Vishal Shaktidhama Visit | ʻಶಕ್ತಿಧಾಮʼದಲ್ಲಿ ನಟ ವಿಶಾಲ್‌: ಅಪ್ಪು ನೆನೆದು ಭಾವುಕ - Vistara News

ಕಾಲಿವುಡ್

Vishal Shaktidhama Visit | ʻಶಕ್ತಿಧಾಮʼದಲ್ಲಿ ನಟ ವಿಶಾಲ್‌: ಅಪ್ಪು ನೆನೆದು ಭಾವುಕ

ʻಶಕ್ತಿಧಾಮʼಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಜತೆ ನಟ ವಿಶಾಲ್ ಚರ್ಚೆ ನಡೆಸಿದ್ದಾರೆ. ಈ ಹಿಂದೆ ʻಶಕ್ತಿಧಾಮʼದ ವಿದ್ಯಾರ್ಥಿಗಳಿಗೆ ಸಹಾಯ ಮಾಡುವುದಾಗಿ ವಿಶಾಲ್ ಮಾತು ಕೊಟ್ಟಿದ್ದರು.

VISTARANEWS.COM


on

Vishal Shaktidhama Visit
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಕರ್ನಾಟಕ ರತ್ನ ಡಾ. ಪುನೀತ್ ರಾಜ್​ಕುಮಾರ್ ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ್ದರೂ ಅವರ ನೆನಪು ಅಮರ. ಅಪ್ಪು ಹಾಕಿಕೊಟ್ಟ ಹಾದಿಯಲ್ಲೇ ಹಲವು ಸೆಲೆಬ್ರಿಟಿಗಳು ಸಾಗುತ್ತಿದ್ದಾರೆ. ಇದೀಗ ಕಾಲಿವುಡ್ ನಟ ವಿಶಾಲ್ (Vishal Shaktidhama Visit) ಕೂಡ ಅಪ್ಪು ಅವರ ಹಾದಿಯಲ್ಲೇ ಸಾಗಲು ಮುಂದಾಗಿದ್ದು, ಮೈಸೂರಿನ ʻಶಕ್ತಿಧಾಮʼಕ್ಕೆ ಭೇಟಿ ನೀಡಿದ್ದಾರೆ.

ಕೆಲ ತಿಂಗಳ ಹಿಂದೆ ನಡೆದಿದ್ದ ಪುನೀತ್ ನಮನ ಕಾರ್ಯಕ್ರಮದಲ್ಲಿ ನಟ ವಿಶಾಲ್ ಮಾತೊಂದನ್ನು ಕೊಟ್ಟಿದ್ದರು. ಡಾ. ಪುನೀತ್ ರಾಜ್​​ಕುಮಾರ್ ಜವಾಬ್ದಾರಿ ವಹಿಸಿಕೊಂಡಿದ್ದ ಶಕ್ತಿಧಾಮಕ್ಕೆ ಬೆನ್ನೆಲುಬಾಗಿ ನಿಲ್ಲುವುದಾಗಿ ಹೇಳಿದ್ದರು. ಶಕ್ತಿಧಾಮ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಜವಾಬ್ದಾರಿ ತೆಗೆದುಕೊಳ್ಳುವುದಾಗಿ ಹೇಳಿದ್ದರು. ಇದಕ್ಕಾಗಿ ಮನೆಯ ಖರೀದಿಗೆ ಇಟ್ಟುಕೊಂಡಿದ್ದ ಹಣವನ್ನು ಬಳಸುವುದಾಗಿ ವಿಶಾಲ್ ತಿಳಿಸಿದ್ದರು. ಬಳಿಕ ವಿಶಾಲ್ ಹಾಗೂ ಶಿವರಾಜಕುಮಾರ್‌ ಕೆಲವು ಕಾಲ ಚರ್ಚೆ ನಡೆಸಿದರು.

ಶಕ್ತಿಧಾಮಕ್ಕೆ ಭೇಟಿ ನೀಡಿ ಹೇಗೆ ಸಹಾಯ ಮಾಡಬಹುದೆಂಬ ವಿಚಾರವನ್ನು ಪರಿಶೀಲಿಸುವಂತೆ ವಿಶಾಲ್​​ಗೆ ಶಿವರಾಜಕುಮಾರ್‌ ಸಲಹೆ ನೀಡಿದ್ದರು. ಇದಾದ ಬಳಿಕ ನಟ ವಿಶಾಲ್ ಇಂದು ಮೈಸೂರಿನ ʻಶಕ್ತಿಧಾಮʼಕ್ಕೆ ಭೇಟಿ ನೀಡಿದ್ದಾರೆ. ಸಂಪೂರ್ಣ ವಿವರಣೆಯನ್ನೂ ನಟ ವಿಶಾಲ್ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Puneeth lucky man | ಲಕ್ಕಿ ಮ್ಯಾನ್ ರಿಲೀಸ್‌ಗೆ ಕ್ಷಣಗಣನೆ: ಅಪ್ಪು ಫ್ಯಾನ್ಸ್‌ಗೆ ಡಬಲ್‌ ಗಿಫ್ಟ್!

ಅಪ್ಪು ಸೇವೆ
‘ಶಕ್ತಿಧಾಮ’ ಎಂಬ ಹೆಣ್ಣುಮಕ್ಕಳ ಆಸರೆ ತಾಣ ಆರಂಭಿಸಿದ ಕೀರ್ತಿ ಡಾ.ರಾಜ್‌ಕುಮಾರ್ ಹಾಗೂ ಪಾರ್ವತಮ್ಮ ರಾಜ್‌ಕುಮಾರ್ ಅವರಿಗೆ ಸಲ್ಲುತ್ತದೆ. ಸಾವಿರಾರು ಬಡ ಹೆಣ್ಣುಮಕ್ಕಳಿಗೆ ಆಶ್ರಯ ನೀಡಿದ ಕೀರ್ತಿ ‘ಶಕ್ತಿಧಾಮ’ಕ್ಕೆ ಸಲ್ಲುತ್ತದೆ. ಆದರೆ, ಪಾರ್ವತಮ್ಮ ರಾಜ್‌ಕುಮಾರ್ ನಿಧನರಾದ ನಂತರ ಶಕ್ತಿಧಾಮ ಜವಾಬ್ದಾರಿಯನ್ನು ಸಂಪೂರ್ಣವಾಗಿ ಪವರ್​ಸ್ಟಾರ್ ಪುನೀತ್ ರಾಜ್​​ಕುಮಾರ್ ವಹಿಸಿಕೊಂಡಿದ್ದರು.

ವಿಶಾಲ್ ಚರ್ಚೆ
ಕರ್ನಾಟಕ ರತ್ನ ಅಪ್ಪು ಅಕಾಲಿಕ ಮರಣದ ನಂತರ ‘ಶಕ್ತಿಧಾಮ’ದಲ್ಲಿ ದುಖಃ ತುಂಬಿ ಹೋಗಿತ್ತು. ಇದಾದ ಬಳಿಕ ಅಪ್ಪು ಅವರ ಹಿರಿಯ ಸಹೋದರ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಜ್​ಕುಮಾರ್ ಶಕ್ತಿಧಾಮವನ್ನು ನೋಡಿಕೊಳ್ಳುತ್ತಿದ್ದರು. ಇದೀಗ ಶಿವಣ್ಣ ಮಾಡುತ್ತಿರುವ ಕಾರ್ಯಕ್ಕೆ ಹೆಗಲು ನೀಡಲು ವಿಶಾಲ್ ಮುಂದಾಗಿದ್ದಾರೆ. ಶಕ್ತಿಧಾಮಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ʻಶಕ್ತಿಧಾಮʼಕ್ಕೆ ಭೇಟಿ ನೀಡಿದಾಗ ಮಕ್ಕಳ ಜತೆ ನಟ ವಿಶಾಲ್ ಚರ್ಚೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳ ಜತೆಯಲ್ಲಿ ಮಾತನಾಡಿದ ನಟ ವಿಶಾಲ್, ಶಕ್ತಿಧಾಮದ ವಿದ್ಯಾರ್ಥಿಗಳಲ್ಲಿ ಲವಲವಿಕೆ ಇದೆ. ಮಕ್ಕಳ ಜತೆ ಮಾತನಾಡಿದೆ. ಎಲ್ಲ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವಿದೆ ಎಂದು ನಟ ವಿಶಾಲ್ ಹೇಳಿದ್ದಾರೆ. ʻಲಾಠಿʼ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ವಿಶಾಲ್ ಬ್ಯುಸಿಯಾಗಿದ್ದರೂ, ಬಿಡುವು ಮಾಡಿಕೊಂಡು ʻಶಕ್ತಿಧಾಮʼಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ, ಡಾ. ಪುನೀತ್ ರಾಜ್​ಕುಮಾರ್ ನಮನ ಕಾರ್ಯಕ್ರಮದಲ್ಲಿ ನೀಡಿದ್ದ ಮಾತನ್ನು ಉಳಿಸಿಕೊಳ್ಳಲು ವಿಶಾಲ್ ಮುಂದಾಗಿದ್ದಾರೆ.

ಇದನ್ನೂ ಓದಿ: Sudeep Puneeth | ಸುದೀಪ್-ಪುನೀತ್‌ ಬಾಂಧವ್ಯಕ್ಕೆ ಸಾಕ್ಷಿಯಾಯ್ತು ಹುಟ್ಟುಹಬ್ಬ ಸಂಭ್ರಮ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

IMDb 2024 top movies: ಈ ವರ್ಷದ ಅತ್ಯಂತ ನಿರೀಕ್ಷಿತ ಮತ್ತು ಜನಪ್ರಿಯ ಸಿನಿಮಾಗಳ ಪಟ್ಟಿ ಇಲ್ಲಿದೆ

ಚಲನಚಿತ್ರಗಳು, ಟಿವಿ ಕಾರ್ಯಕ್ರಮಗಳು ಮತ್ತು ಸೆಲೆಬ್ರಿಟಿಗಳ ಕುರಿತು ಮಾಹಿತಿಗಾಗಿ ಅತ್ಯಂತ ಜನಪ್ರಿಯ ಮೂಲಗಳಲ್ಲಿ ಒಂದಾಗಿರುವ ಇಂಟರ್ನೆಟ್ ಮೂವಿ ಡೇಟಾಬೇಸ್ 2024ರ (IMDb 2024) ಟಾಪ್ ಭಾರತೀಯ ಚಲನಚಿತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ 2024ರಲ್ಲಿ ಈವರೆಗಿನ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಮತ್ತು ಹೆಚ್ಚು ನಿರೀಕ್ಷಿತ ಚಲನಚಿತ್ರಗಳ ಮಾಹಿತಿಯನ್ನು ನೀಡಲಾಗಿದೆ. ನೀವು ಇವುಗಳಲ್ಲಿ ಯಾವ ಚಿತ್ರ ನೋಡಿದ್ದೀರಿ? ಈ ಪಟ್ಟಿ ನೋಡಿ.

VISTARANEWS.COM


on

By

IMDb 2024
Koo

ಬಾಕ್ಸ್ ಆಫೀಸ್‌ನಲ್ಲಿ (box office collection) ಅನಿಶ್ಚಿತತೆಯ ಹೊರತಾಗಿಯೂ 2024ರಲ್ಲಿ ಹಲವು ಭಾರತೀಯ ಸಿನಿಮಾಗಳು (Indian film) ದಾಖಲೆಯನ್ನು ಬರೆದಿತ್ತು. ಕಲ್ಕಿ 2898 ಎಡಿ (kalki 2898 AD) ಪ್ರಸ್ತುತ 2024ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರವಾಗಿದೆ. ಪುಷ್ಪ: ದಿ ರೂಲ್ ಭಾಗ 2 (pushpa: the rule part 2) ಡಿಸೆಂಬರ್ 6ರಂದು ಬಿಡುಗಡೆಯಾಗಲಿದೆ. ಇಂಟರ್ನೆಟ್ ಮೂವಿ ಡೇಟಾಬೇಸ್ (IMDb 2024) ಪ್ರಕಾರ ಇದು ಈ ವರ್ಷದ ಬಹು ನಿರೀಕ್ಷಿತ ಭಾರತೀಯ ಚಲನಚಿತ್ರವಾಗಿದೆ.

ಇಂಟರ್ನೆಟ್ ಮೂವಿ ಡೇಟಾಬೇಸ್ 2024ರ ಟಾಪ್ ಭಾರತೀಯ ಚಲನಚಿತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂಟರ್ನೆಟ್ ಮೂವಿ ಡೇಟಾಬೇಸ್ ಚಲನಚಿತ್ರಗಳು, ಟಿವಿ ಕಾರ್ಯಕ್ರಮಗಳು ಮತ್ತು ಸೆಲೆಬ್ರಿಟಿಗಳ ಕುರಿತು ಮಾಹಿತಿಗಾಗಿ ಅತ್ಯಂತ ಜನಪ್ರಿಯ ಮೂಲಗಳಲ್ಲಿ ಒಂದಾಗಿದೆ. 2024ರಲ್ಲಿ ಈವರೆಗಿನ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಮತ್ತು ಹೆಚ್ಚು ನಿರೀಕ್ಷಿತ ಚಲನಚಿತ್ರಗಳ ಮಾಹಿತಿಯನ್ನು ಐಎಂಡಿಬಿ ಪ್ರಕಟಿಸಿದೆ.

ಕಲ್ಕಿ 2898 ಎಡಿ ಚಿತ್ರದ ನಿರ್ದೇಶಕ ನಾಗ್ ಅಶ್ವಿನ್ ಮಾತನಾಡಿ, ನಮ್ಮ ಇಡೀ ತಂಡವು ಐಎಂಡಿಬಿ ಪಟ್ಟಿಯಲ್ಲಿ ಕಾಣಿಸಿಕೊಂಡಿರುವುದು ಬಹಳ ಸಂತೋಷ ಮತ್ತು ಗೌರವವಾಗಿದೆ. ಇದು ಪ್ರಪಂಚದಾದ್ಯಂತದ ನಮ್ಮ ಪ್ರೇಕ್ಷಕರ ಪ್ರೀತಿಯನ್ನು ನೇರವಾಗಿ ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.


ಐಎಂಡಿಬಿ ಪಟ್ಟಿಯ 2024ರ ನಂ. 2 ಶ್ರೇಯಾಂಕದಲ್ಲಿರುವ ʼಮಂಜುಮ್ಮೆಲ್ ಬಾಯ್ಸ್‌ʼ ಚಿತ್ರದ ನಿರ್ದೇಶಕ ಚಿದಂಬರಂ ಪ್ರತಿಕ್ರಿಯಿಸಿ ಈ ಗೌರವಕ್ಕಾಗಿ ನಾನು ಐಎಂಡಿಬಿಗೆ ಕೃತಜ್ಞನಾಗಿದ್ದೇನೆ. ಅವರ ಪ್ರೀತಿ ಮತ್ತು ಬೆಂಬಲಕ್ಕಾಗಿ ಪ್ರಪಂಚದಾದ್ಯಂತದ ವೀಕ್ಷಕರಿಗೆ ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಈ ಚಿತ್ರದ ಮ್ಯಾಜಿಕ್‌ಗೆ ಜೀವ ತುಂಬಿದ ಇಡೀ ಚಿತ್ರತಂಡದ ಶ್ರಮ ಮತ್ತು ಸಮರ್ಪಣೆಗೆ ಈ ಸಾಧನೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.

ಐಎಂಡಿಬಿ 2024 ಪಟ್ಟಿಯಲ್ಲಿ ಭಾರತೀಯ ಸಿನಿಮಾ

ಭಾರತೀಯ ಸಿನಿಮಾವು ಭಾರತದಲ್ಲಿ ಮತ್ತು ಜಾಗತಿಕವಾಗಿ ಅತೀ ಹೆಚ್ಚು ವೀಕ್ಷಕರನ್ನು ಸೆಳೆಯುತ್ತಿದೆ ಎಂದು ಐಎಂಡಿಬಿ ಇಂಡಿಯಾದ ಮುಖ್ಯಸ್ಥೆ ಯಾಮಿನಿ ಪಟೋಡಿಯಾ ಹೇಳಿದ್ದಾರೆ.
2024ರಲ್ಲಿ ಇಲ್ಲಿಯವರೆಗೆ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳ ಪಟ್ಟಿಯಲ್ಲಿ ಐದು ಹಿಂದಿ, ಮೂರು ಮಲಯಾಳಂ ಮತ್ತು ಎರಡು ತೆಲುಗು ಚಲನಚಿತ್ರಗಳು ಪ್ರೇಕ್ಷಕರನ್ನು ಕಾಯುವಂತೆ ಮಾಡಿದೆ. ಇದರಲ್ಲಿ ಪುಷ್ಪಾ: ದಿ ರೂಲ್ – ಭಾಗ 2 ಮೊದಲ ಸ್ಥಾನದಲ್ಲಿ ಇದೆ ಎಂದು ಅವರು ತಿಳಿಸಿದ್ದಾರೆ.


ಅತ್ಯಂತ ಜನಪ್ರಿಯ ಚಿತ್ರಗಳು

ಕಲ್ಕಿ 2898 ಎಡಿ, ಮಂಜುಮ್ಮೆಲ್ ಬಾಯ್ಸ್, ಫೈಟರ್, ಹನುಮಾನ್, ಶೈತಾನ್, ಲಾಪತಾ ಲೇಡಿಸ್, ಆರ್ಟಿಕಲ್ 370, ಪ್ರೇಮಾಲು, ಆವೇಶಮ್, ಮುಂಜ್ಯ ಕ್ರಮವಾಗಿ 1ರಿಂದ 10ರೊಳಗಿನ ಸ್ಥಾನದಲ್ಲಿದೆ.

ಶ್ರೇಯಾಂಕ

2024ರ ಜನವರಿ 1ರಿಂದ ಜುಲೈ 10ರ ನಡುವೆ ಭಾರತದಲ್ಲಿ ಬಿಡುಗಡೆಯಾದ ಎಲ್ಲಾ ಚಲನಚಿತ್ರಗಳಲ್ಲಿ ಐಎಂಡಿಬಿ ಬಳಕೆದಾರರ ಸರಾಸರಿ ರೇಟಿಂಗ್ 6 ಅಥವಾ ಕನಿಷ್ಠ 10,000 ಮತಗಳೊಂದಿಗೆ ಈ ಚಿತ್ರಗಳು ಹೆಚ್ಚು ಜನಪ್ರಿಯವಾಗಿವೆ.


ಹೆಚ್ಚು ನಿರೀಕ್ಷಿತ ಚಿತ್ರಗಳು

ಪುಷ್ಪಾ: ದಿ ರೂಲ್- ಭಾಗ 2, ದೇವರ- ಭಾಗ 1, ವೆಲ್ಕಮ್ ಟು ಜಂಗಲ್, ಡಿ ಗ್ರೇಟೆಸ್ಟ್ ಆಫ್ ಆಲ್ ಟೈಮ್, ಕಂಗುವ, ಸಿಂಗಂ ಅಗೈನ್, ಭೂಲ್ ಭುಲೈಯಾ 3, ತಂಗಲಾನ್, ಔರಾನ್ ಮೇ ಕಹಾನ್ ದಮ್ ಥಾ, ಸ್ತ್ರೀ 2 ಕ್ರಮವಾಗಿ 1ರಿಂದ 10ರೊಳಗಿನ ಸ್ಥಾನದಲ್ಲಿದೆ.


ಟಾಪ್ ಸ್ಥಾನದಲ್ಲಿ ದೀಪಿಕಾ ಪಡುಕೋಣೆ, ದಿಶಾ ಪಟಾನಿ, ಅಜಯ್ ದೇವಗನ್

ದೀಪಿಕಾ ಪಡುಕೋಣೆ, ದಿಶಾ ಪಟಾನಿ ಮತ್ತು ಅಜಯ್ ದೇವಗನ್ ಅವರ ಚಿತ್ರಗಳು ಎರಡೂ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ದೀಪಿಕಾ ಮತ್ತು ದಿಶಾ ಕಲ್ಕಿ 2898 ಎಡಿ ಚಿತ್ರದಲ್ಲಿ ನಟಿಸುತ್ತಿದ್ದಾರೆ ಮತ್ತು ಫೈಟರ್ ಚಿತ್ರದಲ್ಲೂ ದೀಪಿಕಾ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Actor Dhanush: ಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸಬಾರದಾ? ನಾನೇನು ಬೀದಿಯಲ್ಲಿ ಇರಬೇಕಾ ಎಂದ ನಟ ಧನುಷ್‌!

ಶೈತಾನ್ ಚಿತ್ರದಲ್ಲಿ ಅಜಯ್ ನಟಿಸಿದ್ದು, ದೀಪಿಕಾ ಮತ್ತು ಅಜಯ್ ಮೊದಲ ಬಾರಿಗೆ ಸಿಂಗಮ್ ಅಗೈನ್ ನಲ್ಲಿ ಕಾಣಿಸಿಕೊಂಡಿದ್ದಾರೆ.


ಇದು ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆ. ದಿಶಾ ಅವರ ಮುಂಬರುವ ಬಿಡುಗಡೆಗಳಲ್ಲಿ ವೆಲ್ಕಮ್ ಟು ದಿ ಜಂಗಲ್ ಮತ್ತು ಕಂಗುವ ಸೇರಿವೆ.

Continue Reading

ಕಾಲಿವುಡ್

Actor Dhanush: ಸಿನಿಮಾ ಬಿಡುಗಡೆಗೂ ಮುನ್ನ ದೇವರ ಮೊರೆ ಹೋದ ನಟ ಧನುಷ್

Actor Dhanush: ಚಿತ್ರ ‘ಎ’ ಸರ್ಟಿಫಿಕೇಟ್‌ ಪಡೆದುಕೊಂಡಿದೆ. ‘ರಾಯನ್ಸ್’ ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತ, ಓಂ ಪ್ರಕಾಶ್ ಅವರ ಛಾಯಾಗ್ರಹಣ ಮತ್ತು ಪ್ರಸನ್ನ ಜಿಕೆ ಸಂಕಲನವಿದೆ.ಇದೀಗ ಸಿನಿಮಾ ಬಿಡುಗಡೆಗೂ ಮುಂಚೆ ನಟ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದೇವಾಲಯದಲ್ಲಿ ಧ್ಯಾನ ಮಾಡುತ್ತಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

VISTARANEWS.COM


on

Actor Dhanush shares pic of him meditating at ancestral temple
Koo

ಬೆಂಗಳೂರು: ಧನುಷ್ ಬರೆದು ನಿರ್ದೇಶಿಸಿರುವ ಸನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ʻರಾಯನ್ʼ ಸಿನಿಮಾವನ್ನು ಕಲಾನಿಧಿ ಮಾರನ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸಿನಿಮಾ ಜುಲೈ 26ಕ್ಕೆ ಚಿತ್ರ ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿದೆ. ಇನ್ನು ಸಿನಿಮಾದ ಟ್ರೈಲರ್‌ ಬಹಳ ರೂಚಕತೆಯಿಂದ ಕೂಡಿತ್ತು. ಈಗಾಗಲೇ ಸಿನಿಮಾದ ಆಡಿಯೊ ಲಾಂಚ್‌ ಬಹಳ ಅದ್ಧೂರಿಯಾಗಿ ನೆರವೇರಿದೆ. ಇದೀಗ ಸಿನಿಮಾ ಬಿಡುಗಡೆಗೂ ಮುಂಚೆ ನಟ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದೇವಾಲಯದಲ್ಲಿ ಧ್ಯಾನ ಮಾಡುತ್ತಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

ಪುತ್ರರಾದ ಯಾತ್ರಾ ಮತ್ತು ಲಿಂಗ ಕೂಡ ಜತೆಗೆ ಇದ್ದರು. ಜುಲೈ 26 ರಂದು ತಮಿಳು ಮತ್ತು ತೆಲುಗಿನಲ್ಲಿ ಥಿಯೇಟರ್‌ಗಳಲ್ಲಿ ಗ್ರ್ಯಾಂಡ್ ರಿಲೀಸ್‌ಗೆ ಸಜ್ಜಾಗಿದೆ. ಇನ್ನು ಈ ಸಿನಿಮಾ ಧನುಷ್‌ ಅವರ 50ನೇ ಸಿನಿಮಾ ಎನ್ನುವುದು ವಿಶೇಷ. ಚಿತ್ರದಲ್ಲಿ ಎಸ್‌ಜೆ ಸೂರ್ಯ, ಸಂದೀಪ್ ಕಿಶನ್, ಕಾಳಿದಾಸ್ ಜಯರಾಮ್, ಅಪರ್ಣಾ ಬಾಲಮುರಳಿ, ದುಶಾರ ವಿಜಯನ್, ಪ್ರಕಾಶ್ ರಾಜ್ ಮತ್ತು ಸೇವಾರಾಘವನ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಚಿತ್ರ ‘ಎ’ ಸರ್ಟಿಫಿಕೇಟ್‌ ಪಡೆದುಕೊಂಡಿದೆ. ‘ರಾಯನ್ಸ್’ ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತ, ಓಂ ಪ್ರಕಾಶ್ ಅವರ ಛಾಯಾಗ್ರಹಣ ಮತ್ತು ಪ್ರಸನ್ನ ಜಿಕೆ ಸಂಕಲನವಿದೆ.

ಇದನ್ನೂ ಓದಿ: Actor Suriya: ಕಾಲಿವುಡ್‌ ನಟ ಸೂರ್ಯ ಸಿನಿಮಾಗಾಗಿ ಈ ಕನ್ನಡ   ಸ್ಟಾರ್ ಹೀರೋಗೆ ಬಂದಿತ್ತು ಆಫರ್‌!

ಧನುಷ್ (Actor Dhanush) ಅವರ ಎರಡನೇ ನಿರ್ದೇಶನದ ಸಿನಿಮಾ ರಾಯನ್‌’ (Raayan). ಧನುಷ್ ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಟ ತಲೆಯನ್ನು ಬೋಳಿಸಿಕೊಂಡಿದ್ದರು. 2017 ರಲ್ಲಿ ತೆರೆಕಂಡ ‘ಪಾ ಪಾಂಡಿ’ ಚಿತ್ರದ ಮೂಲಕ ಧನುಷ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇದೀಗ ʻರಾಯನ್‌ʼ ಅವರ ಎರಡನೇ ನಿರ್ದೇಶನದ ಸಿನಿಮಾ. ಧನುಷ್‌ ಕೊನೆಯದಾಗಿ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ಕಾಣಿಸಿಕೊಂಡರು. ಅರುಣ್ ಮಾಥೇಶ್ವರನ್ ನಿರ್ದೇಶನದ ಈ ಚಿತ್ರದಲ್ಲಿ ಶಿವ ರಾಜ್‌ಕುಮಾರ್, ಪ್ರಿಯಾಂಕಾ ಮೋಹನ್, ನಿವೇದಿತಾ ಸತೀಶ್, ಜಾನ್ ಕೊಕ್ಕೆನ್ ಮತ್ತು ಮೂರ್ ಪ್ರಮುಖ ಪಾತ್ರಗಳಲ್ಲಿದ್ದರು.

ಸದ್ಯ ‘ಕುಬೇರ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಸೂಟಿಂಗ್‌ ಮುಕ್ತಾಯವಾಗುವ ನಿರೀಕ್ಷೆಯಿದೆ. ‘ಕುಬೇರ’ ತ್ರಿಭಾಷಾ ಚಿತ್ರವಾಗಿದ್ದು, ಏಕಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಣವಾಗುತ್ತಿದೆ.ʻಕುಬೇರ’ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ, ಇದನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ.

Continue Reading

South Cinema

Actor Dhanush: ಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸಬಾರದಾ? ನಾನೇನು ಬೀದಿಯಲ್ಲಿ ಇರಬೇಕಾ ಎಂದ ನಟ ಧನುಷ್‌!

Actor Dhanush: ಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸಲು ತಾನು ಹೇಗೆ ಶ್ರಮಿಸಿದ್ದೇನೆ ಎಂಬ ಬಗ್ಗೆ ನಟ ಹೇಳಿಕೊಂಡರು. ಈಚೆಗೆ ಅವರು ತಮ್ಮ 150 ಕೋಟಿ ರೂ. ಮೌಲ್ಯದ ಮನೆ ವಿಚಾರಕ್ಕಾಗಿ ಸುದ್ದಿಯಾಗಿದ್ದರು. ಚೆನ್ನೈನ ಅತ್ಯಂತ ದುಬಾರಿ ಮತ್ತು ಪ್ರತಿಷ್ಠಿತ ಏರಿಯಾ ಅಂದ್ರೆ, ಅದು ಪೋಯಸ್ ಗಾರ್ಡನ್. ಇಂತಹ ಏರಿಯಾದಲ್ಲಿ ಮನೆ ಕಟ್ಟಬೇಕು ಎಂಬುದು ಧನುಷ್ ಕನಸಾಗಿತ್ತು.

VISTARANEWS.COM


on

Actor Dhanush receives backlash for calling himself an outsider at Raayan
Koo

ಬೆಂಗಳೂರು: ಕಾಲಿವುಡ್‌ ನಟ ಧನುಷ್ (Actor Dhanush) ಅವರು ತಮ್ಮ ಮುಂಬರುವ ಚಿತ್ರ ʻರಾಯನ್‌ʼ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ತಮ್ಮ ಭಾಷಣದ ಮೂಲಕ ಹಲವಾರು ವಿಚಾರಗಳಿಗೆ ರಗಡ್‌ ಆಗಿಯೇ ಪ್ರತಿಕ್ರಿಯಿಸಿದ್ದಾರೆ. ಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸಲು ತಾನು ಹೇಗೆ ಶ್ರಮಿಸಿದ್ದೇನೆ ಎಂಬ ಬಗ್ಗೆ ನಟ ಹೇಳಿಕೊಂಡರು. ಈಚೆಗೆ ಅವರು ತಮ್ಮ 150 ಕೋಟಿ ರೂ. ಮೌಲ್ಯದ ಮನೆ ವಿಚಾರಕ್ಕಾಗಿ ಸುದ್ದಿಯಾಗಿದ್ದರು. ಚೆನ್ನೈನ ಅತ್ಯಂತ ದುಬಾರಿ ಮತ್ತು ಪ್ರತಿಷ್ಠಿತ ಏರಿಯಾ ಅಂದ್ರೆ, ಅದು ಪೋಯಸ್ ಗಾರ್ಡನ್. ಇಂತಹ ಏರಿಯಾದಲ್ಲಿ ಮನೆ ಕಟ್ಟಬೇಕು ಎಂಬುದು ಧನುಷ್ ಕನಸಾಗಿತ್ತು. ಈ ಮನೆ ಬಗ್ಗೆ ದೊಡ್ಡಮಟ್ಟದಲ್ಲಿ ಚರ್ಚೆ ಆಗುತ್ತದೆ. “ನಾವೆಲ್ಲಾ ಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸಬಾರದಾ? ನಾನು ಬೀದಿಯಲ್ಲಿ ವಾಸಿಸಬೇಕಾ” ಎಂದು ಪ್ರಶ್ನೆ ಮಾಡಿದ್ದಾರೆ.

ರಜನಿಕಾಂತ್ ಮತ್ತು ದಿವಂಗತ ಜಯಲಲಿತಾ ಅಂತಹ ಘಟನುಘಟಿಗಳು ಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸಿದ್ದರು. ಈ ಪಟ್ಟಿಗೆ ಧನುಷ್‌ ಅವರ ಹೆಸರು ಸೇಪರ್ಡೆಯಾಗಿತ್ತು. ಮಾತ್ರವಲ್ಲ ಈ ಬಗ್ಗೆ ಭಾರಿ ಚರ್ಚೆಗಳು ಆದವು. ಇದೀಗ ವೇದಿಕೆಯಲ್ಲಿ ಧನುಷ್‌ ಮಾತನಾಡಿ ʻʻಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸುವುದು ಇಷ್ಟು ದೊಡ್ಡ ಚರ್ಚೆ ಆಗುತ್ತಿತ್ತು ಎಂದು ನನಗೆ ತಿಳಿದಿದ್ದರೆ, ನಾನು ಕೇವಲ ಒಂದು ಸಣ್ಣ ಅಪಾರ್ಟ್ಮೆಂಟ್ ಅಲ್ಲಿ ಇರುತ್ತಿದ್ದೆ. ಹಾಗಾದರೆ ನಾನು ಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸಬಾರದೇ? ಬೀದಿಯಲ್ಲಿ ಇರುವವನು ಬೀದಿಯಲ್ಲೇ ಇರಬೇಕೇ?ಎಂದು ಮತ್ತಷ್ಟು ವಿಚಾರ ಹೇಳಿಕೊಂಡರು.

ಧನುಷ್ ಅವರು 16 ವರ್ಷದವರಾಗಿದ್ದಾಗ ರಜನಿಕಾಂತ್ ಅವರ ಮನೆಯನ್ನು ನೋಡಲು ಕಾಯುತ್ತಿದ್ದರಂತೆ. ಈ ಬಗ್ಗೆ ನಟ ಮಾತನಾಡಿ ʻʻನನಗೆ ಆಗ 16 ವರ್ಷ ಇರಬೇಕು. ಈ ಏರಿಯಾಗೆ ಬಂದಾಗ ಮುಂಚೆ ಜಯಲಲಿತಾ ಅವರ ಮನೆ ಎಂದು ಗೊತ್ತಾಯ್ತು. ನಾನು ಬೈಕ್ ನಿಲ್ಲಿಸಿ ನೋಡಿದೆ – ಒಂದು ಕಡೆ ರಜನಿ ಸರ್ ಮನೆ, ಇನ್ನೊಂದು ಕಡೆ ಜಯಲಲಿತಾ ಅಮ್ಮನ ಮನೆ. ಒಂದು ದಿನ, ಹೇಗಾದರೂ, ನಾನು ಪೋಯಸ್ ಗಾರ್ಡನ್‌ನಂತಹ ಐಷಾರಾಮಿ ಪ್ರದೇಶದಲ್ಲಿ ಕನಿಷ್ಠ ಒಂದು ಸಣ್ಣ ಮನೆಯನ್ನು ಖರೀದಿಸಬೇಕು ಎಂದು ನಿರ್ಧಾರ ಮಾಡಿದ್ದೆ. ಅಂದು ಕನಸು ಕಂಡ ವೆಂಕಟೇಶ್ ಪ್ರಭುಗೆ (ಧನುಷ್ ಮೂಲ ಹೆಸರು) ಇಷ್ಟು ವರ್ಷ ಕಷ್ಟಪಟ್ಟು ಧನುಷ್ ನೀಡಿದ ಗಿಫ್ಟ್ ಆ ಪೋಯಸ್ ಗಾರ್ಡನ್‌ ಮನೆ” ಎಂದು ನಟ ಧನುಷ್ ಹೇಳಿದ್ದಾರೆ.

ಇದನ್ನೂ ಓದಿ: Actor Suriya: ಕಾಲಿವುಡ್‌ ನಟ ಸೂರ್ಯ ಸಿನಿಮಾಗಾಗಿ ಈ ಕನ್ನಡ   ಸ್ಟಾರ್ ಹೀರೋಗೆ ಬಂದಿತ್ತು ಆಫರ್‌!

ಇದೀಗ ನಟನ ಮಾತುಗಳಿಗೆ ಹೆಚ್ಚಾಗಿ ನೆಗೆಟಿವ್‌ ಕಮೆಂಟ್‌ ಬಂದಿವೆ. , “ಧನುಷ್ ಅವರಂತಹ ನೆಪೋ ಕಿಡ್ ವ ಬಗ್ಗೆ ಮಾತನಾಡುತ್ತಿರುವುದು ತಮಾಷೆಯಾಗಿದೆ.. ಹಾಗೆ, ನಿಮ್ಮ ಕುಟುಂಬವು ಸಿನಿಮಾ ಹಿನ್ನೆಲೆಯನ್ನು ಹೊಂದಿದೆ ಮತ್ತು ಯಾವುದೇ ಪ್ರತಿಭೆಗಳಿಲ್ಲದೆ ನೀವು ಅದನ್ನು ಸುಲಭವಾಗಿ ಪ್ರವೇಶಿಸಬಹುದು. ಬೀದಿ ಎಂದರೇನು ಎಂದು ನಿಮಗೆ ತಿಳಿದಿದೆಯೇ? ”ಎಂದು ಒಬ್ಬರು ಪ್ರಶ್ನಿಸಿದ್ದಾರೆ.

ʻ”ಈ ನಟರು ಸಾಮಾನ್ಯವಲ್ಲದವರಂತೆ ಏಕೆ ವರ್ತಿಸುತ್ತಾರೆ? ಸರಳವಾದ ಉಡುಗೆ ಮತ್ತು ರುದ್ರಾಕ್ಷಿಯನ್ನು ಧರಿಸುವುದರಿಂದ ಯಾರಾದರೂ ಸರಳ ಮತ್ತು ವಿನಮ್ರರು ಎಂದು ಅರ್ಥವಲ್ಲ. ಮನಸ್ಥಿತಿಯೇ ಮುಖ್ಯ! ಈ ಕಥೆಗಳ ಮೂಲಕ ತನ್ನ ಮಾಜಿ ಮಾವನಿಗೆ ಮಣೆ ಹಾಕುತ್ತಿದ್ದಾರೆʼʼಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ.

ಧನುಷ್ (Actor Dhanush) ಅವರ ಎರಡನೇ ನಿರ್ದೇಶನದ ಸಿನಿಮಾ ರಾಯನ್‌’ (Raayan). ಧನುಷ್ ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಟ ತಲೆಯನ್ನು ಬೋಳಿಸಿಕೊಂಡಿdfdru. 2017 ರಲ್ಲಿ ತೆರೆಕಂಡ ‘ಪಾ ಪಾಂಡಿ’ ಚಿತ್ರದ ಮೂಲಕ ಧನುಷ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇದೀಗ ʻರಾಯನ್‌ʼ ಅವರ ಎರಡನೇ ನಿರ್ದೇಶನದ ಸಿನಿಮಾ. ಧನುಷ್‌ ಕೊನೆಯದಾಗಿ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ಕಾಣಿಸಿಕೊಂಡರು. ಅರುಣ್ ಮಾಥೇಶ್ವರನ್ ನಿರ್ದೇಶನದ ಈ ಚಿತ್ರದಲ್ಲಿ ಶಿವ ರಾಜ್‌ಕುಮಾರ್, ಪ್ರಿಯಾಂಕಾ ಮೋಹನ್, ನಿವೇದಿತಾ ಸತೀಶ್, ಜಾನ್ ಕೊಕ್ಕೆನ್ ಮತ್ತು ಮೂರ್ ಪ್ರಮುಖ ಪಾತ್ರಗಳಲ್ಲಿದ್ದರು.

ಸಂದೀಪ್ ಕಿಶನ್ ಮತ್ತು ಕಾಳಿದಾಸ್ ಜಯರಾಮ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಚಿತ್ರದಲ್ಲಿ ಎಸ್‌ಜೆ ಸೂರ್ಯ, ಸೆಲ್ವರಾಘವನ್, ಪ್ರಕಾಶ್ ರಾಜ್, ದುಶಾರ ವಿಜಯನ್, ಅಪರ್ಣಾ ಬಾಲಮುರಳಿ ಮತ್ತು ವರಲಕ್ಷ್ಮಿ ಶರತ್‌ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಶೀಘ್ರದಲ್ಲೇ ಶೇಖರ್ ಕಮ್ಮುಲ ಅವರ ತೆಲುಗು-ತಮಿಳು ದ್ವಿಭಾಷಾ ಚಿತ್ರ `ಕುಬೇರ’ದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಗಾರ್ಜುನ, ರಶ್ಮಿಕಾ ಮಂದಣ್ಣ ಮತ್ತು ಜಿಮ್ ಸರ್ಭ್ ಕೂಡ ಇದರಲ್ಲಿ ನಟಿಸಿದ್ದಾರೆ.

Continue Reading

ಕಾಲಿವುಡ್

Actor Suriya: ಬರ್ತ್‌ಡೇ ದಿನವೇ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ನಟ ಸೂರ್ಯ!

Actor Suriya: ಈ ಸಿನಿಮಾವನ್ನು ತಮಿಳಿನ ಕಾರ್ತಿಕ್ ಸುಬ್ಬರಾಜು ನಿರ್ದೇಶನ ಮಾಡಲಿದ್ದಾರೆ. ಸೂಪರ್ ಹಿಟ್ ಸಿನಿಮಾಗಳಾದ ‘ಜಿಗರ್​ಥಂಡಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಜಿಗರ್ ಥಂಡಾ ಡಬಲ್ ಎಕ್ಸ್’, ‘ಮಹಾನ್’ ಇನ್ನಿತರೆ ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದಾರೆ.2022 ರಲ್ಲಿ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಬಳಿಕ ಪೂಜಾ ಹೆಗ್ಡೆ ಯಾವುದೇ ದಕ್ಷಿಣ ಭಾರತದ ಸಿನಿಮಾದಲ್ಲಿ ನಟಿಸಿರಲಿಲ್ಲ. ಇದೀಗ ‘ಸೂರ್ಯ 44’ ಸಿನಿಮಾ ಮೂಲಕ ಪೂಜಾ ಕಮ್ ಬ್ಯಾಕ್ ಮಾಡಿದ್ದಾರೆ

VISTARANEWS.COM


on

Actor Suriya looks intense in gangster avatar in new promo
Koo

ಬೆಂಗಳೂರು: ಇಂದು (ಜುಲೈ 23)ಕಾಲಿವುಡ್‌ ನಟ ಸೂರ್ಯ (Actor Suriya) ಅವರಿಗೆ ಜನುಮದಿನದ ಸಂಭ್ರಮ ಸೂರ್ಯ 49ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಇದೀಗ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಅವರು ತಾತ್ಕಾಲಿಕವಾಗಿ ಸೂರ್ಯ 44 ಎಂದು ಕರೆಯಲ್ಪಡುವ ಸಿನಿಮಾದಿಂದ ಸೂರ್ಯ ಫ್ಯಾನ್ಸ್‌ಗೆ ಭರ್ಜರಿ ಉಡುಗೊರೆಯನ್ನು ನೀಡಿದ್ದಾರೆ. ಈ ಸಿನಿಮಾದ ಪ್ರೋಮೊ ಇದೀಗ ಔಟ್‌ ಆಗಿದೆ. ಪ್ರೋಮೊದಲ್ಲಿ ಗ್ಯಾಂಗ್‌ಸ್ಟರ್ ಆಗಿ ಮಿಂಚಿದ್ದಾರೆ ಸೂರ್ಯ. ಈ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿ.

ಕಾರ್ತಿಕ್ ಸುಬ್ಬರಾಜ್ ಅವರು ಪ್ರೋಮೋ ಜತೆಗೆ ಟ್ವೀಟ್ “ಜನ್ಮದಿನದ ಶುಭಾಶಯಗಳು ಸೂರ್ಯ ಸರ್. ಟೀಮ್ ಸೂರ್ಯ 44 ರಿಂದ.” ಎಂದು ವಿಶ್‌ ಮಾಡಿದ್ದಾರೆ. ಒಂದು ನಿಮಿಷ-37-ಸೆಕೆಂಡುಗಳ ಪ್ರೋಮೊದಲ್ಲಿ ರಗಡ್‌ ಆಗಿ ಕಂಡಿದ್ದಾರೆ.

ಸೂರ್ಯ ಅವರ ರೆಟ್ರೋ ಲುಕ್‌ ಈಗಾಗಲೇ ಅನಾವರಣಗೊಂಡಿದೆ. ಜಯರಾಮ್, ಕರುಣಾಕರನ್ ಮತ್ತು ಜೋಜು ಜಾರ್ಜ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜುಲೈನಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸುಮಾರು ಒಂದು ತಿಂಗಳ ಕಾಲ ಚಿತ್ರೀಕರಣದ ನಂತರ, ಪೂಜಾ ಅವರು ಚಿತ್ರದ ಮೊದಲ ಶೆಡ್ಯೂಲ್ ಅನ್ನು ಪೂರ್ಣಗೊಳಿಸಿದಾಗ ಪೋಸ್ಟ್ ಅನ್ನು ಹಂಚಿಕೊಂಡಿದ್ದರು.

ಈ ಸಿನಿಮಾವನ್ನು ತಮಿಳಿನ ಕಾರ್ತಿಕ್ ಸುಬ್ಬರಾಜು ನಿರ್ದೇಶನ ಮಾಡಲಿದ್ದಾರೆ. ಸೂಪರ್ ಹಿಟ್ ಸಿನಿಮಾಗಳಾದ ‘ಜಿಗರ್​ಥಂಡಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಜಿಗರ್ ಥಂಡಾ ಡಬಲ್ ಎಕ್ಸ್’, ‘ಮಹಾನ್’ ಇನ್ನಿತರೆ ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದಾರೆ.2022 ರಲ್ಲಿ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಬಳಿಕ ಪೂಜಾ ಹೆಗ್ಡೆ ಯಾವುದೇ ದಕ್ಷಿಣ ಭಾರತದ ಸಿನಿಮಾದಲ್ಲಿ ನಟಿಸಿರಲಿಲ್ಲ. ಇದೀಗ ‘ಸೂರ್ಯ 44’ ಸಿನಿಮಾ ಮೂಲಕ ಪೂಜಾ ಕಮ್ ಬ್ಯಾಕ್ ಮಾಡಿದ್ದಾರೆ

ಇದನ್ನೂ ಓದಿ: Actor Suriya: ರೆಟ್ರೋ ಲುಕ್‌ನಲ್ಲಿ ಕಂಡ ನಟ ಸೂರ್ಯ; ಸಖತ್‌ ಥ್ರಿಲ್ ಆದ್ರು ಫ್ಯಾನ್ಸ್‌!

ʻಕಂಗುವʼ ಸಿನಿಮಾ

ಈಗಾಗಲೇ ಸೂರ್ಯ ಅಭಿನಯದ ಕಂಗುವ ಸಿನಿಮಾ (Kanguva vs Alia Bhatt) ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ. “ಕಂಗುವ” ಪ್ರೇಕ್ಷಕರಿಗೆ ಹೆಚ್ಚು ನಿರೀಕ್ಷಿತ ಚಿತ್ರವಾಗಿದೆ. ಶಿವ ನಿರ್ದೇಶನದ ಈ ಚಿತ್ರದಲ್ಲಿ ಸೂಪರ್‌ಸ್ಟಾರ್ ಸೂರ್ಯ ಸಂಪೂರ್ಣವಾಗಿ (Kanguva Movie) ಹೊಸ ಅವತಾರದಲ್ಲಿ ನಟಿಸಿದ್ದಾರೆ. ಮೂರು ಅವತಾರದಲ್ಲಿ ಸೂರು ಮಿಂಚುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಸೂರ್ಯ ಅವರ ಪ್ರತಿಯೊಂದು ಪಾತ್ರವು ಹಿಂದೆಂದೂ ನೋಡಿರದ ವಿಭಿನ್ನ ಲುಕ್‌ ಇರಲಿದೆ ಎಂದಿದ್ದಾರೆ.

ಶಿವ-ನಿರ್ದೇಶನದ ಈ ಸಿನಿಮಾ ಅಕ್ಟೋಬರ್ 10 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ.

ಮೂಲಗಳ ಪ್ರಕಾರ ಅಮೆಜಾನ್‌ ಪ್ರೈಂ ಸಂಸ್ಥೆ ಬರೋಬ್ಬರಿ 80 ಕೋಟಿ ರೂ. ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading
Advertisement
Aadhaar Update
ವಾಣಿಜ್ಯ4 mins ago

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

Health Tips Kannada
ಆರೋಗ್ಯ19 mins ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ1 hour ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ1 hour ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ1 hour ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ1 hour ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ರಣಯ ನಗರಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

Mumbai Spa
ಪ್ರಮುಖ ಸುದ್ದಿ7 hours ago

ಕೊಲೆಯಾದ ರೌಡಿಯ ಮೈಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾಗಿಯಾಗಿರುವ ಭಾರತದ ಅಥ್ಲೀಟ್​ಗಳಿಗೆ ಶುಭ ಕೋರಿದ ಪ್ರಧಾನಿ ಮೋದಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ12 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ13 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ14 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ15 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌