National Youth Festival : ರಾಷ್ಟ್ರೀಯ ಯುವಜನೋತ್ಸವಕ್ಕೆ ಕ್ಷಣಗಣನೆ; ಇಮ್ಮಡಿಗೊಂಡ ಯುವೋತ್ಸಾಹ! Vistara News

ಕರ್ನಾಟಕ

National Youth Festival : ರಾಷ್ಟ್ರೀಯ ಯುವಜನೋತ್ಸವಕ್ಕೆ ಕ್ಷಣಗಣನೆ; ಇಮ್ಮಡಿಗೊಂಡ ಯುವೋತ್ಸಾಹ!

National Youth Festival : ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಯುವ ಸಮೂಹದ ಉತ್ಸಾಹವು ಇಮ್ಮಡಿಗೊಂಡಿದೆ. ಆಯಾ ರಾಜ್ಯಗಳ ಯುವ ಜನರು ತಮ್ಮ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು ಗಮನ ಸೆಳೆಯುತ್ತಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ನಗರದ ಕೇಶ್ವಾಪುರದ ರೈಲ್ವೆ ಮೈದಾನದಲ್ಲಿ ಗುರುವಾರ (ಜ.12) ಹಮ್ಮಿಕೊಂಡಿರುವ ʼರಾಷ್ಟ್ರೀಯ ಯುವಜನೋತ್ಸವʼಕ್ಕೆ (National Youth Festival) ಕ್ಷಣಗಣನೆ ಆರಂಭವಾಗಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂಜೆ 4 ಗಂಟೆಗೆ ಚಾಲನೆ ನೀಡಲಿದ್ದು, ಏರ್ಪೋರ್ಟ್‌ಗೆ ಎಸ್‌ಪಿಜಿ ಕಮಾಂಡೋ ವಾಹನಗಳು ಆಗಮಿಸಿವೆ. ಇನ್ನು ಎರಡು ದಿನಗಳಿಂದ ಹೊಸೂರ್ ಕ್ರಾಸ್‌ನಲ್ಲಿ ನಿಂತಿದ್ದ ಅಪರಿಚಿತ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತ ಯುವಜನೋತ್ಸವಕ್ಕೆ ಆಗಮಿಸುತ್ತಿರುವ ಯುವಜನತೆಯ ಜೋಶ್‌ ಹೆಚ್ಚಾಗಿದೆ. ಬಿಜೆಪಿ ಕಾರ್ಯಕರ್ತರ ಉತ್ಸಾಹವೂ ಈ ವೇಳೆ ಇಮ್ಮಡಿಗೊಂಡಿದೆ.

ಹುಬ್ಬಳ್ಳಿ ಏರ್ಪೋರ್ಟ್‌ಗೆ ಎರಡು ಗಂಟೆ ಮುಂಚಿತವಾಗಿಯೇ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆ ವಾಹನ ಆಗಮಿಸಿದೆ. ವಿಮಾನ ನಿಲ್ದಾಣದ ಸುತ್ತ ಪರಿಶೀಲನೆ ನಡೆಸಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಅಲ್ಲದೆ, ಮೋದಿ ಬರುವ ಮಾರ್ಗದುದ್ದಕ್ಕೂ ಪೊಲೀಸರು, ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ದೇಶದ ಯುವ ಶಕ್ತಿ ಮತ್ತು ವಿವಿಧ ರಾಜ್ಯದ ಸಾಂಸ್ಕೃತಿಕ ವೈಭವ ಅನಾವರಣಗೊಳ್ಳಲಿದ್ದು, 28 ರಾಜ್ಯಗಳ, 6 ಕೇಂದ್ರಾಡಳಿತ ಪ್ರದೇಶಗಳ ಯುವ ಪ್ರತಿನಿಧಿಗಳಿಂದ ವಾಕಥಾನ್ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಸ್ಥಳದತ್ತ ಕಲಾವಿದರು ಆಗಮಿಸುತ್ತಿದ್ದಾರೆ. ಕಲಾ ಪ್ರದರ್ಶನಕ್ಕೆ ಸಜ್ಜಾಗಿ ನಿಂತಿವೆ. ‌

ಇದನ್ನೂ ಓದಿ | ಯೋಧನ ಎದೆಯಿಂದ ಸಜೀವ ಗ್ರೆನೇಡ್​ ಹೊರತೆಗೆದ ಸಾಹಸಿ ವೈದ್ಯ; ಯಾವುದೇ ಕ್ಷಣದಲ್ಲಾದರೂ ಸ್ಫೋಟಿಸುವ ಅಪಾಯವಿತ್ತು!

ಇನ್ನು ಕಾರ್ಯಕ್ರಮಕ್ಕಾಗಿ ದೇಶದ ನಾನಾ ಭಾಗಗಳಿಂದ ಹಲವಾರು ಕಲಾವಿದರು ಆಗಮಿಸುತ್ತಿದ್ದು, ಧಾರವಾಡಕ್ಕೆ ಬಂದಿಳಿಯುವವರಿಗಾಗಿ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಅವರೆಲ್ಲರಿಗೂ ಮಧ್ಯಾಹ್ನ ೧೨ ಗಂಟೆಯಿಂದಲೇ ಹುಬ್ಬಳ್ಳಿಗೆ ರೈಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸುಮಾರು 7 ಸಾವಿರ ಯುವಕ-ಯುವತಿಯರು ಧಾರವಾಡದಿಂದ ಹುಬ್ಬಳ್ಳಿಗೆ ಪ್ರಯಾಣಿಸಿದ್ದಾರೆ. ಧಾರವಾಡದ ರೈಲ್ವೆ ನಿಲ್ದಾಣದ ಬಳಿ ದೇಶದ ನಾನಾ ಭಾಗಗಳಿಂದ ಅವರದೇ ಉಡುಗೆಗಳನ್ನು ಧರಿಸಿರುವ ಯುವಕರ ಗುಂಪುಗಳು ಮಿಂಚುತ್ತಿವೆ.

ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ನರೇಂದ್ರ ಮೋದಿ

ವಿವೇಕಾನಂದರ ಫೋಟೊಗಳೇ ಕಾಣುತ್ತಿಲ್ಲ
ಸ್ವಾಮಿ ವಿವೇಕಾನಂದರ 160ನೇ ಜನ್ಮದಿನದ ಹಿನ್ನೆಲೆಯಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಬಿಂದುವನ್ನೇ ರಾಜ್ಯ ಸರ್ಕಾರ ಕೈಬಿಟ್ಟಿದೆ ಎಂಬ ಆರೋಪ ಕೇಳಿಬಂದಿದೆ. ರಸ್ತೆಯುದ್ದಕ್ಕೂ ರಾಜಕೀಯ ನಾಯಕರ ಫ್ಲೆಕ್ಸ್‌ಗಳನ್ನು ಹಾಕಲಾಗಿದ್ದು, ಎಲ್ಲಿಯೂ ಸಹ ಸ್ವಾಮಿ ವಿವೇಕಾನಂದರ‌ ಭಾವಚಿತ್ರವನ್ನು ಹಾಕಲಾಗಿಲ್ಲ ಎಂದು ಆರೋಪ ಮಾಡಲಾಗಿದೆ. ನರೇಂದ್ರ ಮೋದಿ ಸಂಚಾರ ಮಾಡಲಿರುವ ಮಾರ್ಗದಲ್ಲಿ ನೋಡಿದರೆ ರಾಜಕೀಯ ನಾಯಕರ ಫ್ಲೆಕ್ಸ್‌ ಬಿಟ್ಟರೆ ಸ್ವಾಮಿ ವಿವೇಕಾನಂದರ ಭಾವಚಿತ್ರವು ಒಂದೆರೆಡು ಕಡೆ ಮಾತ್ರವೇ ಕಾಣಸಿಗುತ್ತಿದೆ ಎಂಬುದು ಅಸಮಾಧಾನಕ್ಕೆ ಕಾರಣವಾಗಿದೆ.

ರಸ್ತೆಯಲ್ಲಿ ರಂಗೋಲಿ ಚಿತ್ತಾರ
ಏರ್ಪೋರ್ಟ್‌ ದ್ವಾರ ಬಾಗಿಲಿನಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತರ ಸಂಭ್ರಮ ಮನೆ ಮಾಡಿದೆ. ಏರ್ಪೋರ್ಟ್‌ನ ದ್ವಾರವನ್ನು ಹೂವಿನಿಂದ ಅಲಂಕರಿಸಲಾಗಿದ್ದು, ದ್ವಾರದ ಮುಂಭಾಗದಲ್ಲಿ ಬಣ್ಣ ಬಣ್ಣದ ರಂಗೋಲಿಗಳಿಂದ ಚಿತ್ತರಿಸಲಾಗಿದೆ. ಮೋದಿ ಸಂಚರಿಸಲಿರುವ ರಸ್ತೆಯನ್ನು ಅಲಂಕರಿಸಲಾಗಿದೆ. ವಿಮಾನ ನಿಲ್ದಾಣ ರಸ್ತೆಯಿಂದ ಅಕ್ಷಯ ಪಾರ್ಕ್‌ವರೆಗೂ ಬಿಜೆಪಿ ಮಹಿಳಾ ಕಾರ್ಯಕರ್ತರು ರಂಗೋಲಿಗಳಿಂದ ರಸ್ತೆಯನ್ನು ಚಿತ್ತಾರಗೊಳಿಸಿದ್ದಾರೆ.

ಇದನ್ನೂ ಓದಿ | Hindu activist dead | ಬಜರಂಗ ದಳ ಮುಖಂಡನ ಶವ ನೇತ್ರಾವತಿ ನದಿಯಲ್ಲಿ ಪತ್ತೆ: ಸಾವಿನ ಬಗ್ಗೆ ಸಂಶಯ

ಕಲಾ ತಂಡಗಳಿಂದ ರಿಹರ್ಸಲ್
ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ಕಲಾ ತಂಡಗಳಿಂದ ರಿಹರ್ಸಲ್ ಆರಂಭವಾಗಿದೆ. ವೇದಿಕೆ ಮುಂಭಾಗದಲ್ಲಿ ಕಲಾ ತಂಡಗಳು ಸಿದ್ಧತೆ ಮಾಡಿಕೊಳ್ಳುತ್ತಿವೆ. ಇದೇ ವೇಳೆ ವೇದಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ‌, ಅನುರಾಗ್‌ ಸಿಂಗ್ ಠಾಕೂರ್ ಆಗಮಿಸಿ, ಸಿದ್ಧತೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಸಚಿವರಾ ಹಾಲಪ್ಪ ಆಚಾರ್, ನಾರಾಯಣಗೌಡ, ವಿಧಾನ ಪರಿಷತ್‌ ಸಭಾಪತಿ ಬಸವರಾಜ್ ಹೊರಟ್ಟಿ, ಶಾಸಕ ಅರವಿಂದ ಬೆಲ್ಲದ್ ಜತೆಗಿದ್ದರು.

ಅಪರಿಚಿತ ವಾಹನ ವಶಕ್ಕೆ
ಪ್ರಧಾನಿ‌ ಮೋದಿ ಸಂಚರಿಸುವ ಮಾರ್ಗವಾದ ಹೊಸೂರ್ ಕ್ರಾಸ್ ಬಳಿ ಮಹಾರಾಷ್ಟ್ರ ನೋಂದಣಿಯ ಅಪರಿಚಿತ ಕಾರೊಂದು ನಿಂತಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಇದನ್ನು ಪರಿಶೀಲನೆ ನಡೆಸಿ, ಅದರ ಮಾಲೀಕರ ವಿವರ ಸಂಗ್ರಹಣೆ ಮುಂದಾಗಿದ್ದರು. ಆದರೆ, ಪತ್ತೆಯಾಗದ ಹಿನ್ನೆಲೆಯಲ್ಲಿ ಆ ಕಾರನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರಂಗೋಲಿಯಲ್ಲಿ ಮೂಡಿದ ಮೋದಿ
ವೇದಿಕೆ ಮುಂಭಾಗದಲ್ಲಿ ಕಲಾವಿದನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ರಂಗೋಲಿಯನ್ನು ಬಿಡಿಸುತ್ತಿರುವುದು ಸಾಕಷ್ಟು ಗಮನ ಸೆಳೆದಿದೆ.

ಇದನ್ನೂ ಓದಿ | Pathaan Film | ʻಪಠಾಣ್‌ʼ ಮಹತ್ವಾಕಾಂಕ್ಷೆಯ ಚಿತ್ರ, ನನಗೆ ನನ್ನ ಸಿನಿಮಾ ಮೇಲೆ ಮಾತ್ರ ಗಮನ: ರಾಜ್‌ಕುಮಾರ್ ಸಂತೋಷಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉತ್ತರ ಕನ್ನಡ

Drown in Sea: ಗೋಕರ್ಣ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು

Drown in Sea: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ ಕಡಲತೀರದಲ್ಲಿ ಮುಳುಗಿ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ.

VISTARANEWS.COM


on

drown in sea
Koo

ಕಾರವಾರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರವಾಸಿಗರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ ಕಡಲತೀರದಲ್ಲಿ (Drown in Sea) ನಡೆದಿದೆ. ಇದೇ ವೇಳೆ ಗಂಭೀರಗೊಂಡ ಮತ್ತೊಬ್ಬ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿ ಮೂಲದ ಅಭಿಷೇಕ್, ಆಕಾಶ್ ಮೃತ ಪ್ರವಾಸಿಗರು. ಕಲಬುರಗಿಯಿಂದ ಐವರು ಸ್ನೇಹಿತರು ಪ್ರವಾಸಕ್ಕೆಂದು ಗೋಕರ್ಣಕ್ಕೆ ಆಗಮಿಸಿದ್ದರು. ಸಮುದ್ರದಲ್ಲಿ ಮೂವರು ಈಜಲು ತೆರಳಿದ್ದಾಗ ಅಲೆಗಳಿಗೆ ಸಿಲುಕಿ ಮುಳುಗಿದ್ದರು. ಈ ವೇಳೆ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದು, ಒಬ್ಬನನ್ನು ರಕ್ಷಣೆ ಮಾಡಲಾಗಿದೆ. ಗಂಭೀರಗೊಂಡ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | ಚಿಕ್ಕಮಗಳೂರು ಪೊಲೀಸ್-ವಕೀಲರ ಸಂಘರ್ಷ; ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಮಹಿಳಾ ಸಬ್ ಇನ್‌ಸ್ಪೆಕ್ಟರ್‌ ಜತೆ ಅನುಚಿತವಾಗಿ ವರ್ತಿಸಿ ಹೋಟೆಲ್‌ ಮಾಲೀಕ ಬಂಧನ

ಬೆಂಗಳೂರು: ಮಹಿಳಾ ಸಬ್ ಇನ್‌ಸ್ಪೆಕ್ಟರ್‌ ಜತೆ ಅನುಚಿತ ವರ್ತನೆ ತೋರಿದ ಹೊಟೇಲ್ ಮಾಲೀಕನನ್ನು ಪೊಲೀಸರು ಬಂಧಿಸಿದ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ತಡರಾತ್ರಿವರೆಗೂ ಹೋಟೆಲ್ ತೆಗೆದಿದ್ದ ಹಿನ್ನೆಲೆಯಲ್ಲಿ ಪ್ರಶ್ನಿಸಿದ ಕಾರಣ ಹೊಟೇಲ್ ಮಾಲೀಕ ಸಂಜೀವ್ ಗೌಡ ಎಂಬಾತ ಪಿಎಸ್‌ವೈ ಪ್ರತಿಮಾ ಜತೆ ಅನುಚಿತವಾಗಿ ವರ್ತಿಸಿದ್ದರು.

ಸುಳ್ಳು ಪ್ರಕರಣ ದಾಖಲಿಸಿ 50 ಸಾವಿರ ಲಂಚ ಕೇಳಿದ್ದಾರೆಂದು ಸುಳ್ಳು ಕೇಸ್‌ ಹಾಕುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಹೊಟೇಲ್ ಅಶ್ವ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. 24 ಗಂಟೆ ಹೊಟೇಲ್ ನಡೆಸಲು ಅನುಮತಿ ಇದೆ ಎಂದು ಮಾಲೀಕ ಹೇಳಿದ್ದ. ಅನುಮತಿ ಪತ್ರ ತೋರಿಸುವಂತೆ ಕೇಳಿದಾಗ, ಆರ್‌ಟಿಐ ಹಾಕಿಕೊಂಡು ನೋಡು ಎಂದು ಮಾಲೀಕ ದರ್ಪ ತೋರಿದ್ದಾರೆ. ಈ ಸಂಬಂಧ ಪಿಎಸ್‌ಐ ಪ್ರತಿಮಾ ದೂರು ದಾಖಲಿಸಿದ್ದರು. ದೂರಿನ ಅನ್ವಯ ಮಾಲೀಕ ಸಂಜೀವ್ ಗೌಡ ಸೇರಿ ಐವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ:

Continue Reading

ಕರ್ನಾಟಕ

Assembly Elections 2023: ಬಿಜೆಪಿಗೆ ನಾಲ್ಕನೇ ಮೂರು ಬಹುಮತ, ಕಾಂಗ್ರೆಸ್‌ಗೆ ಒಂದೇ ಗ್ಯಾರಂಟಿ!

Assembly Elections 2023 : ಪಂಚ ರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಫಲಿತಾಂಶ ಪ್ರಕಟವಾಗಿದ್ದು, ಮೂರರಲ್ಲಿ ಬಿಜೆಪಿ, ಒಂದರಲ್ಲಿ ಕಾಂಗ್ರೆಸ್‌ ಗೆದ್ದಿದೆ. ಇದು ನರೇಂದ್ರ ಮೋದಿ ವಿಜಯ ಎಂದು ಬಿಜೆಪಿ ವ್ಯಾಖ್ಯಾನಿಸಿದೆ.

VISTARANEWS.COM


on

BJP wins three states Congress one
Koo

ನವದೆಹಲಿ: 2024ರ ಲೋಕಸಭೆ ಚುನಾವಣೆಯ (Lok Sabha Election 2024) ಸೆಮಿಫೈನಲ್‌ ಎಂದೇ ವಿಶ್ಲೇಷಿಸಲಾಗಿದ್ದ ಪಂಚರಾಜ್ಯ ಚುನಾವಣೆಯಲ್ಲಿ (Assembly Elections 2023) ನಾಲ್ಕು ರಾಜ್ಯಗಳ ಫಲಿತಾಂಶ ಭಾನುವಾರ (ಡಿಸೆಂಬರ್‌ 3) ಹೊರಬಿದ್ದಿದ್ದು, ಭಾರತೀಯ ಜನತಾ ಪಕ್ಷ ಮೂರು ರಾಜ್ಯಗಳಲ್ಲಿ ನಿಚ್ಚಳ ಬಹುಮತದೊಂದಿಗೆ ಜಯಭೇರಿ ಬಾರಿಸಿದೆ. ಕಾಂಗ್ರೆಸ್‌ ಒಂದು ರಾಜ್ಯವನ್ನು ಗೆದ್ದುಕೊಂಡಿದೆ. ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಗದ್ದುಗೆ ಏರಿದ್ದರೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೇರಿದೆ. ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಸೋಮವಾರ (ಡಿಸೆಂಬರ್‌ 4) ನಡೆಯಲಿದೆ.

ಬಿಜೆಪಿ ಮಧ್ಯ ಪ್ರದೇಶವನ್ನು ಉಳಿಸಿಕೊಂಡು ರಾಜಸ್ಥಾನ ಮತ್ತು ಛತ್ತೀಸ್‌ ಗಢವನ್ನು ಕಾಂಗ್ರೆಸ್‌ ಕೈಯಿಂದ ಕಸಿದುಕೊಂಡಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಅಲ್ಲಿ ಹೀನಾಯ ಸೋಲು ಕಂಡಿದೆ. ಇಲ್ಲಿ ಅಧಿಕಾರವನ್ನು ಬಿಟ್ಟುಕೊಂಡ ಕಾಂಗ್ರೆಸ್‌ ತೆಲಂಗಾಣದಲ್ಲಿ 10 ವರ್ಷಗಳ ಕೆ ಚಂದ್ರಶೇಖರ ರಾವ್‌ (ಭಾರತ ರಾಷ್ಟ್ರ ಸಮಿತಿ-ಬಿಆರ್‌ಎಸ್‌) ಪಾರುಪತ್ಯವನ್ನು ಕೊನೆಗಾಣಿಸಿದೆ.

ಗ್ಯಾರಂಟಿ Vs ನರೇಂದ್ರ ಮೋದಿ ವಿಜಯ

ಗ್ಯಾರಂಟಿ ಕದನ ಎಂದೇ ಗುರುತಿಸಲಾಗಿದ್ದ ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಇದೇ ಟಾರ್ಗೆಟ್‌ನೊಂದಿಗೆ ತೆಲಂಗಾಣವನ್ನು ಗೆದ್ದುಕೊಂಡಿದೆ. ಆದರೆ, ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ ಗಢದಲ್ಲಿ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಿರುವ ಬಿಜೆಪಿ ಇದು ಪ್ರಧಾನಿ ನರೇಂದ್ರ ಮೋದಿ ವಿಜಯ ಎಂದು ಹೇಳಿಕೊಂಡಿದೆ. ಬಿಜೆಪಿ ಪಾಲಿಗೆ ನರೇಂದ್ರ ಮೋದಿಯೇ ಗ್ಯಾರಂಟಿ ಎಂದು ಆಗಲೇ ಪಕ್ಷ ಹೇಳಿಕೊಂಡಿತ್ತು.

ಅತ್ತ ಮೂರು ರಾಜ್ಯಗಳನ್ನು ಗೆದ್ದುಕೊಳ್ಳುವ ಮೂಲಕ ಉತ್ತರ ಭಾರತದಲ್ಲಿ ಬಿಜೆಪಿ ತನ್ನ ಪಾರಮ್ಯವನ್ನು ಇನ್ನಷ್ಟು ಗಟ್ಟಿಗೊಳಿಸಿದ್ದರೆ, ಕಾಂಗ್ರೆಸ್‌ ತೆಲಂಗಾಣದ ಗೆಲುವಿನ ಮೂಲಕ ದಕ್ಷಿಣ ಭಾರತದಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಂಡಿದೆ.

ಮೋದಿಗೆ ವಿಜಯ ಸಂದೇಶ ನೀಡಿದ ಚುನಾವಣೆ

ಕರ್ನಾಟಕದಲ್ಲಿ ನಡೆದ ಚುನಾವಣೆಯಲ್ಲಿ ಗ್ಯಾರಂಟಿಗಳ ಪ್ರಭಾವದಿಂದ ಕಾಂಗ್ರೆಸ್‌ ದೊಡ್ಡ ಗೆಲುವನ್ನು ಸಾಧಿಸಿದ ಬಳಿಕ ಗೊಂದಲದಲ್ಲಿ ಮುಳುಗಿದ್ದ ಬಿಜೆಪಿ ಮತ್ತು ನರೇಂದ್ರ ಮೋದಿ ಅವರಿಗೆ ಈ ಚುನಾವಣೆ ಫಲಿತಾಂಶ ಧೈರ್ಯವನ್ನು ತುಂಬಿದೆ. ಕಾಂಗ್ರೆಸ್‌ನ ಉಚಿತ ಯೋಜನೆಗಳನ್ನು ಮೆಟ್ಟಿ ನಿಲ್ಲಬಹುದು ಎಂಬ ಭರವಸೆಯನ್ನು ಈ ಚುನಾವಣೆ ನೀಡಿದೆ. ಬಿಜೆಪಿ ಕೂಡಾ ಕಾಂಗ್ರೆಸ್‌ನಂತೆಯೇ ಕೆಲವೊಂದು ಉಚಿತ ಯೋಜನೆಗಳನ್ನು ನೀಡಿದ್ದರೂ ಒಟ್ಟಾರೆ ಫಲಿತಾಂಶ ಗ್ಯಾರಂಟಿ ಯೋಜನೆಗಳ ಹಂಗನ್ನು ಮೀರಿ ನಿಂತಿತ್ತು. ಹೀಗಾಗಿ ಇದು ಬಿಜೆಪಿಯ 2024ರ ಲೋಕಸಭಾ ಚುನಾವಣಾ ಓಟಕ್ಕೆ ಎದುರಾಗಿದ್ದ ಆತಂಕವನ್ನು ದೂರ ಮಾಡಿದೆ. ಬಿಜೆಪಿ ಗೆದ್ದಿರುವ ಮೂರು ರಾಜ್ಯಗಳಲ್ಲೇ 65 ಸ್ಥಾನಗಳಿವೆ. ಇದು ಬಹುತೇಕ ಸಾರಾಸಗಟು ಪಕ್ಷಕ್ಕೆ ಬರುವ ಸಾಧ್ಯತೆಗಳು ಕಂಡುಬರುತ್ತಿವೆ.

ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ

ಕರ್ನಾಟಕದ ಬಳಿಕ ತೆಲಂಗಾಣದಲ್ಲೂ ಕಾಂಗ್ರೆಸ್‌ ಗೆಲುವು ಸಾಧಿಸುವ ಮೂಲಕ ದಕ್ಷಿಣ ಭಾರತದಲ್ಲಿ ಎರಡನೇ ರಾಜ್ಯದಲ್ಲಿ ಆಡಳಿತವನ್ನು ತೆಕ್ಕೆಗೆ ತೆಗೆದುಕೊಂಡಂತಾಗಿದೆ. ಚುನಾವಣೆ ಮುಗಿದ ಕೂಡಲೇ ಲಭ್ಯವಾಗಿದ್ದ ಮತಗಟ್ಟೆ ಸಮೀಕ್ಷೆಗಳ ಪ್ರಕಾರ ತೆಲಂಗಾಣದಲ್ಲಿ ಕಾಂಗ್ರೆಸ್‌ ಹಾಗೂ ಆಡಳಿತಾರೂಢ ಬಿಆರ್‌ಎಸ್‌ ಮಧ್ಯೆ ತೀವ್ರ ಪೈಪೋಟಿ ಇದೆ ಎಂದು ಮಾತ್ರ ತಿಳಿದುಬಂದಿತ್ತು. ಆದರೆ, ತೆಲುಗು ರಾಜ್ಯದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆದಿದೆ.. ತೆಲಂಗಾಣದಲ್ಲಿ ಕಾಂಗ್ರೆಸ್‌ ಗೆಲುವಿನಲ್ಲಿ ಕರ್ನಾಟಕ ಮಾದರಿಯ ಉಚಿತ ಗ್ಯಾರಂಟಿ ಯೋಜನೆಗಳ ಭರವಸೆಯ ಪಾತ್ರವೂ ಇದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ.

ಪಕ್ಷಗೆಲುವು
ಕಾಂಗ್ರೆಸ್‌64
ಬಿಆರ್‌ಎಸ್‌39
ಬಿಜೆಪಿ08
ಎಐಎಂಐಎಂ07
ಸಿಪಿಐ01
ಒಟ್ಟು119
ಮ್ಯಾಜಿಕ್‌ ನಂಬರ್60

ಮಧ್ಯಪ್ರದೇಶ ಮತ್ತೆ ಬಿಜೆಪಿ ಕೈವಶ

ಮಧ್ಯಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆಯ ಮಧ್ಯೆಯೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಜಾರಿಗೆ ತಂದ ಯೋಜನೆಗಳು, ಅದರಲ್ಲೂ ಹೆಣ್ಣುಮಕ್ಕಳಿಗೆ ಮಾಸಿಕ 1,250 ರೂ. ನೀಡುವ ಲಾಡ್ಲಿ ಬೆಹನಾದಂತಹ ಯೋಜನೆಗಳು ಪಕ್ಷಕ್ಕೆ ಗೆಲುವು ತರುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿವೆ. ನರೇಂದ್ರ ಮೋದಿ ಅಲೆಯೂ ಇಲ್ಲಿ ಕೆಲಸ ಮಾಡಿದೆ ಎಂದು ಹೇಳಲಾಗುತ್ತದೆ. ಆದರೆ, ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಐದನೇ ಬಾರಿಗೆ ಸಿಎಂ ಆಗುತ್ತಾರಾ ಅಥವಾ ಹೊಸ ಮುಖಕ್ಕೆ ಬಿಜೆಪಿ ಮಣೆ ಹಾಕುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಪಕ್ಷಜಯ
ಬಿಜೆಪಿ164
ಕಾಂಗ್ರೆಸ್65
ಬಿಎಸ್‌ಪಿ0
ಇತರೆ1
ಒಟ್ಟು230
ಮ್ಯಾಜಿಕ್‌ ನಂಬರ್116

ರಾಜಸ್ಥಾನದಲ್ಲಿ ಕಮಲ ಪಡೆಯೇ ರಾಜ

ರಾಜಸ್ಥಾನದಲ್ಲಿ ಅಶೋಕ್‌ ಗೆಹ್ಲೋಟ್‌ ಅವರು ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿದರೂ, ಹಲವು ಗ್ಯಾರಂಟಿಗಳನ್ನು ಜನರಿಗೆ ಕೊಟ್ಟರೂ, ಆಡಳಿತ ವಿರೋಧಿ ಅಲೆ ಹಾಗೂ ಆಂತರಿಕ ಕಚ್ಚಾಟದಿಂದಾಗಿ ಬಿಜೆಪಿ ಇಲ್ಲಿ ಭರ್ಜರಿ ಜಯ ಸಾಧಿಸಿದೆ. ಅಶೋಕ್‌ ಗೆಹ್ಲೋಟ್‌ ಹಾಗೂ ಸಚಿನ್‌ ಪೈಲಟ್‌ ಮುನಿಸು, ತಮ್ಮದೇ ಸರ್ಕಾರದ ವಿರುದ್ಧ ಪೈಲಟ್‌ ಆರೋಪಗಳು, ಬಿಜೆಪಿ ಪರವಾದ ಅಲೆಯಿಂದಾಗಿ ಕಾಂಗ್ರೆಸ್‌ಗೆ ಸೋಲುಂಟಾಗಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ. ಇಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ವಸುಂಧರಾ ರಾಜೇ ಮತ್ತು ದಿಯಾ ಕುಮಾರಿ ನಡುವೆ ಸ್ಪರ್ಧೆ ಇದ್ದು, ಹೈಕಮಾಂಡ್‌ ಬೇರೆ ಯಾರನ್ನಾದರೂ ತಂದು ಕೂರಿಸುವ ಸಾಧ್ಯತೆಯೂ ಇದೆ.

ಪಕ್ಷಮುನ್ನಡೆ
ಬಿಜೆಪಿ115
ಕಾಂಗ್ರೆಸ್69
ಸ್ವತಂತ್ರ13
ಬಿಎಸ್‌ಪಿ02
ಇತರೆ00
ಒಟ್ಟು199
ಮ್ಯಾಜಿಕ್‌ ನಂಬರ್100

ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲುವು

ನಿರೀಕ್ಷೆಯೇ ಇಲ್ಲದ, ಮತಗಟ್ಟೆ ಸಮೀಕ್ಷೆಯ ಯಾವುದೇ ವರದಿಗಳು ಕೂಡ ಸುಳಿವು ನೀಡದೆಯೇ ಛತ್ತೀಸ್‌ಗಢದಲ್ಲಿ ಬಿಜೆಪಿಯು ಅಚ್ಚರಿಯ ರೀತಿಯಲ್ಲಿ ಗೆಲುವು ಸಾಧಿಸಿದೆ. ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರ ಉತ್ತಮ ಆಡಳಿತ, ಕಾಂಗ್ರೆಸ್‌ ಉಚಿತ ಗ್ಯಾರಂಟಿಗಳ ಭರವಸೆಯ ಮಧ್ಯೆಯೂ ಬಿಜೆಪಿ ಸ್ಪಷ್ಟ ಬಹುಮತ ಸಾಧಿಸುತ್ತಿದೆ. ಇದು ಕಾಂಗ್ರೆಸ್‌ ಬಿಡಿ, ಬಿಜೆಪಿ ನಾಯಕರಿಗೇ ಅಚ್ಚರಿ ತರುವ ಫಲಿತಾಂಶ ಎನಿಸಿದೆ. ಬಿಜೆಪಿಯಿಂದ ಯಾರು ಸಿಎಂ ಆಗಲಿದ್ದಾರೆ ಎಂಬುದು ಸದ್ಯದ ಪ್ರಶ್ನೆಯಾಗಿದೆ.

ಪಕ್ಷಮುನ್ನಡೆ
ಬಿಜೆಪಿ54
ಕಾಂಗ್ರೆಸ್35
ಇತರ01
ಬಿಎಸ್‌ಪಿ00
ಸಿಪಿಐ00
ಒಟ್ಟು90
ಮ್ಯಾಜಿಕ್‌ ನಂಬರ್46

ಇದನ್ನೂ ಓದಿ: Ladli Behna: ಚೌಹಾಣ್‌ ‘ಗ್ಯಾರಂಟಿ’ಗೆ ಜೈ ಎಂದ ಮಧ್ಯಪ್ರದೇಶ ಜನ;‌ ಏನಿದು ಲಾಡ್ಲಿ ಬೆಹ್ನಾ?

ಮೂರು ರಾಜ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿಯು 65 ಲೋಕಸಭೆ ಕ್ಷೇತ್ರಗಳ ಮೇಲೆ ಹಿಡಿತ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 29 ಲೋಕಸಭೆ ಸ್ಥಾನಗಳು ಹಾಗೂ ರಾಜಸ್ಥಾನದಲ್ಲಿ 25 ಲೋಕಸಭೆ ಸ್ಥಾನಗಳು ಇವೆ. ಒಟ್ಟಾಗಿ 54 ಸ್ಥಾನಗಳಾಗುತ್ತವೆ. ಈ ಅಷ್ಟೂ ಸ್ಥಾನಗಳಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌ ಮಾಡುವ ಸಾಧ್ಯತೆ ಇದೆ. ಕಳೆದ ಸಲ ಲೋಕಸಭೆ ಚುನಾವಣೆ ನಡೆದಾಗ, ಈ ಎರಡೂ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರದಲ್ಲಿ ಇರಲಿಲ್ಲ. ಆದರೂ ಇವೆರಡೂ ಕಡೆಗಳಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 54ರಲ್ಲಿ 53 ಸ್ಥಾನ ಗೆದ್ದಿತ್ತು. ಮಧ್ಯಪ್ರದೇಶದಲ್ಲಿ ಒಂದೇ ಒಂದು ಸ್ಥಾನವನ್ನು ಮಾತ್ರ ಕಾಂಗ್ರೆಸ್‌ಗೆ ಬಿಟ್ಟು 28 ಸೀಟ್‌ಗಳನ್ನು ಗೆದ್ದಿತ್ತು. ರಾಜಸ್ಥಾನದಲ್ಲಿ 25ರಲ್ಲಿ 24 ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಉಳಿದ ಒಂದು ಸ್ಥಾನ ಕೂಡ ಬಿಜೆಪಿ ಮಿತ್ರ ಪಕ್ಷದ ಪಾಲಾಗಿತ್ತು. ಈ ಬಾರಿ ರಾಜ್ಯ ಸರ್ಕಾರವೂ ಬಿಜೆಪಿಯದೇ ಆದರೆ ಮತ್ತೊಮ್ಮೆ ಅಷ್ಟೂ ಸ್ಥಾನಗಳನ್ನು ಗೆದ್ದುಕೊಳ್ಳುವುದು ಸುಲಭವಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ: https://vistaranews.com/tag/assembly-election-2023

Continue Reading

South Cinema

Yash 19: ಶೀಘ್ರದಲ್ಲೇ ʼಯಶ್ 19ʼ ಚಿತ್ರ ಅನೌನ್ಸ್; ಸುಳಿವು ಕೊಟ್ಟ ರಾಕಿ ಭಾಯ್

Yash 19: ಸಾಮಾಜಿಕ ಜಾಲತಾಣದ ಮೂಲಕ ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಮುಂದಿನ ಸಿನಿಮಾ ಬಗ್ಗೆ ಸುಳಿವು ಕೊಟ್ಟಿದ್ದಾರೆ.

VISTARANEWS.COM


on

Koo

ಬೆಂಗಳೂರು: ಕೆಜಿಎಫ್‌-2 ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಭರ್ಜರಿ ಯಶಸ್ಸು ಕಂಡ ಬಳಿಕ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಮುಂದಿನ ಚಿತ್ರ ಯಾವಾಗ ತೆರೆಗೆ ಬರಲಿದೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಶೀಘ್ರದಲ್ಲೇ ‘ಯಶ್ 19ʼ (Yash 19) ಸಿನಿಮಾ ಬಗ್ಗೆ ಘೋಷಣೆ ಆಗುವ ಸಾಧ್ಯತೆಯಿದ್ದು, ಈ ಬಗ್ಗೆ ನಟ ಯಶ್‌ ಅವರೇ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಹೌದು, ಸಾಮಾಜಿಕ ಜಾಲತಾಣದ ಮೂಲಕ ರಾಕಿಂಗ್ ಸ್ಟಾರ್ ಯಶ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಯಶ್ ಇನ್‌ಸ್ಟಾಗ್ರಾಂ ಡಿಪಿ ಬದಲಾಗಿದ್ದು, ಅದರಲ್ಲಿ ಲೋಡಿಂಗ್ ಎಂಬ ಬರಹವುಳ್ಳ ಫೋಟೊ ಹಾಕಿಕೊಂಡಿದ್ದಾರೆ. ಹೀಗಾಗಿ ಈ ತಿಂಗಳಲ್ಲೇ ಮುಂದಿನ ಸಿನಿಮಾವನ್ನು ರಾಕಿಭಾಯ್ ಘೋಷಿಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Bobby Deol: ʻಅನಿಮಲ್‌ʼ ಸಕ್ಸೆಸ್‌ ಹೊಗಳಿಕೆಗೆ ಕಣ್ಣೀರಿಟ್ಟ ನಟ ಬಾಬಿ ಡಿಯೋಲ್

2022ರ ಏಪ್ರಿಲ್‌ 14ರಂದು ರಾಕಿಂಗ್‌ ಸ್ಟಾರ್‌ ಯಶ್‌ (Yash 19) ನಟನೆ, ಪ್ರಶಾಂತ್‌ ನೀಲ್‌ ನಿರ್ದೇಶನದ ಕೆಜಿಎಫ್‌ 2 ಸಿನಿಮಾ ಬಿಡುಗಡೆಗೊಂಡಿತ್ತು. ಮೂರು ವರ್ಷಗಳ ಕಠಿಣ ಪರಿಶ್ರಮದಿಂದ ಸಿದ್ಧವಾಗಿದ್ದ ಸಿನಿಮಾ ರಾಜ್ಯದಲ್ಲಿ ಮಾತ್ರವಲ್ಲದೆ, ದೇಶ, ವಿದೇಶದಲ್ಲಿಯೂ ತೆರೆ ಕಂಡ ದೊಡ್ಡ ಮಟ್ಟದ ಯಶಸ್ಸನ್ನು ಗಳಿಸಿಕೊಂಡಿತು. ದಾಖಲೆಗಳನ್ನು ಬರೆದ ಆ ಸಿನಿಮಾ ಬಿಡುಗಡೆಗೊಂಡು ಒಂದೂವರೆ ವರ್ಷ ಕಳೆದಿದೆ. ಇದರ ಬೆನ್ನಲ್ಲೇ ಯಶ್‌ ಅವರ ಮುಂದಿನ ಸಿನಿಮಾ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ನಿರ್ದೇಶಕರು ಯಾರು?

ಮಲಯಾಳಂ ನಟಿ-ಚಿತ್ರ ನಿರ್ದೇಶಕಿ ಗೀತು ಮೋಹನ್‌ದಾಸ್ ( Geetu Mohandas ) ಯಶ್‌ ಅವರ ಮುಂದಿನ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ನಟಿ ರಿಮಾ ಕಲ್ಲಿಂಗಲ್‌ (Rima Kallingal) ನಿರ್ದೇಶಕಿ ಗೀತು ಅವರಿಗೆ ಶುಭ ಹಾರೈಸಲು ಇತ್ತೀಚೆಗೆ ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ ಪೋಸ್ಟ್‌ ಹಾಕಿಕೊಂಡಿದ್ದರು. ಈ ಮೂಲಕ ಗೀತು ಮೋಹನ್‌ದಾಸ್ ಅವರು ಯಶ್‌ ಅವರ ಮುಂಬರುವ ಸಿನಿಮಾದ ನಿರ್ದೇಶಕರು ಎಂಬ ಸುಳಿವು ನೀಡಿದ್ದರು.

ಯುವನ್ ಯುವತಿ’ (uvan Yuvathi) ಮತ್ತು `ಚಿತಿರೈ ಸೆವ್ವಾನಂ’ ( Chithirai Sevvaanam) ಚಿತ್ರಗಳಲ್ಲಿ ನಟಿಸಿ ತಮಿಳು ಚಿತ್ರರಂಗದ ಅಭಿಮಾನಿಗಳಲ್ಲಿ ಚಿರಪರಿಚಿತರಾಗಿರುವ ರಿಮಾ ಕಲ್ಲಿಂಗಲ್ ಅವರು ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ ಯಶ್ 19ರ ಕುರಿತು ಪೋಸ್ಟ್ ಹಂಚಿಕೊಂಡಿದ್ದರು. ಅದರಲ್ಲಿ ಗೀತು ಮೋಹನ್‌ದಾಸ್ ಅವರನ್ನು ಟ್ಯಾಗ್‌ ಕೂಡ ಮಾಡಿದ್ದರು. ಪೋಸ್ಟ್‌ನಲ್ಲಿ ” ಬಹು ನಿರೀಕ್ಷಿತ ಯಶ್‌ 19 ಮೂವಿಯನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕಿ ಮಲಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನ ಮಾಡಲಿದ್ದಾರೆ” ಎಂದು ಬರೆಯಲಾಗಿತ್ತು.

ಇದನ್ನೂ ಓದಿ | Sachin Tendulkar: ವಿಕ್ಕಿ ಕೌಶಲ್‌ ಸಿನಿಮಾ ಕಂಡು ʻಸೂಪರ್ ಇಂಪ್ರೆಸ್ಡ್ʼ ಆದ ಸಚಿನ್ ತೆಂಡೂಲ್ಕರ್‌!

ಇದೀಗ ಏಕಾಏಕಿ ಯಶ್‌ ಅವರ ಇನ್‌ಸ್ಟಾಗ್ರಾಂ ಪ್ರೊಫೈಲ್‌ ಚಿತ್ರ ಬದಲಾದ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿಯೇ ʼಯಶ್ 19ʼ ಬಗ್ಗೆ ರಾಕಿಂಗ್‌ ಸ್ಟಾರ್‌ ಅಪ್‌ಡೇಟ್‌ ಕೊಡಲಿದ್ದಾರಾ ಎಂಬ ಕುತೂಹಲ ಮೂಡಿದೆ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ:

Continue Reading

ಕರ್ನಾಟಕ

Assembly Elections 2023: ಮೂರು ರಾಜ್ಯಗಳಲ್ಲಿ ಜಯಭೇರಿ; ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ ವಿಧಾಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಸಂಭ್ರಮಾಚರಣೆ ನಡೆಸಿದ್ದಾರೆ.

VISTARANEWS.COM


on

Bjp Leaders celebration
Koo

ಬೆಂಗಳೂರು: ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 3 ರಾಜ್ಯಗಳಲ್ಲಿ (Assembly Elections 2023) ಬಿಜೆಪಿ ಗೆಲುವು ಪಡೆದ ಹಿನ್ನೆಲೆಯಲ್ಲಿ ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ (BJP office) ಬಿಜೆಪಿ ನಾಯಕರು, ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಬಿಜೆಪಿ ಮುಖಂಡ ನಂದೀಶ್ ರೆಡ್ಡಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್, ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.

ಇದನ್ನೂ ಓದಿ | Assembly Elections 2023 : ರಾಜ್ಯದಿಂದ ಹೋದ ಹಣದ ಥೈಲಿಗಳು ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಿಸಿವೆ: ಎಚ್‌ಡಿಕೆ

ಬೆಂಗಳೂರು ಮಾತ್ರವಲ್ಲದೆ ರಾಜ್ಯದ ವಿವಿಧೆಡೆ ಬಿಜೆಪಿಯಿಂದ ವಿಜಯೋತ್ಸವ ಆಚರಿಸಲಾಗಿದೆ. ಕೊಪ್ಪಳ, ಹಾವೇರಿ, ಬಳ್ಳಾರಿ, ಮಂಡ್ಯ, ಕೊಡಗಿನಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ವಿಜಯಯಾತ್ರೆ ಲೋಕಸಭೆ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದ ವಿಜಯೇಂದ್ರ

ನವದೆಹಲಿ: ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ವಿರೋಧಪಕ್ಷಗಳು ಬೊಬ್ಬೆ ಹೊಡೆಯುತ್ತಿದ್ದವು. ಆದರೆ, ದೇಶದಲ್ಲಿ ವಾತಾವರಣ ಬಿಜೆಪಿ ಪರವಾಗಿದ್ದು, ಮೋದಿ ಪರವಾದ ಬಯಕೆ ಇದೆ ಎಂದು ಜನತೆ ಉತ್ತರ ಕೊಟ್ಟಿದ್ದಾರೆ. ಐದು ರಾಜ್ಯಗಳ ಚುನಾವಣೆ ಸೆಮಿಫೈನಲ್ಸ್ ಎನ್ನುವಂತೆ ವ್ಯಾಖ್ಯಾನವಿತ್ತು, ಅಲೆಯಲ್ಲ, ಸುನಾಮಿ ರೀತಿಯಲ್ಲಿ ಬಿಜೆಪಿ ಪರವಾಗಿ ಜನ ಮತನೀಡಿದ್ದಾರೆ. ವಿಜಯಯಾತ್ರೆ ಇಲ್ಲಿಗೆ ನಿಲ್ಲುವುದಿಲ್ಲ, ಲೋಕಸಭೆ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಜನ ದೇಶ ರಕ್ಷಣೆಯ ಗ್ಯಾರಂಟಿ ಬಯಸುತ್ತಿದ್ದಾರೆ. ಅಧಿಕಾರ ಕಬಳಿಸುವ ಆಮಿಷದ ಗ್ಯಾರಂಟಿ ಅಲ್ಲ ಎನ್ನುವುದು ಗೊತ್ತಾಗಿದೆ. ಕಳೆದ ವಿಧಾನಸಭಾ ಚುನಾವಣೆ ಕರ್ನಾಟಕದಲ್ಲಿ ಗ್ಯಾರಂಟಿ ಆಮಿಷ ಒಡ್ಡಲಾಗಿತ್ತು, ರಾಜ್ಯದ ಜನ ಪಶ್ಚಾತ್ತಾಪ ಪಡ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸ ಕುಂಟಿತವಾಗಿದೆ. ಕಳೆದ 6 ತಿಂಗಳ ಕಾರ್ಯವೈಖರಿಗೆ ಜನ ಬೇಸತ್ತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ರಾಜ್ಯದ ಎಲ್ಲಾ 28 ಸ್ಥಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇವತ್ತಿನ ಫಲಿತಾಂಶ ತುಂಬಾ ಸಂತೋಷ ಕೊಟ್ಟಿದೆ. ಮೂರನೇ ಬಾರಿ ಮೋದಿ ಪ್ರಧಾನಿಯಾಗಲಿದ್ದಾರೆ. ತೆಲಂಗಾಣದಲ್ಲಿ ಬಹಳ ನಿರೀಕ್ಷೆ ಇರಲಿಲ್ಲ, ಕರ್ನಾಟಕ ಫಲಿತಾಂಶದಿಂದ‌ ನಮ್ಮಗೆ ಹಿನ್ನಡೆಯಾಗಿತ್ತು. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೂ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಗ್ಯಾರಂಟಿ ಎಲ್ಲ ಕಡೆ ವರ್ಕ್ ಆಗಿಲ್ಲ. ಕರ್ನಾಟಕದಲ್ಲಿ ಮತದಾರರ ಕಣ್ಣಿಗೆ ಬೂದಿ ಎರಚಿದಂತೆ, ತೆಲಂಗಾಣದಲ್ಲೂ ಬೂದಿ ಎರಚಿ ಗೆದ್ದಿದ್ದಾರೆ. ಬಿಆರ್‌ಎಸ್ ಆಡಳಿತ ವಿರೋಧಿ ಅಲೆ ಬಳಸಿಕೊಳ್ಳಲು ನಮಗೆ ಸಾಧ್ಯವಾಗಲಿಲ್ಲ ಎಂದು ಹೇಳಿದರು.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ:

Continue Reading
Advertisement
this hat-trick has guaranteed the 2024 victory Says PM Narendra Modi
ದೇಶ38 mins ago

PM Narendra Modi: 3 ರಾಜ್ಯದ ಗೆಲುವು 2024ರ ಹ್ಯಾಟ್ರಿಕ್ ಜಯದ ಮುನ್ಸೂಚನೆ; ಮೋದಿ ಬಣ್ಣನೆ

drown in sea
ಉತ್ತರ ಕನ್ನಡ51 mins ago

Drown in Sea: ಗೋಕರ್ಣ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು

BJP wins three states Congress one
ಕರ್ನಾಟಕ59 mins ago

Assembly Elections 2023: ಬಿಜೆಪಿಗೆ ನಾಲ್ಕನೇ ಮೂರು ಬಹುಮತ, ಕಾಂಗ್ರೆಸ್‌ಗೆ ಒಂದೇ ಗ್ಯಾರಂಟಿ!

Team India
ಕ್ರಿಕೆಟ್60 mins ago

IND vs SA : ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಕುರಿತ ಇಲ್ಲಿದೆ ಪೂರ್ಣ ವಿವರ ಇಲ್ಲಿದೆ

Raman_Sao_Choudhary
ದೇಶ1 hour ago

Chhattisgarh Election Result: ಛತ್ತೀಸ್‌ಗಢ ಸಿಎಂ ರೇಸ್‌ನಲ್ಲಿ ಸಾವೊ, ಚೌಧರಿ, ರಮಣ್ ಸಿಂಗ್!

South Cinema2 hours ago

Yash 19: ಶೀಘ್ರದಲ್ಲೇ ʼಯಶ್ 19ʼ ಚಿತ್ರ ಅನೌನ್ಸ್; ಸುಳಿವು ಕೊಟ್ಟ ರಾಕಿ ಭಾಯ್

BJP win
ದೇಶ2 hours ago

Assembly Elections 2023 : ಗ್ಯಾರಂಟಿಗಳ ವಾರಂಟಿ ಮುಗೀತಾ? ಭರ್ಜರಿ ಆಫರ್‌ ಕೊಟ್ಟವರ ಕಥೆ ಏನಾಯ್ತು?

Congress defeated because Opposing Sanatana Dharma Says Acharya Pramod Krishnam
ದೇಶ3 hours ago

Election Result 2023: ಸನಾತನ ಧರ್ಮ ವಿರೋಧಿಸಿದ್ದಕ್ಕೇ ಕಾಂಗ್ರೆಸ್‌ಗೆ ಸೋಲು; ಪಕ್ಷದ ವಿರುದ್ಧವೇ ತಿರುಗಿ ಬಿದ್ದ ನಾಯಕ!

Bjp Leaders celebration
ಕರ್ನಾಟಕ3 hours ago

Assembly Elections 2023: ಮೂರು ರಾಜ್ಯಗಳಲ್ಲಿ ಜಯಭೇರಿ; ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

Election Result 2023 is for good governance and Development says PM Narendra Modi
ದೇಶ3 hours ago

PM Narendra Modi: ಉತ್ತಮ ಆಡಳಿತ, ಅಭಿವೃದ್ಧಿಗೆ ಸಂದ ಜಯ ಎಂದ ಪ್ರಧಾನಿ ಮೋದಿ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Police call off protest FIR against lawyer who slapped police
ಕರ್ನಾಟಕ10 hours ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ17 hours ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ1 day ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

ಟ್ರೆಂಡಿಂಗ್‌