Site icon Vistara News

Tumkur News: ಹೆಜ್ಜೇನು ದಾಳಿ; ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ

person injured in bee attack

ತುಮಕೂರು: ಹೊಲದಲ್ಲಿ ಕೆಲಸ ಮಾಡುವಾಗ ಹೆಜ್ಜೇನು ದಾಳಿ ಮಾಡಿದ್ದರಿಂದ ಮೂವರು ಮಕ್ಕಳು ಸೇರಿ ಒಟ್ಟು 9 ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ (Tumkur News) ಮಧುಗಿರಿ ತಾಲೂಕಿನ ಎಚ್. ಬಸವನಹಳ್ಳಿಯಲ್ಲಿ ನಡೆದಿದೆ. ಹೊಲದಲ್ಲಿ ಕೆಲಸ ಮಾಡುವಾಗ ಏಕಾಏಕಿ ಹೆಜ್ಜೇನು ದಾಳಿ ಮಾಡಿದೆ. ಹೀಗಾಗಿ ಗಾಬರಿಗೊಂಡು ದಿಕ್ಕಾಪಾಲಾಗಿ ಜನರು ಓಡಿದ್ದಾರೆ. ಆದರೂ ಜೇನು ನೊಣಗಳು ಬೆನ್ನತ್ತಿ ಕಚ್ಚಿವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

ಬೆಂಗಳೂರು: ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಶವಂತಪುರದಲ್ಲಿ ನಡೆದಿದೆ. ಗೌರಿಬಿದನೂರು ಮೂಲದ ನಗರಗೆರೆಯ ರಾಮಕೃಷ್ಣ (19) ಮೃತ ಯುವಕ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕೈಕಾಲು ಕಟ್ಟಿ ವೃದ್ಧೆಯ ಬರ್ಬರ ಹತ್ಯೆ

ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಕೈಕಾಲು ಕಟ್ಟಿ ವೃದ್ಧೆಯ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕಮಲಮ್ಮ (80) ಕೊಲೆಯಾದವರು. ಕೈಕಾಲು‌ ಕಟ್ಟಿ, ಬಾಯಿಗೆ ಪ್ಲಾಸ್ಟರ್ ಹಾಕಿ ದುಷ್ಕರ್ಮಿಗಳು ಕೊಲೆ ಮಾಡಿದ್ದು, ವೃದ್ಧೆಯ ಬಳಿಯಿದ್ದ ಚಿನ್ನಾಭರಣ, ಬೆಲೆಬಾಳುವ ವಸ್ತುಗಳನ್ನು ಕಸಿದು ಪರಾರಿಯಾಗಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Drowned in Pond: ಸೆಕೆ ತಾಳಲಾರದೆ ಕೆರೆಯಲ್ಲಿ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವು

ಮೃತ ಕಮಲಮ್ಮಗೆ ಮೂವರು ಮಕ್ಕಳು ಇದ್ದು, ಅವರು ಒಂಟಿಯಾಗಿ ವಾಸವಿದ್ದರು. ಮೂವರು ಮಕ್ಕಳು ಬೇರೆ ಬೇರೆ ಕಡೆ ವಾಸವಿದ್ದು, ಆರು ತಿಂಗಳ ಹಿಂದೆಯಷ್ಟೇ ಪತಿ ನಾಗರಾಜ್ ಮೃತಪಟ್ಟಿದ್ದರು. ನಂತರ ಒಂಟಿಯಾಗಿ ಕಮಲಮ್ಮ ವಾಸವಿದ್ದರು. ಹಂತಕರ ಸುಳಿವು ಪತ್ತೆಗೆ ಶ್ವಾನದಳ, ಎಫ್‌ಎಸ್ಎಲ್‌ ತಂಟ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.

Exit mobile version