Naadageethe row: ನಾಡಗೀತೆಯ ಬೆನ್ನುಹತ್ತಿದ ಹೈಕೋರ್ಟ್‌; ಕಟಕಟೆಗೆ ಬರ್ತಾರಾ ಗಾಯಕಿ ಬಿ.ಕೆ ಸುಮಿತ್ರಾ? - Vistara News

ಕರ್ನಾಟಕ

Naadageethe row: ನಾಡಗೀತೆಯ ಬೆನ್ನುಹತ್ತಿದ ಹೈಕೋರ್ಟ್‌; ಕಟಕಟೆಗೆ ಬರ್ತಾರಾ ಗಾಯಕಿ ಬಿ.ಕೆ ಸುಮಿತ್ರಾ?

Naadageethe row : ಯಾರ ಸಂಗೀತ ಸಂಯೋಜನೆಯ ನಾಡಗೀತೆಯನ್ನು ಆಯ್ಕೆ ಮಾಡಬೇಕು ಎನ್ನುವ ವಿಚಾರ ಹೈಕೋರ್ಟ್‌ ಮೆಟ್ಟಿಲು ಹತ್ತಿದ ಬಳಿಕ ಕುತೂಹಲಕಾರಿ ಘಟನೆಗಳು ನಡೆಯುತ್ತಿವೆ. ಇದೀಗ ಖ್ಯಾತ ಗಾಯಕಿ ಬಿ.ಕೆ. ಸುಮಿತ್ರಾ ಅವರನ್ನು ಕರೆಸಬಹುದೇ ಎಂದು ಕೋರ್ಟ್‌ ಕೇಳಿದೆ.

VISTARANEWS.COM


on

BK Sumithra Kuvempu Nadageethe row
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕುವೆಂಪು ವಿರಚಿತ ʻಜೈ ಭಾರತ ಜನನಿಯ ತನುಜಾತೆʼ ಹಾಡನ್ನು ನಾಡಗೀತೆಯಾಗಿ (Kannada Naadageethe) ಹಾಡುವುದೇನೋ ಸರಿ, ಆದರೆ, ಯಾರ ರಾಗ ಸಂಯೋಜನೆಯಲ್ಲಿ ಹಾಡಬೇಕು ಎಂಬ ವಿಚಾರ ಈಗ ಹೈಕೋರ್ಟ್‌ನಲ್ಲಿ (Karnataka High court) ಕುತೂಹಲಕಾರಿ ರೀತಿಯಲ್ಲಿ ವಿಚಾರಣೆಗೆ ಒಳಪಡುತ್ತಿದೆ. ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ (Justice Krishna S Dixit) ಅವರ ನೇತೃತ್ವದ ಏಕಸದಸ್ಯ ಪೀಠವು ನಾನಾ ಆಯಾಮಗಳನ್ನು ಗುರುತಿಸಿಕೊಂಡು ವಿಶ್ಲೇಷಣೆಗೆ (Naadageethe row) ಒಳಪಡಿಸುತ್ತಿದೆ. ಈ ಹಿಂದೆ ನಾಡಗೀತೆಯನ್ನು ಐದು ವಿಭಿನ್ನ ರಾಗಗಳಲ್ಲಿ ಹಾಡಿಸಿದ್ದ ಪೀಠ ಈಗ ಸಂಗೀತ ವಿದ್ವಾಂಸರೊಬ್ಬರನ್ನು ನ್ಯಾಯಾಲಯಕ್ಕೆ ಕರೆಸಿ ಮಾಹಿತಿ ಪಡೆಯಲು ಮುಂದಾಗಿದೆ. ಪೀಠದ ಸದ್ಯದ ಆಯ್ಕೆ ಖ್ಯಾತ ಗಾಯಕಿ ಮತ್ತು ಸಂಗೀತಜ್ಞೆ ಬಿ.ಕೆ. ಸುಮಿತ್ರಾ (BK Sumitra) ಅವರು. ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಶೇಷ ವಿಚಾರಣೆಯ ಕುತೂಹಲಕಾರಿ ಕಥೆ ಇಲ್ಲಿದೆ.

ದಿವಂಗತ ಮೈಸೂರು ಅನಂತಸ್ವಾಮಿ (Mysore Ananthaswamy) ಸಂಯೋಜಿಸಿದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಸರ್ಕಾರ 2022ರ ಸೆ.25ರಂದು ಹೊರಡಿಸಿತ್ತು. ಈ ಆದೇಶವನ್ನು ಆಕ್ಷೇಪಿಸಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ (Kikkeri Krishnamurthy) ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಕಿಕ್ಕೇರಿ ಅವರು ಸಿ. ಅಶ್ವಥ್‌ (C Ashwath) ಅವರ ರಾಗ ಸಂಯೋಜನೆಯಲ್ಲಿ ಈ ಹಾಡು ಇರಬೇಕು ಎನ್ನುವ ವಾದದ ಪ್ರತಿಪಾದಕರಾಗಿದ್ದಾರೆ.

ಜುಲೈ 13ರಂದು ನಾಡಗೀತೆಗೆ ಸಂಬಂಧಿಸಿದ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿತ್ತು. ಆಗ ಸರ್ಕಾರಿ ವಕೀಲರು, ಕುವೆಂಪು ಅವರು ಕೆಲವೊಂದು ಷರತ್ತು ವಿಧಿಸಿ ಸಿನಿಮಾದಲ್ಲಿ ನಾಡಗೀತೆ ಬಳಸಲು ಮತ್ತು ರಾಗ ಸಂಯೋಜಿಸಲು ಅನುಮತಿ ನೀಡಿದ್ದಾರೆ ಎಂದಿದ್ದರು. ಆಗ ನ್ಯಾಯಮೂರ್ತಿಗಳಾದ ಕೃಷ್ಣ ಎಸ್‌ ದೀಕ್ಷಿತ್‌ ಅವರು, ಕುವೆಂಪು ಅವರು ಅನುಮತಿ ನೀಡಿರುವುದು ನಿಜವೇ ಎಂದು ಕೇಳಿದರು. ಆಗ ಉತ್ತರಿಸಿದ ಅರ್ಜಿದಾರ ಕಿಕ್ಕೇರಿ ಕೃಷ್ಣಮೂರ್ತಿ ಪರ ವಕೀಲರು, ಕುವೆಂಪು ಸಾಹಿತ್ಯ ಬಳಕೆಗೆ ಮಾತ್ರ ಅನುಮತಿ ನೀಡಿದ್ದಾರೆ ಹೊರತು ಸಂಗೀತ ಸಂಯೋಜನೆ ವಿಚಾರದಲ್ಲಿ ಏನೂ ಹೇಳಿಲ್ಲ ಎಂದರು. ಈ ಉತ್ತರಕ್ಕೆ ತೃಪ್ತರಾಗದ ನ್ಯಾಯಮೂರ್ತಿಗಳು ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ಬೇಕು. ಕಕ್ಷಿದಾರರು ಲಭ್ಯವಿದ್ದರೆ ಅವರನ್ನೇ ಕರೆಸಿ ಎಂದರು. ಈ ವೇಳೆ ಕಿಕ್ಕೇರಿ ಕೃಷ್ಣಮೂರ್ತಿ ಅವರು ಅಲ್ಲೇ ಇದ್ದುದರಿಂದ ನ್ಯಾಯಮೂರ್ತಿಗಳು ಅವರಿಂದಲೇ ಮಾಹಿತಿಯನ್ನು ಕೇಳಿದರು.

Naadageethe row

ನ್ಯಾಯಾಧೀಶರ ಮುಂದೆ ಮಾಹಿತಿ ನೀಡಿದ ಕಿಕ್ಕೇರಿ ಕೃಷ್ಣಮೂರ್ತಿ ಅವರು, ಕುವೆಂಪು ಅವರು ವಾಸ್ತವವಾಗಿ ಸಿನಿಮಾಕ್ಕೆ ನಾಡಗೀತೆಯ ಸಾಲು ಬಳಸಲು ಅನುಮತಿ ನೀಡಿದ್ದರು. ಸಂಗೀತ ನಿರ್ದೇಶಕ ವಿಜಯ ಭಾಸ್ಕರ್‌ ಅವರು ಕಲ್ಯಾಣಿ ರಾಗದಲ್ಲಿ ಸಂಗೀತ ಸಂಯೋಜಿಸಿದ್ದಾರೆ. ಅಶ್ವಥ್‌ ಅವರು ಉದಯ ರವಿಚಂದ್ರಿಕೆ ರಾಗ ಮತ್ತು ಅನಂತಸ್ವಾಮಿ ಅವರು ಮಾಯಾ ಮಾಳವ ಗೋಳ ಸಂಗೀತದಲ್ಲಿ ರಾಗ ಸಂಯೋಜಿಸಿದ್ದಾರೆ. ಇದಲ್ಲದೆ, ಇನ್ನು ಹಲವು ರಾಗದಲ್ಲಿ ನಾಡಗೀತೆಯನ್ನು ಹಾಡಬಹುದಾಗಿದೆ ಎಂದು ವಿವರಿಸಿದರು.

ಆಗ ನ್ಯಾಯಮೂರ್ತಿಗಳಾದ ಕೃಷ್ಣ ಎಸ್‌ ದೀಕ್ಷಿತ್‌ ಅವರು, ನೀವು ರಾಗಗಳ ಹೆಸರು ಹೇಳಿದರೆ ಸಾಕಾಗುವುದಿಲ್ಲ. ಹಾಡಿನ ಸೌಂದರ್ಯ ಹಾಗೂ ಪ್ರಾಮುಖ್ಯತೆ, ವಿವಿಧ ರಾಗಗಳಲ್ಲಿನ ವ್ಯತ್ಯಾಸವನ್ನು ಪ್ರಸ್ತುತ ಪಡಿಸುವುದು ಉತ್ತಮ. ವಿವಿಧ ರಾಗದಲ್ಲಿ ಹಾಡಲು ಸಾಧ್ಯವಿದೆ ಎಂದಾದರೆ ನೀವು ಹಾಡಿ ತೋರಿಸಬಹುದೇ ಎಂದು ಕೇಳಿದರು.

ಆಗ ಕಿಕ್ಕೇರಿ ಅವರು ‘ಉದಯ ರವಿಚಂದ್ರಿಕೆ, ಜಂಜೂಟಿ, ಹಿಂಧೋಳ, ಕಲ್ಯಾಣಿ ಮತ್ತು ಮಾಯಾ ಮಾಳವ ಗೋಳ ರಾಗದಲ್ಲಿ ನಾಡಗೀತೆಯ ಸಾಲು ಹಾಡಿದರು. ನ್ಯಾಯಮೂರ್ತಿಗಳು ಆಲಿಸಿದರು.

ಅಂತಿಮವಾಗಿ ಎಲ್ಲ ಚರಣಗಳಿಗೂ ರಾಗ ಸಂಯೋಜನೆ ಮಾಡಲಾಗಿರುವ ಸಿ. ಅಶ್ವಥ್‌ ಅವರ ಸಂಯೋಜನೆಯಲ್ಲೇ ಹಾಡುವುದು ಸೂಕ್ತ ಎಂದು ಕಿಕ್ಕೇರಿ ಕೃಷ್ಣಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅಂದಿನ ವಿಚಾರಣೆಯನ್ನು ಜುಲೈ 31ಕ್ಕೆ ಮುಂದೂಡಲಾಗಿತ್ತು.

ರಾಗಗಳಿಗೆ ಕಾಲದ ಸಂಬಂಧ ಇದೆ ಎಂದ ಹೈಕೋರ್ಟ್‌

ನಾಡಗೀತೆ ವಿಚಾರವನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರು ತುಂಬ ಆಳವಾಗಿ ಅಧ್ಯಯನ ನಡೆಸಿದಂತೆ ವಿಚಾರ ಮಂಡಿಸಿದ್ದು ವಿಶೇಷವಾಗಿತ್ತು. ಜುಲೈ 31ರಂದು ನಡೆದ ವಿಚಾರಣೆಯ ವೇಳೆ ಅವರು, “ರಾಗಕ್ಕೆ ಕಾಲ ಸಾಪೇಕ್ಷತೆ ಇದೆ. ಕೆಲವು ರಾಗಗಳನ್ನು ಮುಂಜಾನೆ ಹೇಳಲಾಗದು. ಮತ್ತೆ ಕೆಲವು ರಾಗಗಳನ್ನು ಮಧ್ಯಾಹ್ನ ಹೇಳಲಾಗದು. ಅದೊಂದು ವಿಜ್ಞಾನ. ಸಂಗೀತ ಶಾಸ್ತ್ರ ಆ ರೀತಿಯಲ್ಲಿ ಬೆಳವಣಿಗೆ ಕಂಡಿದೆ” ಎಂದು ವಿವರಿಸಿದರು.

“ನಾನು ಸಂಗೀತ ಶಾಸ್ತ್ರದ ಹಿನ್ನೆಲೆಯಲ್ಲಿ ಆ ಪದ್ಯವನ್ನು ನೋಡಿದ್ದೇನೆ. ಕೆಲವು ಚರಣಗಳು ರಾತ್ರಿ ರಾಗದಲ್ಲಿ, ಮತ್ತೆ ಕೆಲವು ಚರಣಗಳನ್ನು ಮಧ್ಯಾಹ್ನಿಕ ರಾಗದಲ್ಲಿ ಹೇಳಬೇಕಿದೆ. ಒಂದು ಚರಣ ಪ್ರಾರ್ಥನ ರಾಗದಲ್ಲಿದೆ. ಅದನ್ನು ಏಕೆ ಹಾಗೆ ಮಾಡಿದ್ದಾರೆ ಗೊತ್ತಿಲ್ಲ. ಯಾವುದೇ ಒಂದು ರಾಗದಲ್ಲಿ ಆ ಹಾಡವನ್ನು ಹಾಡಬಹುದೇ ಎಂಬ ಪ್ರಶ್ನೆ ಏಳುತ್ತದೆ. ಇದು ಸಂಗೀತ ಶಾಸ್ತ್ರಕ್ಕೆ ಸಂಬಂಧಿಸಿದ ವಿಚಾರ. ಒಳ್ಳೆಯ ಸಂಗೀತ ಗ್ರಂಥಗಳನ್ನು ತಂದು ತಿಳಿಸಬೇಕು” ಎಂದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಹೇಳಿದರು.

ಬೇರೆ ರಾಜ್ಯಗಳ ಸ್ಥಿತಿಗತಿ ಅಧ್ಯಯನ ಮಾಡಿ ತಿಳಿಸಿ

“ಬೇರೆ ರಾಜ್ಯಗಳಲ್ಲಿ ಈ ರೀತಿಯ ನಾಡಗೀತೆಗಳು ಇವೆಯೇ? ಯಾವೆಲ್ಲಾ ರಾಜ್ಯಗಳಲ್ಲಿ ಇವೆ. ಅಲ್ಲಿನ ಸರ್ಕಾರ ಏನು ಮಾಡಿವೆ” ಎಂದು ಪರಿಶೀಲಿಸಿ ಎಂದು ನ್ಯಾಯಾಲಯ ಹೇಳಿತು. ಇದಕ್ಕೆ ಅರ್ಜಿದಾರರ ಪರ ವಕೀಲರು “ತಮಿಳುನಾಡಿನಲ್ಲಿ ನಾಡಗೀತೆ ಇದೆ. ಕವಿಯೇ ರಾಗ ಸಂಯೋಜನೆ ಮಾಡಿದ್ದಾರೆ” ಎಂದು ವಿವರಿಸಿದರು.

ಬಿ.ಕೆ. ಸುಮಿತ್ರಾ ಅವರು ನ್ಯಾಯಾಲಯಕ್ಕೆ ಬರುತ್ತಾರಾ?

ಇಷ್ಟಕ್ಕೇ ಸಮಾಧಾನಗೊಳ್ಳದ ನ್ಯಾಯಪೀಠವು ಈ ವಿಚಾರದಲ್ಲಿ ಇನ್ನಷ್ಟು ವಿಚಾರಗಳನ್ನು ತಿಳಿದುಕೊಳ್ಳಬೇಕಾಗಿದೆ. “ಸಂಗೀತ ಶಾಸ್ತ್ರದ ದಿಗ್ಗಜರಲ್ಲಿ ಯಾರನ್ನು ನ್ಯಾಯಾಲಯಕ್ಕೆ ಕರೆಸಬಹುದು” ಎಂದು ಪ್ರಶ್ನಿಸಿತು. ಇದಕ್ಕೆ ಕಿಕ್ಕೇರಿ ಕೃಷ್ಣಮೂರ್ತಿ ಅವರು “ಬಿ ಕೆ ಸುಮಿತ್ರಾ ಅವರನ್ನು ಕರೆಸಬಹುದು” ಎಂದರು. ಆಗ ಪೀಠವು “ಹಾಗಾದರೆ ಅವರನ್ನು ಮುಂದಿನ ವಿಚಾರಣೆಗೆ ಕರೆಯುತ್ತೀರಾ? ಸಂಗೀತಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಓದಿಕೊಂಡು, ಅವುಗಳ ಮೂಲಕ ನ್ಯಾಯಾಲಯಕ್ಕೆ ಸಹಾಯ ಮಾಡಬೇಕು” ಎಂದು ಹೇಳಿದರು. ಮುಂದಿನ ವಿಚಾರಣೆ ಆಗಸ್ಟ್‌ 17ರಂದು ನಡೆಯಲಿದೆ.

ಇದನ್ನೂ ಓದಿ: Naadageethe row : ಕೋರ್ಟ್‌ ಕಟಕಟೆಯಲ್ಲಿ ಮೊಳಗಿದ ನಾಡಗೀತೆ; ಪಂಚ ರಾಗದಲ್ಲಿ ಹಾಡಿದ ಕಿಕ್ಕೇರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading

ಕರ್ನಾಟಕ

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

VISTARANEWS.COM


on

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಅಶ್ಲೀಲ ಹಾಡು ಮತ್ತು ಅಸಭ್ಯ ನೃತ್ಯಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ದ್ವಂದ್ವಾರ್ಥದ ಸಿನಿಮಾ ಹಾಡು ಹಾಗೂ ನೃತ್ಯಗಳನ್ನು ಪ್ರದರ್ಶಿಸುವುದರಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಶಾಲಾ ಕಾರ್ಯಕ್ರಮಗಳಲ್ಲಿ ಕೇವಲ ಜಾನಪದ, ದೇಶಭಕ್ತಿ ಗೀತೆಗಳು, ಪರಿಸರ ಕಾಳಜಿಯ ಹಾಡುಗಳು ಮತ್ತು ಸಮಾಜಮುಖಿ ಚಿಂತನೆಯುಳ್ಳ ಸಂಗೀತಕ್ಕೆ ಮಾತ್ರ ಆದ್ಯತೆ ನೀಡಬೇಕು. ನೃತ್ಯದ ಸಮಯದಲ್ಲಿ ವಿದ್ಯಾರ್ಥಿಗಳು ಧರಿಸುವ ಉಡುಪುಗಳು ಕೂಡ ಸಭ್ಯವಾಗಿರಬೇಕು ಹಾಗೂ ಅರೆಬರೆ ವಸ್ತ್ರಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನರಂಜನೆಯ ಹೆಸರಿನಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಅಥವಾ ಮಕ್ಕಳ ನೈತಿಕ ಹಾಗೂ ಮಾನಸಿಕ ಆರೋಗ್ಯ ಕೆಡಿಸುವ ಯಾವುದೇ ಹಾಡುಗಳನ್ನು ಬಳಸದಂತೆ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಜಾರಿಗೆ ತರುವ ಸಂಪೂರ್ಣ ಜವಾಬ್ದಾರಿಯನ್ನು ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗೆ ವಹಿಸಲಾಗಿದೆ.

Continue Reading

bigbreaking

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

VISTARANEWS.COM


on

ಬೆಂಗಳೂರು: ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯವನ್ನು ಬೆಚ್ಚಿಬೀಳಿಸುವಂತಹ ಗಂಭೀರ ಆರೋಪವೊಂದು ಹೊರಬಂದಿದೆ. 2007-08ರಿಂದ ಇದುವರೆಗೆ ನಡೆದಿರುವ 20 ಸಾವಿರ ಕೋಟಿಗೂ ಹೆಚ್ಚು ಮೊತ್ತದ TDR ಹಗರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು ಈಗಿನ ಜಿಬಿಎ ಯ ಭೂಸ್ವಾಧೀನ ಮತ್ತು ಟಿಡಿಆರ್‌ ವಿಭಾಗದ ಕಚೇರಿಯಿಂದ ನಾಪತ್ತೆಯಾಗಿವೆ ಎನ್ನುವ ಆಘಾತಕಾರಿ ವಿಷಯವನ್ನು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್ ಬಹಿರಂಗಪಡಿಸಿದ್ದಾರೆ.
ಇಂದು ಜಿಬಿಎ ಕೇಂದ್ರ ಕಚೇರಿ ಮುಂಭಾಗ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಟಿಡಿಆರ್‌ ಹಗರಣದ ದಾಖಲೆಗಳ ನಾಪತ್ತೆ ಬಗ್ಗೆ ಮಹತ್ವದ ಮಾಹಿತಿಗಳನ್ನು ತಿಳಿಸಿದರು. ರಸ್ತೆ ಅಭಿವೃದ್ಧಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂ ಮಾಲೀಕರಿಂದ ನಿಯಮಾನುಸಾರ ಸ್ವಾಧೀನಪಡಿಸಿಕೊಂಡು, ಅದಕ್ಕೆ ಬದಲಾಗಿ ನಿಗದಿತ ಮೊತ್ತದ ಪರಿಹಾರ ಧನ ಅಥವಾ TDR /DRC ನೀಡುವ ಕಾರ್ಯ 2007-08 ರಲ್ಲಿ ಚಾಲನೆಗೆ ಬಂದಿತ್ತು. ಇದಾದ ನಂತರ TDR ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕರಾಳ ದಂಧೆ ಬೃಹತ್ ಪ್ರಮಾಣದಲ್ಲಿ ಬೆಳೆದು, ಬಿಬಿಎಂಪಿ ಮತ್ತು ಬಿಡಿಎ ನ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಸುಮಾರು 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಗರಣ ನಡೆದಿದೆ ಎಂದು ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.
ಟಿಡಿಆರ್‌ ಹಗರಣ ಪ್ರಕರಣದ ವಿಚಾರ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ತನಿಖೆ ಹಾಗೂ ವಿಚಾರಣಾ ಹಂತದಲ್ಲಿದೆ. ಆದರೆ ಇದೀಗ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರಲ್ಲಿ ಜಿಬಿಎ ಅಧಿಕಾರಿಗಳು ಮತ್ತು ವಂಚಕರ ಪಾತ್ರ ಇದೆ ಎಂದು ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Continue Reading
Advertisement
Latest50 minutes ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest1 hour ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest1 hour ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest4 hours ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest4 hours ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest6 hours ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest6 hours ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest7 hours ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest24 hours ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest1 day ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌