Site icon Vistara News

Tirupati Temple: ತಿರುಪತಿ ತಿಮ್ಮಪ್ಪನಿಗೆ ಚಿನ್ನದ ಶಂಖ, ಆಮೆ ವಿಗ್ರಹವನ್ನು ನೀಡಿದ ನಾರಾಯಣಮೂರ್ತಿ ದಂಪತಿ

NR Narayana Murthy couple at tirupayi temple

ತಿರುಪತಿ: ಇನ್ಫೋಸಿಸ್ ಸಂಸ್ಥೆ ಸಹ ಸಂಸ್ಥಾಪಕ ಎನ್‌.ಆರ್. ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ತಿರುಪತಿ‌ ವೆಂಕಟೇಶ್ವರಸ್ವಾಮಿಗೆ (Tirupati Temple) ಬಂಗಾರದ ಶಂಖ ಹಾಗೂ ಆಮೆ ವಿಗ್ರಹ ಕಾಣಿಕೆಯಾಗಿ ನೀಡಿದ್ದಾರೆ.

ಇನ್ಫೋಸಿಸ್ ಫೌಂಡೇಶನ್ ಮೂಲಕ ಸುಧಾಮೂರ್ತಿ ಅವರು ಸಾಕಷ್ಟು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ನಾರಾಯಣಮೂರ್ತಿ ದಂಪತಿ ಮೊದಲಿನಿಂದಲೂ ಸರಳ ಜೀವನ ನಡೆಸುತ್ತಾ ಅನೇಕರಿಗೆ ಮಾದರಿಯಾಗಿದ್ದಾರೆ. ಅವರ ದಾಂಪತ್ಯ ಜೀವನಕ್ಕೆ ಈಗ 45 ವರ್ಷ. ಹೀಗಾಗಿ ಅವರ ಬಳಿಯಿದ್ದ ಕೆಲವು ಆಭರಣಗಳಿಂದ ಈ ಬಂಗಾರದ ಶಂಖ ಹಾಗೂ ಆಮೆಯನ್ನು ಮಾಡಿಸಿ ತಿಮ್ಮಪ್ಪನಿಗೆ ಕಾಣಿಕೆಯಾಗಿ ನೀಡಿದ್ದಾರೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ಮುಳುಗಿದ ದೆಹಲಿ, ಆಪ್-ಬಿಜೆಪಿ ಪಕ್ಷಗಳು ರಾಜಕೀಯ ಕಿತ್ತಾಟದಿಂದ ಮೇಲೇಳಲಿ

Exit mobile version