Site icon Vistara News

Amrit Mahotsav | ಹರ್ ಘರ್ ತಿರಂಗಾ ಅಭಿಯಾನ; ನಟ ಕಿಚ್ಚ ಸುದೀಪ್‌ಗೆ ತ್ರಿವರ್ಣ ಧ್ವಜ ನೀಡಿದ ಕಟೀಲ್‌

ಕಿಚ್ಚ ಸುದೀಪ್‌ಗೆ

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ (Amrit Mahotsav) ಹಿನ್ನೆಲೆಯಲ್ಲಿ ದೇಶಾದ್ಯಂತ ನಡೆಯಲಿರುವ ʼಹರ್ ಘರ್ ತಿರಂಗಾʼ ಅಭಿಯಾನದ ಅಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖ್ಯಾತ ನಟ ಕಿಚ್ಚ ಸುದೀಪ್ ಅವರ ಮನೆಗೆ ಭಾನುವಾರ ತೆರಳಿ ತ್ರಿವರ್ಣ ಧ್ವಜ ನೀಡಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆ.3ರಿಂದ ಆ.15ರವರೆಗೆ ಹರ್ ಘರ್ ತಿರಂಗಾ ಅಭಿಯಾನ ನಡೆಸುತ್ತಿದೆ. ಹೀಗಾಗಿ ಬೆಂಗಳೂರು ದಕ್ಷಿಣ ಜಿಲ್ಲೆಯ ನಿವಾಸಿಗಳಿಗೆ ತ್ರಿವರ್ಣ ಧ್ವಜವನ್ನು ವಿತರಿಸಲಾಯಿತು. ಇದೇ ವೇಳೆ ನಟ ಕಿಚ್ಚ ಸುದೀಪ್‌ ಅವರಿಗೆ ಬಿಜೆಪಿ ನಾಯಕರು ತ್ರಿವರ್ಣ ಧ್ವಜ ನೀಡಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಬೆಂಬಲ ನೀಡುವಂತೆ ಕೋರಿದರು.

ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಜಿ.ವಿ.ರಾಜೇಶ್, ಶಾಸಕ ಸತೀಶ್ ರೆಡ್ಡಿ, ರಾಜ್ಯಸಭಾ ಸದಸ್ಯ ಜಗ್ಗೇಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಮಂಜುನಾಥ್ ಮತ್ತು ಇತರ ಜಿಲ್ಲಾ ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ | Amrit Mahotsav | ಹರ್‌ ಘರ್‌ ಗೀತೆಯಲ್ಲಿ ಕನ್ನಡಿಗರನ್ನು ಪ್ರತಿನಿಧಿಸಿದ ಕೆ. ಎಲ್‌ ರಾಹುಲ್‌

Exit mobile version