New year tragedy | ಹೊಸ ವರ್ಷದ ಪಾರ್ಟಿ ಮುಗಿಸಿ ಮರಳುತ್ತಿದ್ದ ವೇಳೆ ಕಾರು ಬಸ್ಸಿಗೆ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು - Vistara News

New year 2023

New year tragedy | ಹೊಸ ವರ್ಷದ ಪಾರ್ಟಿ ಮುಗಿಸಿ ಮರಳುತ್ತಿದ್ದ ವೇಳೆ ಕಾರು ಬಸ್ಸಿಗೆ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

ಹೊಸ ವರ್ಷಾಚರಣೆಯ ಗುಂಗಿನಲ್ಲಿ ಮನೆಗೆ ಮರಳುತ್ತಿದ್ದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಸಕಲೇಶಪುರದಲ್ಲಿ ಈ ದುರಂತ ನಡೆದಿದೆ.

VISTARANEWS.COM


on

Abhi and accident
ಪ್ರಾಣ ಕಳೆದುಕೊಂಡ ಯುವಕ ಅಭಿ ಮತ್ತು ಅಪಘಾತದ ದೃಶ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಹಾರ್ಲೆ ಕೂಡಿಗೆ ಗ್ರಾಮದ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಗೆ ಸಮೀಪದ ಕಾಕನಮನೆ ಗ್ರಾಮದ ಯುವಕ ಅಭಿ ಎಂಬವರೇ ಮೃತಪಟ್ಟ ಯುವ ಚಾಲಕ. ಅಭಿ ಹೊಸ ವರ್ಷದ ಪಾರ್ಟಿ (New year tragedy) ಮುಗಿಸಿ ಹಾನುಬಾಳು ಕಡೆಯಿಂದ ಕಾರಿನಲ್ಲಿ ವಾಪಸ್‌ ಬರುತ್ತಿದ್ದರೆ, ಬಸ್‌ ಸಕಲೇಶಪುರದಿಂದ ಹಾನುಬಾಳು ಕಡೆಗೆ ಹೋಗುತ್ತಿತ್ತು.

ಬಸ್‌ ಸಂಪೂರ್ಣವಾಗಿ ಎಡಭಾಗದಲ್ಲಿದ್ದು, ಇನ್ನಷ್ಟು ಎಡಕ್ಕೆ ಜರುಗಿದೆ. ಕಾರು ಸಂಪೂರ್ಣ ಬಲಭಾಗಕ್ಕೆ ಹೋಗಿ ಡಿಕ್ಕಿ ಹೊಡೆದಿದೆ. ಇದು ನಿದ್ದೆಯಿಂದ ಉಂಟಾಗಿರುವ ಅವಾಂತರವೇ ಮದ್ಯದ ಅಮಲಿನ ಪರಿಣಾಮವೇ ಎನ್ನುವುದು ತನಿಖೆಯಿಂದ ತಿಳಿಯಬೇಕಾಗಿದೆ. ಸಕಲೇಶಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ | New year tragedy | ಕಟ್ಟಡದಿಂದ ಕಟ್ಟಡಕ್ಕೆ ಜಂಪ್‌ ಮಾಡಲು ಹೋಗಿ ಆಯತಪ್ಪಿ ನೆಲಕ್ಕೆ ಬಿದ್ದು ಯುವಕ ಮೃತ್ಯು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

New year 2023

Bharat Jodo Yatra | ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್​ ಪ್ರಮುಖರು; ಆಶೀರ್ವದಿಸಿ ಪತ್ರ ಬರೆದ ಮುಖ್ಯ ಅರ್ಚಕ

ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ ಮೂರು ದಿನ ಸಂಚರಿಸಲಿದೆ. ಜನವರಿ 6ರಂದು ಹರ್ಯಾಣಕ್ಕೆ ಕಾಲಿಡಲಿದೆ. ಜನವರಿ 20ಕ್ಕೆ ಜಮ್ಮು-ಕಾಶ್ಮೀರಕ್ಕೆ ಪ್ರವೇಶಿಸಿ, ಜನವರಿ 30ರಂದು ಕೊನೆಗೊಳ್ಳಲಿದೆ.

VISTARANEWS.COM


on

Congress Leader Rahul Gandhi to address British Parliament
ರಾಹುಲ್ ಗಾಂಧಿ
Koo

ಅಯೋಧ್ಯೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಅಯೋಧ್ಯಾ ರಾಮಮಂದಿರ ಟ್ರಸ್ಟ್ ನ ಕಾರ್ಯದರ್ಶಿ ಚಂಪತ್ ರಾಯ್ ಶ್ಲಾಘಿಸಿದ್ದಾರೆ. ಇಂಥ ಪಾದಯಾತ್ರೆಗಳನ್ನು ನಡೆಸುವುದರಲ್ಲಿ ತಪ್ಪಿಲ್ಲ ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆ ಮಂಗಳವಾರ ಉತ್ತರ ಪ್ರದೇಶವನ್ನು ಪ್ರವೇಶಿಸಿದೆ. ಸಹಚರರೊಂದಿಗೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ರಾಹುಲ್ ಗಾಂಧಿಯವರಿಗೆ ಅಯೋಧ್ಯಾ ರಾಮ ಜನ್ಮಭೂಮಿ ದೇಗುಲದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಅವರು ಆಶೀರ್ವಾದಪೂರ್ವಕ ಪತ್ರವನ್ನು ಬರೆದು ತಲುಪಿಸಿದ್ದಾರೆ. ಅದರ ಬೆನ್ನಲ್ಲೇ ಚಂಪತ್ ರಾಯ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಇಡೀ ದೇಶವನ್ನು ಕಾಲ್ನಡಿಗೆಯಲ್ಲಿ ಸುತ್ತುತ್ತಿರುವ ರಾಹುಲ್ ಗಾಂಧಿ ಅವರನ್ನು ನಾನು ಶ್ಲಾಘಿಸುತ್ತೇನೆ. ನಾನೊಬ್ಬ ಆರ್ ಎಸ್ ಎಸ್ ಕಾರ್ಯಕರ್ತ. ಆರ್ ಎಸ್ ಎಸ್ ಯಾವತ್ತೂ ಭಾರತ್ ಜೋಡೋ ಯಾತ್ರೆಯನ್ನು ವಿರೋಧಿಸಿಲ್ಲ. ರಾಹುಲ್ ಗಾಂಧಿ ನಡೆಸುತ್ತಿರುವ ಪಾದಯಾತ್ರೆಯಲ್ಲಿ ನನಗೆ ತಪ್ಪೇನೂ ಕಾಣುತ್ತಿಲ್ಲ. ಇಷ್ಟು ಕೆಟ್ಟ ಚಳಿ ಮಧ್ಯೆ ರಾಹುಲ್ ಗಾಂಧಿ ಯಾತ್ರೆ ನಡೆಸುತ್ತಿದ್ದಾರೆ. ಅವರಂತೆ ಪ್ರತಿಯೊಬ್ಬರೂ ದೇಶಕ್ಕಾಗಿ ಯಾತ್ರೆ ಮಾಡಬೇಕು ಎಂದು ಹೇಳಿದ್ದಾರೆ.

ಹಾಗೇ, ರಾಮಮಂದಿರ ಟ್ರಸ್ಟ್ ನ ಹಿರಿಯ ಟ್ರಸ್ಟಿ ಗೋವಿಂದ ದೇವ ಗಿರಿ ಅವರೂ ರಾಹುಲ್ ಗಾಂಧಿಯವರನ್ನು ಹರಿಸಿದ್ದಾರೆ. ಈ ದೇಶ ಒಗ್ಗಟ್ಟಾಗಿರಬೇಕು, ಸಾಮರಸ್ಯದಿಂದ ಇರಬೇಕು ಮತ್ತು ಇನ್ನಷ್ಟು ಬಲಶಾಲಿಯಾಗಬೇಕು ಎಂದು ಯಾತ್ರೆ ಮಾಡುತ್ತಿರುವ ರಾಹುಲ್ ಗಾಂಧಿಗೆ ಶ್ರೀರಾಮ ಆಶೀರ್ವಾದಿಸಲಿ ಎಂದಿದ್ದಾರೆ. ಹಾಗೇ, ಭಾರತ್ ಜೋಡೋ ಎಂಬ ಹೆಸರೇ ಚೆನ್ನಾಗಿದೆ. ಭಾರತ ಒಂದಾಗಬೇಕು ಎಂದೂ ಹೇಳಿದ್ದಾರೆ.

ಮುಖ್ಯ ಅರ್ಚಕ ಬರೆದ ಪತ್ರದಲ್ಲಿ ಏನಿದೆ?
ಮಂಗಳವಾರ ಭಾರತ್​ ಜೋಡೋ ಯಾತ್ರೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ಬೆನ್ನಲ್ಲೇ ಅಯೋಧ್ಯಾ ರಾಮ ದೇಗುಲದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್​ ಅವರಿಗೆ ಆಶೀರ್ವಾದ ಪೂರ್ವಕ ಪತ್ರ ಬರೆದಿದ್ದರು. ‘ನೀವು ಸರ್ವಜನ ಹಿತ ಮತ್ತು ಸುಖಕ್ಕಾಗಿ ಒಂದೊಳ್ಳೆ ಕೆಲಸವನ್ನು ಮಾಡುತ್ತಿದ್ದೀರಿ. ನಿಮಗೆ ಶ್ರೀರಾಮ ಒಳ್ಳೆಯದು ಮಾಡಲಿ’ ಎಂದು ರಾಹುಲ್​ ಗಾಂಧಿಯವರಿಗೆ ಹಾರೈಸಿದ್ದರು. ‘ಯಾತ್ರೆಗೆ ಶುಭವಾಗಲಿ, ನಿಮ್ಮ ಆರೋಗ್ಯ ಚೆನ್ನಾಗಿರಲಿ’ ಎಂದೂ ಹೇಳಿದ್ದರು.

ಇದನ್ನೂ ಓದಿ: ಭಾರತ್​ ಜೋಡೋ ಯಾತ್ರೆ ದೆಹಲಿಗೆ ಕಾಲಿಟ್ಟಾಗಿನಿಂದಲೂ ರಾಹುಲ್​ ಗಾಂಧಿ ಭದ್ರತೆಯಲ್ಲಿ ವೈಫಲ್ಯ; ಅಮಿತ್​ ಶಾಗೆ ಕಾಂಗ್ರೆಸ್​ ಪತ್ರ

Continue Reading

New year 2023

BMTC Income | ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷಾರಂಭದಲ್ಲಿ ಹರ್ಷ!

ಹೊಸ ವರ್ಷ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ನಡೆಸಿದ್ದ ಬಿಎಂಟಿಸಿಗೆ ಮೊದಲ ದಿನವೇ ಭರ್ಜರಿ (BMTC Income) ಆದಾಯ ಗಳಿಸಿದೆ. ನಷ್ಟದ ಸುಳಿಯಲಿ ಸಿಲುಕಿ ನರಳಾಡುತ್ತಿದ್ದ ಬಿಎಂಟಿಸಿಗೆ ಕೊಂಚ ಹರ್ಷ ತಂದಿದೆ.

VISTARANEWS.COM


on

By

Demand for implementation of 6th Pay Commission Transport employees call for protest from March 1
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿದ್ದ ಬಿಎಂಟಿಸಿ ನಿಗಮಕ್ಕೆ ಈ ಹೊಸ ವರ್ಷ ಕೊಂಚ ಹರ್ಷ ತಂದಿದೆ. ವರ್ಷದ ಮೊದಲ ದಿನ ಬಿಎಂಟಿಸಿಗೆ ಬಂಪರ್ ಆದಾಯ (BMTC Income) ಗಳಿಸಿದೆ. ಹೊಸ ವರ್ಷಕ್ಕೆಂದು ಸುಮಾರು 87 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ನಡೆಸಿತ್ತು. ಮೊದಲೇ ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷದ ಮೊದಲ ದಿನವೇ ಬಂದ ಆದಾಯದ ಕಿಕ್ ಹೆಚ್ಚಿಸಿದೆ.

ಒಂದೇ ದಿನ ಬಿಎಂಟಿಸಿ ಹೆಚ್ಚುವರಿ ಬಸ್ ಕಾರ್ಯಾಚರಣೆಯಿಂದ ₹1,99,983 ಹೆಚ್ಚಿನ ಆದಾಯ ಬಂದಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಡಿ.31 ಹಾಗೂ ಜ.1ರ ಮಧ್ಯರಾತ್ರಿವರೆಗೂ ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಿತ್ತು. ಹೆಚ್ಚುವರಿ ಬಸ್‌ಗಳು ಸುಮಾರು 4443.9 ಕಿ.ಮೀ ನಷ್ಟು ಸಂಚಾರ ಮಾಡಿವೆ. ವರ್ಷದ ಮೊದಲ ದಿನ ಹೆಚ್ಚುವರಿ ಕಾರ್ಯಾಚರಣೆ ಮಾಡಿದ ಬಸ್‌ಗಳಲ್ಲಿ ಸುಮಾರು 13,332 ಮಂದಿ ಪ್ರಯಾಣಿಸಿರುವುದಾಗಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಬ್ಬಂದಿ ಮುಷ್ಕರ-ಕೋವಿಡ್‌ನಿಂದ ಕುಗ್ಗಿದ್ದ ಬಿಎಂಟಿಸಿ
ಮೊದಲೇ ಮುಳುಗುವ ಹಡುಗು ಆಗಿದ್ದ ಬಿಎಂಟಿಸಿ ನಿಗಮಕ್ಕೆ ನೌಕರರ ಸಾಲು ಸಾಲು ಮುಷ್ಕರ ಹಾಗೂ ಸಾಂಕ್ರಾಮಿಕ ಕೊರೊನಾ ಹೊಡೆತದಿಂದಾಗಿ ಬಸ್‌ ಓಡಾಟ ಇಲ್ಲದೆ ನಷ್ಟನ ಸುಳಿಯಲ್ಲಿ ಸಿಲುಕಿತು. ಜತೆಗೆ ತೈಲ ಬೆಲೆ ಏರಿಕೆಯಿಂದಾಗಿ ಬಸ್‌ ಓಡಿಸಿದರೂ ಕಷ್ಟ, ಸುಮ್ಮನೆ ನಿಲ್ಲಿಸಿದರೂ ನಷ್ಟ ಎಂಬ ಪರಿಸ್ಥಿತಿ ಉದ್ಭವಿಸಿತ್ತು. ಸಿಬ್ಬಂದಿಯ ಸಂಬಳವನ್ನು ನೀಡಲು ಆಗದೆ ನಿಗಮವು ಸರ್ಕಾರದ ಸಹಾಯಹಸ್ತ ಚಾಚಿತ್ತು. ಹಾಗೆ ನೌಕರರ ಪಿಎಫ್‌ ಹಣವನ್ನು ಬಳಸಿಕೊಳ್ಳುತ್ತಿದೆ ಎಂಬ ಆರೋಪವನ್ನು ಹೊತ್ತಿತ್ತು. ಇವೆಲ್ಲದರ ನಡುವೆ ಇದೀಗ ನಿಧಾನವಾಗಿ ಆರ್ಥಿಕ ಚೇತರಿಕೆಯನ್ನು ಕಂಡುಕೊಳ್ಳುತ್ತಿದೆ.

ಇದನ್ನೂ ಓದಿ | Siddheshwar Swamiji | ಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ; ಕಲಾವಿದನಿಂದ ವಿಶೇಷ ಗೌರವ

Continue Reading

New year 2023

Swiggy Order | ಹೊಸ ವರ್ಷದ ಪಾರ್ಟಿಗೆ ಸ್ವಿಗ್ಗಿಯಲ್ಲಿ 3.5 ಲಕ್ಷ ಬಿರ್ಯಾನಿ, 1.76 ಲಕ್ಷ ಚಿಪ್ಸ್‌ ಪ್ಯಾಕೆಟ್‌ ಆರ್ಡರ್!

ಹೊಸ ವರ್ಷದ ಪಾರ್ಟಿ ಹಿನ್ನೆಲೆಯಲ್ಲಿ ಆನ್‌ಲೈನ್‌ನಲ್ಲಿ ಆಹಾರ, ಚಿಪ್ಸ್‌ ಪ್ಯಾಕೆಟ್‌ಗಳನ್ನು ಆರ್ಡರ್‌ (Swiggy Order) ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸ್ವಿಗ್ಗಿ ತಿಳಿಸಿದೆ.

VISTARANEWS.COM


on

Swiggy Order On New Years Eve
Koo

ನವದೆಹಲಿ: ಹೊಸ ವರ್ಷದ ಹಿನ್ನೆಲೆಯಲ್ಲಿ ಶನಿವಾರವೇ ದೇಶಾದ್ಯಂತ ಸಂಭ್ರಮ ಮನೆಮಾಡಿತ್ತು. ಪಾರ್ಟಿ ಆಯೋಜನೆ, ಪಾರ್ಟಿ ಸಿದ್ಧತೆ, ಕೇಕ್‌ ಕತ್ತರಿಸುವುದು ಸೇರಿ ಹಲವು ರೀತಿಯಲ್ಲಿ ಜನ ಸಂಭ್ರಮಾಚರಣೆ ಮಾಡಿದರು. ಅದರಲ್ಲೂ, ಪಾರ್ಟಿಗಾಗಿ ಆನ್‌ಲೈನ್‌ ಮೂಲಕ ಕೋಟ್ಯಂತರ ಜನ ಫುಡ್‌ ಆರ್ಡರ್‌ (Swiggy Order) ಮಾಡಿದ್ದು, ಇಲ್ಲೂ ಬಿರ್ಯಾನಿಯೇ ಅಗ್ರ ಸ್ಥಾನ ಪಡೆದಿದೆ. ಮದ್ಯಪಾನದ ಪಾರ್ಟಿಗಾಗಿ ಲಕ್ಷಾಂತರ ಚಿಪ್ಸ್‌ ಪ್ಯಾಕೆಟ್‌ಗಳನ್ನೂ ಸ್ವಿಗ್ಗಿಯಲ್ಲಿ ಆರ್ಡರ್‌ ಮಾಡಲಾಗಿದೆ.

ಹೌದು, ಹೊಸ ವರ್ಷದ ಹಿಂದಿನ ದಿನವಾದ ಶನಿವಾರ ರಾತ್ರಿ 10.45ರ ವೇಳೆಗೆ ಸ್ವಿಗ್ಗಿಯಲ್ಲಿ 3.5 ಲಕ್ಷಕ್ಕೂ ಅಧಿಕ ಬಿರ್ಯಾನಿಗಳನ್ನು ಆರ್ಡರ್‌ ಮಾಡಲಾಗಿದೆ. ಹಾಗೆಯೇ, ನಂತರದ ಬೇಡಿಕೆಗೆ ಪಿಜ್ಜಾಗೆ ಇದ್ದು, 61 ಸಾವಿರ ಪಿಜ್ಜಾ ಆರ್ಡರ್‌ ಮಾಡಲಾಗಿದೆ ಎಂದು ಸ್ವಿಗ್ಗಿ ಕಂಪನಿ ತಿಳಿಸಿದೆ.

ಸ್ವಿಗ್ಗಿ ಈ ಕುರಿತು ಸಮೀಕ್ಷೆಯನ್ನೂ ನಡೆಸಿದ್ದು, ಶೇ.75.4ರಷ್ಟು ಜನ ಹೈದರಾಬಾದ್‌ ಬಿರ್ಯಾನಿ, ಶೇ.14.2ರಷ್ಟು ಮಂದಿ ಲಖನೌವಿ ಬಿರ್ಯಾನಿ ಹಾಗೂ ಶೇ.10.4ರಷ್ಟು ಜನ ಕೋಲ್ಕೊತಾ ಬಿರ್ಯಾನಿ ಆರ್ಡರ್‌ ಮಾಡಿದ್ದಾರೆ ಎಂದು ಮಾಹಿತಿ ನೀಡಿದೆ. ಹಾಗೆಯೇ, ಸ್ವಿಗ್ಗಿಯ ಇನ್‌ಸ್ಟಾಮಾರ್ಟ್‌ನಲ್ಲಿ ಸಂಜೆ 7 ಗಂಟೆ ವೇಳೆಗೆ 1.76 ಚಿಪ್ಸ್‌ ಪ್ಯಾಕೆಟ್‌, 2,757 ಪ್ಯಾಕೆಟ್‌ ಡ್ಯುರೆಕ್ಸ್‌ ಕಾಂಡೋಮ್‌ಗಳನ್ನು ಆರ್ಡರ್‌ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.

ಇದನ್ನೂ ಓದಿ | New Year 2023 | ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭ್ರಮದ ಹೊಸ ವರ್ಷಾಚರಣೆ

Continue Reading

New year 2023

Ras Al Khaimah | 673 ಡ್ರೋನ್‌, 4.7 ಕಿ.ಮೀವರೆಗೆ ಆಗಸದಲ್ಲಿ ಪಟಾಕಿ, ಬೆಳಕಿನ ಚಿತ್ತಾರ, 2 ಗಿನ್ನೆಸ್‌ ದಾಖಲೆ ಬರೆದ ರಸ್‌ ಅಲ್‌ ಖೈಮಾ

ಹೊಸ ವರ್ಷಾಚರಣೆಗೆ ಹೇಳಿ ಮಾಡಿಸಿದಂತಿರುವ ರಸ್‌ ಅಲ್‌ ಖೈಮಾ (Ras Al Khaimah) ನಗರವು ಈ ಬಾರಿಯೂ ಅದ್ಧೂರಿ ಆಚರಣೆ ಮೂಲಕ ಎರಡು ಗಿನ್ನೆಸ್‌ ದಾಖಲೆ ಬರೆದಿದೆ.

VISTARANEWS.COM


on

Ras Al Khaimah New Year Celebration
Koo

ಅಬುಧಾಬಿ: ಭಾರತ ಸೇರಿ ಜಗತ್ತಿನಾದ್ಯಂತ ಸಂಭ್ರಮ-ಸಡಗರದಿಂದ ಹೊಸ ವರ್ಷ ಆಚರಣೆ ಮಾಡಲಾಗಿದೆ. ಪಟಾಕಿ ಸಿಡಿಸಿ, ಹಾಡಿ, ಕುಣಿದು, ನಲಿದು ಹೊಸ ಸಂವತ್ಸರವನ್ನು ಸ್ವಾಗತಿಸಲಾಗಿದೆ. ಹೀಗೆ, ಅದ್ಧೂರಿಯಾಗಿ ಹೊಸ ವರ್ಷಾವನ್ನು ಸ್ವಾಗತಿಸುವ ಮೂಲಕ ಯುಎಇಯ ರಸ್‌ ಅಲ್‌ ಖೈಮಾ (Ras Al Khaimah) ನಗರವು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಹೊಸ ವರ್ಷಾಚರಣೆಗೆ ತಾನೇ ಅಧಿಪತಿ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ.

ಹೌದು, ರಸ್‌ ಅಲ್‌ ಖೈಮಾದಲ್ಲಿ ಶನಿವಾರ ರಾತ್ರಿ 673 ಡ್ರೋನ್‌ಗಳನ್ನು ಬಳಸಿ ಸುಮಾರು 4.7 ಕಿ.ಮೀ ವ್ಯಾಪ್ತಿಯಲ್ಲಿ ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿ, ಕೊನೆಗೆ ಆಗಸದಲ್ಲಿಯೇ ‘ಹ್ಯಾಪಿ ನ್ಯೂ ಇಯರ್‌ 2023’ (Happy New Year 2023) ಎಂಬ ಅಕ್ಷರಗಳು ಮೂಡುವ ಮೂಲಕ ಶುಭಕೋರಲಾಗಿದೆ. ಹಾಗಾಗಿ, ರಸ್‌ ಅಲ್‌ ಖೈಮಾದಲ್ಲಿ ಪಟಾಕಿ ಹಾಗೂ ದೀಪಗಳ ಚಿತ್ತಾರ ಮೂಡಿಸಿದ್ದು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಸುಮಾರು 1,100 ಮೀಟರ್‌ ಎತ್ತರದಲ್ಲಿ ಪಟಾಕಿ ಸಿಡಿಸಿ, ವಿದ್ಯುತ್‌ ದೀಪಗಳನ್ನು ಬೆಳಗಲಾಗಿದೆ. ಹೀಗೆ, ಆಗಸದಲ್ಲಿ ಬೆಳಕಿನ ರಂಗಿನಾಟವಿರುವ 12 ನಿಮಿಷದ ವಿಡಿಯೊವನ್ನು ರಸ್‌ ಅಲ್‌ ಖೈಮಾದ ಆಡಳಿತವು ಶೇರ್‌ ಮಾಡಿದೆ.

ಇದಕ್ಕೂ ಮೊದಲು ಸುಮಾರು 458 ಡ್ರೋನ್‌ಗಳನ್ನು ಬಳಸಿ, ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿದ್ದು ಗಿನ್ನೆಸ್‌ ದಾಖಲೆ ಆಗಿತ್ತು. ಈಗ ಈ ದಾಖಲೆಯನ್ನು ರಸ್‌ ಅಲ್‌ ಖೈಮಾ ಮುರಿದಿದೆ. ಹೊಸ ವರ್ಷಾಚರಣೆಗೆ ರಸ್‌ ಅಲ್‌ ಖೈಮಾ ಖ್ಯಾತಿ ಗಳಿಸಿದ್ದು, ಈ ಬಾರಿ 30 ಸಾವಿರಕ್ಕೂ ಅಧಿಕ ಜನ ಹೊಸ ವರ್ಷ ಆಚರಿಸಲು ನಗರಕ್ಕೆ ಆಗಮಿಸಿದ್ದರು ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | New Year 2023 | ಜಗತ್ತಿನಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದು ಹೇಗೆ? ಇಲ್ಲಿವೆ ಫೋಟೊಗಳು

Continue Reading
Advertisement
PARIS OLYMPICS
ಕ್ರೀಡೆ14 mins ago

Paris Olympics: ಶರತ್ ಕಮಲ್​ಗೆ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ಎದುರಾಳಿ

Viral Video
ವೈರಲ್ ನ್ಯೂಸ್15 mins ago

Viral Video: ಅಪಘಾತವಾದ ಲಾರಿಯಿಂದ ಜ್ಯೂಸ್‌ ಪ್ಯಾಕ್‌ ಎತ್ತಿಕೊಂಡ ಐಫೋನ್‌ಧಾರಿ! ದೊಡ್ಡವರ ಸಣ್ಣತನ ಎಂದ ನೆಟ್ಟಿಗರು

Ajith Kumar Neel not collaborating for a film
ಕಾಲಿವುಡ್16 mins ago

Ajith Kumar: ಪ್ರಶಾಂತ್ ನೀಲ್- ಅಜಿತ್ ಭೇಟಿಯಾಗಿದ್ದು ನಿಜ; ಸಿನಿಮಾ ಬಗ್ಗೆ ಮ್ಯಾನೇಜರ್ ಹೇಳಿದ್ದೇನು?

shiradi ghat train karnataka rian news
ಪ್ರಮುಖ ಸುದ್ದಿ37 mins ago

Karnataka Rain News: ಎಡಕುಮೇರಿಯಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ, ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌

UGCET 2024 seat allotment process begins Only a few days left for the option to enter
ಬೆಂಗಳೂರು42 mins ago

UGCET 2024 : ಯುಜಿಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ; ಆಪ್ಶನ್ ಎಂಟ್ರಿ ಮಾಡಲು ಕೆಲವೇ ದಿನಗಳು ಬಾಕಿ!

Actor Darshan Lata Jaiprakash says that since Darshan is a devotee of God,
ಸಿನಿಮಾ56 mins ago

Actor Darshan: ದರ್ಶನ್ ದೈವ ಭಕ್ತ, ಜೈಲಿಗೆ ಸೇರಿದ್ದಾಗಿನಿಂದ ವಿಜಯಲಕ್ಷ್ಮಿ ಅತ್ತಿಗೆ ಹೋರಾಟ ಜಾಸ್ತಿ ಆಗಿದೆ ಎಂದ ಲತಾ ಜೈಪ್ರಕಾಶ್!

Paris Olympics
ಕ್ರೀಡೆ60 mins ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

illicit relationship raichur siravara
ಕ್ರೈಂ1 hour ago

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Gold Rate Today
ಚಿನ್ನದ ದರ1 hour ago

Gold Rate Today: ಬಜೆಟ್‌ ಬಳಿಕ ಇದೇ ಮೊದಲ ಬಾರಿ ಏರಿಕೆ ಕಂಡ ಚಿನ್ನದ ದರ; ಇಂದು ಇಷ್ಟು ದುಬಾರಿ

Actor Darshan Astrologer Chanda Pandey Said Facing Problems Because Of His vig
ಕ್ರೈಂ1 hour ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ17 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ18 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ19 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ20 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌