NPS News | ರಾಜ್ಯ ಸರ್ಕಾರಿ ನೌಕರರು ಎನ್‌ಪಿಎಸ್‌ ಬೇಡ, ಒಪಿಎಸ್‌ ಬೇಕು ಎನ್ನಲು ಕಾರಣವಾದರೂ ಏನು? - Vistara News

ಕರ್ನಾಟಕ

NPS News | ರಾಜ್ಯ ಸರ್ಕಾರಿ ನೌಕರರು ಎನ್‌ಪಿಎಸ್‌ ಬೇಡ, ಒಪಿಎಸ್‌ ಬೇಕು ಎನ್ನಲು ಕಾರಣವಾದರೂ ಏನು?

ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆ(ಒಪಿಎಸ್‌) ಜಾರಿಗೊಳಿಸಬೇಕೆಂದು (NPS News) ರಾಜ್ಯ ಸರ್ಕಾರಿ ನೌಕರರು ಬೆಂಗಳೂರಿನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಈ ಕುರಿತ ಸಮಗ್ರ ಮಾಹಿತಿ ಇಲ್ಲಿದೆ.

VISTARANEWS.COM


on

NPS News protest against New Pension Scheme
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆ(ಒಪಿಎಸ್‌) ಜಾರಿಗೊಳಿಸಬೇಕೆಂದು (NPS News) ರಾಜ್ಯ ಸರ್ಕಾರಿ ನೌಕರರು ಒತ್ತಾಯಿಸುತ್ತಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇತ್ತೀಚೆಗೆ ನಡೆದ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಎನ್‌ಪಿಎಸ್‌ ರದ್ದು ಪಡಿಸುವ ವಿಷಯವು ಚುನಾವಣಾ ವಿಷಯವಾಗಿದ್ದರಿಂದ ರಾಜ್ಯದಲ್ಲಿಯೂ ಈ ಪ್ರತಿಭಟನೆ ಮಹತ್ವ ಪಡೆದುಕೊಂಡಿದೆ. ಹೊಸ ಪಿಂಚಣಿ ಯೋಜನೆಗೆ ವಿರೋಧ ಏಕೆ ಎಂಬ ಮಾಹಿತಿ ಇಲ್ಲಿದೆ.

ಒಪಿಎಸ್‌ v/s ಎನ್‌ಪಿಎಸ್‌
ನಿವೃತ್ತರಾದ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ(ಒಪಿಎಸ್‌)ಯಲ್ಲಿ ಇಂತಿಷ್ಟು ಎಂದು ನಿಶ್ಚಿತ ಮೊತ್ತವು ಪಿಂಚಣಿಯಾಗಿ ದೊರೆಯುತ್ತಿತ್ತು. ಸರ್ಕಾರ ತೆರಿಗೆದಾರರ ಹಣವನ್ನು ಬಳಸಿ ಈ ಪಿಂಚಣಿ ನೀಡುತ್ತಿತ್ತು. ಕನಿಷ್ಠ 10 ವರ್ಷ ಸರ್ಕಾರಿ ಸೇವೆ ಸಲ್ಲಿಸಿದ ನೌಕರರು ಈ ಪಿಂಚಣಿ ಯೋಜನೆಗೆ ಅರ್ಹರಾಗಿರುತ್ತಿದ್ದರು. ಪಿಂಚಣಿ ಪಡೆಯಲು ಅವರು ಯಾವುದೇ ಮೊತ್ತವನ್ನು ಹೂಡಿಕೆ ಮಾಡಬೇಕಾಗಿಯೇನೂ ಇರಲಿಲ್ಲ.

ಈಗ ಜಾರಿಯಲ್ಲಿರುವ ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ಅಡಿಯಲ್ಲಿ ನಿವೃತ್ತಿಯ ನಂತರ ಎಷ್ಟು ಮೊತ್ತ ಪಿಂಚಣಿಯಾಗಿ ದೊರೆಯುತ್ತದೆ ಎಂದು ನಿರ್ದಿಷ್ಟವಾಗಿ ಹೇಳಲಾಗದು. ಏಕೆಂದರೆ ನೌಕರನು ಪ್ರತಿ ತಿಂಗಳು ಎನ್‌ಪಿಎಸ್‌ ಖಾತೆಯಲ್ಲಿ ಸಂಬಳದ ಶೇ.10 ರಷ್ಟನ್ನು ಇರಿಸಬೇಕು. ಅದಕ್ಕೆ ಪ್ರತಿಯಾಗಿ ಸರ್ಕಾರವು ಶೇ.14ರಷ್ಟನ್ನು ನೀಡುತ್ತದೆ. ಈ ರೀತಿ ಜಮಾ ಆದ ಮೊತ್ತಕ್ಕೆ ಎಷ್ಟು ಲಾಭ ಸಿಗುತ್ತದೆ ಎಂಬುದನ್ನು ಆಧರಿಸಿ ಪಿಂಚಣಿ ಮೊತ್ತವನ್ನು ಲೆಕ್ಕ ಹಾಕಲಾಗುತ್ತದೆ.

ನೌಕರರ ಸಂಬಳದಿಂದ ಕಡಿತ ಮಾಡಿದ ಮೊತ್ತವನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊತ್ತಿರುವ ಕಂಪನಿಗಳು ಆಯಾ ಕಾಲಕ್ಕೆ ಅವರ ಲಾಭ ನಷ್ಟಗಳ ಆಧಾರದಲ್ಲಿ ಪಿಂಚಣಿಯ ಮೊತ್ತವನ್ನು ನಿಗದಿಪಡಿಸಬಹುದು. ಆ ಮೊತ್ತ ಹೆಚ್ಚಿರಬಹುದು, ಕಡಿಮೆ ಇರಬಹುದು ಅಥವಾ ಏನೂ ಇಲ್ಲದೇ ಹೋಗಬಹುದು! ಇದನ್ನು ಪೆನ್ಷನ್‌ ಫಂಡ್‌ ರೆಗ್ಯುಲೇಟರಿ ಅಂಡ್‌ ಡೆವಲಪ್‌ಮೆಂಟ್‌ ಅಥಾರಿಟಿ ಕಾಯ್ದೆಯ ಸೆಕ್ಷನ್‌ 20 (2)(ಜಿ) ರಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಇದರ ಪ್ರಕಾರ ಪಿಂಚಣಿ ಮೊತ್ತದ ನೀಡಿಕೆಯ ಬಗ್ಗೆ ಯಾವುದೇ ಗ್ಯಾರಂಟಿ ಇರುವುದಿಲ್ಲ. ಆಯಾ ಕಾಲಘಟ್ಟದಲ್ಲಿ ಪಿಂಚಣಿ ನಿರ್ವಾಹಕರ ತೀರ್ಮಾನದಂತೆ ಪಿಂಚಣಿಯನ್ನು ನೀಡಲಾಗುತ್ತದೆ.

ಹಿಂದೆ ಸಾಮಾನ್ಯ ಭವಿಷ್ಯ ನಿಧಿ (ಜಿಪಿಎಫ್‌) ಹಣಕ್ಕೆ ಸರ್ಕಾರವು ಮೊದಲು ಶೇ.12ರಷ್ಟು ಬಡ್ಡಿ ನೀಡಲಾಗುತ್ತಿತ್ತು. ನಂತರ ಈ ಬಡ್ಡಿ ದರವು ಸರಿಸುಮಾರು ಶೇ. 8.5 ಕ್ಕೆ ಇಳಿದಿದೆ. ಕೊನೆಗೆ ಅಸಲು ಮತ್ತು ಬಡ್ಡಿ ಒಟ್ಟು ಮೊತ್ತವನ್ನು ಸಂಬಂಧಿತ ನೌಕರರಿಗೆ ಪಾವತಿ ಮಾಡಲಾಗುತ್ತಿತ್ತು. ಈಗ ಅದರ ಬದಲಾಗಿ ನೌಕರರ ಉಳಿತಾಯ ಹಣವನ್ನು ಕಂಪನಿಯ ಷೇರು ಬಂಡವಾಳವಾಗಿ ಪರಿಗಣಿಸಲಾಗುತ್ತದೆ. ಈ ಕಂಪನಿಗೆ ಲಾಭ ಬಂದರೆ ಡಿವಿಡೆಂಟ್‌ ನೀಡಲಾಗುತ್ತದೆ. ನಷ್ಟವಾದರೆ ಇಡೀ ಉಳಿತಾಯ ಹಣವೇ ಮಂಗಮಾಯವಾಗುತ್ತದೆ.

ಎನ್‌ಪಿಎಸ್‌ನಲ್ಲಿ ನೌಕರರ ಹಣವನ್ನು ಷೇರುಪೇಟೆಯಲ್ಲಿಯೂ, ಸರ್ಕಾರದ ಬಾಂಡ್‌ಗಳಲ್ಲಿಯೂ ಹೂಡಿಕೆ ಮಾಡಲಾಗುತ್ತದೆ. ಷೇರುಪೇಟೆಯಲ್ಲಿ ಹೆಚ್ಚಿನ ಮೊತ್ತ ತೊಡಗಿಸಿದರೆ ವಾರ್ಷಿಕವಾಗಿ ಶೇಕಡ 10ರಿಂದ ಶೇ 12ರವರೆಗೆ ಲಾಭ ಪಡೆಯುವ ಸಾಧ್ಯತೆಯೂ ಇರುತ್ತದೆ. ಆದರೆ, ಮಾರುಕಟ್ಟೆಯಲ್ಲಿ ಏರಿಳಿತ ಕಾರಣ 30 ವರ್ಷಗಳ ಅವಧಿಯಲ್ಲಿ ಶೇ 8ರಷ್ಟು ವಾರ್ಷಿಕ ಸರಾಸರಿ ಲಾಭ ಸಿಕ್ಕರೆ ಹೆಚ್ಚು.

ಸದ್ಯ ಪಿಂಚಣಿ ನಿಧಿ ನಿರ್ವಾಹಕರು (ಪಿಎಫ್‌ಎಂ)
೧. ಎಚ್‌ಡಿಎಫ್‌ಸಿ ಪೆನ್ಷನ್‌ ಮ್ಯಾನೇಜ್‌ಮೆಂಟ್‌ ಕಂಪನಿ ಲಿ.
೨. ಐಸಿಐಸಿಐ ಪ್ರಿಡೆನ್ಷಿಯಲ್‌ ಪೆನ್ಷನ್‌ ಫಂಡ್ಸ್‌ ಮ್ಯಾನೇಜ್‌ಮೆಂಟ್‌ ಕಂಪನಿ ಲಿ.
೩. ಕೊಟಕ್‌ ಮಹೀಂದ್ರ ಪೆನ್ಷನ್‌ ಫಂಡ್‌ ಲಿ.
೪. ಎಲ್‌ಐಸಿ ಪೆನ್ಷನ್‌ ಫಂಡ್‌ ಲಿ.
೫. ರಿಲೆಯನ್ಸ್‌ ಕ್ಯಾಪಿಟಲ್‌ ಪೆನ್ಷನ್‌ ಫಂಡ್‌ ಲಿ.
೬. ಎಸ್‌ಬಿಐ ಪೆನ್ಷನ್‌ ಫಂಡ್ಸ್‌ ಪ್ರವೇಟ್‌ ಲಿ.
೭.ಯುಟಿಐ ರಿಟೈರ್‌ಮೆಂಟ್‌ ಸಲ್ಯುಷನ್ಸ್‌ ಲಿ.
೮. ಡಿಎಸ್‌ಪಿ ಬ್ಲಾಕ್‌ ರಾಕ್‌ ಪೆನ್ಷನ್‌ ಫಂಡ್‌ ಮ್ಯಾನೇಜರ್ಸ್‌ ಪ್ರವೇಟ್‌ ಲಿ.
ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಸಮನ್ವಯಗೊಳಿಸಲು ಟ್ರಸ್ಟಿ ಬ್ಯಾಂಕ್‌ ಜವಾಬ್ದಾರಿಯನ್ನು ಆಕ್ಸಿಸ್‌ ಬ್ಯಾಂಕಿಗೆ ವಹಿಸಲಾಗಿದೆ.

ಸಮಸ್ಯೆ ಏನಾಗುತ್ತಿದೆ?
ಒಬ್ಬ ಸರ್ಕಾರಿ ನೌಕರ 30-35 ವರ್ಷ ಸರ್ಕಾರಿ ಸೇವೆಯಲ್ಲಿದ್ದು, ತನ್ನ ಶಕ್ತಿ ಮತ್ತು ಜ್ಞಾನವನ್ನು ಕೆಲಸದಲ್ಲಿ ವ್ಯಯಮಾಡಿರುತ್ತಾರೆ. ಆ ಮೂಲಕ ಸಮಾಜ ಮತ್ತು ದೇಶದ ಸೇವೆ ಮಾಡುತ್ತಿರುತ್ತಾನೆ. ಈ ನೌಕರನ ಸಂಧ್ಯಾ ಕಾಲದಲ್ಲಿ ಸಾಮಾಜಿಕ ಆರ್ಥಿಕ ಭದ್ರತೆಯನ್ನು ಒದಗಿಸುವುದು ಸರ್ಕಾರದ ಸಂವಿಧಾನ ಬದ್ಧ ಕರ್ತವ್ಯವಾಗಿರುತ್ತದೆ. ಹೀಗಾಗಿಯೇ ಈ ಹಿಂದೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿತ್ತು.

ಈ ಪಿಂಚಣಿ ಯೋಜನೆಯನ್ನು ಬದಲಾಯಿಸಿ ಈಗ ಅಂದರೆ 2006ರಿಂದ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದು ಹಳೇ ಪಿಂಚಣಿ ಯೋಜನೆಯಲ್ಲಿ ಸುಧಾರಣೆ ತರುವ ಬದಲಾಗಿ, ಪಿಂಚಣಿ ಯೋಜನೆಯ ಉದ್ದೇಶಕ್ಕೇ ತದ್ವಿರುದ್ಧವಾಗಿದೆ. “ಯು ಟರ್ನ್‌ʼʼ ಹೊಡೆದಿದೆ ಎಂದು ಈಗ ಸರ್ಕಾರಿ ನೌಕರರು ಆರೋಪಿಸುತ್ತಿದ್ದಾರೆ. ಎನ್‌ಪಿಎಯಿಂದಾಗಿ ಪ್ರತಿ ಸರ್ಕಾರಿ ನೌಕರನ ಸಂಧ್ಯಾಕಾಲವು ಅಭದ್ರತೆಯಿಂದ ಕೂಡಿದೆ. ನಿವೃತ್ತಿ ಜೀವನ ಹೇಗೆಂಬ ತಳಮಳದಿಂದ ದಿನಾ ಬದುಕುವಂತಾಗಿದೆ. ಈಗಾಗಲೇ ಹೊಸ ಪಿಂಚಣಿ ಯೋಜನೆ ಪ್ರಕಾರ ನಿವೃತ್ತಿ ಹೊಂದಿದ ನೌಕರರು 500, 1000,1,500, 2000 ಹೀಗೆ ಪಿಂಚಣಿ ಪಡೆಯುತ್ತಿದ್ದಾರೆ ಎಂದು ಎನ್‌ಪಿಎಸ್‌ ನೌಕರ ಸಂಘದ ಅಧ್ಯಕ್ಷ ಶಾಂತರಾಮ ಹೇಳಿದ್ದಾರೆ.

ಜಾರಿ ಎಂದಿನಿಂದ?

ಕೇಂದ್ರ ಸರ್ಕಾರವು ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ಜಾರಿಗೊಳಿಸುವ ಉದ್ದೇಶದಿಂದ “ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ” (ಪಿಎಫ್‌ಆರ್‌ಡಿಎ) ರೂಪಿಸಿದೆ. ಇದು ಅಂತಿಮವಾಗಿ ಅಂಗೀಕಾರ ಪಡೆದಿರುವುದು 2013ರಲ್ಲಿ. ಆದರೆ, ಇದಕ್ಕೂ ಮೊದಲೇ ಕೇಂದ್ರ ಸರ್ಕಾರ 2003ರ ಅಕ್ಟೋಬರ್‌ 29ರಂದು ಕಾರ್ಯಾದೇಶದ ಮೂಲಕ ಇದಕ್ಕೆ ಸಂಬಂಧಿಸಿದ ಪ್ರಾಧಿಕಾರ ಸ್ಥಾಪಿಸಿತ್ತು. ಎನ್‌ಡಿಎ ಸರ್ಕಾರದ ಈ ಆದೇಶವನ್ನು ಯುಪಿಎ ಸರ್ಕಾರವೂ ಯಾವುದೇ ಬದಲಾವಣೆಗಳಿಲ್ಲದೆಯೇ ಮುಂದುವರಿಸಿತು. 2004ರ ಜನವರಿ 1ರಿಂದ ನೇಮಕವಾಗುವ ಕೇಂದ್ರ ಸರ್ಕಾರಿ ನೌಕರರಿಗೆ ಈ ಹೊಸ ಪಿಂಚಣಿ ಯೋಜನೆ ಜಾರಿಗೆ ಬಂದಿದೆ. ಈಗಾಗಲೇ 27 ರಾಜ್ಯ ಸರ್ಕಾರಗಳು ಎನ್‌ಪಿಎಸ್‌ ಜಾರಿಗೊಳಿಸಿವೆ.

ರಾಜ್ಯದಲ್ಲಿ ಹೊಸ ಪಿಂಚಣಿ ಯೋಜನೆಯು ದಿನಾಂಕ 01-04-2006ರಿಂದ ಜಾರಿಗೆ ಬಂದಿದೆ. ಈ ಕುರಿತು ದಿನಾಂಕ 11-11-2009 ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, 2006ರಿಂದ ಪೂರ್ವಾನ್ವಯವಾಗುವಂತೆ ಇದನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು. ಈ ಯೋಜನೆ ಜಾರಿಗೆ ಬಂದು ಈಗ 16 ವರ್ಷಗಳಾಗಿವೆ. ಈ ಅವಧಿಯಲ್ಲಿ ನೇಮಕಗೊಂಡ ಸುಮಾರು 2,54,000 ನೌಕರರು ಹಾಗೂ ಸುಮಾರು ಒಂದು ಲಕ್ಷ ನಿಗಮ ಮಂಡಳಿಗಳ, ಅನುದಾನಿತ ಹಾಗೂ ಅರೆ ಸರ್ಕಾರಿ ನೌಕರರು ಈ ಹೊಸ ಪಿಂಚಣಿ ಯೋಜನೆಯಡಿ ಬರುತ್ತಾರೆ. ಅವರೆಲ್ಲರೂ ಹೊಸ ಪಿಂಚಣಿ ಯೋಜನೆಗೆ ಈಗ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯದಲ್ಲಿ ಹೋರಾಟ ಶುರುವಾಗಿದ್ದು ಯಾವಾಗ?
ಹೊಸ ಪಿಂಚಣಿ ಯೋಜನೆ ವಿರುದ್ಧ ರಾಜ್ಯದಲ್ಲಿ 2014ರಿಂದಲೂ ಪ್ರತಿಭಟನೆ ನಡೆಯುತ್ತಿದೆ. 2014ರ ಏಪ್ರಿಲ್‌ 1 ರಂದು ರಾಜ್ಯ ಸರ್ಕಾರಿ ನೌಕರರು ಕಪ್ಪುಪಟ್ಟಿ ಧರಿಸಿ, ಮೊದಲಿಗೆ ಪ್ರತಿಭಟನೆ ನಡೆಸಿದ್ದರು. ನಂತರ ಪೋಸ್ಟ್‌ ಕಾರ್ಡ್‌ ಅಭಿಯಾನ ನಡೆಸಲಾಗಿತ್ತು. 2016ರ ಫೆಬ್ರವರಿಯಲ್ಲಿ “ನಿಶ್ಚಿತ ಪಿಂಚಣಿ ನಮ್ಮ ಹಕ್ಕು” ಎಂಬ ಘೋಷ ವಾಕ್ಯದೊಂದಿಗೆ ರಾಜ್ಯದ ಮುಖ್ಯಮಂತ್ರಿಗಳಿಗೆ, ರಾಜ್ಯದ ಎಲ್ಲ ಜನಪ್ರತಿನಿಧಿಗಳಿಗೆ ಸರ್ಕಾರಿ ನೌಕರರು ಎನ್‌ಪಿಎಸ್‌ ರದ್ದು ಪಡಿಸುವಂತೆ ಮನವಿ ಸಲ್ಲಿಸಿದ್ದರು. 2017ರ ಮಾರ್ಚ್‌ನಲ್ಲಿ ದೆಹಲಿ ಚಲೋ ನಡೆಸಲಾಗಿತ್ತು. ಜುಲೈನಲ್ಲಿ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಬೆಂಗಳೂರಿನಲ್ಲಿ ಆಯೋಜಿಸುವ ಮೂಲಕ ಈ ಕುರಿತು ನೌಕರರಲ್ಲಿ ಜಾಗೃತಿ ಮೂಡಿಸಲಾಗಿತ್ತು.

2018ರ ಜನವರಿ 20 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ ಚಲೋ ಬೃಹತ್‌ ಪ್ರತಿಭಟನೆ ಆಯೋಜಿಸಲಾಗಿತ್ತು. ನಂತರ ನೌಕರರು ಒಂದು ದಿನದ ಉಪವಾಸ ಧರಣಿ ಸತ್ಯಾಗ್ರಹ ನಡೆಸಿದ್ದರು. ಅದೇ ವರ್ಷ ಅಕ್ಟೋಬರ್‌ನಲ್ಲಿ ಪಾರ್ಲಿಮೆಂಟ್‌ ಚಲೋ ಮತ್ತು ನವೆಂಬರ್‌ನಲ್ಲಿ ಬೆಳಗಾವಿ ಚಲೋ ನಡೆಸಲಾಗಿತ್ತು. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದಾಗ ಜಾಥಾ ಹಾಗೂ ಧರಣಿ ನಡೆಸಲಾಗಿತ್ತು. 2018 ರ ಅಕ್ಟೋಬರ್‌ 03 ರಂದು “ರಕ್ತ ಕೊಟ್ಟೆವು ಪಿಂಚಣಿ ಬಿಡೆವುʼʼ ಎಂಬ ಘೋಷ ವಾಕ್ಯದೊಂದಿಗೆ ರಾಜ್ಯದ 164 ಕೇಂದ್ರಗಳಲ್ಲಿ ರಕ್ತದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ವರ್ಷ ಅಕ್ಟೋಬರ್‌ 13 ರಿಂದ “ಒಪಿಎಸ್‌ ಸಂಕಲ್ಪ ಯಾತ್ರೆʼʼ ನಡೆಸಿ, ರಾಜ್ಯದ ಪ್ರತಿ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಎನ್‌ಪಿಎಸ್‌ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಇದೀಗ ಫ್ರೀಡಂಪಾಕ್‌ನಲ್ಲಿ “ಮಾಡು ಇಲ್ಲವೇ ಮಡಿʼʼ ಎಂಬ ಘೋಷ ವಾಕ್ಯದೊಂದಿಗೆ ಅನಿರ್ಧಿಷ್ಟ ಹೋರಾಟ ಆರಂಭಿಸಲಾಗಿದೆ.

ಇದನ್ನೂ ಓದಿ | NPS News | ಎನ್‌ಪಿಎಸ್‌ ರದ್ದು; ಹಿಮಾಚಲ ಪ್ರದೇಶದಂತೆ ರಾಜ್ಯದಲ್ಲಿಯೂ ಚುನಾವಣಾ ವಿಷಯವಾಗಲಿದೆಯೇ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading
Advertisement
Latest5 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest6 hours ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest1 day ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest2 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest2 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest2 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest2 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest2 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest2 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest2 days ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌