New Year 2023 | ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಿದ ಸಿಲಿಕಾನ್‌ ಸಿಟಿ ಜನ; ರಾತ್ರಿಯೆಲ್ಲ ಸಂಭ್ರಮಾಚರಣೆ Vistara News

New year 2023

New Year 2023 | ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಿದ ಸಿಲಿಕಾನ್‌ ಸಿಟಿ ಜನ; ರಾತ್ರಿಯೆಲ್ಲ ಸಂಭ್ರಮಾಚರಣೆ

ಹೊಸ ವರ್ಷದ ಹಿನ್ನೆಲೆಯಲ್ಲಿ ಎಂಜಿ ರಸ್ತೆ ಸೇರಿ ಪ್ರಮುಖ ರಸ್ತೆಗಳು ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದವು. ಬಾರ್‌ಗಳು ಹಾಗೂ ಪಬ್‌ಗಳು ತುಂಬಿ ತುಳುಕುತ್ತಿದ್ದವು.

VISTARANEWS.COM


on

New Year 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿಲಿಕಾನ್‌ ಸಿಟಿಯ ಜನ ೨೦23 ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಎಂಜಿ ರಸ್ತೆ, ಬ್ರಿಗೇಡ್‌ ರಸ್ತೆ, ಚರ್ಚ್‌ ಸ್ಟ್ರೀಟ್‌ ಸೇರಿ ಪ್ರಮುಖ ರಸ್ತೆಗಳಲ್ಲಿ ಪಟಾಕಿ ಸಿಡಿಸಿ, ಡಿಜೆ ಸದ್ದಿಗೆ ಹುಚ್ಚೆದ್ದು ಕುಣಿಯುವ ಮೂಲಕ ಯುವ ಜನತೆ ಸಂಭ್ರಮದಿಂದ ಹೊಸ ವರ್ಷವನ್ನು ಶನಿವಾರ ಮಧ್ಯರಾತ್ರಿ ಬರಮಾಡಿಕೊಂಡರು.

ಹೊಸ ವರ್ಷದ ಹಿನ್ನೆಲೆಯಲ್ಲಿ ಎಂಜಿ ರಸ್ತೆ ಸೇರಿ ಪ್ರಮುಖ ರಸ್ತೆಗಳು ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದವು. ಬಾರ್‌ಗಳು ಹಾಗೂ ಪಬ್‌ಗಳು ತುಂಬಿ ತುಳುಕುತ್ತಿದ್ದವು. ಎಂಜಿ ರಸ್ತೆ, ಬ್ರಿಗೇಡ್‌ ರಸ್ತೆ, ಚರ್ಚ್‌ ಸ್ಟ್ರೀಟ್‌ನಲ್ಲಿ ಸಾವಿರಾರು ಜನರು ಕುಣಿಯುತ್ತಾ ಸಂಭ್ರಮಿಸಿದರು.

ಒಪೆರಾ ಜಂಕ್ಷನ್‌ನಲ್ಲಿ ಜನಸಂದಣಿಯಿಂದಾಗಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು. ಜನ, ವಾಹನ ದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಇನ್ನು ಇಂದಿರಾನಗರ 100 ಫೀಟ್ ರೋಡ್‌ ಪಬ್, ಬಾರ್‌ಗಳಲ್ಲಿ ಯುವಜನರ ಮೋಜು ಮಸ್ತಿ ಜೋರಾಗಿತ್ತು. ಕೆಲವರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.

ಇದನ್ನೂ ಓದಿ | New Year 2023 | ಜಗತ್ತಿನಾದ್ಯಂತ ಹೊಸ ವರ್ಷದ ಸಂಭ್ರಮ, ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸಿದ ಜನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

New year 2023

Bharat Jodo Yatra | ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್​ ಪ್ರಮುಖರು; ಆಶೀರ್ವದಿಸಿ ಪತ್ರ ಬರೆದ ಮುಖ್ಯ ಅರ್ಚಕ

ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ ಮೂರು ದಿನ ಸಂಚರಿಸಲಿದೆ. ಜನವರಿ 6ರಂದು ಹರ್ಯಾಣಕ್ಕೆ ಕಾಲಿಡಲಿದೆ. ಜನವರಿ 20ಕ್ಕೆ ಜಮ್ಮು-ಕಾಶ್ಮೀರಕ್ಕೆ ಪ್ರವೇಶಿಸಿ, ಜನವರಿ 30ರಂದು ಕೊನೆಗೊಳ್ಳಲಿದೆ.

VISTARANEWS.COM


on

Congress Leader Rahul Gandhi to address British Parliament
ರಾಹುಲ್ ಗಾಂಧಿ
Koo

ಅಯೋಧ್ಯೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಅಯೋಧ್ಯಾ ರಾಮಮಂದಿರ ಟ್ರಸ್ಟ್ ನ ಕಾರ್ಯದರ್ಶಿ ಚಂಪತ್ ರಾಯ್ ಶ್ಲಾಘಿಸಿದ್ದಾರೆ. ಇಂಥ ಪಾದಯಾತ್ರೆಗಳನ್ನು ನಡೆಸುವುದರಲ್ಲಿ ತಪ್ಪಿಲ್ಲ ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆ ಮಂಗಳವಾರ ಉತ್ತರ ಪ್ರದೇಶವನ್ನು ಪ್ರವೇಶಿಸಿದೆ. ಸಹಚರರೊಂದಿಗೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ರಾಹುಲ್ ಗಾಂಧಿಯವರಿಗೆ ಅಯೋಧ್ಯಾ ರಾಮ ಜನ್ಮಭೂಮಿ ದೇಗುಲದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಅವರು ಆಶೀರ್ವಾದಪೂರ್ವಕ ಪತ್ರವನ್ನು ಬರೆದು ತಲುಪಿಸಿದ್ದಾರೆ. ಅದರ ಬೆನ್ನಲ್ಲೇ ಚಂಪತ್ ರಾಯ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಇಡೀ ದೇಶವನ್ನು ಕಾಲ್ನಡಿಗೆಯಲ್ಲಿ ಸುತ್ತುತ್ತಿರುವ ರಾಹುಲ್ ಗಾಂಧಿ ಅವರನ್ನು ನಾನು ಶ್ಲಾಘಿಸುತ್ತೇನೆ. ನಾನೊಬ್ಬ ಆರ್ ಎಸ್ ಎಸ್ ಕಾರ್ಯಕರ್ತ. ಆರ್ ಎಸ್ ಎಸ್ ಯಾವತ್ತೂ ಭಾರತ್ ಜೋಡೋ ಯಾತ್ರೆಯನ್ನು ವಿರೋಧಿಸಿಲ್ಲ. ರಾಹುಲ್ ಗಾಂಧಿ ನಡೆಸುತ್ತಿರುವ ಪಾದಯಾತ್ರೆಯಲ್ಲಿ ನನಗೆ ತಪ್ಪೇನೂ ಕಾಣುತ್ತಿಲ್ಲ. ಇಷ್ಟು ಕೆಟ್ಟ ಚಳಿ ಮಧ್ಯೆ ರಾಹುಲ್ ಗಾಂಧಿ ಯಾತ್ರೆ ನಡೆಸುತ್ತಿದ್ದಾರೆ. ಅವರಂತೆ ಪ್ರತಿಯೊಬ್ಬರೂ ದೇಶಕ್ಕಾಗಿ ಯಾತ್ರೆ ಮಾಡಬೇಕು ಎಂದು ಹೇಳಿದ್ದಾರೆ.

ಹಾಗೇ, ರಾಮಮಂದಿರ ಟ್ರಸ್ಟ್ ನ ಹಿರಿಯ ಟ್ರಸ್ಟಿ ಗೋವಿಂದ ದೇವ ಗಿರಿ ಅವರೂ ರಾಹುಲ್ ಗಾಂಧಿಯವರನ್ನು ಹರಿಸಿದ್ದಾರೆ. ಈ ದೇಶ ಒಗ್ಗಟ್ಟಾಗಿರಬೇಕು, ಸಾಮರಸ್ಯದಿಂದ ಇರಬೇಕು ಮತ್ತು ಇನ್ನಷ್ಟು ಬಲಶಾಲಿಯಾಗಬೇಕು ಎಂದು ಯಾತ್ರೆ ಮಾಡುತ್ತಿರುವ ರಾಹುಲ್ ಗಾಂಧಿಗೆ ಶ್ರೀರಾಮ ಆಶೀರ್ವಾದಿಸಲಿ ಎಂದಿದ್ದಾರೆ. ಹಾಗೇ, ಭಾರತ್ ಜೋಡೋ ಎಂಬ ಹೆಸರೇ ಚೆನ್ನಾಗಿದೆ. ಭಾರತ ಒಂದಾಗಬೇಕು ಎಂದೂ ಹೇಳಿದ್ದಾರೆ.

ಮುಖ್ಯ ಅರ್ಚಕ ಬರೆದ ಪತ್ರದಲ್ಲಿ ಏನಿದೆ?
ಮಂಗಳವಾರ ಭಾರತ್​ ಜೋಡೋ ಯಾತ್ರೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ಬೆನ್ನಲ್ಲೇ ಅಯೋಧ್ಯಾ ರಾಮ ದೇಗುಲದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್​ ಅವರಿಗೆ ಆಶೀರ್ವಾದ ಪೂರ್ವಕ ಪತ್ರ ಬರೆದಿದ್ದರು. ‘ನೀವು ಸರ್ವಜನ ಹಿತ ಮತ್ತು ಸುಖಕ್ಕಾಗಿ ಒಂದೊಳ್ಳೆ ಕೆಲಸವನ್ನು ಮಾಡುತ್ತಿದ್ದೀರಿ. ನಿಮಗೆ ಶ್ರೀರಾಮ ಒಳ್ಳೆಯದು ಮಾಡಲಿ’ ಎಂದು ರಾಹುಲ್​ ಗಾಂಧಿಯವರಿಗೆ ಹಾರೈಸಿದ್ದರು. ‘ಯಾತ್ರೆಗೆ ಶುಭವಾಗಲಿ, ನಿಮ್ಮ ಆರೋಗ್ಯ ಚೆನ್ನಾಗಿರಲಿ’ ಎಂದೂ ಹೇಳಿದ್ದರು.

ಇದನ್ನೂ ಓದಿ: ಭಾರತ್​ ಜೋಡೋ ಯಾತ್ರೆ ದೆಹಲಿಗೆ ಕಾಲಿಟ್ಟಾಗಿನಿಂದಲೂ ರಾಹುಲ್​ ಗಾಂಧಿ ಭದ್ರತೆಯಲ್ಲಿ ವೈಫಲ್ಯ; ಅಮಿತ್​ ಶಾಗೆ ಕಾಂಗ್ರೆಸ್​ ಪತ್ರ

Continue Reading

New year 2023

BMTC Income | ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷಾರಂಭದಲ್ಲಿ ಹರ್ಷ!

ಹೊಸ ವರ್ಷ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ನಡೆಸಿದ್ದ ಬಿಎಂಟಿಸಿಗೆ ಮೊದಲ ದಿನವೇ ಭರ್ಜರಿ (BMTC Income) ಆದಾಯ ಗಳಿಸಿದೆ. ನಷ್ಟದ ಸುಳಿಯಲಿ ಸಿಲುಕಿ ನರಳಾಡುತ್ತಿದ್ದ ಬಿಎಂಟಿಸಿಗೆ ಕೊಂಚ ಹರ್ಷ ತಂದಿದೆ.

VISTARANEWS.COM


on

By

Demand for implementation of 6th Pay Commission Transport employees call for protest from March 1
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿದ್ದ ಬಿಎಂಟಿಸಿ ನಿಗಮಕ್ಕೆ ಈ ಹೊಸ ವರ್ಷ ಕೊಂಚ ಹರ್ಷ ತಂದಿದೆ. ವರ್ಷದ ಮೊದಲ ದಿನ ಬಿಎಂಟಿಸಿಗೆ ಬಂಪರ್ ಆದಾಯ (BMTC Income) ಗಳಿಸಿದೆ. ಹೊಸ ವರ್ಷಕ್ಕೆಂದು ಸುಮಾರು 87 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ನಡೆಸಿತ್ತು. ಮೊದಲೇ ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷದ ಮೊದಲ ದಿನವೇ ಬಂದ ಆದಾಯದ ಕಿಕ್ ಹೆಚ್ಚಿಸಿದೆ.

ಒಂದೇ ದಿನ ಬಿಎಂಟಿಸಿ ಹೆಚ್ಚುವರಿ ಬಸ್ ಕಾರ್ಯಾಚರಣೆಯಿಂದ ₹1,99,983 ಹೆಚ್ಚಿನ ಆದಾಯ ಬಂದಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಡಿ.31 ಹಾಗೂ ಜ.1ರ ಮಧ್ಯರಾತ್ರಿವರೆಗೂ ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಿತ್ತು. ಹೆಚ್ಚುವರಿ ಬಸ್‌ಗಳು ಸುಮಾರು 4443.9 ಕಿ.ಮೀ ನಷ್ಟು ಸಂಚಾರ ಮಾಡಿವೆ. ವರ್ಷದ ಮೊದಲ ದಿನ ಹೆಚ್ಚುವರಿ ಕಾರ್ಯಾಚರಣೆ ಮಾಡಿದ ಬಸ್‌ಗಳಲ್ಲಿ ಸುಮಾರು 13,332 ಮಂದಿ ಪ್ರಯಾಣಿಸಿರುವುದಾಗಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಬ್ಬಂದಿ ಮುಷ್ಕರ-ಕೋವಿಡ್‌ನಿಂದ ಕುಗ್ಗಿದ್ದ ಬಿಎಂಟಿಸಿ
ಮೊದಲೇ ಮುಳುಗುವ ಹಡುಗು ಆಗಿದ್ದ ಬಿಎಂಟಿಸಿ ನಿಗಮಕ್ಕೆ ನೌಕರರ ಸಾಲು ಸಾಲು ಮುಷ್ಕರ ಹಾಗೂ ಸಾಂಕ್ರಾಮಿಕ ಕೊರೊನಾ ಹೊಡೆತದಿಂದಾಗಿ ಬಸ್‌ ಓಡಾಟ ಇಲ್ಲದೆ ನಷ್ಟನ ಸುಳಿಯಲ್ಲಿ ಸಿಲುಕಿತು. ಜತೆಗೆ ತೈಲ ಬೆಲೆ ಏರಿಕೆಯಿಂದಾಗಿ ಬಸ್‌ ಓಡಿಸಿದರೂ ಕಷ್ಟ, ಸುಮ್ಮನೆ ನಿಲ್ಲಿಸಿದರೂ ನಷ್ಟ ಎಂಬ ಪರಿಸ್ಥಿತಿ ಉದ್ಭವಿಸಿತ್ತು. ಸಿಬ್ಬಂದಿಯ ಸಂಬಳವನ್ನು ನೀಡಲು ಆಗದೆ ನಿಗಮವು ಸರ್ಕಾರದ ಸಹಾಯಹಸ್ತ ಚಾಚಿತ್ತು. ಹಾಗೆ ನೌಕರರ ಪಿಎಫ್‌ ಹಣವನ್ನು ಬಳಸಿಕೊಳ್ಳುತ್ತಿದೆ ಎಂಬ ಆರೋಪವನ್ನು ಹೊತ್ತಿತ್ತು. ಇವೆಲ್ಲದರ ನಡುವೆ ಇದೀಗ ನಿಧಾನವಾಗಿ ಆರ್ಥಿಕ ಚೇತರಿಕೆಯನ್ನು ಕಂಡುಕೊಳ್ಳುತ್ತಿದೆ.

ಇದನ್ನೂ ಓದಿ | Siddheshwar Swamiji | ಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ; ಕಲಾವಿದನಿಂದ ವಿಶೇಷ ಗೌರವ

Continue Reading

New year 2023

Swiggy Order | ಹೊಸ ವರ್ಷದ ಪಾರ್ಟಿಗೆ ಸ್ವಿಗ್ಗಿಯಲ್ಲಿ 3.5 ಲಕ್ಷ ಬಿರ್ಯಾನಿ, 1.76 ಲಕ್ಷ ಚಿಪ್ಸ್‌ ಪ್ಯಾಕೆಟ್‌ ಆರ್ಡರ್!

ಹೊಸ ವರ್ಷದ ಪಾರ್ಟಿ ಹಿನ್ನೆಲೆಯಲ್ಲಿ ಆನ್‌ಲೈನ್‌ನಲ್ಲಿ ಆಹಾರ, ಚಿಪ್ಸ್‌ ಪ್ಯಾಕೆಟ್‌ಗಳನ್ನು ಆರ್ಡರ್‌ (Swiggy Order) ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸ್ವಿಗ್ಗಿ ತಿಳಿಸಿದೆ.

VISTARANEWS.COM


on

Swiggy Order On New Years Eve
Koo

ನವದೆಹಲಿ: ಹೊಸ ವರ್ಷದ ಹಿನ್ನೆಲೆಯಲ್ಲಿ ಶನಿವಾರವೇ ದೇಶಾದ್ಯಂತ ಸಂಭ್ರಮ ಮನೆಮಾಡಿತ್ತು. ಪಾರ್ಟಿ ಆಯೋಜನೆ, ಪಾರ್ಟಿ ಸಿದ್ಧತೆ, ಕೇಕ್‌ ಕತ್ತರಿಸುವುದು ಸೇರಿ ಹಲವು ರೀತಿಯಲ್ಲಿ ಜನ ಸಂಭ್ರಮಾಚರಣೆ ಮಾಡಿದರು. ಅದರಲ್ಲೂ, ಪಾರ್ಟಿಗಾಗಿ ಆನ್‌ಲೈನ್‌ ಮೂಲಕ ಕೋಟ್ಯಂತರ ಜನ ಫುಡ್‌ ಆರ್ಡರ್‌ (Swiggy Order) ಮಾಡಿದ್ದು, ಇಲ್ಲೂ ಬಿರ್ಯಾನಿಯೇ ಅಗ್ರ ಸ್ಥಾನ ಪಡೆದಿದೆ. ಮದ್ಯಪಾನದ ಪಾರ್ಟಿಗಾಗಿ ಲಕ್ಷಾಂತರ ಚಿಪ್ಸ್‌ ಪ್ಯಾಕೆಟ್‌ಗಳನ್ನೂ ಸ್ವಿಗ್ಗಿಯಲ್ಲಿ ಆರ್ಡರ್‌ ಮಾಡಲಾಗಿದೆ.

ಹೌದು, ಹೊಸ ವರ್ಷದ ಹಿಂದಿನ ದಿನವಾದ ಶನಿವಾರ ರಾತ್ರಿ 10.45ರ ವೇಳೆಗೆ ಸ್ವಿಗ್ಗಿಯಲ್ಲಿ 3.5 ಲಕ್ಷಕ್ಕೂ ಅಧಿಕ ಬಿರ್ಯಾನಿಗಳನ್ನು ಆರ್ಡರ್‌ ಮಾಡಲಾಗಿದೆ. ಹಾಗೆಯೇ, ನಂತರದ ಬೇಡಿಕೆಗೆ ಪಿಜ್ಜಾಗೆ ಇದ್ದು, 61 ಸಾವಿರ ಪಿಜ್ಜಾ ಆರ್ಡರ್‌ ಮಾಡಲಾಗಿದೆ ಎಂದು ಸ್ವಿಗ್ಗಿ ಕಂಪನಿ ತಿಳಿಸಿದೆ.

ಸ್ವಿಗ್ಗಿ ಈ ಕುರಿತು ಸಮೀಕ್ಷೆಯನ್ನೂ ನಡೆಸಿದ್ದು, ಶೇ.75.4ರಷ್ಟು ಜನ ಹೈದರಾಬಾದ್‌ ಬಿರ್ಯಾನಿ, ಶೇ.14.2ರಷ್ಟು ಮಂದಿ ಲಖನೌವಿ ಬಿರ್ಯಾನಿ ಹಾಗೂ ಶೇ.10.4ರಷ್ಟು ಜನ ಕೋಲ್ಕೊತಾ ಬಿರ್ಯಾನಿ ಆರ್ಡರ್‌ ಮಾಡಿದ್ದಾರೆ ಎಂದು ಮಾಹಿತಿ ನೀಡಿದೆ. ಹಾಗೆಯೇ, ಸ್ವಿಗ್ಗಿಯ ಇನ್‌ಸ್ಟಾಮಾರ್ಟ್‌ನಲ್ಲಿ ಸಂಜೆ 7 ಗಂಟೆ ವೇಳೆಗೆ 1.76 ಚಿಪ್ಸ್‌ ಪ್ಯಾಕೆಟ್‌, 2,757 ಪ್ಯಾಕೆಟ್‌ ಡ್ಯುರೆಕ್ಸ್‌ ಕಾಂಡೋಮ್‌ಗಳನ್ನು ಆರ್ಡರ್‌ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.

ಇದನ್ನೂ ಓದಿ | New Year 2023 | ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭ್ರಮದ ಹೊಸ ವರ್ಷಾಚರಣೆ

Continue Reading

New year 2023

Ras Al Khaimah | 673 ಡ್ರೋನ್‌, 4.7 ಕಿ.ಮೀವರೆಗೆ ಆಗಸದಲ್ಲಿ ಪಟಾಕಿ, ಬೆಳಕಿನ ಚಿತ್ತಾರ, 2 ಗಿನ್ನೆಸ್‌ ದಾಖಲೆ ಬರೆದ ರಸ್‌ ಅಲ್‌ ಖೈಮಾ

ಹೊಸ ವರ್ಷಾಚರಣೆಗೆ ಹೇಳಿ ಮಾಡಿಸಿದಂತಿರುವ ರಸ್‌ ಅಲ್‌ ಖೈಮಾ (Ras Al Khaimah) ನಗರವು ಈ ಬಾರಿಯೂ ಅದ್ಧೂರಿ ಆಚರಣೆ ಮೂಲಕ ಎರಡು ಗಿನ್ನೆಸ್‌ ದಾಖಲೆ ಬರೆದಿದೆ.

VISTARANEWS.COM


on

Ras Al Khaimah New Year Celebration
Koo

ಅಬುಧಾಬಿ: ಭಾರತ ಸೇರಿ ಜಗತ್ತಿನಾದ್ಯಂತ ಸಂಭ್ರಮ-ಸಡಗರದಿಂದ ಹೊಸ ವರ್ಷ ಆಚರಣೆ ಮಾಡಲಾಗಿದೆ. ಪಟಾಕಿ ಸಿಡಿಸಿ, ಹಾಡಿ, ಕುಣಿದು, ನಲಿದು ಹೊಸ ಸಂವತ್ಸರವನ್ನು ಸ್ವಾಗತಿಸಲಾಗಿದೆ. ಹೀಗೆ, ಅದ್ಧೂರಿಯಾಗಿ ಹೊಸ ವರ್ಷಾವನ್ನು ಸ್ವಾಗತಿಸುವ ಮೂಲಕ ಯುಎಇಯ ರಸ್‌ ಅಲ್‌ ಖೈಮಾ (Ras Al Khaimah) ನಗರವು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಹೊಸ ವರ್ಷಾಚರಣೆಗೆ ತಾನೇ ಅಧಿಪತಿ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ.

ಹೌದು, ರಸ್‌ ಅಲ್‌ ಖೈಮಾದಲ್ಲಿ ಶನಿವಾರ ರಾತ್ರಿ 673 ಡ್ರೋನ್‌ಗಳನ್ನು ಬಳಸಿ ಸುಮಾರು 4.7 ಕಿ.ಮೀ ವ್ಯಾಪ್ತಿಯಲ್ಲಿ ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿ, ಕೊನೆಗೆ ಆಗಸದಲ್ಲಿಯೇ ‘ಹ್ಯಾಪಿ ನ್ಯೂ ಇಯರ್‌ 2023’ (Happy New Year 2023) ಎಂಬ ಅಕ್ಷರಗಳು ಮೂಡುವ ಮೂಲಕ ಶುಭಕೋರಲಾಗಿದೆ. ಹಾಗಾಗಿ, ರಸ್‌ ಅಲ್‌ ಖೈಮಾದಲ್ಲಿ ಪಟಾಕಿ ಹಾಗೂ ದೀಪಗಳ ಚಿತ್ತಾರ ಮೂಡಿಸಿದ್ದು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಸುಮಾರು 1,100 ಮೀಟರ್‌ ಎತ್ತರದಲ್ಲಿ ಪಟಾಕಿ ಸಿಡಿಸಿ, ವಿದ್ಯುತ್‌ ದೀಪಗಳನ್ನು ಬೆಳಗಲಾಗಿದೆ. ಹೀಗೆ, ಆಗಸದಲ್ಲಿ ಬೆಳಕಿನ ರಂಗಿನಾಟವಿರುವ 12 ನಿಮಿಷದ ವಿಡಿಯೊವನ್ನು ರಸ್‌ ಅಲ್‌ ಖೈಮಾದ ಆಡಳಿತವು ಶೇರ್‌ ಮಾಡಿದೆ.

ಇದಕ್ಕೂ ಮೊದಲು ಸುಮಾರು 458 ಡ್ರೋನ್‌ಗಳನ್ನು ಬಳಸಿ, ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿದ್ದು ಗಿನ್ನೆಸ್‌ ದಾಖಲೆ ಆಗಿತ್ತು. ಈಗ ಈ ದಾಖಲೆಯನ್ನು ರಸ್‌ ಅಲ್‌ ಖೈಮಾ ಮುರಿದಿದೆ. ಹೊಸ ವರ್ಷಾಚರಣೆಗೆ ರಸ್‌ ಅಲ್‌ ಖೈಮಾ ಖ್ಯಾತಿ ಗಳಿಸಿದ್ದು, ಈ ಬಾರಿ 30 ಸಾವಿರಕ್ಕೂ ಅಧಿಕ ಜನ ಹೊಸ ವರ್ಷ ಆಚರಿಸಲು ನಗರಕ್ಕೆ ಆಗಮಿಸಿದ್ದರು ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | New Year 2023 | ಜಗತ್ತಿನಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದು ಹೇಗೆ? ಇಲ್ಲಿವೆ ಫೋಟೊಗಳು

Continue Reading
Advertisement
ಕರ್ನಾಟಕ6 mins ago

ವಿಜಯಪುರ ಗೋದಾಮು ದುರಂತ: ಮೃತರ ಸಂಖ್ಯೆ 7ಕ್ಕೆ, ಇನ್ನೂ ನಾಲ್ಕು ಶವ ಸಿಕ್ಕಿಲ್ಲ

cm siddaramaih respect captain pranjal
ಕರ್ನಾಟಕ39 mins ago

CM Siddaramaiah: ಹುತಾತ್ಮ ಯೋಧ ಪ್ರಾಂಜಲ್‌ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ

Canara Bank Ammembala Subbarao Pai
ಅಂಕಣ46 mins ago

Raja Marga Column: ಹಿಡಿಯಕ್ಕಿ ಸಂಗ್ರಹಿಸಿ ಕೆನರಾ ಬ್ಯಾಂಕ್ ಕಟ್ಟಿದ ಅಮ್ಮೆಂಬಳ ಸುಬ್ಬರಾವ್ ಪೈ

CBSE Board Exam 2024 and many more changes proposed implemented in this year
ದೇಶ47 mins ago

ಸಿಬಿಎಸ್‌ಇ ಬೋರ್ಡ್‌ ಎಕ್ಸಾಂಗೆ ಘೋಷಿಸಿದ ಪ್ರಮುಖ ಬದಲಾವಣೆಗಳೇನು?

Saurav Gangly
ಕ್ರಿಕೆಟ್1 hour ago

Virat Kohli : ಕೊಹ್ಲಿಯನ್ನು ನಾಯಕತ್ವದಿಂದ ಇಳಿಸಿದ್ದಕ್ಕೆ ಕಾರಣ ತಿಳಿಸಿದ ಸೌರವ್​ ಗಂಗೂಲಿ

Physical Education Teacher
ಉದ್ಯೋಗ1 hour ago

Teachers Recruitment : ಪ್ರಾಥಮಿಕ ಶಾಲೆಯಲ್ಲಿ 2120 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ತೀರ್ಮಾನ

sufi
ಅಂಕಣ1 hour ago

ನನ್ನ ದೇಶ ನನ್ನ ದನಿ ಅಂಕಣ: ಸಯ್ಯಿದ್ ರಿಜ್ವಿ ಸ್ವತಃ ಹೇಳಿದ ಸೂಫಿಗಳ ನಿಜ ಕಥನ

Rain in Karnataka woman listening to music with an umbrella
ಕರ್ನಾಟಕ2 hours ago

Karnataka Weather : ಇಂದು – ನಾಳೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ಭಾರಿ ಮಳೆ; ಇದು ಮಿಚುಂಗ್ ಎಫೆಕ್ಟ್‌

Congress party directed kamal nath to resign Madhya Pradesh Congress president post
ದೇಶ2 hours ago

ಎಂಪಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಮಲ್ ನಾಥ್‌ಗೆ ಸೂಚನೆ!

Dasara Elephant Arjuna
ಕರ್ನಾಟಕ2 hours ago

ವಿಸ್ತಾರ ಸಂಪಾದಕೀಯ: ದಸರಾ ಹೀರೊ ‘ಅರ್ಜುನ’ ದಾರುಣ ಸಾವು, ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ3 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ1 day ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ2 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ5 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ5 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

ಟ್ರೆಂಡಿಂಗ್‌