Uttara Kannada News: ಚಂಡಿಗಢದಲ್ಲಿ ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಹಾಕಿ ಚಾಂಪಿಯನ್‌ಶಿಪ್‌: ಕರ್ನಾಟಕಕ್ಕೆ 1 ಬೆಳ್ಳಿ, 2 ಕಂಚು - Vistara News

ಉತ್ತರ ಕನ್ನಡ

Uttara Kannada News: ಚಂಡಿಗಢದಲ್ಲಿ ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಹಾಕಿ ಚಾಂಪಿಯನ್‌ಶಿಪ್‌: ಕರ್ನಾಟಕಕ್ಕೆ 1 ಬೆಳ್ಳಿ, 2 ಕಂಚು

ಚಂಡಿಗಢದಲ್ಲಿ ನಡೆದ 61ನೇ ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಹಾಕಿ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ಮಾಡಿದ್ದು, ಪಂದ್ಯದಲ್ಲಿ 1 ಬೆಳ್ಳಿ ಮತ್ತು 2 ಕಂಚಿನ ಪದಕಗಳನ್ನು ಗಳಿಸಿದೆ.

VISTARANEWS.COM


on

National Roller Skate Hockey Championship in Chandigarh: One silver, two bronze for Karnataka
ಕೆಡೆಟ್ ಬಾಲಕಿಯರ ವಿಭಾಗದಲ್ಲಿ (11ವರ್ಷದೊಳಗಿನವರು) ಬೆಳ್ಳಿ ಪದಕ ಪಡೆದ ಕರ್ನಾಟಕ ತಂಡ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಚಂಡಿಗಢದಲ್ಲಿ ನಡೆದ 61ನೇ ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಹಾಕಿ ಚಾಂಪಿಯನ್‌ಶಿಪ್‌ನಲ್ಲಿ (National Roller Skate Hockey Championship) ಕರ್ನಾಟಕ ತಂಡ ಗಮನಾರ್ಹ ಸಾಧನೆ ಮಾಡಿದ್ದು, ಪಂದ್ಯದಲ್ಲಿ 1 ಬೆಳ್ಳಿ ಮತ್ತು 2 ಕಂಚಿನ ಪದಕಗಳನ್ನು ಗಳಿಸುವ ಮೂಲಕ ಚಾಂಪಿಯನ್‌ಶಿಪ್‌ನಲ್ಲಿ ಹೆಮ್ಮೆಯ ತಂಡವಾಗಿ ಕರ್ನಾಟಕ (Karnataka Team) ಹೊರಹೊಮ್ಮಿದೆ.

ಕೆಡೆಟ್ ಬಾಲಕಿಯರ ವಿಭಾಗದಲ್ಲಿ (11ವರ್ಷದೊಳಗಿನವರು) ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಕರ್ನಾಟಕ ತಂಡದ ಆಟಗಾರರು ಸಂಭ್ರಮಿಸಿದ್ದಾರೆ. ಕಾರವಾರ ತಾಲೂಕಿನ ಕೈಗಾದ ಆದ್ಯಾ ನಾಯ್ಕ ನೇತೃತ್ವದ ತಂಡ ಹರ್ಯಾಣ ಎದುರು 6-0, ಆಂಧ್ರಪ್ರದೇಶ ಎದುರು 3-0 ಅಂಕದೊಂದಿಗೆ ವಿಜಯಿಯಾಗಿತ್ತು. ನಂತರ ಕೇರಳ ಜತೆಗೆ 2-0, ತಮಿಳುನಾಡು ಜತೆ 4-0 ಅಂತರದಿಂದ ಗೆಲುವು ಸಾಧಿಸಿತ್ತು. ಬಳಿಕ ಕೇರಳ ತಂಡದ ಜತೆ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ 3-1 ಅಂಕದೊಂದಿಗೆ ಕರ್ನಾಟಕ ಗೆಲುವಿನ ಕೇಕೆ ಹಾಕಿತು. ಬಳಿಕ ಪಂಜಾಬ್ ಜತೆ ನಡೆದ ಫೈನಲ್ ಪಂದ್ಯದಲ್ಲಿ 1-2 ಅಂತರಗಳಿಂದ ಪರಾಭವಗೊಂಡು ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದೆ.

ತಂಡದಲ್ಲಿದ್ದವರು: ಆದ್ಯಾ ನಾಯ್ಕ ಕೈಗಾ (ಕ್ಯಾಪ್ಟನ್), ಭವನೀತ ತುಮಕೂರು, ದೇದಿಪ್ಯ ತುಮಕೂರು, ಅಕ್ಷರಾ ಶಿರಸಿ, ಐಶ್ವರ್ಯ ತುಮಕೂರು, ಕವನ ತುಮಕೂರು, ಸನ್ನಿಧಿ ತುಮಕೂರು, ಅಹನಾ ನಾಯ್ಕ ಕಾರವಾರ, ಕುಶಾಲ ಬೆಂಗಳೂರು, ಅನಯಾ ಕಾರವಾರ‌ ಅವರು ತಂಡವನ್ನು ಪ್ರತಿನಿಧಿಸಿದ್ದರು.

ಇದನ್ನೂ ಓದಿ: Raichur News: ಲಿಂಗಸುಗೂರಿನಲ್ಲಿ ಡಿ.29, 30ರಂದು ರಾಜ್ಯಮಟ್ಟದ 3ನೇ ವೈಜ್ಞಾನಿಕ ಸಮ್ಮೇಳನ: ಹುಲಿಕಲ್ ನಟರಾಜ್

ಕೆಡೆಟ್ ಮಿಕ್ಸಡ್ ವಿಭಾಗದಲ್ಲಿ ಕರ್ನಾಟಕ ತಂಡವು ಆರಂಭದ ಪಂದ್ಯ ತಮಿಳುನಾಡು ಜತೆ ಡ್ರಾ ಆಗಿತ್ತು, ಬಳಿಕ ಆಂಧ್ರಪ್ರದೇಶ, ಕೇರಳ ಎದುರು ಗೆದ್ದು ಸೆಮಿಫೈನಲ್‌ ತಲುಪಿತ್ತು. ಬಳಿಕ ಮತ್ತೆ ಎದುರಾದ ಕೇರಳ ಜತೆಗಿನ ಸೆಮಿಫೈನಲ್‌ ಪಂದ್ಯದಲ್ಲಿ ಕರ್ನಾಟಕ ತಂಡವು ಪರಾಭವಗೊಂಡಿತು. ನಂತರ ಅಂಕಗಳ ಆಧಾರದ ಮೇಲೆ ಮೂರನೇ ಸ್ಥಾನಕ್ಕಾಗಿ ಆಂಧ್ರಪ್ರದೇಶ ತಂಡದೊಂದಿಗೆ ನಡೆದ ಪಂದ್ಯದಲ್ಲಿ 1-3 ಅಂಕಗಳಿಸಿ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿತ್ತು.

ತಂಡದಲ್ಲಿದ್ದವರು: ಆದ್ಯಾ ನಾಯ್ಕ ಕೈಗಾ (ಕ್ಯಾಪ್ಟನ್), ಭವನೀತ ತುಮಕೂರು, ದೇದಿಪ್ಯ ತುಮಕೂರು, ಅಕ್ಷರಾ ಶಿರಸಿ, ರಾಜಗುರು ಶಿರಸಿ, ಸಾಕಿಬ್ ಕೈಗಾ, ಅಯ್ಯನ್ ಕೈಗಾ, ಶ್ರೀಶ ಮೊಗೇರ ಕಾರವಾರ, ಐಶ್ವರ್ಯ ತುಮಕೂರು, ದಕ್ಷತ್ ತುಮಕೂರು ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು.

ಸಬ್ ಜ್ಯೂನಿಯರ್ ಬಾಲಕಿಯರ ವಿಭಾಗದಲ್ಲಿ ಕರ್ನಾಟಕ ತಂಡವು ತಮಿಳುನಾಡು, ತೆಲಂಗಾಣ, ಜಮ್ಮು ಕಾಶ್ಮೀರ, ಆಂಧ್ರಪ್ರದೇಶ ತಂಡವನ್ನು ಮಣಿಸಿತ್ತು. ನಂತರ ಚಂಡಿಗಢ ಜತೆಗೆ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಸೋಲನ್ನಪ್ಪಿತು. ಬಳಿಕ ಮೂರನೇ ಸ್ಥಾನಕ್ಕಾಗಿ ಕೇರಳ ತಂಡದ ಜತೆಗೆ ನಡೆದ ಹಣಾಹಣಿಯಲ್ಲಿ 1-3 ಪಾಯಿಂಟ್‌ಗಳಿಂದ ಪರಾಭವಗೊಂಡಿದೆ.

ಇದನ್ನೂ ಓದಿ: Uttara Kannada News: ಯಲ್ಲಾಪುರದಲ್ಲಿ ಡಿ.16ರಂದು ʼವಿಶ್ವದರ್ಶನ ಸಂಭ್ರಮʼ ಕಾರ್ಯಕ್ರಮ

ತಂಡದಲ್ಲಿದ್ದವರು: ಮಾನ್ಯತಾ ಶಿರಸಿ (ಕ್ಯಾಪ್ಟನ್), ಮಾನ್ಯ ಬಿ.ಎಸ್. ಶಿರಸಿ, ಅಪೂರ್ವ ಕಾರವಾರ, ಕೀರ್ತಿ ಮುಂಡಗೋಡು, ಮಾನಸಿ ಬೆಳಗಾವಿ, ಆರಾಧ್ಯ ಮೆನನ್ ಕಾರವಾರ, ಯಶಸ್ವಿನಿ ಬೆಂಗಳೂರು, ಚಿನ್ಮಯಿ ಬೆಂಗಳೂರು, ಆರ್ಯ ಮಂಜುನಾಥ ಬೆಂಗಳೂರು.

ಟೂರ್ನಿಯಲ್ಲಿ ಕೈಗಾದ ಆದ್ಯಾ ನಾಯ್ಕ, ರಾಜಗುರು, ಭುವನೀತ, ಮಾನ್ಯತಾ, ಅಪೂರ್ವ ಕರ್ನಾಟಕ ತಂಡದ ಪರವಾಗಿ ಉತ್ತಮ ಆಟ ಪ್ರದರ್ಶಿಸಿದ್ದಾರೆ. ಕರ್ನಾಟಕ ತಂಡದ ಆಟಗಾರರಿಗೆ ಕೈಗಾ ರೋಲರ್ ಸ್ಕೇಟರ್ಸ್ ಕ್ಲಬ್‌ನ ದಿಲೀಪ ಹಣಬರ ತರಬೇತಿ ನೀಡಿದ್ದರು. ಮಕ್ಕಳ ಸಾಧನೆಗೆ ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಶನ್ ಅಭಿನಂದನೆ ಸಲ್ಲಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Rain News: ಭಾರಿ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವು

Rain News: ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ದುರ್ಘಟನೆ ನಡೆದಿದ್ದು, ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿದಿದೆ. ಇದು ಪಕ್ಕದ ಯಾಸಿರ್ ಎಂಬವರ ಮನೆಯ ಗೋಡೆಗೆ ಬಿದ್ದು ಭಾರೀ ಅವಘಡ ಸಂಭವಿಸಿತು.

VISTARANEWS.COM


on

rain news wall collapse 4 death
Koo

ಮಂಗಳೂರು: ಭಾರಿ ಮಳೆಯ (Rain news) ಪರಿಣಾಮ ಮನೆಯ ಗೋಡೆ ಕುಸಿದು (Wall collapse) ಬಿದ್ದು ನಾಲ್ವರು‌ ದುರ್ಮರಣ (four death) ಹೊಂದಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ (Ullala) ನಡೆದಿದೆ.

ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ದುರ್ಘಟನೆ ನಡೆದಿದ್ದು, ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿದಿದೆ. ಇದು ಪಕ್ಕದ ಯಾಸಿರ್ ಎಂಬವರ ಮನೆಯ ಗೋಡೆಗೆ ಬಿದ್ದು ಭಾರೀ ಅವಘಡ ಸಂಭವಿಸಿತು. ಮನೆಯೊಳಗಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಸಾವಿಗೀಡಾದರು.

ರಾತ್ರಿ ಸುರಿದ ಭಾರೀ ಮಳೆಗೆ ಈ ದುರಂತ ಸಂಭವಿಸಿದೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಾಲ್ವರ ಮೃತದೇಹವನ್ನೂ ಸ್ಥಳೀಯರು ಹೊರತೆಗೆದಿದ್ದಾರೆ.

ಅನಂತಕುಮಾರ್‌ ಹೆಗಡೆ ಮನೆಯಲ್ಲಿ ಬೆಂಕಿ ಆಕಸ್ಮಿಕ

ಕಾರವಾರ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ಮನೆಯಲ್ಲಿ ಬೆಂಕಿ ಆಕಸ್ಮಿಕ (Fire mishop) ಸಂಭವಿಸಿದೆ. ಇದು ಶಾರ್ಟ್‌ ಸರ್ಕ್ಯೂಟ್‌ನಿಂದ (Short Circuit) ಆಗಿದೆ ಎಂದು ತಿಳಿದುಬಂದಿದೆ.

ಶಿರಸಿಯ ಕೆಎಚ್‌ಬಿ ಕಾಲೋನಿಯಲ್ಲಿ ಇರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಸೃಷ್ಟಿಯಾದ ಪರಿಣಾಮ ಜಿಮ್ ಮಾಡುವ ಯಂತ್ರಗಳಿಗೆ ಅಲ್ಪ ಹಾನಿಯಾಗಿದೆ. ಇದನ್ನು ಹೊರತುಪಡಿಸಿದರೆ ಹೊಗೆಯಿಂದ ಗೋಡೆಗಳಿಗೆ ಹಾನಿಯಾಗಿದ್ದು ಅಂದಾಜು 50 ಸಾವಿರದಷ್ಟು ಹಾನಿಯಾಗಿರಬಹುದು ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದು ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸುನೀಲ್ ಅವರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಪ್ರವಾಸಿಗರಿಗೆ ಬಾಸುಂಡೆ ಬರುವಂತೆ ಥಳಿಸಿದ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ

ಬೆಳಗಾವಿ: ಕರ್ನಾಟಕದ ಪ್ರವಾಸಿಗರನ್ನು (Karnataka Tourists) ಗೋವಾದ ಅರಣ್ಯ ಇಲಾಖೆ (Goa Forest department) ಸಿಬ್ಬಂದಿ ಮನಬಂದಂತೆ ಥಳಿಸಿದ (Assault Case) ಘಟನೆ ಗೋವಾ ಗಡಿಯಲ್ಲಿರುವ ಸೂರಲ್ ಜಲಪಾತದ (Sural Falls) ಬಳಿ ನಡೆದಿದೆ. ಜಲಪಾತ ವೀಕ್ಷಣೆಗೆ ಹೋಗಿದ್ದ ಕನ್ನಡದ ಪ್ರವಾಸಿಗರಿಗೆ ಮೈಮೇಲೆ ಬಾಸುಂಡೆ ಬರುವ ಹಾಗೆ ಥಳಿಸಿ, ಅವರಿಂದ ಹಣ ಕಿತ್ತುಕೊಂಡು ವಿಕೃತಿ ಮೆರೆದಿದ್ದಾರೆ.

ಬೆಳಗಾವಿ ಮತ್ತು ಗೋವಾ ಗಡಿಯಲ್ಲಿರುವ ಖಾನಾಪೂರ ತಾಲೂಕಿನ ಕಣಕುಂಬಿ ಬಳಿಯ ಸೂರಲ್ ಜಲಪಾತ ಬಳಿ ಇದು ನಡೆದಿದೆ. ಮಳೆಗಾಲ ಆರಂಭ ಆಗುತ್ತಿದ್ದಂತೆ ಕರ್ನಾಟಕದಿಂದ ಅತಿಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ತೆರಳುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ ಪ್ರವಾಸಿಗರಿಂದ ಹೆಚ್ಚಿನ ಹಣ ವಸೂಲಿ ಮಾಡುವುದಲ್ಲದೆ, ಪ್ರಶ್ನಿಸಿದರೆ ಮೈಮೇಲೆ ಏರಿ ಬರುತ್ತಾರೆ.

ನಿರಂತರವಾಗಿ ಪ್ರವಾಸಿಗರಿಂದ ಒಂದಿಲ್ಲೊಂದು ಕಾರಣ ಹೇಳಿ ಹಣ ಕಿತ್ತುಕೊಳ್ಳುತ್ತಿರುವ ಆರೋಪ ಇವರ ಮೇಲಿದೆ. ಸೂರಲ್ ಜಲಪಾತದ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳಿಂದ ಹಣ ವಸೂಲಿ ಆರೋಪ ಮೊದಲಿನಿಂದಲೂ ಇದೆ. ಹುಕ್ಕೇರಿ ತಾಲೂಕಿನ ಸಂಕೇಶ್ವರದ ಐವರು ಯುವಕರ ತಂಡವನ್ನು ಇವರು ತಡೆದು ಥಳಿಸಿದ್ದಾರೆ. ಬೆನ್ನು, ಕಾಲು ಕೈಗೆ ಬಾಸುಂಡೆ ಬರುವ ಹಾಗೆ ಥಳಿಸಿ ವಿಕೃತಿ ತೋರಿದ್ದಾರೆ.

ಹಲ್ಲೆ ಮಾಡಿದ್ದಲ್ಲದೇ ಪರ್ಸ್‌ನಲ್ಲಿದ್ದ ಹಣವನ್ನೂ ಕಿತ್ತುಕೊಂಡಿದ್ದಾರೆ. 1 ಸಾವಿರ ಫೋನ್ ಪೇ ಮಾಡಿಸಿಕೊಂಡಿದ್ದು ಸೇರಿ ಒಟ್ಟು 9 ಸಾವಿರ ರೂಪಾಯಿ ಹಣ ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ದೌರ್ಜನ್ಯವನ್ನು ಸಾವಿರಾರು ಪ್ರವಾಸಿಗರು ಅನುಭವಿಸುತ್ತಿದ್ದು, ಯಾರೂ ದೂರು ನೀಡುತ್ತಿಲ್ಲ ಎಂದು ಹಲ್ಲೆಗೊಳಗಾದವರು ಅಲವತ್ತುಕೊಂಡಿದ್ದಾರೆ. ಗೋವಾ ಅರಣ್ಯ ಇಲಾಖೆಯ ಅಧಿಕಾರಿಗಳು ಇವರ ದೂರನ್ನು ಕೇಳಿಸಿಕೊಂಡಿಲ್ಲ.

ಇದನ್ನೂ ಓದಿ: Contaminated Water : ಬೆಳಗಾವಿ, ಕೋಲಾರದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು

Continue Reading

ಕರ್ನಾಟಕ

Karnataka Weather: ಇಂದು ಹಾಸನ, ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

Karnataka Weather: ಕರ್ನಾಟಕ ಕರಾವಳಿಯ ಉದ್ದಕ್ಕೂ ಬುಧವಾರ ವೇಗವಾಗಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಹಾಗೂ ಮನರಂಜನೆಗಾಗಿ ಸಮುದ್ರಕ್ಕೆ ಇಳಿಯುವವರಿಗೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಜೂನ್‌ 26ರಂದು ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (Karnataka Weather) ನೀಡಿದೆ

ಇನ್ನು ರಾಜ್ಯದ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ.

ಅದೇ ರೀತಿ ಜೂನ್‌ 27ರಂದು ಕೂಡ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಬೀಳಲಿದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯ ಉದ್ದಕ್ಕೂ ಬುಧವಾರ ಗಂಟೆಗೆ 35 ಕಿ.ಮೀನಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಮುಲ್ಕಿಯಿಂದ ಮಂಗಳೂರಿನವರೆಗೆ, ಅಲೆಗಳು ರಾತ್ರಿ 11.30ರವರೆಗೆ 3.3ರಿಂದ 3.6 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಉಂಟಾಗುವ ಮುನ್ಸೂಚನೆ ನೀಡಲಾಗಿದೆ. ಸಾಗರ ಕಾರ್ಯಾಚರಣೆ ಮತ್ತು ಹತ್ತಿರದ ದಡದ ಮನರಂಜನೆ ಮಾಡುವಾಗ ಜಾಗರೂಕರಾಗಿರಿ ಎಂದು ಸಲಹೆ ನೀಡಲಾಗಿದೆ.

ಉಡುಪಿಯಲ್ಲಿ ಹೈ ವೇವ್ ಎಚ್ಚರಿಕೆ: ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಯಲ್ಲಿ, ರಾತ್ರಿ 11.30ರ ವರೆಗೆ 3.4ರಿಂದ 3.8 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಮತ್ತು ಸವೆತ/ಅಲೆಗಳ ಉಲ್ಬಣವು ಸಾಧ್ಯತೆ ಎಂದು ಸಲಹೆ ನೀಡಲಾಗಿದೆ.

ಉತ್ತರ ಕನ್ನಡ, ಕರ್ನಾಟಕ ಕರಾವಳಿಯಲ್ಲಿ ಮಾಜಾಳಿಯಿಂದ ಭಟ್ಕಳದವರೆಗೆ ರಾತ್ರಿ 11.30ರವರೆಗೆ 3.5 ರಿಂದ 4.0 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಮತ್ತು ಸವೆತ/ಅಲೆಗಳ ಉಲ್ಬಣ ಸಾಧ್ಯತೆ ಎಂದು ಸಲಹೆ ನೀಡಲಾಗಿದೆ.

ಇದನ್ನೂ ಓದಿ | Monsoon Hair care: ಮಳೆಗಾಲದಲ್ಲಿ ಕೂದಲಿನ ಆರೈಕೆಗೆ ಈ ಸಲಹೆ ಪಾಲಿಸಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಲಘು ಮಳೆಯಾಗುವ ಸಾಧ್ಯತೆ ಹೆಚ್ಚು. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ‘C ಮತ್ತು 21 ° C ಆಗಿರಬಹುದು.

Continue Reading

ಕರ್ನಾಟಕ

Karnataka Weather: ನಾಳೆ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧೆಡೆ ಭಾರಿ ಮಳೆ; ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ!

Karnataka Weather: ಕರ್ನಾಟಕ ಕರಾವಳಿಯ ಉದ್ದಕ್ಕೂ ಬುಧವಾರ ಗಂಟೆಗೆ 35 ಕಿ.ಮೀನಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಹಾಗೂ ಮನರಂಜನಾ ಚಟುವಟಿಕೆ ನಡೆಸುವವರಿಗೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಜೂನ್‌ 26ರಂದು ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಪ್ರತ್ಯೇಕ ಕಡೆ ನಿರಂತರ ಗಾಳಿ (45-55 kmph) ಸಹಿತ ಭಾರಿ ಮಳೆ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (Karnataka Weather) ನೀಡಿದೆ.

ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,
ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (45-55 kmph) ಇರುವ ಸಾಧ್ಯತೆಯಿದೆ.

ಇನ್ನು ಜೂನ್‌ 27ರಂದು ಕೂಡ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸುರಿಯಲಿದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯ ಉದ್ದಕ್ಕೂ ಬುಧವಾರ ಗಂಟೆಗೆ 35 ಕಿ.ಮೀನಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಮುಲ್ಕಿಯಿಂದ ಮಂಗಳೂರಿನವರೆಗೆ, ಅಲೆಗಳು ರಾತ್ರಿ 11.30ರವರೆಗೆ 3.3ರಿಂದ 3.6 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಉಂಟಾಗುವ ಮುನ್ಸೂಚನೆ ನೀಡಲಾಗಿದೆ. ಸಾಗರ ಕಾರ್ಯಾಚರಣೆ ಮತ್ತು ಹತ್ತಿರದ ದಡದ ಮನರಂಜನೆ ಮಾಡುವಾಗ ಜಾಗರೂಕರಾಗಿರಿ ಎಂದು ಸಲಹೆ ನೀಡಲಾಗಿದೆ.

ಉಡುಪಿಯಲ್ಲಿ ಹೈ ವೇವ್ ಎಚ್ಚರಿಕೆ: ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಯಲ್ಲಿ, ರಾತ್ರಿ 11.30ರ ವರೆಗೆ 3.4ರಿಂದ 3.8 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಮತ್ತು ಸವೆತ/ಅಲೆಗಳ ಉಲ್ಬಣವು ಸಾಧ್ಯತೆ ಎಂದು ಸಲಹೆ ನೀಡಲಾಗಿದೆ.

ಉತ್ತರ ಕನ್ನಡ, ಕರ್ನಾಟಕ ಕರಾವಳಿಯಲ್ಲಿ ಮಾಜಾಳಿಯಿಂದ ಭಟ್ಕಳದವರೆಗೆ ರಾತ್ರಿ 11.30ರವರೆಗೆ 3.5 ರಿಂದ 4.0 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಮತ್ತು ಸವೆತ/ಅಲೆಗಳ ಉಲ್ಬಣ ಸಾಧ್ಯತೆ ಎಂದು ಸಲಹೆ ನೀಡಲಾಗಿದೆ.

ಇದನ್ನೂ ಓದಿ | Monsoon Hair care: ಮಳೆಗಾಲದಲ್ಲಿ ಕೂದಲಿನ ಆರೈಕೆಗೆ ಈ ಸಲಹೆ ಪಾಲಿಸಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಲಘು ಮಳೆಯಾಗುವ ಸಾಧ್ಯತೆ ಹೆಚ್ಚು. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ‘C ಮತ್ತು 21 ° C ಆಗಿರಬಹುದು.

Continue Reading

ಉತ್ತರ ಕನ್ನಡ

Anantkumar Hegde: ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಮನೆಯಲ್ಲಿ ಬೆಂಕಿ ಆಕಸ್ಮಿಕ

Anantkumar Hegde: ಶಿರಸಿಯ ಕೆಎಚ್‌ಬಿ ಕಾಲೋನಿಯಲ್ಲಿ ಇರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಸೃಷ್ಟಿಯಾದ ಪರಿಣಾಮ ಜಿಮ್ ಮಾಡುವ ಯಂತ್ರಗಳಿಗೆ ಅಲ್ಪ ಹಾನಿಯಾಗಿದೆ.

VISTARANEWS.COM


on

Anantkumar Hegde home fire
Koo

ಕಾರವಾರ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ಮನೆಯಲ್ಲಿ ಬೆಂಕಿ ಆಕಸ್ಮಿಕ (Fire mishop) ಸಂಭವಿಸಿದೆ. ಇದು ಶಾರ್ಟ್‌ ಸರ್ಕ್ಯೂಟ್‌ನಿಂದ (Short Circuit) ಆಗಿದೆ ಎಂದು ತಿಳಿದುಬಂದಿದೆ.

ಶಿರಸಿಯ ಕೆಎಚ್‌ಬಿ ಕಾಲೋನಿಯಲ್ಲಿ ಇರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಸೃಷ್ಟಿಯಾದ ಪರಿಣಾಮ ಜಿಮ್ ಮಾಡುವ ಯಂತ್ರಗಳಿಗೆ ಅಲ್ಪ ಹಾನಿಯಾಗಿದೆ. ಇದನ್ನು ಹೊರತುಪಡಿಸಿದರೆ ಹೊಗೆಯಿಂದ ಗೋಡೆಗಳಿಗೆ ಹಾನಿಯಾಗಿದ್ದು ಅಂದಾಜು 50 ಸಾವಿರದಷ್ಟು ಹಾನಿಯಾಗಿರಬಹುದು ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದು ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸುನೀಲ್ ಅವರು ಮಾಹಿತಿ ನೀಡಿದ್ದಾರೆ.

ಸರಗಳ್ಳನ ಕಾಲಿಗೆ ತುಮಕೂರು ಪೊಲೀಸ್‌ ಗುಂಡೇಟು

ತುಮಕೂರು: ತುಮಕೂರಿನಲ್ಲಿ ಪೊಲೀಸ್ ತುಪಾಕಿ (Tumkur Shoot out) ಸದ್ದು ಮಾಡಿದೆ. ನಿರಂತರವಾಗಿ ಸರಗಳ್ಳತನ ಮಾಡುತ್ತಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆಂಧ್ರದ ಹಿಂದೂಪುರ ಮೂಲದ ರಿಜ್ವಾನ್ ಎಂಬಾತನಿಗೆ ಗುಂಡೇಟು ಬಿದ್ದಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಈಜೀಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ.

ಆರೋಪಿ ರಿಜ್ವಾನ್‌ ಒಟ್ಟು 15ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. ಕಳೆದ ಒಂದು ವಾರದ ಹಿಂದೆ ಎ1 ಆರೋಪಿ ಚಿನ್ನಾ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಸೋಮವಾರ (ಜೂ.24) ಖಚಿತ ಮಾಹಿತಿ ಮೇರೆಗೆ ಎ2 ಆರೋಪಿ ರಿಜ್ವಾನ್‌ನನ್ನು ಬಂಧಿಸಲು ಪೊಲೀಸರು ತೆರಳಿದ್ದರು.

ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ, ಸಿಪಿಐ ಹನುನಂತರಾಯಪ್ಪ, ಪಿಎಸ್‌ಐ ಶ್ರೀನಿವಾಸ್, ದಾದಪೀರ್, ಹಾಗೂ ಪೊಲೀಸ್ ಸಿಬ್ಬಂದಿ ರಮೇಶ್ ತಂಡ ತೆರಳಿತ್ತು. ಹೊಸಪೇಟೆಯಿಂದ ಪೊಲೀಸ್ ಜೀಪ್‌ನಲ್ಲಿ ಮಧುಗಿರಿಗೆ ಕರೆತರುತ್ತಿದ್ದಾಗ, ಬಹಿರ್ದೆಸೆಗೆ ಹೋಗುವುದಾಗಿ ಈಜಿಹಳ್ಳಿ ಕ್ರಾಸ್ ಬಳಿ ಇಳಿದಿದ್ದ. ಈ ವೇಳೆ ಪೊಲೀಸ್ ಪೇದೆ ರಮೇಶ್ ಮೇಲೆ ರಿಹ್ವಾನ್‌ ಬಿಯರ್ ಬಾಟಲ್‌ ಎಸೆದು ಹಲ್ಲೆ ನಡೆಸಿ, ಪರಾರಿ ಆಗಲು ಯತ್ನಿಸಿದ್ದ. ಪೊಲೀಸರು ಶರಣಾಗುವಂತೆ ಮೂರು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ನಂತರ ಪೊಲೀಸರ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿ ಕರೆ ತಂದಿದ್ದಾರೆ.

tumkur Shoot out
ಗಾಯಾಳು ಪೊಲೀಸ್‌ ಪೇದೆ ರಮೇಶ್‌

ಬಿಯರ್‌ ಬಾಟೆಲ್‌ನಿಂದ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿ ರಮೇಶ್‌ಗೆ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರಿಜ್ವಾನ್‌ಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನೂ ರಿಜ್ವಾನ್‌ ಮೇಲೆ ಮಧುಗಿರಿ 3, ಮಿಡಗೇಶಿ 4, ಬಡವನಹಳ್ಳಿ 2, ಕೊರಟಗೆರೆ 1, ಕೊಡಿಗೇನಹಳ್ಳಿ 2 ಹಾಗೂ ಮಡಕಶಿರಾ 1, ಪಟ್ಟನಾಯಕನಹಳ್ಳಿ 2, ಗೌರಿಬಿದನೂರು 1 ಸೇರಿದಂತೆ ಹಲವು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ದೂರು ದಾಖಲಾಗಿವೆ. ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಇದನ್ನೂ ಓದಿ: Contaminated Water : ಬೆಳಗಾವಿ, ಕೋಲಾರದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು

Continue Reading
Advertisement
Gold Rate Today
ಚಿನ್ನದ ದರ5 mins ago

Gold Rate Today: ಆಭರಣಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕ್ರೀಡೆ9 mins ago

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

Rashmika Mandanna Ayushmann Khurrana Team Up For Horror Comedy
ಟಾಲಿವುಡ್15 mins ago

Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Self Harming
ಕರ್ನಾಟಕ21 mins ago

Self Harming: ಕೆಲಸದಿಂದ ತೆಗೆದು ಕಿರುಕುಳ; ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

jewellery robbery case
ಕ್ರೈಂ21 mins ago

Robbery Case: 30 ಸೆಕೆಂಡ್‌ನಲ್ಲಿ ಇಡೀ ಜ್ಯುವೆಲ್ಲರಿ ದರೋಡೆ, ಸಿಸಿಟಿವಿಯಲ್ಲಿ ಕೃತ್ಯ ಸೆರೆ

Parineethi Chopra
Latest33 mins ago

Parineethi Chopra: ಏಳುಮಲ್ಲಿಗೆ ತೂಕದ ಚೆಲುವೆ ಪರಿಣಿತಿ ಚೋಪ್ರಾ ಸಿಕ್ಕಾಪಟ್ಟೆ ದಪ್ಪಗಾಗಿದ್ದು ಯಾಕೆ?

Asaduddin Owais
ದೇಶ36 mins ago

Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Actor Darshan support by anchor hemalatha
ಸ್ಯಾಂಡಲ್ ವುಡ್40 mins ago

‌Actor Darshan: ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

Life threat
ಕರ್ನಾಟಕ55 mins ago

Life threat: ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Para Badminton Ranking
ಕ್ರೀಡೆ1 hour ago

Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌