Shivamogga Airport: ಇಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ, ತಿಳಿಯಲೇಬೇಕಾದ 5 ಅಂಶ ಇಲ್ಲಿವೆ Vistara News

ಕರ್ನಾಟಕ

Shivamogga Airport: ಇಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ, ತಿಳಿಯಲೇಬೇಕಾದ 5 ಅಂಶ ಇಲ್ಲಿವೆ

Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಮೋದಿ ಅವರ ವಿಮಾನವೇ ಏರ್‌ಪೋರ್ಟ್‌ನಲ್ಲಿ ಲ್ಯಾಂಡ್‌ ಆಗಲಿರುವ ಮೊದಲ ವಿಮಾನ ಎನಿಸಲಿದೆ.

VISTARANEWS.COM


on

Narendra Modi to launch Shivamogga airport, Five things to know
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದ ಗಮನ ಸೆಳೆದಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shivamogga Airport) ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಫೆಬ್ರವರಿ ೨೭) ಚಾಲನೆ ನೀಡಲಿದ್ದಾರೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ನಂತರ ಕರ್ನಾಟಕದ ಎರಡನೇ ಅತಿ ಉದ್ದದ ರನ್‌ವೇ ಹೊಂದಿದ ವಿಮಾನ ನಿಲ್ದಾಣ ಎನಿಸಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಅವರ ಹೆಸರಿಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹಾಗಾದರೆ, ಶಿವಮೊಗ್ಗ ವಿಮಾನ ನಿಲ್ದಾಣದ ವೈಶಿಷ್ಟ್ಯವೇನು? ಏರ್‌ಪೋರ್ಟ್‌ ಬಗ್ಗೆ ತಿಳಿಯಲೇಬೇಕಾದ ಐದು ಅಂಶಗಳು ಯಾವವು? ಇಲ್ಲಿದೆ ಮಾಹಿತಿ.

೧. ನರೇಂದ್ರ ಮೋದಿ ಅವರ ವಿಮಾನವೇ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗಲಿರುವ ಮೊದಲ ವಿಮಾನ ಎನಿಸಲಿದೆ. ಆದಾಗ್ಯೂ, ಶಿವಮೊಗ್ಗ ಏರ್‌ಪೋರ್ಟ್‌ನಿಂದ ಸಂಚರಿಸುವ ವಿಮಾನಗಳ ಪಟ್ಟಿ ಇನ್ನೂ ಲಭ್ಯವಾಗಿಲ್ಲ.

೨. ವಿಮಾನ ನಿಲ್ದಾಣ ನಿರ್ಮಾಣಕ್ಕೆ ೬೦೦ ಕೋಟಿ ರೂ. ವ್ಯಯಿಸಲಾಗಿದೆ. ಇದರಲ್ಲಿ ೪೪೯ ಕೋಟಿ ರೂ. ಮೂಲ ಸೌಕರ್ಯಕ್ಕೆ ಹಾಗೂ ಉಳಿದ ಹಣ ಭೂಸ್ವಾಧೀನಕ್ಕೆ ಬಳಸಲಾಗಿದೆ.

೩. ಶಿವಮೊಗ್ಗ ವಿಮಾನ ನಿಲ್ದಾಣಕವು ಕರ್ನಾಟಕದ ಒಂಬತ್ತನೇ ವಿಮಾನ ನಿಲ್ದಾಣ ಎನಿಸಲಿದೆ. ಈಗಾಗಲೇ ಬೆಂಗಳೂರು, ಮೈಸೂರು, ಬಳ್ಳಾರಿ, ಹುಬ್ಬಳ್ಳಿ, ಬೀದರ್‌, ಕಲಬುರಗಿ, ಬೆಳಗಾವಿ ಹಾಗೂ ಮಂಗಳೂರಿನಲ್ಲಿ ವಿಮಾನ ನಿಲ್ದಾಣಗಳಿವೆ.

೪. ಕೇಂದ್ರ ಸರ್ಕಾರದ ಉಡಾನ್‌ (ಉಡೇ ದೇಶ್‌ ಕಾ ಆಮ್‌ ನಾಗರಿಕ್‌) ಯೋಜನೆ ಅಡಿಯಲ್ಲಿ ಏರ್‌ಪೋರ್ಟ್‌ಅನ್ನು ನಿರ್ಮಿಸಲಾಗಿದೆ. ಇದು ರಾಜ್ಯದಲ್ಲಿಯೇ ಉದ್ದದ ರನ್‌ವೇ ಹೊಂದಿದ ಎರಡನೇ ವಿಮಾನ ನಿಲ್ದಾಣ ಆಗಿದೆ.

೫. ವಿಮಾನ ನಿಲ್ದಾಣಕ್ಕೆ ಕುವೆಂಪು ಅವರ ಹೆಸರಿಡುವ ಕುರಿತು ಕೇಂದ್ರಕ್ಕೆ ಶಿಫಾರಸು ಕಳುಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಈ ಕುರಿತು ಸೋಮವಾರವೇ ನರೇಂದ್ರ ಮೋದಿ ಅವರು ಘೋಷಣೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರಿಡಲು ಶಿಫಾರಸು: ಸಿಎಂ ಬಸವರಾಜ ಬೊಮ್ಮಾಯಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

ವಿಸ್ತಾರ ಸಂಪಾದಕೀಯ: ಸರ್ಕಾರಿ ಶಾಲೆಗಳ ಬಲವರ್ಧನೆಗೆ ತಜ್ಞರ ಸೂತ್ರಗಳು ಜಾರಿಯಾಗಲಿ

VISTARANEWS.COM


on

Vistara Editorial, Let the strengthening government schools
Koo

ಸರ್ಕಾರಿ ಶಾಲೆಗಳು ಹಾಗೂ ಆ ಶಾಲೆಗಳಿಗೆ ತೆರಳುವ ಮಕ್ಕಳ ಹಿತದೃಷ್ಟಿಯಿಂದ ಆಗಲೇಬೇಕಾದ ಹಲವಾರು ಕಾರ್ಯಗಳ ಬಗ್ಗೆ ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯು ಶಿಕ್ಷಣ ಸಚಿವರ ಗಮನಕ್ಕೆ ತಂದಿದೆ. ಏಕೋಪಾಧ್ಯಾಯ/ ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಕೂಡಲೇ ಕಾಯಂ ಶಿಕ್ಷಕರ ನೇಮಕ ಮಾಡಬೇಕು. ಕಾಯಂ ಶಿಕ್ಷಕರನ್ನು ಅತ್ಯಗತ್ಯವಿರುವ ಗ್ರಾಮೀಣ ಪ್ರದೇಶಗಳಿಗೆ ನಿಯೋಜನೆ ಮಾಡುವುದು ಸೇರಿದಂತೆ ಇನ್ನಿತರ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪತ್ರ ಬರೆದು ಒತ್ತಾಯ ಮಾಡಿದೆ. ಈ ಸಂಬಂಧ ಹತ್ತು ಸೂತ್ರವನ್ನೂ ನೀಡಿದೆ. ಮಕ್ಕಳ ಶೈಕ್ಷಣಿಕ (Education News) ಪ್ರಗತಿಯ ಹಿತದೃಷ್ಟಿಯಿಂದ ಈ ಕಾರ್ಯಗಳನ್ನು ಮಾಡುವಂತೆ ಒತ್ತಾಯ ಮಾಡಿದೆ. ಇದೇ ಸಂದರ್ಭದಲ್ಲಿ, 8ನೇ ತರಗತಿಯಲ್ಲಿ ಓದುವ ಮಕ್ಕಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಉಚಿತ ಸೈಕಲ್‌ (Free bicycle) ಕೊಡಲು ಬಜೆಟ್‌ನಲ್ಲಿ ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಭರವಸೆ ನೀಡಿದ್ದಾರೆ. ಭರವಸೆಗಳನ್ನು ಆಗುಮಾಡುವುದರ ಜೊತೆಗೆ, ತಜ್ಞರ ಮಾತುಗಳ ಬಗೆಗೂ ಸಚಿವರು ಕಿವಿಗೊಡುವುದು ಅಗತ್ಯವಾಗಿದೆ(Vistara Editorial).

ಶಾಲಾ ಶಿಕ್ಷಣದಲ್ಲಿ ಮಕ್ಕಳು ಕಲಿಕೆಯ ಕೇಂದ್ರ ಬಿಂದು. ಮಕ್ಕಳಿಗಿರುವ ಶಿಕ್ಷಣದ ಮೂಲಭೂತ ಹಕ್ಕಿನ ಭಾಗವಾಗಿ ಒದಗಿಸಬೇಕಾದ ಉತ್ತೇಜಕಗಳು, ಕಲಿಯಲು ಅಗತ್ಯವಾದ ಮೂಲ ಸೌಕರ್ಯ ಹಾಗೂ ಕಲಿಸಲು ಬೇಕಾದ ಅರ್ಹ ಶಿಕ್ಷಕರನ್ನು ಒದಗಿಸುವುದು ಸರ್ಕಾರದ ಮೊದಲ ಆದ್ಯತೆ. ರಾಜ್ಯದಲ್ಲಿ ಹಲವು ವರ್ಷಗಳಿಂದ ಶಾಲೆ ಪ್ರಾರಂಭವಾಗಿ ಹಲವು ತಿಂಗಳು ಕಳೆದರೂ ಮಕ್ಕಳಿಗೆ ಪಠ್ಯಪುಸ್ತಕ ಮತ್ತು ನೋಟ್ ಪುಸ್ತಕ, ಸಮವಸ್ತ್ರ ಮತ್ತು ಶೂ, ಸಾಕ್ಸ್ ಸಕಾಲಕ್ಕೆ ದೊರೆತಿಲ್ಲ. ಜತೆಗೆ, ಏಳನೇ ತರಗತಿಯಿಂದ ಎಂಟು ಅಥವಾ ಎಂಟರಿಂದ ಒಂಬತ್ತನೇ ತರಗತಿಗೆ ಹೋಗುತ್ತಿರುವ ಮಕ್ಕಳಿಗೆ ಕಳೆದ ಮೂರು ವರ್ಷದಿಂದ ಉಚಿತ ಬೈಸಿಕಲ್ ಸಿಕ್ಕಿಲ್ಲ. ಎಲ್ಲ ಮಕ್ಕಳಿಗೆ ಪರಿಷ್ಕೃತ ಪಠ್ಯಪುಸ್ತಕ ಮತ್ತು ನೋಟ್ ಪುಸ್ತಕ, 2 ಜತೆ ಸಮವಸ್ತ್ರ ಮತ್ತು 2 ಜತೆ ಶೂ ಹಾಗೂ ಸಾಕ್ಸ್ ವಿತರಣೆ ಮಾಡಬೇಕು. ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ. ವಿಳಂಬವಾದಲ್ಲಿ ಶಾಲೆ ಪ್ರಾರಂಭದಲ್ಲಿಯೇ ಅತಿಥಿ ಶಿಕ್ಷಕರ ನೇಮಕ. ಏಕೋಪಾಧ್ಯಾಯ/ ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಕೂಡಲೇ ಕಾಯಂ ಶಿಕ್ಷಕರ ನೇಮಕ ಮುಂತಾದ ಕ್ರಮಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲು ತಜ್ಞರ ವೇದಿಕೆ ಆಗ್ರಹಿಸಿದೆ.

ಇವರ ಬೇಡಿಕೆಗಳಲ್ಲಿ ಸರ್ಕಾರಿ ಶಾಲೆಗಳನ್ನು ಸಾಮೂಹಿಕವಾಗಿ ಮುಚ್ಚುವ/ ವಿಲೀನಗೊಳಿಸುವ ಪ್ರಕ್ರಿಯೆಗಳು ಪೂರ್ಣವಾಗಿ ನಿಲ್ಲಬೇಕು ಎಂಬುದು ಇದೆ. ಇದು ಮುಖ್ಯವಾದುದು. ಇಂಗ್ಲಿಷ್‌ ಶಾಲೆಗಳು ಹಳ್ಳಿಹಳ್ಳಿಗಳಲ್ಲಿ ಹೆಚ್ಚುತ್ತಿರುವುದು ಮತ್ತು ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯಗಳು ಕಡಿಮೆಯಾಗುತ್ತಿರುವುದು ಬಡ ಮಕ್ಕಳ ಶಿಕ್ಷಣಕ್ಕೆ ಚಪ್ಪಡಿಕಲ್ಲು ಎಳೆದಂತೆ. ಹೀಗಾಗಬಾರದು. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಭಾಗವಾಗಿ ಮಧ್ಯಾಹ್ನದ ಬಿಸಿಯೂಟದ ವೆಚ್ಚಕ್ಕೆ ಈಗಿರುವ ಪ್ರತಿ ಮಗುವಿನ ಯುನಿಟ್ ವೆಚ್ಚವನ್ನು ಹೆಚ್ಚಿಸಬೇಕು. ಈ ಶೈಕ್ಷಣಿಕ ವರ್ಷದ ಕೊನೆಯಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಸ್ಥಿತಿಗತಿ ಅರಿಯಲು ಸಿಆರ್‌ಪಿ, ಶಿಕ್ಷಣ ಸಂಯೋಜಕರು, ಬಿಆರ್‌ಸಿ, ಬಿಆರ್‌ಪಿ, ಬಿಇಒ, ಡಿಡಿಪಿಐ ಮತ್ತು ಡಯಟ್ ಸಿಬ್ಬಂದಿ ಶಾಲೆಗಳಿಗೆ ಭೇಟಿ ನೀಡಿ ವಿವರವಾದ ವರದಿ ಸಲ್ಲಿಸಲು ಕ್ರಮ ವಹಿಸಬೇಕು. ಶಿಕ್ಷಣ ಹಕ್ಕು ಕಾಯಿದೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಎಲ್ಲ ಮೂಲಭೂತ ಸೌಕರ್ಯ ಒದಗಿಸಲು ಕಾಲಮಿತಿ ಯೋಜನೆ ರೂಪಿಸಬೇಕು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳನ್ನು ಪ್ರಜಾಸತ್ತಾತ್ಮಕವಾಗಿ ರಚಿಸಿ ಬಲವರ್ಧನೆಗೊಳಿಸಬೇಕು. ಕನಿಷ್ಠ 12ನೆಯ ತರಗತಿಯವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ವಿಸ್ತರಿಸಲು ಸಂವಿಧಾನ ಹಾಗೂ ಶಿಕ್ಷಣ ಹಕ್ಕು ಕಾಯಿದೆಗೆ ಅಗತ್ಯ ತಿದ್ದುಪಡಿ ತರಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದೂ ವೇದಿಕೆ ಆಗ್ರಹಿಸಿದೆ. ಇವೆಲ್ಲವೂ ಆಗಬೇಕಾದ ವಿಚಾರಗಳೇ. ಸರ್ಕಾರ ಇವುಗಳ ಬಗ್ಗೆ ಶೀಘ್ರ ಗಮನ ಹರಿಸಬೇಕು.

ಇದೇ ಹೊತ್ತಿಗೆ ರಾಜ್ಯ ಸರ್ಕಾರ, ಕೇಂದ್ರವು ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈಬಿಟ್ಟು ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಿ ಜಾರಿ ಮಾಡಲು ಮುಂದಾಗಿದೆ. ಶಿಕ್ಷಣ ನೀತಿ ಎಂಬುದು ಒಂದೊಂದು ರಾಜ್ಯಕ್ಕೊಂದೊಂದು ಎಂಬಂತಾಗುವುದರಲ್ಲಿ ಅರ್ಥವಿಲ್ಲ. ಕೇಂದ್ರ ತಂದಿರುವ ಶಿಕ್ಷಣ ನೀತಿಯು ವೃತ್ತಿಪರ ಶಿಕ್ಷಣ, ಮಕ್ಕಳ ಜ್ಞಾನವರ್ಧನೆ ಇತ್ಯಾದಿಗಳ ಕಡೆಗೆ ಹೆಚ್ಚಿನ ಗಮನ ಕೊಟ್ಟು ವೈಜ್ಞಾನಿಕವಾಗಿ ರೂಪುಗೊಂಡಿದೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷ ರಾಜಕೀಯ ಕಾರಣಗಳಿಗಾಗಿ ಇದನ್ನು ಬದಲಾಯಿಸಲು ಹೊರಟಂತಿದೆ. ರಾಜ್ಯ ನೀತಿ ಒಂದು, ರಾಷ್ಟ್ರದ ನೀತಿಯೇ ಒಂದು ಎಂಬಂತಾಗುವುದರಿಂದ ಮಕ್ಕಳಿಗೆ ಭವಿಷ್ಯದಲ್ಲಿ ಸಮಸ್ಯೆಯೇ ಆಗುತ್ತದೆ ಹೊರತಾಗಿ ಯಾವುದೇ ಪ್ರಯೋಜನವಿಲ್ಲ. ಈ ಬಗ್ಗೆ ಕೂಡ ಸರಿಯಾದ ತಜ್ಞರ ಅಭಿಪ್ರಾಯವನ್ನು ಪಡೆದು ಸರ್ಕಾರ ಒಂದು ಸಮರ್ಪಕ ನಿರ್ಧಾರವನ್ನು ತೆಗೆದುಕೊಳ್ಳಬೇಕಿದೆ.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ಸಂಸದೆಯ ಕೃತ್ಯಕ್ಕೆ ತಕ್ಕ ಶಿಕ್ಷೆ, ಇತರರಿಗೂ ಪಾಠವಾಗಲಿ

Continue Reading

ಕರ್ನಾಟಕ

HD Kumaraswamy: ಕಲ್ಲಡ್ಕ ಪ್ರಭಾಕರ ಭಟ್ ಗುಣಗಾನ ಮಾಡಿದ ಎಚ್‌ಡಿಕೆ; ಶ್ರೀರಾಮ ಶಾಲೆ ಕ್ರೀಡೋತ್ಸವದಲ್ಲಿ ಭಾಗಿ

HD Kumaraswamy: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದ ಕ್ರೀಡೋತ್ಸವದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಭಾಗವಹಿಸಿದ್ದರು.

VISTARANEWS.COM


on

HD Kumaraswamy
Koo

ಮಂಗಳೂರು: ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದ ಕ್ರೀಡೋತ್ಸವದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರು ಶನಿವಾರ ರಾತ್ರಿ ಭಾಗವಹಿಸಿ, ಹೊನಲು ಬೆಳಕಿನಲ್ಲಿ ಮಕ್ಕಳ ಸಾಹಸ ಪ್ರದರ್ಶನವನ್ನು ವೀಕ್ಷಿಸಿದರು. ಬಿಜೆಪಿಯ ಪ್ರಮುಖ ನಾಯಕರು, ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಕ್ಕಳಿಂದ ಸಾಹಸ ಕ್ರೀಡೆಗಳ ಜತೆ ದೇಶ ಪ್ರೇಮದ ಸಂದೇಶ ಸಾರಿದ್ದು ಗಮನ ಸೆಳೆಯಿತು.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀ ರಾಮ ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಕ್ರೀಡೋತ್ಸವದಲ್ಲಿ ರಾಷ್ಟ್ರ ಭಕ್ತಿಯ ಜತೆಗೆ ರಾಮ ಭಕ್ತಿಯ ಅನಾವರಣವಾಯಿತು. ನಂತರ ಒಂದೇ ಮಾತರಂ ಘೋಷಣೆಗಳು ಮೊಳಗಿದವು. ಈ ವೇಳೆ ಮೋದಿ ಗೆಟಪ್‌ನಲ್ಲಿ ಕಾಣಿಸಿಕೊಂಡ ವಿದ್ಯಾರ್ಥಿ, ಚಂದ್ರಯಾನ 3 ಉಡಾವಣೆ ಮರುಸೃಷ್ಟಿ ಗಮನ ಸೆಳೆಯಿತು. ನಂತರ ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್‌ಗೆ ಪುಷ್ಪ ನಮನ ಸಲ್ಲಿಸಲಾಯಿತು.

ಮಕ್ಕಳ ಸಾಹಸ ಹಾಗೂ ನೃತ್ಯ ವೀಕ್ಷಿಸಿದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು, ಕ್ರೀಡೋತ್ಸವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ, ಪ್ರಭಾಕರ ಭಟ್ ಅವರ ಗುಣಗಾನ ಮಾಡಿದರು. ಪ್ರಭಾಕರ್ ಭಟ್ ಅವರ ಬಗ್ಗೆ ನನಗೆ ಈ ಹಿಂದೆ ಹೆಚ್ಚಿನ ಮಾಹಿತಿ ಇರಲಿಲ್ಲ. ಇಂದು ಇಲ್ಲಿ ಭಾಗವಹಿಸಿರುವುದು ನನ್ನ ಭಾಗ್ಯ. ಉತ್ತಮ ಶಿಕ್ಷಣ ನೀಡುವಲ್ಲಿ ಭಟ್ ಅವರ ಕೊಡುಗೆ ಸ್ಮರಿಸಬೇಕು. ಇಂತಹ ಕಾರ್ಯಕ್ರಮ ಮಾಡಲು ಸುಲಭವಲ್ಲ. ಅದೇ ರೀತಿ ಈ ಶಾಲೆ ಕಟ್ಟಿರುವುದು ಸಾಮಾನ್ಯ ವಿಚಾರವಲ್ಲ. ಜ್ಞಾನ ವಿಕಾಸದ ಜತೆ ಎಲ್ಲಾ ರೀತಿಯ ವಿಕಾಸ ಇಲ್ಲಿ ಆಗುತ್ತಿದೆ. ಪ್ರಭಾಕರ್ ಭಟ್ ಇಂದು ನನ್ನ ಕಣ್ಣು ತೆರೆಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ | JDS Karnataka: ಪಕ್ಷ ವಿರೋಧಿ ಚಟುವಟಿಕೆ; ಸಿ.ಎಂ.ಇಬ್ರಾಹಿಂ, ಕೇರಳದ ಸಿ.ಕೆ. ನಾನು ಉಚ್ಚಾಟನೆ

ನಮ್ಮ ಶಾಲಾ ದಿನಗಳಲ್ಲಿ ಮಾಡುತ್ತಿದ್ದ ರಾಮ ಭಜನೆ ಮತ್ತೆ ನೆನಪಿಸಿದ್ದಾರೆ. ಸರ್ಕಾರಕ್ಕೆ ಕಣ್ಣು ತೆರೆಸುವ ರೀತಿಯಲ್ಲಿ ಅವರು ಶಾಲೆ ನಡೆಸುತ್ತಿದ್ದಾರೆ. ನಾನು ಈ ಹಿಂದೆ ಅವರ ಬಗ್ಗೆ ಮಾಡಿದ್ದ ಟೀಕೆ ಬೇರೆ, ಈಗಿನ ಹೊಗಳಿಕೆ ಬೇರೆ. ಇಲ್ಲಿಗೆ ಬಂದ ಮೇಲೆ ನನಗೆ ನಿಜ ವಿಚಾರ ಗೊತ್ತಾಗಿದೆ. ಅಂದು ದಾರಿ ತಪ್ಪಿದ್ದೆ ಎನ್ನುವುದನ್ನು ಪ್ರಾಮಾಣಿಕವಾಗಿ ಒಪ್ಪುತ್ತೇನೆ. ಕೆಲವರು ನನ್ನ ದಾರಿ ತಪ್ಪಿಸಿದ್ದ ಕಾರಣ ಕೆಲ ಹೇಳಿಕೆ ನೀಡಿದ್ದೆ ಎಂದು ತಿಳಿಸಿದರು.

Continue Reading

ಕರ್ನಾಟಕ

Car Accident: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ನಾಲ್ವರ ದುರ್ಮರಣ

Car Accident: ಚಿಕ್ಕಬಳ್ಳಾಪುರ ಬಳಿಯ ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಅಂಡರ್ ಪಾಸ್‌ನಲ್ಲಿ ವೇಗವಾಗಿ ಬಂದಾಗ ಕಾರು ಅಪಘಾತ ನಡೆದಿದ್ದು, ನಾಲ್ವರು ಮೃತಪಟ್ಟಿದ್ದಾರೆ.

VISTARANEWS.COM


on

Car accident
Koo

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಗುಂಡಿಗೆ ಬಿದ್ದು ನಾಲ್ವರು ದುರ್ಮರಣ ಹೊಂದಿದ ಘಟನೆ (Car Accident) ನಗರದ ಬೈಪಾಸ್ ಬಳಿಯ ಅಂಜನೇಯ ಸ್ವಾಮಿ ದೇವಾಲಯದ ಬಳಿ ನಡೆದಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಅಂಡರ್ ಪಾಸ್‌ನಲ್ಲಿ ವೇಗವಾಗಿ ಬಂದು ಗುಂಡಿಯೊಳಗೆ ಬಿದ್ದಿದ್ದರಿಂದ ಕಾರಿನೊಳಗಿದ್ದ ನಾಲ್ವರು ಜಲಸಮಾಧಿಯಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಕಾರನ್ನು ಗುಂಡಿಯಿಂದ ಹೊರತೆಗೆಯುವ ಕೆಲಸ ಮಾಡುತ್ತಿದ್ದಾರೆ. ಮೃತರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕಾರು ಹರಿದು ಅಯ್ಯಪ್ಪ ಮಾಲಾಧಾರಿ ಸಾವು, ಇಬ್ಬರಿಗೆ ಗಂಭೀರ ಗಾಯ

ಚಿಕ್ಕಬಳಾಪುರ: ಕಾರು ಹರಿದ ಪರಿಣಾಮ ಅಯ್ಯಪ್ಪಸ್ವಾಮಿ ಮಾಲಾಧಾರಿಯೊಬ್ಬರು ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥ ಬಳಿ ನಡೆದಿದೆ.

ಹಿಂದೂಪುರ ಮೂಲದ ಪ್ರಹ್ಲಾದ (36) ಮೃತರು. ಗಾಯಗೊಂಡ ಮಣಿಕಂಠ ಹಾಗು ವೆಂಕಟೇಶ್ ಎಂಬುವರ ಸ್ಥಿತಿ ಚಿಂತಾಜನಕವಾಗಿದೆ. ಹಿಂದೂಪುರದಿಂದ ಶಬರಿಮಲೆಗೆ ಪಾದಯಾತ್ರೆ ಮಾಡುತಿದ್ದ ವೇಳೆ ಕಾರು ಹರಿದಿದ್ದರಿಂದ ದುರಂತ ಸಂಭವಿಸಿದೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Bus Accident: ಬಸ್‌ ಪಲ್ಟಿಯಾಗಿ ನಾಲ್ವರ ಸಾವು; ಮದುವೆಗೆ ಹೊರಟಿದ್ದವರು ಮಸಣ ಸೇರಿದರು

ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರ ಸವಾರರ ಸಾವು

Bike accident

ಆನೇಕಲ್: ಬೈಕ್‌ನಿಂದ ಬಿದ್ದು ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಜಿಗಣಿ ಸಮೀಪದ ಮಾದ ಪಟ್ಟಣದ ಬಳಿ ಶನಿವಾರ ನಡೆದಿದೆ. ರಸ್ತೆ ಹಂಪ್ ಗೊತ್ತಾಗದೇ ಸಾಗಿದ್ದರಿಂದ ಬೈಕ್ ಸ್ಕಿಡ್ ಆಗಿ ಅಪಘಾತ (Bike Accident) ಸಂಭವಿಸಿದೆ.

ಒಡಿಶಾ ಮೂಲದ ಕಾರ್ಮಿಕರಾದ ಫೋಕೀರ್ ಚರಣ್ ಪ್ರಧಾನ್ (29), ಬೀರ್ ಸಿಂಗ್ ನಾಯಕ್(24) ಮೃತರು. ಕೆಲಸ ಮುಗಿಸಿಕೊಂಡು ಜಿಗಣಿಯಿಂದ ಇಂಡ್ಲವಾಡಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಮಾದಪಟ್ಟಣ ಬಳಿ ರಸ್ತೆ ಹಂಪ್ ಗೊತ್ತಾಗದೆ ಸವಾರ ಬ್ರೇಕ್ ಹಾಕಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡು ಮುಂಭಾಗದಲ್ಲಿ ನಿಂತಿದ್ದ ಬಸ್‌ಗೆ ಬೈಕ್‌ ಡಿಕ್ಕಿಯಾಗಿದೆ. ಇದರಿಂದ ಸವಾರರು ಹಾರಿ ಬಿದ್ದಾಗ ಬಸ್‌ಗೆ ತಲೆ ತಗುಲಿ ಗಂಭೀರ ಗಾಯಗೊಂಡಿದ್ದರಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ | Someshwara Beach: ದ್ವಿತೀಯ ಪಿಯುಸಿ ಇಬ್ಬರು ವಿದ್ಯಾರ್ಥಿಗಳು ಸೋಮೇಶ್ವರದಲ್ಲಿ ಸಮುದ್ರಪಾಲು

L&t ಕಂಪನಿಯಲ್ಲಿ ಹೆಲ್ಪರ್‌ ಆಗಿ ಫೋಕೀರ್ ಚರಣ್ ಪ್ರಧಾನ್, ಶಕ್ತಿ ಪ್ರೊಸೆಸಿಂಗ್ ಕಂಪನಿಯಲ್ಲಿ ಸಹಾಯಕನಾಗಿ ಬೀರ್ ಸಿಂಗ್ ನಾಯಕ್ ಕೆಲಸಮಾಡುತ್ತಿದ್ದ. ಮೃತ ದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಜಿಗಣಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Farmers Protest: ಸ್ವಾಮೀಜಿಗಳ ಸಂಧಾನ ಯಶಸ್ವಿ; ಕಿತ್ತೂರಲ್ಲಿ ಪ್ರತಿಭಟನೆ ಹಿಂಪಡೆದ 9 ಹಳ್ಳಿ ರೈತರು

Farmers Protest: ಕುಲವಳ್ಳಿ ರೈತರ ಒಕ್ಕಲೆಬ್ಬಿಸುವಿಕೆ ವಿರೋಧಿಸಿ 9 ಗ್ರಾಮಗಳ ರೈತರು ಕಿತ್ತೂರಿನಲ್ಲಿ ಶುಕ್ರವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದರು.

VISTARANEWS.COM


on

Farmers Protest
Koo

ಬೆಳಗಾವಿ: ಸ್ವಾಮೀಜಿಗಳ ನೇತೃತ್ವದಲ್ಲಿ ಸಂಧಾನ ಯಶಸ್ವಿಯಾಗಿದ್ದು, ಕಿತ್ತೂರಿನಲ್ಲಿ ಪ್ರತಿಭಟನೆ ಹಿಂಪಡೆಯಲು 9 ಗ್ರಾಮಗಳ ರೈತರು ತಾತ್ಕಾಲಿಕ ಒಪ್ಪಿಗೆ ನೀಡಿದ್ದಾರೆ. ಇದೇ ವೇಳೆ ಬಂಧಿಸಿರುವ 12 ರೈತರಿಗೆ ಜಾಮೀನು ನೀಡಿ ಸೋಮವಾರ ಬಿಡುಗಡೆ ಮಾಡಬೇಕು ಎಂದು ರೈತರು ಒತ್ತಾಯಿಸಿದ್ದು, ತಪ್ಪಿದ್ದಲ್ಲಿ ಮತ್ತೆ ಪ್ರತಿಭಟನೆ (Farmers Protest) ನಡೆಸುವಾಗಿ ಎಚ್ಚರಿಕೆ ನೀಡಿದ್ದಾರೆ.

ಕುಲವಳ್ಳಿ ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ವಿರೋಧಿಸಿ 9 ಗ್ರಾಮಗಳ ರೈತರು ಕಿತ್ತೂರಿನಲ್ಲಿ ಶುಕ್ರವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದರು. ಸಚಿವರನ್ನು ಭೇಟಿ ಮಾಡಿಸುವುದಾಗಿ ಕಿತ್ತೂರು ಕಲ್ಮಠ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ ಅವರು ಭರವಸೆ ನೀಡಿದ್ದರಿಂದ ರೈತರು ಹೋರಾಟ ಕೈಬಿಟ್ಟಿದ್ದಾರೆ.

ಎರಡು‌ ಕಡೆಯಿಂದ ದಾಖಲೆ ಬರಬೇಕು, ಇದು ಸಾವಿರಾರು ಎಕರೆ ಜಮೀನಿನ ಸಮಸ್ಯೆ. ದಾಖಲೆ ತರುವುದು ನನ್ನ ಕೆಲಸವಲ್ಲ, ಬಂಧನವಾದವರಿಗೆ ಸಮಸ್ಯೆ ಆಗಬಾರದು ಎಂದು ತಾತ್ಕಾಲಿಕ ಧರಣಿ ವಾಪಸ್ ಪಡೆಯಲು ಹೇಳಿದ್ದೇನೆ. ಸೋಮವಾರ ಒಂದು ದಿನ ಸಮಯ ಕೇಳಿದ್ದೇನೆ. ನಂತರ ಸಚಿವರನ್ನು ಭೇಟಿ ಮಾಡುತ್ತೇವೆ. ದಾಖಲೆ ಕೊಡುವುದು, ವಕೀಲರನ್ನು ನೇಮಿಸುವುದು ನನ್ನ ಕೆಲಸ ಅಲ್ಲಾ. ಕೆಲವು ದಾಖಲೆ ಅಧಿಕಾರಿಗಳ ಬಳಿ ಇವೆ, ಕೆಲ ದಾಖಲೆ ರೈತರ ಬಳಿ ಇವೆ. ಇವುಗಳನ್ನು ಪರಿಶೀಲಿಸಿ ಇತ್ಯರ್ಥ ಮಾಡಬೇಕಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.

ಇದನ್ನೂ ಓದಿ | Farmers Protest: ರೈತರ ಒಕ್ಕಲೆಬ್ಬಿಸುವಿಕೆಗೆ ಆಕ್ರೋಶ; ಕಿತ್ತೂರಲ್ಲಿ ಹೆದ್ದಾರಿ ತಡೆದು 9 ಗ್ರಾಮಸ್ಥರ ಪ್ರತಿಭಟನೆ

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಕುಲವಳ್ಳಿ ಗ್ರಾಮಸ್ಥರು ಸೇರಿ 9 ಹಳ್ಳಿಗಳಿಂದ ಜಾನುವಾರು, ಟ್ರ್ಯಾಕ್ಟರ್ ಸಮೇತ ಸಾವಿರಾರು ಜನರು, ಕಿತ್ತೂರು ಚೆನ್ನಮ್ಮ‌ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. 9 ಹಳ್ಳಿಗಳ ರೈತರ ಸಾಗುವಳಿ ಜಮೀನನ್ನು ಕಂದಾಯ ಅಧಿಕಾರಿಗಳು ಇನಾಮದಾರ್ ಹೆಸರಿಗೆ ಖಾತೆ ‌ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ 70 ವರ್ಷದಿಂದ ಉಳುಮೆ ಮಾಡಿರುವ ರೈತರು, ತಮ್ಮ ಜಮೀನು ಬಿಟ್ಟು ಕೊಡುವಂತೆ ಒತ್ತಾಯಿಸಿದ್ದಾರೆ.

ಚೆನ್ನಮ್ಮ ವೃತ್ತದ ಬಳಿ ಶುಕ್ರವಾರ ರಸ್ತೆ ಬಂದ್ ಮಾಡಿದ್ದರಿಂದ ವಾಹನ ಸವಾರರು ಪರದಾಡಿದರು. ಈ ಹಿನ್ನೆಲೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬೆಳಗಾವಿಯ ಅಡಿಷನಲ್ ಎಸ್ಪಿ ಎಂ. ವೇಣುಗೋಪಾಲ್ ಆಗಮಿಸಿ ಬಿಗಿ ಬಂದೋಬಸ್ತ್‌ಗೆ ಕ್ರಮ ಕೈಗೊಂಡಿದ್ದರು. ಆದರೆ, ಶನಿವಾರ ಸಂಜೆ ಸ್ವಾಮೀಜಿಗಳು ಸಂಧಾನ ನಡೆಸಿದ್ದರಿಂದ ರೈತರು ಪ್ರತಿಭಟನೆ ವಾಪಸ್‌ ಪಡೆದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Vistara Editorial, Let the strengthening government schools
ಕರ್ನಾಟಕ7 mins ago

ವಿಸ್ತಾರ ಸಂಪಾದಕೀಯ: ಸರ್ಕಾರಿ ಶಾಲೆಗಳ ಬಲವರ್ಧನೆಗೆ ತಜ್ಞರ ಸೂತ್ರಗಳು ಜಾರಿಯಾಗಲಿ

Dina Bhavishya
ಪ್ರಮುಖ ಸುದ್ದಿ1 hour ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

Sphoorti Salu
ಸುವಚನ1 hour ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

HD Kumaraswamy
ಕರ್ನಾಟಕ6 hours ago

HD Kumaraswamy: ಕಲ್ಲಡ್ಕ ಪ್ರಭಾಕರ ಭಟ್ ಗುಣಗಾನ ಮಾಡಿದ ಎಚ್‌ಡಿಕೆ; ಶ್ರೀರಾಮ ಶಾಲೆ ಕ್ರೀಡೋತ್ಸವದಲ್ಲಿ ಭಾಗಿ

Car accident
ಕರ್ನಾಟಕ7 hours ago

Car Accident: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ನಾಲ್ವರ ದುರ್ಮರಣ

Houses without infrastructure are not completed PMAY houses
ದೇಶ7 hours ago

ಮೂಲಸೌಕರ್ಯ ಒದಗಿಸದ ಮನೆಗಳು ಪೂರ್ಣಗೊಂಡ ಪಿಎಂಎವೈ ಮನೆಗಳಲ್ಲ!

UP Yoddhas vs Telugu Titans
ಕ್ರೀಡೆ7 hours ago

Pro Kabaddi: ಯೋಧಾಸ್​ ಆರ್ಭಟಕ್ಕೆ ಮುಳುಗಿದ ತೆಲುಗು ಟೈಟಾನ್ಸ್‌

Central government bars onion export to curb inflation
ದೇಶ8 hours ago

ಈರುಳ್ಳಿ ರಫ್ತು ನಿಷೇಧ! ಎಥೆನಾಲ್‌ ಉತ್ಪಾದನೆಗೆ ಕಬ್ಬು ಬಳಸುವಂತಿಲ್ಲ

Nat Sciver-Brunt celebrates dismissing Harmanpreet Kaur
ಕ್ರಿಕೆಟ್8 hours ago

INDW vs ENGW: ಹೀನಾಯವಾಗಿ ಸೋತು ಸರಣಿ ಕಳೆದುಕೊಂಡ ಭಾರತ ಮಹಿಳಾ ತಂಡ

Farmers Protest
ಕರ್ನಾಟಕ8 hours ago

Farmers Protest: ಸ್ವಾಮೀಜಿಗಳ ಸಂಧಾನ ಯಶಸ್ವಿ; ಕಿತ್ತೂರಲ್ಲಿ ಪ್ರತಿಭಟನೆ ಹಿಂಪಡೆದ 9 ಹಳ್ಳಿ ರೈತರು

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ1 hour ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ1 day ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema1 day ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema1 day ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema1 day ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ2 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ2 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ3 days ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ3 days ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

ಟ್ರೆಂಡಿಂಗ್‌