Neha Murder Case: ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ: ಅಮಿತ್‌ ಶಾಗೆ ನೇಹಾ ತಂದೆ ಮನವಿ - Vistara News

ಕರ್ನಾಟಕ

Neha Murder Case: ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ: ಅಮಿತ್‌ ಶಾಗೆ ನೇಹಾ ತಂದೆ ಮನವಿ

Neha Murder Case: ಹುಬ್ಬಳ್ಳಿಗೆ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರ ಪ್ರಚಾರಕ್ಕೆಂದು ಬುಧವಾರ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನೇಹಾ ಹಿರೇಮಠ ತಂದೆ-ತಾಯಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ.

VISTARANEWS.COM


on

Neha Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಹತ್ಯೆಗೀಡಾದ ನೇಹಾ ಪ್ರಕರಣದಲ್ಲಿ (Neha Murder Case) ನ್ಯಾಯ ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಲಾಗಿದೆ. ಹುಬ್ಬಳ್ಳಿಗೆ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರ ಪ್ರಚಾರಕ್ಕೆಂದು ಬುಧವಾರ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನೇಹಾ ತಂದೆ-ತಾಯಿ ನೇರವಾಗಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ.

ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ವೇದಿಕೆ ಹಿಂಭಾಗದಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿರುವ ನೇಹಾ ಕುಟುಂಬ ಮಗಳ ಹತ್ಯೆ ಕುರಿತು ಸಂಪೂರ್ಣ ಮಾಹಿತಿ ಒದಗಿಸಿದರು. ನೇಹಾ ತಂದೆ ನಿರಂಜನ್ ಹಿರೇಮಠ ಅವರು, ತಾವೊಬ್ಬ ಕಾಂಗ್ರೆಸ್ ಕಾರ್ಪೊರೇಟರ್ ಆಗಿದ್ದರೂ ಮಗಳ ಹತ್ಯೆ ಪ್ರಕರಣದಲ್ಲಿ ಸರಿಯಾಗಿ ನ್ಯಾಯ ದಕ್ಕಿಸಿಕೊಳ್ಳಲು ಆಗುತ್ತಿಲ್ಲವೆಂದು ಅಮಿತ್ ಶಾ ಅವರೆದುರು ದುಃಖ ತೋಡಿಕೊಂಡಿದ್ದಾರೆ.

ಮಗಳು ನೇಹಾಳ ಹತ್ಯೆ ಹಿನ್ನೆಲೆ ಮತ್ತು ಈವರೆಗೆ ಆದ ಬೆಳವಣಿಗೆಗಳ ಕುರಿತು ಕಾರ್ಪೊರೇಟರ್ ನಿರಂಜನ್ ಅವರು ಕೇಂದ್ರ ಗೃಹ ಸಚಿವರೆದುರು ವಿವರಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೇಹಾ ತಂದೆ-ತಾಯಿಗೆ ಸಾಂತ್ವನ ಹೇಳಿದರಲ್ಲದೆ, ನಾವಿದ್ದೇವೆ ಹೆದರಬೇಡಿ ಎಂದು ಆತ್ಮಸ್ಥೈರ್ಯ ತುಂಬಿದರು.‌

ಇದನ್ನೂ ಓದಿ | PM Narendra Modi: ನೇಹಾ ಹಿರೇಮಠ ಹತ್ಯೆ ಆತಂಕಕಾರಿ; ಹೊಸಪೇಟೆಯಲ್ಲಿ ಕಾಂಗ್ರೆಸ್‌ಗೆ ಮೋದಿ ಚಾಟಿ!

ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ ಮತ್ತಿತರ ಪ್ರಮುಖರು ಈ ಸಂದರ್ಭದಲ್ಲಿ ಇದ್ದರು.

ಮಹಿಳೆಗೆ ಅನ್ಯಾಯ ಮಾಡಿದ್ರೆ ಅಂಥವರ ಜತೆ ಬಿಜೆಪಿ ಇರಲ್ಲ; ಪ್ರಜ್ವಲ್‌ನನ್ನು ಬಿಟ್ಟಿದ್ದು ಕಾಂಗ್ರೆಸ್‌ ತಪ್ಪು ಎಂದ ಶಾ

Prajwal Revanna Case BJP will not be with those who do injustice to women says Amit Shah

ಹುಬ್ಬಳ್ಳಿ: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಯಾವುದೇ ಮಹಿಳೆಗೆ ಅನ್ಯಾಯ ಮಾಡಿದರೂ ಅಂಥವರ ಜತೆಗೆ ಬಿಜೆಪಿ ಇರಲ್ಲ. ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಅವರೇ ಇಲ್ಲಿ ಸ್ವಲ್ಪ ಕೇಳಿಸಿಕೊಳ್ಳಿ. ಪ್ರಜ್ವಲ್‌ ಮೇಲೆ ಕ್ರಮವನ್ನು ನೀವು ತೆಗೆದುಕೊಳ್ಳಬೇಕಿತ್ತು, ನಾವಲ್ಲ ಎಂದು ಗುಡುಗಿದ್ದಾರೆ.

ಹುಬ್ಬಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಒಕ್ಕಲಿಗ ಬೆಲ್ಟ್‌ನಲ್ಲಿ ಚುನಾವಣೆ ಆಗುವವರೆಗೂ ಪ್ರಜ್ವಲ್‌ ರೇವಣ್ಣ ಅವರ ಮೇಲೆ ನೀವು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಈ ವಿಷಯದಲ್ಲಿ ಭಾರಿ ರಾಜಕೀಯ ಮಾಡಿದ್ದೀರಿ. ಆರೋಪಿ ಪ್ರಜ್ವಲ್‌ ರೇವಣ್ಣ ಅವರನ್ನು ವಿದೇಶಕ್ಕೆ ಹೋಗಲು ಬಿಟ್ಟಿದ್ದೀರಿ. ಧೈರ್ಯವಿದ್ದರೆ ಸತ್ಯವನ್ನು ಜನರ ಮುಂದೆ ಹೇಳಿ. ಇಂತಹ ಕೃತ್ಯ ಮಾಡುವವರಿಗೆ ಕಠೋರವಾದ ಶಿಕ್ಷೆ ಆಗಬೇಕು, ವಿಳಂಬವಾಗಬಾರದು ಅನ್ನೋದು ನಮ್ಮ ನಿಲುವು. ಇಂತಹ ಭಯಾನಕ ಅಪರಾಧದ ನಡುವೆಯೂ ಇವರು ರಾಜಕೀಯ ಮಾಡುತ್ತಿದ್ದಾರೆ ಎಂದು ಗುಡುಗಿದರು.

ನಿಮಗಾಗದಿದ್ದರೆ ಕರ್ನಾಟಕದ ಸುರಕ್ಷತೆಯನ್ನು ನಮಗೆ ಬಿಡಿ

ಏಪ್ರಿಲ್ 18ರಂದು ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆಯಾಯಿತು. ಇದು ವೈಯಕ್ತಿಕ ಕೇಸ್‌ ಎಂದು ಕಾಂಗ್ರೆಸ್ ನಾಯಕರು ಹೇಳಿದರು. ನಿಮಗೆ ಆಗದಿದ್ದರೆ ಬಿಡಿ, ನಾವು ಕರ್ನಾಟಕವನ್ನು ಸುರಕ್ಷಿತವನ್ನಾಗಿ ಮಾಡುತ್ತೇವೆ. ನಾವು ಕರ್ನಾಟಕದ ಹೆಣ್ಣು ಮಕ್ಕಳಿಗೆ ಸುರಕ್ಷತೆಯನ್ನು ಕೊಡುತ್ತೇವೆ ಎಂದು ಅಮಿತ್‌ ಶಾ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Prajwal Revanna Case BJP will not be with those who do injustice to women says Amit Shah

ಕಾಂಗ್ರೆಸ್‌ನಿಂದ ವೋಟ್‌ ಬ್ಯಾಂಕ್‌ ರಾಜಕಾರಣ

ಕಾಂಗ್ರೆಸ್‌ನವರು ವೋಟ್ ಬ್ಯಾಂಕ್‌ಗಾಗಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ಕೆಲಸ ಮಾಡಿದ್ದಾರೆ. ಬಾಂಬ್ ಬ್ಲಾಸ್ಟ್‌ ಆದರೆ ಇವರಿಗೆ ಯಾವುದೇ ಲೆಕ್ಕವಿಲ್ಲ. ನೀವು ಪ್ರಲ್ಹಾದ್ ಜೋಶಿಯವರಿಗೆ ಹಾಕುವ ಒಂದೊಂದು ಮತವೂ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುತ್ತದೆ. ಮೋದಿಯವರು ಮತ್ತೊಮ್ಮೆ ಪ್ರಧಾನಿಯಾದರೆ ಭಯೋತ್ಪಾದನೆಯು ಸಂಪೂರ್ಣ ನಿರ್ಮೂಲನೆಯಾಗುತ್ತದೆ. ಕಾಂಗ್ರೆಸ್‌ನವರು ವೋಟ್ ಬ್ಯಾಂಕ್ ಕಾರಣಕ್ಕೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ಆಯೋಜನೆ ಮಾಡಿದ್ದ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ ಬರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಹತ್ತು ವರ್ಷದಲ್ಲಿ ಕಾಂಗ್ರೆಸ್‌ನ ತುಷ್ಟೀಕರಣ ರಾಜಕೀಯವನ್ನು ಕಿತ್ತುಹಾಕಿದ್ದಾರೆ ಎಂದು ಅಮಿತ್‌ ಶಾ ಹೇಳಿದರು.

ಇದನ್ನೂ ಓದಿ: Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಕಾಂಗ್ರೆಸ್‌ನವರು ಸುಳ್ಳು ಹೇಳುತ್ತಾರೆ

ಪ್ರಲ್ಹಾದ್ ಜೋಶಿಯವರನ್ನು ದೆಹಲಿಗೆ ನೀವು ಕಳುಹಿಸಿ, ಅವರನ್ನು ದೊಡ್ಡವರನ್ನಾಗಿ ನಾವು ಮಾಡುತ್ತೇವೆ. ಜೋಶಿ ನೋಡಲು ಸೀದಾ ಸಾದಾ ಕಾಣುತ್ತಾರೆ. ಹುಬ್ಬಳ್ಳಿ- ಧಾರವಾಡದ ಅಭಿವೃದ್ಧಿ ವಿಷಯ ಬಂದಾಗ ನನ್ನ ಜತೆಗೂ ಜಗಳ ಮಾಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬರದ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಪರಸ್ಪರ ಜಗಳದಲ್ಲಿ ತೊಡಗಿದ್ದಾರೆ. ನೀತಿ ಸಂಹಿತೆ ಜಾರಿಯಾಗಿದ್ದಕ್ಕೆ ಬರ ಪರಿಹಾರ ವಿಳಂಬವಾಗಿದೆ. ಕಾಂಗ್ರೆಸ್‌ನವರು ಸುಳ್ಳು ಹೇಳಿ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ಈಗ ಹಣ ಬಿಡುಗಡೆಯಾಗಿದೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru News: ಹಸುಗೂಸನ್ನು ರಸ್ತೆ ಬದಿ ಎಸೆದು ಹೋದ ಅನಾಮಿಕರು!

Bengaluru News: ಬೆಂಗಳೂರಿನ ಹೊರವಲಯದ ಯಲಹಂಕದ ಅಟ್ಟೂರು ಬಸ್ ನಿಲ್ದಾಣದ ಬಳಿ ಹಸುಗೂಸನ್ನು ರಸ್ತೆ ಬದಿ ಅನಾಮಿಕರು ಎಸೆದು ಹೋಗಿದ್ದಾರೆ.

VISTARANEWS.COM


on

Bengaluru News
Koo

ಬೆಂಗಳೂರು: ಹಸುಗೂಸನ್ನು ರಸ್ತೆ ಬದಿಗೆ ಎಸೆದು ಹೋಗಿರುವ ಅಮಾನವೀಯ ಘಟನೆ ನಗರದ ಹೊರವಲಯದ (Bengaluru News) ಯಲಹಂಕದ ಅಟ್ಟೂರು ಬಸ್ ನಿಲ್ದಾಣದ ಬಳಿ ನಡೆದಿದ್ದು, ಮಗವನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹುಟ್ಟಿ ಕೆಲವೇ ಗಂಟೆಯಾಗಿರುವ ಶಿಶುವನ್ನು ಅನಾಮಿಕರು ಬಸ್ ನಿಲ್ದಾಣದ ಬಳಿ ಇರುವ ಗೂಡ್ಸ್ ಸ್ಟ್ಯಾಂಡ್ ಬಳಿ ಬಿಸಾಡಿ ಹೋಗಿದ್ದಾರೆ.

ಮಗು ಅಳು ಕೇಳಿದ ಸ್ಥಳೀಯರು ತೆರಳಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸದ್ಯ ಮಗುವಿಗೆ ಯಲಹಂಕದ ಈಶಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Davanagere News

ದಾವಣಗೆರೆ: ಕೆರೆಯಲ್ಲಿ 1 ಲಕ್ಷಕ್ಕೂ ಅಧಿಕ ಮೀನುಗಳ ಮಾರಣ ಹೋಮವಾಗಿರುವ ಘಟನೆ ದಾವಣಗೆರೆ (Davanagere News) ಸಮೀಪದ ಎಲೆಬೇತೂರಿನ ಕೆರೆಯಲ್ಲಿ ನಡೆದಿದೆ. ಅಧಿಕ ಬಿಸಿಲಿನ ತಾಪಕ್ಕೆ ಮೀನುಗಳು ಮೃತಪಟ್ಟಿರಬಹುದಾ ಅಥವಾ ಹಳೇ ವೈಷಮ್ಯದಿಂದ ಯಾರಾದರೂ ಕೆರೆಗೆ ವಿಷ ಬೆರೆಸಿದ್ದರಿಂದ ಮೀನುಗಳು ಸಾವಿಗೀಡಾಗಿರಬಹುದಾ ಎಂಬ ಶಂಕೆ ವ್ಯಕ್ತವಾಗಿದೆ.

ಕೆರೆಯಲ್ಲಿ 1.50 ಲಕ್ಷ ಮೀನುಗಳನ್ನು ಸಾಕಲಾಗಿತ್ತು. ಅದರಲ್ಲಿ 40 ಸಾವಿರ ಮೀನು ಹಿಡಿದು ಮಾರಲಾಗಿತ್ತು. ಇನ್ನುಳಿದ ಸುಮಾರು ಲಕ್ಷಕ್ಕೂ ಅಧಿಕ ಮೀನುಗಳು ಸಾವನ್ನಪ್ಪಿವೆ ಎನ್ನಲಾಗಿದೆ. ಬರೋಬ್ಬರಿ 5ರಿಂದ 10 ಕೆಜಿ ಇರುವ ಮೀನುಗಳು ಮೃತಪಟ್ಟು, ಕೆರೆಯಲ್ಲಿ ತೇಲುತ್ತಿವೆ. ಸತ್ತ ಮೀನುಗಳನ್ನು ನೋಡಿ ಮೀನು ಸಾಕಾಣಿಕೆದಾರರು ಕಂಗಾಲಾಗಿದ್ದು, ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಿ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

Continue Reading

ಕ್ರೈಂ

Anjali Murder Case: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

Anjali Murder Case: ಅಂಜಲಿ ಕೊಲೆ ಪ್ರಕರಣಕ್ಕೂ ಮೊದಲೇ ಯುವತಿ ಅಜ್ಜಿ, ಜೀವ ಬೆದರಿಕೆ ಇದೆ ಎಂದು ದೂರು ನೀಡಿದ್ದರು. ಆದರೆ, ಅದನ್ನು ನಿರ್ಲಕ್ಷ್ಯ ಮಾಡಿದ್ದರಿಂದ ಬೆಂಡಿಗೇರಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಪೇದೆಯನ್ನು ಅಮಾನತು ಮಾಡಲಾಗಿದೆ.

VISTARANEWS.COM


on

Anjali Murder Case
Koo

ಹುಬ್ಬಳ್ಳಿ: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ (Anjali Murder Case) ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಪೇದೆಯನ್ನು ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ.

ಕೊಲೆ ಪ್ರಕರಣಕ್ಕೂ ಮೊದಲೇ ಅಂಜಲಿ ಅಜ್ಜಿ, ಬೆಂಡಿಗೇರಿ ಪೊಲೀಸ್ ಠಾಣೆಗೆ ಬಂದು ಬೆದರಿಕೆ ಇದೆ ಎಂದು ದೂರು ನೀಡಿದ್ದರು. ದೂರು ನೀಡಿದರೂ ಪೊಲೀಸರು ನಿರ್ಲಕ್ಷ್ಯ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಚಂದ್ರಶೇಖರ್‌ ಹಾಗೂ ಮಹಿಳಾ ಪೊಲೀಸ್ ಪೇದೆ ರೇಖಾ ಅವರನ್ನು ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಅಮಾನತು ಮಾಡಿದ್ದಾರೆ.

ಇದನ್ನೂ ಓದಿ | Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

ಏನಿದು ಘಟನೆ?

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ (Neha Hiremath murder) ಕೊಲೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಮತ್ತೊಬ್ಬ ಯುವತಿಯ ಕೊಲೆ ಬುಧವಾರ ಮುಂಜಾನೆ ನಡೆದಿತ್ತು. ನಗರದ ವೀರಾಪೂರ ಓಣಿಯ ಮನೆಯಲ್ಲಿ ಮಲಗಿದ್ದಾಗ ಮನೆಗೇ ನುಗ್ಗಿದ್ದ ದುಷ್ಕರ್ಮಿ ಚಾಕುವಿನಿಂದ ಯುವತಿ ಅಂಜಲಿ ಅಂಬಿಗೇರಗೆ (20) ಇರಿದು ಕೊಂದಿದ್ದ.

Anjali Murder Case

ಕೊಲೆ ಮಾಡಿದ ಆರೋಪಿ ಗಿರೀಶ್ ಸಾವಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದ. ಈ ಸೈಕೋ ಪ್ರೇಮಿ, ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ಧಮಕಿ ಹಾಕಿದ್ದ. “ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಹೇಗೆ ಆಗಿದೆ ಹಾಗೆ ಮಾಡ್ತೀನಿ” ಎಂದು ಧಮಕಿ ಹಾಕಿದ್ದ. ಗಿರೀಶ ಬೆದರಿಕೆ ಹಾಕಿರುವುದನ್ನು ಅಂಜಲಿಯ ಅಜ್ಜಿ ಗಂಗಮ್ಮ ಅವರು ಪೊಲೀಸರ ಗಮನಕ್ಕೂ ತಂದಿದ್ದರು. ಆದರೆ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ.

ಕೊಲೆಪಾತಕಿ ಗಿರೀಶ ಈ ಹಿಂದೆ ಹಲವು ಕಳ್ಳತನ ಪ್ರಕರಣಗಳಲ್ಲಿಯೂ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | B C Mylarappa: ಅಕ್ರಮ ಭೂ ವ್ಯವಹಾರ; ಪ್ರೊ. ಮೈಲಾರಪ್ಪ ಅಮಾನತಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

ಹುಬ್ಬಳ್ಳಿಯ ಯುವತಿ ನೇಹಾ ಹಿರೇಮಠ ಅವರನ್ನು ಪಾಗಲ್‌ ಪ್ರೇಮಿ ಫಯಾಜ್‌ ಕಾಲೇಜ್‌ ಕ್ಯಾಂಪಸ್‌ನಲ್ಲಿಯೇ ಕಳೆದ ತಿಂಗಳು ಕೊಚ್ಚಿ ಕೊಲೆ ಮಾಡಿದ್ದ. ಇದು ಲವ್‌ ಜಿಹಾದ್‌ ಪ್ರಕರಣ ಎಂದು ರಾಜಾದ್ಯಂತ ತೀವ್ರ ಪ್ರತಿಭಟನೆ, ರಾಜಕೀಯ ಕೆಸರೆರಚಾಟಗಳಿಗೆ ಕಾರಣವಾಗಿತ್ತು.

Continue Reading

ಉತ್ತರ ಕನ್ನಡ

Uttara Kannada News: ಮೇ 19ರಂದು ನಿವೃತ್ತ ಶಿಕ್ಷಕ ಜಿ. ಟಿ. ಭಟ್ ಬೊಮ್ಮನಹಳ್ಳಿ 80ರ ಸಂಭ್ರಮ

Uttara Kannada News: ಸಾವಿರಾರು ಸಂಖ್ಯೆಯಲ್ಲಿ ಶಿಷ್ಯವೃಂದ ಹೊಂದಿರುವ ನಿವೃತ್ತ ಶಿಕ್ಷಕ ಜಿ.ಟಿ. ಭಟ್ ಬೊಮ್ಮನಹಳ್ಳಿ ಅವರು ಶಿಕ್ಷಣ ಕ್ಷೇತ್ರದೊಂದಿಗೆ ಯಕ್ಷಗಾನ, ನಾಟಕ ಹಾಗೂ ಕೃಷಿ ಕ್ಷೇತ್ರದಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ಅವರ 80ರ ಸಂಭ್ರಮವನ್ನು ಅವರ ಶಿಷ್ಯ ವೃಂದದವರಿಂದ ಅಭಿನಂದನಾ ಸಮಾರಂಭವನ್ನು ಮೇ 19 ರಂದು ಮಧ್ಯಾಹ್ನ 3 ಗಂಟೆಗೆ ಮಂಚೀಕೇರಿಯ ರಾಜರಾಜೇಶ್ವರಿ ರಂಗಮಂದಿರಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಭಿನಂದನಾ ಕಾರ್ಯಕಾರಿ ಸಮಿತಿ ಸಂಚಾಲಕ ಜಿ.ಎನ್‌.ಶಾಸ್ತ್ರಿ ತಿಳಿಸಿದ್ದಾರೆ.

VISTARANEWS.COM


on

Retired Teacher G T Bhatt Bommanahalli 80th celebration programme on May 19
Koo

ಯಲ್ಲಾಪುರ: ಸಾವಿರಾರು ಮಂದಿಯ ಶಿಷ್ಯವೃಂದ ಹೊಂದಿರುವ ನಿವೃತ್ತ ಶಿಕ್ಷಕ ಜಿ.ಟಿ. ಭಟ್ ಬೊಮ್ಮನಹಳ್ಳಿ ಅವರು ಶಿಕ್ಷಣ ಕ್ಷೇತ್ರದೊಂದಿಗೆ ಯಕ್ಷಗಾನ, ನಾಟಕ ಹಾಗೂ ಕೃಷಿ ಕ್ಷೇತ್ರದಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ಅವರ 80ರ ಸಂಭ್ರಮವನ್ನು ಅವರ ಶಿಷ್ಯ ವೃಂದದವರಿಂದ ಅಭಿನಂದನಾ ಸಮಾರಂಭವನ್ನು ಮೇ 19ರಂದು ಆಯೋಜಿಸಲಾಗಿದೆ ಎಂದು ಅಭಿನಂದನಾ ಕಾರ್ಯಕಾರಿ ಸಮಿತಿ ಸಂಚಾಲಕ ಜಿ.ಎನ್‌. ಶಾಸ್ತ್ರಿ (Uttara Kannada News) ಹೇಳಿದರು.

ಪಟ್ಟಣದ ಅಡಿಕೆ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 80ರ ಸಂಭ್ರಮದ ಅಭಿನಂದನಾ ಕಾರ್ಯಕ್ರಮವನ್ನು ಮೇ 19ರಂದು ಮಧ್ಯಾಹ್ನ 3 ಗಂಟೆಗೆ ಮಂಚೀಕೇರಿಯ ರಾಜರಾಜೇಶ್ವರಿ ರಂಗಮಂದಿರಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಲಿದ್ದಾರೆ. ಹೊಸಪೇಟೆಯ ಯಾಜಿ ಪ್ರಕಾಶನ ಪ್ರಕಟಿಸಿರುವ ಬೊಮ್ಮನಹಳ್ಳಿ ಜಂಗಮ ಗೌರವ ಗ್ರಂಥವನ್ನು ಕವಿ, ಕಥೆಗಾರ ಜಯಂತ ಕಾಯ್ಕಿಣಿ ಬಿಡುಗಡೆ ಮಾಡಲಿದ್ದಾರೆ.

ಇದನ್ನೂ ಓದಿ: Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

ರಂಗ ನಿರ್ದೇಶಕ ಚಿದಂಬರ ರಾವ್ ಜಂಬೆ ಹೆಗ್ಗೋಡು, ಯಕ್ಷಗಾನ ಕಲಾವಿದ ಶಿವಾನಂದ ಹೆಗಡೆ ಕೆರೆಮನೆ, ಬೆಂಗಳೂರು ಸಂಸ್ಕೃತ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಅಹಲ್ಯಾ ಶರ್ಮ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಮಂಚಿಕೇರಿಯ ಹಾಸಣಗಿ ಸೊಸೈಟಿ ಅಧ್ಯಕ್ಷ ಆರ್.ಎನ್. ಹೆಗಡೆ ಗೋರ್ಸಗದ್ದೆ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ನಂತರ ನಡೆಯುವ ವಾಮನ ಚರಿತ್ರೆ ತಾಳಮದ್ದಳೆಯ ಹಿಮ್ಮೇಳದಲ್ಲಿ ಭಾಗವತರಾಗಿ ಅನಂತ ದಂತಳಿಕೆ, ನರಸಿಂಹ ಭಟ್ಟ ಹಂಡ್ರಮನೆ ಮೃದಂಗ, ಪ್ರಮೋದ್ ಯಲ್ಲಾಪುರ ಚಂಡೆ, ಅರ್ಥದಾರಿಗಳಾಗಿ ವಿದ್ವಾನ್ ಉಮಾಕಾಂತ ಭಟ್, ಜಬ್ಬಾರ್‌ಸಮೋ ಸಂಪಾಜೆ, ರಾಧಾಕೃಷ್ಣ ಕಲ್ಚಾರ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪಂ. ಗಣಪತಿ ಭಟ್ ಹಾಸಣಗಿ, ಕೆ ವಿ ಅಕ್ಷರ ಹೆಗ್ಗೋಡು, ವಿದ್ಯಾ ಹೆಗ್ಗೋಡು, ಪ್ರಮೋದ್ ಹೆಗಡೆ ಯಲ್ಲಾಪುರ, ಬಿ ಆರ್ ವೆಂಕಟರಮಣ ಐತಾಳ ಹೆಗ್ಗೋಡು, ಆರ್ ಜಿ ಭಟ್ಟ ಹಾಸಣಗಿ, ಡಾ.ರಾಜಪ್ಪ ದಳವಾಯಿ, ಹಬ್ಬು ಸಹೋದರು, ವಿ.ಎನ್. ಹೆಗಡೆ ಬೆದೆಹಕ್ಲು, ನಾರಾಯಣ ಯಾಜಿ ಉಪಸ್ಥಿತರಿರುವರು ಎಂದು ಅವರು ತಿಳಿಸಿದರು.

ಇದನ್ನೂ ಓದಿ: Karnataka Weather: ಇಂದು, ನಾಳೆ ಗುಡುಗು, ಮಿಂಚು ಸಹಿತ ಭಾರಿ ಮಳೆ; ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್

ಈ ಸಂದರ್ಭದಲ್ಲಿ ಅಭಿನಂದನಾ ಸಮಿತಿ ಸದಸ್ಯರು ಹಾಗೂ ಜಿ.ಟಿ. ಭಟ್ಟರ ಶಿಷ್ಯರಾದ ಎಂ.ಆರ್. ಹೆಗಡೆ ಕುಂಬ್ರಿಗುಡ್ಡೆ, ವಾಸೂಕಿ ಹೆಗಡೆ ಮಳಗಿಮನೆ, ಗಣೇಶ ರೋಕಡೆ ಮಂಚಿಕೇರಿ, ವಿಶ್ವನಾಥ ಬಾಮಣಕೊಪ್ಪ, ಜ್ಯೋತಿ ಭಟ್ಟ,ವಿದ್ಯಾ ಶರ್ಮಾ, ಡಾ.ಶೀಲಾ, ಶ್ರೀಪಾದ ಭಟ್ಟ ಇದ್ದರು.

Continue Reading

ರಾಯಚೂರು

Raichur News: 371 ಜೆ ಮೀಸಲಾತಿ ಮುಂದುವರಿಸದಂತೆ ಸಿಎಂಗೆ ಪತ್ರ ಬರೆದ ಎಚ್.ಕೆ. ಪಾಟೀಲ್ ವಜಾಗೆ ದಸಂಸ ಆಗ್ರಹ

Raichur News: ಕಲ್ಯಾಣ ಕರ್ನಾಟಕ ಭಾಗದ ಕಲಂ 371 (ಜೆ) ಮೀಸಲಾತಿ ಮುಂದುವರೆಸದಂತೆ ಸಿಎಂಗೆ ಪತ್ರ ಬರೆದು ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋಸ ಮಾಡುತ್ತಿರುವ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಲಿಂಗಸುಗೂರಿನಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡರು, ಎಸಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

VISTARANEWS.COM


on

Dalita Sangharsha samiti demands that Minister HK Patil should be dismissed from the Cabinet
Koo

ಲಿಂಗಸುಗೂರು: ಕಲ್ಯಾಣ ಕರ್ನಾಟಕ ಭಾಗದ ಕಲಂ 371 (ಜೆ) ಮೀಸಲಾತಿ ಮುಂದುವರೆಸದಂತೆ ಸಿಎಂಗೆ ಪತ್ರ ಬರೆದು ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋಸ ಮಾಡುತ್ತಿರುವ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ಮುಖಂಡರು, ಎಸಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ (Raichur News) ಸಲ್ಲಿಸಿದರು.

ಇದನ್ನೂ ಓದಿ: Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

ಕಲ್ಯಾಣ ಕರ್ನಾಟಕ ಪ್ರದೇಶದ ಸಾಮಾಜಿಕ, ಆರ್ಥಿಕ, ಔದ್ಯೋಗಿಕ ಅಸಮತೋಲನ ನಿವಾರಣೆಗೆ ಸಂವಿಧಾನದ ಕಲಂ 371 (ಜೆ) ಅನುಷ್ಠಾನಕ್ಕೆ ತರಲಾಗಿದೆ. ಆದರೆ ಕಲ್ಯಾಣ ಕರ್ನಾಟಕೇತರ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕೇಂದ್ರಿಕೃತ ದಾಖಲಾತಿ ಘಟಕ ಸಂಸ್ಥೆಗಳ ನೇಮಕಾತಿಯಲ್ಲಿ ಸಂವಿಧಾನದ ಕಲಂ 371 (ಜೆ) ದಡಿ ಮೀಸಲಾತಿ ಮುಂದುವರೆಸದಂತೆ ಸಚಿವ ಎಚ್.ಕೆ ಪಾಟೀಲ್‌, ಮುಖ್ಯಮಂತ್ರಿಗೆ ಪತ್ರ ಬರೆದಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 2024ರ ಜನವರಿ 22ರಂದು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಕೆಇಎ, ಸಿಎಸಿ ಸಂಸ್ಥೆ ಮೂಲಕ ನೇಮಕ ಮಾಡುವ ಇಲಾಖೆಗಳ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕೇತರ ಭಾಗದ 24 ಜಿಲ್ಲೆಗಳ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಬರೆದುಕೊಂಡಿರುವುದು ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾಡುತ್ತಿರುವ ಮಲತಾಯಿ ಧೋರಣೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ವಿವರಿಸಲಾಗಿದೆ.

ಸಂವಿಧಾನ ಕಲಂ 371 (ಜೆ) ರ ಅಡಿ ಸಿಗುವ ಸೌಲಭ್ಯಗಳನ್ನು ಯಥಾವತ್ತಾಗಿ ಮುಂದುವರೆಸಬೇಕು. ಅನ್ಯ ಜಿಲ್ಲೆ ಅಭ್ಯರ್ಥಿಗಳಿಗೆ ಅನ್ಯಾಯ ಆಗುವ ವಿಚಾರ ಮುಂದಿಟ್ಟು ಸರ್ಕಾರವನ್ನು ಬ್ಲಾಕ್‌ಮೇಲ್ ಮಾಡುತ್ತಿರುವ ಸಚಿವ ಎಚ್.ಕೆ ಪಾಟೀಲರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಇಲ್ಲವಾದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪ್ರತ್ಯೇಕ ರಾಜ್ಯದ ಹೋರಾಟ ರೂಪಿಸಲಾಗುವುದು. ಮಧ್ಯ ಪ್ರವೇಶಿಸಿ ಕಲ್ಯಾಣ ಕರ್ನಾಟಕ ಭಾಗಕ್ಕೆ ನ್ಯಾಯ ಒದಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಪ್ರಭುಲಿಂಗ ಮೇಗಳಮನಿ, ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: SBI Rates: ಎಸ್‌ಬಿಐನಲ್ಲಿ ಎಫ್‌ಡಿ ಇಟ್ಟವರಿಗೆ ಬಂಪರ್‌ ನ್ಯೂಸ್;‌ ಭಾರಿ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್!

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಯಲ್ಲಪ್ಪ ಹಾಲಭಾವಿ, ಅಕ್ರಂ ಪಾಶಾ, ಹುಸೇನಪ್ಪ ನಾಯಕ, ಸುನೀಲ್‌ಕುಮಾರ, ಹನುಮೇಶ ಕುಪ್ಪಿಗುಡ್ಡ, ಹಾಗೂ ಇನ್ನಿತರಿದ್ದರು.

Continue Reading
Advertisement
Mamata Banerjee
ಪ್ರಮುಖ ಸುದ್ದಿ1 hour ago

ಚುನಾವಣೆ ಫಲಿತಾಂಶಕ್ಕೆ ಮೊದಲೇ ಇಂಡಿಯಾ ಒಕ್ಕೂಟಕ್ಕೆ ದೀದಿ ಶಾಕ್; ಬಾಹ್ಯ ಬೆಂಬಲವಷ್ಟೇ ಎಂದು ಘೋಷಣೆ!

Bengaluru News
ಕರ್ನಾಟಕ1 hour ago

Bengaluru News: ಹಸುಗೂಸನ್ನು ರಸ್ತೆ ಬದಿ ಎಸೆದು ಹೋದ ಅನಾಮಿಕರು!

CAA
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಸಿಎಎ ಅನುಷ್ಠಾನ ಮೋದಿ ಸರ್ಕಾರದ ದಿಟ್ಟ ನಿರ್ಧಾರ

Amit Shah
ದೇಶ2 hours ago

Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

PBKS vs RR
ಕ್ರೀಡೆ2 hours ago

PBKS vs RR: ಸ್ಯಾಮ್‌ ಕರನ್‌ ಏಕಾಂಗಿ ಬ್ಯಾಟಿಂಗ್​ ಹೋರಾಟಕ್ಕೆ ತಲೆ ಬಾಗಿದ ರಾಜಸ್ಥಾನ್​

Anjali Murder Case
ಕ್ರೈಂ2 hours ago

Anjali Murder Case: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

Isha Ambani
ದೇಶ2 hours ago

Isha Ambani: ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಇಶಾ ಅಂಬಾನಿ

Retired Teacher G T Bhatt Bommanahalli 80th celebration programme on May 19
ಉತ್ತರ ಕನ್ನಡ2 hours ago

Uttara Kannada News: ಮೇ 19ರಂದು ನಿವೃತ್ತ ಶಿಕ್ಷಕ ಜಿ. ಟಿ. ಭಟ್ ಬೊಮ್ಮನಹಳ್ಳಿ 80ರ ಸಂಭ್ರಮ

Dalita Sangharsha samiti demands that Minister HK Patil should be dismissed from the Cabinet
ರಾಯಚೂರು2 hours ago

Raichur News: 371 ಜೆ ಮೀಸಲಾತಿ ಮುಂದುವರಿಸದಂತೆ ಸಿಎಂಗೆ ಪತ್ರ ಬರೆದ ಎಚ್.ಕೆ. ಪಾಟೀಲ್ ವಜಾಗೆ ದಸಂಸ ಆಗ್ರಹ

Sandeep Lamichhane
ಕ್ರೀಡೆ2 hours ago

Sandeep Lamichhane: ಅತ್ಯಾಚಾರ ಆರೋಪದಲ್ಲಿ 8 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕ್ರಿಕೆಟಿಗ ಲಮಿಚಾನೆಗೆ ರಿಲೀಫ್; ನಿರಪರಾಧಿ ಎಂದ ಕೋರ್ಟ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ17 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ20 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌