Self Harming : ಪ್ರೇಮ ವೈಫಲ್ಯಕ್ಕೆ ಯುವಕ ಆತ್ಮಹತ್ಯೆ; ಅಪ್ಪನ ಸಾಲಕ್ಕೆ ನೇಣು ಬಿಗಿದುಕೊಂಡ ಮಗ! - Vistara News

ಮೈಸೂರು

Self Harming : ಪ್ರೇಮ ವೈಫಲ್ಯಕ್ಕೆ ಯುವಕ ಆತ್ಮಹತ್ಯೆ; ಅಪ್ಪನ ಸಾಲಕ್ಕೆ ನೇಣು ಬಿಗಿದುಕೊಂಡ ಮಗ!

Self Harming : ಮೈಸೂರಿನಲ್ಲಿ ಯುವಕನೊರ್ವ ಪ್ರೇಮ ವೈಫಲ್ಯಕ್ಕೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೆ ಇತ್ತ ಶಿವಮೊಗ್ಗದಲ್ಲಿ ಅಪ್ಪ ಮಾಡಿದ ಸಾಲಕ್ಕೆ ಮಗ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ.

VISTARANEWS.COM


on

Self Harming
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು/ಶಿವಮೊಗ್ಗ: ಪ್ರೀತಿ ವೈಫಲ್ಯದಿಂದಾಗಿ (Love Failure) ಮನನೊಂದ ಯುವಕನೊರ್ವ ವಿಷ ಸೇವಿಸಿ ಆತ್ಮಹತ್ಯೆ (Self Harming ) ಮಾಡಿಕೊಂಡಿದ್ದಾನೆ. ಮೈಸೂರು ತಾಲೂಕಿನ ಹಡಜನ ಗ್ರಾಮದ ಮಧುಸೂಧನ್ ಆತ್ಮಹತ್ಯೆ ಮಾಡಿಕೊಂಡವರು.

ಪ್ರೀತಿ ವೈಫಲ್ಯ ಹಿನ್ನೆಲೆಯಲ್ಲಿ ಮಧುಸೂಧನ್‌ ಮೊನ್ನೆ ವಿಡಿಯೊ ಮಾಡಿ ವಿಷ ಕುಡಿದಿದ್ದ. ವಿಷಯ ಗೊತ್ತಾಗಿ ಪೋಷಕರು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder Case : ಟಿಡಿಪಿ ಶಾಸಕ ಬೆಂಬಲಿಗನ ಕೊಲೆಗೆ ಸ್ಕೆಚ್; ಆಂಧ್ರ ಪೊಲೀಸರಿಂದ ಕರ್ನಾಟಕ ಪೊಲೀಸ್‌ ಅರೆಸ್ಟ್‌!

ತಂದೆ ಸಾಲಕ್ಕೆ ಮಗನ ಮೇಲೆ ಹಲ್ಲೆ; ಮನನೊಂದು ಆತ್ಮಹತ್ಯೆ

ತಂದೆ ಮಾಡಿದ್ದ ಸಾಲಕ್ಕೆ ಮಗನ ಮೇಲೆ ಹಲ್ಲೆ ನಡೆಸಿದ್ದರು. ಇದರಿಂದ ಮನನೊಂದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ. ಸ್ಟೀವನ್ (25) ಮೃತ ದುರ್ದೈವಿ. ಶಿವಮೊಗ್ಗದ ಭದ್ರಾವತಿಯ ಪೇಪರ್ ಟೌನ್ ಬಡಾವಣೆಯಲ್ಲಿ ಕಳೆದ ಎರಡು ದಿನದ ಹಿಂದೆ ಘಟನೆ ನಡೆದಿದೆ.

ಸ್ವೀವನ್‌ ತಂದೆ ಜೋಸೆಫ್‌ ಅವರು ಪರಶುರಾಮ್ ಎಂಬುವರ ಬಳಿ 2 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಪಡೆದುಕೊಂಡು ತೀರಿಸಲಾಗದೇ ಜೋಸೆಫ್‌ ಮನೆ ಬಿಟ್ಟು ಹೊರ ರಾಜ್ಯಕ್ಕೆ ತೆರಳಿದ್ದರು. ಸಾಲ ವಸೂಲಿಗಾಗಿ ಸ್ಟೀಪನ್ ಕರೆದುಕೊಂಡು ಹೋಗಿ ಪರಶುರಾಮ ಹಲ್ಲೆ ನಡೆಸಿದ್ದರು. ಹಲ್ಲೆಯಿಂದ ಮನನೊಂದ ಸ್ಟೀವನ್ ಮನೆಗೆ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕುರಿತು ಪೇಪರ್ ಟೌನ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ-ಕೊಳ್ಳಗಳು; ಹಳ್ಳ ದಾಟಲು ಗ್ರಾಮಸ್ಥರ ಪರದಾಟ

Karnataka Weather Forecast : ಹಾವೇರಿ, ಬಾಗಲಕೋಟೆ, ಬಳ್ಳಾರಿಯಲ್ಲಿ ಭಾರಿ ಮಳೆಯಿಂದಾಗಿ (Rain News) ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಅವಾಂತರವೇ ಸೃಷ್ಟಿಯಾಗಿದೆ. ಹಳ್ಳದ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಜನರು ಜೀವ ಭಯದಲ್ಲೇ ದಾಟುತ್ತಿದ್ದಾರೆ.

VISTARANEWS.COM


on

By

karnataka weather forecast
Koo

ಹಾವೇರಿ: ಭಾರಿ ಮಳೆಗೆ (Rain News) ಕೆರೆ ಕೋಡಿ ಬಿದ್ದು ಗ್ರಾಮದ ಹಲವು ಮನೆಗಳು ಜಲಾವೃತಗೊಂಡಿದೆ. ಸುಮಾರು 30 ಹೆಚ್ಚು ಮನೆಗಳಿಗೆ ಕೆರೆ ನೀರು ನುಗ್ಗಿದೆ. ಹಾವೇರಿಯ ಹಿರೇಕೇರೂರು ತಾಲೂಕಿನ ಕಚವಿ ಗ್ರಾಮವು ಜಲಾವೃತಗೊಂಡಿದೆ. ಕೊಪ್ಪದ ಕೆರೆ ಕೋಡಿ ಬಿದ್ದು ಕಚವಿ ಗ್ರಾಮದತ್ತ ನೀರು (Karnataka Weather Forecast) ನುಗ್ಗಿದೆ.

karnataka Weather Forecast
karnataka weather Forecast

ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಕೊಪ್ಪದ ಕೆರೆ ತುಂಬಿ ಕೋಡಿ ಬಿದ್ದು ಗ್ರಾಮದತ್ತ ಹರಿದು ಬಂದಿದೆ. ಕಚವಿ ಗ್ರಾಮಸ್ಥರ ಬದುಕು ಬೀದಿಗೆ ಬಿದಿದ್ದು, ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿದ್ದಾರೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ರಾತ್ರಿ ಪೂರ್ತಿ ನೀರು ಹೊರ ಹಾಕಿದ್ದಾರೆ. ಇಷ್ಟೆಲ್ಲಾ ಸಮಸ್ಯೆ ಆದರೂ ಜಿಲ್ಲಾಡಳಿತ ಕ್ಯಾರೆ ಎನ್ನುತ್ತಿಲ್ಲ. ಗ್ರಾಮದ ವಯೋವೃದ್ದರು, ವಾಹನ ಸವಾರರರು, ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ರಸ್ತೆ ಮೇಲೆ ನೀರು ನದಿಯಂತೆ ಹರಿಯುತ್ತಿದೆ.

karnataka weather Forecast
karnataka weather Forecast

ಬಳ್ಳಾರಿಯಲ್ಲಿ ಭತ್ತದ ಬೆಳೆಗೆ ಹಾನಿ

ಮಳೆಯಿಂದ ಹಳ್ಳಗಳು ತುಂಬಿ ನೀರು ಹರಿದು ಭತ್ತದ ಬೆಳೆಗೆ ಹಾನಿಯಾಗಿದೆ. ಬಳ್ಳಾರಿ ಜಿಲ್ಲೆಯ ಜಾಲಿಹಾಳ್ ಗ್ರಾಮದ ನಾಲ್ಕು ಹಳ್ಳಗಳ ರೈತರು ಜರ್ಜರಿತರಾಗಿದ್ದಾರೆ. ಭಾರಿ ಮಳೆಗೆ ಹಳ್ಳಗಳು ಹರಿದ ಪರಿಣಾಮ 500 ಎಕರೆ ಭತ್ತ ಜಲಾವೃತಗೊಂಡಿದೆ. ಜಾಲಿಹಾಳ್ ಗ್ರಾಮದ ಸುತ್ತ ಕಟ್ರಳ್ಳ, ಕೈಮುರುಕನಹಳ್ಳ, ಗಂಗಮ್ಮನಹಳ್ಳ, ಈರ್ಲಹಳ್ಳಗಳು ಹರಿಯುತ್ತಿದೆ. ಭತ್ತ ನಾಟಿ ಮಾಡಿದ ಕೆಲ ದಿನಗಳಿಂದ ಭರ ಸಿಡಿಲಾಗಿ ಎರಗಿದ ಹಳ್ಳದ ನೀರಿನಿಂದ ಲಕ್ಷಾಂತರ ರೂ.ಗಳು ನಷ್ಟವಾಗಿದೆ.

ರಸ್ತೆಯ ಮೇಲೂ ಹಳ್ಳ ಹರಿದು ಜಾಲಿಹಾಳ್ ಮತ್ತು ಕಾರೇಕಲ್ಲು ಮಧ್ಯದ ರಸ್ತೆ ಕೊಚ್ಚಿ ಹೋಗಿದೆ. ಎಕರೆಗೆ 15 ರಿಂದ 20 ಸಾವಿರ ವೆಚ್ಚ ಮಾಡಿ ಭತ್ತ ನಾಟಿ ಮಾಡಿದ್ದರು. ಕಳೆದ ಐದಾರು ದಿನಗಳಿಂದ ರೈತರ ಗದ್ದೆಯಲ್ಲಿ ನೀರು ಹರಿದಿದ್ದರಿಂದ ಭತ್ತದ ಸಸಿಗಳು ಕೊಳೆತು ಹೋಗಿದೆ.

ಇದನ್ನೂ ಓದಿ: Bomb Threat : ಉರ್ದು ಭಾಷೆಯಲ್ಲಿ ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ ಬಾಂಬ್‌ ಬೆದರಿಕೆ

ತುಂಬಿ ಹರಿಯುತ್ತಿರುವ ಕರಡಿ ಗ್ರಾಮದ ಹಳ್ಳ

ಬಾಗಲಕೋಟೆಯ ಇಳಕಲ್ಲ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಕರಡಿ ಗ್ರಾಮದ ಹಳ್ಳ ತುಂಬಿ ಹರಿದಿದೆ. ರಸ್ತೆ ಮೇಲೆ ಹಳ್ಳದ ನೀರು ಹರಿಯುತ್ತಿರುವ ಪರಿಣಾಮ ಕರಡಿ ಗ್ರಾಮಸ್ಥರ ಸಂಚಾರಕ್ಕೆ ಅಡತಡೆಯಾಗಿದೆ. ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳದ ನೀರಲ್ಲೇ ನಡೆದು ಗ್ರಾಮಕ್ಕೆ ಹೋಗುವಂತಾಗಿದೆ. ಪುಟ್ಟ ಮಗು ಹೊತ್ತು ಹಳ್ಳ ದಾಟೋಕೆ ಪರದಾಡುತ್ತಿದ್ದಾರೆ. ಪ್ರತಿ ಬಾರಿ ಮಳೆ ಸುರಿದಾಗ ಕರಡಿ, ದಾಸಬಾಳ , ಪಾಲತಿ , ಕೊಣ್ಣೂರ ಹುನಗುಂದ ಸಂಪರ್ಕ ಕಡಿತಗೊಂಡಿದೆ. ಶೀಘ್ರ ಮೇಲ್ಸೇತುವೆ ಕಾರ್ಯ ಮುಗಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಮಳೆ ಅಬ್ಬರದ ಜತೆಗೆ ಭೂ ಕಂಪನದ ಅನುಭವ

ಶುಕ್ರವಾರ ಕೊಡಗು, ಹಾಸನ, ಮೈಸೂರು ಗಡಿಭಾಗದಲ್ಲಿ ಭೂಕಂಪನದ ಅನುಭವವಾಗಿದೆ. ಹೆಬ್ಬಾಲೆ ಸಮೀಪ, ಸೂಳೆಕೋಟೆ, ಅಡಗೂರು‌‌ ಹಾಗೂ ಕಣಗಾಲು ಹಾಗೂ ಕುಶಾಲನಗರ ಜ್ಞಾನಭಾರತಿ ಶಾಲೆ ಹಿಂಭಾಗ, ಭಸವತ್ತೂರು ಸೇರಿ ಹಲವೆಡೆ ಕಂಪನದ ಅನುಭವವಾಗಿದೆ. ಶುಕ್ರವಾರ ಮುಂಜಾನೆ 6.30ರ ಸಮಯಕ್ಕೆ 2ರಿಂದ3 ಸೆಕೆಂಡ್ ಭೂಮಿ ಕಂಪಿಸಿದೆ. ಭೂಕಂಪನ ಹಿನ್ನೆಲೆಯಲ್ಲಿ ಕೆಲಕಾಲ ಜನರು ಆತಂಕಗೊಂಡರು.

ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿಯಲ್ಲಿ ರಭಸವಾಗಿ ಬೀಸಲಿದೆ ಗಾಳಿ; ಸಾಧಾರಣ ಮಳೆ ಸಾಧ್ಯತೆ

Karnataka Weather Forecast : ಕರಾವಳಿಯ ಸಮುದ್ರ ತೀರದಲ್ಲಿ ಗಾಳಿ ವೇಗ ಹೆಚ್ಚಾಗಿರಲಿದ್ದು, ಮಲೆನಾಡು ಹಾಗೂ ಒಳನಾಡಿನಲ್ಲಿ ಹಗುರದಿಂದ ಸಾಧಾರಣ (Rain News) ಮಳೆಯಾಗಲಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲಿ ಹಗುರದಿಂದ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31 , ಕನಿಷ್ಠ ಉಷ್ಣಾಂಶ 22 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Weather: ಅಲೆಗಳ ಅಬ್ಬರಕ್ಕೆ ಅಂಕೋಲಾದಲ್ಲಿ ಕೊಚ್ಚಿ ಹೋದ ಮನೆ; ಭಾರಿ ಮಳೆಗೆ ಚಾರ್ಮಾಡಿಯಲ್ಲಿ ಧರೆಗುರುಳಿದ ಬಂಡೆಗಳು

ಯೆಲ್ಲೋ ಅಲರ್ಟ್‌

ಗುಡಗು ಸಹಿತ ಭಾರಿ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಬೆಳಗಾವಿ, ವಿಜಯಪುರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗಸ್ಟ್‌ 24ರಂದು ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather: ಅಲೆಗಳ ಅಬ್ಬರಕ್ಕೆ ಅಂಕೋಲಾದಲ್ಲಿ ಕೊಚ್ಚಿ ಹೋದ ಮನೆ; ಭಾರಿ ಮಳೆಗೆ ಚಾರ್ಮಾಡಿಯಲ್ಲಿ ಧರೆಗುರುಳಿದ ಬಂಡೆಗಳು

Karnataka Weather Forecast: ಕರಾವಳಿಯಲ್ಲಿ ಅಲೆಗಳ ಅಬ್ಬರ ಜೋರಾಗಿದ್ದರೆ, ಇತ್ತ ಮಲೆನಾಡಿನಲ್ಲಿ ಭಾರಿ ಮಳೆಗೆ (Rain News) ಚಾರ್ಮಾಡಿ ಘಾಟ್‌ನಲ್ಲಿ ಬಂಡೆ ಕಲ್ಲುಗಳು ಧರೆಗುರುಳಿವೆ. ವಿಜಯಪುರ, ವಿಜಯನಗರದಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ.

VISTARANEWS.COM


on

By

Karnataka weather Forecast
Koo

ಕಾರವಾರ: ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಅಲೆಗಳ ಅಬ್ಬರ (Karnataka Weather Forecast) ಜೋರಾಗಿದೆ. ಭಾರೀ ಅಲೆಗಳ ಅಬ್ಬರಕ್ಕೆ (Rain News) ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಹಾರವಾಡದ ತರಂಗಮೇಟ ಪ್ರದೇಶದಲ್ಲಿ ಮನೆಯೊಂದು ಕೊಚ್ಚಿಹೋಗಿದೆ. ಮೀನುಗಾರ ಅಶೋಕ್ ಹರಿಕಂತ್ರ ಎಂಬುವವರ ಮನೆ ಸಮುದ್ರಪಾಲಾಗಿದೆ.

ತರಂಗಮೇಟ ತೀರದ ಸುಮಾರು 200 ಮೀಟರ್ ವ್ಯಾಪ್ತಿಯಲ್ಲಿ ಅಲೆಗಳ ಅಬ್ಬರಕ್ಕೆ ಕಳೆದ ಮೂರು ತಿಂಗಳಿಂದ ಕಡಲಕೊರೆತ ಉಂಟಾಗಿತ್ತು. ಕುಟುಂಬಸ್ಥರು ಎರಡು ತಿಂಗಳ ಹಿಂದೆಯೇ ಮನೆ ಬಿಟ್ಟು ಬೇರೆಡೆ ಉಳಿದುಕೊಂಡಿದ್ದರು. ಇಂದು ಗುರುವಾರ ಅಲೆಗಳ ಅಬ್ಬರಕ್ಕೆ ಮನೆ, ತೆಂಗಿನಮರ ನೀರುಪಾಲಾಗಿದೆ. ಮನೆ, ತೆಂಗಿನಮರ ಕೊಚ್ಚಿಹೋಗುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ತರಂಗಮೇಟ ಕಡಲತೀರಕ್ಕೆ ಹೊಂದಿಕೊಂಡು 30ಕ್ಕೂ ಅಧಿಕ ಮೀನುಗಾರರ ಮನೆಗಳು ಇವೆ. ಕಡಲತೀರಕ್ಕೆ ಅಲೆತಡೆಗೋಡೆ ನಿರ್ಮಿಸುವಂತೆ ಮನವಿ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್‌ನ ತಪ್ಪಲಿನಲ್ಲಿ ಭಾರಿ ಮಳೆಯಾಗಿದೆ. ಧಾರಾಕಾರ ಮಳೆಗೆ ಚಾರ್ಮಾಡಿಯಲ್ಲಿ ಬಂಡೆಗಳು ಧರೆಗುರುಳಿವೆ. ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್‌ನ 8 ಮತ್ತು 9ನೇ ತಿರುವಿನಲ್ಲಿ ಘಟನೆ ನಡೆದಿದೆ.

ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ರಸ್ತೆಯಲ್ಲೇ ನೀರು ತುಂಬಿ ಹರಿಯುತ್ತಿದೆ. ಮಳೆ ನೀರಿನ ಜತೆ ರಸ್ತೆಗೆ ಕಲ್ಲುಗಳು ತೇಲಿ ಬಂದಿದೆ. ಗುಡ್ಡ ಕುಸಿದು ರಸ್ತೆ ಮೇಲೆ ಬಂಡೆ ಕಲ್ಲುಗಳು ಉರುಳಿವೆ. ಸ್ಥಳಕ್ಕೆ ಚಾರ್ಮಾಡಿ ಘಾಟಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನ‌ ಸಂಚಾರ ಎಂದಿನಂತೆ ಇದ್ದು, ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ.

ಇನ್ನೂ ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಗ್ರಾಮಸ್ಥರ ಕಣ್ಣೆದುರೆ ಮನೆಗೆ ಸಿಡಿಲು ಬಡಿದು, ಮನೆ ಚಾವಣಿ ಸಂಪೂರ್ಣ ಹಾನಿಯಾಗಿ, ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನ ಮಾಳಿಗನಾಡು ಗ್ರಾಮದಲ್ಲಿ ಘಟನೆ ನಡೆದಿದೆ.

ಗ್ರಾಮದ ಸೀತು ಎಂಬುವವರ ಮನೆಗೆ ಸಂಪೂರ್ಣ ಹಾನಿಯಾಗಿದೆ. ಮನೆಯ ಸದಸ್ಯರು ತೋಟದ ಕೆಲಸಕ್ಕೆ ಹೋಗಿದ್ದರಿಂದ ಅವಘಡ ಸಂಭವಿಸಿದಾಗ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಮನೆಯ ಹೆಂಚುಗಳು, ಬಾಗಿಲು ಕಿಟಕಿ ಸುಟ್ಟ ಸ್ಥಿತಿ ತಲುಪಿದೆ.

ಇದನ್ನೂ ಓದಿ: Belgavi News : ಪರಿಹಾರ ನೀಡಲು ವಿಳಂಬ; ಬೆಳಗಾವಿ ಎಸಿ ಕಚೇರಿಯ ಕಂಪ್ಯೂಟರ್, ಪ್ರಿಂಟರ್ ಹೊತ್ತೊಯ್ದ ರೈತರು!

ವಿಜಯಪುರದಲ್ಲಿ ಉಕ್ಕಿ ಹರಿಯುತ್ತಿರುವ ಹಳ್ಳ

ಇತ್ತ ರೋಣಿಹಾಳ ಹಳ್ಳ ಉಕ್ಕಿ ಹರಿಯುತ್ತಿದ್ದು, ಜನರು ಹಳ್ಳದಲ್ಲೆ ಓಡಾಡುತ್ತಿದ್ದಾರೆ. ನಿನ್ನೆ ಬುಧವಾರ ತಡರಾತ್ರಿ ಸುರಿದ ಮಳೆಗೆ ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ರೋಣಿಹಾಳ. ಗರಸಂಗಿ, ಆಸಂಗಿ ಹಳ್ಳಗಳು ಉಕ್ಕಿ ಹರಿದಿದೆ. ಅಪಾಯದ ನಡುವೆಯೂ ಗ್ರಾಮಸ್ಥರು ಜೀವದ ಹಂಗು ತೊರೆದು ಹಳ್ಳ ದಾಟಲು ಯತ್ನಿಸುತ್ತಿದ್ದಾರೆ. ವಿಜಯಪುರ ತಾಲೂಕಿನ ಲೋಗಾಂವಿ ಗ್ರಾಮದಲ್ಲಿ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ. ರಾಜು ಹುನ್ನೂರ್ ಎಂಬುವವರಿಗೆ ಸೇರಿದ ದ್ರಾಕ್ಷಿ ಬೆಳೆ ಭಾರಿ ಮಳೆಗೆ ಬೆಳೆಯ ಕಂಬಗಳು ಹಾಗೂ ದ್ರಾಕ್ಷಿ ಬೆಳೆ ನೆಲಕ್ಕುರುಳಿವೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ದ್ರಾಕ್ಷಿ ಹಾನಿಯಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ರೈತರ ಮನವಿ ಮಾಡಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ತಡ ರಾತ್ರಿ ಭರ್ಜರಿ ಮಳೆಗೆ ಬಹುತೇಕ ಕಡೆ ರಸ್ತೆಗಳು ಜಲಾವೃತಗೊಂಡಿದ್ದವು. ದಾವಣಗೆರೆ ನಗರ ಹಾಗೂ ಹೊನ್ನಾಳಿ ಪಟ್ಟಣ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಸುರಿದ ಮಳೆಯಿಂದಾಗಿ ಜಮೀನಿಗೆ ನೀರು ನುಗ್ಗಿದೆ. ವಿಜಯನಗರ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೈತರ ಜಮೀನಿ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಭಾರಿ ಮಳೆಗೆ ಬೈಲುವದ್ದಿಗೆರೆ ಗ್ರಾಮದ ಕೆರೆ ಕೋಡಿ ಬಿದ್ದಿದೆ. ಕೆರೆ ಕೋಡಿ ಬಿದ್ದು ಗುಲಾಬಿ ತೋಟ, ಮೆಣಸಿನಕಾಯಿ ತೋಟ, ಹತ್ತಿ, ಹಾಗೂ ಮೆಕ್ಕೆಜೋಳ ಬೆಳೆದಿದ್ದ ಜಮೀನಿಗೆ ನೀರು ನುಗ್ಗಿದೆ. ಹತ್ತಾರು ಸಾವಿರ ಖರ್ಚು ಮಾಡಿದ್ದ ಬೆಳೆ ಮಳೆಗೆ ಮುಕ್ಕಾಲು ಭಾಗ ಹಾನಿಯಾಗಿದೆ. ಬೆಳೆ ಹಾನಿಯಾಗಿದ್ದಕ್ಕೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಗುಲಾಬಿ ಬೆಳೆಗಾರ ಕಂಗಾಲಾಗಿದ್ದಾರೆ. ಪರಿಹಾರಕ್ಕಾಗಿ ಹತ್ತಿ, ಮೆಣಸಿನಕಾಯಿ, ಮೆಕ್ಕೆಜೋಳ ಬೆಳೆದ ರೈತರಿಂದ ಆಗ್ರಹಿಸಿದ್ದಾರೆ.

ಬಿರುಗಾಳಿಗೆ ವಾಲಿದ ಸಿಗ್ನಲ್ ಕಂಬ!

ಬಿರುಗಾಳಿಗೆ ಸಿಗ್ನಲ್‌ ಕಂಬ ವಾಲಿದ ಘಟನೆ ಗದಗ ನಗರದ ಮುಳಗುಂದ ನಾಕಾದ ಸಿಗ್ನಲ್‌ನಲ್ಲಿ ಘಟನೆ ನಡೆದಿದೆ. ವಾಹನಗಳ ಓಡಾಡುವ ಸಂದರ್ಭದಲ್ಲಿ ಕಂಬ ವಾಲಿದ್ದು, ಸವಾರರು ಕಕ್ಕಾಬಿಕ್ಕಿಯಾದರು. ತಕ್ಷಣ ಅಲರ್ಟ್ ಟ್ರಾಫಿಕ್ ಪೊಲೀಸರು ಬ್ಯಾರಿಕೆಡ್ ಹಾಕಿ ಪರ್ಯಾಯ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಸ್ಥಳಕ್ಕೆ ಟ್ರಾಫಿಕ್ ಪಿಎಸ್ಐ ಶಕುಂತಲಾ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಾಳೆಗೂ ಇರಲಿದೆ ಮಳೆ ಅಬ್ಬರ

ನಾಳೆ ಶುಕ್ರವಾರ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಗುಡುಗು ಸಹಿತ ಮಳೆಯಾಗಲಿದೆ. ಕೆಲವೊಮ್ಮೆ ನಿರಂತರ ಗಾಳಿಯ ವೇಗ 40-50 ಕಿ.ಮೀ ಬೀಸುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

MUDA Scam: ಮುಡಾದಲ್ಲಿ ಇನ್ನೊಂದು ಗೋಲ್‌ಮಾಲ್, ಇಲ್ಲದ ವ್ಯಕ್ತಿ ಸೃಷ್ಟಿಸಿ ನಿವೇಶನ ಪಡೆದ ಅಧಿಕಾರಿಗಳು!

MUDA Scam: ಹೀಗಾಗಿ ಅಬ್ದುಲ್ ವಾಹಿದ್ ಹೆಸರಿನಲ್ಲಿ ಬದಲಿ ನಿವೇಶನಕ್ಕಾಗಿ ಹೈಕೋರ್ಟ್‌ನಲ್ಲಿ ಅರ್ಜಿ ದಾಖಲಿಸಲಾಗಿದೆ. ಈ ವೇಳೆ, 7-8 ವಯಸ್ಸಿನ ವ್ಯಕ್ತಿ RTC ಹೊಂದಿರಲು ಹೇಗೆ ಸಾಧ್ಯ ಎಂದು ನ್ಯಾಯಾಧೀಶರು ಅನುಮಾನ ವ್ಯಕ್ತಪಡಿಸಿದ್ದಾರೆ. ಬಳಿಕ ಸರ್ಕಾರ ಇದರ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಇದನ್ನು ಮುಡಾ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಗಂಭೀರವಾಗಿ ಪರಿಗಣಿಸಿಯೇ ಇಲ್ಲ.

VISTARANEWS.COM


on

muda scam papers
Koo

ಮೈಸೂರು: ಮುಡಾದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ (MUDA Scam) ಅಧಿಕಾರಿಗಳ ಕಳ್ಳಾಟ ಬಗೆದಷ್ಟೂ ಹೊರಗೆ ಬರುತ್ತಿದೆ. ಇನ್ನೊಂದು ವಿಚಿತ್ರ ಪ್ರಕರಣ ಬಯಲಿಗೆ ಬಂದಿದ್ದು, ಇಲ್ಲದ ವ್ಯಕ್ತಿಯನ್ನು ಸೃಷ್ಟಿಸಿ ಆ ಹೆಸರಿನಲ್ಲಿ ಅಧಿಕಾರಿಗಳು ಬದಲಿ ನಿವೇಶನ (MUDA Site) ಪಡೆದರೇ ಎಂಬ ಅನುಮಾನ ಮೂಡಿದೆ.

ಅಧಿಕಾರಿಗಳ ಪ್ರಕಾರ 8ನೇ ವಯಸ್ಸಿನಲ್ಲೇ ಭೂಮಿ ಕಳೆದುಕೊಂಡ ಮಾಲೀಕ, ತನ್ನ 68ನೇ ವರ್ಷದಲ್ಲಿ ಬದಲಿ ನಿವೇಶನಕ್ಕಾಗಿ ಮುಡಾಗೆ ಅರ್ಜಿ ಸಲ್ಲಿಸಿದ್ದಾನೆ. ಮೈಸೂರಿನ ಅಬ್ದುಲ್ ವಾಹಿದ್ ಎಂಬವರಿಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, 1962ರಲ್ಲಿ ಭೂಮಿ ಅಬ್ದುಲ್ ವಾಹಿದ್ ಕಳೆದುಕೊಂಡಿದ್ದಾರಂತೆ. ಈತನಿಗೆ ಸೇರಿದ ಬೆಲವತ್ತ ಗ್ರಾಮದ ಸರ್ವೆ ನಂ.21ರ 4.39 ಎಕರೆ ಭೂಮಿ ಮುಡಾ ವಶಪಡಿಸಿಕೊಂಡಿತ್ತು.

ಹೀಗಾಗಿ ಅಬ್ದುಲ್ ವಾಹಿದ್ ಹೆಸರಿನಲ್ಲಿ ಬದಲಿ ನಿವೇಶನಕ್ಕಾಗಿ ಹೈಕೋರ್ಟ್‌ನಲ್ಲಿ ಅರ್ಜಿ ದಾಖಲಿಸಲಾಗಿದೆ. ಈ ವೇಳೆ, 7-8 ವಯಸ್ಸಿನ ವ್ಯಕ್ತಿ RTC ಹೊಂದಿರಲು ಹೇಗೆ ಸಾಧ್ಯ ಎಂದು ನ್ಯಾಯಾಧೀಶರು ಅನುಮಾನ ವ್ಯಕ್ತಪಡಿಸಿದ್ದಾರೆ. ಬಳಿಕ ಸರ್ಕಾರ ಇದರ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಇದನ್ನು ಮುಡಾ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಗಂಭೀರವಾಗಿ ಪರಿಗಣಿಸಿಯೇ ಇಲ್ಲ.

ನ್ಯಾಯಮೂರ್ತಿಗಳು ಬದಲಾಗುತ್ತಿದ್ದಂತೆ ವ್ಯಕ್ತಿ ರಿಟ್ ಅರ್ಜಿ ವಾಪಸ್ಸು ಪಡೆದಿದ್ದಾರೆ. ನಂತರ 28-02-2023ರಂದು ಮುಡಾದಿಂದಲೇ ಆದೇಶ ಮಾಡಿಸಿಕೊಂಡು 55,260 ಚದರ ಅಡಿ ಬದಲಿ ನಿವೇಶ ಪಡೆದಿದ್ದಾರೆ. ಇದು ಹಲವು ಅನುಮಾನಕ್ಕೆ ಕಾರಣವಾಗಿದೆ.

ಪ್ರಕರಣದಲ್ಲಿ ಮೂಡಿರುವ ಅನುಮಾನಗಳು

1) ನ್ಯಾಯಾಧೀಶರು ಅನುಮಾನ ವ್ಯಕ್ತಪಡಿಸಿದ್ದರೂ ಅಧಿಕಾರಿಗಳು ಏಕೆ ತನಿಖೆ ಮಾಡಲಿಲ್ಲ?
2) ಒಬ್ಬ ವ್ಯಕ್ತಿಗೆ 7-8ನೇ ವಯಸ್ಸಿನಲ್ಲೆ RTC ಇರಲು ಸಾಧ್ಯವಾ?
3) ಮೈನರ್‌ ಆಗಿದ್ದು ಆರ್‌ಟಿಸಿ ಇದ್ದಿದ್ದರೆ ಜಂಟಿ ಹೆಸರು ಯಾರಾದರೂ ಇರಬೇಕಲ್ವಾ?
4) RTC ಇದ್ದರೂ 68ನೇ ವಯಸ್ಸಿನ ವರೆಗೆ ಯಾಕಾಗಿ ಪರಿಹಾರ ಪಡೆದಿಲ್ಲ/ ಪರಿಹಾರಕ್ಕೆ ಅರ್ಜಿ ಹಾಕಿಲ್ಲ‌?
5) ಆಧಾರ್ ಕಾರ್ಡ್‌ನಲ್ಲಿ ಮೈಸೂರಿನ ಮಂಡಿ ಮೊಹಲ್ಲಾ ನಿವಾಸಿ ಅಂತ ವಿಳಾಸವಿದೆ. ಉದಯಗಿರಿ ಪೋಸ್ಟ್ ಎಂದು ನಮೂದಾಗಿದ್ದರೂ ಯಾಕಾಗಿ ಪರಿಶೀಲನೆ ಮಾಡಿಲ್ಲ?

ಯಾರು ಬೇಕಾದರೂ ಬಯ್ಯಲಿ, ನೀರು ಬೆಲೆ ಏರಿಕೆ ಮಾಡೋನೇ ನಾನು: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ರಾಜಧಾನಿಯಲ್ಲಿ ಕುಡಿಯುವ ನೀರಿನ ದರ ಏರಿಕೆ ಮಾಡಲೇಬೇಕಿದೆ. ಜಲಮಂಡಳಿ ನಷ್ಟದಲ್ಲಿ ನಡೆಯುತ್ತಿದೆ. ಸಂಬಳ ಕೊಡಲು ಹಣವಿಲ್ಲ. ಯಾರು ಏನು ಹೇಳಿದರೂ ನಾನು ನೀರಿನ ಬೆಲೆ ಏರಿಸುವವನೇ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ನೀರಿದ ದರ 8-9 ವರ್ಷದಿಂದ ಏರಿಕೆ ಮಾಡಿಲ್ಲ. ನೀರಿನ‌ ದರ ಹೆಚ್ಚಿಸಬೇಕು, ಅಂತರ್ಜಲ ಹೆಚ್ಚಳ ಆಗಬೇಕು. ಜಲಮಂಡಳಿ ನಷ್ಟದಲ್ಲಿ ನಡೆಯುತ್ತಿದೆ. ಸಂಬಳ ಕೊಡೋಕೆ‌ ಆಗುತ್ತಿಲ್ಲ. ಮಂಡಳಿಯ ವಿದ್ಯುತ್ ದರವೂ ಪಾವತಿ ಮಾಡಲು ಆಗುತ್ತಿಲ್ಲ. ಕೆಲವು ಸೆಕ್ಷನ್‌ಗೆ ನೋಡಿ ದರ ನಿಗದಿ ಮಾಡಬೇಕು. ಎಷ್ಟು ದರ ಏರಿಕೆ ಮಾಡಬೇಕು ಅಂತ ನಿರ್ಧಾರ ಮಾಡಿಲ್ಲ. ಕಮಿಟಿ‌ ಸಭೆ ಮತ್ತು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡುತ್ತೇವೆ. ಆದರೆ ಇಂದಿನ ಕ್ಯಾಬಿನೆಟ್‌ ಮೀಟಿಂಗ್‌ನಲ್ಲಿ ಈ ವಿಷಯ ಇಲ್ಲ ಎಂದು ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

ನಾಗರಿಕರಿಗೆ ಎಷ್ಟು ಮಾಡಿದರೂ ಅಷ್ಟೆ, ಅವರಿಗೆ ಉಪಕಾರ ಸ್ಮರಣೆ ಇಲ್ಲ. ಬೈತಾರೆ, ಕಾಮೆಂಟ್ ಮಾಡ್ತಾರೆ, ವಾಟ್ಸ್ಯಾಪ್‌ನಲ್ಲಿ ಹಾಕ್ತಾರೆ. ನಂತರ ಮರೆತು ಬಿಡ್ತಾರೆ. ನೀರು ಕೊಟ್ಟರೆ ತಗೋತಾರೆ ಅಷ್ಟೆ. ಕೆಲವರು ದುಡ್ಡು ಕಟ್ಟುವವರು ಕಟ್ಟುತ್ತಾರೆ, ಕೆಲವರು ಕಟ್ಟಲ್ಲ. ಮೀಡಿಯಾದವರಾದರೂ ಬೈಯಲಿ, ಜನರಾದರೂ ಬಯ್ಯಲಿ, ವಿರೋಧ ಪಕ್ಷದವರಾದರೂ ವಿರೋಧ ಮಾಡಲಿ. ಕಂಪನಿ ಉಳಿಯಬೇಕಾಗಿದೆ ಅದಕ್ಕಾಗಿ ನಾವು ನೀರಿನ ದರ ಹೆಚ್ಚಳ‌ ಮಾಡಿಯೇ ಮಾಡುತ್ತೇವೆ ಎಂದು ಡಿಕೆಶಿ ಹೇಳಿದರು.

ನೀರಿನ ದರ ಸಾಕಷ್ಟು ವರ್ಷದಿಂದ ಏರಿಸಿಲ್ಲ. 1.40 ಕೋಟಿ ಜನಸಂಖ್ಯೆ ಬೆಂಗಳೂರಿನಲ್ಲಿ ಇದೆ‌. ಮೇಕೆದಾಟು ಯೋಜನೆ ಬಗ್ಗೆ ನನಗೆ ಭರವಸೆ ಇದ್ದು, ಆದಷ್ಟು ಬೇಗ ಅದು ಆಗಲಿದೆ. ಶರಾವತಿ ಕುಡಿಯುವ ನೀರಿನ ಯೋಜನೆಯೂ ಇದ್ದು ಅದಕ್ಕೆ ಆ ಭಾಗದಲ್ಲಿ ವಿರೋಧವಿದೆ‌. ಎತ್ತಿನ ಹೊಳೆ ಯೋಜನೆಯೂ ಒಂದು ಹಂತದಲ್ಲಿ ಇದೆ. ನೀರಾವರಿ ಯೋಜನೆಯಲ್ಲಿ ಹೊಸ ಬಿಲ್ ತಂದಿದ್ದೇವೆ. ನೀರಿನ ಕಾಲುವೆಗಳ ಅಕ್ಕಪಕ್ಕ ಅರ್ಧ ಕಿಮೀನಲ್ಲಿ ಯಾರೂ ಬೋರ್‌ವೆಲ್ ಕೊರೆಯುವಂತಿಲ್ಲ. ಯಾರೂ ಕಾಲುವೆಗಳಿಂದ ನೇರವಾಗಿ ನೀರು ಟ್ಯಾಪ್ ಮಾಡುವಂತಿಲ್ಲ. ರಾಜ್ಯಪಾಲರು ಸಹಿ ಹಾಕಿದ್ದಾರೆ, ಹೊಸ ಕಾನೂನು ಬಂದಿದೆ ಎಂದು ಅವರು ವಿವರಿಸಿದರು.

ಇದನ್ನೂ ಓದಿ: DK Shivakumar: ಡಿಕೆ ಶಿವಕುಮಾರ್‌ಗೆ ಇಂದು ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ನೋಟೀಸ್

Continue Reading
Advertisement
Shreyas Patel
ಕರ್ನಾಟಕ10 mins ago

Shreyas Patel: ಸಂಸದ ಶ್ರೇಯಸ್‌ ಪಟೇಲ್‌ ಆಯ್ಕೆ ಅಸಿಂಧು ಕೋರಿ ಅರ್ಜಿ; ವಿಚಾರಣೆ ಮುಂದೂಡಿದ ಹೈಕೋರ್ಟ್‌

karnataka weather forecast
ಮಳೆ16 mins ago

Karnataka Weather : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ-ಕೊಳ್ಳಗಳು; ಹಳ್ಳ ದಾಟಲು ಗ್ರಾಮಸ್ಥರ ಪರದಾಟ

Fortis Hospital
ಬೆಂಗಳೂರು30 mins ago

Fortis Hospital: ಜನನಾಂಗದಿಂದ ಹೊರಗೆ ಚಾಚಿದ್ದ ಗರ್ಭಕೋಶ ರೋಬೋಟಿಕ್‌ ಮೂಲಕ ಮರುಸ್ಥಾಪನೆ!

Self Harming
ಕರ್ನಾಟಕ40 mins ago

Self Harming: ಪ್ರಿನ್ಸಿಪಾಲ್ ಬೈದರೆಂದು 3ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

Village Administrative Officer
ಉದ್ಯೋಗ51 mins ago

Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೈ ಮಾಡಿದವರು ಗಮನಿಸಿ; ಅರ್ಜಿ, ಶುಲ್ಕ ಸ್ಥಿತಿ ಪರಿಶೀಲಿಸುವ ವಿಧಾನ ಇಲ್ಲಿದೆ

Bomb threat to Wonderla Amusement Park in Urdu
ರಾಮನಗರ59 mins ago

Bomb Threat : ಉರ್ದು ಭಾಷೆಯಲ್ಲಿ ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ ಬಾಂಬ್‌ ಬೆದರಿಕೆ

Railway Line
ವಾಣಿಜ್ಯ1 hour ago

Railway Line: ಸ್ವಾತಂತ್ರ್ಯ ಬಂದು 77 ವರ್ಷಗಳಾದರೂ ಇನ್ನೂ ಬ್ರಿಟಿಷರ ಅಧೀನದಲ್ಲಿದೆ ಈ ರೈಲು ಮಾರ್ಗ!

Kannada New Movie
ಬೆಂಗಳೂರು1 hour ago

Kannada New Movie: ಪ್ರಜ್ವಲ್ ದೇವರಾಜ್-ಅದಿತಿ‌ ಪ್ರಭುದೇವ ಅಭಿನಯದ ʼಮಾಫಿಯಾʼ ಚಿತ್ರ ಸದ್ಯದಲ್ಲೇ ತೆರೆಗೆ

Viral Video
Latest1 hour ago

Viral Video: ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು; ಆಘಾತಕಾರಿ ವಿಡಿಯೊ

Viral News
ವೈರಲ್ ನ್ಯೂಸ್1 hour ago

Viral News: ಹೆಂಡ್ತಿ ತವರಿಗೆ ಹೋಗ್ತಿದ್ದಂತೆ ಪ್ರೇಯಸಿ ಜೊತೆ ಲವ್ವಿಡವ್ವಿ- ಸ್ಕೂಲ್‌ ಮೇಸ್ಟ್ರನ್ನು ರೆಡ್‌ಹ್ಯಾಂಡಾಗಿ ಹಿಡಿದು ಅಲ್ಲೇ ಮದ್ವೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌