NDA vs INDIA: ಲೋಕಸಭೆ ಫೈನಲ್‌ಗೆ ಬೆಂಗಳೂರಲ್ಲಿ ರಣಘೋಷ: ಟೀಂ INDIA ನಡೆಸಲಿದ್ದಾರೆ 11 ಆಟಗಾರರು! - Vistara News

ಕರ್ನಾಟಕ

NDA vs INDIA: ಲೋಕಸಭೆ ಫೈನಲ್‌ಗೆ ಬೆಂಗಳೂರಲ್ಲಿ ರಣಘೋಷ: ಟೀಂ INDIA ನಡೆಸಲಿದ್ದಾರೆ 11 ಆಟಗಾರರು!

ನಾವೆಲ್ಲರೂ ಭಾರತಕ್ಕಾಗಿ ಸೇರಿದ್ದೇವೆ. INDIAವನ್ನು ಬಿಜೆಪಿ ಎದುರಿಸುತ್ತದೆಯೇ? (NDA vs INDIA) ಎಂದು ಮಮತಾ ಬ್ಯಾನರ್ಜಿ ಸವಾಲೆಸೆದರು.

VISTARANEWS.COM


on

Lok Sabha election will modi vs Kharge, India bloc may choose aicc president as its leader
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭೆ ಚುನಾವಣೆಗೆ ಕೇಂದ್ರ ಸರ್ಕಾರದ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು ಬೆಂಗಳೂರಿನ ಪ್ರತಿಪಕ್ಷದ ಸಭೆಯಲ್ಲಿ, ಮೈತ್ರಿಕೂಟಕ್ಕೆ Indian Nationation Develpemental Inclusive Alliance (INDIA) ಎಂದು ನಾಮಕರಣ ಮಾಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ (NDA vs INDIA) ಘೋಷಣೆ ಮಾಡಿದ್ದಾರೆ.

ಸಭೆಯ ನಂತರ ಎಲ್ಲ ನಾಯಕರನ್ನೊಳಗೊಂಡ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ದೇಶ ಹಾಗೂ ಪ್ರಜಾಪ್ರಭುತ್ವವನ್ನು ಉಳಿಸಲು ಈ ಸಭೆ ಮಹತ್ವವಾಗಿದೆ. ನಾವು ಸಭೆಯಲ್ಲಿ ಅನೇಕ ವಿಚಾರಗಳನ್ನು ಚರ್ಚಿಸಿದ್ದೇವೆ. ಪ್ರಸ್ತಾವನೆಯನ್ನು ಎಲ್ಲ 26 ಪಕ್ಷಗಳೂ ಒಪ್ಪಿಕೊಂಡಿವೆ. ನಮ್ಮ ಮೈತ್ರಿಕೂಟವನ್ನು Indian Nationation Develpemental Inclusive Alliance (INDIA) ಎಂದು ಆಗಿದೆ. ಈ ಹೆಸರನ್ನು ಎಲ್ಲರೂ ಒಪ್ಪಿದ್ದಾರೆ.

ಮೈತ್ರಿಕೂಟಕ್ಕೆ 11 ಜನರ ಸಮನ್ವಯ ಸಮಿತಿ ರಚನೆಯಾಗಲಿದೆ. ಈ 11 ಸದಸ್ಯರ ಹೆಸರನ್ನು ಮುಂಬೈಯಲ್ಲಿ ನಡೆಯುವ ಮುಂದಿನ ಸಭೆಯಲ್ಲಿ ನಿರ್ಧಾರ ಮಾಡಲಾಗುತ್ತದೆ. ಈ ಮೈತ್ರಿಕೂಟದ ಪ್ರಚಾರ ನಿರ್ವಹಣೆಗೆ ಒಂದು ಸಚಿವಾಲಯವನ್ನು ರಚಿಸಲಾಗುತ್ತದೆ. ದೆಹಲಿಯಲ್ಲಿ ಈ ಸಚಿವಾಲಯವನ್ನು ಸ್ಥಾಪಿಸಲಾಗುತ್ತದೆ.

ಇಂದಿನ ಸಭೆಯ ನಂತರ ಜಂಟಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಲು ನಿರ್ಧಾರ ಮಾಡಲಾಗಿದೆ. ಮುಂದಿನ ಸಭೆಯು ಮುಂಬೈಯಲ್ಲಿ ನಡೆಯಲಿದೆ. ಇಂದಿನ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ನಾಶ ಮಾಡಲು ಬಿಜೆಪಿ ಬಯಸುತ್ತಿದೆ. ಸಂವಿಧಾನವನ್ನೂ ನಾಶ ಮಾಡಲು ಮುಂದಾಗಿದೆ.

ಸಿಬಿಐ, ಇಡಿಯಂತಹ ಸ್ವಾಯತ್ತ ಸಂಸ್ಥೆಗಳನ್ನು ಪ್ರತಿಪಕ್ಷಗಳ ವಿರುದ್ಧ ಬಳಕೆ ಮಾಡುತ್ತಿದೆ. ಇಂದಿನ ಗಂಭೀರ ಪರಿಸ್ಥಿತಿಯಲ್ಲಿ ದೇಶವನ್ನು ಉಳಿಸಲು ನಾವೆಲ್ಲರೂ ಒಟ್ಟಾಗಿದ್ದೇವೆ. ಪ್ರತಿ ರಾಜ್ಯದಲ್ಲೂ ನಮ್ಮಲ್ಲಿ ರಾಜಕೀಯವಾಗಿ ಕೆಲವು ಭಿನ್ನಾಭಿಪ್ರಾಯಗಳಿವೆ. ಆದರೆ ಅದೆಲ್ಲವನ್ನೂ ಬದಿಗಿಟ್ಟು ದೇಶವನ್ನು ಉಳಿಸಲು ನಾವೆಲ್ಲರೂ ಮುಂದೆ ಬಂದಿದ್ದೇವೆ. ಇದಕ್ಕಾಗಿ ಎಲ್ಲ ಪಕ್ಷಗಳೂ ಅನೇಕ ಸಲಹೆಗಳನ್ನು ನೀಡಿವೆ. ಅವುಗಳನ್ನು ಒಪ್ಪಿ ಮುನ್ನಡೆಯುತ್ತೇವೆ.

ಮೊದಲಿಗೆ ಪಟನಾದಲ್ಲಿ ಸಭೆ ಸೇರಲಾಗಿತ್ತು. ಆಗ 16 ಪಕ್ಷಗಳಿದ್ದವು. ಈಗ 26 ಪಕ್ಷಗಳಿವೆ. ಇದೆಲ್ಲವನ್ನೂ ನೋಡಿದ ನಂತರ ನರೇಂದ್ರ ಮೋದಿಯವರು 30 ಪಕ್ಷಗಳ ಸಭೆ ನಡೆಸಿದ್ದಾರೆ. ಈ 30 ಪಕ್ಷಗಳು ಎಲ್ಲಿವೆ ಎಂದು ಗೊತ್ತಿಲ್ಲ. ಅವೇನು ನೋಂದಾಯಿತ ಪಕ್ಷಗಳೇ? ಎಲ್ಲಿವೆ ಆ ಪಕ್ಷಗಳು ಗೊತ್ತಿಲ್ಲ. ಇಲ್ಲಿವರೆಗೆ ತಮ್ಮದೇ ಮೈತ್ರಿಕೂಟವನ್ನು ಅವರು ಲೆಕ್ಕಕ್ಕಿಟ್ಟಿರಲಿಲ್ಲ. ಈಗ ಒಬ್ಬೊಬ್ಬರನ್ನೂ ಕರೆಯುತ್ತಿದ್ದಾರೆ. ಮೋದಿಯವರಿಗೆ ಈಗ ಭಯ ಆರಂಭವಾಗಿದೆ.

ಇದನ್ನೂ ಓದಿ: Opposition Meet: ಲೋಕಸಭೆಗೆ NDA vs INDIA: ಮೋದಿ ವಿರೋಧಿ ಪ್ರತಿಪಕ್ಷಕ್ಕೆ ಹೊಸ ಹೆಸರು

ದೇಶದಲ್ಲಿ ತಾಂಡವವಾಡುತ್ತಿರುವ ನಿರುದ್ಯೋಗ, ಬೆಲೆಯೇರಿಕೆಯಂತಹ ಅನೇಕ ಸಮಸ್ಯೆಗಳನ್ನು ಎದುರಿಸಲು ನಾವೆಲ್ಲರೂ ಮುಂದೆ ಬಂದಿದ್ದೇವೆ. ಮಾಧ್ಯಮಗಳೂ ಇಂದು ಸಂಕಷ್ಟದಲ್ಲಿವೆ. ಮಾಧ್ಯಮಗಳನ್ನು ಮೋದಿ ಬಂಧಿಸಿದ್ದಾರೆ. ಮೋದಿಯವರ ಸಂಕೇತ ಇಲ್ಲದೆಯೇ ಏನೂ ಮಾಡಲಾಗುತ್ತಿಲ್ಲ. ನನ್ನ ರಾಜಕೀಯ ಜೀವನದಲ್ಲಿ ಇಷ್ಟು ಪ್ರಮಾಣದ ಮಾಹಿತಿ ಹತ್ತಿಕ್ಕುವ ಕೆಲಸವನ್ನು ನಾನೆಂದಿಗೂ ನೋಡಿಲ್ಲ. ಇಷ್ಟೆಲ್ಲದರ ನಡುವೆ ನಾವು 2024ರ ಲೋಕಸಭೆ ಚುನಾವಣೆಯ ಕಡೆಗೆ ಮುನ್ನಡೆಯುತ್ತೇವೆ, ಸಫಲ ಆಗುತ್ತೇವೆ ಎಂದು ಭಾವಿಸಿದ್ದೇವೆ.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮಾತನಾಡಿ, ನಾವೆಲ್ಲರೂ ಭಾರತಕ್ಕಾಗಿ ಸೇರಿದ್ದೇವೆ. INDIAವನ್ನು ಬಿಜೆಪಿ ಎದುರಿಸುತ್ತದೆಯೇ? ನಮ್ಮ ಸವಾಲು ನೇರವಾಗಿ ಕೇಂದ್ರೀಕೃತವಾಗಿರುತ್ತದೆ. ಇದೇ ವೇದಿಕೆಯ ಅಡಿಯಲ್ಲಿ ನಾವು ಹೋರಾಟ ನಡೆಸುತ್ತೇವೆ. ಇದಕ್ಕೆ ಸವಾಲೆಸೆಯುವವರಿದ್ದರೆ ಬನ್ನಿ. ಭಾರತವನ್ನು ಉಳಿಸಬೇಕು. ಮಣಿಪುರಂತಹ ಘಟನೆಗಳಿಂದ ಭಾರತವನ್ನು ಉಳಿಸಬೇಕು. ಭಾರತವನ್ನು ಉಳಿಸಬೇಕು. ಬಿಜೆಪಿಯು ದೇಶವನ್ನು ಮಾರುವ ಒಪ್ಪಂದಕ್ಕೆ ಮುಂದಾಗಿದೆ. ಪ್ರಜಾಪ್ರಭುತ್ವವನ್ನು ಖರೀದಿಸಲು ಮುಂದಾದೆ. ಹೀಗಾಗಿ ಯಾವುದೇ ಸ್ವಾಯತ್ತ ಸಂಸ್ಥೆ ಕೆಲಸ ಮಾಡಲು ಬಿಡುತ್ತಿಲ್ಲ. ಭಾರತ ಗೆಲ್ಲುತ್ತದೆ, ಬಿಜೆಪಿ ಸೋಲುತ್ತದೆ ಎಂದರು.

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಮಾತನಾಡಿ, ಈ ಸರ್ಕಾರಕ್ಕೆ ಕೆಲಸ ಮಾಡಲು ಸಾಕಷ್ಟು ಅವಕಾಶವಿತ್ತು. ಆದರೆ ಒಂದೇ ಒಂದು ಕ್ಷೇತ್ರದಲ್ಲೂ ಈ ಸರ್ಕಾರ ಅಭಿವೃದ್ಧಿ ಮಾಡಿಲ್ಲ. ರೈಲ್ವೆಯಿಂದ ಎಲ್ಲವನ್ನೂ ಹಾಳು ಮಾಡಿದ್ದಾರೆ. ಅದಕ್ಕಾಗಿ ಈ ಸಭೆಯಲ್ಲಿ ಉತ್ತಮ ಚರ್ಚೆ ನಡೆದಿದೆ ಎಂದರು.

ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್‌ ಠಾಕ್ರೆ ಮಾತನಾಡಿ, ಬೇರೆಬೇರೆ ವಿಚಾರಧಾರೆ ಇದೆಯಲ್ಲ ಎಂದು ಅನೇಕರು ಕೇಳಿದರು. ಇಷ್ಟೆಲ್ಲದರ ನಂತರವೂ ನಾವು ಒಟ್ಟಾಗಿದ್ದೇವೆ. ನಾವು ಕುಟುಂಬಕ್ಕಾಗಿ ಹೋರಾಡುತ್ತಿದ್ದೇವೆ ಎಂದು ಹೇಳುತ್ತಾರೆ. ಹೌದು. ಇಡೀ ದೇಶವೇ ನಮ್ಮ ಕುಟುಂಬ. ಇದನ್ನು ಉಳಿಸಿಕೊಳ್ಳಲು ನಾವೆಲ್ಲರೂ ಒಟ್ಟಾಗಿದ್ದೇವೆ. ನಾವೆಲ್ಲರೂ ಸಫಲರಾಗುತ್ತೇವೆ ಎಂಬ ವಿಶ್ವಾಸ ನಮಗಿದೆ. ನೀವೇಕೆ ಹೆದರುತ್ತೀರ? ನಾವಿದ್ದೇವೆ ಎಂದು ದೇಶದ ಜನರಿಗೆ ತಿಳಿಸುತ್ತಿದ್ದೇವೆ. ದೇಶವನ್ನು ನಾವೆಲ್ಲರೂ ಸುರಕ್ಷಿತವಾಗಿಸುತ್ತೇವೆ. ಈ ಸಭೆಯನ್ನು ಆಯೋಜಿಸಿದ್ದಕ್ಕೆ ಕರ್ನಾಟಕ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಾತನಾಡಿ, ಈ ಹೋರಾಟವು ಬಿಜೆಪಿ ಹಾಗೂ ಪ್ರತಿಪಕ್ಷಗಳ ನಡುವಿನದ್ದಲ್ಲ. ಇದು ದೇಶದ ಧ್ವನಿಯನ್ನು ಅಡಗಿಸುವುದರ ವಿರುದ್ಧದ ಹೋರಾಟ. ಅದಕ್ಕಾಗಿಯೇ INDIA ಹೆಸರನ್ನು ಇರಿಸಲಾಗಿದೆ. ಇದು NDA ಹಾಗೂ INDIA ನಡುವಿನ ಹೋರಾಟ. ಯಾರೇ ಭಾರತದ ವಿರುದ್ಧ ನಿಂತರೂ ಜಯ ಯಾರಿಗೆ ಸಿಗುತ್ತದೆ ಎನ್ನುವುದು ನಿಶ್ಚಿತವಾಗಿದೆ. ನಾವು ಇದಕ್ಕಾಗಿ ಒಂದು ಕ್ರಿಯಾ ಯೋಜನೆ ರೂಪಿಸುತ್ತೇವೆ. ನಮ್ಮ ವಿಚಾರಧಾರೆಯ ಕುರಿತು ಒಟ್ಟಾಗಿ ಹೇಳುತ್ತೇವೆ ಎಂದರು.

ಪ್ರಶ್ನೋತ್ತರ
ಈ ಮೈತ್ರಿಕೂಟಕ್ಕೆ ನಾಯಕರು ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಮಲ್ಲಿಕಾರ್ಜುನ ಖರ್ಗೆ, ನಾವು ಸಮನ್ವಯ ಸಮಿತಿ ಮಾಡುತ್ತೇವೆ. ಈ 11 ಜನರ ತಂಡವೇ, ಸಂಚಾಲಕರನ್ನು ನೇಮಕ ಮಾಡುತ್ತದೆ. ಇದು ಮುಂಬೈಯಲ್ಲಿ ತೀರ್ಮಾನ ಆಗುತ್ತದೆ . ಇದು ಸಣ್ಣ ವಿಚಾರ, ದೊಡ್ಡದೇನಲ್ಲ ಎಂದರು.

ಅನೇಕ ವಿಚಾರಗಳ ಕುರಿತು ಸಮಾನತೆ ಬಂದಿದೆಯೇ ಎಂಬ ಕುರಿತು ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ, ನಾವು ಮಣಿಪುರ, ನಿರುದ್ಯೋಗ, ಹಣದುಬ್ಬರದಂತಹ ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ಪ್ರಜಾಪ್ರಭುತ್ವವನ್ನು ರಕ್ಷಿಸುವ ಕುರಿತು ಚರ್ಚೆ ನಡೆಸಿದ್ದೇವೆ. ಎಲ್ಲರೂ ಚರ್ಚೆಯಿಂದ ಸಂತುಷ್ಠರಾಗಿದ್ದಾರೆ. ಕನಿಷ್ಠ ಸಾಮಾನ್ಯ ಕಾರ್ಯಕ್ರಮದ ಕುರಿತು ಉತ್ತರಿಸಿ, ಎಲ್ಲರೂ ಒಟ್ಟಾಗಿದ್ದೇವೆ ಎನ್ನುವುದೇ ಸೂತ್ರ ಎಂದರು.

ಸೀಟು ಹಂಚಿಕೆ ಕುರಿತು ಯಾವ ಚರ್ಚೆ ನಡೆದಿದೆ ಎಂಬ ಕುರಿತು ಉತ್ತರಿಸಿದ ಮಲ್ಲಿಕಾರ್ಜುನ ಖರ್ಗೆ, ಸೀಟು ಹಂಚಿಕೆ ಬಹಳ ದೊಡ್ಡ ವಿಚಾರ ಅಲ್ಲ. 11 ಜನರ ಸಮಿತಿಯೇ ಎಲ್ಲವನ್ನೂ ನಿರ್ಧಾರ ಮಾಡುತ್ತದೆ. ಎಲ್ಲ ನಾಯಕರೂ ಒಟ್ಟಾಗಿ ಕುಳಿತು ನಿರ್ಧಾರ ಮಾಡುತ್ತದೆ ಎಂದರು. ಪ್ರಾದೇಶಿಕ ಪಕ್ಷಕ್ಕೆ ತೊಂದರೆ ಇದೆಯೇ ಎಂಬ ಕುರಿತು ಉತ್ತರಿಸಿದ ಮಲ್ಲಿಕಾರ್ಜುನ ಖರ್ಗೆ, ಜನರಿಂದ ಬೆಂಬಲಿಸಲ್ಪಡುವ ಶರದ್‌ ಪವಾರ್‌, ಉದ್ಧವ್‌ ಠಾಕ್ರೆಯವರಂತಹ ನಾಯಕರು ನಮ್ಮ ಜತೆಗಿದ್ದಾರೆ. ಶಾಸಕರನ್ನು ಸೃಷ್ಟಿಸುವವರೇ ನಮ್ಮ ಜತೆಗೆ ಇರುವಾಗ ಅದರ ಬಗ್ಗೆ ತಲೆಕೆಡಿಸಿಕೊಳ್ಳುವಂತಿಲ್ಲ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

SSLC Result 2024: ಶೇ.100 ಅಂಕಗಳೊಂದಿಗೆ ಬಾಗಲಕೋಟೆಯ ಅಂಕಿತಾ ಪ್ರಥಮ; ಎಸ್ಸೆಸ್ಸೆಲ್ಸಿ ಟಾಪರ್ಸ್ ಪಟ್ಟಿ ಇಲ್ಲಿದೆ

SSLC Result 2024: ಮೊದಲ ಸ್ಥಾನ ಪಡೆದ ಅಂಕಿತಾ ಬಸಪ್ಪ ಮುಧೋಳ ಮೆಲ್ಲಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. 7 ಮಂದಿ ಎರಡನೇ ರ್ಯಾಂಕ್‌ ಪಡೆದಿದ್ದಾರೆ. ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ವಿವರ ಹೀಗಿದೆ:

VISTARANEWS.COM


on

sslc result 2024 ankita basappa first rank toppers list
Koo

ಬೆಂಗಳೂರು: 2023-24ರ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ (SSLC Result 2024) ಪ್ರಕಟವಾಗಿದ್ದು, ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು (Ankita Basappa) ಶೇ.100 ಅಂಕ ಗಳಿಸಿ (625/625) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಏಳು ಮಂದಿ 625ರಲ್ಲಿ 624 ಅಂಕ ಪಡೆದು ದ್ವಿತೀಯ ಸ್ಥಾನ ಗಳಿಸಿದ್ದಾರೆ. 14 ಮಂದಿ ತೃತೀಯ ಸ್ಥಾನಿಗಳಾಗಿದ್ದಾರೆ.

ಅಂಕಿತಾ ಬಸಪ್ಪ ಮುಧೋಳ ಮೆಲ್ಲಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. ಅತಿ ಹೆಚ್ಚು ಅಂಕ ಪಡೆದು ದ್ವಿತೀಯ ಹಾಗೂ ತೃತೀಯ ರ್‍ಯಾಂಕ್‌ ವಿದ್ಯಾರ್ಥಿಗಳ (SSLC toppers) ವಿವರ ಹೀಗಿದೆ:

ಪ್ರಥಮ ರ್‍ಯಾಂಕ್‌ (625/625)

1) ಅಂಕಿತಾ ಬಸಪ್ಪ- ಮುಧೋಳ ಮೆಲ್ಲಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ (625/625)

ದ್ವಿತೀಯ ರ್‍ಯಾಂಕ್ (624/625)

ಮೇಧಾ ಪಿ. ಶೆಟ್ಟಿ (ಹೋಲಿ ಚೈಲ್ಡ್‌ ಹೈಸ್ಕೂಲ್‌, ಅಶೋಕನಗರ, ಬೆಂಗಳೂರು)
ಹರ್ಷಿತಾ ಡಿಎಂ (ವಾಸವಿ ಇಂಗ್ಲಿಷ್‌ ಹೈಸ್ಕೂಲ್‌, ಶಿರಾ)
ಚಿನ್ಮಯ್ (ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹೈಸ್ಕೂಲ್, ಬೆಳ್ತಂಗಡಿ)
ಸಿದ್ದಾಂತ್ (‌ಶ್ರಮಣರತ್ನ ಶ್ರೀ 108 ಆಚಾರ್ಯ ಸುಬಲ ಸಾಗರ ವಿದ್ಯಾಮಂದಿರ, ಶೇಡ್ಬಾಳ, ಅಥಣಿ)
ದರ್ಶನ್ (ಮಾರಿಕಾಂಬ ಪಿಯು ಕಾಲೇಜು, ಶಿರಸಿ)
ಚಿನ್ಮಯ್ (ಸಿದ್ದಿವಿನಾಯಕ ಹೈಸ್ಕೂಲ್‌, ಶಿರಸಿ)
ಶ್ರೀರಾಮ್ (ಶಾರದಾಂಬ ಹೈಸ್ಕೂಲ್‌, ಶಿರಸಿ)

ತೃತೀಯ ರ್‍ಯಾಂಕ್ (623/625)

ಸೌರವ್‌ ಕೌಶಿಕ್‌ (ವಿವಿಎಸ್‌ ಸರ್ದಾರ್‌ ಪಟೇಲ್‌ ಹೈಸ್ಕೂಲ್‌, ರಾಜಾಜಿನಗರ ಬೆಂಗಳೂರು)
ಅಂಕಿತಾ ಆನಂದ್‌ (ವಿವಿಎಸ್‌ ಸರ್ದಾರ್‌ ಪಟೇಲ್‌ ಹೈಸ್ಕೂಲ್‌, ರಾಜಾಜಿನಗರ ಬೆಂಗಳೂರು)
ಧೀರಜ್‌ ಪ್ರೀತಂ ರೆಡ್ಡಿ (ಸೇಂಟ್‌ ಪ್ಲಾರೆಟ್‌ ಹೈಸ್ಕೂಲ್‌, ಜಾಲಹಳ್ಳಿ, ಬೆಂಗಳೂರು)
ಮಾನ್ಯತಾ ಎಸ್.‌ ಮಯ್ಯ (ಎನ್‌ಇಟಿ ಪಬ್ಲಿಕ್‌ ಸ್ಕೂಲ್‌, ಬೆಂಗಳೂರು)
ಮೋನಿಷ್‌ ಸಾಯಿ ಎಸ್‌ಎನ್‌ (ಬಿಜಿಎಸ್‌ ಪಬ್ಲಿಕ್‌ ಸ್ಕೂಲ್‌, ಬಾಗೇಪಲ್ಲಿ)
ದರ್ಶಿತಾ ಎ. (ಶ್ರೀ ಮಹಾವೀರ ಜೈನ್‌ ಹೈಸ್ಕೂಲ್‌, ಕೋಲಾರ)
ಜಾಹ್ನವಿ ಎಸ್.‌ (ಬಿಕೆಎಸ್‌ವಿಬಿ ಹೈಸ್ಕೂಲ್‌, ವಿಜಯನಗರ ಮೈಸೂರು)
ಡಿ.ಎಸ್‌ ಧನ್ವಿ (ಸದ್ವಿದ್ಯಾ ಹೈಸ್ಕೂಲ್‌, ವಿಜಯನಗರ, ಮೈಸೂರು)
ನವನೀತ್‌ ಕೆ.ಸಿ (ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮಂಡ್ಯ)
ಸಹನಾ ಎನ್.‌ (ಕಾರ್ಕಳ ಜ್ಞಾನಸುಧಾ ಹೈಸ್ಕೂಲ್‌, ಕುಕ್ಕಂದೂರು ಉಡುಪಿ)
ಅನನ್ಯಾ ಗೌಡ (ಸರ್ವೋದಯ ಕಾನ್ವೆಂಟ್‌, ಹಾಸನ)
ನಿಸರ್ಗಾ ಎಚ್‌.ಜಿ (ಯುನೈಟೆಡ್‌ ಹೈಸ್ಕೂಲ್‌, ಹಾಸನ)
ಪವಿತ್ರಾ ಕೊನ್ನೂರು (ಸರ್ಕಾರಿ ಆದರ್ಶ ವಿದ್ಯಾಲಯ, ಮುದ್ದೇಬಿಹಾಳ)
ತೃಪ್ತಿ ರಾಮಚಂದ್ರ ಗೌಡ (ಸಿದ್ದಿವಿನಾಯಕ ಹೈಸ್ಕೂಲ್‌, ಶಿರಸಿ)

ರಾಜ್ಯದ 78 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತವಾಗಿದೆ. 2022-23ರಲ್ಲಿ 83.89% ಮಂದಿ ಪಾಸ್ ಆಗಿದ್ದು, ಈ ಬಾರಿ 73.40% ಮಂದಿ ಉತ್ತೀರ್ಣರಾಗಿದ್ದಾರೆ. ಶೇಕಡಾ 10.49%ರಷ್ಟು ಫಲಿತಾಂಶ ಕುಸಿತವಾಗಿದೆ.

ಈ ಬಾರಿಯೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ನಗರ ಪ್ರದೇಶದ 3.59 ಲಕ್ಷ ಮಂದಿ ಪಾಸಾಗಿ 72.83% ಪಡೆದಿದ್ದರೆ, ಗ್ರಾಮೀಣ ಪ್ರದೇಶದ 2.71 ಲಕ್ಷ ಮಂದಿ ಉತ್ತೀರ್ಣರಾಗಿ 74.17% ಫಲಿತಾಂಶ ದಾಖಲಿಸಿದ್ದಾರೆ. ಸರ್ಕಾರಿ ಶಾಲೆಗಳ 2.43 ಲಕ್ಷ ಮಂದಿ ಪಾಸಾಗಿ ಶೇಕಡಾ 72.46, ಅನುದಾನಿತ ಶಾಲೆಗಳ 1.50 ಲಕ್ಷ ಮಂದಿ ಪಾಸಾಗಿ ಶೇಕಡಾ 72.22, ಅನುದಾನರಹಿತ ಶಾಲೆಗಳ 2.23 ಮಂದಿ ಉತ್ತೀರ್ಣರಾಗಿ ಶೇಕಡಾ 86.46 ಫಲಿತಾಂಶ ಒದಗಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ರಾಜ್ಯಕ್ಕೆ ಉಡುಪಿ ಮೊದಲ ಸ್ಥಾನ, ದಕ್ಷಿಣ ಕನ್ನಡ ಎರಡನೇ ಸ್ಥಾನ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಪಡೆದರೆ, ಯಾದಗಿರಿ ಕೊನೆಯ ಸ್ಥಾನವನ್ನು ಪಡೆದಿದೆ. ಪಾಸಾಗಲಿ, ಫೇಲಾಗಲಿ 3 ಬಾರಿ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಲಾಗಿದೆ. ಪಾಸಾದರು ಸಹ ಅಂಕ ಹೆಚ್ಚಿಸಿಕೊಳ್ಳಲು ಮತ್ತೆ ಪರೀಕ್ಷೆ-2, ಪರೀಕ್ಷೆ-3 ಬರೆಯಬಹುದು.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Continue Reading

ಬೆಂಗಳೂರು

SSLC Result 2024: ಎಸ್‌ಎಸ್‌ಎಲ್‌ಸಿ ರಿಸಲ್ಟ್‌; ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಕಟಗೊಂಡಿದ್ದು, ಕಳೆದ ವರ್ಷ ಹಿಂದಿದ್ದ ಉಡುಪಿ ಜಿಲ್ಲೆ ಫಿನಿಕ್ಸ್‌ನಂತೆ ಎದ್ದು ಬಂದರೆ, ಯಾದಗಿರಿ ಜಿಲ್ಲೆ ಕೊನೆ ಸ್ಥಾನವನ್ನು ಪಡೆದು ಕುಳಿತಲ್ಲೇ ಕುಳಿತಿದೆ.

VISTARANEWS.COM


on

By

SSLC Exam Result 2024 Announce
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ. ಕಳೆದ ವರ್ಷ ಮೊದಲ ಸ್ಥಾನವನ್ನು ಚಿತ್ರದುರ್ಗ, ಎರಡನೇ ಸ್ಥಾನವನ್ನು ಮಂಡ್ಯ , ಮೂರನೇ ಸ್ಥಾನವನ್ನು ಹಾಸನ ಹಾಗೂ ಕೊನೆ ಸ್ಥಾನವನ್ನು ಯಾದಗಿರಿ ಪಡೆದಿತ್ತು. ಈ ವರ್ಷವೂ ಫಲಿತಾಂಶದಲ್ಲಿ ಯಾದಗಿರಿಯು ಕೊನೆ ಸ್ಥಾನವನ್ನೇ ಗಳಿಸಿದ್ದು, ಶೇಕಡಾವಾರು 50.59ರಷ್ಟು ಫಲಿತಾಂಶ ಬಂದಿದೆ. ಇನ್ನೂ ಉಡುಪಿ ಜಿಲ್ಲೆ ಕಳೆದ ಬಾರಿ 14ಕ್ಕೆ ಸ್ಥಾನದಲ್ಲಿತ್ತು, ಆದರೆ ಈ ಬಾರಿ ಶೇ.94ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನವನ್ನು ಗಳಿಸಿದೆ. ದಕ್ಷಿಣ ಕನ್ನಡ ಎರಡನೇ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಗಳಿಸಿದೆ.

ಜಿಲ್ಲೆಗಳ ಶೇಕಡಾವಾರು ಫಲಿತಾಂಶ ಇಂತಿದೆ

1) ಉಡುಪಿ- 94%
2) ದಕ್ಷಿಣ ಕನ್ನಡ-92.12%
3) ಶಿವಮೊಗ್ಗ -88.67%
4) ಕೊಡಗು- 88.67%
5) ಉತ್ತರ ಕನ್ನಡ-86.54%
6) ಹಾಸನ-86.28%
7) ಮೈಸೂರು-85.5%
8) ಶಿರಸಿ-84.64%
9)ಬೆಂಗಳೂರು ಗ್ರಾಮಾಂತರ-83.67%
10) ಚಿಕ್ಕಮಗಳೂರು-83.39%
11) ವಿಜಯಪುರ- 79.82%
12) ಬೆಂಗಳೂರು ದಕ್ಷಿಣ-79%
13) ಬಾಗಲಕೋಟೆ-77.92%
14)ಬೆಂಗಳೂರು ಉತ್ತರ- 77.09%
15) ಹಾವೇರಿ-75.85%
16) ತುಮಕೂರು-75.16%
17)ಗದಗ- 74.76%
18)ಚಿಕ್ಕಬಳ್ಳಾಪುರ- 73.61%
19)ಮಂಡ್ಯ-73.59%
20) ಕೋಲಾರ-73.57%
21)ಚಿತ್ರದುರ್ಗ-72.85%
22) ಧಾರವಾಡ-72.67%
23) ದಾವಣಗೆರೆ- 72.48%
24) ಚಾಮರಾಜನಗರ-71.59%
25) ಚಿಕ್ಕೋಡಿ-69.82%
26) ರಾಮನಗರ-69.53%
27) ವಿಜಯನಗರ-65.61%
28) ಬಳ್ಳಾರಿ-64.99%
29) ಬೆಳಗಾವಿ-64.93%
30) ಮಧುಗಿರಿ-62.44%
31) ರಾಯಚೂರು- 61.2%
32) ಕೊಪ್ಪಳ- 61.16%
33) ಬೀದರ್‌- 57.52%
34) ಕಲಬುರಗಿ- 53.04%
35) ಯಾದಗಿರಿ- 50.59%

2023ರ ಜಿಲ್ಲಾವಾರು ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೀಗಿತ್ತು

ಚಿತ್ರದುರ್ಗ -96.8%.
ಮಂಡ್ಯ-96.74%.
ಹಾಸನ-96.68%.
ಬೆಂಗಳೂರು ಗ್ರಾಮಾಂತರ-96.48%.
ಚಿಕ್ಕಬಳ್ಳಾಪುರ-96.15%.
ಕೋಲಾರ-94.6%.
ಚಾಮರಾಜನಗರ -94.32%.
ಮಧುಗಿರಿ- 93.23%.
ಕೊಡಗು-93.19%.
ವಿಜಯನಗರ- 91.41%.
ವಿಜಯಪುರ- 91.23%.
ಚಿಕ್ಕೋಡಿ – 91.07%.
ಉತ್ತರಕನ್ನಡ – 90.53%.
ದಾವಣಗೆರೆ- 90.43%.
ಕೊಪ್ಪಳ- 90.27%.
ಮೈಸೂರು ಜಿಲ್ಲೆ- 89.75%.
ಚಿಕ್ಕಮಗಳೂರು-89.69%.
ಉಡುಪಿ- 89.49%.
ದಕ್ಷಿಣ ಕನ್ನಡ- 89.47%.
ತುಮಕೂರು- 89.43%.
ರಾಮನಗರ- 89.42%.
ಹಾವೇರಿ – 89.11%.
ಶಿರಸಿ- 87.39%.
ಧಾರವಾಡ-86.55%.
ಗದಗ-86.51%.
ಬೆಳಗಾವಿ-85.85%.
ಬಾಗಲಕೋಟೆ-85.14%.
ಕಲಬುರಗಿ-84.51%.
ಶಿವಮೊಗ್ಗ-84.04%.
ರಾಯಚೂರು- 84.02%.
ಬಳ್ಳಾರಿ- 81.54%.
ಬೆಂಗಳೂರು ಉತ್ತರ – 80.93%.
ಬೆಂಗಳೂರು ದಕ್ಷಿಣ – 78.95%.
ಬೀದರ್ – 78.73%.
ಯಾದಗಿರಿ- 75.49%.

ಮಾಧ್ಯಮವಾರು ಫಲಿತಾಂಶ

ಕನ್ನಡ – 69.34%
ಆಂಗ್ಲ – 88.29%
ಉರ್ದು – 63.49%
ಮರಾಠಿ – 69.32%
ತೆಲುಗು – 75.59%

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ವಿವರ

625ಕ್ಕೆ 625 ಅಂಕವನ್ನು ಒಬ್ಬ ವಿದ್ಯಾರ್ಥಿ ಮಾತ್ರ ಪಡೆದುಕೊಂಡಿದ್ದಾರೆ. 624 ಅಂಕಗಳನ್ನು 7 ಮಂದಿ, 623 ಅಂಕಗಳನ್ನು 14 ಮಂದಿ ಹಾಗೂ 622 ಅಂಕಗಳನ್ನು 21 ಮಂದಿ, 621 ಅಂಕಗಳನ್ನು 44 ಮಂದಿ, 620 ಅಂಕಗಳನ್ನು 64 ಮಂದಿ ಅಂಕಗಳನ್ನು ಪಡೆದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆ ಆಗಿದೆ. ಉಡುಪಿ ಮೊದಲ ಸ್ಥಾನ, ದಕ್ಷಿಣ ಕನ್ನಡ ಎರಡನೇ ಸ್ಥಾನ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಪಡೆದರೆ, ಯಾದಗಿರಿ ಕೊನೆ ಸ್ಥಾನವನ್ನು ಪಡೆದಿದೆ. ಕಳೆದ ವರ್ಷ ರಾಜ್ಯಕ್ಕೆ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನಗಳಿಸಿದ್ದರೆ, ಮಂಡ್ಯ ಎರಡನೇ ಹಾಗೂ ಹಾಸನ ಮೂರನೇ ಸ್ಥಾನವನ್ನು ಬಾಚಿಕೊಂಡಿತ್ತು.

VISTARANEWS.COM


on

By

SSLC Exam Result 2024 Announce
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಿದ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಮಂಡಳಿ ಅಧ್ಯಕ್ಷೆ ಎನ್. ಮಂಜು ಶ್ರೀ, ಪರೀಕ್ಷಾ ವಿಭಾಗದ ನಿರ್ದೇಶಕ ಗೋಪಾಲ ಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್‌ಸೈಟ್‌ನಲ್ಲಿ https://karresults.nic.in ಮೇ 9ರ ಬೆಳಗ್ಗೆ 10.30ರ ನಂತರ ವೀಕ್ಷಿಸಬಹುದಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಫಲಿತಾಂಶವನ್ನು ತಡವಾಗಿ ಬಿಡುಗಡೆ ಮಾಡಲಾಗಿತ್ತು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ರಾಜ್ಯಕ್ಕೆ ಉಡುಪಿ ಮೊದಲ ಸ್ಥಾನ, ದಕ್ಷಿಣ ಕನ್ನಡ ಎರಡನೇ ಸ್ಥಾನ ಹಾಗೂ ಶಿವಮೊಗ್ಗ ಮೂರನೇ ಸ್ಥಾನ ಪಡೆದರೆ, ಯಾದಗಿರಿ ಕೊನೆಯ ಸ್ಥಾನವನ್ನು ಪಡೆದಿದೆ. ಪಾಸಾಗಲಿ, ಫೇಲಾಗಲಿ 3 ಬಾರಿ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಲಾಗಿದೆ. ಪಾಸಾದರು ಸಹ ಅಂಕ ಹೆಚ್ಚಿಸಿಕೊಳ್ಳಲು ಮತ್ತೆ ಪರೀಕ್ಷೆ-2, ಪರೀಕ್ಷೆ-3 ಬರೆಯಬಹುದು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49% ರಷ್ಟು ಫಲಿತಾಂಶ ಕುಸಿತವಾಗಿದೆ

SSLC Exam Result 2024 Announce

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.25ರಿಂದ ಏ.6ರ ವರೆಗೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8,59,967 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6, 31,204 ವಿದ್ಯಾರ್ಥಿಗಳು ಉತೀರ್ಣರಾಗಿದ್ದು, ಶೇ. 73.40 ರಷ್ಟು ಫಲಿತಾಂಶ ಬಂದಿದೆ.

ಎಸ್ಎಸ್ಎಲ್‌ಸಿ ಫಲಿತಾಂಶ ನೋಡುವುದು ಹೇಗೆ?

-ಅಧಿಕೃತ ವೆಬ್‌ಸೈಟ್‌ karresults.nic.in ಗೆ ಭೇಟಿ ನೀಡಿ
-ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ
-ಹೊಸ ಲಾಗಿನ್ ಪುಟವು ತೆರೆಯುತ್ತದೆ
-ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
-ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ.
-ಅಲ್ಲಿ ಡೌನ್ಲೋಡ್ ಮಾಡುವ ಅವಕಾಶವಿದೆ
-10.30 ನಂತರ ಅಧಿಕೃತ ಜಾಲತಾಣದಲ್ಲಿ ಫಲಿತಾಂಶ ನೋಡಬಹುದು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

HD Revanna Case Jailed: ಎಚ್‌.ಡಿ ರೇವಣ್ಣ ಪರ ಸುದ್ದಿಗೋಷ್ಠಿ ನಡೆಸಿದ ನಾಲ್ವರ ಬಂಧನ; ಕಾರ್ತಿಕ್‌ ಬಂಧನಕ್ಕೂ ಕ್ಷಣಗಣನೆ

HD Revanna Case Jailed: ಯುವ ಜನತಾದಳ‌ ಮಾಜಿ ಅಧ್ಯಕ್ಷ ಎಚ್.ಕೆ.ಸುಜಯ್, ಕಪ್ಪಡಿ‌ ಗ್ರಾಮದ ಮಧು, ಹೆಬ್ಬಾಳು ಗ್ರಾಮ ಪಂಚಾಯತ್ ಸದಸ್ಯ ಮನು,‌ ವಕೀಲ‌ ತಿಮ್ಮಪ್ಪ ಎಂಬವರನ್ನು ಬಂಧಿಸಲಾಗಿದೆ. ಇವರು ಸಂತ್ರಸ್ತ ಮಹಿಳೆಯ ಕಿಡ್ನಾಪ್‌ಗೆ ಸಹಕರಿಸಿದ್ದರು ಎಂದು ಆರೋಪಿಸಲಾಗಿದೆ.

VISTARANEWS.COM


on

hd revanna jailed prajwal revanna case
Koo

ಮೈಸೂರು: ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಸಂತ್ರಸ್ತ ಮಹಿಳೆಯನ್ನು ಕಿಡ್ನಾಪ್‌ (Kidnap case) ಮಾಡಿಸಲಾಗಿದೆ ಎನ್ನಲಾದ ಪ್ರಕರಣದಲ್ಲಿ ಮತ್ತೆ ನಾಲ್ವರನ್ನು ಎಸ್ಐಟಿ (SIT) ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಈ ಪ್ರಕರಣದಲ್ಲಿ ರೇವಣ್ಣ ಬಂಧಿತರಾಗಿ ವಿಚಾರಣಾಧೀನ ಕೈದಿಯಾಗಿ (HD Revanna Case Jailed) ಜೈಲಿನಲ್ಲಿದ್ದಾರೆ.

ಯುವ ಜನತಾದಳ‌ ಮಾಜಿ ಅಧ್ಯಕ್ಷ ಎಚ್.ಕೆ.ಸುಜಯ್, ಕಪ್ಪಡಿ‌ ಗ್ರಾಮದ ಮಧು, ಹೆಬ್ಬಾಳು ಗ್ರಾಮ ಪಂಚಾಯತ್ ಸದಸ್ಯ ಮನು,‌ ವಕೀಲ‌ ತಿಮ್ಮಪ್ಪ ಎಂಬವರನ್ನು ಬಂಧಿಸಲಾಗಿದೆ. ಇವರು ಸಂತ್ರಸ್ತ ಮಹಿಳೆಯ ಕಿಡ್ನಾಪ್‌ಗೆ ಸಹಕರಿಸಿದ್ದರು ಎಂದು ಆರೋಪಿಸಲಾಗಿದೆ. ಕೆ.ಆರ್.ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ನಾಲ್ವರೂ ನಿನ್ನೆ ಎಚ್‌.ಡಿ ರೇವಣ್ಣ ಪರ ಸುದ್ದಿಗೋಷ್ಠಿ ನಡೆಸಿ ಪೊಲೀಸರು ತಾರತಮ್ಯ ಎಸಗುತ್ತಿರುವ ಕುರಿತು ಆರೋಪಿಸಿದ್ದರು.

ಕಾರ್ತಿಕ್‌ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ಹಾಸನ ಸಂಸದ ಪ್ರಜ್ವಲ್ ರೇವಣ್ಣರದ್ದು (Hassan MP Prajwal revanna case) ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ (viral video) ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಬಳಿಕ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್‌ಗೆ ಬಂಧನ ಭೀತಿ ಎದುರಾಗಿದೆ. ಕಾರ್ತಿಕ್, ಪುಟ್ಟಿ ಅಲಿಯಾಸ್ ಪುಟ್ಟರಾಜ್, ನವೀನ್ ಗೌಡ ಹಾಗು ಚೇತನ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಏಪ್ರಿಲ್ 23ರಂದು ಹಾಸನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಎಡಿಟ್ ಮಾಡಿ ಸಂಸದ ಪ್ರಜ್ವಲ್ ಅವರ ಅಶ್ಲೀಲ ಫೋಟೋ ವೀಡಿಯೋ ಸೃಷ್ಟಿ ಮಾಡಿ ಪೆನ್ ಡ್ರೈವ್ ಮೂಲಕ ಹಂಚಿಕೊಂಡ ಆರೋಪವಿದೆ. ಕಾರ್ತಿಕ್, ಪುಟ್ಟರಾಜ್, ನವೀನ್ ಗೌಡ, ಶರತ್ ಆಲಿಯಾಸ್ ಕ್ವಾಲಿಟಿ ಬಾರ್ ಶರತ್ ವಿರುದ್ಧ ಜೆಡಿಎಸ್‌ ದೂರು ಕೊಟ್ಟಿತ್ತು.

ನವೀನ್ ಗೌಡ ಮತ್ತು ಇತರರು ಎಂದು ಸೆನ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದರು. ನ್ಯಾಯಾಲಯಕ್ಕೆ ರಿಮೈಂಡರ್ ಅರ್ಜಿ ಮೂಲಕ ಕಾರ್ತಿಕ್, ಪುಟ್ಟರಾಜು ಹಾಗೂ ಚೇತನ್ ಎಂಬ ಹೆಸರು ಉಲ್ಲೇಖಿಸಿ ಮಾಹಿತಿ ರವಾನಿಸಿದ್ದರು. ತಮ್ಮ ವಿರುದ್ಧ ಕೇಸ್ ದಾಖಲಾಗುತ್ತಲೆ ಆರೋಪಿಗಳು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ನಿನ್ನೆ ಹಾಸನದ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಅರ್ಜಿ ವಜಾ ಆಗಿದೆ.

ಅರ್ಜಿ ವಜಾ ಬೆನ್ನಲ್ಲೇ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಪೆನ್ ಡ್ರೈವ್ ವೈರಲ್ ಆರೋಪ ಪ್ರಕರಣ ಇನ್ನೂ ಎಸ್ಐಟಿಗೆ ಹಸ್ತಾಂತರ ಆಗಿಲ್ಲ. ಈ ಹಿನ್ನೆಲೆಯಲ್ಲಿ ಹಾಸನ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇಂದು ರೇವಣ್ಣ ಮತ್ತೊಂದು ಜಾಮೀನು ಅರ್ಜಿ ವಿಚಾರಣೆ

ಮಹಿಳೆ ಅಪಹರಣ (kidnap) ಕೇಸ್‌ನಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಹೆಚ್. ಡಿ ರೇವಣ್ಣ ಅವರ ಇನ್ನೊಂದು ಜಾಮೀನು ಅರ್ಜಿ ಇಂದು ಜನಪ್ರತಿನಿಧಿ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಗಾಗಲಿದೆ. ಮಗ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ (Prajwal Revanna Case) ಪ್ರಕರಣದಲ್ಲಿಯೂ ಆರೋಪಿಯಾಗಿರುವ ರೇವಣ್ಣ ಅವರಿಗೆ ನಿನ್ನೆಯ ವಿಚಾರಣೆಯಲ್ಲಿ ಬೇಲ್‌ ಸಿಕ್ಕಿಲ್ಲ.

ಬೆಳಗ್ಗೆ ಹನ್ನೊಂದು ಗಂಟೆ ನಂತರ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹೆಚ್.ಡಿ ರೇವಣ್ಣ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಲಿದ್ದಾರೆ. 65 ವರ್ಷದವರಾಗಿರುವ ಹೆಚ್.ಡಿ ರೇವಣ್ಣ ಈಗಾಗಲೇ ಪ್ರಕರಣ, ಮಗನ ಮೇಲಿನ ಆರೋಪದಿಂದ ಮಾನಸಿಕವಾಗಿ ನೊಂದಿದ್ದಾರೆ. ನಾಲ್ಕು ದಿನಗಳ ಕಾಲ ಕಸ್ಟಡಿಯಲ್ಲಿದ್ದು ವಿಚಾರಣೆ ಎದುರಿಸಿದ್ದಾರೆ. ಕಸ್ಟಡಿ ವೇಳೆ ಅನಾರೋಗ್ಯದ ಸಮಸ್ಯೆ ಎದುರಿಸಿದ್ದಾರೆ ಎಂಬ ಮಾಹಿತಿಯಿದೆ. ಹೊಟ್ಟೆ ಉರಿ ಸಮಸ್ಯೆ ಎಂದು ನ್ಯಾಯಾಧೀಶರ ಮುಂದೆ ಅಳಲು ತೋಡಿಕೊಂಡಿದ್ದರು. ಇಂದು ಇದೇ ವಿಚಾರವನ್ನು ಮತ್ತೆ ಜನಪ್ರತಿನಿಧಿ ನ್ಯಾಯಾಲಯದಲ್ಲಿ ವಕೀಲರು ಉಲ್ಲೇಖ ಮಾಡಲಿದ್ದಾರೆ. ಹಲವಾರು ವರ್ಷ ರಾಜ್ಯ ಸಚಿವರಾಗಿದ್ದು ಸೇವೆ ಸಲ್ಲಿಸಿರುವ ರೇವಣ್ಣ, ಪ್ರಕರಣದ ಗುರುತ್ವ ಅರಿತು ತನಿಕೆಗೆ ಸಹಕಾರ ಒದಗಿಸುತ್ತಿದ್ದಾರೆ. ಈ ಎಲ್ಲ ವಿಚಾರಗಳಿಂದ ಹೆಚ್.ಡಿ ರೇವಣ್ಣಗೆ ಬೇಲ್ ಸಿಗಬೇಕು ಎಂದು ವಾದಿಸುವ ಸಾಧ್ಯತೆ ಇದೆ.

ಎಸ್ಐಟಿ ಮತ್ತೆ ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲಿದೆ. ಈಗಾಗಲೇ ರೇವಣ್ಣ ತನಿಖೆ ಸರಿಯಾಗಿ ಸಹಕರಿಸಿಲ್ಲ ಎಂದು ಎಸ್‌ಐಟಿ ಹೇಳಿದೆ. ಸಮರ್ಪಕವಾಗಿ ವಿಚಾರಣೆ ಆಗಿಲ್ಲ. ಮತ್ತೊಂದು ಕಡೆ ಹೆಚ್. ಡಿ ರೇವಣ್ಣ ಮಾಜಿ ಸಚಿವ, ಶಾಸಕ ಹಾಗೂ ಪ್ರಭಾವ ಉಳ್ಳ ವ್ಯಕ್ತಿಯಾಗಿದ್ದಾರೆ. ಹೊರ ಬಂದ ಮೇಲೆ ತಮ್ಮ ಪ್ರಭಾವ ಬಳಸಿ ಸಾಕ್ಷ್ಯ ನಾಶ ಮಾಡುವ, ಸಂತ್ರಸ್ತೆಯರನ್ನು ಕಾಂಟ್ಯಾಕ್ಟ್ ಮಾಡುವ ಸಾಧ್ಯತೆ ಇದೆ. ಈ ಅಂಶಗಳ ಹಿನ್ನೆಲೆಯಲ್ಲಿ ಜಾಮೀನು ನೀಡಬಾರದು ಎಂದು ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: HD Revanna Jailed: ಇಂದು ಜನಪ್ರತಿನಿಧಿ ನ್ಯಾಯಾಲಯದಲ್ಲಿ ಹೆಚ್.ಡಿ ರೇವಣ್ಣ ಭವಿಷ್ಯ ನಿರ್ಧಾರ

Continue Reading
Advertisement
sslc result 2024 ankita basappa first rank toppers list
ಪ್ರಮುಖ ಸುದ್ದಿ8 mins ago

SSLC Result 2024: ಶೇ.100 ಅಂಕಗಳೊಂದಿಗೆ ಬಾಗಲಕೋಟೆಯ ಅಂಕಿತಾ ಪ್ರಥಮ; ಎಸ್ಸೆಸ್ಸೆಲ್ಸಿ ಟಾಪರ್ಸ್ ಪಟ್ಟಿ ಇಲ್ಲಿದೆ

SSLC Exam Result 2024 Announce
ಬೆಂಗಳೂರು23 mins ago

SSLC Result 2024: ಎಸ್‌ಎಸ್‌ಎಲ್‌ಸಿ ರಿಸಲ್ಟ್‌; ಫಸ್ಟ್‌ ಬೆಂಚ್‌ಗೆ ಬಂದ ಉಡುಪಿ; ಲಾಸ್ಟ್‌ ಬೆಂಚ್‌ನಲ್ಲೇ ಉಳಿದ ಯಾದಗಿರಿ!

IPL 2024
ಕ್ರೀಡೆ30 mins ago

IPL 2024: 17ನೇ ಆವೃತ್ತಿಯ ಐಪಿಎಲ್​ನಿಂದ ಅಧಿಕೃತವಾಗಿ ಹೊರಬಿದ್ದ 5 ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್​

Kerala Governor
ದೇಶ33 mins ago

Kerala Governor: ರಾಮಲಲ್ಲಾನಿಗೆ ಶಿರಬಾಗಿ ನಮಸ್ಕರಿಸಿದ ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌; ವಿಡಿಯೋ ನೋಡಿ

Air India Express
ದೇಶ39 mins ago

Air India Express: 30 ಸಿಬ್ಬಂದಿಯನ್ನು ವಜಾಗೊಳಿಸಿದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌; ಇಂದು 74 ವಿಮಾನಗಳ ಹಾರಾಟ ರದ್ದು

Rashmika Mandanna Signed Salman Khan Sikandar
ಟಾಲಿವುಡ್48 mins ago

Rashmika Mandanna: ಸಲ್ಮಾನ್ ಖಾನ್ ಜತೆ ನ್ಯಾಷನಲ್‌ ಕ್ರಶ್‌ ರಶ್ಮಿಕಾ ರೊಮ್ಯಾನ್ಸ್‌!

Jyothi Rai video Leak miscreants say to subscribe to the youtube channel
ಕಿರುತೆರೆ1 hour ago

Jyothi Rai: ಯುಟ್ಯೂಬ್‌ ಸಬ್‌ಸ್ಕ್ರೈಬ್‌ ಮಾಡಿದ್ರೆ ಜ್ಯೋತಿ ರೈ ವಿಡಿಯೊ ಅಪ್‌ಲೋಡ್‌ ಮಾಡ್ತೀನಿ ಎಂದ ಕಿಡಿಗೇಡಿ!

Viral News
ಕ್ರೀಡೆ1 hour ago

Viral News: ಐಪಿಎಲ್ ಪಂದ್ಯದ ವೇಳೆ ಕೇಜ್ರಿವಾಲ್ ಪರ ಘೋಷಣೆ; 6 ಮಂದಿ ಬಂಧನ

SSLC Exam Result 2024 Announce
ಬೆಂಗಳೂರು1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Viral video
ವೈರಲ್ ನ್ಯೂಸ್1 hour ago

Viral Video: ಪರ್ಸ್‌ ಎಗರಿಸಿ ಖುಷಿಯಲ್ಲಿದ್ದ ಕಳ್ಳನಿಗೆ ಕಾದಿತ್ತು ಬಿಗ್‌ ಶಾಕ್‌! ವಿಡಿಯೋ ಫುಲ್‌ ವೈರಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Exam Result 2024 Announce
ಬೆಂಗಳೂರು1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ4 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

ಟ್ರೆಂಡಿಂಗ್‌