Nanu Hindu | ದೇವರಿದ್ದಾನೆ, ಇಲ್ಲವೆನ್ನುವ ಇಬ್ಬರೂ ಹಿಂದುಗಳೇ: ಚಕ್ರವರ್ತಿ ಸೂಲಿಬೆಲೆ - Vistara News

ಕರ್ನಾಟಕ

Nanu Hindu | ದೇವರಿದ್ದಾನೆ, ಇಲ್ಲವೆನ್ನುವ ಇಬ್ಬರೂ ಹಿಂದುಗಳೇ: ಚಕ್ರವರ್ತಿ ಸೂಲಿಬೆಲೆ

ವೈಯಕ್ತಿಕವಾಗಿ, ಜಾತಿ ಹಿಡಿದು ಟೀಕೆ ಮಾಡಿದರೂ ಸುಮ್ಮನಿರುತ್ತೇನೆ. ಆದರೆ ಹಿಂದು ಧರ್ಮದ ಕುರಿತು ಮಾತನಾಡಿದರೆ ಸುಮ್ಮನಿರಲ್ಲ. ತಾಕತ್ತಿದ್ದರೆ ಬಹಿರಂಗ ಚರ್ಚೆಗೆ ಬನ್ನಿ ಎಂದು, ಹಿಂದು ಧರ್ಮದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸತೀಶ್‌ ಜಾರಕಿಹೊಳಿಗೆ ಚಕ್ರಚರ್ತಿ ಸೂಲಿಬೆಲೆ ಆಹ್ವಾನ ನೀಡಿದ್ದಾರೆ.

VISTARANEWS.COM


on

Nanu Hindu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕೋಡಿ: ಕೆಲ ಧರ್ಮಗಳಲ್ಲಿ ಬೇರೆ ಧರ್ಮದ ದೇವರ ಪೂಜೆ ಮಾಡಿದರೆ ತಲೆ ಕಡಿಯುತ್ತಾರೆ. ಆದರೆ ಹಿಂದು ಧರ್ಮದಲ್ಲಿ ಹಾಗೆ ಮಾಡಿದರೆ ಎಲ್ಲ ದೇವರು ಒಂದೇ, ತಲೆಕೆಡಿಸಿಕೊಳ್ಳಬೇಡ ಎನ್ನುತ್ತಾರೆ. ಹಿಂದು ಧರ್ಮಕ್ಕೆ(Nanu Hindu) ಒಂದು ಗ್ರಂಥ, ಸಂಸ್ಥಾಪಕರಿಲ್ಲ. ಆದರೆ, ಇದೊಂದು ವಿಜ್ಞಾನ, ವಿಜ್ಞಾನಕ್ಕೆ ಯಾರೂ ಸಂಸ್ಥಾಪಕರಿರಲ್ಲ. ದೇವರಿದ್ದಾನೆ ಎನ್ನುವವ, ದೇವರಿಲ್ಲ ಎನ್ನುವ ಇಬ್ಬರೂ ಹಿಂದುಗಳೇ ಎಂದು ಚಿಂತಕ, ಯುವಾ ಬ್ರಿಗೇಡ್‌ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದ ವಿದ್ಯಾವರ್ಧಕ ಸಂಘದ ಶಾಲಾ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ʼನಾನು ಹಿಂದುʼ ಸಮಾವೇಶದಲ್ಲಿ ಮಾತನಾಡಿದರು. ಅಂಬೇಡ್ಕರ್ ಸೇರಿ ಮಹಾನ್ ಪುರುಷರು ಯಾರೂ ಹಿಂದು ಧರ್ಮದ ಬಗ್ಗೆ ಮಾತನಾಡಲಿಲ್ಲ. ಅವರ ಫೋಟೊಗಳನ್ನು ಹಾಕಿ ಕೆಲವರು ಹಿಂದು ಧರ್ಮದ ಬಗ್ಗೆ ಮಾತನಾಡುತ್ತಾರೆ. ಯಾರೂ ಹಿಂದು ಸಮಾಜದ ಬಗ್ಗೆ ಕೀಳಾಗಿ ಮಾತನಾಡಿದರೋ ಅವರೇ ಈಗ ಹಣೆಯ ಮೇಲೆ ಪಟ್ಟೆ ಬಳಿದುಕೊಂಡು ಜನಿವಾರ ‌ಹಾಕಿಕೊಂಡು ತಿರುಗುತ್ತಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ | All are Hindu | ಭಾರತದಲ್ಲಿ ವಾಸಿಸುವ ಎಲ್ಲರೂ ಹಿಂದೂ, ಎಲ್ಲರ ಡಿಎನ್ಎ ಒಂದೇ: ಆರ್‌ಎಸ್ಎಸ್

ಹಿಂದು ಎನ್ನುವುದನ್ನು ಅಶ್ಲೀಲ ಎಂದು ಕರೆದಾಗ ಅದಕ್ಕೆ ತಕ್ಕ ಉತ್ತರ ಕೊಡಲೇಬೇಕಾಗಿತ್ತು. ನನ್ನ ಧರ್ಮ‌ ಮತ್ತು ತಾಯಿಯ ಬಗ್ಗೆ ಮಾತಾಡಿದವರ ಕ್ಷೇತ್ರಕ್ಕೆ ಹೋಗಬೇಕು ಎಂದು ಯಮಕನಮರಡಿಗೆ ಬಂದಿದ್ದೇನೆ. ಟಿವಿಗಳಲ್ಲಿ ಮೊದಲು ಜನ ಸೇರಿರಲಿಲ್ಲ ಎಂದು ಸುದ್ದಿ ಬಂತು. ಆದರೆ ನಾನು ಲೈವ್ ನೋಡಿದಾಗ ಸಾವಿರಾರು ಜನ ಸೇರಿದ್ದಾರೆ. ಯಾರು ಯಾರನ್ನು ಕೊಂಡುಕೊಂಡಿದ್ದಾರೆ ನನಗೆ ಗೊತ್ತಾಗಲಿಲ್ಲ ಎಂದು ಸತೀಶ್ ಜಾರಕಿಹೊಳಿ ವಿರುದ್ಧ ಪರೋಕ್ಷವಾಗಿ ಕಿಡಿ ಕಾರಿದರು.

Nanu hindu@belagavi

ನನ್ನನ್ನು ವೈಯಕ್ತಿಕವಾಗಿ, ಜಾತಿ ಹಿಡಿದು ಟೀಕೆ ಮಾಡಿದರೂ ಸುಮ್ಮನಿರುತ್ತೇನೆ. ಆದರೆ ಹಿಂದು ಧರ್ಮದ ಕುರಿತು ಮಾತನಾಡಿದರೆ ಸುಮ್ಮನಿರಲ್ಲ. ತಾಕತ್ತಿದ್ದರೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಬಹಿರಂಗ ಸವಾಲು ಹಾಕಿದ ಅವರು, ಅಂಬೇಡ್ಕರ್ ಹೆಸರನ್ನು ಹಾಕಿಕೊಂಡು ಓಡಾಡುವವರಿಗೆ ನಾನು ಪ್ರಶ್ನೆ ಮಾಡುತ್ತೇನೆ. ಡಿಕ್ಷನರಿ ನೋಡಿಕೊಂಡು ಮಾತಾಡುವ ಪುಣ್ಯಾತ್ಮರಿಗೆ ಯಾವ ಡಿಕ್ಷನರಿ ಎಂದು ಮರೆತು ಹೋಗಿದೆ. ಹಿಂದು ಸಮಾಜ ತಿರುಗಿಬಿದ್ದರೆ ಏನಾಗುತ್ತೆ ಎಂಬುವುದು ಯಮಕನಮರಡಿಯಲ್ಲಿ ಸಾಬೀತಾಗಿದೆ ಎಂದರು.

ಹಿಂದು ಸಮಾಜ ಹಲಾಲ್‌ ವಿಚಾರಕ್ಕೆ ಬೀದಿಗೆ ಬಂದು ನಿಲ್ಲುತ್ತದೆ. ಹಿಂದು ಎಂದರೆ ಅಶ್ಲೀಲವಾ? ಹಿಂದು ಎಂದರೆ ಬದುಕಿನ‌ ಶೈಲಿ ಎಂದು ಸುಪ್ರಿಂ ಕೋರ್ಟ್ ಹೇಳುತ್ತದೆ. ಧರ್ಮ ಮತ್ತು ಮತ ಬೇರೆ ಬೇರೆ, ನಾನು ಮತಾಂತರಗೊಂಡೆ ಎಂದು ಹೇಳುವುದು ಮತದಲ್ಲಿ(ರಿಲಿಜಿಯನ್) ಮಾತ್ರ. ಧರ್ಮದಲ್ಲಿ ಅದನ್ನು ಮಾಡಲು ಸಾಧ್ಯವೇ ಇಲ್ಲ. ಇದೇ ಬದುಕಿನ‌ ಶೈಲಿ, ನಮ್ಮ ಜನರನ್ನು ಮತಾಂತರ ಮಾಡಲು ಬಂದ ಕ್ರಿಶ್ಚಿಯನ್ನರೇ ಮತಾಂತರವಾದರು. ದೇವರಿದ್ದಾನೆ ಎನ್ನುವವ, ದೇವರಿಲ್ಲ ಎನ್ನುವವ ಇಬ್ಬರೂ ಹಿಂದುಗಳೇ ಎಂದು ಹೇಳಿದರು.

ಹಿಂದು ಧರ್ಮದ ಬಗ್ಗೆ ಮಾತನಾಡಿದ ಸತೀಶ ಜಾರಕಿಹೊಳಿಯನ್ನು ಕಾಂಗ್ರೆಸ್ ಉಚ್ಚಾಟನೆ ಮಾಡುತ್ತದಾ ಎಂದು ಪ್ರಶ್ನಿಸಿದ ಅವರು, 8 ರಿಂದ 10 ಸಾವಿರ ವರ್ಷಗಳಿಂದ ಅಲುಗಾಡದ ಧರ್ಮ, ಯಮಕನಮರಡಿಯಲ್ಲಿ ಯಾರೋ ಒಬ್ಬ ಏನೋ ಮಾತನಾಡುತ್ತಾರೆ ಎಂದು ಅಲುಗಾಡಲ್ಲ. ಹಿಂದು ಪದ ಪರ್ಷಿಯಾದಿಂದ ಬಂದಿದ್ದು ಎಂದು ಇವರು ಹೇಳುತ್ತಾರೆ. ಸಪ್ತಸಿಂಧೂ ರಾಷ್ಟ್ರ, ಏಳು ನದಿಗಳು ಪ್ರತಿನಿತ್ಯ ಆವಾಹನೆ ಮಾಡಿಕೊಂಡು ನಾವು ಸ್ನಾನ ಮಾಡುತ್ತೇವೆ. ಇಲ್ಲಿಂದಲೇ ಹೋಗಿ ಅಲ್ಲಿ ಹಪ್ತ ಎಂಬ ಪದ ಹಿಂದು ಎಂದಾಯಿತು. ನಿಮ್ಮ ಸಾಹುಕಾರ್‌ನನ್ನು ಟ್ರೋಲ್‌ ಮಾಡಿದಾಗ ನಾನು ಶಹಬ್ಬಾಷ್‌ ಅಂದುಕೊಳ್ಳುತ್ತೇನೆ. ಯಾಕೆಂದರೆ ಅವರಿಗೆ ನಾನು ಅಷ್ಟು ಡೆಂಜರ್ ಆಗಿ ಕಾಣಿಸುತ್ತೇನೆ ಎಂದು ಹೇಳಿದರು.

ಓಂಕಾರವನ್ನು ಶ್ರದ್ಧೆಯಿಂದ ಹೇಳಿದರೆ ನೀವು ಹಿಂದು ಎಂದು ನನ್ನ ಪೂರ್ವಜರು ಹೇಳಿದರು. ನೀವು ಯಾವುದೇ ಸ್ರೋತ್ರವನ್ನು ಹೇಳಿದರೂ ಓಂಕಾರ ಮಾತ್ರ ಇರುತ್ತದೆ. ಹಿಂದು ಧರ್ಮ ಯಾವತ್ತೂ ಹೇಡಿಗಳನ್ನು ಹುಟ್ಟಿಸಲಿಲ್ಲ. ತನ್ನ ಧರ್ಮವನ್ನು ರಕ್ಷಣೆ ಮಾಡುವ ಹಾಗೂ ಅಗತ್ಯ ಬಿದ್ದರೆ ಪ್ರಾಣ ತೆಗೆಯುವ ವೀರರನ್ನು ಹುಟ್ಟಿಸಿದೆ. ನಮ್ಮನ್ನು ಎದುರಿಸಲಾಗದ ಜನ ಡಾಕುಗಳು ಎಂದರು. ಜಗತ್ತಿನಲ್ಲಿ 8 ಕೋಟಿ ಹಿಂದುಗಳಲ್ಲಿ ಹತ್ಯೆ ಮಾಡಲಾಯಿತು. ಈ ಬಗ್ಗೆ ಪುಸ್ತಕಗಳಲ್ಲಿ ಉಲ್ಲೇಖವಾಗಿದೆ ಎಂದರು.

ಬಾಲಿವುಡ್‌ ನಟ ಸೈಫ್‌ ಅಲಿಖಾನ್ ಮಗನಿಗೆ ತೈಮೂರ್‌ ಎಂದು ಹೆಸರಿಟ್ಟಿದ್ದಾನೆ. ತೈಮೂರ್‌ ಎಂಬ ಒಬ್ಬ ರಾಜ ಹಿಂದು ತಲೆ ಕತ್ತರಿಸಿ, ಅದರಿಂದ ಬೆಟ್ಟ ಮಾಡಿದ್ದ. ಅಂತಹವನ ಹೆಸರನ್ನು ನಟ ತನ್ನ ಮಗನಿಗಿಟ್ಟಿದ್ದಾನೆ, ಇದಕ್ಕಿಂತ ದುರ್ದೈವ ಬೇಕಾ? ಎಂದು ಪ್ರಶ್ನಿಸಿದ ಅವರು, ನಾನು ಚಿಕ್ಕವನಿದ್ದಾಗ ಮಲವಿಸರ್ಜನೆಗೆ ಹೋಗಬೇಕಾರೆ ಲಂಡನ್‌ಗೆ ಹೋಗುತ್ತೇನೆ ಎನ್ನುತ್ತಿದ್ದೆ. ನಾನು ಕಾಲೇಜಿಗೆ ಹೋದಾಗ ಟಾಯ್ಲೆಟ್ ಮೇಲೆ ವೆಲ್‌ ಕಮ್ ಟೂ ಪಾಕಿಸ್ತಾನ ಅಂತ ಬರೆದಿದ್ದರು. ಇವರು ಇದನ್ನೂ ಡಿಕ್ಷನರಿಯಲ್ಲಿ ಲಂಡನ್‌ಗೆ ಮಲವಿಸರ್ಜನೆ ಎಂದು ಅರ್ಥ ಇದೆ. ಅದೇ ಡಿಕ್ಷನರಿಯಲ್ಲಿ ಟಾಯ್ಲೆಟ್‌ಗೆ ಪಾಕಿಸ್ಥಾನ ಎಂದು ಅರ್ಥ ಇದೆ ಅಂತ ಚರ್ಚೆಗೆ ಬಂದರೆ ಏನು ಮಾಡಲು ಆಗುತ್ತದೆ.
ಸತೀಶ್ ಹಿಂದು ಧರ್ಮವನ್ನು ಅರ್ಥೈಸಿಕೊಂಡ ಇರುವ ರೀತಿ ಹೀಗೆಯೇ ಎಂದು ಕುಟುಕಿದರು.

ಬೂಟನ್ನು ಪಾಲಿಷ್ ಮಾಡಿ ಬದುವುದು ಸ್ವಾಭಿಮಾನದ ಬದುಕು. ಆದರೆ ಬೂಟು ನೆಕ್ಕಿಕೊಂಡು ಬದುಕುವುದು ಬದುಕಲ್ಲ. ಸಂವಿಧಾನದ 370ನೇ ವಿಧಿಯನ್ನು ತಾಕತ್ ಇದ್ರೆ ತೆಗೆಯಿರಿ ಎಂದು ಸವಾಲು ಮಾಡುತ್ತಿದ್ದರೆ. ನಮ್ಮ ಪ್ರಧಾನಿಗಳು ಅದನ್ನು ರದ್ದುಗೊಳಿಸಿದರು. ಪ್ರತಿಯೊಂದು ಶಾಲಾ ಕಾಲೇಜುಗಳ ಮೇಲೆ ಅಂದು ತ್ರಿವರ್ಣ ಧ್ವಜ ಹಾರಾಡಿತು. ರಾಮಮಂದಿರ ಕೆಡವಿ ಬಾಬ್ರಿ ಮಸೀದಿ ಕಟ್ಡಿದ ಜಾಗದಲ್ಲಿಯೇ ಈಗ ರಾಮಮಂದಿರ ನಿರ್ಮಾಣವಾಗುತ್ತಿದೆ. ಹಿಂದುಗಳು ಈಗ ಜಾಗೃತರಾಗಿದ್ದಾರೆ. ಯಾರೂ ಹಿಂದು ಸಮಾಜವನ್ನು ಕೀಳಾಗಿ ಮಾತನಾಡಿದರೋ ಅವರು ಈಗ ಹಣೆಯ ಮೇಲೆ ಪಟ್ಟೆ ಬಳಿದುಕೊಂಡು ಜನಿವಾರ ‌ಹಾಕಿಕೊಂಡು ತಿರುಗುತ್ತಿದ್ದಾರೆ. ಹಿಂದುಗಳು ಜಾಗೃತರಾದರೆ ಕಾಂಗ್ರೆಸ್ ತನ್ನ ಕೋಟ್‌ ಮೇಲೆ ‌ಜನಿವಾರ ಹಾಕಿಕೊಂಡು ಓಡಾಡುತ್ತೆ ಎಂದು ಸಾವರ್ಕರ್ ಅಂದೇ ಹೇಳಿದ್ದರು. ಅದು ಸಹ ನಿಜವಾಗುತ್ತಿದೆ ಎಂದರು.

ಅಭಿನವ ಮಂಜುನಾಥ ಮಹಾಸ್ವಾಮೀಜಿ, ಹಾಲ ಮಹಾಸ್ವಾಮೀಜಿ, ಸಚಿವೆ ಶಶಿಕಲಾ‌ ಜೊಲ್ಲೆ, ಸಂಸದ ಅಣ್ಣಸಾಹೇಬ್ ಜೊಲ್ಲೆ, ಮಾಜಿ ಶಾಸಕ ಸಂಜಯ್ ಪಾಟೀಲ್, ಮಾಜಿ ಸಚಿವ ಶಶಿಕಾಂತ ನಾಯಿಕ, ಮಾರುತಿ ಅಷ್ಟಗಿ ಮತ್ತಿತರರರು ಉಪಸ್ಥಿತರಿದ್ದರು.

ವಿವಿಧ ಪುಸ್ತಕಗಳ ಬಿಡುಗಡೆ
ವೇದಿಕೆಯ ವಿವಿಧ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ನಾನು ಹಿಂದು, ಎಲ್ಲೆಲ್ಲೂ ಹಿಂದು ಸಂಸ್ಕೃತಿ, ಕನ್ನಡದ ಹಿಂದು ಸಾಮ್ರಾಜ್ಯ, ಮತಾಂಧ ಟಿಪ್ಪು, ಲವ್ ಜಿಹಾದ್, ದಿ ಕಾಶ್ಮೀರಿ ಫೈಲ್ಸ್ ಪುಸ್ತಕಗಳನ್ನು ಚಕ್ರವರ್ತಿ ಸೂಲಿಬೆಲೆ ಹಾಗೂ ಗಣ್ಯರು ಬಿಡುಗಡೆ ಮಾಡಿದರು. ಹಿಂದು ಧರ್ಮ ಇನ್ನು ಯಾವುದನ್ನೂ ಸಹಿದಲ್ಲ. ಓಟು ಹಾಕುವ ಮುನ್ನ ಹಿಂದು ಎಂದರೆ ಅಶ್ಲೀಲ ಎಂದು ಹೇಳಿರುವುದು ನೆನಪಿಗೆ ಬರಲಿ. ಓಟು ಹಾಕುವ ಮುನ್ನ ಹಿಂದು ಧರ್ಮಕ್ಕೆ ‌ಮಾಡಿದ ಅನ್ಯಾಯ ನೆನಪಿಗೆ ಬರಲಿ. ನಾನು ಯಾವತ್ತು ರಾಜ್ಯದಲ್ಲಿ ಚುನಾವಣೆ ಪ್ರಚಾರ ಮಾಡಿಲ್ಲ, ಈ ದೇಶಕ್ಮೆ ಒಬ್ಬ ಸಮರ್ಥ ಪ್ರಧಾನಿ ಬೇಕು ಎಂದು ನಿಮ್ಮ ಬಳಿ ಬಂದಿದ್ದೆ. ನಿಮ್ಮ ಬಳಿ ಬಂದು ಭಿಕ್ಷೆ ಕೇಳಿದ್ದೆ, ದಯವಿಟ್ಟು ಓಟು ಹಾಕುವ ಮುನ್ನ ಎಚ್ಚರ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು.

ಇದನ್ನೂ ಓದಿ | Azaan controversy | ಶಾಲಾ ಕ್ರೀಡಾಕೂಟ ನೃತ್ಯದಲ್ಲಿ ಹಿಂದು ಮಕ್ಕಳಿಂದ ಆಜಾನ್‌; ವ್ಯಾಪಕ ಆಕ್ರೋಶ, ಪ್ರತಿಭಟನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

KSRTC Bus : ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ

KSRTC Bus : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಎಂಜಲು ಉಗುಳುವ ಬರದಲ್ಲಿ ಕಿಟಿಕಿಯ ಸಣ್ಣ ಸಂದಿಯೊಳಗೆ ತಲೆ ಹಾಕಿ ಪರದಾಡಿದ ಘಟನೆ ನಡೆದಿದೆ. ಮತ್ತೊಂದು ಕಡೆ ಕೆಎಸ್‌ಆರ್‌ಟಿಸಿ ಬಸ್‌ ಸಿಬ್ಬಂದಿ ಸೈಡ್‌ ಬಿಡಲಿಲ್ಲ ಎಂದು ಪ್ರವಾಸಿಗರು ಹಲ್ಲೆ ನಡೆಸಿದ್ದಾರೆ.

VISTARANEWS.COM


on

By

KSRTC BUS Woman locks in window of KSRTC bus after going to spit
Koo

ಬೆಂಗಳೂರು/ಉಡುಪಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ (KSRTC Bus) ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ತಲೆಯು ಲಾಕ್‌ ಆದ ಘಟನೆ ನಡೆದಿದೆ. ಕಿಟಿಕಿಯಲ್ಲಿ ತಲೆ ಸಿಕ್ಕಿಸಿಕೊಂಡ ಪರಿಣಾಮ ಮಹಿಳೆ ಕೆಲಕಾಲ ಪರದಾಡಬೇಕಾಯಿತು.

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಎಂಜಲು ಉಗುಳಲು ಬಸ್‌ನ ಕಿಟಿಕಿಯ ಸಣ್ಣ ಸಂದಿಯೊಳಗೆ ತಲೆಯನ್ನು ಹೊರಹಾಕಿದ್ದರು. ಹೀಗೆ ಹೊರ ಹಾಕಿದ ತಲೆಯು ವಾಪಸ್‌ ಹಿಂದಕ್ಕೆ ಬಾರದೇ ಅಲ್ಲೆ ಲಾಕ್‌ ಆಗಿತ್ತು. ಕಾರಣ ಕಿಟಕಿಯ ಸಣ್ಣ ಜಾಗಕ್ಕೆ ನುಗ್ಗಿದ ಪರಿಣಾಮ ಅರ್ಧ ಗಂಟೆಗೂ ಹೆಚ್ಚು ಕಾಲ ತಲೆ ಲಾಕ್ ಆಗಿತ್ತು.

ಈ ವೇಳೆ ಮಹಿಳೆಯ ಪರದಾಟ ಹಾಗೂ ಕೂಗಾಟ ಕಂಡು ಸಹ ಪ್ರಯಾಣಿಕರು ಸಹಾಯಕ್ಕೆ ಧಾವಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಬಳಿಕ ಮಹಿಳೆ ತಲೆ ಲಾಕ್‌ ಆಗಿರುವುದು ಗಮನಕ್ಕೆ ಬಂದಾಕ್ಷಣ ಕೆಎಸ್‌ಆರ್‌ಟಿಸಿ ಬಸ್ಸಿನ ಚಾಲಕ ಹಾಗೂ ನಿರ್ವಾಹಕರು ಬಸ್ ನಿಲ್ಲಿಸಿದ್ದಾರೆ. ಬಳಿಕ 15 ನಿಮಿಷಗಳ ಕಾರ್ಯಾಚರಣೆ ಮಾಡಿ, ಜಾಗರೂಕತೆಯಿಂದ ಮಹಿಳೆಯ ತಲೆಯನ್ನು ಕಿಟಿಕಿಯಿಂದ ಬಿಡಿಸಿ, ರಕ್ಷಿಸಿದ್ದಾರೆ.

ಇತ್ತ ಮಹಿಳೆಯು ಬದುಕಿತು ಬಡ ಜೀವ ಎಂಬಂತೆ ತಲೆಯನ್ನು ಒಳಗೆ ಎಳೆದುಕೊಂಡಿದ್ದಾರೆ. ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಗೆ ಯಾಕ್ ಬೇಕಿತ್ತು ಈ ಅವಾಂತರ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Road Accident : ಮೈಸೂರು- ಬೆಂಗಳೂರಲ್ಲಿ ಮೂವರ ಪ್ರಾಣ ಕಸಿದ ಮೂರು ಪ್ರತ್ಯೇಕ ಅಪಘಾತ

ಉಡುಪಿಯಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲೆ ಹಲ್ಲೆ

ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿಯ ಮೇಲೆ ಪ್ರವಾಸಿಗರು ಹಲ್ಲೆ ನಡೆಸಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ ಆಗುಂಬೆಯಿಂದ ಹೆಬ್ರಿಗೆ ಹೊರಟಿತ್ತು. ಈ ವೇಳೆ ಬಸ್ ಹಿಂದೆ ಇದ್ದ ಪ್ರವಾಸಿಗರ ಕಾರಿಗೆ ಸೈಡ್ ನೀಡಲಿಲ್ಲ ಎನ್ನುವ ಆರೋಪವಿದೆ. ಹೀಗಾಗಿ ಗಾಟಿಯ ಮಧ್ಯೆ ಬಸ್‌ಗೆ ಅಡ್ಡಹಾಕಿ ನಿರ್ವಾಹಕ ಮತ್ತು ಚಾಲಕನಿಗೆ ಪ್ರವಾಸಿಗರು ಹಲ್ಲೆ ನಡೆಸಿದ್ದಾರೆ. ಈ ಗಲಾಟೆಯಿಂದಾಗಿ ಘಾಟಿಯಲ್ಲಿ ಕೆಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Mysore News: ಮೈಸೂರಿನಲ್ಲಿ ಪಾಲಿಕೆಯಿಂದ ನಿಷೇಧಿತ ಪ್ಲಾಸ್ಟಿಕ್‌ ವಶ; 1.61 ಲಕ್ಷ ರೂ. ದಂಡ

Mysore News: ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಗರದ ನಾನಾ ಕಡೆ ದಾಳಿ ನಡೆಸಿ ಅಪಾರ ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್‌ ವಶಪಡಿಸಿಕೊಂಡು ದಂಡ ವಿಧಿಸಿದ್ದಾರೆ. ಪಾಲಿಕೆಯ ಆಯುಕ್ತರ ನೇತೃತ್ವದಲ್ಲಿ ನಗರದ 9 ವಲಯ ಕಚೇರಿ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಸಿ, ಸುಮಾರು 1515 ಕೆಜಿ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, 1.61 ಲಕ್ಷ ರೂ. ದಂಡ ವಸೂಲಿ ಮಾಡಿದೆ.

VISTARANEWS.COM


on

banned plastic seized by corporation in Mysore
Koo

ಮೈಸೂರು: ನಗರದ ನಾನಾ ಕಡೆ ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ, ಅಪಾರ ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್‌ ವಶಪಡಿಸಿಕೊಂಡು ದಂಡ (Mysore News) ವಿಧಿಸಿದ್ದಾರೆ.

ಪಾಲಿಕೆಯ ಆಯುಕ್ತರ ನೇತೃತ್ವದಲ್ಲಿ ನಗರದ 9 ವಲಯ ಕಚೇರಿ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಸಿ, ಸುಮಾರು 1515 ಕೆಜಿ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, 1.61 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.

ಇದನ್ನೂ ಓದಿ: RCB vs CSK: ವಾಹನ ಸವಾರರೇ ಗಮನಿಸಿ, ನಾಳೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

ಸೂಕ್ತ ಮಾಹಿತಿಯ ಮೇರೆಗೆ ಆಯಕ್ತರ ಆದೇಶದಂತೆ ನಗರದ ಧನ್ವಂತ್ರಿ ರಸ್ತೆಯಲ್ಲಿರುವ, ಮಲ್ಲೇಶ್‌ ಎಂಬುವವರಿಗೆ ಸೇರಿದ ಧನ್ವಂತ್ರಿ ಎಂಟರ್‌ಪ್ರೈಸಸ್‌ ಗೋದಾಮಿಗೆ ವಲಯ ಆಯುಕ್ತರ ನೇತೃತ್ವದಲ್ಲಿ ದಾಳಿ ನಡೆಸಿ, ಗೋದಾಮಿನಲ್ಲಿ ಸಂಗ್ರಹಿಸಿದ್ದ ನಿಷೇಧಿತ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡು 25 ಸಾವಿರ ರೂ ದಂಡ ವಿಧಿಸಿದ್ದಾರೆ.

ನಿಗದಿತ ಸ್ಥಳದಲ್ಲಿ ಕಟ್ಟಡ ತ್ಯಾಜ್ಯ ವಿಲೇವಾರಿ ಮಾಡಿ

ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ, ದುರಸ್ತಿ ಮತ್ತು ತೆರವುಗೊಳಿಸುವಿಕೆಯಿಂದ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಅನೇಕ ಕಡೆ ಸಾರ್ವಜನಿಕರು ರಸ್ತೆ ಬದಿಯಲ್ಲಿ, ಖಾಲಿ ನಿವೇಶನಗಳಲ್ಲಿ ಹಾಕುತ್ತಿರುವುದನ್ನು ನಿಯಂತ್ರಿಸಲು ಪಾಲಿಕೆಯು ಮೈಸೂರು ನಗರದ ಹೊರವಲಯದಲ್ಲಿನ ಸಿ.ಎ.05, ಹಂಚ್ಯಾ-ಸಾತಗಳ್ಳಿ `ಎ’ ವಲಯದಲ್ಲಿ ಖಾಲಿ ಪ್ರದೇಶವನ್ನು ಕಟ್ಟಡ ತ್ಯಾಜ್ಯದ ವಿಲೇವಾರಿಗೆಂದು ಗುರುತಿಸಿದೆ.

ಇದನ್ನೂ ಓದಿ: Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

ಮುಂದಿನ ದಿನಗಳಲ್ಲಿ ಸಾರ್ವಜನಿಕರು ಹಾಗೂ ಖಾಸಗಿ ವ್ಯಕ್ತಿಗಳು ನಗರ ಪಾಲಿಕೆಯಿಂದ ನಿಗದಿಗೊಳಿಸಿರುವ ಸ್ಥಳದಲ್ಲೇ ಕಡ್ಡಾಯವಾಗಿ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡಬೇಕೆಂದು ಸೂಚಿಸಲಾಗಿದೆ. ಒಂದು ವೇಳೆ ನಗರ ಪ್ರದೇಶದ ಇತರೆ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಕಂಡುಬoದಲ್ಲಿ ಸಂಬoಧಪಟ್ಟ ಕಟ್ಟಡದ ಮಾಲೀಕರಿಗೆ ಮತ್ತು ವಾಹನದ ಮಾಲೀಕರಿಗೆ ಭಾರೀ ಮೊತ್ತದ ದಂಡ ವಿಧಿಸುವುದಲ್ಲದೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Continue Reading

ಕ್ರೀಡೆ

RCB vs CSK: ವಾಹನ ಸವಾರರೇ ಗಮನಿಸಿ, ನಾಳೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

RCB vs CSK: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತ್ಯಾಧುನಿಕ ಸಬ್ ಏರ್ ಸಿಸ್ಟಂ ಹೊಂದಿರುವ ಕಾರಣ. ಮಳೆ ಬಂದರೂ ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು. ಈ ಕಾರಣದಿಂದಾಗಿ ಬೆಂಗಳೂರಿನಲ್ಲಿ ಮಳೆ ಬಂದರೂ ಸೀಮಿತ ಓವರ್​ಗಳ ಪಂದ್ಯವನ್ನು ನಿರೀಕ್ಷಿಸಬಹುದು.

VISTARANEWS.COM


on

RCB vs CSK
Koo

ಬೆಂಗಳೂರು: ಕನ್ನಡಿಗರ ನೆಚ್ಚಿನ ತಂಡವಾದ ಆರ್​ಸಿಬಿ(Royal Challengers Bengaluru) ನಾಳೆ (ಮೇ​ 18) ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (chinnaswamy stadium) ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ವಿರುದ್ಧ ಕಣಕ್ಕಿಳಿಯಲಿದೆ. ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಿಲಾಗಿದ್ದು ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಪೂರ್ಣವಾಗಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಶನಿವಾರ ಮಧ್ಯಾಹ್ನ 3.00 ಗಂಟೆಯಿಂದ ರಾತ್ರಿ 11.00ರವರೆಗೆ ಈ ವ್ಯತ್ಯಾಸಗಳು ಜಾರಿಯಲ್ಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಇಲ್ಲಿ ಪಾರ್ಕಿಂಗ್​ ನಿಷೇಧ


ನಗರದ ಕ್ರೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆಯಲ್ಲಿ ಪಾರ್ಕಿಂಗ್​ ನಿಷೇಧ ಮಾಡಲಾಗಿದೆ.

ಎಲ್ಲಿ ಪಾರ್ಕಿಂಗ್​ ಮಾಡಬಹುದು?


ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಸ್ ಕೆ.ಜಿ.ಐ.ಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ, (ಕಬ್ಬನ್‌ಪಾರ್ಕ್ ಒಳಭಾಗ) ಈ ಪ್ರದೇಶದಲ್ಲಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ವಿಶೇಷ ಮೆಟ್ರೋ ಸೇವೆ

ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿ ಮೆಟ್ರೋ ರೈಲು ವಿಶೇಷ ಓಡಾಟಕ್ಕೆ ಅನುಮತಿ ನೀಡಿವೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ. ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

ಇದನ್ನೂ ಓದಿ IPL Ticket Scam: ಆನ್​ಲೈನ್​ ಟಿಕೆಟ್​ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್​ಸಿಬಿ ಅಭಿಮಾನಿ

ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ.

ಎಂದಿನಂತೆ, ಕ್ಯೂಆರ್‌ ( QR) ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಎನ್‌ಸಿಎಂಸಿ (NCMC) ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ.

Continue Reading

ಕ್ರೈಂ

Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

Prajwal Revanna Case: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ವಿಡಿಯೊ ವೈರಲ್‌ ಮಾಡಿದವರ ಕುರಿತು ಸಾಕ್ಷ್ಯ ಬಿಡುಗಡೆ ಮಾಡುತ್ತೇನೆ ಎನ್ನುತ್ತಿದ್ದ ವಕೀಲ ದೇವರಾಜೇಗೌಡ ಅವರನ್ನು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಬಂಧನ ಮಾಡಲಾಗಿತ್ತು. ಈ ಸಂಬಂಧ ಮೇ 14 ರಂದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಹೊಳೆನರಸೀಪುರ ನಗರ ಪೊಲೀಸರು, ಜೆಎಂಎಫ್‌ಸಿ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಹೀಗಾಗಿ ಗುರುವಾರವೂ ಒಂದು ದಿನ ಅವಧಿ ವಿಸ್ತರಣೆ ಮಾಡಿ ಕೋರ್ಟ್‌ ಆದೇಶಿಸಿತ್ತು. ಅಲ್ಲದೆ, ಶುಕ್ರವಾರ (ಮೇ 17) ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸೂಚಿಸಿತ್ತು. ಇಂದು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

VISTARANEWS.COM


on

Prajwal Revanna Case Lawyer Devarajegowda sent to judicial custody End of police custody
Koo

ಹಾಸನ: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ (physical Abuse) ಕೇಸ್‌ ಆರೋಪಿ ವಕೀಲ ದೇವರಾಜೇಗೌಡ (Devarajegowda) ಅವರ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಮೇ 14 ರಂದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಹೊಳೆನರಸೀಪುರ ನಗರ ಪೊಲೀಸರು, ಗುರುವಾರವೂ ಒಂದು ದಿನ ಕಸ್ಟಡಿಗೆ ಪಡೆದುಕೊಂಡಿದ್ದರು. ಶುಕ್ರವಾರ ಕೋರ್ಟ್‌ ಮುಂದೆ ಹಾಜರುಪಡಿಸಿದ ಹಿನ್ನೆಲೆಯಲ್ಲಿ ಅವರಿಗೆ ನ್ಯಾಯಾಂಗ ಬಂಧನವಿರಿಸಿ ಆದೇಶಿಸಲಾಗಿದೆ. ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ಸಾಕ್ಷಿ ಬಿಡುಗಡೆ ಮುಂದಾಗಿದ್ದ ದೇವರಾಜೇಗೌಡ ಅವರೀಗ ಇದಕ್ಕೆ ಸಂಬಂಧಪಟ್ಟಂತೆ ಬೇರೆ ಕೇಸ್‌ನಲ್ಲಿ ಲಾಕ್‌ ಆದಂತೆ ಆಗಿದೆ.

ಒಟ್ಟು ನಾಲ್ಕು ದಿನ ಪೊಲೀಸ್ ಕಸ್ಟಡಿಯಲ್ಲಿದ್ದ ದೇವರಾಜೇಗೌಡ ಅವರು ಈಗ ಮತ್ತೆ ನ್ಯಾಯಾಂಗ ಬಂಧನಕ್ಕೊಳಪಟ್ಟಿದ್ದಾರೆ. ದೇವರಾಜೇಗೌಡ ಪರ ವಕೀಲರು ಇಂದು ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ವಿಡಿಯೊ ವೈರಲ್‌ (video viral) ಮಾಡಿದವರ ಕುರಿತು ಸಾಕ್ಷ್ಯ ಬಿಡುಗಡೆ ಮಾಡುತ್ತೇನೆ ಎನ್ನುತ್ತಿದ್ದ ವಕೀಲ ದೇವರಾಜೇಗೌಡ ಅವರನ್ನು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಬಂಧನ ಮಾಡಲಾಗಿತ್ತು. ಈ ಸಂಬಂಧ ಮೇ 14 ರಂದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಹೊಳೆನರಸೀಪುರ ನಗರ ಪೊಲೀಸರು, ಜೆಎಂಎಫ್‌ಸಿ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಹೀಗಾಗಿ ಗುರುವಾರವೂ ಒಂದು ದಿನ ಅವಧಿ ವಿಸ್ತರಣೆ ಮಾಡಿ ಕೋರ್ಟ್‌ ಆದೇಶಿಸಿತ್ತು. ಅಲ್ಲದೆ, ಶುಕ್ರವಾರ (ಮೇ 17) ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸೂಚಿಸಿತ್ತು. ಇಂದು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

ದೇವರಾಜೇಗೌಡ ಮೇ 11ರಂದು ಬಂಧನಕ್ಕೆ ಒಳಗಾಗಿದ್ದರು. ಇವರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪಗಳನ್ನು ಹೊರಿಸಲಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಅವರನ್ನು ಕಸ್ಟಡಿಗೆ ಪಡೆದುಕೊಂಡಿದ್ದರು. ಹೊಳೆನರಸೀಪುರ, ಹಾಸನ ಸೇರಿ ಇತರ ಅಗತ್ಯ ಸ್ಥಳಗಳಿಗೆ ಕರೆದೊಯ್ದು ವಿಚಾರಣೆಯನ್ನು ಕೈಗೊಂಡಿದ್ದರು.

ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದ ದೇವರಾಜೇಗೌಡ

ವಕೀಲ ದೇವರಾಜೇಗೌಡ ಬಂಧನವಾಗಿರುವುದು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಾದರೂ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆಗಿನ ಮಾತುಕತೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಸಾಕ್ಷ್ಯಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಆದರೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: HD Revanna: ಬಸವನಗುಡಿ ನಿವಾಸದಿಂದ ದೂರವೇ ಉಳಿದ ಎಚ್‌ ಡಿ ರೇವಣ್ಣ; ಜ್ಯೋತಿಷಿಗಳ ಕಟ್ಟೆಚ್ಚರ?

ಪತಿಯು ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಮಹಿಳೆಯೊಬ್ಬರು ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪ ದೇವರಾಜೇಗೌಡ ವಿರುದ್ಧ ಕೇಳಿ ಬಂದಿದೆ.

Continue Reading
Advertisement
Bomb Blast
ದೇಶ2 mins ago

Bomb Blast: ಚೆಂಡೆಂದು ಭಾವಿಸಿ ಬಾಂಬ್‌ ಎತ್ತಿಕೊಂಡ ಬಾಲಕ; ಭೀಕರ ಸ್ಫೋಟಕ್ಕೆ ಮೌಲಾನಾ ಸಾವು

KSRTC BUS Woman locks in window of KSRTC bus after going to spit
ಬೆಂಗಳೂರು4 mins ago

KSRTC Bus : ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ

banned plastic seized by corporation in Mysore
ಮೈಸೂರು7 mins ago

Mysore News: ಮೈಸೂರಿನಲ್ಲಿ ಪಾಲಿಕೆಯಿಂದ ನಿಷೇಧಿತ ಪ್ಲಾಸ್ಟಿಕ್‌ ವಶ; 1.61 ಲಕ್ಷ ರೂ. ದಂಡ

RCB vs CSK
ಕ್ರೀಡೆ29 mins ago

RCB vs CSK: ವಾಹನ ಸವಾರರೇ ಗಮನಿಸಿ, ನಾಳೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

Amith Shah lok sabha election 2024
ಪ್ರಮುಖ ಸುದ್ದಿ47 mins ago

Lok Sabha Election 2024: 272 ಸೀಟು ಗೆಲ್ಲದೇ ಹೋದರೆ ಬಿಜೆಪಿಯ ಪ್ಲ್ಯಾನ್ ಬಿ ಏನು? ಅಮಿತ್ ಶಾ ಉತ್ತರ ಹೀಗಿದೆ

PM Narendra Modi
ದೇಶ53 mins ago

PM Narendra Modi: ಬುಲ್ಡೋಜರ್‌ ಹೇಗೆ ಬಳಸಬೇಕೆಂಬುದನ್ನು ಯೋಗಿಯಿಂದ ಕಲಿಯಬೇಕು: ಪ್ರಧಾನಿ ಮೋದಿ

Raveena tandon Saree fashion magic in Jayanthi Ballal designer
ಫ್ಯಾಷನ್53 mins ago

Raveena tandon Saree fashion: ಜಯಂತಿ ಬಲ್ಲಾಳ್‌ ಡಿಸೈನರ್‌ ಸೀರೆಯಲ್ಲಿ ನಟಿ ರವೀನಾ ಟಂಡನ್‌ ಜಾದೂ!

Prajwal Revanna Case Lawyer Devarajegowda sent to judicial custody End of police custody
ಕ್ರೈಂ2 hours ago

Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

RCB vs CSK
ಕ್ರೀಡೆ2 hours ago

RCB vs CSK: ನಾಳಿನ ಪಂದ್ಯಕ್ಕೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ಆರ್​ಸಿಬಿ ಆಟಗಾರರು; ವಿಡಿಯೊ ವೈರಲ್​

Kannada New Movie The judgement Trailer Out Kannada
ಸ್ಯಾಂಡಲ್ ವುಡ್2 hours ago

Kannada New Movie: ಕುತೂಹಲ ಮೂಡಿಸಿದೆ ರವಿಚಂದ್ರನ್ ಅಭಿನಯದ ‘ದ ಜಡ್ಜ್ ಮೆಂಟ್’ ಟ್ರೈಲರ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ9 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ23 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌