Site icon Vistara News

ಸರ್ಕಾರ ಉರುಳಿಸೋ ಶಕ್ತಿ ರಮೇಶ್‌ ಜಾರಕಿಹೊಳಿಗೆ ಮಾತ್ರವಿದೆ; ಇನ್ನೊಮ್ಮೆ ಸರ್ಕಾರ ಬೀಳಿಸಲಿ: ಸತೀಶ್‌ ಜಾರಕಿಹೊಳಿ ಪ್ರಾರ್ಥನೆ

satish jarakiholi

ಬೆಳಗಾವಿ: ರಮೇಶ್ ಜಾರಕಿಹೊಳಿಗೆ ಸರ್ಕಾರ ಉರುಳಿಸುವ ಶಕ್ತಿ ಇದೆ. ಅವರು ಇನ್ನೊಮ್ಮೆ ಸರ್ಕಾರ ಉರುಳಿಸುವ ಪ್ರಯತ್ನ ಮಾಡಲಿ ಎಂದು ನಾವೆಲ್ಲ ಪ್ರಾರ್ಥಿಸೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ತಮ್ಮ ಸಹೋದರ ರಮೇಶ್ ಜಾರಕಿಹೊಳಿ ಕಾಲೆಳೆದಿದ್ದಾರೆ.

ಗೋಕಾಕ್ ನಗರದಲ್ಲಿ ನಡೆದ ಉಪ್ಪಾರ ಸಮಾಜದ ಕಾರ್ಯಕ್ರಮದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಜಾರಕಿಹೊಳಿ ಸಹೋದರರಿಗೆ ಸರ್ಕಾರ ಉರುಳಿಸುವ ಶಕ್ತಿ ಇದೆ ಎಂದು ಹೇಳುತ್ತಾರೆ. ರಾಜ್ಯ ರಾಜಕಾರಣದಲ್ಲಿ ನಾಲ್ವರು ಸಹೋದರರಿದ್ದೇವೆ. ನಾಲ್ವರೂ ಒಂದೇ ಎಂದು ಭಾವಿಸಬಾರದು. ನಮ್ಮ ನಾಲ್ವರು ಸಹೋದರರ ಕೆಲಸವೂ ಬೇರೆ ಬೇರೆ ಇದೆ. ಈ ಬಗ್ಗೆ ಯಾರೂ ಗೊಂದಲ ಮಾಡಿಕೊಳ್ಳಬಾರದು ಎಂದು ತಿಳಿಸಿದರು.

ಸರ್ಕಾರ ಉರುಳಿಸುವ ಶಕ್ತಿ ರಮೇಶ್‌ಗೆ ಮಾತ್ರ
ನಮ್ಮಲ್ಲಿ ಸರ್ಕಾರ ಉರುಳಿಸುವ ಶಕ್ತಿ ರಮೇಶ್ ಜಾರಕಿಹೊಳಿಗೆ ಮಾತ್ರ ಇದೆ. ಉಳಿದ ಸಹೋದರರು ಸರ್ಕಾರ ಉರುಳಿಸುವುದರ ಭಾಗವಾಗುವುದಿಲ್ಲ. ಹೀಗಾಗಿ ರಮೇಶ್‌ ಇನ್ನೊಮ್ಮೆ ಸರ್ಕಾರ ಉರುಳಿಸುವ ಪ್ರಯತ್ನ ಮಾಡಲೆಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ | PayCM | ಮಾಜಿ ಸಿಎಂ ಸಿದ್ದರಾಮಯ್ಯ ಪೋಸ್ಟರ್‌ ಅಂಟಿಸುವ ಮಟ್ಟಕ್ಕೆ ಹೋಗಿದ್ದು ನಾಚಿಕೆಗೇಡು: ಡಾ. ಕೆ. ಸುಧಾಕರ್‌

Exit mobile version