Yathindra Siddaramaiah : ಯತೀಂದ್ರ ಸಿದ್ದರಾಮಯ್ಯ ಲಿಸ್ಟ್‌ ತಿದ್ದಿದ ಮಹದೇವ್‌ ಯಾರು!? - Vistara News

ಕರ್ನಾಟಕ

Yathindra Siddaramaiah : ಯತೀಂದ್ರ ಸಿದ್ದರಾಮಯ್ಯ ಲಿಸ್ಟ್‌ ತಿದ್ದಿದ ಮಹದೇವ್‌ ಯಾರು!?

Yathindra Siddaramaiah : ಯತೀಂದ್ರ ಸಿದ್ದರಾಮಯ್ಯ ಅವರು ನೀಡಿದ ಪಟ್ಟಿಯಲ್ಲಿ ತಿದ್ದುಪಡಿ ಮಾಡಿದ ಆರೋಪ ಎದುರಿಸುತ್ತಿರುವ ಆರ್‌. ಮಹದೇವ್‌ ಯಾರು ಎಂದು ಗೊತ್ತೇ? ಇಲ್ಲಿದೆ ಪೂರ್ಣ ವಿವರ

VISTARANEWS.COM


on

Yathindra Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು/ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಸಿದ್ಧ ಮಾಡಿದ ಪಟ್ಟಿಯನ್ನು ತಿದ್ದಿದ ಆರೋಪ ಎದುರಿಸುತ್ತಿರುವ ಆರ್‌. ಮಹದೇವ್‌ (R Mahadev OSD to CM) ಯಾರು ಎಂಬ ಚರ್ಚೆ ಈಗ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಯತೀಂದ್ರ ಸಿದ್ದರಾಮಯ್ಯ ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ನೀಡಲೆಂದು ಸಿದ್ಧಪಡಿಸಿದ್ದ ನಾಲ್ಕೈದು ಹೆಸರುಗಳ ಪಟ್ಟಿಯಲ್ಲಿ ವಿವೇಕಾನಂದ ಎಂಬವರ ಹೆಸರನ್ನು ಹೆಚ್ಚುವರಿಯಾಗಿ ಸೇರಿಸಲಾಗಿದ್ದು, ಭಾರಿ ಸದ್ದು ಮಾಡಿದೆ. ಇದು ಸಿಎಂ ಅವರ ಸಹಿಗಾಗಿ ಕಳುಹಿಸಿದ ವರ್ಗಾವಣೆ ಪಟ್ಟಿ ಇರಬಹುದು ಎಂದು ಶಂಕಿಸಲಾಗಿದೆ. ಇದರಲ್ಲಿ ಹೆಚ್ಚುವರಿ ಹೆಸರು ಸೇರಿಸಿದ್ದಕ್ಕಾಗಿ ಈಗ ಮಹದೇವ್‌ ಸುದ್ದಿಯ ಕೇಂದ್ರ ಬಿಂದುವಾಗಿದ್ದಾರೆ. ಹಾಗಿದ್ದರೆ ಈ ಮಹದೇವ್‌ ಯಾರು?

ಏನಿದು ಹೆಸರು ಸೇರಿಸಿ ಪಟ್ಟಿ ತಿದ್ದಿದ ಆರೋಪ?

ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿದ್ದ ವೇಳೆ ಸಿದ್ದರಾಮಯ್ಯ ಅವರಿಂದ ಬಂದ ಫೋನ್‌ ಕರೆಗೆ ಉತ್ತರಿಸುವ ವೇಳೆ ಯತೀಂದ್ರ ಸಿದ್ದರಾಮಯ್ಯ ಎಡವಟ್ಟು ಮಾಡಿಕೊಂಡಿದ್ದಾರೆ. ಸಾರ್ವಜನಿಕರ ಮುಂದೆಯೇ ತಾನು ನೀಡಿದ ಲಿಸ್ಟ್ ಬಗ್ಗೆ ಅವರು ತಂದೆಯ ಜತೆ ಮಾತುಕತೆ ನಡೆಸಿದ್ದರು. ಫೋನ್‌ ಮಾಡಿ ಮಾತನಾಡಿದ ಯತೀಂದ್ರ, ತಾನು ನೀಡಿದ ಲಿಸ್ಟ್​ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ವಿವೇಕಾನಂದರ ಹೆಸರು ಎತ್ತಿದ್ದು, ಇದಕ್ಕೆ ಯಾರು ಎಂದು ಯತೀಂದ್ರ ಅವರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಬೇರೊಂದು ಲಿಸ್ಟ್​ ನೀಡಿದ ಬಗ್ಗೆ ಅಸಮಾಧಾನಗೊಂಡ ಯತೀಂದ್ರ, ನಾನು ಕೊಟ್ಟಿರುವುದೇ ಐದು ಅಂತ ಹೇಳಿ ಮಹದೇವರಿಗೆ‌ ಫೋನ್ ನೀಡುವಂತೆ ಸಿದ್ದರಾಮಯ್ಯಗೆ ಸೂಚಿಸುತ್ತಾರೆ.. ಬಳಿಕ ಮಹದೇವ್ ಜೊತೆ ಮಾತನಾಡಿದ ಯತೀಂದ್ರ, ʼಮಹದೇವ್​ ಯಾಕೆ ಯಾವ್ದ್ಯಾವುದು ಕೊಡ್ತಾ ಇದ್ದೀರಿ? ಮತ್ತೆ ಇದೆಲ್ಲ ಯಾರು ಕೊಡ್ತಿರೋದುʼ ಅಂತ ಪ್ರಶ್ನೆ ಮಾಡಿದ್ದಾರೆ. ʼಅದೆಲ್ಲ ಬೇಡ. ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟೇ ಮಾತ್ರ ಮಾಡಿʼ ಅಂತ ಯತೀಂದ್ರ ಸೂಚಿಸಿರುವ ವಿಡಿಯೋ ಈಗ ಸದ್ದು ಮಾಡುತ್ತಿದೆ.

ಇದನ್ನೂ ಓದಿ: Yathindra Siddaramaih : ಯತೀಂದ್ರ ವರ್ಗಾವಣೆ ದಂಧೆಗೆ ಸಾಕ್ಷಿ; ಸಿಎಂ ರಾಜೀನಾಮೆಗೆ HDK ಆಗ್ರಹ

ಈ ಮಹದೇವ್‌ ಯಾರೆಂದರೆ..

ಡಾ.ಯತೀಂದ್ರ ಸಿದ್ದರಾಮಯ್ಯ ವಿಡಿಯೋದಲ್ಲಿ ಪ್ರಸ್ತಾಪ ಆಗಿರುವ ಮಹದೇವ್ ಯಾರೆಂದರೆ ಅವರು ಮುಖ್ಯಮಂತ್ರಿ ಕಚೇರಿಯ ವಿಶೇಷಾಧಿಕಾರಿ ಆರ್.ಮಹದೇವ್. ಆರ್.ಮಹದೇವ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಎಸ್‌ಡಿ. ಒಎಸ್‌ಡಿ ಅಂದ್ರೆ ಆಫೀಸರ್ ಆನ್ ಸ್ಪೆಷಲ್ ಡ್ಯೂಟಿ.

ಮಹದೇವ್ ಮೂಲತಃ ಸಿದ್ದರಾಮನಹುಂಡಿ ಗ್ರಾಮದವರಾಗಿದ್ದು, ಬೆಂಗಳೂರಿನಲ್ಲಿ ಉಪನೋಂದಣಾಧಿ ಕಾರಿಯಾಗಿದ್ದರು. ಸಿಎಂ ಅವರು ಮುಖ್ಯಮಂತ್ರಿಯಾದ ಬಳಿಕ ಹುಟ್ಟೂರಿನ ಅಧಿಕಾರಿಯನ್ನೇ ಆಯಕಟ್ಟಿನ ಹುದ್ದೆಗೆ ನಿಯೋಜಿಸಿಕೊಂಡಿದ್ದರು.

ಇವರು ಸಿದ್ದರಾಮಯ್ಯ ಅವರಿಗೆ ಓಎಸ್‌ಡಿ ಆಗಿದ್ದರೂ ಯತೀಂದ್ರ ಸಿದ್ದರಾಮಯ್ಯ ಅವರ ಕೆಲಸವನ್ನೇ ಹೆಚ್ಚಾಗಿ ಮಾಡುತ್ತಾರೆ ಎಂಬ ಆರೋಪವಿದೆ. ಇವರು ಸಿದ್ದರಾಮಯ್ಯ, ಯತೀಂದ್ರ ಸಿದ್ದರಾಮಯ್ಯ ಟೀಮ್‌ಗೆ ಆಪ್ತರಾಗಿರುವ ಅಧಿಕಾರಿ.

ಮಹದೇವ್ ವಿರುದ್ದ ಹಲವು ಸಚಿವರಿಂದ ಸಿಎಂಗೆ ದೂರು

ಆರ್‌. ಮಹದೇವ್‌ ಅವರ ವಿರುದ್ಧ ಹಲವು ಸಚಿವರು ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ. ಮಹದೇವ್‌ ಅವರು ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಸಚಿವರು ದೂರಿದ್ದರು.

ಅದರಲ್ಲೂ ಮುಖ್ಯವಾಗಿ ಸಂತೋಷ್‌ ಲಾಡ್‌ ಅವರು ಮಹದೇವ್‌ ವಿರುದ್ಧ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದ್ದರು. ಮಹದೇವ್‌ ಸಚಿವ ಸಂತೋಷ್ ಲಾಡ್ ಗೂ ಮಾಹಿತಿ ನೀಡದೇ ವರ್ಗಾವಣೆ ಪಟ್ಟಿ ರೆಡಿ ಮಾಡಿದ್ದರು ಎಂದು ಆರೋಪಿಸಲಾಗಿದೆ.

ವರ್ಗಾವಣೆಗೆ ಸಿಎಂ ಅನುಮೋದನೆ ಪಡೆದುಕೊಳ್ಳುವ ವೇಳೆ ಹೆಚ್ಚುವರಿ ಲಿಸ್ಟ್ ರೆಡಿ ಮಾಡುತ್ತಿದ್ದ ಆರೋಪವನ್ನು ಮಹದೇವ್‌ ಎದುರಿಸುತ್ತಿದ್ದಾರೆ. ಅಂದರೆ ಸಂತೋಷ್ ಲಾಡ್ ಅವರಿಗೂ ಮಾಹಿತಿ ನೀಡದೇ 40 ಮಂದಿಯ ಲಿಸ್ಟ್ ರೆಡಿ ಮಾಡಿದ್ದರು ಮಹದೇವ್‌. ಇದರ ಬಗ್ಗೆ ಧ್ವನಿ ಎತ್ತಿದ್ದ ಸಂತೋಷ್‌ ಲಾಡ್‌ ಮಹದೇವ್‌ ಅವರನ್ನು ತಕ್ಷಣ ಬದಲಿಸುವಂತೆ ಆಗ್ರಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Breast cancer: ಬೈಕಥಾನ್‌ ಮೂಲಕ ಗಲ್ಲಿ ಗಲ್ಲಿಯಲ್ಲೂ ಸ್ತನ ಕ್ಯಾನ್ಸರ್‌ ಜಾಗೃತಿ ಮೂಡಿಸಿದ ಬೈಕರ್ಸ್‌ಗಳು

Breast cancer : ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಬೈಕಥಾನ್‌ ಆಯೋಜನೆ ಮಾಡಲಾಗಿತ್ತು.

VISTARANEWS.COM


on

By

Breast Cancer Awareness Month celebrated through bikethon
Koo

ಬೆಂಗಳೂರು: ಸ್ತನಕ್ಯಾನ್ಸರ್‌ (Breast cancer) ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಪಿಂಕ್‌ ವುಮೆನ್ಸ್‌ ಶೀರ್ಷಿಕೆಯಡಿ ಬೈಕಥಾನ್‌ ಆಯೋಜಿಸಿತ್ತು. ಸ್ತನಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ನಡೆದ ಈ ಬೈಕಥಾನ್‌ ಕೆ.ಆರ್‌. ರಸ್ತೆಯ ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದಿಂದ ಸೋಮವಾರ ಬೆಳಗ್ಗೆ 7 ಗಂಟೆಗೆ ಪ್ರಾರಂಭಗೊಂಡು, ಎಂ.ಜಿ. ರಸ್ತೆ, ಟ್ರಿನಿಟಿ ಸರ್ಕಲ್‌, ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು.

Breast Cancer Awareness Month celebrated through bikethon

180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನಕ್ಯಾನ್ಸರ್‌ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ ಆದ್ಯತೆ ನೀಡುವ ಕುರಿತು ಜಾಗೃತಿ ಮೂಡಿಸಿದರು. ಇದಷ್ಟೇ ಅಲ್ಲದೆ, ಬೈಕಥಾನ್‌ಗೂ ಮುನ್ನ, ಜುಂಬಾ ಸೆಷನ್‌, ಮೈಕಲ್‌ ಜಾಕ್ಸನ್‌ ಅವರ “ಡೇಂಜರಸ್‌” ಪ್ರೇರಿತಗೊಂಡ ಸ್ಟೆಪ್ಸ್‌ ಹಾಕುವ ಮೂಲಕ ಸ್ತನ ಕ್ಯಾನ್ಸರ್‌ ಆರಂಭಿಕ ಪತ್ತೆಯ ಬಗ್ಗೆ “ಬೀಟ್ ಇಟ್” ಶೀರ್ಷಿಕೆಯ ಫಲಕಗಳನ್ನು ಹಿಡಿದು ವಿಭಿನ್ನವಾಗಿ ಜಾಗೃತಿ ಮೂಡಿಸಿದರು.

ಎಚ್‌ಸಿಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಶಾ ಕುಮಾರ್, ಮೆಡಿಕಲ್‌ ಆಂಕೊಲಾಜಿಸ್ಟ್ ಡಾ. ರೋಶನಿ ದಾಸ್‌ಗುಪ್ತ, ಸರ್ಜಿಕಲ್ ಆಂಕೊಲಾಜಿಸ್ಟ್ ಡಾ ಮಹೇಶ್ ಬಂಡೇಮೆಗಲ್ ಈ ಬೈಕಥಾನ್‌ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಮನೀಶಾ ಕುಮಾರ್, ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚಾಗಿ ಸ್ತನಕ್ಯಾನ್ಸರ್‌ ಕಾಡುತ್ತಿರುವುದು ಆತಂಕಕಾರಿ ಬೆಳವಣಿಗೆ. ಆರಂಭದಲ್ಲಿಯೇ ಈ ಕ್ಯಾನ್ಸರ್‌ನನ್ನು ಪತ್ತೆ ಹಚ್ಚಿದರೆ ಸುಲಭವಾಗಿ ಚಿಕಿತ್ಸೆ ಮೂಲಕ ಗುಣಪಡಿಸಬಹುದು. ನಾವಷ್ಟೇ ಜಾಗೃತರಾದೆ ಸಾಲದು, ನಮ್ಮ ಸುತ್ತಮುತ್ತ ಹಾಗೂ ಗ್ರಾಮೀಣ ಭಾಗದ ಮಹಿಳೆಯರಿಗೂ ಕೂಡ ಈ ಬಗ್ಗೆ ಅರಿವು ಮೂಡಿಸಬೇಕು. ಆಗಷ್ಟೇ ಎಲ್ಲರಿಗೂ ಸ್ತನಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಲಿದೆ. ಮಹಿಳಾ ಬೈಕರ್ಸ್‌ಗಳು ವಿಶೇಷವಾಗಿ ಬೈಕ್‌ ಸವಾರಿ ಮೂಲಕ ಈ ಬಗ್ಗೆ ಜಾಗೃತಿ ಮೂಡಿಸಿದ್ದು ಪ್ರಶಂಸನೀಯ ಎಂದರು.

ಮೆಡಿಕಲ್‌ ಆಂಕೊಲಾಜಿಸ್ಟ್ ಡಾ ರೋಶನಿ ದಾಸ್‌ಗುಪ್ತ ಮಾತನಾಡಿ, ಸ್ತನಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸಿದಷ್ಟೂ ಈ ಬಗ್ಗೆ ಭಯಗೊಳ್ಳುವವರ ಸಂಖ್ಯೆಯೂ ಕಡಿಮೆಯಾಗಲಿದೆ. ಜನರು ಈ ಕ್ಯಾನ್ಸರ್‌ನ ಪ್ರಾರಂಭದಲ್ಲಿಯೇ ಪತ್ತೆ ಹಚ್ಚಿ, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಈ ರೋಗದಿಂದ ಮುಕ್ತಿಗೊಂಡು ಎಂದಿನಂತೆ ಜೀವನ ನಡೆಸಬಹುದು, ಹೀಗಾಗಿ ಜನರು ಈ ಬಗ್ಗೆ ಹೆಚ್ಚು ಜಾಗೃತರಾಗುವುದು ಒಳಿತು ಎಂದು ಸಲಹೆ ನೀಡಿದರು.

ಸರ್ಜಿಕಲ್ ಆಂಕೊಲಾಜಿಸ್ಟ್ ಡಾ. ಮಹೇಶ್ ಬಂಡೇಮೆಗಲ್ ಮಾತನಾಡಿ, “ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳಂದು ಪಿಂಕ್ ಮಹಿಳಾ ಬೈಕ್‌ಥಾನ್ 2024 ನಂತಹ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಅವಶ್ಯಕತೆ ಹೆಚ್ಚಿದೆ. ಇದರಿಂದಲಾದರೂ ಮಹಿಳೆಯರು ಎಚ್ಚೆತ್ತುಕೊಳ್ಳುತ್ತಾರೆ ಎಂದು ಹೇಳಿದರು.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain
Karnataka rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain
Karnataka rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain
Karnataka rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru
Karnataka rain

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain
Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading

ಮಳೆ

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Karnataka Rain : ಸತತ ಮಳೆ ಹಿನ್ನೆಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಶಾಲೆಗಳಿಗೆ ಇಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ (Karnataka Rain) ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಮೌಖಿಕವಾಗಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading

ಮಳೆ

Karnataka Rain: ತೊಯ್ದು ತೊಪ್ಪೆಯಾದ ಚಿಕ್ಕಮಗಳೂರು, ಶಿವಮೊಗ್ಗ; ನಾಳೆಗೂ ಭಾರಿ ಮಳೆ ಎಚ್ಚರಿಕೆ

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು: ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲೇ ಭಾರಿ (Karnataka Rain) ಮಳೆಯಾಗುತ್ತಿದೆ. ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ-ಕಲ್ಲೋಲವಾಗಿದೆ. ಚಿಕ್ಕಮಗಳೂರಿನ ದತ್ತಪೀಠದ ರಸ್ತೆಯಲ್ಲಿ 3 ಅಡಿ ಎತ್ತರದಲ್ಲಿ ನೀರು ಹರಿದಿದೆ. ಎಷ್ಟೇ ಮಳೆ ಬಂದರೂ ಪಶ್ಚಿಮ ಘಟ್ಟಕ್ಕೆ ಲೆಕ್ಕವೇ ಅಲ್ಲ, ಸಾವಿರಾರು ಅಡಿ ಆಳ, ಮುಗಿಲೆತ್ತರದ ಬೆಟ್ಟಗುಡ್ಡಗಳ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಕೆರೆಯಂತೆ ನೀರು ಹರಿಯುತ್ತಿದೆ. ಮಳೆರಾಯನ ಅಬ್ಬರಕ್ಕೆ ಪ್ರವಾಸಿಗರು ತೊಯ್ದು ತೊಪ್ಪೆ ಆಗಿದ್ದಾರೆ. ಮಳೆ ಮಧ್ಯೆ ಸಿಲುಕಿ ಚಿಕ್ಕಮಗಳೂರು ತಾಲ್ಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಸಹವಾಸವೇ ಬೇಡ ಎನ್ನುತ್ತಿದ್ದಾರೆ ಪ್ರವಾಸಿಗರು.

ತರೀಕೆರೆ ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಗೆ ಹೊಲ-ಗದ್ದೆ, ತೋಟಗಳಿಗೆ ನೀರು ನುಗ್ಗಿದೆ. ಸಣ್ಣಬೋಕಿಕೆರೆ, ಗೊಲ್ಲರಹಳ್ಳಿ ಹೊಲಗಳು ಜಲಾವೃತಗೊಂಡಿದೆ. ಕೋರನಹಳ್ಳಿ, ಚಟ್ಟನಹಳ್ಳಿ, ಶಿವಪುರ ಭಾಗದಲ್ಲಿ ಹಳ್ಳಿ ಹರಿದು ಭಾರೀ ಅನಾಹುತವಾಗಿದೆ. ಗೊಲ್ಲರಹಳ್ಳಿಯಲ್ಲಿ ಹೂವಿನಹೊಲದಲ್ಲಿ ಮಳೆ ‌ನೀರು ನಿಂತಿದೆ.

ಕಾಫಿನಾಡ ಮಹಾಮಳೆಗೆ ಮಲೆನಾಡು ಭಾಗದ ಜನರು ಕಂಗಾಲಾಗಿದ್ದಾರೆ. ಭಾರೀ ಮಳೆಗೆ ಗ್ರಾಮೀಣ ಭಾಗದ ಸೇತುವೆಗಳು ಜಲಾವೃತಗೊಂಡಿದೆ. ಮುತ್ತೋಡಿ ವ್ಯಾಪ್ತಿಯ ಗ್ರಾಮದ ಜನ ಹಳ್ಳ ದಾಟಲು ಪರದಾಡಿದರು. ವೃದ್ಧೆಯನ್ನ ಹಳ್ಳಿಗರು ಅಂಗೈಲಿ ಹೊತ್ತು ಸಾಗಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮಲಗಾರು ಗ್ರಾಮದಲ್ಲಿ ನಡೆದಿದೆ. ಮಲಗಾರು ಗ್ರಾಮ ಮುತ್ತೋಡಿ ಅರಣ್ಯ ವ್ಯಾಪ್ತಿಯ ಕುಗ್ರಾಮ ಇದಾಗಿದೆ. ನಿನ್ನೆ ಸಂಜೆ ಸುರಿದ ಭಾರೀ ಮಳೆಯಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು, ಕಿರು ಸೇತುವೆ ತುಂಬಿ ಹೋಗಿದೆ.

ಇತ್ತ ಕಳೆದ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ‌ ನೀರು ನುಗ್ಗಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮ ನಗರದ ದೇವರಾಜು ಅರಸು ಬಡಾವಣೆಯ ಮನೆಗಳು ಜಲಾವೃತಗೊಂಡಿದೆ. ರಸ್ತೆ ಮೇಲೆ ನೀರು ಉಕ್ಕಿ ಹರಿಯುತ್ತಿದ್ದು, ಜನರ ಓಡಾಟಕ್ಕೂ ಸಂಕಷ್ಟ ಎದುರಾಗಿದೆ.

5 ದಶಕಗಳ ನಂತರ ಕೋಡಿ ಬಿದ್ದ ಹುಲಿಕೆರೆ ಗ್ರಾಮದ ಕೆರೆ

ಕಳೆದ ಮೂರ್ನಾಲ್ಕು ದಿನದಿಂದ ಸುರಿಯುತ್ತಿರುವ ಮಳೆಗೆ ಐದು ದಶಕಗಳ ನಂತರ ಹುಲಿಕೆರೆ ಗ್ರಾಮದ ಕೆರೆ ಕೋಡಿ ಬಿದ್ದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿರುವ ಹುಲಿಕೆರೆ ನೋಡಲು ಜನಸಾಗರವೇ ಹರಿದುಬಂದಿತ್ತು. ಕಲ್ಯಾಣ ಚಾಲುಕ್ಯರ ಕಾಲಘಟ್ಟದಲ್ಲಿ ಕಟ್ಟಿಸಿದ ಕೆರೆಯು ಹುಲಿಕೆರೆ ಗ್ರಾಮ ಸೇರಿ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ಜೀವನಾಡಿಯಾಗಿದೆ. ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕೆರೆಗಳು ಭರ್ತಿ

ಬರದ ನಾಡು ಎಂದೇ ಕರೆಯುತ್ತಿದ್ದ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಗೆ ತಾಲೂಕಿನ ಬಹುತೇಕ ಕೆರೆಗಳು ಭರ್ತಿಯಾಗಿದೆ. ಬತ್ತಿ ಹೋಗಿದ್ದ ಬೋರ್ ವೆಲ್‌ನಲ್ಲಿ ನೀರು ಉಕ್ಕಿ ಬರುತ್ತಿದೆ. ಜಗಳೂರು ತಾಲ್ಲೂಕಿನ ಕಾನನಕಟ್ಟೆ, ಅಣಬೂರು ಗ್ರಾಮದಲ್ಲಿ ನೀರು ಉಕ್ಕಿ ಬರುತ್ತಿದೆ. ಅಂತರ್ಜಲ ಹೆಚ್ಚಾಗಿ ಬೋರ್ ವೆಲ್ ಗಳಲ್ಲಿ ನೀರು ಉಕ್ಕಿ ಬರುತ್ತಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಮಲೆನಾಡಿನಂತಾದ ಹೊಸಪೇಟೆ ಪಟ್ಟಣ

ವಿಜಯನಗರದ ಹೊಸಪೇಟೆ ಪಟ್ಟಣ ಮಿನಿ ಮಲೆನಾಡಿನಂತಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇಡೀ ಹೊಸಪೇಟೆ ತಾಲೂಕು ಮಂಜಿನಿಂದ ಆವರಿಸಿದೆ. ಐತಿಹಾಸಿಕ ಜೋಳದ ರಾಶಿ ಗುಡ್ಡ ಸೇರಿದಂತೆ ನಾನಾ ಕಡೆ ಮಂಜಿನ ವಾತಾವರಣ ಕ್ಕೆ ಜನರು ಫುಲ್ ಫಿದಾ ಆಗಿದ್ದಾರೆ. ಮಂಜಿನಲ್ಲೇ ಕುಳಿತು ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ.

Continue Reading
Advertisement
Dina bhavishya
ಭವಿಷ್ಯ3 ಗಂಟೆಗಳು ago

Dina Bhavishya: ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ; ಮಾತಿನಲ್ಲಿ ಹಿಡಿತವಿರಲಿ

Breast Cancer Awareness Month celebrated through bikethon
ಬೆಂಗಳೂರು13 ಗಂಟೆಗಳು ago

Breast cancer: ಬೈಕಥಾನ್‌ ಮೂಲಕ ಗಲ್ಲಿ ಗಲ್ಲಿಯಲ್ಲೂ ಸ್ತನ ಕ್ಯಾನ್ಸರ್‌ ಜಾಗೃತಿ ಮೂಡಿಸಿದ ಬೈಕರ್ಸ್‌ಗಳು

Karnataka Rain
ಮಳೆ23 ಗಂಟೆಗಳು ago

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain
ಮಳೆ23 ಗಂಟೆಗಳು ago

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Dina Bhavishya
ಭವಿಷ್ಯ24 ಗಂಟೆಗಳು ago

Dina Bhavishya : ಹೂಡಿಕೆ ವ್ಯವಹಾರಗಳನ್ನು ಈ ದಿನ ಮಾಡುವುದು ಬೇಡವೇ ಬೇಡ

Karnataka Rain
ಮಳೆ2 ದಿನಗಳು ago

Karnataka Rain: ತೊಯ್ದು ತೊಪ್ಪೆಯಾದ ಚಿಕ್ಕಮಗಳೂರು, ಶಿವಮೊಗ್ಗ; ನಾಳೆಗೂ ಭಾರಿ ಮಳೆ ಎಚ್ಚರಿಕೆ

Kichcha Sudeeps mother Saroja passes away
ಬೆಂಗಳೂರು2 ದಿನಗಳು ago

Kichcha Sudeepa : ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನ

Dina Bhavishya
ಭವಿಷ್ಯ2 ದಿನಗಳು ago

Dina Bhavishya : ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳಬೇಡಿ; ನಂಬಿದ ವ್ಯಕ್ತಿಗಳಿಂದ ಈ ರಾಶಿಯವರಿಗೆ ನಿರಾಸೆ

Bigg boss kannada
ಬಿಗ್ ಬಾಸ್3 ದಿನಗಳು ago

Bigg Boss Kannada : ಕಿಚ್ಚನ ಪಂಚಾಯ್ತಿಯಲ್ಲಿ ಗರ್ಮಾಗರಂ ವಿಷ್ಯಗಳು; ಬಿಗ್‌ಬಾಸ್‌ ನಿರ್ಧಾರವನ್ನೇ ಪ್ರಶ್ನೆ ಮಾಡ್ತಾರಾ ಸುದೀಪ್‌!

missing case
ಗದಗ3 ದಿನಗಳು ago

Missing Case : ಬಸ್ ನಿಲ್ದಾಣದಲ್ಲಿ ಕಳೆದು ಹೋಗಿದ್ದ 5 ವರ್ಷದ ಮಗು: ಎರಡೇ ಗಂಟೆಯಲ್ಲಿ ತಾಯಿ ಮಡಿಲು ಸೇರಿಸಿದ ಪೊಲೀಸರು

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌