Site icon Vistara News

ಕಾಂಗ್ರೆಸ್​​ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ: ಎನ್​ ರವಿಕುಮಾರ್​ ಆರೋಪ

MLC N Ravikumar

#image_title

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಧರ್ಮ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಆರೋಪಿಸಿದ್ದಾರೆ. ಗುರುವಾರ ನಡೆದ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ಹಲವಾರು ನಿರ್ಧಾರಗಳನ್ನು ಪ್ರಶ್ನಿಸಿ ಅವರು ಈ ಮಾತನ್ನ ಹೇಳಿದ್ದಾರೆ. ಕಾಂಗ್ರೆಸ್​ ಬಹುಸಂಖ್ಯಾತ ಹಿಂದೂಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಅವರು ಪತ್ರಿಕಾ ಪ್ರಕಟಣೆ ಹೊರಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇಡಿಕೆ ಇರದ ಹೊರತಾಗಿಯೂ ಪಠ್ಯ ಪುಸ್ತಕವನ್ನು ಪರಿಷ್ಕರಣೆ ಮಾಡಲು ಸಂಪುಟ ನಿರ್ಧರಿಸಿದೆ. ಸ್ವಾತಂತ್ರ್ಯ ವೀರ ಸಾವರ್ಕರ್ ಪಠ್ಯಕ್ಕೆ ಕತ್ತರಿ ಹಾಕಲು ಮುಂದಾಗಿರುವುದು ದೇಶದ್ರೋಹ ಎಂಬುದಾಗಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಿಂದಿನ ಬಿಜೆಪಿ ಸರಕಾರ ಜಾರಿಗೆ ತಂದಿರುವ ಮತಾಂತರ ನಿಷೇಧ ಕಾಯಿದೆಯನ್ನು ರದ್ದು ಮಾಡಿರುವ ಕ್ರಮವನ್ನು ಅವರು ಬಲವಾಗಿ ಖಂಡಿಸಿದ್ದಾರೆ.

ಎನ್​ ರವಿಕುಮಾರ್​ ಅವರು ಆಗ್ರಹಗಳು ಇಂತಿವೆ

Exit mobile version