Annabhagya Scheme : ಶೀಘ್ರ ಹೊಸ ಪಡಿತರ ಕಾರ್ಡ್‌; ಯೆಲ್ಲೋ ಬೋರ್ಡ್‌ ಕಾರಿದ್ದವರಿಗೆ BPL: ಕೆ.ಎಚ್. ಮುನಿಯಪ್ಪ - Vistara News

ಕರ್ನಾಟಕ

Annabhagya Scheme : ಶೀಘ್ರ ಹೊಸ ಪಡಿತರ ಕಾರ್ಡ್‌; ಯೆಲ್ಲೋ ಬೋರ್ಡ್‌ ಕಾರಿದ್ದವರಿಗೆ BPL: ಕೆ.ಎಚ್. ಮುನಿಯಪ್ಪ

Annabhagya Scheme : ಹೊಸ ಪಡಿತರ ಕಾರ್ಡ್‌ ಪಡೆಯುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದೆ. ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಸಚಿವ ಕೆ.ಎಚ್.‌ ಮುನಿಯಪ್ಪ ಹೇಳಿದ್ದಾರೆ.

VISTARANEWS.COM


on

KH Muniyappa and Anna bhagya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ (Annabhagya Scheme) ಚಾಲನೆ ದೊರೆತು 25 ದಿನಗಳ ಅವಧಿಯಲ್ಲಿ 1 ಕೋಟಿ ಕುಟುಂಬಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ. ಹೊಸ ಪಡಿತರ ಚೀಟಿ (New Ration Card) ವಿತರಣೆಗೆ ಅಗತ್ಯ ಕ್ರಮ ಕೈಗೊಂಡಿದ್ದೇವೆ. ರೇಷನ್ ಕಾರ್ಡ್ ತಿದ್ದುಪಡಿ (Ration card correction), ರದ್ದತಿ, ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ. ಆದಷ್ಟು ಬೇಗ ಹಣದ ಬದಲಿಗೆ ಅಕ್ಕಿ ಕೊಡಲಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಕೆ.ಎಚ್. ಮುನಿಯಪ್ಪ, ಯೆಲ್ಲೊ ಬೋರ್ಡ್‌ ಕಾರು (Yellow Board Car) ಹೊಂದಿರುವವರಿಗೆ ಕಾರ್ಡ್ ರದ್ದು ಆಗಿದ್ದರೆ, ಪರಿಶೀಲಿಸಿ ವಾಪಸ್ ನೀಡುವ ಬಗ್ಗೆ ನಿರ್ಧಾರ ಮಾಡುತ್ತೇವೆ. ಯೆಲ್ಲೋ ಬೋರ್ಡ್ ಹೊಂದಿರುವವರು ಜೀವನಕ್ಕಾಗಿ ದುಡಿಯಲು ಕಾರ್ ತೆಗೆದುಕೊಂಡಿರುತ್ತಾರೆ. ಹೀಗಾಗಿ ಅವರ ಕಾರ್ಡ್ ರದ್ದು ಮಾಡೋದಿಲ್ಲ. ವೈಟ್ ಬೋರ್ಡ್ ಕಾರು (White board car) ಹೊಂದಿರುವವರ ಕಾರ್ಡ್ ರದ್ದು ಆದೇಶವನ್ನು ವಾಪಸ್ ಪಡೆಯುವುದಿಲ್ಲ ಎಂದು ಸಚಿವ ಮುನಿಯಪ್ಪ ಹೇಳಿದರು.

ಇದನ್ನೂ ಓದಿ: HD Kumaraswamy : ಕುಮಾರಸ್ವಾಮಿ ರಿಟರ್ನ್ಸ್‌ ವಿತ್‌ ಚಾರ್ಜ್‌ಶೀಟ್‌; ಸರ್ಕಾರದ ಮೇಲೆ ಮಿಡ್‌ನೈಟ್‌ ಪ್ರಹಾರ!

ಈ ಹಿನ್ನೆಲೆಯಲ್ಲಿ ಜುಲೈ ಅಂತ್ಯಕ್ಕೆ ಬಾಕಿ ಇರುವ 2,95,986 ಪಡಿತರ ಚೀಟಿ ವಿಲೇವಾರಿಗೆ ಕ್ರಮ ವಹಿಸಲಾಗಿದೆ. ಆಂಧ್ರ ಮಾದರಿಯಲ್ಲಿ ವೈದ್ಯಕೀಯ ಚಿಕಿತ್ಸೆ ಕಾರಣಕ್ಕೆ ಬಿ ಕಾರ್ಡ್ ಹಾಗೂ ಆಹಾರ ಪಡೆಯುವವರಿಗೆ ಎ ಕಾರ್ಡ್ ವಿತರಣೆ ಮಾಡಲಾಗುತ್ತದೆ. ತುರ್ತು ವೈಧ್ಯಕೀಯ ಕಾರಣಗಳಿಗೆ ಹೊಸ ಪಡಿತರ ಚೀಟಿ ನೀಡಿಕೆಗೆ ಅನುಮತಿ ಕೊಡಲಾಗಿದೆ ಎಂದು ತಿಳಿಸಿದರು.

3.50 ಕೋಟಿ ಫಲಾನುಭವಿಗಳಿಗೆ ಅನುಕೂಲ

ಅನ್ನಭಾಗ್ಯ ಯೋಜನೆಯು ಒಂದು ಕೋಟಿ ಫಲಾನುಭವಿಗಳನ್ನು ತಲುಪಿದೆ. ಒಂದು ತಿಂಗಳಾದರೂ ಪಡಿತರ ಪಡೆಯದೇ ಇರುವ ಫಲಾನುಭವಿಗಳ ಸಂಖ್ಯೆ 5,32,349 ಇದೆ. ಅಂತ್ಯೋದಯ ಅನ್ನ ಪಡಿತರ ಚೀಟಿದಾರರಲ್ಲಿ ಮೂರು ಸದಸ್ಯರಿಗಿಂತ ಕಡಿಮೆ ಇರುವ ಫಲಾನುಭವಿಗಳ ಸಂಖ್ಯೆ 3,40,425 ಇದೆ. ಇವರ ಖಾತೆ ಚಾಲ್ತಿಯಲ್ಲಿ ಇಲ್ಲದಿರುವ ಹಾಗೂ ಬ್ಯಾಂಕ್‌ ಖಾತೆಯೊಂದಿಗೆ ಆಧಾರ್ ಜೋಡಣೆಯಾಗದಿರುವ ಕಾರಣ ಇವರ ಕಾರ್ಡ್‌ಗಳು ಅನರ್ಹವಾಗಿ ಬದಲಾಗಿವೆ. ಅನರ್ಹ ಪಡಿತರ ಚೀಟಿಗಳು 19,27,226 ಆಗಿರುತ್ತದೆ. ರಾಜ್ಯದಲ್ಲಿ 1.28 ಕೋಟಿ ಪಡಿತರ ಚೀಟಿ ಕುಟುಂಬಗಳಲ್ಲಿ 442 ಕೋಟಿ ಫಲಾನುಭವಿಗಳಿದ್ದಾರೆ. ಇಲ್ಲಿವರೆಗೆ 1 ಕೋಟಿ ಕುಟುಂಬಗಳಿಗೆ ರೂ. 566.00 ಕೋಟಿ ಹಣವನ್ನು ಕುಟುಂಬದ ಮುಖ್ಯಸ್ಥರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗಿದೆ ಎಂದು ಸಚಿವ ಕೆ.ಎಚ್.‌ ಮುನಿಯಪ್ಪ ತಿಳಿಸಿದರು.

ಅರಿಯರ್ಸ್ ಹಾಕಲ್ಲ

28 ಲಕ್ಷ ಕಾರ್ಡ್‌ಗಳಿಗೆ ಹಿಂಬಾಕಿ (ಅರಿಯರ್ಸ್) ಹಣ ಹಾಕುವುದಿಲ್ಲ. ಅವರ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಆಗಬೇಕು. ಆದಾದ ಬಳಿಕ ಅವರ ಖಾತೆಗೆ ಹಣ ಹಾಕುತ್ತೇವೆ ಎಂದು ಸಚಿವ ಮುನಿಯಪ್ಪ ಸ್ಪಷ್ಟನೆ ನೀಡಿದರು.

ಅಕ್ಕಿ ಜತೆ ರಾಗಿ, ಜೋಳ ಕೊಡುವ ಪ್ಲ್ಯಾನ್

2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರಿಂದ ರಾಗಿ, ಜೋಳ ಖರೀದಿಗೆ ಸರ್ಕಾರ ನಿರ್ಧಾರ ಮಾಡಿದೆ. 8 ಲಕ್ಷ ಟನ್ ರಾಗಿ, 3 ಲಕ್ಷ ಜೋಳ ಖರೀದಿ ಮಾಡುತ್ತೇವೆ. ಅಕ್ಕಿ ಜತೆ ಜೋಳ, ರಾಗಿಯನ್ನು ಕೂಡ ಪಡಿತರದಲ್ಲಿ ಕೊಡುತ್ತೇವೆ ಎಂದು ಸಚಿವ ಮುನಿಯಪ್ಪ ಹೇಳಿದರು.

ಇದನ್ನೂ ಓದಿ: DK Shivakumar : ಡಿ.ಕೆ ಶಿವಕುಮಾರ್‌ಗೆ ಬಿಗ್‌ ರಿಲೀಫ್‌; ಹೈಕೋರ್ಟ್‌ ತೀರ್ಪು ಎತ್ತಿಹಿಡಿದ ಸುಪ್ರೀಂಕೋರ್ಟ್‌

ಬ್ಯಾಂಕ್ ಅಕೌಂಟ್ ಇಲ್ಲದ 28 ಲಕ್ಷ ಕಾರ್ಡ್‌ದಾರರು ಖಾತೆ ಮಾಡಿಸಬೇಕು. ಈ ತಿಂಗಳು ಹಣ ಪಡೆಯಲು ಅವರು ಅನರ್ಹರಾಗುತ್ತಾರೆ. ಅವರಿಗೆ ಈ ತಿಂಗಳ ಹಣ ಮುಂದಿನ ತಿಂಗಳು ಕೊಡಲ್ಲ. ಅಕೌಂಟ್ ಆದ ಮೇಲೆ ಆ ತಿಂಗಳಿಂದಲೇ ಹಣ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿತ್ರದುರ್ಗ

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ ರೈತರ ಬದುಕು!

Arecanut Cultivation: ಬೇಸಿಗೆಯಲ್ಲಿ ಹಲವೆಡೆ ಕುಡಿಯುವ ನೀರಿಲ್ಲದೆ ಜನ ಸಂಕಷ್ಟ ಎದುರಿಸುವಂತಾಗಿದೆ. ಮತ್ತೊಂದೆಡೆ ಮಳೆಯಿಲ್ಲದೆ ಅಡಿಕೆ ಸೇರಿ ವಿವಿಧ ರೀತಿಯ ಬೆಳೆಗಳು ಒಣಗುತ್ತಿದ್ದು, ಚಿತ್ರದುರ್ಗದ ಚಳ್ಳಕೆರೆ ತಾಲೂಕಿನಲ್ಲಿ ನೀರಿನ ಅಭಾವದಿಂದ ಅಡಿಕೆ ಮರಗಳು ಒಣಗುತ್ತಿವೆ. ಇದರಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ.

VISTARANEWS.COM


on

Arecanut cultivation
Koo

ಚಳ್ಳಕೆರೆ: ಬರಗಾಲಕ್ಕೆ ತುತ್ತಾದ ಚಳ್ಳಕೆರೆ ತಾಲೂಕಿನ ರೈತರಿಗೆ ಅನಿವಾರ್ಯವಾದದ್ದೇ ಅಡಿಕೆ ಬೆಳೆ (Arecanut Cultivation). ಸಾವಿರಾರು ಹೆಕ್ಟೇರ್​ನಲ್ಲಿ ಅಡಿಕೆ ಬೆಳೆದು ಬದುಕು ಸಾಗಿಸಲು ಕನಸು ಕಂಡಿದ್ದ ಬೆಳೆಗಾರರ ಬದುಕೀಗ ಬಿಸಿಲ ಬೇಗೆಗೆ ಸುಟ್ಟು ಕರಕಲಾಗಿದೆ. ಹಚ್ಚ- ಹಸಿರಿನಿಂದ ರಾರಾಜಿಸುತ್ತಿದ್ದ ಅಡಿಕೆ ಮರಗಳು ನೀರಿಲ್ಲದೇ ಒಣಗಿ ನಿಲ್ಲುತ್ತಿವೆ. ಬೋರ್​ವೆಲ್​ನಲ್ಲಿ ನೀರು ನಿಲ್ಲುತ್ತಿದ್ದಂತೆ ಮರಗಳು ಸುಡಲು ಆರಂಭಿಸಿವೆ. ಒಣಗುತ್ತಿರುವುದು ಮರಗಳಲ್ಲ. ನಮ್ಮ ಬದುಕು ಎಂದು ಬೆಳೆಗಾರರು ಕಂಗಾಲಾಗಿದ್ದಾರೆ.

ಅತ್ತ ಮಳೆ ಇಲ್ಲ. ಇತ್ತ ನೆಲದಲ್ಲಿ ನೀರಿಲ್ಲ. ಎಷ್ಟು ಬೋರ್ ಕೊರೆಯಿಸಿದರು. ನೀರು ಬರುತ್ತಿಲ್ಲ.
ಇನ್ನು ಒಂದು ತಿಂಗಳ ಕಾಲ ಭೂಮಿಗೆ ಮಳೆ ಬಾರದಿದ್ದರೆ ಅದೆಷ್ಟೋ ಅಡಿಕೆ ತೋಟಗಳು ಒಣಗಿ ಹೋಗುತ್ತವೆ ಎನ್ನುತ್ತಾರೆ ರೈತ ತಿಪ್ಪೇಸ್ವಾಮಿ.

ತಾಲೂಕಿನ ಕಾಪರಹಳ್ಳಿ ಗ್ರಾಮದ ಗುರುಸ್ವಾಮಿ ರೈತ ತಮ್ಮ ಜಮೀನಿನಲ್ಲಿ ಅಡಿಕೆ ಬೆಳೆಯನ್ನು ಬೆಳೆದಿದ್ದು, ಈಗ ಕೊಳವೆ ಬಾವಿಯಲ್ಲಿ ನೀರಿಲ್ಲದೆ ಅಡಿಕೆ ಬೆಳೆ ಸಂಪೂರ್ಣ ಒಣಗುತ್ತಿದೆ.

ವಿಸ್ತಾರ ಗ್ರಾಮ ದನಿ: ಅಡಿಕೆ ರೋಗಗಳಿಗೆ, ಇಳುವರಿ ಕ್ಷೀಣಿಸುವುದಕ್ಕೆ ಕಾರಣವೇ ಇದು! ಬೆಳೆಗಾರರೇ ಗಮನಿಸಿ…

Areca Agriculture
Aravind Sigadal
-ಅರವಿಂದ ಸಿಗದಾಳ್, ಮೇಲುಕೊಪ್ಪ

ಅಡಿಕೆ ಹಳದಿ ರೋಗಕ್ಕೆ ಕಾರಣ ಮತ್ತು ಔಷಧಿ (Areca Agriculture) ಎರಡೂ ಇನ್ನು ಪ್ರಶ್ನೆಯಾಗಿಯೇ ಉಳಿದಿವೆ. ಅಡಿಕೆ ಎಲೆ ಚುಕ್ಕಿ ರೋಗ ನಿರ್ದಿಷ್ಟ ಫಂಗಸ್‌ಗಳಿಂದ ಸಾಂಕ್ರಾಮಿಕವಾಗಿ ಹರಡುತ್ತಿರುವುದು ಕಾರಣ ಎಂದು ಗೊತ್ತಾಗಿದ್ದರೂ, ರೋಗಕ್ಕೆ ಇನ್ನೂ ಔಷಧಿಯನ್ನು ಕಂಡು ಹಿಡಿದಿಲ್ಲ. ಅನೇಕ ಫಂಗಿಸೈಡ್‌ಗಳನ್ನು ಪ್ರಯೋಗಿಸಿ ರೋಗದ ನಿಯಂತ್ರಣ ಪ್ರಯತ್ನ-ಪ್ರಯೋಗ ನೆಡೆಯುತ್ತಿದೆ. ರೋಗ ಬಂದ ಮೇಲೆ ಔಷಧಿ ಕೊಡುವ ಪ್ರಯತ್ನಗಳು ಸಹಜ ಮತ್ತು ಅಗತ್ಯ ಕೂಡ. ಅದರ ಜೊತೆಗೆ ರೋಗಗಳಿಗೆ ಕಾರಣವಾಗುವ ಮೂಲ ಯಾವುದು ಎಂಬ ಅಧ್ಯಯನ ಮತ್ತು ಪ್ರಯೋಗಗಳು ನಡೆಯಬೇಕು. ಆದರೆ ಅಡಿಕೆ ಹಳದಿ ರೋಗ ಮತ್ತು ಎಲೆಚುಕ್ಕಿ ರೋಗಗಳ ವಿಚಾರದಲ್ಲಿ ಈ ಕಾರಣ ಕಂಡುಹಿಡಿಯುವ ಅಧ್ಯಯನ ಮತ್ತು ಪ್ರಯೋಗಗಳು ತಳ ಮಟ್ಟದಿಂದ ತೀವ್ರಗತಿಯಲ್ಲಿ ನಡೆಯುತ್ತಿಲ್ಲ.

ಹವಾಮಾನ ವೈಪರೀತ್ಯ ಪರಿಣಾಮ, ಮಣ್ಣು-ನೀರು-ಗಾಳಿ-ಅಡಿಕೆ ಮರದ ಒಳ ಭಾಗದಲ್ಲಿ ಆಗುತ್ತಿರುವ pH ವ್ಯತ್ಯಾಸ, ಕ್ಷೀಣಿಸುತ್ತಿರುವ ಮಣ್ಣಿನ ಫಲವತ್ತತೆ, ಅದಕ್ಕೆ ಕಾರಣವಾಗುತ್ತಿರುವ ರಾಸಾಯನಿಕಗಳ ಬಳಕೆ, ಮಣ್ಣಿನ ಸಾವಯವ ಇಂಗಾಲದ ಕೊರತೆ, ಪ್ರತಿಯೊಂದು ರೋಗದ ಲಕ್ಷಣ ಕಂಡಾಗಲೂ ಬಳಸುತ್ತಿರುವ ಅತಿಯಾದ ವಿಷ ಪೂರಿತ ಔಷಧಿಗಳು, ಬಳಸುತ್ತಿರುವ ಕಳೆ ನಾಶಕಗಳು, ಹೆಚ್ಚು ಇಳುವರಿ ಬಯಕೆಯಿಂದ ಮಾಡುತ್ತಿರುವ ಬೇಸಾಯ ಪದ್ದತಿಗಳು, ಇವೆಲ್ಲವುಗಳಿಂದ ಆಗುತ್ತಿರುವ ಪರಿಣಾಮ ಇವತ್ತು ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಅಡಿಕೆಗೆ ರೋಗಗಳು ಹೆಚ್ಚುತ್ತಿವೆ. ಆರೋಗ್ಯವಂತ ಅಡಿಕೆ ತೋಟಗಳಲ್ಲಿ ಸಾಂಪ್ರದಾಯಕವಾಗಿ ಬೇಸಾಯ ಮಾಡುವಾಗ ಸರಾಸರಿ ಎಕರೆಗೆ 12 ಕ್ವಿಂಟಾಲ್ ಬರುತ್ತಿದ್ದ ಅಡಿಕೆ ಈಗ ಆರೋಗ್ಯವಿರುವಂತೆ ಕಾಣುವ ತೋಟದಲ್ಲೂ ಸರಾಸರಿ 7-8 ಕ್ವಿಂಟಾಲ್ ಮೇಲೆ ಬರುತ್ತಿಲ್ಲ. ಹಳದಿ ಎಲೆ ರೋಗ ಬಂದಲ್ಲಿ ಇಳುವರಿ 2-3 ಕ್ವಿಂಟಾಲಿಗೆ ಇಳಿದಿದೆ. ಹಳದಿ ರೋಗ, ಎಲೆ ಚುಕ್ಕಿ ರೋಗ ಎರಡೂ ಇರುವಲ್ಲಿ ಎಕರೆಗೆ ಕ್ವಿಂಟಾಲ್ ಇರಲಿ, 60-70 ಕೆಜಿ ಅಡಿಕೆಯೂ ಆಗುತ್ತಿಲ್ಲ!

Areca nuts image

ವಯಸ್ಸಾದಂತೆ ರೋಗ

ಹೇಗೆ ಮನುಷ್ಯರಲ್ಲಿ 35ನೇ ವಯಸ್ಸಿನಲ್ಲಿ ಬಿಪಿ, ಡಯಾಬಿಟಿಸ್, ಗ್ಯಾಸ್ಟಿಕ್‌ನಂತಹ ಶಾಶ್ವತ ರೋಗಗಳು ಬರುವಂತೆ ಅಡಿಕೆ ತೆಂಗು ಮರಗಳಿಗೂ, ಸಾಮರ್ಥ್ಯ ಕಮ್ಮಿಯಾಗುವ, ರೊಗಗಳಿಗೆ ಬಲಿಯಾಗುವ, ಇಳುವರಿ ಕಮ್ಮಿಯಾಗುವ ಸ್ಥಿತಿ ಉಂಟಾಗುತ್ತಿವೆ. ಕಡಿಮೆ ಇಳುವರಿಯ ಪರಿಸ್ಥಿತಿಗೆ ಹೊಂದಿಕೊಳ್ಳುವುದು ಅನಿವಾರ್ಯವಾಗುತ್ತಿದೆ. ಬಿಪಿ, ಡಯಾಬಿಟಿಸ್, ಗ್ಯಾಸ್ಟಿಕ್‌ನಂತೆ ಇಳುವರಿ ಕಡಿಮೆಯಾಗುವುದು ಶಾಶ್ವತ ಸಮಸ್ಯೆ ಆಗುತ್ತಿದೆ.
ಅತಿ ರಾಸಾಯನಿಕ ಬಳಕೆ, ಕೀಟನಾಶಕಗಳು, ಕ್ರಿಮಿನಾಶಕಗಳು, ರೋಗಗಳಿಗೆ ಕೊಡುತ್ತಿರುವ ರಾಸಾಯನಿಕ ಔಷಧಿಗಳು, ಕಡಿಮೆ ಆಗುತ್ತಿರುವ ಕೊಟ್ಟಿಗೆ ಗೊಬ್ಬರಗಳು, ಅವಜ್ಞಾನಿಕ ಕೃತಕ ಸಾವಯವ ಗೊಬ್ಬರ ಬಳಕೆಗಳ ನಡುವೆ ಸ್ವಾಭಾವಿಕವಾಗಿ ಉತ್ಪಾದನೆಗೊಳ್ಳುವ ಸಾವಯವ ಇಂಗಾಲದ ಕೊರತೆ ಅಡಿಕೆ ರೋಗಗಳಿಗೆ ಒಂದು ಪ್ರಮುಖ ಕಾರಣವಾಗಿದೆ.

Organic carbon

ಏನಿದು ಸಾವಯವ ಇಂಗಾಲ?

ಸರಳವಾಗಿ ಹೇಳುವುದಾದರೆ, ಪರಿಸರದಲ್ಲೇ ಇರುವ ಸಾವಯವ ವಸ್ತುಗಳು ಮತ್ತು ತ್ಯಾಜ್ಯಗಳು ಕೊಳೆಯುವುದರಿಂದ ಸಾವಯವ ಇಂಗಾಲ ಉತ್ಪತ್ತಿಯಾಗುತ್ತದೆ. ಮಣ್ಣಿನ ಫಲವತ್ತತೆ ಮತ್ತು ಗಿಡಗಳ ಬೆಳವಣಿಗೆಗೆ ಸಾವಯವ ಇಂಗಾಲ ಒಂದು ಪ್ರಮುಖ ಅಂಶ. ಗಿಡಗಳ ಆರೋಗ್ಯಕ್ಕೆ, ಉತ್ತಮ ಇಳುವರಿಗೆ, ಮಣ್ಣಿನ ಆರೋಗ್ಯಕ್ಕೆ ಈ ಸಾವಯವ ಇಂಗಾಲ ಅತ್ಯಗತ್ಯ. ಪರಿಸರದಲ್ಲಿ ಸಹಜವಾಗಿ ನೆಡೆಯುವ ರಾಸಾಯನಿಕ ಪ್ರಕ್ರಿಯೆಗಳಲ್ಲಿ ಈ ಸಾವಯವ ಇಂಗಾಲ ಉತ್ಪಾದನೆಯೂ ಒಂದು. ಮಣ್ಣಿನಲ್ಲಿ ತನ್ನಿಂದ ತಾನೆ ಉತ್ಪತ್ತಿಯಾಗುವ ಅನೇಕ ಜೀವಾಣುಗಳಿಗೆ ಆಹಾರವೂ ಈ ಸಾವಯವ ಇಂಗಾಲ. ಸಾವಯವ ಇಂಗಾಲಯುಕ್ತ ಮಣ್ಣು ಎಲ್ಲ ಸೂಕ್ಷ್ಮ ಜೀವಿಗಳಿಗೂ, ಎರೆಹುಳು, ಏಡಿಯಂತಹ ಜೀವಿಗಳಿಗೂ ಆಧಾರ. ಸಾವಯವ ಇಂಗಾಲದಿಂದ ಮಣ್ಣಿನಲ್ಲಿ ಸದಾ ತೇವದಿಂದ ಕೂಡಿದ ತಂಪಾದ ನೆಲೆ ಉಂಟಾಗುತ್ತದೆ. ಇದು ಅಗತ್ಯವಿರುವ ಎಲ್ಲ ಸೂಕ್ಷ್ಮ ಜೀವಿಗಳಿಗೆ ನೆಲೆ ಕೂಡ.

ಜೀವಾಣುಗಳಿಗೆ ದಾಹ

ನಮ್ಮ ಮಣ್ಣಿನಲ್ಲಿ ಕೋಟ್ಯಂತರ ಜೀವಾಣುಗಳಿವೆ. ಆದರೆ, ಸಾವಯವ ಪದ್ಧತಿ ಬಿಟ್ಟು ರಾಸಾಯನಿಕ ಬಳಕೆ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಈ ಜೀವಾಣುಗಳು ಹಸಿವು, ದಾಹದಿಂದ ಬಳಲುತ್ತಿವೆ. ಆಹಾರ, ನೀರು ಮತ್ತು ನೆರಳಿಲ್ಲದೆ ಒಣಗುತ್ತಿವೆ, ನಾಶವಾಗುತ್ತಿವೆ. ಮಣ್ಣಿನ ಇಂಗಾಲದ ಪ್ರಮಾಣ ಗಣನೀಯವಾಗಿ ಇಳಿಮುಖವಾಗುತ್ತಿವೆ.
ಮಣ್ಣು ಜೀವಿಗಳಿಗೆ ಸೂಕ್ತ ಆಹಾರ, ನೀರು ನೀಡಿ ಜೀವಿಗಳು ನೆಮ್ಮದಿಯಿಂದ ಬದುಕಿ, ಬೆಳೆಯಲು ಅಗತ್ಯವಿರುವ ವಾತಾವರಣವನ್ನು ಸೃಷ್ಟಿಸುವುದು ನಮ್ಮೆಲ್ಲರ, ಅದರಲ್ಲೂ ಮುಖ್ಯವಾಗಿ ಕೃಷಿಕರ ಮೂಲ ಗುರಿಯಾಗಬೇಕು. ನೆಲದ ಮೇಲಿರುವ ನಮಗೆಲ್ಲರಿಗೂ ನೆಲದೊಳಗಿನ ಈ ಜೀವಿಗಳೇ ಆಧಾರ. ಇವಿಲ್ಲದೆ ನಾವಿಲ್ಲ. ಪೌಶ್ಟಿಕ ಆಹಾರ ಮತ್ತು ತಂಪಾದ ನೆಲೆಯನ್ನಷ್ಟೇ ಮಣ್ಣಿನ ಜೀವಾಣುಗಳು ನಮ್ಮಿಂದ ನಿರೀಕ್ಷಿಸುವುದು. ಈ ಮಣ್ಣುಜೀವಿಗಳು ಬದುಕುಳಿಯಲು ಸಮೃದ್ಧ ಆಹಾರ ಕೊಡಬೇಕು. ಎರೆಹುಳು ಮತ್ತಿತರ ಮಣ್ಣು ಜೀವಿಗಳಿಗೆ ಸಾವಯವ ಗೊಬ್ಬರವೇ ಉತ್ತಮ ಆಹಾರ. ಮಣ್ಣಲ್ಲಿ ಕೊಳೆತು ಕಳಿಯುವ ಈ ಗೊಬ್ಬರ ಮಣ್ಣುಜೀವಿಗಳಿಗೆ ಮೃಷ್ಟಾನ್ನದಂತೆ. ಬಳಿಕ ಇದುವೇ ನಮ್ಮ ನಿಮ್ಮೆಲ್ಲರ ಬೆಳೆಗಳನ್ನು ಕಾಯುವ, ಕಾಪಾಡುವ ಸಮೃದ್ಧ ಇಂಗಾಲವಾಗಿ ಮಾರ್ಪಡುತ್ತದೆ. ಈ ಇಂಗಾಲದಿಂದ ಮಣ್ಣು ಜೀವಿಗಳು ಬದುಕುಳಿಯಲು ಪೂರಕ ವಾತಾವರಣ ಸೃಷ್ಟಿಯಾಗುತ್ತದೆ. 
ಸಾವಯವ ಗೊಬ್ಬರವನ್ನು ತಿಂದು ಬದುಕುವ ಜೀವಿಗಳು ಕ್ರಮೇಣ ಗೊಬ್ಬರವನ್ನು ಗಿಡದ ಬೆಳವಣಿಗೆಗೆ ಅತ್ಯಗತ್ಯವಾದ ಪೋಷಕಾಂಶಗಳಾಗಿ ಪರಿವರ್ತಿಸುತ್ತವೆ. ಈ ವೇಳೆ ಮಣ್ಣಿನ ಮೇಲ್ಪದರದಲ್ಲಿ ಹ್ಯೂಮಸ್ ರೂಪುಗೊಳ್ಳುತ್ತದೆ. ಈ ಹ್ಯೂಮಸ್ ಮಣ್ಣಿನಲ್ಲಿ ಇಂಗಾಲದ ಅಂಶವನ್ನು ಹಿಡಿದಿಟ್ಟುಕೊಳ್ಳುತ್ತದೆ. ನಮ್ಮ ಮಣ್ಣುಗಳಲ್ಲಿ ಇಂಗಾಲಾಂಶ ಹೆಚ್ಚಾದಾಗ, ನಮ್ಮ ಹೊಲ ತೋಟಗಳು ಸಕಲ ಪೋಷಕಾಂಶಗಳನ್ನೂ ಒಳಗೊಂಡ ಶಕ್ತಿಕೇಂದ್ರಗಳಾಗುತ್ತವೆ.
ದರಗು, ಸೊಪ್ಪು, ಕತ್ತರಿಸಿ ಅಲ್ಲೇ ಬಿಟ್ಟ ಕಳೆ, ಹಳೇ ಅಡಿಕೆ ಮರ, ಕಸಿ ಮಾಡಿದ ಇತರೆ ಮರ-ರೆಂಬೆ-ಕೊಂಬೆಗಳು ಮಣ್ಣಿನಲ್ಲಿ ಕೊಳೆತು, ಮಣ್ಣುಸ್ನೇಹಿ ಜೀವಾಣುಗಳು ಅದನ್ನು ಸೇವಿಸಿ, ಜೀರ್ಣಿಸಿಕೊಂಡು ವಿಸರ್ಜಿಸಿದಾಗ ಮಣ್ಣಿನಲ್ಲಿ ಇಂಗಾಲ ಸೇರಿಸಿಕೊಳ್ಳುತ್ತದೆ.

Soil carbon

ಮಣ್ಣಿನ ಇಂಗಾಲದ ಪ್ರಯೋಜನಗಳೇನು?

ಮುಖ್ಯವಾಗಿ ಇಂಗಾಲದ ಅಂಶ ಹೆಚ್ಚಾಗಿರುವ ಮಣ್ಣುಗಳಲ್ಲಿ ಇಳುವರಿಯಲ್ಲಿ ಸುಧಾರಣೆ ಕಾಣಬಹುದು. ಇಂಗಾಲ ಹೆಚ್ಚಾದರೆ, ಹೆಚ್ಚು ಪ್ರಮಾಣದಲ್ಲಿ ನೀರನ್ನು, ಪೋಷಕಾಂಶಗಳನ್ನು ಹಿಡಿದಿಡುವ ಸಾಮರ್ಥ್ಯ ಮಣ್ಣಿಗೆ ಬರುತ್ತದೆ. ಜೊತೆಗೆ ಗಿಡಗಳಿಗೆ ಅಗತ್ಯವಿದ್ದಾಗ ಮಾತ್ರ ಅವು ಬಳಕೆಯಾಗುತ್ತದೆ. ಈ ಮೂಲಕ ಬಿಸಿಲು ಹೆಚ್ಚಿದ್ದಾಗಲೂ ಸಹ ಗಿಡಗಳಿಗೆ ಅಗತ್ಯ ತೇವಾಂಶ ಮತ್ತು ಪೋಷಕಾಂಶಗಳು ಸಿಗುತ್ತವೆ. ಮಣ್ಣಲ್ಲಿನ ಸಾವಯವ ಇಂಗಾಲದ ಅಂಶ ಮಣ್ಣಿನ ರಸಸಾರವನ್ನು ಸಮತೋಲನದಲ್ಲಿ ಇರಿಸುತ್ತದೆ. ಮಣ್ಣಿನ pH ಸಮತೋಲನ ಅಡಿಕೆ, ತೆಂಗು ಮತ್ತು ಎಲ್ಲ ರೀತಿಯ ಸಸ್ಯ, ಮರಗಳ ಸರ್ವತೋಮುಖ ಬೆಳವಣಿಗೆಗೆ, ಅಧಿಕ ಇಳುವರಿಗೆ ಪ್ರಮುಖ ಅಂಶವಾಗುತ್ತದೆ. ಇಂಗಾಲದ ಅಂಶವಿರುವ ಮಣ್ಣು ಇತರೆ ಮಣ್ಣುಗಳಿಗಿಂತ ಫಲವತ್ತಾಗಿರುತ್ತದೆ. ಸಾವಯವ ಇಂಗಾಲದ ಅಂಶ ಇರುವ ಮಣ್ಣಿನಲ್ಲಿ ಅತಿ ಮಳೆ ಆದಾಗ ಉಂಟಾಗಬಹುದಾದ ಮಣ್ಣು ಸವಕಳಿಯನ್ನು ತಪ್ಪಿಸುತ್ತದೆ. ಮಣ್ಣಲ್ಲಿನ ಸಾವಯವ ವಸ್ತುವೇ ಪ್ರಧಾನ ಅಂಶವಾಗಿದ್ದು, ಇದರಿಂದ ಮಣ್ಣಲ್ಲಿ ಹೆಚ್ಚಾಗುವ ಮಣ್ಣು ಜೀವಿಗಳು ಮಾಲಿನ್ಯಕಾರಕ ವಸ್ತುಗಳನ್ನು ಹೀರಿ ಮಣ್ಣಿನ ವಾತಾವರಣವನ್ನು ಶುದ್ಧಗೊಳಿಸುತ್ತವೆ.

(ಕೆಲವು ಹಿರಿಯ ಅಡಿಕೆ ಬೆಳೆಗಾರರ ಅಭಿಪ್ರಾಯ, ಅಂತರ್ಜಾಲದಲ್ಲಿ ಸಿಕ್ಕಿದ ವಿವಿಧ ಮಾಹಿತಿಗಳು ಮತ್ತು ಎಲ್ಲಕ್ಕಿಂತ ಮುಖ್ಯವಾಗಿ ಈ ಲೇಖಕ ಮಾಡುತ್ತಿರುವ ಸಣ್ಣ ಮಟ್ಟದ ಪ್ರಾಯೋಗಿಕ ಅನುಭವಗಳ ಪಲಿತಾಂಶಗಳನ್ನು ಆಧರಿಸಿ ಸಂಕ್ಷೇಪಿಸಿ ಈ ಮಾಹಿತಿ ಬರಹ ಸಿದ್ಧಪಡಿಸಲಾಗಿದೆ. ಸಣ್ಣ ಮಟ್ಟದ ಪ್ರಾಯೋಗಿಕ ಅನುಭವ ಎಂದರೆ, ಕಳೆದ ಆರೇಳು ವರ್ಷಗಳಿಂದ ದರಗು, ಹಳು ಸೌರಿದ ತ್ಯಾಜ್ಯ, ಕೊನಮಟ್ಟೆ, ಒಣಗಿದ ಅಡಿಕೆ ಸಿಪ್ಪೆ, ಬಿದ್ದು ಹೋದ ಅಡಿಕೆ ಮರಗಳು, ಕಡಿದ ಕಾಫಿ-ಬಾಳೆ ಗಿಡಗಳ ತ್ಯಾಜ್ಯ, ಬೇಲಿ ಸೌರಿದ ತ್ಯಾಜ್ಯ, ಅಡಿಕೆ ಒಲೆ ಬೂದಿ, ಅಡಿಗೆ ಮನೆಯಲ್ಲಿ ಸೃಷ್ಟಿಗೊಂಡ ಹಸಿರು ತ್ಯಾಜ್ಯ, ಮೆಣಸಿನ ಕಾಳು ಬಿಡಿಸಿದ ಕರೆ….ಎಲ್ಲವನ್ನೂ ಅಡಿಕೆ ತೋಟಕ್ಕೆ ವಾಪಾಸ್ ಬಡಿಸಲಾಗುತ್ತಿದೆ! ಇದುವರೆಗೆ ಕಳೆ ನಾಶಕ ಬಳಸಿಲ್ಲ. ತೋಟಕ್ಕೆ ಬರುವವರು ಖಾಲಿ ಗುಟ್ಕಾ ಪ್ಲಾಸ್ಟಿಕ್ ಪೌಚ್‌ನ್ನೂ ಹಾಕದಂತೆ ಪ್ಲಾಸ್ಟಿಕ್ ತ್ಯಾಜ್ಯ ನಿರ್ಬಂಧಗೊಳಿಸಲಾಗಿದೆ.)

Areca nuts image

ಕಾಫಿ ಸಿಪ್ಪೆ ಬಳಕೆ

ಇತ್ತೀಚೆಗೆ ಕೊಪ್ಪದ ಜೋಗಿಸರ ಸೂರ್ಯನಾರಾಯಣರವರು ಕಾಫಿ ಸಿಪ್ಪೆಯನ್ನೂ ಸಾವಯವ ಕಾರ್ಬನ್ ಹೆಚ್ಚಿಸಲು ಬಳಸಬಹುದು ಅಂತ ಪ್ರಾಯೋಗಿಕ ಅಧ್ಯಯನ ಮಾಡಿ ಸಲಹೆ ಕೊಟ್ಟಿದ್ದಾರೆ. ಅಡಿಕೆ ತ್ಯಾಜ್ಯ ವಸ್ತುಗಳ ಮರು ಬಳಕೆಯಿಂದ 30% ನಷ್ಟು NPK, ಇತರೆ ಪೋಷಕಾಂಶಗಳನ್ನು ಮತ್ತು ಹೆಚ್ಚಿನ ಇಂಗಾಲವನ್ನು ಉಚಿತವಾಗಿ ಪಡೆಯಬಹುದು ಎಂದು ಕೃಷಿ ವಿಜ್ಞಾನಿಗಳು ನಿರೂಪಿಸಿದ್ದಾರೆ. ಉಳಿದಂತೆ ಮಣ್ಣಿನಲ್ಲಿ ಸಾವಯವ ಇಂಗಾಲ ಹೆಚ್ಚಿಸಲು ಅನೇಕ ಕ್ರಮಗಳಿವೆ. ಸಾಂಪ್ರದಾಯಿಕ ಕೊಟ್ಟಿಗೆ ಗೊಬ್ಬರ, ಕಬ್ಬಿನ ಸಿಪ್ಪೆ, ತೆಂಗಿನ ನಾರುಗಳಿಂದ ತಯಾರಿಸುತ್ತಿರುವ ಪ್ರೆಸ್ ಮಡ್ ಗೊಬ್ಬರಗಳ ಬಳಕೆಯಿಂದಲೂ ಮಣ್ಣಿನ ಇಂಗಾಲದ ಅಂಶವನ್ನು ಹೆಚ್ಚಿಸಬಹುದು. (ಈಗ ಮಾರ್ಕೇಟ್‌ನಲ್ಲಿ ಮಸಾಲೆ ದೋಸೆಯಂತೆ ಅತಿ ಬೇಡಿಕೆ ಮತ್ತು ಪೂರೈಕೆಯಾಗುತ್ತಿರುವ , ಪ್ರೆಸ್ ಮಡ್ ಗೊಬ್ಬರಗಳನ್ನು ಹೆಚ್ಚಾಗಿ ಅವೈಜ್ಞಾನಿಕವಾಗಿ ತಯಾರಾಗುತ್ತಿದೆ!! ಬಳಸುವಾಗ ಇಲ್ಲೊಂದು ಜಾಗ್ರತೆ ಬೇಕು. ಇದರ ಬಗ್ಗೆ ಮುಂದಿನ ಸಂಚಿಕೆಯೊಂದರಲ್ಲಿ ನೋಡೋಣ)
ಅಂದ ಹಾಗೆ, ಅಡಿಕೆ ತೋಟದಲ್ಲಿ ಸಾವಯವ ಇಂಗಾಲದ ಪ್ರಮಾಣ 0.75% ಗಿಂತ ಹೆಚ್ಚಿರಬೇಕು. ಇಂಗಾಲದ ಪ್ರಮಾಣ 1% – 2% ಇದ್ದರೆ ಅಡಿಕೆ ಇಳುವರಿಗೆ ಮತ್ತು ರೋಗಗಳ ನಿಂತ್ರಣಕ್ಕೆ ಹೆಚ್ಚು ಸಹಕಾರಿ. ಕನಿಷ್ಟಪಕ್ಷ ಮೂರು ವರ್ಷಗಳಿಗೆ ಒಮ್ಮೆಯಾದರೂ ಮಣ್ಣು ಪರೀಕ್ಷೆ ಮಾಡಿ, ನಮ್ಮ ತೋಟದ ಇಂಗಾಲದ ಪ್ರಮಾಣವನ್ನು ತಿಳಿದುಕೊಳ್ಳುವುದು ಒಳ್ಳೆಯದು.
ಅಂಕಿ ಅಂಶಗಳ ಮಾಹಿತಿ ಪ್ರಕಾರ ಕರ್ನಾಟಕದ ಮಣ್ಣಿನ ಸರಾಸರಿ ಸಾವಯವ ಇಂಗಾಲದ ಪ್ರಮಾಣ 0.25% to 0.50% ಇದೆ. ಇರಬೇಕಾಗಿದ್ದು ಕನಿಷ್ಠ 0.75%!!!.

ಇದನ್ನೂ ಓದಿ | Areca Price: ಅಡಿಕೆ ದರ ಗಗನಮುಖಿ; ಚುನಾವಣೆ ಬಳಿಕ ಮತ್ತಷ್ಟು ಏರಿಕೆ?

ಹಾಗಾದರೆ, ಮಣ್ಣಿನಲ್ಲಿ ಸಾವಯವ ಇಂಗಾಲ ಕಡಿಮೆ ಆಗುವುದು ಹೇಗೆ?

ಮುಖ್ಯವಾಗಿ, ತೋಟ-ಗದ್ದೆಗಳಲ್ಲಿ ಬೆಳೆದು ಹೊರಗೆ ತರುವ ಉತ್ಪನ್ನಗಳಿಂದಲೇ ಬಹುತೇಕ ಸಾವಯವ ಇಂಗಾಲ ನಮ್ಮ ಜಮೀನಿನಿಂದ ಹೊರ ಹೋಗುತ್ತವೆ. ಕೃಷಿ ಭೂಮಿಯಲ್ಲಿ ಸೃಷ್ಟಿಯಾಗುವ ವೇಸ್ಟ್‌ನ್ನು (ಕಬ್ಬಿನ ಜಲ್ಲೆ, ಕಳೆ, ಉತ್ಪನ್ನಗಳ ಸಿಪ್ಪೆ) ಕೃಷಿ ಭೂಮಿಯಿಂದ ಹೊರ ಸಾಗಿಸುವಿದರಿಂದ ಮಣ್ಣಿನ ಇಂಗಾಲ ಕಡಿಮೆಯಾಗುತ್ತದೆ. ಇನ್ನುಳಿದಂತೆ, ಉಷ್ಣತೆ ಏರಿಕೆಯಿಂದಲೂ ಮಣ್ಣಿನ ಕಾರ್ಬನ್ ಕಡಿಮೆ ಆಗುತ್ತದೆ. ಅತಿಯಾದ ಕೆಮಿಕಲ್ ಬಳಸುವಿಕೆಯಿಂದಲೂ ಇಂಗಾಲ ಕಡಿಮೆಯಾಗುತ್ತಿದೆ.
ನಗರ ಪ್ರದೇಶದ ವಾತಾವರಣದಲ್ಲಿ ಇಂಗಾಲದ ಪ್ರಮಾಣ ಹೆಚ್ಚಾಗುತ್ತಿರುವುದು ಸಮಸ್ಯೆಯಾದರೆ, ಗ್ರಾಮೀಣ ಕೃಷಿ ಭೂಮಿಯಲ್ಲಿ ಇಂಗಾಲದ ಪ್ರಮಾಣ ಕಡಿಮೆ ಆಗುತ್ತಿರುವುದು ಸಮಸ್ಯೆ! ಎರಡೂ ಮನುಷ್ಯನ ಬದುಕಿಗೆ ಮಾರಕ. ಆದರೆ, ಅದೇ ಆಗ್ತಾ ಇದೆ!
ಕೃಷಿ ಭೂಮಿಯಲ್ಲಿ ಇಂಗಾಲದ ಪ್ರಮಾಣ ಹೆಚ್ಚಿಸಲು ಗಂಭೀರ ಚಿಂತನೆ ಮತ್ತು ಅನುಷ್ಠಾನಕ್ಕೆ ರೈತರು ಮುಂದಾಗಬೇಕು.
ಪ್ರಯತ್ನ ಮಾಡೋಣ….

Continue Reading

ಕರ್ನಾಟಕ

PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

PUC Exam 2024: ಪಿಯುಸಿ ಎರಡನೇ ವಾರ್ಷಿಕ ಪರೀಕ್ಷೆಯನ್ನು ಬರೆಯಲು ರಾಜ್ಯಾದ್ಯಂತ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 84,933 ವಿದ್ಯಾರ್ಥಿಗಳು ಹಾಗೂ 64,367 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು, 32,848 ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಮಂಡಳಿಯು ಸಕಲ ಸಿದ್ಧತೆ ಮಾಡಿಕೊಂಡಿದೆ.

VISTARANEWS.COM


on

PUC Exam 2024
Koo

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು (KSEAB) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 (PUC Exam 2024) ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು, ಅವಶ್ಯಕತೆ ಇರುವ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಇನ್ನು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಸ್‌ ಸಂಚಾರ ಸೇವೆಯು ಉಚಿತವಾಗಿ ಸಿಗಲಿದೆ.

ರಾಜ್ಯಾದ್ಯಂತ 301 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಂಡಳಿಯು ನಾಳೆಯಿಂದ ಪ್ರಾರಂಭವಾಗಿ ಮೇ 16ರವರೆಗೂ ಈ ಪರೀಕ್ಷೆ ನಡೆಸಲಿದೆ. ದ್ವಿತೀಯ ಪಿಯುಸಿ ಮೊದಲ ವಾರ್ಷಿಕ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಎರಡನೇ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ. ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಅನುತ್ತೀರ್ಣರಾದ ಕೆಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

SSLC exam

1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಎರಡನೇ ವಾರ್ಷಿಕ ಪರೀಕ್ಷೆಯನ್ನು ಬರೆಯಲು ರಾಜ್ಯಾದ್ಯಂತ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 84,933 ವಿದ್ಯಾರ್ಥಿಗಳು ಹಾಗೂ 64,367 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು, 32,848 ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಮಂಡಳಿಯು ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.

ಮೇ 9 ರಂದು ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ, ಮೇ 11 ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಮೇ 13 ರಂದು ಅರ್ಥಶಾಸ್ತ್ರ, ಮೇ 14 ರಂದು ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ, ಮೇ 15 ರಂದು ಹಿಂದಿ ಪರೀಕ್ಷೆಗಳು ನಡೆಯಲಿವೆ. ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌ ಭಾಷಾ ಪರೀಕ್ಷೆಗಳು ಮೇ 16 ರಂದು ಬೆಳಗಿನ ಅವಧಿಯಲ್ಲಿ ನಡೆಯಲಿವೆ.

ಇತರೆ ಕಲಾ ಮತ್ತು ಕೌಶಲ ವಿಭಾಗಕ್ಕೆ ಸಂಬಂಧಪಟ್ಟ ವಿಷಯಗಳಾದ ಹಿಂದುಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೋಮೊಬೈಲ್‌, ಬ್ಯೂಟಿ ಅಂಡ್‌ ವೆಲ್‌ನೆಸ್‌ ಪರೀಕ್ಷೆಗಳು ಮಧ್ಯಾಹ್ನ 2.15 ರಿಂದ ಸಂಜೆ 4.30 ರವರೆಗೆ ನಡೆಯಲಿವೆ. ಆದರೆ, ದ್ವಿತೀಯ ಪಿಯುಸಿ ಪರೀಕ್ಷೆ 2 ನಡೆಯುತ್ತಿರುವುದರಿಂದ ಸಿಇಟಿ ಬರೆಯುವ ಮಕ್ಕಳಿಗೆ ತೊಂದರೆಯಾಗುತ್ತಿದೆ. ಇದರಿಂದ ಮಕ್ಕಳು ಗೊಂದಲಕ್ಕೀಡಾಗಿದ್ದಾರೆ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೆಕ್ಷನ್‌ 144 ಜಾರಿ

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪರೀಕ್ಷೆಯು ದ್ವಿತೀಯ ಪಿಯುಸಿ ಪರೀಕ್ಷೆ ನಡೆದ ಮಾದರಿಯಲ್ಲೇ ನಡೆಯಲಿದೆ. ಆದರೆ ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಮೆರಾ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

Continue Reading

ದಾವಣಗೆರೆ

Lehar Singh Siroya: ಹರಿಹರದ ಪಂಚಮಸಾಲಿ ಜಗದ್ಗುರು ಪೀಠಕ್ಕೆ ರಾಜ್ಯಸಭಾ ಸದಸ್ಯ ಲೆಹರ್​ಸಿಂಗ್ ಭೇಟಿ

Lehar Singh Siroya: ಬಿಜೆಪಿ ಹೈಕಮಾಂಡ್​ ಪ್ರತಿನಿಧಿಯಾಗಿ ಲೆಹರ್​ಸಿಂಗ್ ಅವರು ಹಲವು ವಿಚಾರಗಳನ್ನು ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಶ್ರೀಗಳ ಜತೆ ​ ಚರ್ಚಿಸಿದ್ದಾರೆ.

VISTARANEWS.COM


on

lehar singh siroya
Koo

ಹರಿಹರ: ಬಿಜೆಪಿಯ ರಾಜ್ಯಸಭಾ ಸದಸ್ಯ ಲೆಹರ್​ಸಿಂಗ್ ಅವರು​ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭಾನುವಾರ ಭೇಟಿ ನೀಡಿ ಜಗದ್ಗುರುಗಳಾದ ಶ್ರೀ ವಚನಾನಂದ ಸ್ವಾಮೀಜಿ ಅವರ ಜೊತೆ ಚರ್ಚೆ ನಡೆಸಿದರು. ಬಿಜೆಪಿ ಹೈಕಮಾಂಡ್​ ಪ್ರತಿನಿಧಿಯಾಗಿ ಹಲವಾರು ವಿಚಾರಗಳನ್ನು ಶ್ರೀಗಳ ಜತೆ ಲೆಹರ್​ಸಿಂಗ್ (Lehar Singh Siroya) ಅವರು​ ಚರ್ಚಿಸಿದರು.

ಈ ವೇಳೆ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್​ ಅಗರವಾಲ್ ಅವರು ಜಗದ್ಗುರುಗಳವರ ಜತೆ ದೂರವಾಣಿಯಲ್ಲಿ ಮಾತನಾಡಿದರು. ಅಲ್ಲದೇ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಕೂಡ ಜಗದ್ಗುರುಗಳವರ ಜತೆ ಚರ್ಚೆ ನಡೆಸಿದರು.

ರಾಧಾಮೋಹನ್​ ಅಗರವಾಲ್ ಹಾಗೂ ದೇವೇಂದ್ರ ಫಡ್ನವೀಸ್​ ಅವರ ಜೊತೆಗಿನ ದೂರವಾಣಿ ಚರ್ಚೆಯ ವೇಳೆ ಶ್ರೀಗಳು, ಬಿಜೆಪಿ ಪಕ್ಷದಿಂದ ಪಂಚಮಸಾಲಿ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡುವಲ್ಲಿ ಆಗಿರುವ ಅನ್ಯಾಯವನ್ನು ಪ್ರಬಲವಾಗಿ ಪ್ರಸ್ತಾಪ ಮಾಡಿದ್ದಾರೆ. ಇದನ್ನು ಮನಗಂಡಿರುವ ಬಿಜೆಪಿ ವರಿಷ್ಠರು, ಮುಂಬರುವ ದಿನಗಳಲ್ಲಿ ಜನಪ್ರತಿನಿಧಿಗಳ ಆಯ್ಕೆ ಹಾಗೂ ಪಕ್ಷದ ಹುದ್ದೆಗಳನ್ನು ನೀಡುವಲ್ಲಿ ನಮ್ಮ ಪಂಚಮಸಾಲಿ ಸಮುದಾಯವನ್ನು ಪರಿಗಣಿಸುವುದಾಗಿ ಅವರು ಭರವಸೆ ನೀಡಿದರು.

ಇದನ್ನೂ ಓದಿ | Karnataka Drought: ಬರ ಪರಿಹಾರ ಬಗ್ಗೆ ಸುಳ್ಳು ಹೇಳಿದ ಕಾಂಗ್ರೆಸ್‌; ಯುಪಿಎ ಕೊಟ್ಟಿದ್ದು ಅತಿ ಕಡಿಮೆ ಎಂದ ಎಚ್‌ಡಿಕೆ

ಈ ಸಂಧರ್ಭದಲ್ಲಿ ಮಾಜಿ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ, ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ ಹಾಗೂ ಚಂದ್ರಶೇಖರ್ ಪೂಜಾರ್ ಉಪಸ್ಥಿತರಿದ್ದರು.

Continue Reading

ಬೆಂಗಳೂರು

Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

Car Accident: ಬೆಂಗಳೂರು-ತುಮಕೂರು ಹೆದ್ದಾರಿಯ ಮಾದಾವರ ಟೋಲ್‌ಗೇಟ್ ಬಳಿ ಏ.21ರಂದು ಮಾರುತಿ ಓಮ್ನಿಗೆ ಬಲೆನೊ ಕಾರು ಡಿಕ್ಕಿಯಾಗಿ ಅಪಘಾತ ನಡೆದಿತ್ತು. ಅಂದು ಓಮ್ನಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಳು. ಅಪಘಾತದಲ್ಲಿ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಭಾನುವಾರ ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

Car Accident
Koo

ಬೆಂಗಳೂರು: ಮಾದಾವರ ಟೋಲ್‌ಗೇಟ್ ಬಳಿ ಏ.21ರಂದು ನಡೆದಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾರೆ. ಇದರಿಂದ ಪ್ರಕರಣದಲ್ಲಿ ಸಾವಿನ ಸಂಖ್ಯೆ 4ಕ್ಕೇರಿದೆ. ಅಪಘಾತದಲ್ಲಿ ಮಾರುತಿ ಬಲೆನೊ ಕಾರು ಡಿಕ್ಕಿಯಾಗಿದ್ದರಿಂದ ಪಲ್ಟಿಯಾದ ಓಮ್ನಿಗೆ ಬೆಂಕಿ ಹೊತ್ತಿಕೊಂಡಿತ್ತು. ಇದರಿಂದ ಬಾಲಕಿಯೊಬ್ಬಳು ಸಜೀವ ದಹನವಾಗಿದ್ದಳು. ಘಟನೆಯಲ್ಲಿ (Car Accident) ಗಾಯಗೊಂಡಿದ್ದ 14 ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿತ್ತು, ಈ ಪೈಕಿ ಮೂವರು ಇದೀಗ ಕೊನೆಯುಸಿರೆಳೆದಿದ್ದಾರೆ.

ಘಟನೆಯ ವಿವರ

ಬೆಂಗಳೂರು-ತುಮಕೂರು ಹೆದ್ದಾರಿಯ ಮಾದಾವರ ಟೋಲ್‌ಗೇಟ್ ಬಳಿ ಏ.21ರಂದು ರಾತ್ರಿ ಮಾರುತಿ ಓಮ್ನಿ (Maruti Omni) ವಾಹನಕ್ಕೆ ಬಲೆನೊ ಕಾರು (Baleno) ಹಿಂದಿನಿಂದ ಡಿಕ್ಕಿಯಾದ (Road Accident) ಪರಿಣಾಮ ಬಾಲಕಿಯೊಬ್ಬಳು (girl death) ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿತ್ತು.

ಓಮ್ನಿಯಲ್ಲಿದ್ದವರು ಅಬ್ಬಿಗೆರೆ, ದಾಸಾನುಪುರದ ಸಂಬಂಧಿಕರ ಮನೆಯಿಂದ ಬರುತ್ತಿದ್ದಾಗ ದುರಂತ ಘಟಿಸಿತ್ತು ಒಟ್ಟು ಎಂಟು ಜನ ಮಾರುತಿ ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಬಲೆನೊ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಬಲೆನೊ ಕಾರು ಹಿಂದಿನಿಂದ ಬಂದು ಡಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಮೂರು ಪಲ್ಟಿಯಾಗಿತ್ತು. ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು. ಇದರಿಂದ 14 ವರ್ಷದ ಬಾಲಕಿ ದಿವ್ಯ ಸ್ಥಳದಲ್ಲೇ ಸಾವಿಗೀಡಾಗಿದ್ದಳು.

ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಎಂಟು ಜನರಲ್ಲಿ ಮಾಯಾಂಕ್, ಮಂಜುಳ, ಸುನಿತಾ, ತರುಣ್, ಮಹೇಶ್, ನಮನ್, ಶಾಂತಿಲಾಲ್ ಗಾಯಗೊಂಡಿದ್ದರು. ಎಲ್ಲರೂ ದಾಸನಪುರ ನಿವಾಸಿಗಳು. ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ನಮನ್, ಸುನಿತಾ, ಮಾಯಾಂಕ್ ಚಿಕಿತ್ಸೆ ಫಲಿಸದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ | Amrita Pandey: ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ; ಸಾವಿಗೆ ಮುನ್ನ ಬರೆದ ವಾಟ್ಸಾಪ್ ಸ್ಟೇಟಸ್‌ನಲ್ಲಿ ಏನಿದೆ?

ಮತ್ತೊಂದು ಕಾರಿನಲ್ಲಿದ್ದ ಚಾಲಕ ರಕ್ಷಿತ್, ಚೇತನ್, ಮುಬಾರಕ್, ಸಲ್ಮಾ ಸೇರಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದವು. ಅವರು ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಅಪಘಾತಕ್ಕೆ ಕಾರಣವಾದ ಬಾಲೆನೋ ಕಾರು ಚಾಲಕ ಇನ್ಶೂರೆನ್ಸ್ ಹಣ ಕಟ್ಟದೆ ಫೇಕ್ ನಂಬರ್ ಹಾಕಿದ್ದ ಎನ್ನಲಾಗಿದೆ. ಜತೆಗೆ ಇದರ ಅಸಲಿ ಕಾರಿನ ಕಾರು ನಂಬರ್ ಬೆಳಗಾವಿಯ ಪಲ್ಲವಿ ಎಂಬುವವರಿಗೆ ಸೇರಿದ್ದು, ಹೀಗಾಗಿ ಡಿವೈಎಸ್ಪಿ ಜಗದೀಶ್ ನೇತೃತ್ವದಲ್ಲಿ ತನಿಖೆ ಚುರಕುಗೊಂಡಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
Paris Olympics
ಕ್ರೀಡೆ8 mins ago

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Arecanut cultivation
ಚಿತ್ರದುರ್ಗ30 mins ago

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ ರೈತರ ಬದುಕು!

IPL 2024
ಕ್ರೀಡೆ56 mins ago

IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

PUC Exam 2024
ಕರ್ನಾಟಕ57 mins ago

PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

Money Guide
ಮನಿ-ಗೈಡ್1 hour ago

Money Guide: ಫೊರೆಕ್ಸ್‌ ಕಾರ್ಡ್‌ V/S ಕ್ರೆಡಿಟ್‌ ಕಾರ್ಡ್‌: ವಿದೇಶ ಪ್ರವಾಸಕ್ಕೆ ಯಾವುದು ಸೂಕ್ತ?

lehar singh siroya
ದಾವಣಗೆರೆ1 hour ago

Lehar Singh Siroya: ಹರಿಹರದ ಪಂಚಮಸಾಲಿ ಜಗದ್ಗುರು ಪೀಠಕ್ಕೆ ರಾಜ್ಯಸಭಾ ಸದಸ್ಯ ಲೆಹರ್​ಸಿಂಗ್ ಭೇಟಿ

Car Accident
ಬೆಂಗಳೂರು2 hours ago

Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

CET
ಕರ್ನಾಟಕ2 hours ago

CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

YAJAMANA PREMIER LEAGUE SEASON-3 (2)
ಕ್ರೀಡೆ2 hours ago

YAJAMANA PREMIER LEAGUE SEASON-3: ಈ ಬಾರಿ ಟಿ10 ಮಾದರಿಯಲ್ಲಿ ನಡೆಯಲಿದೆ ಯಜಮಾನ ಪ್ರೀಮಿಯರ್ ಲೀಗ್​

Lok Sabha Election 2024
Lok Sabha Election 20242 hours ago

Lok Sabha Election 2024: ಒವೈಸಿ ಪ್ರಕಾರ ಮುಸ್ಲಿಮರೇ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20246 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20248 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202410 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202411 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ14 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌