Site icon Vistara News

ಕೆಂಪೇಗೌಡರ ಪ್ರತಿಮೆ ಬಗ್ಗೆಯೂ ರಾಜಕೀಯ ನಿಂತಿಲ್ಲ: ಕೈ ನಾಯಕರ ವಿರುದ್ಧ ನಳಿನ್‌ ಕುಮಾರ್‌ ಕಟೀಲ್‌ ಕಿಡಿ

Nalin kumar Kateel

ಬೆಂಗಳೂರು: ಕಾಂಗ್ರೆಸ್‌ನ ಕೀಳುಮಟ್ಟದ ರಾಜಕಾರಣಕ್ಕೆ ಮತ್ತೊಂದು ಸಾಕ್ಷಿ ಎನ್ನುವ ಹಾಗೆ, ಕೆಂಪೇಗೌಡರ ಪ್ರತಿಮೆಯ ಬಗ್ಗೆಯೂ ರಾಜಕೀಯ ನಿಂತಿಲ್ಲ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್‌ ಕುಮಾರ್‌ ಕಿಡಿಕಾರಿದ್ದಾರೆ.

ಸರ್ಕಾರಿ ಹಣದಲ್ಲಿ ಕೆಂಪೇಗೌಡ ಪ್ರತಿಮೆ ನಿರ್ಮಾಣ ಮಾಡಿದ್ದೇ ಅಪರಾಧ ಎಂದು ಕಾಂಗ್ರೆಸ್ ಅಧ್ಯಕ್ಷ ಡಿಕೆಶಿ ಅವರು ಹೇಳಿಕೆ ನೀಡುತ್ತಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಇದು ಬರೀ ಗಿಮಿಕ್ ಎನ್ನುತ್ತಾರೆ. ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮೈಸೂರಿನಲ್ಲಿ 100 ಅಡಿ ಎತ್ತರದ ಟಿಪ್ಪು ಪ್ರತಿಮೆ ನಿರ್ಮಿಸುವುದಾಗಿ ಹೇಳುತ್ತಾರೆ.

ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮದ ಬಗ್ಗೆ ಇಷ್ಟು ವಿಷ ಕಾರುವ ಇವರಿಗೆ ಮೇಲುಕೋಟೆ ಅಯ್ಯಂಗಾರ್‌ ಹಾಗೂ ಕೊಡವರು ಸೇರಿ ಸಹಸ್ರಾರು ಹಿಂದೂಗಳ ಮಾರಣಹೋಮ ನಡೆಸಿದ ಟಿಪ್ಪು ಮಾತ್ರ ಮನೆ ದೇವರೇ? ಹಿಂದೂಗಳನ್ನು ಮತಾಂತರಗೊಳಿಸಿ, ಹೆಣ್ಣುಮಕ್ಕಳನ್ನು ಅತ್ಯಾಚಾರಗೊಳಿಸುತ್ತಿದ್ದ ಮತಾಂಧ ಅವರಿಗೆ ಮಾದರಿ ಎಂದಾದರೆ ಇವರ ಬೌದ್ಧಿಕ ದಾರಿದ್ರ್ಯಕ್ಕೆ ಏನೆನ್ನಬೇಕು? ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಿದ್ದಾರೆ.

ಇದನ್ನೂ ಓದಿ | Modi In Bengaluru | ದೇವೇಗೌಡರನ್ನು ಕರೆಯದೆ ರಾಜ್ಯ ಸರ್ಕಾರ ಸಣ್ಣತನ ತೋರಿದೆ ಎಂದ ಟಿ.ಎ.ಶರವಣ

Exit mobile version