NIA Raid: ಹುಬ್ಬಳ್ಳಿಯಲ್ಲಿ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದ ಎನ್‌ಐಎ - Vistara News

ಕರ್ನಾಟಕ

NIA Raid: ಹುಬ್ಬಳ್ಳಿಯಲ್ಲಿ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದ ಎನ್‌ಐಎ

NIA Raid: ಹುಬ್ಬಳ್ಳಿಯ ಗಣೇಶ ಪೇಟೆಯ ನಿವಾಸಿಯನ್ನು ಶುಕ್ರವಾರ ರಾತ್ರಿ ಎನ್‌ಐಎ ವಶಕ್ಕೆ ಪಡೆದಿದೆ.

VISTARANEWS.COM


on

NIA Raid
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಹುಬ್ಬಳ್ಳಿ: ನಗರದಲ್ಲಿ ಶಂಕಿತ ವ್ಯಕ್ತಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಶಕ್ಕೆ ಪಡೆದಿದೆ. ಕೇಂದ್ರ ಗುಪ್ತಚಾರ ಇಲಾಖೆ ನೀಡಿದ ಮಾಹಿತಿ ಮೇರೆಗೆ ನಗರದ ಗಣೇಶ ಪೇಟೆಯ ನಿವಾಸಿ ಶೋಯೆಬ್‌ ಮಿರ್ಜಾ ಎಂಬಾತನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಹುಬ್ಬಳ್ಳಿಯ ಗಣೇಶ ಪೇಟೆಯ ಹೊಟೆಲ್‌ನಲ್ಲಿದ್ದ ಶೋಯೆಬ್ ಮಿರ್ಜಾನನ್ನು ಎನ್‌ಐಎ ವಶಕ್ಕೆ ಪಡೆದಿದ್ದು, ಯಾವ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆಯಲಾಗಿದೆ ಎಂದು ಇನ್ನಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ | Self Harming: ನೇಣು ಬಿಗಿದು ಮಹಿಳೆ ಆತ್ಮಹತ್ಯೆ; ವರದಕ್ಷಿಣೆ ಕಿರುಕುಳ ಆರೋಪ

ಮೂರು ವರ್ಷದಲ್ಲಿ ಮೂರು ಬ್ಲಾಸ್ಟ್; ಈ ಮೂರಕ್ಕೂ ಶಿವಮೊಗ್ಗ ನಂಟು!

ಬೆಂಗಳೂರು: ರಾಜಧಾನಿಯ ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe Blast) ಬಾಂಬ್‌ ಸ್ಪೋಟಿಸಿದ (Blast in Bengaluru) ಪ್ರಕರಣ ಸಂಬಂಧ ಪ್ರಧಾನ ಆರೋಪಿ, ಬಾಂಬ್‌ ಇಟ್ಟು ತಲೆ ಮರೆಸಿಕೊಂಡು ಓಡಾಡುತ್ತಿದ್ದ ಪಾತಕಿ ಹಾಗೂ ಇದರ ಹಿಂದಿನ ಮಾಸ್ಟರ್‌ ಮೈಂಡ್‌ ಬಂಧನವಾಗಿದೆ. ಪಾತಕಿ ಮುಸಾವೀರ್ ಶಾಜೀಬ್ ಹುಸೇನ್‌ (mussavir shazeeb hussain) ಹಾಗೂ ಬಾಂಬ್‌ ಇಡುವ ಪ್ಲ್ಯಾನ್‌ ರೂಪಿಸಿದ್ದ ಪ್ರಧಾನ ಸೂತ್ರಧಾರಿ ಅಬ್ದುಲ್‌ ಮತೀನ್‌ ತಾಹಾನನ್ನು (Abdul Mateen Taha) ರಾಷ್ಟ್ರೀಯ ತನಿಖಾ ದಳ (ಎನ್‌ಐಎ – NIA) ಬಂಧಿಸಿದೆ. ಈ ವೇಳೆ ರಾಜ್ಯದಲ್ಲಿ ನಡೆದ ಬಾಂಬ್‌ ಬ್ಲಾಸ್ಟ್‌ ಬಗ್ಗೆ ನೋಡುವುದಾದರೆ, ಮೂರು ವರ್ಷದಲ್ಲಿ ಮೂರು ಬ್ಲಾಸ್ಟ್, ಮೂರಕ್ಕೂ ಮಲೆನಾಡ ನಂಟು ಇರುವುದು ಗೊತ್ತಾಗಿದೆ.

2021ರಲ್ಲಿ ಶಿವಮೊಗ್ಗ ಟ್ರಯಲ್ ಬ್ಲಾಸ್ಟ್, 2022ರಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಹಾಗೂ 2024ರಲ್ಲಿ ನಡೆದ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್‌ಗಳಲ್ಲೂ ಮಲೆನಾಡ ಯುವಕರದ್ದೇ ಕೃತ್ಯ ಇರುವುದು ಬಯಲಾಗಿದೆ. ಈಗ ಎನ್‌ಐಎ ಲಿಸ್ಟ್‌ನಲ್ಲಿ ಮಲೆನಾಡಿನ 6 ಜನ ಶಂಕಿತ ಉಗ್ರರು ಇದ್ದಾರೆ.

Rameshwaram Cafe Blast 3 blasts in 3 years All linked to Shivavogga

ಹಿಟ್ ಲಿಸ್ಟ್ ನಂಬರ್ 1

ಅಬ್ದುಲ್ ಮತೀನ್ ತಾಹಾ (ಬಂಧಿತ ಆರೋಪಿ) ಈತ ಒಬ್ಬ ಹ್ಯಾಂಡ್ಲರ್..! ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದು ವಿದೇಶದಲ್ಲಿರುವ ಮಾಹಿತಿ ಎನ್.ಐ.ಎಗೆ ಲಭ್ಯವಾಗಿತ್ತು. ಆದರೆ, ಈತ ದೇಶಕ್ಕೆ ಬಂದು ಸ್ಫೋಟದ ರೂವಾರಿಯಾಗಿದ್ದಾನೆ. ಸದ್ಯ ಈತನ ಬಂಧನವಾಗಿದ್ದು, ಎಲ್ಲ ಆಯಾಮದಲ್ಲೂ ಎನ್ ಐ ಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮಂಗಳೂರು ಹಾಗೂ ಶಿವಮೊಗ್ಗ ಟ್ರಯಲ್ ಬ್ಲಾಸ್ಟ್‌ನ ಹ್ಯಾಂಡ್ಲರ್ ಇದೇ ಮತೀನ್ ಆಗಿದ್ದಾನೆ.

ಹಿಟ್ ಲಿಸ್ಟ್ ನಂಬರ್ 2

ಅರಾಫತ್ ಅಲಿ. ಈತನನ್ನು ದೆಹಲಿಯಲ್ಲಿ ಬಂಧನ ಮಾಡಲಾಗಿತ್ತು. ಅರಾಫತ್ ಅಲಿ ಮೂಲತಃ ತೀರ್ಥಹಳ್ಳಿಯವನು ಪ್ರಕರಣದಲ್ಲಿ ಭಾಗಿಯಾಗಿ ಕೀನ್ಯಾದಿಂದ ಬರುವಾಗ ದೆಹಲಿ ಏರ್‌ಪೋರ್ಟ್‌ನಲ್ಲಿ ಬಂಧನವಾಗಿದ್ದ. ಈತ ಮಾಜ್ ಹಾಗೂ ಶಾರಿಕ್‌ಗೆ ಹ್ಯಾಂಡ್ಲರ್ ಆಗಿ ಕೆಲಸ ಮಾಡುತ್ತಲಿದ್ದ.

ಹಿಟ್ ಲಿಸ್ಟ್ ನಂಬರ್ 3

ಮಂಗಳೂರಿನ ಕುಕ್ಕರ್‌ ಬ್ಲಾಸ್ಟ್‌ ಶಾರಿಕ್ ಇನ್ನೊಬ್ಬ ಶಂಕಿತ ಉಗ್ರ. ಈತ ಮಂಗಳೂರಿನಲ್ಲಿ ಬಂಧನವಾಗಿದ್ದಾನೆ. ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್‌ನ ರೂವಾರಿಯಾಗಿದ್ದ ಶಾರಿಕ್, ಕದ್ರಿ ದೇವಾಲಯದಲ್ಲಿ ಕುಕ್ಕರ್ ಬ್ಲಾಸ್ಟ್ ಮಾಡಲು ಹೋಗುತ್ತಿದ್ದ. ಆದರೆ, ಆಟೋದಲ್ಲಿಯೇ ಬಾಂಬ್‌ ಸ್ಫೋಟಗೊಂಡಿತ್ತು. ಇದು ಮಾತ್ರವಲ್ಲದೆ ಶಿವಮೊಗ್ಗ ಟ್ರಯಲ್ ಬ್ಲಾಸ್ಟ್‌ನಲ್ಲೂ ಶಾರಿಕ್ ಪಾತ್ರವಿತ್ತು ಎಂದು ಎನ್‌ಐಎ ತನಿಖೆ ವೇಳೆ ತಿಳಿದುಬಂದಿದೆ.

ಹಿಟ್ ಲಿಸ್ಟ್ ನಂಬರ್ 4

ಶಾರಿಕ್ ಜತೆ ಮಂಗಳೂರು ಗೋಡೆ ಬರಹ ಪ್ರಕರಣದ ಆರೋಪಿಯಾಗಿರುವ ಮಾಜ್‌ ಮುನೀರ್ ಸಹ ಹಿಟ್‌ ಲಿಸ್ಟ್‌ನಲ್ಲಿದ್ದಾನೆ. ಈತ ಶಿವಮೊಗ್ಗ ಟ್ರಯಲ್ ಬ್ಲಾಸ್ಟ್‌ನಲ್ಲಿಯೂ ಭಾಗಿಯಾಗಿದ್ದ. ಅರಾಫತ್ ಅಲಿ ಮಾಜ್‌ನ ಹ್ಯಾಂಡ್ಲರ್ ಆಗಿದ್ದ.

ಹಿಟ್ ಲಿಸ್ಟ್ ನಂಬರ್ 5

ಶಿವಮೊಗ್ಗದಲ್ಲಿ ನಡೆದಿದ್ದ ಟ್ರಯಲ್ ಬ್ಲಾಸ್ಟ್‌ನಲ್ಲಿ ಎನ್ಐಎನಿಂದ ಬಂಧನವಾಗಿರುವ ಸೈಯದ್ ಯಾಸಿನ್ ಮತ್ತೊಬ್ಬ ಪ್ರಮುಖ ಶಂಕಿತ ಉಗ್ರ. ಟ್ರಯಲ್ ಬ್ಲಾಸ್ಟ್ ಆದ ಬಳಿಕ ಎನ್ ಐ ಎ ಗೆ ಮೊದಲು ಸಿಕ್ಕಿಬಿದ್ದಿರುವ ಆರೋಪಿ ಈತ. ಈತನಿಗೆ ಅಬ್ದುಲ್ ಮತೀನ್ ತಾಹಾ ಹ್ಯಾಂಡ್ಲರ್ ಆಗಿದ್ದ.

ಹಿಟ್ ಲಿಸ್ಟ್ ನಂಬರ್ 6

ಇನ್ನೊಬ್ಬ ಮುಸಾಬಿರ್ ಹುಸೇನ್ ಶಾಜಿಬ್ ಬಂಧಿತ ಆರೋಪಿಯಾಗಿದ್ದಾನೆ. 2020ರ ಅಲ್ ಇದ್ ಮಾಡಲ್ ಕೇಸ್‌ನ ಆರೋಪಿಯಾಗಿದ್ದು, ಗುರಪ್ಪನಪಾಳ್ಯದಲ್ಲಿ ದಾಖಲಾಗಿದ್ದ ಕೇಸಲ್ಲಿ A17 ಆರೋಪಿಯಾಗಿದ್ದಾನೆ. ತಮಿಳುನಾಡು ಪೊಲೀಸರ ದಾಳಿ ವೇಳೆ ಮುಸಾಬಿರ್ ಹುಸೇನ್ ಹಾಗೂ ಅಬ್ದುಲ್ ಮತೀನ್ ತಾಹಾ ನಾಪತ್ತೆಯಾಗಿದ್ದರು. ಗುರಪ್ಪನಪಾಳ್ಯದಲ್ಲಿ ಮನೆ ಮಾಡಿಕೊಂಡು ವಿದ್ವಂಸಕ ಕೃತ್ಯಗಳಿಗೆ ಪ್ಲಾನ್ ಮಾಡಿದ್ದರು. ಸದ್ಯ ಈತನೇ ಈಗ ರಾಮೇಶ್ವರಂ ಕೆಫೆ ಬ್ಲಾಸ್ಟ್ ನ ರೂವಾರಿಯಾಗಿದ್ದಾನೆ.

ಇದನ್ನೂ ಓದಿ: Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಒಟ್ಟು 6 ಆರೋಪಿಗಳಲ್ಲಿ ಸೈಯದ್ ಯಾಸಿನ್ ಶಿವಮೊಗ್ಗ ನಗರದವನು. ಈತನನ್ನು ಹೊತರುಪಡಿಸಿದರೆ ಇನ್ನುಳಿದ ಐವರು ತೀರ್ಥಹಳ್ಳಿ ಮೂಲದವರಾಗಿದ್ದಾರೆ.

ಟ್ರಾನ್ಸಿಸ್ಟ್ ವಾರೆಂಟ್ ಅನುಮತಿ ಕೇಳಿರುವ ಎನ್‌ಐಎ

ಬಂಧಿತ ಶಂಕಿತ ಉಗ್ರರಿಬ್ಬರಾದ ಪಾತಕಿ ಮುಸಾವೀರ್ ಶಾಜೀಬ್ ಹುಸೇನ್‌ ಹಾಗೂ ಅಬ್ದುಲ್‌ ಮತೀನ್‌ ತಾಹಾನನ್ನು ವಶಕ್ಕೆ ತೆಗೆದುಕೊಂಡಿರುವ ಎನ್‌ಐಎ ತಂಡವು, ಮೂರು ದಿನಗಳ ಟ್ರಾನ್ಸಿಸ್ಟ್ ವಾರೆಂಟ್ ಅನುಮತಿ ಪಡೆದಿದ್ದು, ಕೋಲ್ಕೊತಾದಿಂದ ಶಂಕಿತ ಉಗ್ರರನ್ನು ಬೆಂಗಳೂರಿಗೆ ಕರೆತರಲು ಕ್ರಮ ಕೈಗೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading
Advertisement
Latest18 hours ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ19 hours ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest21 hours ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest22 hours ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ2 days ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest2 days ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest2 days ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ3 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ3 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ3 days ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌