Best Teacher Award : ಕರ್ನಾಟಕದ ಇಬ್ಬರು ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ - Vistara News

ಉತ್ತರ ಕನ್ನಡ

Best Teacher Award : ಕರ್ನಾಟಕದ ಇಬ್ಬರು ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ

ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಪ್ರತಿ ವರ್ಷ ನೀಡುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕರ್ನಾಟಕದ ಇಬ್ಬರು ಶಿಕ್ಷಕರು (Best Teacher Award) ಪಾತ್ರರಾಗಿದ್ದಾರೆ.

VISTARANEWS.COM


on

Award Teacher
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 2023ರ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ದೇಶದ 50 ಶಿಕ್ಷಕರಿಗೆ ‘ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ’ ಘೋಷಿಸಿದೆ. ಕರ್ನಾಠಖ ಇಬ್ಬರು ಶಿಕ್ಷಕರು ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬ ಸರಕಾರಿ ಪಿಯು ಕಾಲೇಜು -ಹೈಸ್ಕೂಲ್‌ನ ನಾರಾಯಣ್‌ ಪರಮೇಶ್ವರ್‌ ಭಾಗ್ವತ್​​ ಮತ್ತು ಬಾಗಲಕೋಟೆ ಜಿಲ್ಲೆಯ ಕೆಎಲ್‌ಇ ಸೊಸೈಟಿಯ ಎಸ್‌ಸಿಪಿ ಜೂನಿಯರ್‌ ಕಾಲೇಜ್‌ ಹೈಸ್ಕೂಲ್‌ನ ಸಪ್ನಾ ಶ್ರೀಶೈಲ್‌ ಅನಿಗೋಳ್‌ ಅತ್ಯುತ್ತಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸೆಪ್ಟೆಂಬರ್‌ 5ರಂದು ದಿಲ್ಲಿಯಲ್ಲಿ ನಡೆಯಲಿರುವ ಶಿಕ್ಷಕರ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 50 ಸಾವಿರ ರೂ. ನಗದು ಮತ್ತು ಪದಕವನ್ನು ಒಳಗೊಂಡಿದೆ.

ರಸಾಯನ ಶಾಸ್ತ್ರ ಶಿಕ್ಷಕಿ ಸ್ವಪ್ನಾ ಅನಿಗೋಳ್​​

ಬಾಗಲಕೋಟೆ ಜಿಲ್ಲೆಯ ‌ಮಹಾಲಿಂಗಪುರದ ಕೆಎಲ್ ಇ ಜ್ಯೂನಿಯರ್ ಕಾಲೇಜಿನ‌ ಶಿಕ್ಷಕಿ ಸ್ವಪ್ನಾ ಅನಿಗೋಳ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಪಾತ್ರರಾದ ಕನ್ನಡಿಗರು. ಎಂಎಸ್ ಸಿ, ಬಿಎಡ್ ಪದವೀಧರೆಯಾಗಿರುವ ಸ್ವಪ್ನಾ ವಿಜ್ಞಾನ ವಿಷಯದ ಶಿಕ್ಷಕಿ. ವಿಭಿನ್ನವಾಗಿ ಬೋಧನಾ ಶೈಲಿಯ ಮೂಲಕ ಮಕ್ಕಳ ಮನ ಗೆದ್ದವರು ಅವರು.

ಇದನ್ನೂ ಓದಿ : Sunday Read: ಹೊಸ ಪುಸ್ತಕ: ನಾ.ಮೊಗಸಾಲೆ ಕಾದಂಬರಿ: ನೀರು

ಪ್ರತಿ ದಿನ ಮಕ್ಕಳ ಹಾಜರಾತಿ ಪಡೆಯುವ ವೇಳೆ ಮಕ್ಕಳ ಹೆಸರಿನ ಬದಲು ರಸಾಯನಿಕಗಳ ಹೆಸರು ಕೂಗುತ್ತಾರೆ ಸ್ವಪ್ನಾ ಟೀಚರ್​. ಸ್ಕೌಟ್ ಆ್ಯಂಡ್ ಗೈಡ್ಸ್, ಸಾಮಾಜಿಕ ಚಟುವಟಿಕೆಗಳಲ್ಲೂ ಅವರು ತೊಡಗಿಸಿಕೊಂಡಿದ್ದಾರೆ. ಮಹಾಲಿಂಗಪುರ ನಗರಸಭೆ ವ್ಯಾಪ್ತಿಯಲ್ಲಿ ಅವರನ್ನು ಸ್ವಚ್ಚತಾ ರಾಯಭಾರಿಯಾಗಿ ಅವರನ್ನು ನೇಮಿಸಲಾಗಿದೆ.

ನಾರಾಯಣ ಭಾಗವತ್​

ಶಿರಸಿಯ ಮಾರಿಕಾಂಬಾ ಪ್ರೌಢ ಶಾಲೆಯ ಕನ್ನಡ ಶಿಕ್ಷಕ ನಾರಾಯಣ ಭಾಗ್ವತ್​ ಅವರಿಗೂ ಪ್ರಶಸ್ತಿ ಲಭಿಸಿದೆ. ಅವರು ರಂಗಕರ್ಮಿಯೂ ಹೌದು. ನಾರಾಯಣ ಭಾಗವತ್ ಅವರಿಗೆ ರಾಷ್ಟ್ರ ಮಟ್ಟದಲ್ಲಿ ನೀಡಲಾಗುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಒಲಿದು ಬಂದಿದೆ.

ನಾರಾಯಣ ಭಾಗವತ್ ಅವರು ಅನೇಕ ಶೈಕ್ಷಣಿಕ ಪ್ರಯೋಗಗಳ ಜೊತೆ ಕನ್ನಡ ಭಾಷಾ ಪ್ರಯೋಗದಲ್ಲೂ ಕೆಲಸ ಮಾಡಿದ್ದಾರೆ. ಕಳೆದ ವರ್ಷ ಇವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಕೂಡ ಲಭಿಸಿತ್ತು. ರಾಷ್ಟ್ರ ಮಟ್ಟದಲ್ಲಿ ವಿಜ್ಞಾನ ನಾಟಕದಲ್ಲೂ ರಾಷ್ಟ್ರ ಮಟ್ಟದ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಲಭಿಸಿತ್ತು.

ರಾಜ್ಯ ಮಟ್ಟದಲ್ಲಿಯೂ ಶಿಕ್ಷಕರಿಗೆ ಪ್ರಶಸ್ತಿ

ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ರಾಜ್ಯ ಮಟ್ಟದಲ್ಲಿಯೂ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಸಪ್ಟೆಂಬರ್‌ 5 ರಂದು ಬೆಂಗಳೂರಿನಲ್ಲಿ ನಡೆಯುವ ಶಿಕ್ಷಣ ಇಲಾಖೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಜಿಲ್ಲೆಗೆ ಒಬ್ಬರಂತೆ 31 ಶಿಕ್ಷಕರಿಗೂ, ವಿಶೇಷ ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಅಂತೆಯೇ ಜಿಲ್ಲಾಮಟ್ಟದಲ್ಲಿ ತಾಲೂಕು ಮಟ್ಟದಲ್ಲಿಯೂ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಪ್ರಮಾಣ ತಗ್ಗಿದ್ದು, ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು (Rain News) ಉತ್ತರ ಒಳನಾಡಿನಲ್ಲಿ ಸಾಧಾರಣವಾಗಿತ್ತು. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಕೆಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಒಂದೆರಡು ಸ್ಥಳಗಳಲ್ಲಿ (Karnataka Weather Forecast) ಮಳೆಯಾಗಿದೆ.

ಎಲ್ಲೆಲ್ಲಿ ಮಳೆಯ ಸಿಂಚನ

ಉತ್ತರ ಒಳನಾಡು, ಕರಾವಳಿಯ ಕೆಲವೆಡೆ ಮಳೆಯಾಗಿರುವ ವರದಿ ಆಗಿದೆ. ರಾಯಚೂರಿನ ಗಬ್ಬೂರಿನಲ್ಲಿ 6 ಸೆಂ.ಮೀ, ಉಡುಪಿ, ಶೋರಾಪುರ, ಸೈದಾಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಅಂಕೋಲಾ, ಗೋಕರ್ಣ, ಕುಮಟಾ , ಕೆಂಭಾವಿ , ತಾವರಗೇರಾ , ಮುದಗಲ್, ಮಂಠಾಳದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಕೋಟ, ಹೊನಾವರ ವೀಕ್ಷಣಾಲಯ , ಕಾರ್ಕಳ, ಸಿದ್ದಾಪುರ, ಮಂಕಿ, ಯಲ್ಲಾಪುರ, ಯಡ್ರಾಮಿ ಸೇರಿದಂತೆ ದೇವದುರ್ಗ, ಕವಡಿಮಟ್ಟಿ ಎ.ಆ‌ರ್.ಜಿ, ಮಸ್ಕಿ, ಕಲಬುರಗಿ ವೀಕ್ಷಣಾಲಯ , ಕಕ್ಕೇರಿ, ಕಮಲಾಪುರ, ಮಾನ್ವಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಗುಡುಗು ಸಹಿತ ಮಳೆ ಎಚ್ಚರಿಕೆ

ಜೂನ್‌ 16ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಒಳನಾಡಿನ ಕೆಲವು ಸ್ಥಳಗಳಲ್ಲಿ ಕೆಲವೊಮ್ಮೆ ಗುಡುಗು ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ತಗ್ಗಿದೆ. ಮೀನುಗಾರರಿಗೆ ನೀಡಲಾಗಿದ್ದ ಸೂಚನೆಯು ಮುಗಿದಿದೆ.

ರಾಜಧಾನಿ ಬೆಂಗಳೂರಿನಲ್ಲಿ ತಣ್ಣನೆಯ ವಾತಾವರಣ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಪ್ರತ್ಯೇಕ ಸ್ಥಳದಲ್ಲಿ ಗುಡುಗು ಸಹಿತ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು 31 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Anekal News : ಯುವತಿ ಕೈ ಬಲಿ ಪಡೆದ ಅಕ್ರಮ ಡ್ರೈ ಕ್ಲೀನಿಂಗ್ ಕಾರ್ಖಾನೆ; ಚಿಕಿತ್ಸೆ ಕೊಡಿಸದೆ ಮಾಲೀಕ ಎಸ್ಕೇಪ್‌

ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ?

ಮುಂಗಾರು ಚುರುಕಾಗುತ್ತಿದೆ. ಮಳೆಗಾಲವನ್ನು ಸಿಕ್ಕಾಪಟ್ಟೆ ಪ್ರೀತಿಸುವವರು ಇದ್ದಷ್ಟೇ ಮುಖ ಹಿಂಡುವವರೂ ಇದ್ದಾರೆ. ಇದಕ್ಕೆ ಕಾರಣಗಳು ಬಹಳಷ್ಟಿದ್ದರೂ, ಈ ಒದ್ದೆ-ಥಂಡಿ-ಶೀತದ ದಿನಗಳಲ್ಲಿ ಕಾಡುವ ಸೋಂಕುಗಳು ಅವುಗಳಲ್ಲಿ ಒಂದು ಪ್ರಮುಖ ಕಾರಣ. ಹೊರಗೆ ಮೋಡ ಕಟ್ಟಿದಂತೆಯೇ ಒಳಗೆ ಮೂಗು ಕಟ್ಟಿ, ಹೊರಗಿನಂತೆ ಒಳಗೂ ಧಾರಾಕಾರ ಹರಿದು, ಗುಡುಗು-ಸಿಡಿಲಿನಂತೆ ಕೆಮ್ಮು ಪ್ರಾರಂಭವಾದರೆ- ಮಳೆಯನ್ನು ಪ್ರೀತಿಸಲು ಹೇಗೆ ಸಾಧ್ಯ? ರೋಗಾಣುಗಳನ್ನು ತಡೆಯಲು ಸಾಧ್ಯವಿಲ್ಲದಿದ್ದರೂ, ನಮ್ಮ ದೇಹವನ್ನು ಸದೃಢವಾಗಿ ಇರಿಸಿಕೊಳ್ಳಬಹುದಲ್ಲ. ರೋಗ ನಿರೋಧಕ ಶಕ್ತಿಗೆ ಬಲ ಬರುವುದೇ ನಮ್ಮ ಆಹಾರದಿಂದ. ಸೋಂಕು ದೂರ ಇರಿಸುವುದಕ್ಕೆ (Tips For Rainy Season) ಎಂಥ ಆಹಾರ ಒಳ್ಳೆಯದು?

Vitamin C foods

ವಿಟಮಿನ್‌ ಸಿ ಆಹಾರಗಳು

ದೇಹದ ರೋಗ ನಿರೋಧಕ ಶಕ್ತಿಯನ್ನು ಉದ್ದೀಪಿಸುವಲ್ಲಿ ಸಿ ಜೀವಸತ್ವ ಪ್ರಧಾನವಾಗಿ ಬೇಕು. ಅದರಲ್ಲೂ ನೆಗಡಿ, ಕೆಮ್ಮು, ಜ್ವರದಂಥ ಮಳೆಗಾಲದ ಸೋಂಕು ರೋಗಗಳನ್ನು ದೂರ ಇಡುವುದಕ್ಕೆ ವಿಟಮಿನ್‌ ಸಿ ಅಗತ್ಯವಾಗಿ ಬೇಕು. ಹಾಗಾಗಿ ಕಿತ್ತಳೆ, ನಿಂಬೆ, ದಾಳಿಂಬೆ, ಪಪ್ಪಾಯ, ಪೇರಳೆ, ಬ್ರೊಕೊಲಿ, ದಪ್ಪಮೆಣಸು, ಮೊಳಕೆ ಕಟ್ಟಿದ ಕಾಳುಗಳನ್ನು ತಪ್ಪದೆ ಆಹಾರದಲ್ಲಿ ಸೇರಿಸಿಕೊಳ್ಳಬೇಕು.

ginger

ಶುಂಠಿ

ಇದಕ್ಕೆ ಹಲವಾರು ಔಷಧೀಯ ಗುಣಗಳಿವೆ. ಅದರಲ್ಲೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ, ಬ್ಯಾಕ್ಟೀರಿಯ ನಿರೋಧಕ ಮತ್ತು ಉರಿಯೂತ ಶಾಮಕ ಗುಣಗಳು ಇದರಲ್ಲಿ ಧಾರಾಳವಾಗಿವೆ. ಕೆಮ್ಮು, ನೆಗಡಿ, ಕಫದಂಥ ಸಮಸ್ಯೆಗಳಿಗೆ ಶುಂಠಿ ಚಹಾ, ಶುಂಠಿ ಕಷಾಯಗಳು ಉಪಶಮನ ನೀಡಬಲ್ಲವು. ಗಂಟಲು ಕಟ್ಟಿದ್ದರೆ, ಗಂಟಲಲ್ಲಿ ನೋವಿದ್ದರೆ ಬೆಚ್ಚಗಿನ ಶುಂಠಿಯ ಕಷಾಯಕ್ಕೆ ಕೊಂಚ ಜೇನುತುಪ್ಪ ಸೇರಿಸಿ ಕುಡಿದರೆ ಆರಾಮ ದೊರೆತೀತು.

iamge of Zinc Foods

ಜಿಂಕ್‌ ಆಹಾರಗಳು

ನಮ್ಮ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸತುವಿನಂಶ ಇರುವ ಆಹಾರಗಳು ಸಹ ಅಗತ್ಯ. ಇದನ್ನು ಸಿ ಜೀವಸತ್ವದಂತೆ ಹೇರಳವಾಗಿ ಪಡೆಯಲಾಗದು. ಬದಲಿಗೆ, ಹಲವಾರು ಆಹಾರಗಳಿಂದ ಮಿಲಿ ಗ್ರಾಂ ಗಳ ಲೆಕ್ಕದಲ್ಲಿಯೇ ಪಡೆಯಬೇಕು ನಾವು. ಇದಕ್ಕಾಗಿ ಅಣಬೆಗಳು, ಪಾಲಕ್‌ ಸೊಪ್ಪು, ದ್ವಿದಳ ಧಾನ್ಯಗಳು, ಮೊಸರು, ಹಾಲು, ಗೋಡಂಬಿ, ಕುಂಬಳಕಾಯಿ ಬೀಜ, ಶೇಂಗಾ, ಬಾದಾಮಿಯಂಥ ಆಹಾರಗಳ ಮೂಲಕ ಈ ಸತ್ವವನ್ನು ಪಡೆಯಬಹುದು.

ಒಮೇಗಾ 3 ಕೊಬ್ಬಿನಾಮ್ಲ

ಇದು ನಮ್ಮ ಮೆದುಳು ಮತ್ತು ಹೃದಯದ ಯೋಗಕ್ಷೇಮ ನೋಡಿಕೊಳ್ಳುವುದಷ್ಟೇ ಅಲ್ಲ, ಸೋಂಕುಗಳನ್ನು ದೂರ ಮಾಡುವ ಸಾಮರ್ಥ್ಯವನ್ನೂ ಹೊಂದಿದೆ. ಇದಕ್ಕಾಗಿ ಮಳೆಗಾಲದ ಆರಂಭದಲ್ಲಿ ದೊರೆಯುವ ಬೆಣ್ಣೆ ಹಣ್ಣುಗಳನ್ನು ಯಥೇಚ್ಛವಾಗಿ ಸೇವಿಸಿ. ಜೊತೆಗೆ ವಾಲ್‌ನಟ್‌, ಬಾದಾಮಿ, ಅಗಸೆಬೀಜ, ಕೊಬ್ಬಿರುವ ಮೀನುಗಳನ್ನು ಸೇವಿಸುವುದರಿಂದ ಒಮೇಗಾ ೩ ಕೊಬ್ಬಿನಾಮ್ಲ ವಿಫುಲವಾಗಿ ಲಭಿಸುತ್ತದೆ.

Probiotic foods

ಪ್ರೊಬಯಾಟಿಕ್‌ ಆಹಾರಗಳು

ನಮ್ಮ ಜೀರ್ಣಾಂಗಗಳ ಆರೋಗ್ಯ ಚೆನ್ನಾಗಿದ್ದರೆ ಮಾತ್ರವೇ ದೇಹದ ಪ್ರತಿರೋಧಕ ಶಕ್ತಿ ಬಲವಾಗಿರುತ್ತದೆ. ಜೀರ್ಣಾಂಗಗಳಲ್ಲಿ ಒಳ್ಳೆಯ ಬ್ಯಾಕ್ಟೀರಿಯಗಳ ಸಂಖ್ಯೆ ಭರಪೂರ ಇದ್ದಷ್ಟೂ ದೇಹ ರೋಗಮುಕ್ತವಾಗಿರುತ್ತದೆ ಎನ್ನುತ್ತವೆ ಅ‍ಧ್ಯಯನಗಳು. ಹಾಗಾಗಿ ಪ್ರೊಬಯಾಟಿಕ್‌ ಆಹಾರಗಳು ನಮ್ಮ ದೇಹಕ್ಕೆ ಬೇಕೇಬೇಕು. ಇದಕ್ಕಾಗಿ ಮೊಸರು, ಮಜ್ಜಿಗೆಯಂಥ ಹುದುಗು ಬರಿಸಿದ ಆಹಾರಗಳನ್ನು ಪ್ರತಿದಿನ ಸೇವಿಸಿ.

infusions

ಕಷಾಯಗಳು

ಶೀತದ ದಿನಗಳಲ್ಲಿ ದೇಹವನ್ನು ಬೆಚ್ಚಗೆ ಇರಿಸಿಕೊಳ್ಳುವುದಕ್ಕೆ ತರಹೇವಾರಿ ಕಷಾಯಗಳನ್ನು ಮಾಡಿಕೊಳ್ಳಬಹುದು. ಇದರಿಂದಲೂ ನಮ್ಮ ದೇಹದ ಸೋಂಕು ನಿರೋಧಕ ಶಕ್ತಿ ಪ್ರಬಲವಾಗುತ್ತದೆ. ಇದಕ್ಕಾಗಿ ಯಾವೆಲ್ಲ ವಸ್ತುಗಳನ್ನು ಉಪಯೋಗಿಸಬಹುದು ಎನ್ನುವುದಕ್ಕೆ ಉಪಯುಕ್ತ ವಿವರಗಳು ಇಲ್ಲಿವೆ. ಈ ಯಾವುದೇ ವಸ್ತುಗಳನ್ನು ಬಳಸಿ ಕಷಾಯ ಮಾಡಿಕೊಳ್ಳಬಹುದು.

Raw Turmeric with Powder Cutout

ಅರಿಶಿನ

ಇದರಲ್ಲಿರುವ ಕರ್ಕುಮಿನ್‌ ಎಂಬ ಪ್ರಬಲ ಉತ್ಕರ್ಷಣ ನಿರೋಧಕವು ಸೋಂಕುಗಳನ್ನು ಹೊಡೆದೋಡಿಸುತ್ತದೆ

Benefits Of Ginger

ಶುಂಠಿ

ಇದರ ಜಿಂಜರಾಲ್‌ ಅಂಶದಲ್ಲಿ ಉರಿಯೂತ ಶಮನ ಮಾಡಿ, ಪ್ರತಿರೋಧಕ ಶಕ್ತಿ ಹೆಚ್ಚಿಸುತ್ತದೆ

Garlic

ಬೆಳ್ಳುಳ್ಳಿ

ಇದರ ಅಲ್ಲಿಸಿನ್‌ ಅಂಶದಲ್ಲಿ ವೈರಸ್‌ ಮತ್ತು ಬ್ಯಾಕ್ಟೀರಿಯ ನಿರೋಧಕ ಗುಣವಿದೆ

Cinnamon sticks Anti Infective Foods

ದಾಲ್ಚಿನ್ನಿ ಚಕ್ಕೆ

ಇದರಲ್ಲಿರುವ ಉರಿಯೂತ ಶಾಮಕ ಸತ್ವಗಳು ರೋಗನಿರೋಧಕವೂ ಹೌದು

black pepper

ಕಾಳು ಮೆಣಸು

ಇದರ ಕ್ಯಾಪ್ಸೈಸಿನ್‌ನಲ್ಲಿ ದೇಹದ ಪ್ರತಿರೋಧಕತೆಯನ್ನು ವೃದ್ಧಿಸುವ ಸಾಮರ್ಥ್ಯವಿದೆ

cumin

ಜೀರಿಗೆ

ಇದರ ಉತ್ಕರ್ಷಣ ನಿರೋಧಕಗಳು ಸೋಂಕಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೆಚ್ಚಿಸುತ್ತವೆ

coriander Coriander Benefits

ಧನಿಯ

ಇದರ ಉತ್ಕರ್ಷಣ ನಿರೋಧಕ ಸತ್ವಗಳು ಸೋಂಕುಗಳನ್ನು ನಿವಾರಿಸುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ಮೊಬೈಲ್ ಕೊಡುಗೆ

Uttara Kannada News: ಪೋಷಣ್ ಅಭಿಯಾನ ಕಾರ್ಯಕ್ರಮದ ಮೂಲಕ ಜಿಲ್ಲೆಯಲ್ಲಿ ಮಕ್ಕಳು ಮತ್ತು ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರ ಯೋಗಕ್ಷೇಮದ ಬಗ್ಗೆ ನಿರಂತರವಾಗಿ ನಿಗಾ ಇರಿಸುವ ಉದ್ದೇಶದಿಂದ, ನೂತನ ವೈಶಿಷ್ಠಗಳಿಂದ ಕೂಡಿದ ಹೊಸ ಮೊಬೈಲ್‌ನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರಿಗೆ ವಿತರಿಸಲಾಗುತ್ತಿದೆ. ಪೋಷಣ್ ಟ್ರ್ಯಾಕರ್ ಆಪ್‌ನ ಸುಲಲಿತ ಕಾರ್ಯ ನಿರ್ವಹಣೆಗೆ ಸೇರಿದಂತೆ ಕ್ಷೇತ್ರ ಮಟ್ಟದಲ್ಲಿ ಅಗತ್ಯವಿರುವ ಇತರೆ ಯಾವುದೇ ಮಾಹಿತಿಯನ್ನು ಸಂಗ್ರಹಿಸಿ, ವರದಿ ಮಾಡಲು ಇದು ನೆರವು ನೀಡಲಿದ್ದು, ಅಂಗನವಾಡಿ ಸಿಬ್ಬಂದಿಗಳು ಇನ್ನಷ್ಟು ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

VISTARANEWS.COM


on

Anganwadi workers and supervisors will get the new mobile in uttara Kannada district
Koo

ಕಾರವಾರ: ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಅನುಷ್ಠಾನಗೊಂಡಿರುವ ಪೋಷಣ್ ಅಭಿಯಾನ ಕಾರ್ಯಕ್ರಮದ ದೈನಂದಿನ ಪ್ರಗತಿಯನ್ನು ಪೋಷಣ್ ಟ್ರ್ಯಾಕರ್ ತಂತ್ರಾಂಶದಲ್ಲಿ ದಾಖಲಿಸಲು ಹಾಗೂ ಇತರೆ ತಾಂತ್ರಿಕ ವರದಿಗಳನ್ನು ನೀಡಲು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕರಿಗೆ ಹೊಸ ಸ್ಯಾಮ್ಸಂಗ್ ಮೊಬೈಲ್‌ಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಜಿಲ್ಲೆಯ (Uttara Kannada News) ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕರ ಕೈ ಸೇರಲಿದೆ.

ಈಗಾಗಲೇ ಅಂಕೋಲಾ ತಾಲೂಕಿನ 236 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರಿಗೆ, ಭಟ್ಕಳದ 235, ಹಳಿಯಾಳದ 256, ಹೊನ್ನಾವರದ 341, ಜೋಯಿಡಾದ 220, ಕಾರವಾರದ 253, ಕುಮಟಾದ 293, ಮುಂಡಗೋಡದ 201, ಸಿದ್ದಾಪುರದ 237, ಶಿರಸಿಯ 389, ಯಲ್ಲಾಪುರದ 205 ಸೇರಿದಂತೆ ಒಟ್ಟು 2782 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 84 ಮೇಲ್ವಿಚಾರಕರಿಗೆ ಹಾಗೂ ಬಫರ್ ಸ್ಟಾಕ್‌ನಲ್ಲಿನ 143 ಸೇರಿದಂತೆ ಒಟ್ಟು 3009 ಹೊಸ ಮೊಬೈಲ್‌ಗಳು ಜಿಲ್ಲೆಗೆ ಪೂರೈಕೆಯಾಗಿದ್ದು, ಸಂಬಂಧಪಟ್ಟ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಮೂಲಕ ಹಂಚಿಕೆ ಮಾಡಲಾಗುತ್ತಿದೆ. ಈ ಮೊಬೈಲ್‌ಗಳಿಗೆ ಇಲಾಖೆಯ ಮೂಲಕವೇ ಪ್ರತೀ ತಿಂಗಳು ನಿಗದಿತ ಮೊತ್ತದ ಕರೆನ್ಸಿಯನ್ನು ರೀಚಾರ್ಜ್ ಮಾಡಲಾಗುತ್ತದೆ.

ಇದನ್ನೂ ಓದಿ: Paris Olympics 2024: ಒಲಿಂಪಿಕ್ಸ್ ಆಯೋಜನೆ; ಫ್ರಾನ್ಸ್​ ಅಧ್ಯಕ್ಷರಿಗೆ ಶುಭ ಕೋರಿದ ಪ್ರಧಾನಿ ಮೋದಿ

ಪೋಷಣ್ ಅಭಿಯಾನ ಕಾರ್ಯಕ್ರಮದ ಮೂಲಕ 0-6 ವರ್ಷದೊಳಗಿನ ಮಕ್ಕಳಲ್ಲಿ ಕುಂಠಿತ ಬೆಳವಣಿಗೆಯನ್ನು ಕಡಿಮೆಗೊಳಿಸುವ, ಕಿಶೋರಿಯರಲ್ಲಿ ಮತ್ತು ಮಹಿಳೆಯರಲ್ಲಿ ರಕ್ತ ಹೀನತೆಯನ್ನು ತಡೆಗಟ್ಟುವ ಮತ್ತು ಕಡಿಮೆ ತೂಕದ ಮಗುವಿನ ಜನನವನ್ನು ಕಡಿಮೆಗೊಳಿಸುವ ಗುರಿಯನ್ನು ಹೊಂದಿದೆ.

ಜಿಲ್ಲೆಯಲ್ಲಿ ಮೇ ಮಾಹೆಯಲ್ಲಿ 67,472 ಮಕ್ಕಳು ಅಂಗನವಾಡಿಗಳಲ್ಲಿ ನೋಂದಣಿಯಾಗಿದ್ದು, ಇದರಲ್ಲಿ 66,406 ಮಕ್ಕಳ ಎತ್ತರ ಮತ್ತು ತೂಕವನ್ನು ಅಳತೆ ಮಾಡಲಾಗಿದ್ದು, ಮಕ್ಕಳಲ್ಲಿನ ಆರೋಗ್ಯಕರ ಬೆಳವಣಿಗೆ ಪ್ರಮಾಣ ಶೇ.98.42 ರಷ್ಟು ಕಂಡುಬಂದಿದೆ. ಹಾಗೂ ಅ ಪರೀಕ್ಷಾ ಅವಧಿಯಲ್ಲಿ ತೀವ್ರ ಅಪೌಷ್ಠಿಕತೆಯ 262 ಮತ್ತು ಮಧ್ಯಮ ತೀವ್ರ ಅಪೌಷ್ಠಿಕತೆಯ 1178 ಮಕ್ಕಳು ಕಂಡುಬಂದಿದ್ದು, ಈ ಮಕ್ಕಳಲ್ಲಿ ಪೌಷ್ಠಿಕತೆಯನ್ನು ಹೆಚ್ಚಿಸಲು ಅಗತ್ಯವಿರುವ ಪೌಷ್ಠಿಕ ಆಹಾರ ವಿತರಣೆ ಸೇರಿದಂತೆ ಎಲ್ಲಾ ಅಗತ್ಯ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪ್ರಸ್ತುತ ನೀಡಿರುವ ಮೊಬೈಲ್ ಮೂಲಕ ಪೋಷಣ್ ಟ್ರ್ಯಾಕರ್ ತಂತ್ರಾಂಶದಲ್ಲಿ, ಜಿಲ್ಲೆಯ ಅಂಗನವಾಡಿಯಲ್ಲಿರುವ ಮಕ್ಕಳ ವಯಸ್ಸು, ಎತ್ತರ, ತೂಕ ಆರೋಗ್ಯದ ಸ್ಥಿತಿಗತಿ ಸೇರಿದಂತೆ ಮಕ್ಕಳ ಸಮಗ್ರ ಆರೋಗ್ಯದ ವಿವರಗಳನ್ನು ದಾಖಲು ಮಾಡುವುದರ ಮೂಲಕ ಮಕ್ಕಳಲ್ಲಿ ಕಂಡು ಬರುವ ಅಪೌಷ್ಠಿಕತೆಗೆ ಸಕಾಲದಲ್ಲಿ ಸೂಕ್ತ ನೆರವು ನೀಡಿ, ಅವರು ಆರೋಗ್ಯವಂತರಾಗಿ ಬೆಳವಣಿಗೆ ಹೊಂದಲು ಬೇಕಾದ ಎಲ್ಲಾ ಅಗತ್ಯ ಪೂರಕ ವ್ಯವಸ್ಥೆಗಳನ್ನು ಒದಗಿಸುವ ಉದ್ದೇಶ ಹೊಂದಲಾಗಿದೆ.

ಅಂಗನವಾಡಿಯಲ್ಲಿ ಪ್ರತಿದಿನ ನಡೆಯುವ ಚಟುವಟಿಕೆಗಳನ್ನು ಕೂಡಾ ಈ ಮೊಬೈಲ್ ಮೂಲಕ ದಾಖಲಿಸಲಾಗುತ್ತಿದ್ದು, ಪ್ರತಿದಿನ ಅಂಗನವಾಡಿ ತೆರೆದಿರುವ ಬಗ್ಗೆ, ಮಕ್ಕಳು ಹಾಜರಾಗಿರುವ ಬಗ್ಗೆ, ಮಕ್ಕಳಿಗೆ ಪೌಷ್ಠಿಕ ಉಪಹಾರ ನೀಡುವ ಕುರಿತ ಪೋಟೋಗಳನ್ನೂ ಹಾಗೂ ಗರ್ಭಿಣಿ ಸ್ತಿçÃಯರು ಮತ್ತು ಬಾಣಂತಿಯ ಅರೋಗ್ಯ ವಿಚಾರಣೆಗೆ ಪ್ರತಿದಿನ ಮನೆ ಭೇಟಿ ನೀಡುವ ವಿವರಗಳನ್ನೂ ಸಹ ಈ ತಂತ್ರಾಂಶದಲ್ಲಿ ಅಳವಡಿಸಲಾಗುತ್ತಿದ್ದು, ಅಂಗನವಾಡಿ ಕಾರ್ಯಕತೆಯರು ಅಳವಡಿಸುವ ಈ ಎಲ್ಲಾ ಮಾಹಿತಿಯು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ನೇರವಾಗಿ ದೊರೆಯುವಂತೆ ತಂತ್ರಾಂಶ ಸಿದ್ದಪಡಿಸಲಾಗಿದೆ.

ಇದನ್ನೂ ಓದಿ: T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

ಪೋಷಣ್ ಅಭಿಯಾನ ಕಾರ್ಯಕ್ರಮದ ಮೂಲಕ ಜಿಲ್ಲೆಯಲ್ಲಿ ಮಕ್ಕಳು ಮತ್ತು ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರ ಯೋಗಕ್ಷೇಮದ ಬಗ್ಗೆ ನಿರಂತರವಾಗಿ ನಿಗಾ ಇರಿಸುವ ಉದ್ದೇಶದಿಂದ, ನೂತನ ವೈಶಿಷ್ಠಗಳಿಂದ ಕೂಡಿದ ಹೊಸ ಮೊಬೈಲ್‌ನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರಿಗೆ ವಿತರಿಸಲಾಗುತ್ತಿದೆ. ಪೋಷಣ್ ಟ್ರ್ಯಾಕರ್ ಆಪ್‌ನ ಸುಲಲಿತ ಕಾರ್ಯ ನಿರ್ವಹಣೆಗೆ ಸೇರಿದಂತೆ ಕ್ಷೇತ್ರ ಮಟ್ಟದಲ್ಲಿ ಅಗತ್ಯವಿರುವ ಇತರೆ ಯಾವುದೇ ಮಾಹಿತಿಯನ್ನು ಸಂಗ್ರಹಿಸಿ, ವರದಿ ಮಾಡಲು ಇದು ನೆರವು ನೀಡಲಿದ್ದು, ಅಂಗನವಾಡಿ ಸಿಬ್ಬಂದಿಗಳು ಇನ್ನಷ್ಟು ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

Continue Reading

ಉತ್ತರ ಕನ್ನಡ

Self Harming : ಪೊಲೀಸ್‌ ಠಾಣೆ ಎದುರೇ ಬೆಂಕಿ ಹಚ್ಚಿಕೊಂಡ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

Self harming : ವಿನಾಕಾರಣ‌ ತನಗೆ ಪೊಲೀಸರು ಕಿರುಕುಳ ಕೊಡುತ್ತಿದ್ದಾರೆ ಎಂದು ಆರೋಪಿ ವ್ಯಕ್ತಿಯೊಬ್ಬ ಠಾಣೆ ಆವರಣದಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ತೀವ್ರ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

VISTARANEWS.COM


on

By

Self harming
Koo

ಕಾರವಾರ: ಉತ್ತರಕನ್ನಡ ಜಿಲ್ಲೆಯ ಜೋಯಿಡಾದ ರಾಮನಗರ ಪೊಲೀಸ್ ಠಾಣೆಯ ಪಿಎಸ್ಐ ಮಾನಸಿಕ ಕಿರುಕುಳ (Self Harming) ನೀಡುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ತೀವ್ರ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ. ರಾಮನಗರ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಮೃತ ದುರ್ದೈವಿ.

ಈ ಹಿಂದೆ‌‌ ಜೂಜಾಟ ಪ್ರಕರಣ‌ ಸಂಬಂಧ ಭಾಸ್ಕರ್ ಮೇಲೆ ಪ್ರಕರಣ ದಾಖಲು ಮಾಡಲಾಗಿತ್ತು. ಈ ನಡುವೆ ಕಳೆದ ಗುರುವಾರ ಜಮೀನು ವಿಚಾರಕ್ಕೆ ಭಾಸ್ಕರ್‌ ಮದ್ಯ ಸೇವಿಸಿ ಬೈಕ್‌ ಮೂಲಕ ಠಾಣೆಗೆ ತೆರಳಿದ್ದ. ಮದ್ಯ ಸೇವಿಸಿದ್ದರಿಂದ ಬೈಕ್ ಠಾಣೆಯಲ್ಲಿ ಬಿಟ್ಟು ಹೋಗುವಂತೆ ಪಿಎಸ್ಐ ಬಸವರಾಜ್‌ ಸೂಚಿಸಿದ್ದರು.

ಇಷ್ಟಕ್ಕೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮದ್ಯದ ಅಮಲಿನಲ್ಲಿ ಭಾಸ್ಕರ್‌ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಬೆಂಕಿ ನಂದಿಸಿ ಗಂಭೀರವಾದ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಭಾಸ್ಕರ್‌ನನ್ನು ಬೆಳಗಾವಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಇನ್ನೂ ಆಸ್ಪತ್ರೆಗೆ ಹೋಗುವಾಗ ವಿಡಿಯೋ ಮಾಡಿ‌ ಪೊಲೀಸ್ ಕಿರುಕುಳ ಬಗ್ಗೆ ತಿಳಿಸಿದ್ದ. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ಭಾಸ್ಕರ್‌ ಶನಿವಾರ ಮೃತಪಟ್ಟಿದ್ದಾರೆ.

ಠಾಣೆ ಎದುರು ಪ್ರತಿಭಟನೆ

ಜೋಯಿಡಾ ತಾಲೂಕಿನ ರಾಮನಗರ ಪೊಲೀಸ್ ಠಾಣೆ ಎದುರು ವ್ಯಕ್ತಿ ಬೆಂಕಿ ಹಚ್ಚಿಕೊಂಡು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಸಾವು ಖಂಡಿಸಿ ಕುಣಬಿ ಸಮುದಾಯವು ಬೃಹತ್ ಪ್ರತಿಭಟನೆ ನಡೆಸಿದೆ. ಪೊಲೀಸ್ ಕಿರುಕುಳಕ್ಕೆ ಬೇಸತ್ತು ಬೆಂಕಿ ಹಚ್ಚಿಕೊಂಡಿದ್ದಾಗಿ ಭಾಸ್ಕರ್ ವಿಡಿಯೋ ಮಾಡಿದ್ದ. ಹೀಗಾಗಿ ಆತನ ಸಾವಿಗೆ ಪೊಲೀಸರೇ ನೇರ ಹೊಣೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟಿಸಿದರು. ರಾಮನಗರದ ಶಿವಾಜಿ ವೃತ್ತದಿಂದ ಪೊಲೀಸ್ ಠಾಣೆವರೆಗೆ ಮೆರವಣಿಗೆ ನಡೆಸಿ, ನ್ಯಾಯ ಕೊಡಿಸುವಂತೆ ಆಗ್ರಹಿಸಿದರು.

Self Harming

ಕೊಪ್ಪಳದಲ್ಲಿ ಕರೆಂಟ್‌ ಶಾಕ್‌ಗೆ ವ್ಯಕ್ತಿ ಸಾವು

ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಚನ್ನಪ್ಪ ಬಂಡಾರಿ (50) ಮೃತ ದುರ್ದೈವಿ. ಲೈನ್‌ಮ್ಯಾನ್‌ವೊಬ್ಬ ವಿದ್ಯುತ್ ದುರಸ್ಥಿಗಾಗಿ ಕಲಬುರಗಿ ತಾಲೂಕಿನ ಲಿಂಗನಬಂಡಿ ಗ್ರಾಮದ ನಿವಾಸಿಯಾಗಿರುವ ಚನ್ನಪ್ಪನನ್ನು ಜತೆಗೆ ಕರೆದುಕೊಂಡು ಬಂದಿದ್ದ ಎನ್ನಲಾಗಿದೆ. ಘಟನೆ ನಡೆಯುತ್ತಿದ್ದಂತೆ ಲೈನ್‌ಮ್ಯಾನ್‌ ನಾಪತ್ತೆ ಆಗಿದ್ದಾನೆ. ಬೇವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Electric shock : ನೇರಳೆ ಮರವೇರಿದ ಬಾಲಕನಿಗೆ ಕರೆಂಟ್‌ ಶಾಕ್‌; ಕೆಳಗೆ ಬಿದ್ದೊಡನೆ ಹಾರಿಹೋಯ್ತು ಪ್ರಾಣಪಕ್ಷಿ

ನಿದ್ದೆಗೆ ಜಾರಿದ 3 ವರ್ಷದ ಬಾಲಕನನ್ನು ಕಚ್ಚಿ ಸಾಯಿಸಿದ ನಾಗರಹಾವು

ಚಿಕ್ಕಬಳ್ಳಾಪುರ: ನಾಗರಹಾವು ಕಚ್ಚಿ (Snake Bite) 3 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗುಮ್ಮವಾರಂಡ್ಲಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೀಕ್ಷಿತ್ (3) ಮೃತ ದುರ್ದೈವಿ.

ಮಾಲತಿ-ಸುರೇಶ ದಂಪತಿಯ ಏಕೈಕ ಪುತ್ರ ದೀಕ್ಷಿತ್ ಮನೆಯ ಕಾಂಪೌಂಡ್‌ನ ಮುಂದೆ ಮಲಗಿದ್ದಾಗ ನಾಗರಹಾವು ಕಚ್ಚಿದೆ. ಕೂಡಲೇ ಅಸ್ವಸ್ಥಗೊಂಡಿದ್ದ ದೀಕ್ಷಿತ್‌ನನ್ನು ಆಸ್ಪತ್ರೆಗೆ ಕರೆತರಲಾಗಿದೆ. ಆದರೆ ಸಕಾಲಕ್ಕೆ ಬಾಗೇಪಲ್ಲಿ ಆಸ್ಪತ್ರೆಯ ಸ್ಟಾಪ್ ನರ್ಸ್ ಬೋಮ್ಮಣ್ಣ ಸ್ಪಂದಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ವೈದ್ಯರು ಬಂದು ನೋಡುವಷ್ಟರಲ್ಲಿ ಮಗುವಿನ ಸ್ಥಿತಿ ಚಿಂತಾಜನಕವಾಗಿತ್ತು ಎಂದು ಪೋಷಕರು ಗೋಳಾಡಿದ್ದಾರೆ.

ಮೀನು ಹಿಡಿಯಲು ನದಿಗೆ ಇಳಿದವನು ನಾಪತ್ತೆ

ಕೃಷ್ಣ ನದಿಯಲ್ಲಿ ಮೀನುಗಾರಿಕೆಗೆ ಇಳಿದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಕುಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಾವುಸಾಬ್ ಗಬಾಡೆ ನಾಪತ್ತೆಯಾದವರು.

Sanke Bite.. Drowned in water
ನಾಪತ್ತೆಯಾಗಿರುವ ಬಾವುಸಾಬ್‌ಗಾಗಿ ಹುಡುಕಾಟ

ನದಿಯಲ್ಲಿ ನಾಪತ್ತೆಯಾದ ಮೀನುಗಾರ ಬಾವುಸಾಬ್‌ ಗಬಾಡೆಗಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನದಿಯಲ್ಲಿ ಶೋಧಕಾರ್ಯ ಮುಂದುವರಿದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Actor Darshan : ಸಂಕಷ್ಟ ನಿವಾರಣೆಗಾಗಿ ದೇವರ ಮೊರೆ ಹೋದ ನಟ ದರ್ಶನ್‌ ಕುಟುಂಬಸ್ಥರು

Actor Darshan : ಕೊಲೆ ಕೇಸ್‌ನಲ್ಲಿ (Renukaswamy murder case) ಬಂಧಿಯಾಗಿರುವ ನಟ ದರ್ಶನ್‌ ಸಂಕಷ್ಟದಿಂದ ದೂರ ಆಗಲಿ ಎಂದು ಕುಟುಂಬಸ್ಥರು ದೇವರ ಮೊರೆ ಹೋಗಿದ್ದಾರೆ. ದರ್ಶನ್‌ ಅವರ ಸಹೋದರಿಯ ಪತಿಯಿಂದ ವಿಶೇಷ ಪೂಜೆ ಸಲ್ಲಿಸಿದ್ದಾರೆ.

VISTARANEWS.COM


on

By

Actor darshan
Koo

ಕಾರವಾರ: ಚಿತ್ರನಟ ದರ್ಶನ್ (Actor Darshan) ರೇಣುಕಾಸ್ವಾಮಿ ಹತ್ಯೆ (Renukaswamy murder case) ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪೊಲೀಸ್ ತನಿಖೆ ಎದುರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಅವರ ಕುಟುಂಬಸ್ಥರು ಸಂಕಷ್ಟ ನಿವಾರಣೆಗಾಗಿ ದೇವರ ಮೊರೆ ಹೋಗಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾದಲ್ಲಿ ಉದ್ಯೋಗದಲ್ಲಿರುವ ದರ್ಶನ್ ಸಹೋದರಿ ದಿವ್ಯಾ ಅವರ ಪತಿ ಮಂಜುನಾಥ, ದರ್ಶನ್ ಒಳಿತಿಗಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕೈಗಾದ ಟೌನ್‌ಶಿಪ್‌ನಲ್ಲಿರುವ ರಾಮಲಿಂಗೇಶ್ವರ, ಶನೇಶ್ವರ ದೇವಸ್ಥಾನದಲ್ಲಿ ದರ್ಶನ್ ಹೆಸರಿನಲ್ಲಿ ನವಗ್ರಹ ಪೂಜೆ, ಶನಿಶಾಂತಿ ಪೂಜೆ ಹಾಗೂ ವಿಶೇಷ‌ ಹೂವಿನ ಅಲಂಕಾರ ಪೂಜೆ ನೆರವೇರಿಸಿದ್ದಾರೆ. ದರ್ಶನ್ ಆದಷ್ಟು ಬೇಗ ಆರೋಪ ಮುಕ್ತರಾಗಿ ಹೊರಬರಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: Snake Bite : ನಿದ್ದೆಗೆ ಜಾರಿದ 3 ವರ್ಷದ ಬಾಲಕನನ್ನು ಕಚ್ಚಿ ಸಾಯಿಸಿದ ನಾಗರಹಾವು

ಸಸ್ಯಾಹಾರಿ ಅಂದ್ರೂ ರೇಣುಕಾಸ್ವಾಮಿ ಬಾಯಿಗೆ ಬಿರಿಯಾನಿ ಮೂಳೆ ತುರುಕಿದ್ದ ಆರೋಪಿಗಳು!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renuka Swamy murder case) ಇನ್ನಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಈ ನಡುವೆ ಪ್ರಕರಣದಲ್ಲಿ (Actor Darshan) ಹೇಗೆಲ್ಲಾ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಲಾಗಿತ್ತು ಎಂಬ ವಿಷಯಗಳು ಒಂದೊಂದಾಗೆ ಬೆಳಕಿಗೆ ಬರುತ್ತಿವೆ. ಕಿಡ್ನ್ಯಾಪ್‌ ಆಗಿದ್ದ ದಿನ ಊಟ ಕೊಡಿಸಿದ್ದ ಡಿ ಗ್ಯಾಂಗ್, ನಾನು ಶಾಖಾಹಾರಿ ಎಂದರೂ ಬಿಡದೇ ರೇಣುಕಾಸ್ವಾಮಿ ಬಾಯಿಗೆ ಬಿರಿಯಾನಿ ಮೂಳೆ ತುರುಕಿದ್ದರು ಎನ್ನಲಾಗಿದೆ.

ಚಿತ್ರದುರ್ಗದಿಂದ ಜೂನ್‌ 8ರಂದು ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್‌ ಮಾಡಿ ಬೆಂಗಳೂರಿಗೆ ಕರೆತರಲಾಗಿತ್ತು. ನಂತರ ಆತನನ್ನು ಪಟ್ಟಣಗೆರೆ ಶೆಡ್‌ನಲ್ಲಿ ಕೂಡಿಹಾಕಿ ಟಾರ್ಚರ್‌ ನೀಡಲಾಗಿದೆ. ಮಧ್ಯಾಹ್ನ ಊಟ ಕೊಡಿಸಿದಾಗ ನಾನು ಸಸ್ಯಹಾರಿ ಎಂದು ರೇಣುಕಾಸ್ವಾಮಿ ಹೇಳಿದ್ದಾನೆ. ಆದರೂ ಬಿಡದೆ ಆರೋಪಿಗಳು ಬಿರಿಯಾನಿ ತಿನ್ನಿಸಿದ್ದಾರೆ.

ಇದನ್ನೂ ಓದಿ | Actor Darshan: ಚಿನ್ನುಮರಿ ತಂಟೆಗೆ ಹೋದ್ರೆ ಒದೆ, ಪವಿತ್ರಾ ಗೌಡ ತಂಟೆಗೆ ಬಂದ್ರೆ ಕೊಲೆ; ಟ್ರೋಲ್ ಆಗುತ್ತಿದೆ ​ ದರ್ಶನ್​ ಕೊಲೆ ಕೇಸ್​​

ಬಲವಂತ ಮಾಡಿದಾಗ ಬಿರಿಯಾನಿ ತಿನ್ನದೆ ಕೆಳಗೆ ಉಗಿದಿದ್ದರಿಂದ ರೇಣುಕಾ ಸ್ವಾಮಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದ ಗ್ಯಾಂಗ್, ಬಾಸ್ ಬರುತ್ತಾರೆ ಒದೆ ತಿನ್ನಲು ರೆಡಿಯಾಗು. ಬಿರಿಯಾನಿ ತಿಂದ್ರೆ ಶಕ್ತಿ ಬರುತ್ತೆ ಎಂದು ಬಿರಿಯಾನಿ ತಿನ್ನಿಸಲು ಯತ್ನಿಸಿದ್ದಾರೆ. ಈ ಬಗ್ಗೆ ಪೊಲೀಸರ ಮುಂದೆ ಆರೋಪಿ ದೀಪಕ್ ಹೇಳಿಕೆ ಕೊಟ್ಟಿದ್ದಾನೆ.

ಕಿಡ್ನ್ಯಾಪ್ ಮಾಡಿಕೊಂಡು ಹೋಗುತ್ತಿದ್ದ ಸಿಸಿಟಿವಿ ಫುಟೇಜ್‌ ಲಭ್ಯ

ಡಿ ಗ್ಯಾಂಗ್‌ನಿಂದ ದುರ್ಗದ ಹುಡುಗನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್‌ ಮಾಡಿದ್ದ ಸಂದರ್ಭದ ಸ್ಫೋಟಕ ವಿಡಿಯೊ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ. KA-11-B-7939 ಕಾರಿನಲ್ಲಿ ಜೂನ್ 8 ಬೆಳಗ್ಗೆ 11:30ಕ್ಕೆ ಗುಯಿಲಾಳ್ ಟೋಲ್ ಅನ್ನು ಗ್ಯಾಂಗ್ ಕ್ರಾಸ್ ಮಾಡಿತ್ತು. ಕಾರಿನ ಮುಂಭಾಗ ಡ್ರೈವರ್ ರವಿ ಮತ್ತು ರಾಘವೇಂದ್ರ ಕೂತಿರುವ ದೃಶ್ಯ ಸೆರೆಯಾಗಿದೆ.

ಹಿರಿಯೂರು ಮಾರ್ಗವಾಗಿ ಬೆಂಗಳೂರು ಕಡೆ ಪ್ರಯಾಣ ಮಾಡಿದ್ದ ಟೀಂ, ಟೋಲ್‌ನಲ್ಲಿ ವಿಐಪಿ ಕಾರ್ಡ್ ಪ್ರದರ್ಶನ ಮಾಡಿ, ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಎಂದು ರಾಘವೇಂದ್ರ ಬಿಲ್ಡಪ್ ಕೊಟ್ಟು ಹೋಗಿದ್ದರು. ಬೆಂಗಳೂರಿಗೆ ಬಿಟ್ಟು ವಾಪಸ್ ಹೋಗುವಾಗ ಡ್ರೈವರ್ ರವಿ ಮಾತ್ರ ವಾಹನದಲ್ಲಿ ಕಾಣಿಸಿಕೊಂಡಿದ್ದಾರೆ. ಜೂನ್‌ 9 ಬೆಳಗಿನ ಜಾವ 4:30 ಕ್ಕೆ ಚಿತ್ರದುರ್ಗದತ್ತ ರವಿ ತೆರಳಿದ್ದ. ಈತ ಇನ್ನುಳಿದ ನಾಲ್ಕು ಮಂದಿ ಜೊತೆ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಬಿಟ್ಟು ಹೋಗಿದ್ದ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
HD Kumaraswamy
ಕರ್ನಾಟಕ7 mins ago

HD Kumaraswamy: ಚನ್ನಪಟ್ಟಣ ಜನರನ್ನು ಯಾರೂ ಭಯಪಡಿಸಲು ಆಗಲ್ಲ; ಡಿಕೆ ಬ್ರದರ್ಸ್‌ ವಿರುದ್ಧ ಎಚ್‌ಡಿಕೆ ವಾಗ್ದಾಳಿ

Father's Day Fashion
ಫ್ಯಾಷನ್10 mins ago

Father’s Day Fashion: ಅಪ್ಪಂದಿರ ದಿನಕ್ಕೂ ಉಂಟು ಫ್ಯಾಷನ್‌ ಸ್ಟೇಟ್‌ಮೆಂಟ್ಸ್!

Kendra Sahitya Akademi Award
ಪ್ರಮುಖ ಸುದ್ದಿ30 mins ago

ಕರ್ನಾಟಕದ ಶ್ರುತಿ ಬಿ.ಆರ್, ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ

Period Pain Relief Food
ಆರೋಗ್ಯ38 mins ago

Period Pain Relief Food: ಪೀರಿಯಡ್‌ನ ನೋವು ನಿವಾರಣೆಗೆ ಈ ಆಹಾರಗಳು ಸೂಕ್ತ

karnataka Weather Forecast
ಮಳೆ46 mins ago

Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

Actor Darshan
ಕರ್ನಾಟಕ54 mins ago

Actor Darshan: ದರ್ಶನ್‌ ಗ್ಯಾಂಗ್‌ಗೆ ಮತ್ತೆ 5 ದಿನ ಪೊಲೀಸ್‌ ಕಸ್ಟಡಿ; ಜಡ್ಜ್‌ ಮುಂದೆ ಪವಿತ್ರಾ ಗೌಡ ಕಣ್ಣೀರು!

Kendra Sahitya Akademi Award
ಪ್ರಮುಖ ಸುದ್ದಿ1 hour ago

Kendra Sahitya Akademi Award: ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ; ಯಾರಿವರು?

New Fashion
ಫ್ಯಾಷನ್2 hours ago

New Fashion: ಬ್ಲ್ಯಾಕ್‌ ಡೆನಿಮ್‌ ಕೋ ಆರ್ಡ್ ಸೆಟ್‌ನಲ್ಲಿ ಟ್ರೆಂಡಿಯಾದ ಜಿಪ್ಪರ್‌ ಸ್ಟೈಲ್‌

Trent Boult
ಕ್ರೀಡೆ2 hours ago

Trent Boult: ಕೊನೆಯ ಟಿ20 ವಿಶ್ವಕಪ್​ ಆಡಲು ಸಿದ್ಧರಾದ ಟ್ರೆಂಟ್​ ಬೌಲ್ಟ್

Actor Darshan pavithra gowda relationship secrete
ಸ್ಯಾಂಡಲ್ ವುಡ್2 hours ago

Actor Darshan: ದರ್ಶನ್‌ ಬಲೆಗೆ ಪವಿತ್ರಾ ಗೌಡ ಬಿದ್ದಿದ್ದು ಹೇಗೆ? ಇವರು ಹೀರೋಯಿನ್‌ ಆಗಿದ್ದು ಯಾವಾಗ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ5 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 day ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ1 day ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌