುನಾಥ್ ಎಂಬುವರ ಜತೆ ಸೌಮ್ಯಾಶ್ರೀ ಮದುವೆಯಾಗಿದ್ದರು. ಸೌಮ್ಯಾಶ್ರೀ ತಂದೆ ಶ್ರೀಧರ್ ಬೆಂಗಳೂರಿನಿಂದ ಮೈಸೂರಿಗೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರು. ಆದರೆ ಮದುವೆ ಆದ ಕೆಲವೇ ದಿನಗಳಲ್ಲಿ ಸೌಮ್ಯಾಳ ನಡತೆ ಮೇಲೆ ಪತಿ ಮಂಜುನಾಥ್ ಅನುಮಾನ ಪಡುತ್ತಿದ್ದ ಎನ್ನಲಾಗಿದೆ.

ಈ ಕುರಿತು ಸೌಮ್ಯಾ ಹೆತ್ತವರಿಗೆ ಮಾಹಿತಿ ನೀಡಿದ್ದಳು. ಹೀಗಾಗಿ ಮಂಜುನಾಥ್ ಹಾಗೂ ಅವರ ಮನೆಯವರೆಲ್ಲ ಸೇರಿ ಸೌಮ್ಯಾಳನ್ನ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಮಗಳ ಶವ ಕಂಡು ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸೌಮ್ಯಳ ಶವ ಕಂಡು ಪೋಷಕರ ಆಕ್ರಂದನ

ಸ್ಥಳಕ್ಕೆ ಮೈಸೂರಿನ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೈಸೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

ಅವನೊಬ್ಬ ಅನುಮಾನದ ಪಿಶಾಚಿ

ಮೈಸೂರಿನಲ್ಲಿ ಸೌಮ್ಯಾಶ್ರೀ‌ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರಿ ಕಾವ್ಯಶ್ರೀ ಪ್ರತಿಕ್ರಿಯಿಸಿದ್ದಾರೆ. ಮಗಳಿಗೆ ಅಪ್ಪ ಕಾಲ್ ಮಾಡಿದರೂ, ಬಾವನ ಬರ್ತ್‌ ಡೇಗೆ ವಿಶ್ ಮಾಡಿದರೂ ಕೂಡ ಪತಿ ಮಂಜುನಾಥ್‌ ಅನುಮಾನಿಸುತ್ತಿದ್ದ. ಪತಿ ಕಿರುಕುಳದಿಂದ ನೊಂದವಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ. ನನ್ನ ತಂಗಿ ಗಂಡು ಮಗನ ರೀತಿ ಬೆಳೆದವಳು, ಆಕೆ ಆತ್ಮಹತ್ಯೆ ಮಾಡಿಕೊಳ್ಳುವವಳಲ್ಲ. ಆಕೆಯ ಗಂಡ, ಮಾವ, ಅತ್ತೆ, ನಾದನಿ ಕೊಲೆ ಮಾಡಿದ್ದಾರೆ ಎಂದು ಅಕ್ಕ ಕಾವ್ಯ ಆರೋಪಿಸಿದ್ದರು.

ಅಪ್ಪನಿಗೆ ಕಾಲ್‌ ಮಾಡಿ ಗರ್ಭಿಣಿಯಾಗಿದ್ದೀನಿ ಅಂದಿದ್ದಳು ಸೌಮ್ಯಾ

ಸೌಮ್ಯಾ ಹಾಗೂ ಮಂಜುನಾಥ್‌ಗೆ ಧರ್ಮಸ್ಥಳದಲ್ಲಿ ಮದುವೆ ಮಾಡಿ ಕೊಟ್ಟಿದ್ದೆವು. ಮದುವೆಯಾದ 5 ನಿಮಿಷದಲ್ಲೇ ಕರೆದುಕೊಂಡು ಹೋಗಿದ್ದರು. ನಮ್ಮ ಮನೆಯವರಿಗೆ ಮಾತನಾಡೋದಕ್ಕೂ ಅವಕಾಶ ಕೊಟ್ಟಿರಲಿಲ್ಲ ಎಂದು ಮಂಜುನಾಥ್‌ ಕುಟುಂಬಸ್ಥರ ಕುರಿತು ಕಾವ್ಯ ವಿವರಿಸಿದರು. ನನ್ನ ಗಂಡನ ಬರ್ತ್ ಡೇ ದಿನ ವಾಟ್ಸ್‌ಆ್ಯಪ್‌ನಲ್ಲಿ ವಿಶ್‌ ಮಾಡಿ ಸೌಮ್ಯಾ ಸ್ಟೇಟಸ್ ಹಾಕಿದ್ದಳು. ಅದನ್ನೇ ನೆಪ ಮಾಡಿಕೊಂಡು ನನ್ನ ಪತಿ ಜತೆಗೆ ಸಂಬಂಧ ಕಟ್ಟಿದ್ದ. ಬಳಿಕ ವಾಟ್ಸ್‌ಆ್ಯಪ್‌ ಮೆಸೇಜ್ ಡಿಲೀಟ್ ಮಾಡಿ ಗಲಾಟೆ ಮಾಡಿದ್ದ. ಹಿಂದೊಮ್ಮೆ ತಾಳಿ ವಿಚಾರಕ್ಕೂ ಗಲಾಟೆ ನಡೆದಿತ್ತು. ಅಪ್ಪ- ಅಮ್ಮನ ಜತೆ ಮಾತನಾಡಲೂ ಬಿಡುತ್ತಿರಲಿಲ್ಲ. ಅಪ್ಪನ ಜತೆಗೂ ಕದ್ದುಮುಚ್ಚಿ ಮಾತನಾಡುತ್ತಿದ್ದ ಸೌಮ್ಯಾ ಗರ್ಭಿಣಿಯಾಗಿರುವ ವಿಚಾರ ಹೇಳಿಕೊಂಡಿದ್ದಳು. ಆದರೆ ಅವಳನ್ನು ಹೋಗಿ ನೋಡುವಷ್ಟರಲ್ಲಿ ಹೆಣವಾಗಿದ್ದಾಳೆ ಎಂದು ಸಹೋದರಿ ಕಾವ್ಯಶ್ರೀ ಕಣ್ಣೀರು ಹಾಕಿದ್ದರು.

ಇದನ್ನೂ ಓದಿ: Yogi Adityanath: ರಸ್ತೆಯಲ್ಲಿ ನಮಾಜ್ ಮಾಡಿದರೆ ಹುಷಾರ್! ಬಕ್ರೀದ್ ಹಿನ್ನೆಲೆಯಲ್ಲಿ ಮುಸ್ಲಿಮರಿಗೆ ಯೋಗಿ ವಾರ್ನಿಂಗ್!

ಉಡುಪಿಯಲ್ಲಿ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಉಡುಪಿ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿಯ ಕಾಪು ತಾಲೂಕಿನ ಮಲ್ಲಾರು ಎಂಬಲ್ಲಿ ಘಟನೆ ನಡೆದಿದೆ. ಮಲ್ಲಾರು ಚುಕ್ಕು ತೋಟ ನಿವಾಸಿ ಮೋಸಿನಾ (34) ಆತ್ಮಹತ್ಯೆ ಮಾಡಿಕೊಂಡವರು.

ಮೋಸಿನಾ ತಂದೆಯ ನಿಧನದ ನಂತರ ಖಿನ್ನತೆಗೊಳಗಾಗಿದ್ದರು. ಮೋಸಿನಾಗೆ 7 ವರ್ಷ ಮತ್ತು ಒಂದೂವರೆ ವರ್ಷದ ಇಬ್ಬರು ಮಕ್ಕಳಿದ್ದರು. ತಂದೆಯ ಕೊರಗಿನಲ್ಲೇ ಖಿನ್ನತೆಗೆ ಒಳಗಾದ ಮೋಸಿನಾ ಮನೆ ಬಳಿ ಇದ್ದ ಬಾವಿ ಹಾರಿ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಸ್ಥಳೀಯರ ಸಹಾಯದಿಂದ ಮಹಿಳೆಯ ಮೃತದೇಹ ಬಾವಿಯಿಂದ ತೆರವು ಮಾಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾಪು ಪೊಲೀಸರು ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version