Negligence | ಅವಳಿ ಮಕ್ಕಳ ಸಹಿತ ತಾಯಿ ಸಾವು; ತಾಯಿ ಕಾರ್ಡ್ ಇಲ್ಲವೆಂದು ವಾಪಸ್‌ ಕಳಿಸಿದ ಸರ್ಕಾರಿ ಆಸ್ಪತ್ರೆ - Vistara News

ಆರೋಗ್ಯ

Negligence | ಅವಳಿ ಮಕ್ಕಳ ಸಹಿತ ತಾಯಿ ಸಾವು; ತಾಯಿ ಕಾರ್ಡ್ ಇಲ್ಲವೆಂದು ವಾಪಸ್‌ ಕಳಿಸಿದ ಸರ್ಕಾರಿ ಆಸ್ಪತ್ರೆ

ತುಮಕೂರು ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ (Negligence) ಅವಳಿ ಮಕ್ಕಳ ಸಹಿತ ಗರ್ಭಿಣಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಸಂಬಂಧ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದು, ಪ್ರಕರಣಕ್ಕೆ ಕಾರಣವಾದ ವೈದ್ಯರನ್ನು ಅಮಾನತು ಮಾಡಿ ಆದೇಶ ನೀಡಲಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಇದೊಂದು ಘೋರ ಪ್ರಮಾದ. ಜೀವಗಳನ್ನು ಉಳಿಸಬೇಕಾದ ವೈದ್ಯರ ಅಮಾನವೀಯ ಪ್ರಕರಣ. ತಾಯಿ ಕಾರ್ಡ್‌ ಇಲ್ಲವೆಂಬ ಒಂದೇ ಒಂದು ಕಾರಣಕ್ಕೆ ತುಂಬಿ ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಿಕೊಳ್ಳಲು ನಿರಾಕರಿಸಿದ ಆ ಒಂದು ತಪ್ಪು ಮೂವರ ಪ್ರಾಣವನ್ನೇ ಕಿತ್ತುಕೊಂಡಿದೆ. ಆಸ್ಪತ್ರೆಗೆ ಬಂದು ಮನೆಗೆ ವಾಪಸಾಗಿದ್ದ ತುಂಬು ಗರ್ಭಿಣಿಯು ಮನೆಯಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು, ತೀವ್ರ ರಕ್ತಸ್ರಾವದಿಂದ ಅಲ್ಲೇ ಜೀವ ಬಿಟ್ಟಿದ್ದಾರೆ. ಅಲ್ಲದೆ, ಆಗಷ್ಟೇ ಹುಟ್ಟಿದ ಅವಳಿ ಹಸುಳೆಗಳೂ ಉಸಿರು ಚೆಲ್ಲಿವೆ.

ಇಲ್ಲಿನ ಭಾರತಿನಗರದ ಅಭಯ ಆಂಜನೇಯನ ಸ್ವಾಮಿ ದೇವಸ್ಥಾನದ ಬಳಿ ಮನೆಯೊಂದರಲ್ಲಿ ಅವಳಿ ಮಕ್ಕಳ ಸಹಿತ ತಾಯಿಯೊಬ್ಬಳು ಮೃತಪಟ್ಟಿರುವ (Negligence) ಘಟನೆ ನಡೆದಿದೆ. 30 ವರ್ಷದ ಕಸ್ತೂರಿ ಎಂಬಾಕೆ ಮೃತ ದುರ್ದೈವಿ.

ತುಮಕೂರು ನಗರದ ಭಾರತಿನಗರದಲ್ಲಿ ಒಂದು ಹೆಣ್ಣು ಮಗು ಜತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕಸ್ತೂರಿ, 9 ತಿಂಗಳ ತುಂಬು ಗರ್ಭಿಣಿ ಆಗಿದ್ದರು. ಬುಧವಾರ ಸಂಜೆ ಮನೆಯಲ್ಲಿ ಕಸ್ತೂರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಈ ವೇಳೆ ಆಕೆಯ ಕಷ್ಟ ನೋಡಲಾರದೇ ಸ್ಥಳೀಯರು ಸೇರಿ ಹಣ ಸಂಗ್ರಹಿಸಿ ಪಕ್ಕದ ಮನೆಯ ಅಜ್ಜಿಯ ಜತೆ ತುಮಕೂರು ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ.

ಈ ವೇಳೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರು ತಾಯಿ ಕಾರ್ಡ್ ಇಲ್ಲ ಎಂದು ಚಿಕಿತ್ಸೆ ಕೊಡದೆ ವಾಪಸ್ ಕಳುಹಿಸಿದ್ದಾರೆ. ವೈದ್ಯೆಯ ಬಳಿ ಅಂಗಲಾಚಿದರೂ ಚಿಕಿತ್ಸೆ ಕೊಡದೇ ನಿರ್ಲಕ್ಷ್ಯ ವಹಿಸಿದ್ದಾರೆ. ನಾವು ಚಿಕಿತ್ಸೆ ಕೊಡುವುದಿಲ್ಲ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಬರೆದುಕೊಡುತ್ತೇನೆ ಎಂದಿದ್ದಾರೆ ಎಂಬ ಆರೋಪ ಕೇಳಿಬಂದಿದ್ದಾರೆ.

ಹಣವಿಲ್ಲದೆ ಹೊಟ್ಟೆ ನೋವಿನಲ್ಲೇ ಗರ್ಭಿಣಿ ಮನೆಗೆ ವಾಪಸ್ ಬಂದಿದ್ದಾರೆ. ಆದರೆ, ಗುರುವಾರ ಬೆಳಗಿನ ಜಾವ ಹೊಟ್ಟೆ ನೋವಿನಿಂದ ಕಿರುಚಾಡಿ ಒಂದು ಮಗುವಿಗೆ ಜನ್ಮ ನೀಡಿದ್ದಾರೆ. ಮತ್ತೊಂದು ಮಗುವಿಗೆ ಜನ್ಮ ನೀಡುವಾಗ ತೀವ್ರ ರಕ್ತಸ್ರಾವವಾಗಿ ಅವಳಿ ಗಂಡು ಮಕ್ಕಳೊಂದಿಗೆ ತಾಯಿ ಕೂಡ ಕೊನೆಯುಸಿರೆಳೆದಿದ್ದಾರೆ.

ಸ್ಥಳೀಯರ ಆಕ್ರೋಶ
ತಾಯಿ ಕಾರ್ಡ್, ಆಧಾರ್ ಕಾರ್ಡ್ ಕೊಡುವಂತೆ ಜಿಲ್ಲಾಸ್ಪತ್ರೆ ಸಿಬ್ಬಂದಿ ಸೂಚಿಸಿದ್ದರಂತೆ. ತಾಯಿ ಕಾರ್ಡ್ ಹೊಂದಿರದ ಕಾರಣಕ್ಕೆ ಕಸ್ತೂರಿಯನ್ನು ದಾಖಲು ಮಾಡಿಕೊಳ್ಳಲು ಸಿಬ್ಬಂದಿ ನಿರಾಕರಿಸಿದ್ದಾರೆ. ತಮಿಳುನಾಡು ಮೂಲದ ಕಸ್ತೂರಿ, ಕಳೆದ ಒಂದು ತಿಂಗಳಿನಿಂದ ಭಾರತಿನಗರದಲ್ಲಿ ವಾಸ ಇದ್ದರಂತೆ. ಇವರ ಪತಿ ಕೆಲವು ತಿಂಗಳ ಹಿಂದಷ್ಟೇ ತೀರಿ ಹೋಗಿದ್ದಾರೆಂದು ಹೇಳಲಾಗಿದೆ. ಉಳಿದ ಅವರ ಪೂರ್ವಪರ ಯಾವ ಮಾಹಿತಿಯೂ ಲಭ್ಯವಾಗಿಲ್ಲ.

ಗರ್ಭಿಣಿ ಹಾಗೂ ಇಬ್ಬರು ಮಕ್ಕಳ ಸಾವಿಗೆ ತುಮಕೂರು ಜಿಲ್ಲಾಸ್ಪತ್ರೆ ವೈದ್ಯರೇ ಕಾರಣ ಎಂದು ಸ್ಥಳೀಯರು ಆರೋಪಿಸಿ ಆಕ್ರೋಶ ಹೊರಹಾಕಿದ್ದಾರೆ. ತುಮಕೂರಿನ ಎನ್‌ಇಪಿಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷಗೆ ರವಾನೆ ಮಾಡಲಾಗಿದೆ.

ಕರ್ತವ್ಯ ಲೋಪ ಒಪ್ಪಿಕೊಂಡ ಡಿಎಚ್‌ಒ
ಈ ಘಟನೆ ನಡೆಯುತ್ತಿದ್ದಂತೆ ಡಿಎಚ್ಒ ಡಾ.ಮಂಜುನಾಥ್ ಹಾಗೂ ಡಾ. ವೀಣಾ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಈ ವೇಳೆ ಆಕ್ರೋಶಗೊಂಡ ಸ್ಥಳೀಯರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದರು. ವೈದ್ಯರನ್ನು ಹಾಗೂ ಸಿಬ್ಬಂದಿಯನ್ನು ಅಮಾನತುಗೊಳಿಸದೆ ಇದ್ದರೆ ಶವ ಎತ್ತಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ಸ್ಥಳೀಯರ ಒತ್ತಡಕ್ಕೆ ಮಣಿದ ಡಿಎಚ್‌ಒ ಡಾ.ಮಂಜುನಾಥ್ ಕರ್ತವ್ಯದಲ್ಲಿದ್ದ ವೈದ್ಯೆ ಡಾ.ಉಷಾ ಹಾಗೂ ಇಬ್ಬರು ನರ್ಸ್‌ಗಳನ್ನು ಅಮಾನತುಗೊಳಿಸುವುದಾಗಿ ತಿಳಿಸಿದ್ದಾರೆ. ಅಲ್ಲದೇ ತಮ್ಮ ಸಿಬ್ಬಂದಿಯಿಂದ ಕರ್ತವ್ಯ ಲೋಪ ಆಗಿರುವುದನ್ನು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ | New parents | ಹೊಸ ಅಪ್ಪ ಅಮ್ಮಂದಿರಿಗೆ ನಿದ್ದೆಯ ಆರು ಅಮೂಲ್ಯ ಸಲಹೆಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಆರೋಗ್ಯ

Oil Pulling: ಆಯಿಲ್‌ ಪುಲ್ಲಿಂಗ್‌; ನಿಮ್ಮ ಬಾಯಿಯೊಳಗಿನ ಎಲ್ಲ ಸಮಸ್ಯೆಗಳಿಗೂ ಉತ್ತರ ಇಲ್ಲಿದೆ!

ಆಹಾರವನ್ನು ಸೇವಿಸುವ, ಮಾತನಾಡುವ ಸೇರಿದಂತೆ ಹಲವಾರು ಕೆಲಸಗಳನ್ನು ಮಾಡುವ ಬಾಯಿ ನೂರಾರು ಬಗೆಯ ರೋಗಕಾರಕಗಳಿಗೆ ಆವಾಸ ಸ್ಥಾನ. ಯಾಕೆಂದರ ಇದು ಮಾನವನ ದೇಹಕ್ಕೆ ಹೆಬ್ಬಾಗಿಲು ಇದ್ದಂತೆ. ಇಂಥ ಪ್ರಮುಖ ಅಂಗವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಹಾಗೂ ರೋಗಕಾರಕಗಳನ್ನು ದೂರವಿಡುವುದಕ್ಕಾಗಿಯೇ ಆಯಿಲ್​ ಪುಲ್ಲಿಂಗ್ ಎಂಬ ಆರೋಗ್ಯಕರ ಕ್ರಮವನ್ನು ಅನುಸರಿಸಲಾಗುತ್ತದೆ. ಆಯಿಲ್ ಪುಲ್ಲಿಂಗ್​ (Oil pulling) ನಮ್ಮ ಆರೋಗ್ಯ ಸಂಸ್ಕೃತಿಯಲ್ಲಿನ ಒಂದು ಭಾಗ. ನಿಯಮಿತವಾಗಿ ಆಯಿಲ್ ಪುಲ್ಲಿಂಗ್ ಮಾಡುವುದರಿಂದ ಸಾಕಷ್ಟು ಅಪಾಯಕಾರಿ ರೋಗಗಳಿಂದ ದೂರವಿರಬಹುದು. ದಿನವಿಡೀ ಫ್ರೆಶ್ ಆಗಿ ಇರಲೂ ಸಾಧ್ಯ.

VISTARANEWS.COM


on

Oil Pulling
Koo

ಆರೋಗ್ಯಕ್ಕೆ ಸಂಬಂಧಿಸಿದ ಬಹಳ ಹಳೆಯ ಆಚರಣೆಗಳ ಪೈಕಿ ಆಯಿಲ್‌ ಪುಲ್ಲಿಂಗ್‌ (Oil pulling) ಕೂಡಾ ಒಂದು. ಎಣ್ಣೆಯಿಂದ ಬಾಯಿ ಮುಕ್ಕಳಿಸುವ ಈ ಕ್ರಮದಿಂದ ಸಾಕಷ್ಟು ಆರೋಗ್ಯಕರ ಲಾಭಗಳೂ ಇವೆ. ಆಯುರ್ವೇದವೂ ಇದನ್ನು ಪುಷ್ಠೀಕರಿಸುತ್ತದೆ. ಈ ಬಗ್ಗೆ ಹೆಚ್ಚು ಸಂಶೋಧನೆಗಳು ನಡೆದಿಲ್ಲವಾದರೂ, ಈಗಾಗಲೇ ಕೆಲವು ಸಂಶೋಧನೆಗಳು ಇದರ ಉಪಯೋಗಗಳನ್ನು ಕಂಡುಕೊಂಡಿವೆ. ಬನ್ನಿ, ಈ ಸರಳ ತಂತ್ರದಿಂದ ಏನೆಲ್ಲ ಪ್ರಯೋಜನಗಳಿವೆ ಎಂಬುದನ್ನು ನೋಡೋಣ.

Oil Pulling
  • ನಮ್ಮ ಬಾಯಿಯಲ್ಲಿ ಸುಮಾರು 700ಕ್ಕೂ ಹೆಚ್ಚು ಬಗೆಯ ಬ್ಯಾಕ್ಟೀರಿಯಾಗಳು ವಾಸಿಸುತ್ತವಂತೆ. ಅವುಗಳ ಪೈಕಿ ಸುಮಾರು 350 ಬಗೆಯ ಬ್ಯಾಕ್ಟೀರಿಯಾಗಳು ಸದಾ ಇದ್ದೇ ಇರುತ್ತವಂತೆ. ಹಾಗಂತ ಇವುಗಳೆಲ್ಲವೂ ನಮಗೆ ಅಪಾಯಕಾರಿಗಳೇನಲ್ಲ. ಕೆಲವು ಬಗೆಯವು ನಿರುಪದ್ರವಿಗಳು. ಇನ್ನೂ ಕೆಲವು ಬಾಯಿ ವಾಸನೆ, ವಸಡಿನ ಸಮಸ್ಯೆ, ಹಲ್ಲು ಹುಳುಕೂ ಸೇರಿದಂತೆ ನಾನಾ ಬಗೆಯ ಬಾಯಿಯ ಆರೋಗ್ಯ ಸಂಬಂಧೀ ಸಮಸ್ಯೆಗಳನ್ನು ತಂದೊಡ್ಡುತ್ತವೆ. ಇಂತಹ ಕೆಟ್ಟ ಬ್ಯಾಕ್ಟೀರಿಯಾಗಳ ಬೆಳವಣಿಗೆಯನ್ನು ಕಡಿಮೆ ಮಾಡುವ ಸಾಮರ್ಥ್ಯ ಆಯಿಲ್‌ ಪುಲ್ಲಿಂಗ್‌ಗೆ ಇದೆ.
  • ಬಾಯಿಯಿಂದ ಬರುವ ದುರ್ನಾತವೂ ಕೂಡ ಒಂದು ಸಮಸ್ಯೆಯೇ. ಈ ಸಮಸ್ಯೆಯ ಹೆಸರು ಹಲಿಟೋಸಿಸ್‌. ಇದು ಎಷ್ಟು ಸಾಮಾನ್ಯ ಎಂದರೆ, ಸುಮಾರು ಶೇ.೫೦ರಷ್ಟು ಮಂದಿಗೆ ಈ ಸಮಸ್ಯೆ ಇದೆ. ಇನ್ಫೆಕ್ಷನ್‌, ವಸಡಿನ ಸಮಸ್ಯೆ, ಬಾಯಿಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳದೆ ಇರುವುದು, ನಾಲಿಗೆಯ ಮೇಲಿನ ಬಿಳಿ ಕೋಟಿಂಗ್‌ ಮತ್ತಿತರ ಕಾರಣಗಳೂ ಇರಬಹುದು. ಬಾಯಿಯನ್ನು ಸ್ವಚ್ಛವಾಗಿ ಸದಾ ಇಟ್ಟುಕೊಳ್ಳುವುದು, ಆಗಾಗ ಮೌತ್‌ವಾಶ್‌ನಿಂದ ತೊಳೆದುಕೊಳ್ಳುವುದರಿಂದ ಈ ಸಮಸ್ಯೆಗೆ ಪರಿಹಾರ ಪಡೆಯಬಹುದು. ಆಯಿಲ್‌ ಪುಲ್ಲಿಂಗ್‌ನಿಂದ ಕೂಡಾ ಈ ಸಮಸ್ಯೆ ಪರಿಹಾರವಾಗುತ್ತದೆ ಎಂಬುದು ಸಾಬೀತಾಗಿದ್ದು, ಎಳ್ಳೆಣ್ಣೆಯಿಂದ ಆಯಿಲ್‌ ಪುಲ್ಲಿಂಗ್‌ ಮಾಡಿದ ಶೇ.೨೦ರಷ್ಟು ಮಂದಿ ಈ ಸಮಸ್ಯೆಯಿಂದ ಮುಕ್ತಿ ಹೊಂದಿದ್ದಾರೆ.
  • ಹಲ್ಲು ಹುಳುಕು ಅಥವಾ ಕ್ಯಾವಿಟಿಯ ಸಮಸ್ಯೆ ಸಾಮಾನ್ಯವಾಗಿ ಎಲ್ಲರೂ ತಮ್ಮ ಜೀವಿತಾವಧಿಯಲ್ಲಿ ಒಂದಲ್ಲ ಒಂದು ದಿನ ಅನುಭವಿಸುವವರೇ. ಹೀಗಾಗಿ ನಿಯಮಿತವಾಗಿ ಬೆಳಗ್ಗೆ ದಿನವೂ ಆಯಿಲ್‌ ಪುಲ್ಲಿಂಗ್‌ ಮಾಡುವ ಮಂದಿಯ ಬಾಯಿಯಲ್ಲಿ ಕೆಟ್ಟ ಬ್ಯಾಕ್ಟೀರಿಯಾದ ಬೆಳವಣಿಗೆ ಕಡಿಮೆಯಾಗಿ ಹಲ್ಲು ಹುಳುಕಿನ ಸಮಸ್ಯೆ ಬರುವುದಿಲ್ಲ. ಅಥವಾ ಇಂತಹ ಸಮಸ್ಯೆ ಕಡಿಮೆ.
  • ನಿತ್ಯವೂ ಆಯಿಲ್‌ ಪುಲ್ಲಿಂಗ್‌ ಮಾಡುವುದರಿಂದ ವಸಡಿನ ಆರೋಗ್ಯ ಹೆಚ್ಚಾಗುತ್ತದೆ. ವಸಡಿನಲ್ಲಿ ರಕ್ತಸ್ರಾವ, ವಸಡಿನ ಊತ, ಬಾವು, ಇತ್ಯಾದಿಗಳಿಗೆ ಇದು ಬಹಳ ಒಳ್ಳೆಯದು. ಇಂತಹ ಸಮಸ್ಯೆ ಬರದಂತೆ ತಡೆಯುವುದೂ ಅಲ್ಲದೆ, ಸಮಸ್ಯೆಯಿದ್ದರೆ ಶಮನಕ್ಕೂ ನೆರವಾಗುತ್ತದೆ. ಇಂತಹ ಸಮಸ್ಯೆಗೆ ತೆಂಗಿನೆಣ್ಣೆಯಿಂದ ಆಯಿಲ್‌ ಪುಲ್ಲಿಂಗ್‌ ಮಾಡುವುದು ಉತ್ತಮ.
  • ನಿತ್ಯವೂ ಆಯಿಲ್‌ ಪುಲ್ಲಿಂಗ್‌ ಮಾಡುವುದರಿಂದ ಹಲ್ಲು ಬಿಳಿಯಾಗಿರುತ್ತದೆ. ಬಹಳ ಹೊತ್ತಿನವರೆಗೆ ಹಲ್ಲು ಸ್ವಚ್ಛವಾಗಿರುವುದಲ್ಲದೆ, ತುಸು ಹಳದಿಗೆ ತಿರುಗಿದ ಹಲ್ಲುಗಳೂ ಮತ್ತೆ ಬಿಳಿಯಾಗುತ್ತವೆ.
  • ತೆಂಗಿನೆಣ್ಣೆಯಲ್ಲಿ ಆಂಟಿ ಇನ್‌ಫ್ಲಮೇಟರಿ ಹಾಘೂ ಆಂಟಿ ಬ್ಯಾಕ್ಟೀರಿಯಲ್‌ ಗುಣಗಳು ಸಾಕಷ್ಟಿರುವುದರಿಂದ ಇದರಿಂದ ಕೇವಲ ಇಷ್ಟೇ ಅಲ್ಲದೆ ಸಾಕಷ್ಟು ಹಲವು ಲಾಭಗಳೂ ಇವೆ. ನೈಸರ್ಗಿಕವಾಗಿ ಲಭ್ಯವಿರುವ ಬಹಳ ಸರಳವಾದ, ಹೆಚ್ಚು ಖರ್ಚಿಲ್ಲದೆ, ಯಾವುದೇ ಅಡ್ಡ ಪರಿಣಾಮಗಳಿಲ್ಲದ ಅಭ್ಯಾಸ ಇದು. ಹೀಗಾಗಿ, ಸುಲಭವಾಗಿ ಆರೋಗ್ಯಕರ ಅಭ್ಯಾಸಗಳನ್ನು ಬೆಳೆಸುವಲ್ಲಿ ಇದೂ ಮುಂಚೂಣಿಯಲ್ಲಿ ನಿಲ್ಲುತ್ತದೆ.
Oil Pulling

ಮಾಡುವುದು ಹೇಗೆ

ಒಂದು ಚಮಚ ತೆಂಗಿನೆಣ್ಣೆ ಅಥವಾ ಎಳ್ಳೆಣ್ಣೆ ಅಥವಾ ಆಲಿವ್‌ ಎಣ್ಣೆಯನ್ನು ಬಾಯಿಗೆ ಹಾಕಿ 15ರಿಂದ 20 ನಿಮಿಷಗಳ ಕಾಲ ಅದನ್ನು ಬಾಯಿಯಲ್ಲೇ ಇಟ್ಟು ಮುಕ್ಕಳಿಸುತ್ತಾ ಇರಬೇಕು. ಬಾಯಿಯ ಎಲ್ಲ ಕೋನಗಳಿಗೂ ಈ ಎಣ್ಣೆ ತಲುಪುವಂತೆ ಮುಕ್ಕಳಿಸಿ ನಂತರ ಉಗುಳಬೇಕು. ಬೆಳಗ್ಗೆ ಎದ್ದ ಕೂಡಲೇ, ಅಥವಾ ದಿನಕ್ಕೆ ಗರಿಷ್ಟ ಮೂರು ಬಾರಿ ಹೀಗೆ ಮಾಡಬಹುದು. ನಂತರ ಬಾಯಿಯನ್ನು ಚೆನ್ನಾಗಿ ನೀರು ಹಾಕಿ ಮುಕ್ಕಳಿಸಿಕೊಳ್ಳಿ.

ಇದನ್ನೂ ಓದಿ: Summer Hair Care: ಬೇಸಿಗೆಯಲ್ಲಿ ಕೂದಲನ್ನು ನಯವಾಗಿರಿಸಲು ಕಷ್ಟವಾಗುತ್ತಿದೆಯೆ? ಈ ಸಲಹೆಗಳನ್ನು ಪಾಲಿಸಿ

Continue Reading

ಲೈಫ್‌ಸ್ಟೈಲ್

Breast Cancer: ಮಹಿಳೆಯರೇ ಹುಷಾರ್‌; 2040ರ ವೇಳೆಗೆ ಸ್ತನ ಕ್ಯಾನ್ಸರ್‌ಗೆ 10 ಲಕ್ಷ ಜನ ಬಲಿಯಾಗಲಿದ್ದಾರಂತೆ!

Breast Cancer: ಕ್ಯಾನ್ಸರ್ ಎಂಬ ಹೆಸರು ಕೇಳಿದರೆ ಯಾರ ಮೈ ನಡುಗಲ್ಲ ಹೇಳಿ! ದೇಹದ ಭಾಗದಲ್ಲಿ ಚಿಕ್ಕ ನೋವಿದ್ದರೂ ವೈದ್ಯರ ಬಳಿ ಓಡಿ ಹೋಗೋಣ ಅನಿಸುತ್ತದೆ. ಇನ್ನು ಮಹಿಳೆಯರನ್ನು ಹಿಂಡಿ ಹಿಪ್ಪೆ ಮಾಡುವ ಕಾಯಿಲೆಯೆಂದರೆ ಅದು ಸ್ತನ ಕ್ಯಾನ್ಸರ್. 2040ರ ವೇಳೆಗೆ ಈ ಕಾಯಿಲೆ ಮತ್ತಷ್ಟು ಮಹಿಳೆಯರನ್ನು ಬಲಿ ತೆಗೆದುಕೊಳ್ಳಲಿದೆ ಎಂದು ಸಮೀಕ್ಷೆಯೊಂದು ಹೇಳಿದೆ.

VISTARANEWS.COM


on

Breast Cancer
Koo

ಬೆಂಗಳೂರು: ಕ್ಯಾನ್ಸರ್ ಒಂದು ಮಾರಕವಾದ ಕಾಯಿಲೆಯಾಗಿದೆ. ಇದರಿಂದ ಬದುಕುಳಿದವರಿಗಿಂತ ಜೀವ ಕಳೆದುಕೊಂಡವರೇ ಹೆಚ್ಚು. ಹಾಗಾಗಿ ಜನರು ಕ್ಯಾನ್ಸರ್ (Breast Cancer) ಎಂದಾಗ ಬೆಚ್ಚಿ ಬೀಳುತ್ತಾರೆ. ಬಹಳ ಹಿಂದಿನ ಕಾಲದಲ್ಲಿ ಇದನ್ನು ಶ್ರೀಮಂತರ ರೋಗ ಎಂದು ಕರೆಯುತ್ತಿದ್ದರು. ಯಾಕೆಂದರೆ ಇದು ಹೆಚ್ಚು ಶ್ರೀಮಂತರಲ್ಲಿ ಕಂಡುಬರುತ್ತಿತ್ತು, ಆದರೆ ಇತ್ತೀಚಿನ ದಿಗಳಲ್ಲಿ ಕ್ಯಾನ್ಸರ್ ರೋಗ ಎಲ್ಲಾ ಜನರಲ್ಲೂ ಕಂಡುಬರುತ್ತಿದೆ.

ದೇಹದ ಜೀವಕೋಶಗಳು ಅನಿಯಂತ್ರಿತವಾಗಿ ಬೆಳೆಯಲು ಶುರು ಮಾಡಿದಾಗ ಅದು ಕ್ಯಾನ್ಸರ್ ಆಗಿ ಬದಲಾಗುತ್ತದೆ. ನಂತರ ಇದು ದೇಹದ ಇತರ ಭಾಗಗಳಿಗೂ ಹರಡುತ್ತದೆ. ಕ್ಯಾನ್ಸರ್ ನಲ್ಲಿ ಹಲವು ವಿಧಗಳಿವೆ. ಸ್ತನ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್, ಲಿವರ್ ಕ್ಯಾನ್ಸರ್, ಬಾಯಿ ಕ್ಯಾನ್ಸರ್, ಗಂಟಲು ಕ್ಯಾನ್ಸರ್, ಗರ್ಭಕೋಶದ ಕ್ಯಾನ್ಸರ್, ಮೆದುಳು ಕ್ಯಾನ್ಸರ್, ಪ್ರಾಸ್ಟೇಟ್ ಕ್ಯಾನ್ಸರ್ ಮುಂತಾದ ಕ್ಯಾನ್ಸರ್ ಇದೆ. ಆದರೆ ಇವುಗಳಿಗೆ ಸರಿಯಾದ ಚಿಕಿತ್ಸೆ ನೀಡಬೇಕು. ಇಲ್ಲವಾದರೆ ಇದು ಜೀವವನ್ನೇ ತೆಗೆಯುತ್ತದೆ.

ಆದರೆ ಸ್ತನ ಕ್ಯಾನ್ಸರ್ ಈಗ ಜಗತ್ತಿನಲ್ಲಿ ಸಾಮಾನ್ಯವಾಗಿ ಕಂಡುಬರುತ್ತಿರುವಂತಹ ಕಾಯಿಲೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಜಗತ್ತಿನಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಸ್ತನ ಕ್ಯಾನ್ಸರ್ ನಿಂದ ಸಾವನಪ್ಪುತ್ತಿದ್ದಾರೆ. ಹಾಗಾಗಿ 2040ರ ವೇಳೆ ಸ್ತನ ಕ್ಯಾನ್ಸರ್ ಮಿಲಿಯನ್‌ಗಟ್ಟಲೆ ಜನರನ್ನು ಬಲಿ ತೆಗೆದುಕೊಳ್ಳಲಿದೆ ಎಂಬುದಾಗಿ ಆಯೋಗವೊಂದು ಕಂಡುಕೊಂಡಿದೆ.

ಲ್ಯಾನ್ಸೆಟ್ ಆಯೋಗದ ಪ್ರಕಾರ, 2020ರಲ್ಲಿ ಸುಮಾರು 7.8 ಮಿಲಿಯನ್ ಮಹಿಳೆಯರು ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದರೆ, ಮತ್ತು ಸುಮಾರು 685000 ಮಹಿಳೆಯರು ಈ ಕಾಯಿಲೆಯಿಂದ ಜೀವ ಕಳೆದುಕೊಂಡಿದ್ದಾರೆ. ಹಾಗಾಗಿ ಇಡೀ ಜಗತ್ತಿನಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳು 2020 ರಲ್ಲಿ 2.3 ಮಿಲಿಯನ್ ನಿಂದ 2040ರ ವೇಳೆಗೆ 3 ಮಿಲಿಯನ್ ಗಿಂತಲೂ ಹೆಚ್ಚಾಗಬಹುದು. ಹಾಗೇ 2040ರ ವೇಳೆಗೆ ಸ್ತನ ಕ್ಯಾನ್ಸರ್ ನಿಂದ ಸಾವನಪ್ಪಿದವರ ಸಂಖ್ಯೆ ವರ್ಷಕ್ಕೆ 1 ಮಿಲಿಯನ್ ಆಗುತ್ತದೆ. ಅದರಲ್ಲೂ ಅಭಿವೃದ್ಧಿ ಹೊಂದುತ್ತಿರುವ ಮತ್ತು ಅಭಿವೃದ್ಧಿ ಹೊಂದದ ದೇಶದ ಜನರು ಇದಕ್ಕೆ ಬಲಿಯಾಗಲಿದ್ದಾರೆ ಎಂಬುದಾಗಿ ತಿಳಿಸಿದೆ.

ಹಾಗಾಗಿ ಸ್ತನ ಕ್ಯಾನ್ಸರ್ ಸಾವಿನ ಪ್ರಮಾಣವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಆಯೋಗವು ರೋಗಿಗಳು ಮತ್ತು ಆರೋಗ್ಯ ಸಲಹೆಗಾರರ ನಡುವೆ ಉತ್ತಮ ಸಂವಹನ ನಡೆಸಲು ನಿರ್ಣಯಿಸಿದೆ. ಆ ಮೂಲಕ ರೋಗ ಲಕ್ಷಣಗಳು, ಚಿಕಿತ್ಸೆ ಮತ್ತು ಉತ್ತಮ ಜೀವನಶೈಲಿಯನ್ನು ಅನುಸರಿಸುವುದರ ಮೂಲಕ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎನ್ನಲಾಗಿದೆ.

ಅದಕ್ಕಾಗಿ ಪ್ರತಿಯೊಬ್ಬ ಆರೋಗ್ಯ ಸಲಹೆಗಾರರು ಕೆಲವು ರೀತಿಯ ಸಂವಹನ ಕೌಶಲ್ಯಗಳ ತರಬೇತಿಯನ್ನು ಪಡೆಯಬೇಕು. ಇದರಿಂದ ರೋಗಗಳು ಮತ್ತು ಆರೋಗ್ಯ ಸಲಹೆಗಾರರ ನಡುವಿನ ಸಂವಹನದ ಗುಣಮಟ್ಟದಲ್ಲಿ ಸುಧಾರಣೆ ಕಂಡುಬರುತ್ತದೆ. ಇದು ರೋಗಿಗಳ ಮೇಲೆ ಸಕರಾತ್ಮಕ ಪರಿಣಾಮ ಬೀರಬಹುದು ಎಂದು ಆಯೋಗವು ತಿಳಿಸಿದೆ.

ಇದನ್ನೂ ಓದಿ: Right To Sleep: ನಿದ್ದೆ ಮನುಷ್ಯನ ಹಕ್ಕು, ಯಾರೂ ಕಸಿಯುವಂತಿಲ್ಲ ಎಂದು ಹೈಕೋರ್ಟ್‌ ಆದೇಶ!

ಹಾಗೇ ಮಹಿಳೆಯರಿಗೆ ಹೆಚ್ಚು ವ್ಯಾಯಾಮಗಳನ್ನು ಮಾಡಲು ಪ್ರೋತ್ಸಾಹಿಸಬೇಕು ಮತ್ತು ಅವರು ತಮ್ಮ ಆರೈಕೆಯ ಬಗ್ಗೆ ಹೆಚ್ಚು ಕಾಳಜಿ ವಹಿಸುವಂತೆ ನಿರ್ಧಾರ ಮಾಡಬೇಕು ಎಂದು ತಿಳಿಸಲಾಗಿದೆ.

Continue Reading

ಆರೋಗ್ಯ

Weight Loss Tips: ಇದ್ದಕ್ಕಿದ್ದಂತೆ ದೇಹದ ತೂಕ ಇಳಿಸಲು ಹೋದರೆ ಏನಾಗುತ್ತದೆ ನೋಡಿ!

ಕ್ರಮಬದ್ಧವಾಗಿ ತೂಕ ಇಳಿಸುವಲ್ಲಿ ಗಂಭೀರವಾಗಿ (Weight Loss Tips) ತೊಡಗಿಸಿಕೊಂಡವರು, ವಾರವೊಂದಕ್ಕೆ ಅರ್ಧ ಕೆ.ಜಿ- ಹೆಚ್ಚೆಂದರೆ ಒಂದು ಕೆ.ಜಿ. ತೂಕ ಇಳಿಸಬಹುದು. ಇದನ್ನಾದರೂ ಕಾಯ್ದುಕೊಂಡು ಮುನ್ನಡೆಯುವುದು ಸುಲಭದ ಕೆಲಸವಲ್ಲ. ಹಾಗಿರುವಾಗ ಇದಕ್ಕಿಂತ ಸಿಕ್ಕಾಪಟ್ಟೆ ತೂಕ ಇಳಿಸುವ (Quick weight loss hazards) ಕೆಲಸ ತೊಂದರೆಗಳನ್ನು ತರಬಹುದು, ಹುಷಾರ್!

VISTARANEWS.COM


on

Weight Loss Tips
Koo

ದೀಪಾವಳಿಯಿಂದ ಪ್ರಾರಂಭವಾಗಿ ಯುಗಾದಿಯವರೆಗೂ ಭರಪೂರ ತಿಂದಿದ್ದಾಗಿದೆ. ಪಾರ್ಟಿ ಮಾಡುವುದಕ್ಕೆ, ತಿನ್ನುವುದಕ್ಕೆ ಕಾರಣಗಳು ಏನೇ ಇರಬಹುದು… ತೂಕ ಮಾತ್ರ ಈ ಯಾವ ಕಾರಣಗಳನ್ನೂ ಕೇಳುವುದಿಲ್ಲ. ತನ್ನಷ್ಟಕ್ಕೆ ಏರುತ್ತದೆ! ಮೂರು ತಿಂಗಳಲ್ಲಿ ಏರಿದ ತೂಕವನ್ನು ಇಳಿಸಲು (Weight Loss Tips) ಆರು ತಿಂಗಳು ಒದ್ದಾಡಿದರೂ ಸಾಕಾಗುವುದಿಲ್ಲ. ಅದರಲ್ಲೂ ಹೊಸ ವರ್ಷದ ನಿರ್ಣಯವೆಂದು ಒಂದಿಷ್ಟು ದಿನ ಜಿಮ್‌, ವಾಕಿಂಗ್‌ ಪಾರ್ಕ್‌ಗಳಿಗೆ ಎಡತಾಕಿ, ಬಿಟ್ಟುಬಿಟ್ಟರೆ ಕೆಲಸ ಇನ್ನೂ ಕೆಡುತ್ತದೆ. ಆಗ ಗಮನ ಹೋಗುವುದು ತ್ವರಿತವಾಗಿ ತೂಕ ಇಳಿಸುವ ಉಪಾಯಗಳ ಮೇಲೆ! ತೂಕ ಏರುವುದಕ್ಕೆ ಬೇಕಾಗುವಷ್ಟು ಸಮಯದಲ್ಲಿ, ಏರಿದ ತೂಕವನ್ನು ಇಳಿಸಲು ಸಾಧ್ಯವೇ ಇಲ್ಲ. ಕೆಲವರಿಗೆ ಹಲವಾರು ವಾರಗಳು ಬೇಕಾದಬಹುದು; ಹಲವರಿಗೆ ಕೆಲವಾರು ತಿಂಗಳುಗಳು ಅಥವಾ ವರ್ಷಗಳೇ ಬೇಕಾಗಬಹುದು- ಕ್ರಮಬದ್ಧವಾಗಿ ತೂಕ ಇಳಿಸಲು. ಇಷ್ಟರ ನಡುವೆ ಫಾಸ್ಟ್‌ಟ್ರಾಕ್‌ನಲ್ಲಿ ತೂಕ ಇಳಿಸುವ ಉಪಾಯಗಳತ್ತ ಕಣ್ಣಾಡಿಸುತ್ತೇವೆ. ಹಾಗೆಲ್ಲಾ ತೂಕವನ್ನು ಸಿಕ್ಕಾಪಟ್ಟೆ ಏರಿಳಿತ ಮಾಡುವುದು ಸರಿಯೇ? ಇದರಿಂದ ಅಡ್ಡ ಪರಿಣಾಮಗಳು (Weight Loss Tips) ಏನೂ ಇಲ್ಲವೇ?
ಖಂಡಿತ ದುಷ್ಪರಿಣಾಮಗಳಿವೆ. ಕ್ರಮಬದ್ಧವಾಗಿ ತೂಕ ಇಳಿಸುವ ಕ್ರಿಯೆಯಲ್ಲೇ ಗಂಭೀರವಾಗಿ ತೊಡಗಿಸಿಕೊಂಡವರು, ವಾರವೊಂದಕ್ಕೆ ಅರ್ಧ ಕೆ.ಜಿ- ಹೆಚ್ಚೆಂದರೆ ಒಂದು ಕೆ.ಜಿ. ತೂಕ ಇಳಿಸುವುದು ಸಾಧ್ಯ. ಇದನ್ನೂ ಕಾಯ್ದುಕೊಂಡು ಮುನ್ನಡೆಯುವುದು ಸುಲಭದ ಕೆಲಸವಲ್ಲ. ಹಾಗಿರುವಾಗ ಇದಕ್ಕಿಂತ ವಿಪರೀತ ಪ್ರಮಾಣದಲ್ಲಿ ತೂಕ ಇಳಿಸುವ ಕೆಲಸ ತೊಂದರೆಗಳನ್ನು ತಂದೀತು, ಜೋಕೆ! ತೊಂದರೆ ಅಂದರೆ… ಏನಾಗುತ್ತದೆ?

Weight Loss tension

ಚಯಾಪಚಯ ಕ್ರಿಯೆ ಕುಸಿಯುತ್ತದೆ

ತೂಕ ಇಳಿಸುವುದಕ್ಕೆ ಯದ್ವಾತದ್ವಾ ಪ್ರಯತ್ನಿಸಿದರೆ ದೇಹದ ಚಯಾಪಚಯ ಕ್ರಿಯೆಯಲ್ಲಿ ತೊಂದರೆ ಉಂಟಾಗುತ್ತದೆ. ಒಮ್ಮೆ ಈ ಪ್ರಕ್ರಿಯೆಯಲ್ಲಿ ತೊಂದರೆ ಉಂಟಾದರೆ, ಅದು ದೇಹದ ಮೇಲೆ ನಾನಾ ರೀತಿಯಲ್ಲಿ ಪರಿಣಾಮ ಬೀರುತ್ತದೆ. ಮಾತ್ರವಲ್ಲ, ಇಳಿಸಿದ ತೂಕವನ್ನು ಕಾಯ್ದುಕೊಳ್ಳುವುದೂ ಕಷ್ಟವಾಗುತ್ತದೆ. ಅತಿಯಾಗಿ, ತಳಹದಿಯಿಲ್ಲದ ಡಯೆಟ್‌ ಮಾಡಿದರೆ ದೇಹಕ್ಕೆ ಅಗತ್ಯವಾಗುವ ಪೋಷಕಾಂಶಗಳ ಕೊರತೆಯಾಗಿ, ಶರೀರ ನಿಶ್ಶಕ್ತಿಯಿಂದ ಬಳಲಬಹುದು. ಬೇಕಾದ ಸತ್ವಗಳ ಕೊರತೆ ಉಂಟಾಗಿ ಹೊಸ ಸಮಸ್ಯೆಗಳು ಕಾಣಬಹುದು.
ಕ್ಷಿಪ್ರ ತೂಕ ಇಳಿಕೆಗಾಗಿ ಕೆಲವು ಆಹಾರಗಳನ್ನು ಇದ್ದಕ್ಕಿದ್ದಂತೆ ನಿಲ್ಲಿಸಿದ್ದೀರಿ ಎಂದಾದರೆ, ಅವುಗಳನ್ನು ದೀರ್ಘಕಾಲದವರೆಗೆ ನಿಲ್ಲಿಸುವುದು ಸಾಧ್ಯವಾಗುವುದಿಲ್ಲ. ಅಂತಹ ಆಹಾರಗಳನ್ನು ಮರಳಿ ಆರಂಭಿಸಿದ ಕೂಡಲೇ ತೂಕವೂ ಏರತೊಡಗುತ್ತದೆ. ಉದಾ, ಸಿಹಿ ತಿಂಡಿಗಳನ್ನು ಸಂಪೂರ್ಣ ನಿಲ್ಲಿಸುವ ಬದಲು, ಪ್ರಮಾಣ ಕಡಿತ ಮಾಡುವುದು ಹೆಚ್ಚು ಸಹಕಾರಿ.

weight loss

ಕೊಬ್ಬು ಕರಗಿಸಿ

ತೂಕ ಇಳಿಸುವುದೆಂದರೆ ದೇಹದಲ್ಲಿರುವ ಕೊಬ್ಬಿನ ಭಾಗವನ್ನು ಕರಗಿಸುವುದು, ಮಾಂಸಖಂಡಗಳನ್ನಲ್ಲ. ಕೊಬ್ಬು ಕಡಿಮೆ ಮಾಡುವುದರ ಜೊತೆಗೆ ಸ್ನಾಯುಗಳನ್ನು ಸಶಕ್ತ ಮಾಡುವುದು. ಅಂದರೆ, ದೇಹಕ್ಕೆ ಅಗತ್ಯವಾದ ಪ್ರೊಟೀನ್‌ ಒದಗಿಸಿ. ಸ್ನಾಯುಗಳನ್ನು ಹುರಿಗೊಳಿಸಲು ಸರಿಯಾದ ವ್ಯಾಯಾಮ ಮಾಡಿ. ಆಗ ಮಾತ್ರವೇ ಕರಗಿಸಿದ ತೂಕವನ್ನು ಹೆಚ್ಚಿನ ದಿನಗಳವರೆಗೆ ಕಾಯ್ದುಕೊಳ್ಳುವುದು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಧಿಡೀರ್‌ ಇಳಿದದ್ದು, ಹಾಗೆಯೇ ಏರಲೂಬಹುದು.

ನಮ್ಮ ದೇಹಕ್ಕೆ ಸರಿಯಾದ ಪ್ರಮಾಣದಲ್ಲಿ ಪೋಷಕಾಂಶಗಳು ಬೇಕು. ಸೂಕ್ತ ಪ್ರಮಾಣದಲ್ಲಿ ಪಿಷ್ಟ, ಪ್ರೊಟೀನ್‌, ನಾರು, ಖನಿಜ ಮತ್ತು ಜೀವಸತ್ವಗಳು ದೇಹದ ಕಾರ್ಯಕ್ಷಮತೆಗೆ ಅಗತ್ಯ. ಕ್ಯಾಲರಿಗಳನ್ನು ಕಡಿತ ಮಾಡುವಾಗ ಇಂಥ ಅಮೂಲ್ಯ ಸತ್ವಗಳು ದೇಹಕ್ಕೆ ಕೊರತೆಯಾಗಬಾರದು. ಕೇವಲ ಅನಗತ್ಯ ಕ್ಯಾಲರಿಗಳಿಗಷ್ಟೇ ಕತ್ತರಿ ಹಾಕಬೇಕು. ಅಗತ್ಯವಾಗ ಪೋಷಕತತ್ವಗಳು ಯಾವುದೇ ಕಡಿಮೆಯಾದರೂ ದೇಹ ದುರ್ಬಲವಾಗುತ್ತದೆ ಮತ್ತು ರೋಗನಿರೋಧಕ ಶಕ್ತಿ ಕುಂಠಿತಗೊಳ್ಳುತ್ತದೆ. ಸುಸ್ತು, ಆಯಾಸ, ಮಲಬದ್ಧತೆ, ಕೂದಲು ಉದುರುವುದು- ಹೀಗೆ ನಾನಾ ರೀತಿಯಲ್ಲಿ ದೇಹ ತನ್ನ ಕಷ್ಟವನ್ನು ನಮ್ಮೊಂದಿಗೆ ಹೇಳಲು ತೊಡಗುತ್ತದೆ.

ಅತಿಯಾದ, ಅವೈಜ್ಞಾನಿಕ ಡಯೆಟ್‌ನಿಂದ ಅನೋರೆಕ್ಸಿಯ ಅಥವಾ ನಿರ್ಜಲೀಕರಣದಂಥ ಸಮಸ್ಯೆ ಕಾಡಬಹುದು. ಇದು ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು. ಹಾಗಾಗಿ ತೂಕ ಇಳಿಸುವುದೆಂದರೆ ಸರ್ಕಸ್‌ ಅಲ್ಲ; ಅದು ಆರೋಗ್ಯಕರ ದೇಹ ಮತ್ತು ಮನಸ್ಸುಗಳತ್ತ ನಾವು ಇಡುವ ಸುಸ್ಥಿರ ಹೆಜ್ಜೆ. ಧಿಡೀರ್‌ ತೂಕ ಇಳಿಸುವ ಮೋಹಕ್ಕೆ ಬೀಳದೆ, ಇಡೀ ಪ್ರಕ್ರಿಯೆಯನ್ನು ನಿಧಾನವಾಗಿ ಮತ್ತು ನಿರ್ಣಾಯಕವಾಗಿ ಕೈಗೆತ್ತಿಕೊಳ್ಳಿ.

ಇದನ್ನೂ ಓದಿ: Brain Exercise: ಚುರುಕಾಗಿರಬೇಕೇ? ದೇಹಕ್ಕೆ ವ್ಯಾಯಾಮ ಮಾಡಿದರೆ ಸಾಲದು, ಮೆದುಳಿಗೂ ಮಾಡಿ!

Continue Reading

ಆಹಾರ/ಅಡುಗೆ

Midnight Hunger: ಮಧ್ಯರಾತ್ರಿಯ ಹಸಿವು ನಿಮ್ಮನ್ನು ಕಾಡುತ್ತಿದೆಯೆ? ಈ ಸಂಗತಿಗಳನ್ನು ಗಮನಿಸಿ

ರಾತ್ರಿಯ ವೇಳೆಗೆ, ಕೆಲಸದ ನಿಮಿತ್ತವೋ ಅಥವಾ ಇನ್ನೇನಾದರೂ ಸಿನಿಮಾ ನೋಡುತ್ತಲೋ ತಡರಾತ್ರಿಯವರೆಗೆ ಕುಳಿತಿದ್ದರೆ ಕತೆ ಮುಗಿದಂತೆಯೇ. ಬೇಗ ಉಂಡ ಪರಿಣಾಮವೋ, ಕಡಿಮೆ ಉಂಡ ಪರಿಣಾಮವೋ, ಮಧ್ಯರಾತ್ರಿಯ ವೇಳೆಗೆ (Midnight hunger) ಹೊಟ್ಟೆ ತಾಳ ಹಾಕಲಾರಂಭಿಸುತ್ತದೆ. ಏನಾದರು ತಿನ್ನಬೇಕೆಂಬ ತುಡಿತ ಹೆಚ್ಚಾಗುತ್ತದೆ. ಆದರೆ ಇದರ ಪರಿಣಾಮ?

VISTARANEWS.COM


on

Midnight Hunger
Koo

ಬಹಳಷ್ಟು ಮಂದಿಯ ಸಮಸ್ಯೆ ಎಂದರೆ ಮಧ್ಯರಾತ್ರಿಯ ಹಸಿವು (Midnight hunger). ಹೌದು. ಇಡೀ ದಿನ ಒಂದು ಶಿಸ್ತುಬದ್ಧ ಆಹಾರ ಕ್ರಮದಲ್ಲಿ ದಿನ ಕಳೆದ ಮೇಲೆ, ಅದ್ಯಾಕೋ ಮಧ್ಯರಾತ್ರಿಯ ಹೊತ್ತು ಏನಾದರೂ ತಿನ್ನಬೇಕೆಂಬ ಚಪಲ ಹೆಚ್ಚುತ್ತದೆ. ಇಡೀ ದಿನದ ತಪಸ್ಸು ನೀರಿನಲ್ಲಿ ಮಾಡಿದ ಹೋಮದಂತಾಗಿಬಿಡುತ್ತದೆ. ರಾತ್ರಿಯ ವೇಳೆಗೆ, ಕೆಲಸದ ನಿಮಿತ್ತವೋ ಅಥವಾ ಇನ್ನೇನಾದರೂ ಸಿನಿಮಾ ನೋಡುತ್ತಲೋ ತಡರಾತ್ರಿಯವರೆಗೆ ಕುಳಿತಿದ್ದರೆ ಕತೆ ಮುಗಿದಂತೆಯೇ. ಬೇಗ ಉಂಡ ಪರಿಣಾಮವೋ, ಕಡಿಮೆ ಉಂಡ ಪರಿಣಾಮವೋ, ಮಧ್ಯರಾತ್ರಿಯ ವೇಳೆಗೆ ಹೊಟ್ಟೆ ತಾಳ ಹಾಕಲಾರಂಭಿಸುತ್ತದೆ. ಏನಾದರೊಂದು ತಿನ್ನಬೇಕೆಂಬ ತುಡಿತ ಹೆಚ್ಚಾಗುತ್ತದೆ. ಇದರ ಪರಿಣಾಮ ಅನಾರೋಗ್ಯಕರ ಕುರುಕಲು ತಿನಿಸುಗಳೇ ಹೊಟ್ಟೆ ಸೇರುತ್ತದೆ. ಹಾಗಾದರೆ, ಈ ಮಧ್ಯರಾತ್ರಿಯ ತಿನ್ನುವ ಚಪಲವನ್ನು (Midnight hunger) ಮೀರುವುದು ಹೇಗೆ? ಇದರಿಂದ ಹೊರಬರುವುದು ಹೇಗೆ ಎಂಬ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬಯಸುವವರಿಗೆ ಇಲ್ಲಿ ಕೆಲವು ಸಲಹೆಗಳಿವೆ.

indian dinner

ರಾತ್ರಿಯೂಟ ಪ್ರೊಟೀನ್‌ನಿಂದ ಶ್ರೀಮಂತವಾಗಿರಲಿ

ಹೌದು. ರಾತ್ರಿಯ ಊಟವನ್ನು ಬೇಗ ಮುಗಿಸುವವರೂ ಸೇರಿದಂತೆ ಒಂದು ಬಹುಮುಖ್ಯ ಉಪಾಯವೆಂದರೆ, ರಾತ್ರಿಯ ಊಟದ ಆಯ್ಕೆ. ನಿಮ್ಮ ರಾತ್ರಿಯ ಊಟದಲ್ಲಿ ಪ್ರೊಟೀನ್‌ ಹೆಚ್ಚಿರಲಿ. ಪ್ರೊಟೀನ್‌ನಿಂದ ಕೂಡಿದ ಆಹಾರ ಹೊಟ್ಟೆ ತುಂಬಿಸಿದ ಅನುಭವ ಕೊಡುತ್ತದೆ. ಪರಿಣಾಮವಾಗಿ ಹಸಿವಾಗುವುದಿಲ್ಲವಾದ್ದರಿಂದ ತಡರಾತ್ರಿ ತಿನ್ನಬೇಕೆಂಬ ತುಡಿತ ಕಾಡುವುದಿಲ್ಲ. ಹಾಗಾಗಿ ರಾತ್ರಿಯ ಊಟವನ್ನೇ ಯೋಚಿಸಿ ಮಾಡಿ. ಆಗ ಏನೇನೋ ಹಾಳುಮೂಳು ತಡರಾತ್ರಿ ತಿನ್ನುವುದು ತಪ್ಪುತ್ತದೆ.

ಕಡಿಮೆ ತಿನ್ನಿ

ರಾತ್ರಿ ಹೀಗೆ ಪ್ರೊಟೀನ್‌ಭರಿತ ಊಟ ಮಾಡಿದರೂ ಮಧ್ಯರಾತ್ರಿ ಹಸಿವಾಯಿತು ಎಂದೇ ಇಟ್ಟುಕೊಳ್ಳೋಣ. ಆಗ ಏನು ಮಾಡುವುದು, ಏನಾದರೂ ತಿನ್ನದೆ ಇದ್ದರೆ ಅಸಿಡಿಟಿಯ ಸಮಸ್ಯೆ ಕೆಲವರದ್ದು. ಹೀಗಾಗಿ ಏನು ತಿನ್ನಬಹುದು, ಏನು ಮಾಡಬೇಕು ಎಂಬ ಪ್ರಶ್ನೆ ಕೆಲವರದ್ದು. ಇಂಥ ಸಂದರ್ಭ ಖಂಡಿತವಾಗಿಯೂ ತಿನ್ನಿ. ಆದರೆ ಏನು ತಿನ್ನುತ್ತಿದ್ದೀರಿ ಎಂಬ ಬಗ್ಗೆ ಗಮನ ಇರಲಿ. ಜೊತೆಗೆ ಎಷ್ಟು ತಿನ್ನುತ್ತಿದ್ದೀರಿ ಎಂಬ ಗಮನವೂ ಇರಲಿ. ಹಾಗಾಗಿ ಇಂಥ ಸಂದರ್ಭ ತಿನ್ನಲಿಕ್ಕಾಗಿಯೇ ಕೆಲವು ಆರೋಗ್ಯಕರ ಆಹಾರಗಳನ್ನು ಸ್ನ್ಯಾಕ್‌ಗಳನ್ನು ಜೊತೆಗೆ ಇಟ್ಟುಕೊಂಡಿರಿ. ಅಷ್ಟೇ ಅಲ್ಲ, ಹೆಚ್ಚು ತಿನ್ನಬೇಡಿ. ಕಡಿಮೆ ಪ್ರಮಾಣದಲ್ಲಿ ತಿಂದು ಹೊಟ್ಟೆಯನ್ನು ಸಮಾಧಾನಪಡಿಸಿ.

Dry seeds

ಒಣಬೀಜಗಳು

ಹೊಟ್ಟೆಯನ್ನು ಸಮಾಧಾನಪಡಿಸುವ ಇಂತಹ ಆರೋಗ್ಯಕರ ಸ್ನ್ಯಾಕ್‌ಗಳು ಏನಿವೆ ಎಂದು ನೀವು ಕೇಳಿದರೆ, ಖಂಡಿತ ಇವೆ. ಒಣಬೀಜಗಳು ಇಂಥ ಸಮಯಕ್ಕೆ ಹೇಳಿ ಮಾಡಿಸಿದ ಸ್ನ್ಯಾಕ್‌ಗಳು. ಕೆಲವು ಹುರಿದ ಧಾನ್ಯಗಳು, ಒಣಬೀಜಗಳು, ಮಖಾನಾದಂತಹ ಕಡಿಮೆ ಕ್ಯಾಲರಿಯ ಸ್ನ್ಯಾಕ್‌ಗಳನ್ನು ಇಟ್ಟುಕೊಳ್ಳಬಹುದು. ಇವು ಕೇವಲ ಆರೋಗ್ಯಕರವಷ್ಟೇ ಅಲ್ಲ, ಇದರಲ್ಲಿರುವ ಕೊಬ್ಬೂ ಕೂಡಾ ದೇಹಕ್ಕೆ ಅಗತ್ಯವಾದ ಆರೋಗ್ಯಕರ ಒಳ್ಳೆಯ ಕೊಬ್ಬೇ ಆಗಿದೆ. ಹೀಗಾಗಿ. ಚಿಪ್ಸ್‌, ಕುರುಕಲು, ಎಣ್ಣೆ ಪದಾರ್ಥಗಳು, ಜ್ಯೂಸ್‌ಗಳು, ಟೆಟ್ರಾ ಪ್ಯಾಕೆಟ್‌ಗಳು, ಕೆಫಿನ್‌ಯುಕ್ತ ಪೇಯಗಳು ಇತ್ಯಾದಿಗಳನ್ನು ಹೀರುವ ಅಭ್ಯಾಸವಿದ್ದರೆ ಖಂಡಿತಾ ಬಿಡಿ. ಬಹುಮುಖ್ಯವಾಗಿ ಇಂಥವನ್ನು ಖರೀದಿಸುವ ಅಭ್ಯಾಸವನ್ನೇ ಮೊದಲು ಬಿಡಿ. ಉತ್ತಮ ಆರೋಗ್ಯಕರ ಒಣಬೀಜಗಳು, ಹುರುದ ಧಾನ್ಯಗಳು ಇತ್ಯಾದಿಗಳನ್ನು ಪಕ್ಕದಲ್ಲಿಡಿ. ಕೆಲ ದಿನಗಳ ಕಾಲ ಈ ಅಭ್ಯಾಸ ಕಷ್ಟವಾಗಬಹುದು. ಆದರೆ, ಕಷ್ಟವೇನಲ್ಲ. ಪ್ರಯತ್ನ ಪಟ್ಟರೆ ಖಂಡಿತ ಸಾಧ್ಯವಾಗುತ್ತದೆ.

ಇದನ್ನೂ ಓದಿ: Home Remedies For Sunburn: ಬಿಸಿಲಿಗೆ ಚರ್ಮದ ಅಂದಗೆಟ್ಟಿದೆಯೆ? ಇಲ್ಲಿದೆ ಮನೆಮದ್ದು!

Continue Reading
Advertisement
UPSC Results 2023
ದೇಶ37 seconds ago

ವಿಸ್ತಾರ ಸಂಪಾದಕೀಯ: ಯುಪಿಎಸ್‌ಸಿ ಸಾಧಕರ ಕತೆಗಳು ಇತರರಿಗೆ ಸ್ಫೂರ್ತಿಯಾಗಲಿ

Ram Navami
ಪ್ರಮುಖ ಸುದ್ದಿ10 mins ago

Ram Navami : ಇಂದು ದೇಶಾದ್ಯಂತ ರಾಮ ನವಮಿ ಸಂಭ್ರಮ; ಏನು ಈ ದಿನದ ಮಹತ್ವ?

State Administrative Reforms Commission Chairman R V Deshpande statement
ಉತ್ತರ ಕನ್ನಡ25 mins ago

Lok Sabha Election 2024: ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಪದ ಬಳಸುತ್ತಿದ್ದಾರೆ: ಆರ್.ವಿ.ದೇಶಪಾಂಡೆ

IPL 2024
ಪ್ರಮುಖ ಸುದ್ದಿ29 mins ago

IPL 2024 : ಬಟ್ಲರ್ ಮುಂದೆ ಮಂಕಾದ ನರೈನ್​; ಕೆಕೆಆರ್ ವಿರುದ್ಧ ಆರ್​​ಆರ್​ಗೆ 2 ವಿಕೆಟ್ ಜಯ

Murder Case
ಕರ್ನಾಟಕ42 mins ago

Chitradurga News: ಚಿತ್ರದುರ್ಗದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಾಯಿ-ಮಗಳ ಶವ ಪತ್ತೆ

amith shah
ದೇಶ1 hour ago

Amit Shah: ಶೀಘ್ರದಲ್ಲೇ ಭಾರತ ನಕ್ಸಲ್‌ ಮುಕ್ತವಾಗಲಿದೆ; ಅಮಿತ್ ಶಾ

Nitin Gadkari
ದೇಶ1 hour ago

Nitin Gadkari : ನಾಗ್ಪುರ ಕ್ಷೇತ್ರಕ್ಕೆ ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡಿದ ನಿತಿನ್ ಗಡ್ಕರಿ

UPSC Results 2023
ಕರ್ನಾಟಕ1 hour ago

UPSC Results 2023: ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದ ಶಾಂತಪ್ಪ ಕುರುಬರ; ಸೋಲನ್ನು ಗೆಲುವಿನ ಮೆಟ್ಟಿಲಾಗಿಸಿಕೊಂಡ ಸಾಧಕ!

Dalip Singh Majithia
ಪ್ರಮುಖ ಸುದ್ದಿ2 hours ago

Dalip Singh Majithia : 2ನೇ ಮಹಾಯುದ್ಧದಲ್ಲಿ ಸೇವೆ ಸಲ್ಲಿಸಿದ ಐಎಎಫ್ ಯೋಧ 103 ನೇ ವಯಸ್ಸಿನಲ್ಲಿ ನಿಧನ

Ayodhya Ram Mandir
ದೇಶ2 hours ago

Ayodhya Ram Mandir: ನಾಳೆ ಅಯೋಧ್ಯೆ ಶ್ರೀರಾಮನಿಗೆ ಸೂರ್ಯ ತಿಲಕ; ಮನೆಯಲ್ಲೇ ಕೂತು ಹೀಗೆ ಕಣ್ತುಂಬಿಕೊಳ್ಳಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ19 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20242 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌