ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ: ಸಚಿವ ಅಶ್ವತ್ಥನಾರಾಯಣ ಹೇಳಿಕೆ ಹಿಂದಿರುವ ಮರ್ಮವೇನು? - Vistara News

ಕರ್ನಾಟಕ

ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ: ಸಚಿವ ಅಶ್ವತ್ಥನಾರಾಯಣ ಹೇಳಿಕೆ ಹಿಂದಿರುವ ಮರ್ಮವೇನು?

ರಾಜ್ಯಸಭೆ ಚುನಾವಣೆ ವಿಚಾರದಲ್ಲಿ ಎ ಟೀಂ ಹಾಗೂ ಬಿ ಟೀಂ ಅಂತ ಅನ್ನೋ ಪ್ರಶ್ನೆಯೇ ಇಲ್ಲ. ನಮ್ಮ ಸಂಖ್ಯಾಬಲ ಜಾಸ್ತಿ ಇದ್ದಿದ್ದರಿಂದ ಸಹಜವಾಗಿ ಗೆಲುವಾಗಿದೆ ಎಂದು ಸಚಿವ ಅಶ್ವತ್ಥನಾರಾಯಣ್‌ ತಿಳಿಸಿದ್ದಾರೆ. ಅಲ್ಲದೆ ಇತರೆ ಪಕ್ಷಗಳ ಬಹಳಷ್ಟು ನಾಯಕರು ಬಿಜೆಪಿಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದಿದ್ದಾರೆ.

VISTARANEWS.COM


on

ashwath narayan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು/ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೊಮ್ಮೆ ಆಪರೇಷನ್‌ ಕಮಲ ಸದ್ದು ಮಾಡಲಿದೆಯೇ ಎಂಬ ವಿಷಯ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ರಾಜ್ಯಸಭೆ ಚುನಾವಣೆಯಲ್ಲಿ ಇಬ್ಬರು ಜೆಡಿಎಸ್‌ ಶಾಸಕರು ಅಡ್ಡ ಮತ ಚಲಾಯಿಸಿರುವುದು, ಮಂಡ್ಯದಲ್ಲಿ ಮಾಜಿ ಶಾಸಕ ಎಲ್.ಆರ್.‌ ಶಿವರಾಮೇಗೌಡ ಬಿಜೆಪಿ ವಿಧಾನ ಪರಿಷತ್ ಅಭ್ಯರ್ಥಿ‌ಪರ ಪ್ರಚಾರ ನಡೆಸಿರುವುದು ಇದಕ್ಕೆ ಇಂಬು ನೀಡುವಂತಿದೆ.

ಈ ಮಧ್ಯೆ ಕುಟುಂಬ ರಾಜಕಾರಣದಿಂದ ಬೇಸತ್ತ ಕೆಲವರು ಬಿಜೆಪಿಗೆ ಬರುತ್ತಾರೆ. ಕಾದು ನೋಡಿ, ಪರಿಸ್ಥಿತಿಗೆ ಅನುಗುಣವಾಗಿ ಯಾರು ಯಾರು ಬರುತ್ತಾರೆ ಅನ್ನುವುದು ಗೊತ್ತಾಗುತ್ತದೆ ಎಂದು ನುಡಿದಿರುವ ಸಚಿವ ಅಶ್ವತ್ಥನಾರಾಯಣ ಅವರ ಮಾತಿನ ಹಿಂದಿನ ಮರ್ಮವೇನು ಎಂಬುವುದರ ಸುಳಿವು ದೊರೆಯುತ್ತದೆ. ಹುಬ್ಬಳ್ಳಿಯಲ್ಲಿ ಮಾತನಾಡಿರುವ ಸಚಿವ ಅಶ್ವತ್ಥ ನಾರಾಯಣ, ಇತರ ಪಕ್ಷಗಳಿಗಿಂತ ಬಿಜೆಪಿಯಲ್ಲಿ ಉತ್ತಮ ಭವಿಷ್ಯವಿದೆ, ಅದೇ ರೀತಿ ಅವಕಾಶಗಳಿವೆ. ಹೀಗಾಗಿ ಇನ್ನೂ ಹಲವು ಜನ ಬಿಜೆಪಿಗೆ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಹಿಂದೆ ಆಪರೇಷನ್‌ ಕಮಲದಲ್ಲಿ 17 ಘಟಾನುಘಟಿ ಕಾಂಗ್ರೆಸ್‌ ಶಾಸಕರು ಬಿಜೆಪಿ ತೆಕ್ಕೆಗೆ ವಲಸೆ ಬಂದಿದ್ದರು. ಇದರಿಂದಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲು ಸಾಧ್ಯವಾಯಿತು ಎಂಬ ಮಾತನ್ನು ತಳ್ಳಿ ಹಾಕುವಂತಿಲ್ಲ.

ಇದನ್ನೂ ಓದಿ | ಬಿಜೆಪಿ ಸರ್ಕಾರದ ಮೇಲೆ ಗರಂ ಆದ ಸಂಸದ ಡಿ.ಕೆ. ಸುರೇಶ್

ಇದೀಗ ಸಚಿವ ಅಶ್ವತ್ಥ ನಾರಾಯಣ ಅವರ ಹೇಳಿಕೆಗೆ ಸಾಕ್ಷ್ಯ ಎಂಬಂತೆ ಕೋಲಾರದ ಶಾಸಕ ಶ್ರೀನಿವಾಸಗೌಡ ಹಾಗೂ ಗುಬ್ಬಿ ಶಾಸಕ ಎಸ್‌.ಆರ್.‌ ಶ್ರೀನಿವಾಸ್‌, ರಾಜ್ಯಸಭೆ ಚುನಾವಣೆ ವೇಳೆ ಅಡ್ಡಮತ ಚಲಾಯಿಸುವ ಮೂಲಕ ಜೆಡಿಎಸ್‌ ವರಿಷ್ಠರ ವಿರುದ್ಧ ನೇರವಾಗಿಯೇ ಆಕ್ರೋಶ ಹೊರಹಾಕಿರುವುದನ್ನು ಕಾಣಬಹುದು.

ಇತ್ತೀಚೆಗೆ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ನ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಕೋಲಾರದ ಮಾಜಿ ಶಾಸಕ ವರ್ತೂರ್‌ ಪ್ರಕಾಶ್‌, ಮಾಜಿ ಎಂಎಲ್‌ಸಿ ಸಂದೇಶ್‌ ನಾಗರಾಜ್‌, ಮಂಡ್ಯದ ಲಕ್ಷ್ಮೀ ಅಶ್ವಿನ್‌ ಗೌಡ, ಅಶೋಕ್‌ ನಾಗರಾಜ್‌ ಮತ್ತಿತರ ನಾಯಕರು ಬಿಜೆಪಿಗೆ ಬಂದಿದ್ದರು. ಇನ್ನು ಮುಂದಿನ ವರ್ಷ ವಿಧಾನ ಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಇನ್ನೂ ಯಾವ ರೀತಿಯ ರಾಜಕೀಯ ಬೆಳವಣಿಗೆಗಳು ನಡೆಯುತ್ತವೆ ಎಂಬುವುದನ್ನು ಕಾದುನೋಡಬೇಕಾಗಿದೆ.

ಮಂಡ್ಯದ ಮಾಜಿ ಸಂಸದ ಶಿವರಾಮೇಗೌಡ ಬಿಜೆಪಿಗೆ ಕಮ್‌ಬ್ಯಾಕ್?

ಜೆಡಿಎಸ್‌ನಿಂದ ಉಚ್ಚಾಟನೆಗೊಂಡ ಬಳಿಕ ಮುಂದಿನ ಚುನಾವಣೆಯಲ್ಲಿ ಪಕ್ಷೇತರರಾಗಿ‌ ಸ್ಪರ್ಧೆಗೆ ನಿರ್ಧಾರ ಮಾಡಿದ್ದ ಎಲ್.ಆರ್.ಶಿವರಾಮೇಗೌಡ, ಇದೀಗ ಬಿಜೆಪಿ ಪ್ರಚಾರ ಸಭೆಯಲ್ಲಿ ಕಾಣಿಸಿಕೊಂಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ದಕ್ಷಿಣ ಪದವೀಧರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಪರ ಮಂಡ್ಯದ ನಾಗಮಂಗಲದಲ್ಲಿ ಸಚಿವರಾದ ನಾರಾಯಣಗೌಡ ಮತ್ತು ಗೋಪಾಲಯ್ಯ ಜತೆ ಮತಯಾಚನೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಶಿವರಾಮೇಗೌಡ ಕೂಡ ಕಾಣಿಸಿಕೊಂಡಿದ್ದಾರೆ. ಈ ಬೆಳವಣಿಗೆ ಮುಂದಿನ‌ ಎಂಎ‌ಲ್‌ಎ ಚುನಾವಣೆಗೆ ನಾಗಮಂಗಲದಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುವ ನಿಟ್ಟಿನಲ್ಲಿ ಶಿವರಾಮೇಗೌಡ ಹೆಜ್ಜೆ ಹಾಕಿದ್ದಾರೆಯೇ ಎಂಬ ಕುತೂಹಲ ಮೂಡಿಸಿದೆ.

ಈ‌ ಹಿಂದೆ 2009ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶಿವರಾಮೇಗೌಡ ಸ್ಪರ್ಧಿಸಿದ್ದರು. ಬಳಿಕ‌ ಬಿಜೆಪಿ ತೊರೆದು, ಕಾಂಗ್ರೆಸ್‌ಗೆ ಹೋಗಿದ್ದರು. ಇದೀಗ ಸಚಿವ ಅಶ್ವತ್ಥ ನಾರಾಯಣ ಅವರ ಹೇಳಿಕೆಯನ್ನು ಗಮನಿಸಿದರೆ ಮತ್ತೆ ಬಿಜೆಪಿಗೆ ಕಮ್ ಬ್ಯಾಕ್ ಮಾಡಲು ಮುಂದಾಗಿದ್ದಾಯೇ ಎಂಬ ವಿಷಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ | ರಾಜ್ಯಸಭೆ ಚುನಾವಣೆ: ಮಹಾರಾಷ್ಟ್ರದಲ್ಲಿ ಬಿಜೆಪಿಯ ಎಲ್ಲ ಮೂರು ಅಭ್ಯರ್ಥಿಗಳ ಜಯಭೇರಿ, ಎಂವಿಎಗೆ 3 ಸೀಟು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Physical Abuse : ನಗ್ನ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿದ ತಂದೆ ಬಳಿಕ ಮಗಳು ಮೃತ್ಯು, ಮತ್ತಿಬ್ಬರ ಸ್ಥಿತಿ ಗಂಭೀರ

Physical Abuse : ಅಪ್ರಾಪ್ತೆಯೊಬ್ಬಳ ನಗ್ನ ಫೋಟೊ ತೋರಿಸಿ ಕಾಮುಕನೊಬ್ಬ ಬ್ಲ್ಯಾಕ್‌ಮೇಲ್‌ (Black mail) ಮಾಡುತ್ತಿದ್ದ ಎಂಬ ಕಾರಣಕ್ಕೆ ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ (Self Harming) ಯತ್ನಿಸಿದ್ದರು. ಇದೀಗ ಅಪ್ರಾಪ್ತೆಯ ತಾಯಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ‌

VISTARANEWS.COM


on

By

Physical Abuse
ಮೃತ ತಂದೆ ಮಹಾದೇವನಾಯಕ ಹಾಗೂ ಮಗಳು ಲೀಲಾವತಿ, ಚಿಕಿತ್ಸೆ ಪಡೆಯುತ್ತಿರುವ ತಾಯಿ ಗೌರಮ್ಮ, ಮೊಮ್ಮಗಳು ರಿಷಿತಾ
Koo

ಮೈಸೂರು/ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ (MM Hills) ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (Self Harming) ಯತ್ನಿಸಿದ ಪ್ರಕರಣಕ್ಕೆ (Physical Abuse) ಸಂಬಂಧಿಸಿದ್ದಂತೆ ಮೊನ್ನೆ ಶುಕ್ರವಾರ ತಂದೆ ಮಹಾದೇವನಾಯಕ (65) ಮೃತಪಟ್ಟಿದ್ದರು. ಇಂದು ಸೋಮವಾರ (ಜೂ.10) ಚಿಕಿತ್ಸೆ ಫಲಕಾರಿಯಾಗದೆ ಅವರ ಮಗಳು ಲೀಲಾವತಿ (45 ) ಮೃತಪಟ್ಟಿದ್ದಾರೆ. ಲೀಲಾವತಿಗೆ ಮೂರು ದಿನಗಳಿಂದ ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕ್ರಿಮಿ ನಾಶಕ ಸೇವಿಸಿದ ತೀವ್ರತೆಗೆ ಮೃತಪಟ್ಟಿದ್ದಾರೆ.

ಲೀಲಾವತಿ ಅವರ ಮಗಳು ರಿಷೀತಾಳ ನಗ್ನ ಫೋಟೊ ತೋರಿಸಿ ಕಾಮುಕನೊಬ್ಬ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ. ಇದೇ ಕಾರಣಕ್ಕೆ ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಘಟನೆಯಲ್ಲಿ ತಂದೆ-ಮಗಳು ಮೃತಪಟ್ಟರೆ, ಅಜ್ಜಿ- ಮೊಮ್ಮಗಳ ಸ್ಥಿತಿ ಗಂಭೀರವಾಗಿದ್ದು, ಇಬ್ಬರಿಗೂ ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಸಂತ್ರಸ್ತೆಯ ದೂರು ಸ್ವೀಕರಿಸದ ಮೂವರು ಅಮಾನತು

ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ, ಇಬ್ಬರು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆಆರ್‌ನಗರ ಠಾಣೆ ಇನ್ಸ್‌ಪೆಕ್ಟರ್, ಎಎಸ್‌ಐ ಹಾಗೂ ಮುಖ್ಯಪೇದೆ ಅಮಾನತು ಮಾಡಲಾಗಿದೆ. ಸಂತ್ರಸ್ತೆಯ ಪೋಷಕರ ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಇನ್‌ಸ್ಪೆಕ್ಟರ್ ಪಿ.ಪಿ.ಸಂತೋಷ್, ಸಹಾಯಕ ಸಬ್‌ ಇನ್‌ಸ್ಪೆಕ್ಟರ್ ಗಿರೀಶ್ ಹಾಗೂ ಮುಖ್ಯಪೇದೆ ರಾಘವೇಂದ್ರ ಎಂಬುವವರನ್ನು ಅಮಾನತು ಮಾಡಲಾಗಿದೆ. ಅಮಾನತು ಮಾಡಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಆದೇಶಿಸಿದ್ದಾರೆ.

Physical Abuse
ಅಮಾನತುಗೊಂಡ ಅಧಿಕಾರಿಗಳು

ಅಪ್ರಾಪ್ತೆ ಕುಟುಂಬಸ್ಥರು ನೀಡಿದ ದೂರನ್ನು ಎಸ್.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ, ಪೋಕ್ಸೋ ಕಾಯ್ದೆ ಹಾಗೂ ಐಪಿಸಿ 370 ಸೆಕ್ಷನ್‌ನಡಿ ದಾಖಲು ಮಾಡಿಕೊಳ್ಳದೇ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು. ಕೆಆರ್‌ನಗರ ತಾಲೂಕಿನ ಗ್ರಾಮವೊಂದರ ಲೋಕೇಶ್ ಎಂಬಾತ ಸಂತ್ರಸ್ತೆ ಬಾಲಕಿಯ ಖಾಸಗಿ ಫೋಟೋ, ವಿಡಿಯೋ ಮಾಡಿ ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ.

ಈ ಸಂಬಂಧ ಸಂತ್ರಸ್ತೆಯ ಪೋಷಕರು ಕೆ.ಆರ್.ನಗರ ಠಾಣೆಗೆ ದೂರು ನೀಡಲು ಮುಂದಾಗಿದ್ದರು. ಆದರೆ ದೂರು ದಾಖಲಿಸಿಕೊಳ್ಳದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು. ತಮಗೆ ನ್ಯಾಯ ಸಿಗುವ ಭರವಸೆ ಇಲ್ಲದೆ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿತ್ತು. ಅದರಂತೆ ಕಳೆದ ಶುಕ್ರವಾರ ಮಹದೇಶ್ವರ ಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆದು ವಾಪಸ್ ಬರುವಾಗ ತಾಳಬೆಟ್ಟದಲ್ಲಿ ಆತ್ಮಹತ್ಯೆ ಯತ್ನಿಸಿದ್ದರು. ಘಟನೆಯಲ್ಲಿ ಬಾಲಕಿ ರಿಷಿತಾಳ ತಾತ ಮೃತಪಟ್ಟಿದ್ದರು. ಅಸ್ವಸ್ಥಗೊಂಡಿದ್ದ ಅಜ್ಜಿ, ತಾಯಿ, ಮೊಮ್ಮಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇದೀಗ ರಿಷಿತಾಳ ತಾಯಿ ಕೂಡ ಮೃತಪಟ್ಟಿದ್ದು, ಅಜ್ಜಿ, ಮೊಮ್ಮಗಳು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಇದನ್ನೂ ಓದಿ: Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

ಬಾಲಕಿಯ ಡೆತ್‌ನೋಟ್‌ ಪತ್ತೆ

ಮಹಾದೇವನಾಯಕ ಹಾಗೂ ಗೌರಮ್ಮ ದಂಪತಿಯ ಮಗಳು ಲೀಲಾವತಿ ಹಾಗೂ ಈಕೆ ಮಗಳು ರಿಷಿತಾ ಈ ನಾಲ್ವರು ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದಾರೆ. ಕಾಮ ಕ್ರಿಮಿ ಲೋಕೇಶ್ ಕೊಟ್ಟ ಟಾರ್ಚರ್‌ಗೆ ಬೇಸತ್ತು ಇಡೀ ಕುಟುಂಬ ಕ್ರಿಮಿ ನಾಶಕ ಸೇವಿಸಿದ್ದರು. ಅಪ್ರಾಪ್ತೆ ಬರೆದಿಟ್ಟ ಡೆತ್‌ನೋಟ್ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

Physical abuse lokesh
ಆರೋಪಿ ಲೋಕೇಶ್‌

ಡೆತ್‌ನೋಟ್‌ನಲ್ಲಿ ಆರೋಪಿ ಲೋಕೇಶ್‌ ಕೊಟ್ಟ ಹಿಂಸೆಯನ್ನು ಎಳೆ ಎಳೆಯಾಗಿ ಬರೆದಿಟ್ಟಿದ್ದಾಳೆ. ಲೋಕೇಶ್ ಎಲ್ಲಾ ಹೆಣ್ಣು ಮಕ್ಕಳನ್ನು ಕೆಟ್ಟ ದೃಷ್ಠಿಯಿಂದ ನೋಡುತ್ತಾನೆ. ನನ್ನನ್ನು ಸಹ ಲೋಕೇಶ್ ಕೆಟ್ಟ ದೃಷ್ಠಿಯಿಂದ ನೋಡಿದ್ದ. ನಮ್ಮ ಕುಟುಂಬದ ಮಾನ ಮರ್ಯಾದೆ ಕಳೆದು ಹಾಕಿದ್ದಾನೆ. ಲೋಕೇಶ್‌ನನ್ನು ಸುಮ್ಮನೆ ಬಿಡಬೇಡಿ, ಆತನನ್ನ ಸುಮ್ಮನೆ ಬಿಟ್ಟರೆ ನನ್ನಂತ ಎಷ್ಟೋ ಹೆಣ್ಣು ಮಕ್ಕಳ ಜೀವ ಹಾಳಾಗುತ್ತೆ ಎಂದು ತನಗೆ ಆದ ಅಪಮಾನ ಹಾಗೂ ಮಾನಸಿಕ ಹಿಂಸೆಯ ಕುರಿತು ಬರೆದಿಟ್ಟಿದ್ದಾಳೆ.

ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ

ಈ ವಿಷಯ ತಿಳಿಯುತ್ತಿದ್ದ ಆಕ್ರೋಶಗೊಂಡ ಚಂದಗಾಲು ಗ್ರಾಮಸ್ಥರು ಮಹದೇವನಾಯಕರ ಮೃತದೇಹವನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸಿದರು. ಕೆ.ಆರ್.ನಗರ ಮುಖ್ಯರಸ್ತೆಯಲ್ಲಿ ಶವ ಇಟ್ಟು ಪ್ರತಿಭಟಿಸಿ, ಆರೋಪಿಗೆ ಉಗ್ರ ಶಿಕ್ಷೆ ಕೊಡಬೇಕೆಂದು ಆಗ್ರಹಿಸಿದರು. ನಿರ್ಲಕ್ಷ್ಯ ವಹಿಸಿದ ಪೊಲೀಸರ ಮೇಲೂ ಕಠಿಣ ಕ್ರಮ ಆಗಬೇಕೆಂದರು. ರಸ್ತೆ ತಡೆಯಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿನ್ನದ ದರ

Gold Rate Today: ರಾಜಧಾನಿಯಲ್ಲಿ ಏರಿಳಿಯದ ಬಂಗಾರದ ಬೆಲೆ; ಇಂದಿನ ದರಗಳು ಹೀಗಿವೆ

Gold Rate Today: ಚಿನ್ನದ ದರ ಎರಡು ದಿನಗಳಿಂದ ಯಾವುದೇ ಏರಿಳಿಕೆ ಆಗಿಲ್ಲ. ಲೋಕಸಭೆ ಚುನಾವಣೆ ಫಲಿತಾಂಶದ ದಿನ ಏರಿಕೆಯಾಗಿದ್ದ ದರ, ನಂತರ ಇಳಿದಿತ್ತು. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

VISTARANEWS.COM


on

gold rate today bipasha
Koo

ಬೆಂಗಳೂರು: ರಾಜಧಾನಿಯಲ್ಲಿ ಇಂದು ಬಂಗಾರದ ದರ (Gold rate today) ನಿನ್ನೆಯಂತೆಯೇ ಯಥಾಸ್ಥಿತಿ ಕಾಪಾಡಿಕೊಂಡಿದೆ. ಎರಡು ದಿನಗಳಿಂದ ಯಾವುದೇ ಏರಿಳಿಕೆ ಆಗಿಲ್ಲ. ಲೋಕಸಭೆ ಚುನಾವಣೆ ಫಲಿತಾಂಶದ ದಿನ ಏರಿಕೆಯಾಗಿದ್ದ ದರ, ನಂತರ ಇಳಿದಿತ್ತು. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6,570 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7,167 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,560 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 65,700 ಮತ್ತು ₹ 6,57,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹ 7,167 ಆಗಿದ್ದು, ಎಂಟು ಗ್ರಾಂ ಬೆಲೆ ₹ 57,336 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 71,670 ಮತ್ತು ₹ 7,16,700 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (10 ಗ್ರಾಂ)24 ಕ್ಯಾರಟ್ (10 ಗ್ರಾಂ)
ದಿಲ್ಲಿ₹ 65,850₹ 71,820
ಮುಂಬೈ₹ 65,700₹ 71,670
ಬೆಂಗಳೂರು₹ 65,700₹ 71,670
ಚೆನ್ನೈ₹ 66,500₹ 72,550

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಗ್ರಾಂಗೆ ಅಲ್ಪ ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 90.50 ಹಾಗೂ 8 ಗ್ರಾಂಗೆ ₹ 724 ಇದೆ. 10 ಗ್ರಾಂಗೆ ₹ 905 ಹಾಗೂ 1 ಕಿಲೋಗ್ರಾಂಗೆ ₹ 90,500 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

  1. ಹಣದುಬ್ಬರ

ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

  1. ಜಾಗತಿಕ ಉದ್ವಿಗ್ನತೆಗಳು

ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

  1. ಚೀನಾದ ಪ್ರಭಾವ

ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

  1. ಕಡಿಮೆ ಬಡ್ಡಿ ದರಗಳು

ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

  1. ಹೂಡಿಕೆ ಮಾಡಬಹುದೆ?

ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

ಇದನ್ನೂ ಓದಿ: Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬೆಲೆ ಗಮನಿಸಿ

Continue Reading

ಬೆಳಗಾವಿ

Karnataka Rain : ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಸಾವು

Karnataka Rain : ನಿನ್ನೆ ಭಾನುವಾರ ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಯುವಕರ್ನೊವ ದಾರುಣವಾಗಿ ಮೃತಪಟ್ಟಿದ್ದ. ಘಟನೆಯಲ್ಲಿ ಮತ್ತಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದರು. ಆದರೆ ಸೋಮವಾರದಂದು ಗಾಯಾಳು ಒಬ್ಬ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

VISTARANEWS.COM


on

By

karnataka Rain
Koo

ಬೆಳಗಾವಿ: ಭಾರಿ ಮಳೆಗೆ (Karnataka Rain) ಮರ ಬಿದ್ದು (Tree fall) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಯುವಕ ಮೃತಪಟ್ಟಿದ್ದಾನೆ. ಬೆಳಗಾವಿ (Belgavi News) ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ವಿಠ್ಠಲ ತಳವಾರ ಮೃತ ದುರ್ದೈವಿ.

ಸೋಮನಾಥ್ ಮುಚ್ಚಂಡಿಕರ್, ವಿಠ್ಠಲ್ ತಳವಾರ್, ಸ್ವಪ್ನಿಲ್ ದೇಸಾಯಿ ಈ ಮೂವರು ಯುವಕರು ಬೈಕ್‌ನಲ್ಲಿ ಬೆಳಗಾವಿಗೆ ಬರುತ್ತಿದ್ದರು. ಇದೇ ವೇಳೆ ಭಾರಿ ಮಳೆ ಬರುತ್ತಿತ್ತು. ಮಳೆಯಲ್ಲೇ ಬೈಕ್‌ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಏಕಾಏಕಿ ಬೃಹತ್‌ ಗಾತ್ರದ ಮರವೊಂದು ಬುಡ ಸಮೇತ ಧರೆಗುರುಳಿ ಬೈಕ್‌ ಮೇಲೆ ಬಿದ್ದಿತ್ತು.

ಮರ ಬಿದ್ದ ರಭಸಕ್ಕೆ ಸೋಮನಾಥ್ ಮುಚ್ಚಂಡಿಕರ್‌ನ ಕರುಳು ಹೊರಗೆ ಬಂದಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದ. ಗಂಭೀರ ಗಾಯಗೊಂಡಿದ್ದ ವಿಠ್ಠಲ್ ತಳವಾರ್, ಸ್ವಪ್ನಿಲ್ ದೇಸಾಯಿ ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವಿಠ್ಠಲ್‌ ತಳವಾರ್‌ ತಲೆಗೂ ಗಂಭೀರ ಗಾಯಗೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿತ್ತು. ಸಾವು ಬದುಕಿನ ನಡುವೆ ಹೋರಾಡಿದ ವಿಠ್ಠಲ್‌ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾನೆ.

ಸದ್ಯ ಘಟನೆಯಲ್ಲಿ ಗಂಭೀರ ಗಾಯಗೊಂಡು ಸ್ವಪ್ನಿಲ್ ದೇಸಾಯಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Karnataka Rain : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಹೊರ ಬಂತು ಸವಾರನ ಕರುಳು! ಮತ್ತಿಬ್ಬರು ಗಂಭೀರ

ಈ ಜಿಲ್ಲೆಗಳಲ್ಲಿ ವೇಗವಾಗಿ ಬೀಸುತ್ತೆ ಗಾಳಿ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 55-65 ಕಿ.ಮೀ ಇರಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಹಾವೇರಿ, ಕೊಪ್ಪಳ, ವಿಜಯಪುರ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಈ ಭಾಗದಲ್ಲಿ ಮಳೆ ಜತೆಗೆ ಗಾಳಿಯು ಗಂಟೆಗೆ 40-50 ಕಿ.ಮೀ ಇರಲಿದೆ. ದಕ್ಷಿಣ ಕನ್ನಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್ 10 ರಿಂದ 12 ರವರೆಗೆ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

HSRP Number Plate: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಡೆಡ್‌ಲೈನ್‌! ಇನ್ನೂ ಎರಡೇ ದಿನ ಬಾಕಿ

HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಈಗಾಗಲೇ ಹಲವು ಬಾರಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿತ್ತು. ಇದೀಗ ನಂಬರ್‌ ಪ್ಲೇಟ್‌ ನೋಂದಣಿಗೆ ಇನ್ನೆರಡು ದಿನಗಳು ಮಾತ್ರ ಬಾಕಿ ಇವೆ ಅಂದರೆ, ಜೂನ್‌ 12ಕ್ಕೆ ಮುಕ್ತಾಯವಾಗಲಿದೆ.

VISTARANEWS.COM


on

By

HSRP Number Plate
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ‌ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ (Old Vehicles) ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ನಂಬರ್‌ ಪ್ಲೇಟ್‌ (HSRP Number Plate) ಕಡ್ಡಾಯವಾಗಿ ಅಳವಡಿಸಲು ಇದ್ದ ಗಡುವು ಇನ್ನೂ ಎರಡೇ ದಿನದಲ್ಲಿ ಮುಕ್ತಾಯವಾಗಲಿದೆ. ಈ ಹಿಂದೆ ಫೆಬ್ರವರಿ 17ಕ್ಕೆ ಇದ್ದ ನೋಂದಣಿ ಗಡುವನ್ನು ರಾಜ್ಯ ಸರ್ಕಾರ ಮೇ 31ಕ್ಕೆ ವಿಸ್ತರಣೆ ಮಾಡಿತ್ತು. ಬಳಿಕ ಜೂನ್‌ 12ರವರೆಗೆ ಗಡುವು ನೀಡಿದ್ದು, ಇನ್ನೆರಡು ದಿನದಲ್ಲಿ ಮುಕ್ತಾಯವಾಗಲಿದೆ. ನೋಂದಣಿ ಮಾಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಕ್ರಮ ಜರುಗಿಸುವ ತೀರ್ಮಾನಕ್ಕೆ ಸಾರಿಗೆ ಇಲಾಖೆ ಬಂದಿದೆ. ಮೊದಲ ಬಾರಿಗೆ ಸಿಕ್ಕಿಬಿದ್ದರೆ 500 ರೂಪಾಯಿ ದಂಡ, ಎರಡನೇ ಬಾರಿ ಸಿಕ್ಕಿಬಿದ್ದರೆ 1000 ರೂಪಾಯಿಗೆ ಏರಿಕೆ ಮಾಡುವ ನಿಟ್ಟಿನಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲು ಚಿಂತಿಸಲಾಗಿದೆ ಎನ್ನಲಾಗಿದೆ.

ಅಧಿಕೃತ ವೆಬ್‌ಸೈಟ್‌ನಲ್ಲಿ ಮಾತ್ರವೇ ನೋಂದಣಿ ಮಾಡಿ

ಅದೆಷ್ಟೋ ಜನರಿಗೆ ಎಲ್ಲಿ ಅಪ್ಲೈ ಮಾಡಬೇಕು ಎಂಬುದೇ ಗೊತ್ತಿಲ್ಲ. ಹೀಗಾಗಿ ಗೊತ್ತಾಗದೇ ಮಧ್ಯವರ್ತಿಗಳ ಮೊರೆ ಹೋಗುತ್ತಿದ್ದಾರೆ ಕೂಡ. ಇನ್ನು ಕೆಲವರು ಯಾವುದ್ಯಾವುದೋ ವೆಬ್‌ಸೈಟ್‌ ಓಪನ್‌ ಮಾಡಿ ವಂಚನೆಗೆ ಒಳಗಾಗುತ್ತಿದ್ದು, ಇದನ್ನು ತಪ್ಪಿಸುವ ಕೆಲಸ ಆಗಬೇಕಿದೆ. ಇನ್ನು ಮೊಬೈಲ್‌ ಇಲ್ಲವೇ ಡೆಸ್ಕ್‌ಟಾಪ್‌ ಮೂಲಕವೇ ನೋಂದಣಿ ಮಾಡಿಸಬಹುದಾಗಿದ್ದು, ಇದಕ್ಕೆ ಸರಳ ವಿಧಾನವಿದೆ.

ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನ, ಪ್ರಯಾಣಿಕ ಕಾರು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನ, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು.

ಏನಿದು ಎಚ್ಎಸ್ಆರ್‌ಪಿ ನಂಬರ್‌ ಪ್ಲೇಟ್‌?

ಎಚ್‌ಎಸ್‌ಆರ್‌ಪಿ ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ಈ ಪ್ಲೇಟ್‌ನ ಮೇಲ್ಭಾಗದ ಎಡಬದಿಯಲ್ಲಿ ಅಶೋಕ ಚಕ್ರ ಮುದ್ರೆಯ 20X20 ಮಿ.ಮೀ ಅಳತೆಯ ಕ್ರೋಮಿಯಂ ಹೋಲೋಗ್ರಾಮ್‌ ಇರುತ್ತದೆ. ಇಂಗ್ಲಿಷ್ ಅಕ್ಷರಗಳು ಹಾಗೂ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತವೆ. ಈ ನಂಬರ್‌ ಪ್ಲೇಟ್‌ಗಳನ್ನು ಎರಡು ಲಾಕ್‌ ಪಿನ್‌ಗಳನ್ನು ಬಳಸಿ ಅಳವಡಿಸುತ್ತಾರೆ. ಇದರಿಂದ ಒರಿಜಿನಲ್‌ ಯಾವುದು, ನಕಲಿ ಯಾವುದು ಎಂದು ಸುಲಭವಾಗಿ ಗುರುತಿಸಬಹುದು.

ಇದನ್ನೂ ಓದಿ: NEET UG : ನೀಟ್-ಯುಜಿ ಫಲಿತಾಂಶ ಹಿಂಪಡೆಯಲು ಕೋರಿ ಸುಪ್ರೀಂ ಕೋರ್ಟ್​​ಗೆ ಅರ್ಜಿ

ಎಚ್ಎಸ್ಆರ್‌ಪಿ ಪಡೆಯುವುದು ಹೇಗೆ?

ಕರ್ನಾಟಕ ಸಾರಿಗೆ ಇಲಾಖೆ ವೆಬ್‌ಸೈಟ್‌ ಅಥವಾ ಸೊಸೈಟಿ ಆಫ್‌ ಇಂಡಿಯನ್‌ ಆಟೋಮೊಬೈಲ್‌ ಮ್ಯಾನುಫ್ಯಾಕ್ಚರರ್ಸ್‌ (ಎಸ್‌ಐಎಎಂ) ವೆಬ್‌ಸೈಟ್‌ ಭೇಟಿ ನೀಡಿ ಮತ್ತು Book HSRP ಅನ್ನು ಕ್ಲಿಕ್‌ ಮಾಡಿ.
-ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ.
-ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
-HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ.
-HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ, ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
-ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ ರವಾನಿಸಲಾಗುವುದು.
-ನಿಮ್ಮ ಅನುಕೂಲಕ್ಕೆ ತಕ್ಕಂತಹ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ.
-ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.
-ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆಯನ್ನು ಹೊಂದಬಹುದು.

ಎಚ್‌ಎಸ್‌ಆರ್‌ಪಿ ಯಾಕೆ ಮತ್ತು ವಿಶೇಷತೆ ಏನು?

-HSRP ನೋಂದಣಿ ಫಲಕಗಳು ಅತ್ಯಂತ ಸುರಕ್ಷಿತವಾಗಿದ್ದು ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸಾಧ್ಯವಿಲ್ಲ.

-ನಂಬರ್‌ ಪ್ಲೇಟ್‌ನ ಒಂದು ಬದಿಯಲ್ಲಿ ನೀಲಿ ಬಣ್ಣದ ಚಕ್ರವನ್ನು ಹೋಲುವ ಹಾಲೋಗ್ರಾಮ್‌ ಇರುತ್ತದೆ. ಇದರ ಕೆಳಗಡೆ 10 ನಂಬರಿನ ವಿಶಿಷ್ಟ ಗುರುತಿನ ಸಂಖ್ಯೆ ಇರುತ್ತದೆ. ಅಂಕಿಗಳ ಮೇಲೆ ಆಂಗ್ಲಭಾಷೆಯಲ್ಲಿ ‘ಇಂಡಿಯಾ’ ಎಂಬ ಪದ ಹಲವೆಡೆ ಇರುತ್ತದೆ.
-ಸುರಕ್ಷಿತ ನಂಬರ್‌ ಪ್ಲೇಟ್‌ನಲ್ಲಿ ನಂಬರ್‌ ಪ್ಲೇಟ್‌ ನಕಲು ಮಾಡುವುದು ಸಾಧ್ಯವಿಲ್ಲ.
-ವಾಹನಗಳ ಕಳವು, ಅವುಗಳನ್ನು ಬಳಸಿ ಅಪರಾಧ ಚಟುವಟಿಕೆ ಮಾಡಿದಾಗ ಪರಿಶೀಲಿಸಲು ಎಚ್‌ಎಸ್‌ಆರ್‌ಪಿ ಸಹಕಾರಿಯಾಗಲಿದೆ.
-ರಸ್ತೆಗಳಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ಗುರುತಿಸಲು ಸಹಕಾರಿ.
-ನೋಂದಣಿ ಫಲಕಗಳಲ್ಲಿ ಏಕರೂಪತೆ ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತವೆ.

ಹೆಚ್ಚುತ್ತಿವೆ ನಕಲಿ ಹಾವಳಿ

HSRP ನಂಬರ್‌ ಪ್ಲೇಟ್‌ಗಳನ್ನು ನಕಲಿ ಮಾಡಿ ವಂಚನೆ ಮಾಡುವ ಜಾಲವು ಇದ್ದು, ಸಾರ್ವಜನಿಕರು ಮೋಸ ಹೋಗದಂತೆ ಮನವಿ ಮಾಡಲಾಗುತ್ತಿದೆ. ಈ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ನಂತೆಯೇ ಹೋಲಿಕೆ ಇರುವಂತೆ ಇಂಥವರು ಸಿದ್ಧಪಡಿಸಿ ಕೊಡುತ್ತಾರೆ. ಇದನ್ನು ಅಗ್ಗದ ಬೆಲೆಯಲ್ಲಿ ಕೊಡುವುದರಿಂದ ಜನರೂ ಗೊತ್ತಿಲ್ಲದೆ ಖರೀದಿ ಮಾಡುತ್ತಾರೆ. ಆದರೆ, ಅದರಲ್ಲಿ ಟ್ಯಾಂಪರ್‌ ಪ್ರೂಫ್‌ ವೈಶಿಷ್ಟ್ಯ, ಯುನೀಕ್‌ ಐಡೆಂಟಿಟಿ ಅಂಶಗಳು ಇರುವುದಿಲ್ಲ. ಇದರಿಂದ ಒಮ್ಮೆ ಆರ್‌ಟಿಒ ಪೊಲೀಸರಿಗೆ ಸಿಕ್ಕಿ ಬಿದ್ದರೆ ದಂಡ ಕಟ್ಟುವುದು ಗ್ಯಾರಂಟಿಯಾಗಿದೆ. ಇಲ್ಲಿ “IND” ಗುರುತಾಗಲೀ, ಅಶೋಕ ಚಕ್ರ ಚಿಹ್ನೆಯ Hot stamp ಆಗಲೀ ಇರುವುದಿಲ್ಲ. ಹೀಗಾಗಿ ಅಧಿಕೃತ ವಿತರಕರಿಂದ ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಳನ್ನು ಪಡೆದುಕೊಳ್ಳಬೇಕು ಎಂದು ಸರ್ಕಾರ ಸಹ ಹೇಳಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Niveditha Gowda Chandan Shetty Joint Pressmeet For The First Time
ಕಿರುತೆರೆ2 mins ago

Niveditha Gowda : ಡಿವೋರ್ಸ್‌ ಬಳಿಕ ಒಟ್ಟಾಗಿ ಸುದ್ದಿಗೋಷ್ಠಿ ಕರೆದ ಚಂದನ್-ನಿವೇದಿತಾ!

Narendra Modi 3.0
ಪ್ರಮುಖ ಸುದ್ದಿ10 mins ago

Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

8th Pay Commission
ರಾಜಕೀಯ15 mins ago

8th Pay Commission: ಭಾರಿ ವೇತನ ಹೆಚ್ಚಳ ನಿರೀಕ್ಷೆಯಲ್ಲಿ ಕೇಂದ್ರ ಸರ್ಕಾರಿ ನೌಕರರು

Physical Abuse
ಕ್ರೈಂ16 mins ago

Physical Abuse : ನಗ್ನ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿದ ತಂದೆ ಬಳಿಕ ಮಗಳು ಮೃತ್ಯು, ಮತ್ತಿಬ್ಬರ ಸ್ಥಿತಿ ಗಂಭೀರ

Sonakshi Sinha to marry boyfriend Zaheer Iqbal on June 23
ಬಾಲಿವುಡ್27 mins ago

Sonakshi Sinha: ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ಸೋನಾಕ್ಷಿ ಸಿನ್ಹಾ ಅದ್ಧೂರಿ ಮದುವೆ?

Reasi Terror Attack
ದೇಶ31 mins ago

Reasi Terror Attack : ಜಮ್ಮು – ಕಾಶ್ಮೀರ ಬಸ್ ದಾಳಿಯ ಹೊಣೆ ಹೊತ್ತುಕೊಂಡ ಪಾಕ್ ಲಷ್ಕರ್ ಬೆಂಬಲಿತ ಉಗ್ರ ಸಂಘಟನೆ

Viral Video
ವೈರಲ್ ನ್ಯೂಸ್59 mins ago

Viral Video: ಮೆಕ್ಕಾದಲ್ಲಿ ಬುರ್ಖಾಧಾರಿ ಮಹಿಳೆಯ ಡ್ಯಾನ್ಸ್! ಮುಸ್ಲಿಂ ಸಮುದಾಯದ ಆಕ್ರೋಶ

gold rate today bipasha
ಚಿನ್ನದ ದರ1 hour ago

Gold Rate Today: ರಾಜಧಾನಿಯಲ್ಲಿ ಏರಿಳಿಯದ ಬಂಗಾರದ ಬೆಲೆ; ಇಂದಿನ ದರಗಳು ಹೀಗಿವೆ

IND vs PAK
ಕ್ರೀಡೆ1 hour ago

IND vs PAK : ಸೂಪರ್ ಫ್ಯಾನ್​​; ಟೀಮ್​ ಇಂಡಿಯಾ ಜೆರ್ಸಿ ಧರಿಸಿ ಭಾರತವನ್ನು ಬೆಂಬಲಿಸಿದ ಮೈಕ್ರೋಸಾಫ್ಟ್​​ ಸಿಇಒ ಸತ್ಯ ನಾದೆಳ್ಳಾ

karnataka Rain
ಬೆಳಗಾವಿ1 hour ago

Karnataka Rain : ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌