Patrika Bhavan: ವಸ್ತುನಿಷ್ಠ ಸುದ್ದಿ, ಸತ್ಯದ ವರದಿ ಮಾತ್ರ ಸಮಾಜಮುಖಿ: ಸಿದ್ದರಾಮಯ್ಯ - Vistara News

ಕರ್ನಾಟಕ

Patrika Bhavan: ವಸ್ತುನಿಷ್ಠ ಸುದ್ದಿ, ಸತ್ಯದ ವರದಿ ಮಾತ್ರ ಸಮಾಜಮುಖಿ: ಸಿದ್ದರಾಮಯ್ಯ

Patrika Bhavan: ಮೈಸೂರಿನಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರಕ್ಕೆ ಸಿಎಂ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

VISTARANEWS.COM


on

Cm Siddaramaiah lays foundation stone of new Press Building and Training Centre
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ. ಸಂವಿಧಾನ ವಿರೋಧಿಗಳನ್ನೂ ಪ್ರಶ್ನಿಸದೇ ಹೋದರೆ, ಅವರನ್ನೂ ನೀವು ಗೌರವದಿಂದ ನಡೆಸಿಕೊಂಡರೆ ನಿಮ್ಮನ್ನು ಸಮಾಜದ ನಾಲ್ಕನೇ ಅಂಗ ಅಂತ ಕರೆಯೋಕೆ ಆಗುತ್ತದೆಯೇ? ವಸ್ತುನಿಷ್ಠ ಸುದ್ದಿ, ಸತ್ಯದ ವರದಿ ಮಾತ್ರ (Patrika Bhavan) ಸಮಾಜಮುಖಿಯಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸಮಾಜದಲ್ಲಿ ಯಾಕಿನ್ನೂ ಅಸಮಾನತೆ ಇದೆ, ಸಂವಿಧಾನದ ವಿರುದ್ಧ ಮಾತಾಡುವವರೂ ಇದ್ದಾರೆ. ಇಂಥವರಿಂದ ಸಮಾಜಕ್ಕೆ ಆಗುವ ಹಾನಿಯನ್ನು ಪತ್ರಕರ್ತರು ವಿಶ್ಲೇಷಿಸಿ ಬರೆಯಬೇಕು ಎಂದು ಕರೆ ನೀಡಿದರು.

ಇವತ್ತು ಪತ್ರಿಕಾ ಕ್ಷೇತ್ರದಲ್ಲಿ ವೃತ್ತಿಪರತೆ ಇಲ್ಲವಾಗಿ ವ್ಯಾಪಾರ ಹೆಚ್ಚಾಗಿರುವುದು ಅನಾರೋಗ್ಯಕಾರಿ ಬೆಳವಣಿಗೆ. ಸಣ್ಣ ಪತ್ರಿಕೆಗಳ ತವರೂರು ಮೈಸೂರು ಪತ್ರಿಕಾ ವೃತ್ತಿ ಪರತೆಗೆ ಹೆಸರಾಗಿತ್ತು ಎಂದು ಸ್ಮರಿಸಿದ ಅವರು, ಓದುಗರು ಮಾಧ್ಯಮಗಳ ಬಗ್ಗೆ ಕುತೂಹಲ, ಆಸಕ್ತಿ ಕಳೆದುಕೊಂಡರೆ ಅದಕ್ಕೆ ವೃತ್ತಿಪರತೆ ಇಲ್ಲವಾಗಿದ್ದೇ ಕಾರಣ. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನೂ ಸುದ್ದಿ ಮಾಡ್ತೀರಿ, ಚರ್ಚೆ ಮಾಡ್ತೀರಿ. ಕಾಗೆ ಕುಳಿತರೆ ನಿಮಗೇನು ನಷ್ಟ? ಸಮಾಜಕ್ಕೇನು ನಷ್ಟ ಎಂದು ಪ್ರಶ್ನಿಸಿದರು.

ಇದನ್ನೂ ಓದಿ | Yuva Nidhi Scheme: ಡಿ. 26ರಿಂದ ಯುವನಿಧಿ ನೋಂದಣಿ ಶುರು; ಜ. 12ರಂದು ಖಾತೆಗೆ ಹಣ ಜಮೆ

ಗಂಡ ಹೆಂಡತಿ ಜಗಳ ಸುದ್ದಿ ಮಾಡ್ತೀರಲ್ಲಾ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಇಂಥದ್ದನ್ನೆಲ್ಲಾ ಸ್ಟೋರಿ ಮಾಡಿದರೆ ಮಾಧ್ಯಮಗಳ ಬಗ್ಗೆ ಜನ ಕುತೂಹಲ ಕಳೆದುಕೊಳ್ಳದೆ ಇನ್ನೇನಾಗುತ್ತದೆ ಎಂದ ಅವರು, ನಾನು ಶಂಕುಸ್ಥಾಪನೆ ಮಾಡಿದ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ವವನ್ನು ನಾನೇ ಉದ್ಘಾಟಿಸುತ್ತೇನೆ. ಅದಕ್ಕೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.

ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್ ಅವರು ವಹಿಸಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಜಿಲ್ಲೆಯ ಶಾಸಕರಾದ ಜಿ.ಟಿ.ದೇವೇಗೌಡ, ಶ್ರೀವತ್ಸ, ತನ್ವೀರ್ ಸೇಠ್, ಹರೀಶ್ ಗೌಡರು, ರವಿಶಂಕರ್, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮರಿತಿಬ್ಬೇಗೌಡರು, ಎ.ಎಚ್.ವಿಶ್ವನಾಥ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ | Cabinet meeting : ಒಂದೇ ಲಕ್ಷ ಕೊಟ್ರೆ ಸಾಕು, ಬಡವರಿಗೆ ಮನೆ; ಇದು ಕಾಂಗ್ರೆಸ್‌ನ 6ನೇ ಗ್ಯಾರಂಟಿ

Siddaramaiah

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಚ್.ಬಿ.ಮದನ್ ಗೌಡ, ಪತ್ರಕರ್ತರ ಸಂಘಗಳ ಒಕ್ಕೂಟದ ಮುಖಂಡರಾದ ಮಲ್ಲಿಕಾರ್ಜುನಯ್ಯ ಸೇರಿ ಹಲವು ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Traffic violation : ನಗೆಪಾಟಲಾದ ಟ್ರಾಫಿಕ್‌ ಪೊಲೀಸರು; ಹೆಲ್ಮೆಟ್ ಹಾಕಿಲ್ಲವೆಂದು ಟಿಪ್ಪರ್ ಲಾರಿ ಚಾಲಕನಿಗೆ 500 ರೂ. ದಂಡ

Traffic violation : ಬೈಕ್‌ ಓಡಿಸುವಾಗ ಸವಾರರು ಹೆಲ್ಮೆಟ್‌ ಹಾಕಿಲ್ಲವೆಂದರೆ ದಂಡ ವಿಧಿಸುವುದು ಮಾಮೂಲಿ. ಆದರೆ ಹೊನ್ನಾವರದಲ್ಲಿ ಟಿಪ್ಪರ್‌ ಲಾರಿ ಚಾಲಕ ಹೆಲ್ಮೆಟ್‌ ಧರಿಸದೇ ಇರುವುದಕ್ಕೆ ದಂಡ ತೆತ್ತಿದ್ದಾನೆ. ಟ್ರಾಫಿಕ್‌ ಪೊಲೀಸರ ಈ ಎಡವಟ್ಟು ಈಗ ನಗೆಪಾಟಲಿಗೆ ಕಾರಣವಾಗಿದೆ. ಟಿಪ್ಪರ್‌ ಲಾರಿ ಚಾಲಕನಿಗೆ ನೀಡಿರುವ ರಶೀದಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

VISTARANEWS.COM


on

By

traffic violation
Koo

ಕಾರವಾರ: ಟಿಪ್ಪರ್ ಲಾರಿ ಚಾಲಕ ಹೆಲ್ಮೆಟ್ ಧರಿಸಿಲ್ಲವೆಂದು ಟ್ರಾಫಿಕ್‌ ಪೊಲೀಸರು ದಂಡ ಹಾಕಿ (Traffic violation) ರಶೀದಿ ನೀಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ಘಟನೆ ನಡೆದಿದೆ.

ಹೊನ್ನಾವರದ ಉಸುಕು ಸಾಗಾಟದ ಟಿಪ್ಪರ್ ಚಾಲಕನಿಗೆ ಹೆಲ್ಮೆಟ್ ಧರಿಸಿಲ್ಲವೆಂದು ದಂಡ ವಿಧಿಸಿದ್ದಾರೆ. ಹೊನ್ನಾವರದ ಉಪ್ಪೋಣಿಯ ವಿನುತಾ ವಿನೋದ ನಾಯ್ಕ ಮಾಲೀಕತ್ವದ ಟಿಪ್ಪರ್ ಲಾರಿಯನ್ನು ಚಾಲಕ ಚಂದ್ರಕಾಂತ ಎಂಬಾತ ಚಲಾಯಿಸುತ್ತಿದ್ದ.

ಚಂದ್ರಕಾಂತ ಸಮವಸ್ತ್ರ ಧರಿಸದೇ ವಾಹನ ಚಲಾಯಿಸಿದ್ದನ್ನು ಕಂಡು ಪೊಲೀಸರು ವಾಹನವನ್ನು ತಡೆದಿದ್ದರು. ಈ ವೇಳೆ ಹೆಲ್ಮೆಟ್ ಧರಿಸದ ಕಾರಣಕ್ಕೆ ರಶೀದಿ ನೀಡಿ 500 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಇತ್ತ ದಂಡದ ರಶೀದಿ ಕಂಡು ಟಿಪ್ಪರ್ ಚಾಲಕ ಅವಾಕ್ಕಾಗಿದ್ದಾರೆ.

ಇನ್ನು ಟಿಪ್ಪರ್ ಲಾರಿ ಚಾಲಕನ ಹೆಲ್ಮೆಟ್ ದಂಡದ ರಶೀದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದಹಾಗೇ ದಂಡ ಹಾಕುವಾಗ ಸಮವಸ್ತ್ರದ ಬದಲು ಹೆಲ್ಮೆಟ್ ಆಯ್ಕೆಯಾಗಿರುವುದು ಇದಕ್ಕೆಲ್ಲ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ದಬಾಂಗ್‌ ಸ್ಟೈಲ್‌ನಲ್ಲಿ ಆಸ್ಪತ್ರೆಯೊಳಗೆ ನುಗ್ಗಿದ ಪೊಲೀಸ್‌ ಜೀಪ್‌! ವಿಡಿಯೋ ವೈರಲ್‌

ವಿವಾಹ ಮಂಟಪದಲ್ಲಿ ನಾಗವಲ್ಲಿ ಅವತಾರ ತಾಳಿದ ವಧು; ವರ ಈಗ ಕೋಮಾದಲ್ಲಿದ್ದಾನೆ ಎಂದ ನೆಟ್ಟಿಗರು

ಬೆಂಗಳೂರು: ಮದುವೆ ಎನ್ನುವುದು ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎನ್ನುವ ಮಾತಿದೆ. ಜತೆಗೆ ಭಾರತೀಯ ಸಂಸ್ಕೃತಿಯಲ್ಲಿ ಮದುವೆಗೆ ಮಹತ್ವದ ಸ್ಥಾನವಿದೆ. ಶಾಸ್ತ್ರೋಕ್ತವಾಗಿ ವಧು-ವರರು ವೈವಾಹಿಕ ಜೀವನಕ್ಕೆ ಕಾಲಿಡುತ್ತಾರೆ. ಈ ಅಪರೂಪದ ಘಳಿಗೆಯನ್ನು ಸ್ಮರಣೀಯವಾಗಿಸಲು ಮೊದಲೇ ಸಾಕಷ್ಟು ಸಿದ್ಧತೆ ನಡೆಸಲಾಗುತ್ತದೆ. ಆದರೆ ಕೆಲವೊಮ್ಮೆ ಮದುವೆ ಮನೆಯಲ್ಲಿ ನಡೆಯುವ ಎಡವಟ್ಟುಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ವೈರಲ್‌ ಆಗುತ್ತವೆ. ಸದ್ಯ ಅಂತಹದ್ದೇ ವಿಡಿಯೊವೊಂದು ಇಂಟರ್‌ನೆಟ್‌ನಲ್ಲಿ ಸದ್ದು ಮಾಡುತ್ತಿದೆ (Viral Video).

ಅದ್ಧೂರಿ ಮದುವೆಯೊಂದನ್ನು ಆಯೋಜಿಸಲಾಗಿತ್ತು. ಎಲ್ಲವೂ ಅಂದುಕೊಂಡಂತೆ ನಡೆಯುತ್ತಿತ್ತು. ಆದರೆ ಇದ್ದಕ್ಕಿದ್ದಂತೆ ವಧು ವಿಚಿತ್ರವಾಗಿ ಆಡಲು ಶುರು ಮಾಡುತ್ತಾಳೆ. ಅದುವರೆಗೆ ಸಂತೋಷದಿಂದ ಕೂಡಿದ್ದ ಮದುವೆ ಹಾಲ್‌ ಗೊಂದಲದ ಗೂಡಾಗುತ್ತದೆ. ಈ ವಿಡಿಯೊದ ಮೂಲ ಎಲ್ಲಿ ಎನ್ನುವುದು ಪತ್ತೆಯಾಗಿಲ್ಲ. ಸದ್ಯ ವೈರಲ್‌ ಆಗಿರುವ ಈ ವಿಡಿಯೊವನ್ನು ಈಗಾಗಲೇ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ.

ವಿಡಿಯೊದಲ್ಲಿ ಏನಿದೆ?

ಅ‍ದ್ಧೂರಿ ವಿವಾಹ ಮಂಟಪ. ಬಲ್ಪ್‌, ಹೂಗಳಿಂದ ಅಲಂಕರಿಸಿರುವ ಈ ಮಂಟಪದ ಆಸನದಲ್ಲಿ ಚೆನ್ನಾಗಿ ಮೇಕಪ್‌ ಮಾಡಿಕೊಂಡ ವಧು ಕೂತಿರುತ್ತಾಳೆ. ಆಕೆಯ ಎದುರು ವರ ನಿಂತಿದ್ದರೆ ಸುತ್ತ ನೆಂಟರಿಷ್ಟರು ನೆರೆದಿದ್ದಾರೆ. ಇದ್ದಕ್ಕಿದ್ದಂತೆ ವದು ಮೈಮೇಲೆ ದೆವ್ವ ಬಂದಂತೆ ಆಡಲು ಶುರು ಮಾಡುತ್ತಾಳೆ. ಕಣ್ಣನ್ನು ವಿಚಿತ್ರವಾಗಿ ತಿರುಗಿಸಿ ಅಕ್ಷರಶಃ ʼಆಪ್ತಮಿತ್ರʼ ಸಿನಿಮಾದಲ್ಲಿ ಬರುವ ನಾಗವಲ್ಲಿ ಅವತಾರ ತಾಳುತ್ತಾಳೆ. ಕೂದಲನ್ನು ಬಿಚ್ಚಿ ಹಾಕಿ ದೆವ್ವ ಮೈಮೇಲೆ ಬಂದವರು ಆಡುತ್ತಾರೆ ಎನ್ನುತ್ತಾರ ಹಾಗೆ ವರ್ತಿಸುತ್ತಾಳೆ. ಜತೆಗೆ ಜೋರಾಗಿ ನಗುತ್ತಾಳೆ. ಇದರಿಂದ ಬೆಚ್ಚಿಬೀಳುವ ವರ ಹಾರಿ ಬೀಳುತ್ತಾನೆ. ಸುತ್ತಲಿದ್ದವರು ಭಯ, ಗೊಂದಲದಲ್ಲಿ ಏನು ಮಾಡಬೇಕೆಂದು ತೋಚದೆ ದಿಗ್ಭ್ರಾಂತರಾಗಿ ನಿಲ್ಲುತ್ತಾರೆ. ಆಗ ಆಕೆಯ ಸಂಬಂಧಿಕರಿಬ್ಬರು ಧೈರ್ಯದಿಂದ ಮುಂದೆ ಬಂದು ಆಕೆಯನ್ನು ಹಿಡಿದುಕೊಳ್ಳುತ್ತಾರೆ. ಇವಿಷ್ಟು ವಿಡಿಯೊದಲ್ಲಿ ಕಂಡು ಬಂದಿದೆ.

ನೆಟ್ಟಿಗರು ಏನಂದ್ರು?

ಕೇವಲ 17 ಸೆಕೆಂಡ್‌ಗಳ ಈ ವಿಡಿಯೊದ ಬಗ್ಗೆಯೇ ಚರ್ಚೆ ಆರಂಭವಾಗಿದೆ. ಹಲವರು ವಿಡಿಯೊ ನೋಡಿ ಅಲ್ಲಿದ್ದವರಂತೆ ಶಾಕ್‌ಗೆ ಒಳಗಾಗಿದ್ದಾರೆ. ಪಾಪದ ವರ ಇದನ್ನು ನೋಡಿ ಕೋಮಾಕ್ಕೆ ಜಾರಿರಬೇಕು ಎನ್ನುವ ಕ್ಯಾಪ್ಶನ್‌ ನೀಡಿ ವಿಡಿಯೊ ಹಂಚಿಕೊಳ್ಳಲಾಗಿದೆ. ಕೆಲವರು ಇದನ್ನು ಪೂರ್ವ ನಿಯೋಜಿತ ಎಂದು ಕರೆದಿದ್ದಾರೆ. ಹೆಚ್ಚು ವ್ಯೂವ್ಸ್‌ ಪಡೆದುಕೊಳ್ಳಲು ಬೇಕಂತಲೇ ನಾಟಕ ಮಾಡಿದ್ದಾರೆ ಎಂದು ಹೇಳಿದ್ದಾರೆ. ವಿಡಿಯೊ ನೋಡಿದ ಕೆಲವರು ನಾಗವಲ್ಲಿ ಪಾತ್ರವನ್ನು ನೆಪಿಸಿಕೊಂಡಿದ್ದಾರೆ. ಇನ್ನು ಕೆಲವರು ಇದು ನಿಜವೆ? ಎಲ್ಲಿ ನಡೆದಿರುವುದು? ಮುಂತಾಗಿ ಪ್ರಶ್ನಿಸಿದ್ದಾರೆ.

ಇನ್ನೊಂದು ವಿಡಿಯೊ

ಇದೇ ರೀತಿಯ ಇನ್ನೊಂದು ಘಟನೆಯ ವಿಡಿಯೊ ಕೂಡ ಇದೀಗ ಸದ್ದು ಮಾಡುತ್ತಿದೆ. ಇದರಲ್ಲಿ ಈ ವಧು-ವರರಿಬ್ಬರು ವೇದಿಕೆ ಮೇಲೆ ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದು ಕಂಡು ಬಂದಿದೆ. ವರ ಚಪ್ಪಲಿ ಕೈಯಲ್ಲಿ ಹಿಡಿದು ಹಲ್ಲೆಗೆ ಮುಂದಾದರೆ ತಾನು ಯಾವುದರಲ್ಲಿಯೂ ಕಡಿಮೆ ಇಲ್ಲ ಎನ್ನುವಂತೆ ವಧು ಕೂಡ ಪ್ರತಿ ದಾಳಿ ನಡೆಸುತ್ತಾಳೆ. ಪಕ್ಕದಲ್ಲಿದ್ದವರು ತಡೆಯಲು ಪ್ರಯತ್ನಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Cylinder Blast : ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ವೃದ್ಧ ದಂಪತಿ ವಾರದ ನಂತರ ಸಾವು

Gas Cylinder Blast : ಅಡುಗೆ ಮನೆಯ ಲೈಟ್‌ ಆನ್‌ ಮಾಡುತ್ತಿದ್ದಂತೆ ಸಿಲಿಂಡರ್‌ ಸ್ಫೋಟಗೊಂಡು (Cylinder Blast) ವೃದ್ಧರಿಬ್ಬರು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ 7 ದಿನಗಳ ಕಾಲ ನರಳಾಡಿ ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ದಂಪತಿ ಮೃತಪಟ್ಟಿದ್ದಾರೆ.

VISTARANEWS.COM


on

By

Cylinder Blast at Belgavi
Koo

ಬೆಳಗಾವಿ: ಕಳೆದ ಮೇ 18ರ ಬೆಳಗಿನ ಜಾವ ಗ್ಯಾಸ್‌ ಸಿಲಿಂಡರ್ ಸ್ಫೋಟ (Cylinder Blast) ಸಂಭವಿಸಿದ್ದರಿಂದ ಇಬ್ಬರು ಗಂಭೀರ ಗಾಯಗೊಂಡಿದ್ದ ಘಟನೆ ಬೆಳಗಾವಿಯ ಸುಳಗಾದಲ್ಲಿ (Gas Cylinder Blast) ನಡೆದಿತ್ತು. ತೀವ್ರ ಸುಟ್ಟಗಾಯಗಳಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇದೀಗ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಲ್ಲಪ್ಪ ಪಾಟೀಲ್ (62), ಸುಮನ್ ಪಾಟೀಲ್(60) ಮೃತ ದುರ್ದೈವಿಗಳು.

ಲೈಟ್ ಆನ್ ಮಾಡುತ್ತಿದ್ದಂತೆ ಸ್ಫೋಟಗೊಂಡಿತ್ತು ಸಿಲಿಂಡರ್‌

ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಲಿಂಡರ್‌ ಸ್ಫೋಟ ಸಂಭವಿಸಿತ್ತು. ಬೆಳಗ್ಗೆ 4 ಗಂಟೆ ಸುಮಾರಿಗೆ ಸುಮನ್‌ ಪಾಟೀಲ್‌ ಅವರು ಎದ್ದು, ಅಡುಗೆ ಮನೆಗೆ ಹೋಗಲು ಲೈಟ್ ಸ್ವಿಚ್ ಆನ್ ಮಾಡಿದ್ದಾರೆ. ಈ ವೇಳೆ ಏಕಾಏಕಿ ಸಿಲಿಂಡರ್‌ ಬ್ಲಾಸ್ಟ್ ಆಗಿದೆ. ಗ್ಯಾಸ್‌ ಸಿಲಿಂಡರ್ ಸಮೀಪ ಹೋಗದಿದ್ದರೂ ಸ್ಫೋಟಗೊಂಡಿದೆ. ಗ್ಯಾಸ್‌ ಲಿಂಕ್‌ ಆಗಿದ್ದರಿಂದ ಏಕಾಏಕಿ ಲೈಟ್‌ ಆನ್‌ ಮಾಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿತ್ತು.

ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್ ಸಿಡಿದ ತೀವ್ರತೆಗೆ ಮನೆಯು ಡ್ಯಾಮೇಜ್ ಆಗಿತ್ತು. ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ವಸ್ತುಗಳೆಲ್ಲ ಚಲ್ಲಾಪಿಲ್ಲಿಯಾಗಿತ್ತು. ಸ್ಫೋಟದ ತೀವ್ರತೆಗೆ ಅಕ್ಕ-ಪಕ್ಕದವರು ಬೆಚ್ಚಿಬಿದ್ದಿದ್ದರು. ಮನೆಯ ಇಂಟೀರಿಯರ್ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಟ್ರಜರಿ,ವಸ್ತ್ರ ದವಸ ಧಾನ್ಯಗಳು ಮನೆಯ ತುಂಬ ಚಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

ಇದನ್ನೂ ಓದಿ: Cholera: ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ಕಾಲರಾ; ಪಿಡಿಒ, ಎಂಜಿನಿಯರ್‌ ಅಮಾನತು

ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು, ರೊಚ್ಚಿಗೆದ್ದ ಸಂಬಂಧಿಕರಿಂದ ಠಾಣೆ ಧ್ವಂಸ

ದಾವಣಗೆರೆ: ಪೊಲೀಸ್ ಕಸ್ಟಡಿಯಲ್ಲಿದ್ದ (police custody) ಆರೋಪಿಯೊಬ್ಬ ಸಾವಿಗೀಡಾಗಿದ್ದು (Lockup death), ಇದರಿಂದ ರೊಚ್ಚಿಗೆದ್ದ ಆರೋಪಿ (culprit) ಕಡೆಯವರು ಠಾಣೆಗೆ ನುಗ್ಗಿ ಅಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ದಾವಣಗೆರೆ (Davanagere news) ಜಿಲ್ಲೆಯ ಚನ್ನಗಿರಿ (Channagiri news) ತಾಲೂಕಿನಲ್ಲಿ ಘಟನೆ ನಡೆದಿದೆ.

ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ (30) ಎನ್ನುವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಈತ ಒಸಿ ಆಡಿಸುತ್ತಿದ್ದ ಪ್ರಕರಣದಲ್ಲಿ ಪೊಲೀಸರಿಂದ ತನಿಖೆಗೆ ಒಳಗಾಗಿದ್ದ. ಸಂಜೆ ಪೊಲೀಸರು ಈತನನ್ನು ಠಾಣೆಗೆ ಕರೆತಂದಿದ್ದ‌ರು.

ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಬಿದ್ದ ಅದಿಲ್‌ನನ್ನು ಪೊಲೀಸರು ಅಸ್ಪತ್ರೆಗೆ ಸಾಗಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅದಿಲ್‌ ಸಾವನ್ನಪ್ಪಿದ್ದ. ಅಕ್ರೋಶಗೊಂಡ ಆರೋಪಿ ಸಂಬಂಧಿಕರು, ಆರೋಪಿಯ ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿ ಪ್ರತಿಭಟನೆ ನಡೆಸಿ ದೊಂಬಿ ಎಬ್ಬಿಸಿದ್ದಾರೆ. ಪೊಲೀಸರು ನೀಡಿದ ಹಿಂಸೆಯ ಪರಿಣಾಮ ಲಾಕಪ್‌ ಡೆತ್‌ ಆಗಿದೆ, ಅದನ್ನು ಮುಚ್ಚಿಡಲು ಲೋ ಬಿಪಿ ನಾಟಕವಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ ಅದಿಲ್‌ ಸಂಬಂಧಿಕರು ಹಾಗೂ ಸ್ನೇಹಿತರು, ಪೊಲೀಸ್ ಠಾಣೆಗೆ ನುಗ್ಗಿ ಠಾಣೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯ ಆವರಣದಲ್ಲಿ ನೂರಾರು ಜನ ಜಮಾಯಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Rave Party: ರೇವ್‌ ಪಾರ್ಟಿ ಆರೋಪಿಗೆ ಆಂಧ್ರ ಸಿಎಂ ಜಗನ್‌ ಜೊತೆ ಸ್ನೇಹ!

Rave Party: ಪ್ರಕರಣದ ಎ2 ಆರೋಪಿ ಅರುಣ್ ಕುಮಾರ್ ಎಂಬಾತನಿಗೆ ಆಂಧ್ರ ಪ್ರದೇಶದ ಪ್ರಭಾವಿ ರಾಜಕಾರಣಿಗಳ ಜೊತೆ ಆತ್ಮೀಯ ನಂಟಿರುವುದು ಬೆಳಕಿಗೆ ಬಂದಿದೆ. ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ (YS Jagan Mohan Reddy) ರೆಡ್ಡಿ ಜೊತೆಗೆ ಆತ್ಮೀಯ ಒಡನಾಟ ಹೊಂದಿರುವ ಫೋಟೋಗಳನ್ನು ಆರೋಪಿ ಅರುಣ್‌ ಕುಮಾರ್‌ ಪ್ರದರ್ಶಿಸಿದ್ದಾನೆ.

VISTARANEWS.COM


on

rave party culprit with jagan mohan reddy
Koo

ಬೆಂಗಳೂರು: ಬೆಂಗಳೂರು ಗ್ರಾಮಾಂತರದ (Bangalore rural) ಎಲೆಕ್ಟ್ರಾನಿಕ್‌ ಸಿಟಿ (Electronic city) ಬಳಿಯ ಹೆಬ್ಬಗೋಡಿಯಲ್ಲಿ ರೇವ್ ಪಾರ್ಟಿ (Rave Party) ನಡೆಸಿದ ಪ್ರಮುಖ ಆರೋಪಿಗಳಲ್ಲಿ ಒಬ್ಬನಿಗೆ ಆಂಧ್ರ ಪ್ರದೇಶದ (Andhra Pradesh) ಗಣ್ಯ ರಾಜಕಾರಣಿಗಳ ಜೊತೆಗೆ ಒಡನಾಟ ಇರುವುದು ಗೊತ್ತಾಗಿದೆ. ಈ ನಡುವೆ, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಮೂವರು ಪೊಲೀಸರನ್ನು ಸಸ್ಪೆಂಡ್‌ (police suspend) ಮಾಡಲಾಗಿದೆ.

ಹೆಬ್ಬಗೋಡಿಯ ಜಿಆರ್ ಫಾರ್ಮ್ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣದ ಎ2 ಆರೋಪಿ ಅರುಣ್ ಕುಮಾರ್ ಎಂಬಾತನಿಗೆ ಆಂಧ್ರ ಪ್ರದೇಶದ ಪ್ರಭಾವಿ ರಾಜಕಾರಣಿಗಳ ಜೊತೆ ಆತ್ಮೀಯ ನಂಟಿರುವುದು ಬೆಳಕಿಗೆ ಬಂದಿದೆ. ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ (YS Jagan Mohan Reddy) ರೆಡ್ಡಿ ಜೊತೆಗೆ ಆತ್ಮೀಯ ಒಡನಾಟ ಹೊಂದಿರುವ ಫೋಟೋಗಳನ್ನು ಆರೋಪಿ ಅರುಣ್‌ ಕುಮಾರ್‌ ಇಟ್ಟುಕೊಂಡು ಓಡಾಡುತ್ತಿರುವುದು ಬೆಳಕಿಗೆ ಬಂದಿದೆ.

ವೈಎಸ್‌ಆರ್‌ಪಿ ಪಾರ್ಟಿಯ ಮುಖಂಡರ ಜೊತೆ ಅರುಣ್‌ ಗುರುತಿಸಿಕೊಂಡಿದ್ದಾನೆ. ಈತ ಬೆಂಗಳೂರಿನಲ್ಲಿ ಕೋರಮಂಗಲದಲ್ಲಿ ಐಷಾರಾಮಿ ಫ್ಲಾಟ್‌ನಲ್ಲಿ ಉಳಿದುಕೊಂಡು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಾನೆ. ರೇವ್‌ ಪಾರ್ಟಿಯ ಪ್ರಮುಖ ಆರೋಪಿ ವಾಸು ಜೊತೆ ಈತನ ಗೆಳೆತನವಿದ್ದು, ಪಾರ್ಟಿಯಲ್ಲಿ ಭಾಗಿಯಾಗಿದ್ದ. ವಾಸು ಜೊತೆ ಅರುಣ್ ಕೂಡಾ ಸೇರಿ ಪಾರ್ಟಿ ಆಯೋಜನೆ ಮಾಡಿರುವ ಬಗ್ಗೆ ತನಿಖೆ ನಡೆಯುತ್ತಿದೆ.

ಮೂವರು ಪೊಲೀಸರ ತಲೆದಂಡ

ಈ ನಡುವೆ, ರೇವ್ ಪಾರ್ಟಿ ನಡೆಯುತ್ತಿರುವುದರ ಬಗ್ಗೆ ಕ್ರಮ ಕೈಗೊಳ್ಳದ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಮೂವರು ಪೊಲೀಸರ ತಲೆದಂಡವಾಗಿದೆ. ಹೆಬ್ಬಗೋಡಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ರೇವ್ ಪಾರ್ಟಿ ನಡೆದಿತ್ತು. ಈ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಠಾಣೆಯ ಬಿ. ಗಿರೀಶ್, ಎಎಸ್ಐ ನಾರಾಯಣ ಸ್ವಾಮಿ ಮತ್ತು ಬೀಟ್ ಕಾನ್ಸ್‌ಟೇಬಲ್ ದೇವರಾಜು ಅಮಾನತಾದವರು. ಕರ್ತವ್ಯ ಲೋಪ ಹಿನ್ನೆಲೆ ಮೂವರನ್ನು ಅಮಾನತುಗೊಳಿಸಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ನೀಡಿದ್ದಾರೆ.

ಡಿವೈಎಸ್ಪಿ ಮೋಹನ್ ಹಾಗೂ ಇನ್ಸ್‌ಪೆಕ್ಟರ್ ಐ.ಎನ್ ರೆಡ್ಡಿಗೆ ಚಾರ್ಜ್ ಮೆಮೋ ನೀಡಲಾಗಿದೆ. ಇಷ್ಟೆಲ್ಲ ಆದರೂ ನಿಮ್ಮ ಗಮನಕ್ಕೆ ಯಾಕೆ ಬಂದಿಲ್ಲ, ಇದಕ್ಕೆ ಕಾರಣ ನೀಡಿ ಎಂದು ಚಾರ್ಜ್ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮೆಮೋ ನೀಡಿದ್ದಾರೆ. ಇಡೀ ದಿನ ರೇವ್ ಪಾರ್ಟಿ ನಡೆದರೂ ಸಂಬಂಧ ಪಟ್ಟ ಪೋಲೀಸರ ಗಮಕ್ಕಿರಲಿಲ್ಲವೇ, ಸಿಸಿಬಿ ಪೋಲೀಸರಿಗೆ ಸಿಕ್ಕ ಮಾಹಿತಿ ಸ್ಥಳೀಯ ಪೋಲೀಸರಿಗೆ ಯಾಕೆ ಇರಲಿಲ್ಲ ಎಂಬ ಬಗ್ಗೆ ಪ್ರಶ್ನೆಗಳು ಎದ್ದಿದ್ದವು.

ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

ರೇವ್‌ ಪಾರ್ಟಿಯಲ್ಲಿ ತೆಲುಗು ನಟಿಯರಾದ ಹೇಮಾ (Telugu actress Hema) ಹಾಗೂ ಆಶಿ ರಾಯ್ (Aashi Roy) ಒಳಗೊಂಡಂತೆ 103 ಮಂದಿ ಭಾಗಿಯಾಗಿದ್ದರು. ಇಲ್ಲಿ ಮಾದಕ ವಸ್ತುಗಳನ್ನು ಸೇವನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಅಷ್ಟೂ ಮಂದಿಯನ್ನು ತಪಾಸಣೆಗೊಳಪಡಿಸಲಾಗಿತ್ತು. ಈಗ ವೈದ್ಯಕೀಯ ವರದಿ ಬಂದಿದ್ದು, ಅವರಲ್ಲಿ 86 ಮಂದಿಯ ರಿಪೋರ್ಟ್ ಪಾಸಿಟಿವ್ ಬಂದಿದೆ. ನಟಿಯರಾದ ಹೇಮಾ ಹಾಗೂ ಆಶಿ ರಾಯ್‌ ಸಹ ಮಾದಕ ವಸ್ತುಗಳನ್ನು ಸೇವಿಸಿದ್ದಾರೆಂಬುದು ಸಾಬೀತಾಗಿವೆ ಎನ್ನಲಾಗಿದೆ.

ಈಗಾಗಲೇ ಪಾರ್ಟಿ ಮಾಡಿದ ಐವರನ್ನು ಬಂಧಿಸಲಾಗಿದೆ. 73 ಮಂದಿ ಪುರುಷರಲ್ಲಿ 59 ಮಂದಿ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದ್ದರೆ, 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಹೀಗಾಗಿ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿದ್ದಾರೆ.

ವಾಸು ಎಂಬಾತನ ಬರ್ತ್‌ ಡೇ ಪಾರ್ಟಿಗಾಗಿ ಏರ್ಪಡಿಸಲಾಗಿದ್ದ ಈ ರೇವ್ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಮಾದಕ ವಸ್ತು ಬಳಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ದೊಡ್ಡ ಪ್ರಮಾಣದಲ್ಲಿ ಎಂಡಿಎಂಎ, ಕೊಕೇನ್, ಹೈಡ್ರೋ ಗಾಂಜಾ ಪತ್ತೆಯಾಗಿದ್ದವು.

Sunset To Sun Rise victory ಶೀರ್ಷಿಕೆಯಲ್ಲಿ ಈ ರೇವ್ ಪಾರ್ಟಿಯನ್ನು ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ಸುಮಾರು ನೂರೈವತ್ತು ಮಂದಿ ಸೇರಿದ್ದರು. ಪೊಲೀಸ್‌ ದಾಳಿ ವೇಳೆ ಕೆಲವರು ತಪ್ಪಿಸಿಕೊಂಡು ಓಡಿದ್ದರು. ಆದರೆ, ಬಹುತೇಕ ಮಂದಿ ಸಿಕ್ಕಿಬಿದ್ದಿದ್ದರು. ಈಗ ಸಿಕ್ಕಿಬಿದ್ದವರಲ್ಲಿ ಬಹುತೇಕರ ಬ್ಲಡ್ ರಿಪೋರ್ಟ್‌ನಲ್ಲಿ ಮಾದಕ ವಸ್ತು ಸೇವನೆ ಸಂಬಂಧ ಪಾಸಿಟಿವ್ ಅಂಶ ಪತ್ತೆಯಾಗಿದೆ. ಹೀಗಾಗಿ ಪಾಸಿಟಿವ್‌ ರಿಪೋರ್ಟ್‌ ಬಂದವರಿಗೆ ಸಿಸಿಬಿ ನೋಟಿಸ್ ನೀಡಲಿದ್ದು, ಅವರನ್ನು ಕರೆಸಿ ವಿಚಾರಣೆ ನಡೆಸಲಾಗುತ್ತದೆ.

ಇದನ್ನೂ ಓದಿ: Rave party: ಆಶಿ ರಾಯ್ ಡ್ರಗ್ಸ್‌ ಸೇವಿಸಿಲ್ಲ; ನಟಿ ಹೇಮಾ ಸೇವಿಸಿದ್ದು ಯಾವ ಮಾತ್ರೆ? ರಿಪೋರ್ಟ್‌ ರಿವೀಲ್!

Continue Reading

ಪ್ರಮುಖ ಸುದ್ದಿ

Cholera: ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ಕಾಲರಾ; ಪಿಡಿಒ, ಎಂಜಿನಿಯರ್‌ ಅಮಾನತು

Cholera: ವರುಣಾ ವಿಧಾಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಕಲುಷಿತ ನೀರಿನಿಂದ 114ಕ್ಕೂ ಹೆಚ್ಚು ಜನರಿಗೆ ವಾಂತಿಭೇದಿ ಕಾಣಿಸಿಕೊಂಡಿತ್ತು. ಅದರಲ್ಲಿ ಮೂವರಲ್ಲಿ ಕಾಲರಾ ಪತ್ತೆಯಾಗಿತ್ತು. ವಾಂತಿಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಮಸ್ಥರನ್ನು ಪರೀಕ್ಷೆಗೊಳಪಡಿಸಿದಾಗ ಮೂರಲ್ಲಿ ಕಾಲರಾ ಪತ್ತೆಯಾಗಿದೆ.

VISTARANEWS.COM


on

cholera varuna
Koo

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಪ್ರತಿನಿಧಿಸುವ ವರುಣಾ (Varuna) ಕ್ಷೇತ್ರದ ತಗಡೂರು ಗ್ರಾಮದಲ್ಲಿ ಕಾಲರಾ (Cholera) ಪತ್ತೆಯಾದ ಪ್ರಕರಣದಲ್ಲಿ, ಪಿಡಿಒ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ (engineer) ಅವರನ್ನು ಅಮಾನತು ಮಾಡಲಾಗಿದೆ.

ವರುಣಾ ವಿಧಾಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಕಲುಷಿತ ನೀರಿನಿಂದ 114ಕ್ಕೂ ಹೆಚ್ಚು ಜನರಿಗೆ ವಾಂತಿಭೇದಿ ಕಾಣಿಸಿಕೊಂಡಿತ್ತು. ಅದರಲ್ಲಿ ಮೂವರಲ್ಲಿ ಕಾಲರಾ ಪತ್ತೆಯಾಗಿತ್ತು. ವಾಂತಿಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಮಸ್ಥರನ್ನು ಪರೀಕ್ಷೆಗೊಳಪಡಿಸಿದಾಗ ಮೂರಲ್ಲಿ ಕಾಲರಾ ಪತ್ತೆಯಾಗಿದೆ.

ಸಾಕಷ್ಟು ವರ್ಷಗಳಿಂದ ಇಲ್ಲಿ ಕೈ ಪಂಪುಗಳು ಕೆಟ್ಟು ನಿಂತಿದ್ದವಲ್ಲದೆ, ತುಕ್ಕು ಹಿಡಿದಿದ್ದವು. ಕೈಪಂಪುಗಳಿಂದ ಕಲುಷಿತಗೊಂಡ ನೀರು ಸೇವನೆಯಿಂದ ಗ್ರಾಮಸ್ಥರಿಗೆ ವಾಂತಿಭೇದಿ ಬಂದಿದೆ. ಕಲುಷಿತ ನೀರು ಸೇವನೆಯಿಂದ ಕಾಲರಾ ಪತ್ತೆಯಾಗಿದೆ ಎಂದು ಅರೋಗ್ಯ ಇಲಾಖೆ ಸ್ಪಷ್ಟ ಮಾಹಿತಿ ನೀಡಿದೆ.

ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವಲ್ಲಿ ಆಧಿಕಾರಿಗಳು ವಿಫಲಗೊಂಡ ಹಿನ್ನೆಲೆಯಲ್ಲಿ, ತಗಡೂರು ಗ್ರಾಮದ ಸಾರ್ವಜನಿಕ ಗ್ರಾಮಸ್ಥರ ಅನಾರೋಗ್ಯಕ್ಕೆ ಪ್ರಮುಖ ಕಾರಣಕರ್ತರಾದ ಪಿಡಿಒ ದಿವಾಕರ್ ಮತ್ತು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವಕುಮಾರ್ ಅವರನ್ನು ಅಮಾನತು ಮಾಡಿ ಮೈಸೂರು ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಾಯತ್ರಿ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ಅಧಿಕಾರಿಗಳ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ , ಕಲುಷಿತ ಕುಡಿಯುವ ನೀರಿನಿಂದ ಕಾಲರಾ ಪ್ರಕರಣಗಳು ಪತ್ತೆಯಾದಲ್ಲಿ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.

ಅಧಿಕಾರಿಗಳೇ ಹುಷಾರ್! ನೀರಿನಿಂದ ಆರೋಗ್ಯ ಕೈಕೊಟ್ರೆ ಶಿಸ್ತು ಕ್ರಮ: ಡಿಕೆಶಿ ವಾರ್ನಿಂಗ್

ಬೆಂಗಳೂರು: ಬೆಂಗಳೂರಿನ ಜನರಿಗೆ ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು (D‌rinking Water) ಸರಬರಾಜು ಮಾಡಬೇಕು. ಒಂದು ವೇಳೆ ಕುಡಿಯುವ ನೀರಿನಿಂದ ಯಾವುದೇ ಸಮಸ್ಯೆ ಉಂಟಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಎಚ್ಚರಿಕೆ ನೀಡಿದ್ದಾರೆ.

ಈ ವಿಚಾರವಾಗಿ ಬಿಬಿಎಂಪಿ ಆಯುಕ್ತರು, ಬೆಂಗಳೂರಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಬಿಡಬ್ಲ್ಯೂಎಸ್‌ಎಸ್‌ಬಿ ಮುಖ್ಯಸ್ಥರಿಗೆ ಪತ್ರ ಬರೆದಿರುವ ಶಿವಕುಮಾರ್, ಬೆಂಗಳೂರಿನ ನಾಗರಿಕರಿಗೆ ಕುಡಿಯುವ ನೀರಿನಿಂದ ಯಾವುದೇ ಸಮಸ್ಯೆ ಎದುರಾಗಬಾರದು ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ.

ರಾಜ್ಯದ ಕೆಲವು ಕಡೆ ಕಲುಷಿತ ನೀರು ಕುಡಿಯುವ ನೀರಿನ ಜತೆ ಮಿಶ್ರವಾಗಿ ಜನರು ಅಸ್ವಸ್ಥಗೊಂಡು ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂಬ ವರದಿಗಳು ಬರುತ್ತಿವೆ. ಈ ವಿಚಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ವಿಡಿಯೊ ಸಂವಾದ ಸಭೆಯಲ್ಲಿ ಚರ್ಚೆಯಾಗಿದೆ. ಹೀಗಾಗಿ, ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ನೀರಿನ ಘಟಕಗಳ ಸಮರ್ಪಕ ಕಾರ್ಯನಿರ್ವಹಣೆ, ಉತ್ತಮ ಗುಣಮಟ್ಟದ ನೀರಿನ ಬಗ್ಗೆ ಖಾತರಿ ಮಾಡಿಕೊಳ್ಳಬೇಕು. ಆ ಘಟಕಗಳಿಂದ ಸರಬರಾಜಾಗುವ ನೀರನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿ ಕುಡಿಯಲು ಯೋಗ್ಯವೇ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಡಿ.ಕೆ. ಶಿವಕುಮಾರ್‌ ಸೂಚಿಸಿದ್ದಾರೆ.

ಬೆಂಗಳೂರಿನ ಜನರಿಗೆ ಕುಡಿಯುವ ನೀರಿನಿಂದ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜನರಿಗೆ ತೊಂದರೆಯಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಈ ಪತ್ರದಲ್ಲಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Excise revenue: ಇದು ಎಣ್ಣೆ ಮಹಿಮೆ! ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ

ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಶುಕ್ರವಾರವಷ್ಟೇ ತಿಳಿಸಿದ್ದರು. ಮುಖ್ಯಮಂತ್ರಿಗಳು ನಿನ್ನೆ ನಗರ ಪ್ರದಕ್ಷಿಣೆ ಮಾಡಿ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಶೀಘ್ರದಲ್ಲೇ ಕಾರ್ಯಪಡೆ ರಚನೆಗೆ ಸೂಚನೆ ನೀಡಿದ್ದು, ಎಲ್ಲೆಲ್ಲಿ ಯಾವ ಕಾರ್ಯಗಳು ಸಾಗಬೇಕು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೆಲವು ಕಡೆ ಕುಡಿಯುವ ನೀರು ಕಲುಷಿತವಾಗಿ ಕಾಲರಾ ಸಂಭವಿಸಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಹೀಗಾಗಿ ಬೆಂಗಳೂರಿನ ಎಲ್ಲೆಡೆ ಕುಡಿಯುವ ನೀರಿನ ಪರಿಶೀಲನೆ ನಡೆಸಲು ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: CM Siddaramaiah: ತಾಲೂಕು, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

Continue Reading
Advertisement
Sreenath Bhasi Movie Shashidhar direction new Movie
ಸ್ಯಾಂಡಲ್ ವುಡ್5 mins ago

Sreenath Bhasi Movie: ʻಮಂಜುಮ್ಮೆಲ್ ಬಾಯ್ಸ್ʼ ನಟನಿಗೆ ಸ್ಯಾಂಡಲ್​ವುಡ್​ ಡೈರೆಕ್ಟರ್ ಆ್ಯಕ್ಷನ್​ ಕಟ್​!

IPL Final 2024
ಕ್ರಿಕೆಟ್15 mins ago

IPL Final 2024: ಫೈನಲ್​ ಪಂದ್ಯಕ್ಕೆ ಮಳೆ ಬಂದರೆ ಯಾರಾಗಲಿದ್ದಾರೆ ವಿಜೇತರು? ಮಳೆ ನಿಯಮ ಹೇಗಿದೆ?

yogendra yadav lok sabha election 2024
ಪ್ರಮುಖ ಸುದ್ದಿ43 mins ago

Lok Sabha Election: ಬಿಜೆಪಿ ಗೆಲುವು ಖಚಿತ ಎಂದ ಯೋಗೇಂದ್ರ ಯಾದವ್‌; ಸ್ಥಾನಗಳಿಕೆ ಅಂದಾಜು ಹೀಗಿದೆ

Cannes Film Festival Anasuya Sengupta gets Best Actress award
ಸಿನಿಮಾ55 mins ago

Cannes Film Festival: ಕಾನ್ ಚಿತ್ರೋತ್ಸವದಲ್ಲಿ ಅನಸೂಯಾ ಸೇನ್‌ಗುಪ್ತಾ ಅತ್ಯುತ್ತಮ ನಟಿ! ಈ ಪ್ರಶಸ್ತಿಗೆ ಪಾತ್ರರಾದ ಭಾರತದ ಮೊದಲ ತಾರೆ!

Malaysia Masters
ಕ್ರೀಡೆ56 mins ago

Malaysia Masters: ಇಂದು ಮಲೇಷ್ಯಾ ಮಾಸ್ಟರ್ಸ್‌ ಸೆಮಿಫೈನಲ್​; ಸಿಂಧು ಕಣಕ್ಕೆ

traffic violation
ಉತ್ತರ ಕನ್ನಡ58 mins ago

Traffic violation : ನಗೆಪಾಟಲಾದ ಟ್ರಾಫಿಕ್‌ ಪೊಲೀಸರು; ಹೆಲ್ಮೆಟ್ ಹಾಕಿಲ್ಲವೆಂದು ಟಿಪ್ಪರ್ ಲಾರಿ ಚಾಲಕನಿಗೆ 500 ರೂ. ದಂಡ

Cylinder Blast at Belgavi
ಬೆಳಗಾವಿ1 hour ago

Cylinder Blast : ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ವೃದ್ಧ ದಂಪತಿ ವಾರದ ನಂತರ ಸಾವು

lok sabha election 2024 jaishankar rahul sonia murmu
ಪ್ರಮುಖ ಸುದ್ದಿ2 hours ago

Lok Sabha Election: ಮತ ಚಲಾಯಿಸಿದ ರಾಷ್ಟ್ರಪತಿ ಮುರ್ಮು, ಸೋನಿಯಾ, ರಾಹುಲ್;‌ ಮತಕ್ಕಾಗಿ ಸರ್ಟಿಫಿಕೇಟ್ ಪಡೆದ ಜೈಶಂಕರ್‌!

Konark Tourist Destination
ಪ್ರವಾಸ2 hours ago

Konark Tourist Destination: ರಜೆಯಲ್ಲಿ ಕೋನಾರ್ಕ್‌ಗೆ ಹೋದಾಗ ಈ ಅದ್ಭುತ ಸ್ಥಳಗಳಿಗೆ ಭೇಟಿ ನೀಡಲು ಮರೆಯಬೇಡಿ

Karthi next film Suriya to produce Meiyazhagan
ಕಾಲಿವುಡ್2 hours ago

Karthi next film: ಇಂದು ನಟ ಕಾರ್ತಿ ಬರ್ತ್‌ಡೇ: ತಮ್ಮನ ಚಿತ್ರಕ್ಕೆ ಅಣ್ಣ ಸೂರ್ಯ ಬಂಡವಾಳ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌