Neha Murder Case: ನೇಹಾ-ಫಯಾಜ್ ಪ್ರೀತಿಗೆ ನ್ಯಾಯ ಕೊಡಿಸಿ ಎಂದು ಪೋಸ್ಟ್ ಮಾಡಿದ ಇಬ್ಬರು ವಶಕ್ಕೆ - Vistara News

ಕರ್ನಾಟಕ

Neha Murder Case: ನೇಹಾ-ಫಯಾಜ್ ಪ್ರೀತಿಗೆ ನ್ಯಾಯ ಕೊಡಿಸಿ ಎಂದು ಪೋಸ್ಟ್ ಮಾಡಿದ ಇಬ್ಬರು ವಶಕ್ಕೆ

Neha Murder Case: ಇನ್ಸ್ಟಾಗ್ರಾಮ್‌ನಲ್ಲಿ ನೇಹಾ ಹಾಗೂ ಫಯಾಜ್ ಫೋಟೊ ಹಾಕಿ, “ನೇಹಾ-ಫಯಾಜ್ ಟ್ರು ಲವ್, ಜಸ್ಟೀಸ್ ಫಾರ್ ದಿ ಲವ್” ಎಂದು ಯುವಕರು ಪೋಸ್ಟ್ ಹಾಕಿದ್ದರು. ಹೀಗಾಗಿ ಧಾರವಾಡದಲ್ಲಿ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Neha murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಧಾರವಾಡ: ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣಕ್ಕೆ (Neha Murder Case) ಎಲ್ಲೆಡೆ ವ್ಯಾಪಕ ಆಕ್ರೋಶ ಕೇಳಿಬರುತ್ತಿರುವ ನಡುವೆ ಸಾಮಾಜಿಕ ಜಾಲತಾಣದಲ್ಲಿ ನೇಹಾ ಹಾಗೂ ಫಯಾಜ್ ಫೋಟೋ ಹಾಕಿ, ಜಸ್ಟೀಸ್ ಫಾರ್ ಲವ್ ಎಂದು ಪೋಸ್ಟ್ ಮಾಡಿದ ಇಬ್ಬರು ಯುವಕರನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.

ಇನ್ಸ್ಟಾಗ್ರಾಮ್‌ನಲ್ಲಿ ನೇಹಾ ಹಾಗೂ ಫಯಾಜ್ ಫೋಟೊ ಹಾಕಿ, “ನೇಹಾ-ಫಯಾಜ್ ಟ್ರು ಲವ್, ಜಸ್ಟೀಸ್ ಫಾರ್ ದಿ ಲವ್” ಎಂದು ಯುವಕರು ಪೋಸ್ಟ್ ಹಾಕಿದ್ದರು. ಹೀಗಾಗಿ ಫಯಾಜ್‌ ಕೃತ್ಯವನ್ನು ಸಮರ್ಥನೆ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ಯುವಕರನ್ನು ಹಿಂದುಪರ ಸಂಘಟನೆಗಳು ಪೊಲೀಸರಿಗೆ ಒಪ್ಪಿಸಿವೆ.

ಪೋಸ್ಟ್ ಹಾಕಿದ್ದ ಧಾರವಾಡದ ನಿವಾಸಿಗಳಾದ ಸಾದಿಕ್ ಇಮಾಮ್ ಸಾಬ್ ತಡಕೋಡ ಹಾಗೂ ಆದಿಲ್ ಎಂಬಾತನನ್ನು ವಿದ್ಯಾಗಿರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನೇಹಾಳನ್ನು ಮದುವೆ ಮಾಡಿಸುವಂತೆ ಆಕೆಯ ಹೆತ್ತವರ ಪ್ರಾಣ ತಿಂದಿದ್ದ ಫಯಾಜ್!‌

Neha Murder case JDS slams hands for defending love jihad to protect accused

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದಾರುಣವಾಗಿ (Hubli Murder Case) ಕೊಲೆಯಾದ ನೇಹಾ ಹಿರೇಮಠ (Neha Murder Case) ಅವರನ್ನು ತನಗೆ ಮದುವೆ ಮಾಡಿಕೊಡುವಂತೆ ಕೊಲೆಪಾತಕಿ ಫಯಾಜ್‌ (Fayaz) ಬಹು ದಿನಗಳಿಂದ ಆಕೆಯ ಹೆತ್ತವರನ್ನು ಪೀಡಿಸುತ್ತಿದ್ದ ಎಂಬ ವಿಚಾರ ಬಯಲಾಗಿದೆ. ನೇಹಾ ಹೆತ್ತವರು ನೀಡಿರುವ ದೂರಿನ ಕಾಪಿಯಲ್ಲಿ ಇದು ಉಲ್ಲೇಖವಾಗಿದೆ.

ಖುದ್ದು ಪೋಷಕರು ನೀಡಿರುವ ದೂರಿನಲ್ಲಿ ಈ ವಿಷಯ ಬಹಿರಂಗವಾಗಿದೆ. ನೇಹಾಳನ್ನು ಪ್ರೀತಿ ಮಾಡುತ್ತಿದ್ದೇನೆ. ತನಗೆ ಮದುವೆ ಮಾಡಿ ಕೊಡುವಂತೆ ನೇಹಾಳ ಪೋಷಕರಿಗೆ ಫಯಾಜ್‌ ಬೆನ್ನು ಬಿದ್ದಿದ್ದ. ನಾಲ್ಕೈದು ತಿಂಗಳಿಂದಲೂ ಮದುವೆಗಾಗಿ ಈತ ಪೀಡಿಸುತ್ತಿದ್ದ ಎಂದು ಗೊತ್ತಾಗಿದೆ.

ನಮ್ಮ ಮಗಳು ನಿನ್ನನ್ನು ಇಷ್ಟಪಟ್ಟಿಲ್ಲ ಎಂದು ಪೋಷಕರು ಹೇಳಿದ್ದರು. ಇನ್ನೂ ಹೆಚ್ಚಿನ ವ್ಯಾಸಂಗ ಮಾಡುವುದಿದೆ ಎಂದು ಫಯಾಜ್‌ನ ತಂದೆ, ತಾಯಿಗೆ ದೂರವಾಣಿ ಕರೆ ಮಾಡಿ ನೇಹಾ ಪೋಷಕರು ಹೇಳಿದ್ದರು. ಇಬ್ಬರ ಮತವೂ ಬೇರೆ ಆಗಿರುವುದರಿಂದಲೂ ಸಮಸ್ಯೆ ಉಂಟಾಗಬಹುದು ಎಂಬುದನ್ನು ಕೂಡ ಅವರ ಅರಿವಿಗೆ ತರಲಾಗಿತ್ತು. ಎಫ್‌ಐಆರ್‌ನಲ್ಲಿ ಈ ಬಗ್ಗೆ ವಿವರವಾದ ಉಲ್ಲೇಖವನ್ನು ನೇಹಾಳ ತಾಯಿ ಗೀತಾ ನೀಡಿದ್ದಾರೆ.

ಇಷ್ಟಾದರೂ ನಮ್ಮ ಮಗಳ ಬೆನ್ನು ಬಿದ್ದಿದ್ದ ಫಯಾಜ್, ನಾಲ್ಕೈದು ಬಾರಿ ಬೆದರಿಕೆ ಹಾಕಿದ್ದ. ಮದುವೆಯಾಗದಿದ್ದರೆ ನಿನ್ನನ್ನು ಜೀವಂತವಾಗಿ ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ ಎಂದು ನೇಹಾ ತಮ್ಮ ಗಮನಕ್ಕೆ ತಂದಿದ್ದಳು ಎಂದು ನೇಹಾಳ ಪೋಷಕರು ತಿಳಿಸಿದ್ದಾರೆ. ಆಗಲೇ ಬಹುಶಃ ಇದನ್ನು ಪೊಲೀಸರ ಗಮನಕ್ಕೆ ತಂದಿದ್ದರೆ ನೇಹಾ ಜೀವ ಉಳಿಯುತ್ತಿತ್ತೋ ಏನೋ ಎಂದು ಹೇಳಲಾಗುತ್ತಿದೆ.

“ತಪ್ಪು ಆಕೆಯಲ್ಲೂ ಇದೆ” ಎಂದ ಫಯಾಜ್‌ ತಾಯಿ

ಈ ನಡುವೆ, “ತಪ್ಪು ಆಕೆಯಲ್ಲೂ ಇದೆʼ ಎಂದು ಹೇಳಿರುವ ಆರೋಪಿ ಫಯಾಜ್‌ ತಾಯಿಯ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ವಿಸ್ತಾರ ನ್ಯೂಸ್‌ಗೆ ಹೇಳಿಕೆ ನೀಡಿರುವ ಫಯಾಜ್‌ ತಾಯಿ, ತಪ್ಪು ಒಬ್ಬರಿಂದ ಆಗಲು ಸಾಧ್ಯವೇ ಇಲ್ಲ. ತಪ್ಪು ಇಬ್ಬರಲ್ಲೂ ಇರುತ್ತೆ. ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಅದು ಹೇಗೆ ಒನ್ ಸೈಡ್ ಲವ್ ಆಗುತ್ತೆ?” ಎಂದು ಪ್ರಶ್ನಿಸಿದ್ದಾರೆ.

“ಸತ್ಯಾಸತ್ಯತೆ ಪರಿಶೀಲಿಸಿ, ಸಾಧಕ ಬಾಧಕ ನೋಡಿ ಅವನಿಗೆ ಶಿಕ್ಷೆ ನೀಡಬೇಕು. ಏನೇ ಶಿಕ್ಷೆ ಕೊಟ್ಟರೂ ಸಹ ನಾನು ಒಪ್ಪಿಕೊಳ್ಳುತ್ತೇನೆ. ಇಬ್ಬರೂ ಕ್ಲಾಸ್ ಮೇಟ್ ಆಗಿದ್ದವರು. ಮುಂದೆ ಅವರಲ್ಲಿ ಏನು ನಡೆಯಿತು ಅದು ಗೊತ್ತಿಲ್ಲ. ಪೋನ್‌ನಲ್ಲಿ ಅವಳ ಜೊತೆ ಮಾತನಾಡಿದ ಎಲ್ಲ ರೆಕಾರ್ಡ್‌ಗಳಿವೆ. ಇದರ ಮೇಲೆ ಕಾನೂನು ಯಾವ ರೀತಿ ಕ್ರಮ ಕೈಗೊಳ್ಳುತ್ತೋ ಅದು ತೆಗೆದುಕೊಳ್ಳಲಿ” ಎಂದಿದ್ದಾರೆ.

“ಇರುವೆಯನ್ನೂ ಸಹ ಸಾಯಿಸದ ಅವನಿಗೆ ಇಷ್ಟೊಂದು ಧೈರ್ಯ ಹೇಗೆ ಬಂತು ಅಂತ ನಮಗೆ ಗೊತ್ತಿಲ್ಲ. ಜಿಮ್ ಮಾಡಿ ಒಳ್ಳೆಯ ಬಾಡಿ ಇಟ್ಟುಕೊಂಡಿದ್ದ ಅವನು. ಅವಳ ಜೊತೆಗಿನ ಪ್ರೀತಿ ಸ್ನೇಹದಿಂದಲೇ ಅವನು ಡಿಪ್ರೆಶನ್‌ಗೆ ಹೋದ. ಊಟ ಸಹ ಸರಿಯಾಗಿ ಮಾಡುತ್ತಿರಲಿಲ್ಲ” ಎಂದಿದ್ದಾರೆ.

“ನಾವು ನೂರಾರು ಮಕ್ಕಳಿಗೆ ಶಿಕ್ಷಣ ಕೊಟ್ಟಿದ್ದೇವೆ. ಅವರು ತಪ್ಪು ಮಾಡಿದಾಗ ಹೊಡೆದು ಬುದ್ಧಿ ಹೇಳ್ತೀವಿ. ಆದ್ರೆ ನನ್ನ ಮಗನೇ ಈಗ ತಪ್ಪು ಮಾಡಿದ್ದಾನೆ, ಅದು ತಪ್ಪು ತಪ್ಪೇ. ಕಾನೂನು ಪ್ರಕಾರ ಏನು ಶಿಕ್ಷೆ ಆಗಬೇಕೋ ಅದು ಆಗಲಿ. ಘಟನೆ ನಡೆದು ಸಂಜೆ ಗೊತ್ತಾಗಿದೆ. ಎರಡು ದಿನದಿಂದ ನಂಗೆ ಕರೆ ಸಹ ಮಾಡಿಲ್ಲ ಅವನು. ಅವನ ತಪ್ಪಿಗೆ ಶಿಕ್ಷೆ ಆಗಲೇಬೇಕು, ಅದನ್ನು ಅವನು ಅನುಭವಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: Neha Murder Case: ನೇಹಾ ಹತ್ಯೆ: ಅಪರಾಧಿಗೆ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ

“ಐಎಎಸ್ ಆಫೀಸರ್ ಆಗುತ್ತಾನೆ ಅಂತ ನಾವು ಅಂದುಕೊಂಡಿದ್ದೆವು. ಒಬ್ಬನೇ ಮಗ ಎಂದು ಉತ್ತಮ ಶಿಕ್ಷಣ ಕೊಡಿಸಿದ್ದೆವು. ಅವನ ತಪ್ಪಿನಿಂದ ನಾವೆಲ್ಲರೂ ತಲೆ ತಗ್ಗಿಸುವಂತೆ ಆಗಿದೆ” ಎಂದು ಹೇಳಿದ್ದಾರೆ. ಆದರೆ ಅವರು ಫಯಾಜ್‌ ಕೃತ್ಯವನ್ನು ಸಮರ್ಥಿಸಿಕೊಂಡಂತೆ ಮಾತನಾಡಿರುವುದು ಹಾಗೂ ಈ ಕೃತ್ಯದಲ್ಲಿ ನೇಹಾ ಪಾಲೂ ಇದೆ ಎಂಬರ್ಥ ಬರುವಂತೆ ಮಾತನಾಡಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading
Advertisement
ಪ್ರಮುಖ ಸುದ್ದಿ4 hours ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest5 hours ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest2 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest2 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest2 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest3 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest3 days ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ3 days ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest3 days ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest3 days ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌