R Ashok: ಮುಡಾದಲ್ಲಿ ಎಲ್ಲರೂ ಗ್ಯಾಂಗ್‌ ಮಾಡಿಕೊಂಡು ಹಗರಣ ಮಾಡಿದ್ದಾರೆ; ಆರ್‌. ಅಶೋಕ್‌ ಆರೋಪ - Vistara News

ಕರ್ನಾಟಕ

R Ashok: ಮುಡಾದಲ್ಲಿ ಎಲ್ಲರೂ ಗ್ಯಾಂಗ್‌ ಮಾಡಿಕೊಂಡು ಹಗರಣ ಮಾಡಿದ್ದಾರೆ; ಆರ್‌. ಅಶೋಕ್‌ ಆರೋಪ

R Ashok: ಮುಡಾದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ಆಗ್ರಹಿಸಿರುವ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌, 86 ಸಾವಿರ ಜನರು ನಿವೇಶನ ಕೊಡಿ ಎಂದು ಮನವಿ ಮಾಡಿದ್ದರೂ ಕಾಂಗ್ರೆಸ್‌ ನಾಯಕರಿಗೆ ಮಾತ್ರ ಸೈಟುಗಳು ಸಿಕ್ಕಿದೆ. ಸರ್ಕಾರದ ಆಸ್ತಿಗಳನ್ನು ಯಾರ‍್ಯಾರೋ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

VISTARANEWS.COM


on

Opposition party leader R Ashok latest statement about muda scam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಡಾದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ (R Ashok) ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ಮುಡಾ ಭೂಸ್ವಾಧೀನ ಮಾಡಿಕೊಳ್ಳಲು ಮುಂದಾಗಿ ನಂತರ ಡಿನೋಟಿಫೈ ಮಾಡಿತ್ತು. ಅದಾದ ನಂತರವೂ ಬಡಾವಣೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಅರ್ಜಿ ಸಲ್ಲಿಸಿದ ನಂತರ ಮುಡಾ ಅಧ್ಯಕ್ಷ ಮತ್ತು ಆಯುಕ್ತರು 50:50 ಅನುಪಾತದಲ್ಲಿ ನಿವೇಶನ ನೀಡಿದ್ದಾರೆ. ಇದರಿಂದ ಮುಡಾಗೆ ನಷ್ಟವಾಗಿದೆ.

50:50 ಮಾಡುವುದಾದರೆ ಸರ್ಕಾರಕ್ಕೆ ಕಳುಹಿಸಿ ಒಪ್ಪಿಗೆ ಸಿಕ್ಕಿ ಆದೇಶವಾಗಬೇಕು. ಅಕ್ರಮವಾಗಿ ಅವರೇ ಹಂಚಿಕೆ ಮಾಡಿಕೊಂಡಿದ್ದಾರೆ. ಉದಾಹರಣೆಗೆ ದಾಸರಹಳ್ಳಿಯಲ್ಲಿ ಭೂಸ್ವಾಧೀನವಾದರೆ ಎಂ.ಜಿ. ರಸ್ತೆಯ ಜಮೀನು ಕೊಟ್ಟಂತಾಗಿದೆ. ಈ ಹಗರಣದ ತನಿಖೆಯನ್ನು ಸರ್ಕಾರದಡಿಯ ಸಂಸ್ಥೆಗೆ ನೀಡಿದರೆ ಮುಖ್ಯಮಂತ್ರಿಯವರನ್ನು ಆರೋಪಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸಿಬಿಐಗೆ ತನಿಖೆಗೆ ವಹಿಸಲಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ: Hassan News: ಆಲೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್‌ಬುಕ್‌, ಬ್ಯಾಗ್‌ ವಿತರಣೆ

ಡಿನೋಟಿಫೈ ಆದ ಭೂಮಿಯ ಬದಲಿಗೆ ಪ್ರತಿಷ್ಠಿತ ಸ್ಥಳದ ಕಡೆ ಜಾಗ ನೀಡಲಾಗಿದೆ. ಡಿನೋಟಿಫೈ ಆದ ಜಮೀನನ್ನು ಅಭಿವೃದ್ಧಿ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಭೂ ಮಾಲೀಕರು ಅದನ್ನು ನೋಡಿಕೊಂಡು ಏಕೆ ಸುಮ್ಮನಿದ್ದರು ಎಂದು ಅನುಮಾನವಾಗುತ್ತದೆ. ನಾನು ಕೂಡ ಈ ಕುರಿತು ದಾಖಲೆಗಳನ್ನು ಕೇಳಿದ್ದರೂ ಏನೂ ಸಿಕ್ಕಿಲ್ಲ. ಈ ವಹಿವಾಟುಗಳಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ. ಮೈಸೂರು ಜಿಲ್ಲಾಧಿಕಾರಿ ಹಲವಾರು ಬಾರಿ ಮುಡಾಗೆ ಪತ್ರ ಬರೆದು ಸ್ಪಷ್ಟನೆ ಕೇಳಿದ್ದಾರೆ. ಆದರೆ ಇದಕ್ಕೆ ಮುಡಾದಿಂದ ಉತ್ತರ ದೊರೆತಿಲ್ಲ. ಅಲ್ಲೇ ಎಲ್ಲರೂ ಸೇರಿಕೊಂಡು ಗ್ಯಾಂಗ್‌ ಮಾಡಿಕೊಂಡಿದ್ದಾರೆ. ಇದರ ಹಿಂದೆ ದೊಡ್ಡ ಜಾಲವಿದೆ ಎಂದು ಆರೋಪಿಸಿದರು.

ಇದು ಬಿಜೆಪಿ ಕಾಲದಲ್ಲೇ ನಡೆದಿದ್ದು ಎಂದು ಸಿಎಂ ಹೇಳಿದ್ದಾರೆ. ಅದು ಯಾರೇ ಆಗಿದ್ದರೂ ಅವರನ್ನು ಮೊದಲು ಬಂಧನ ಮಾಡಿಸಬೇಕು. ಇದಕ್ಕೆ ನಮ್ಮ ಆಕ್ಷೇಪಣೆ ಇಲ್ಲ. ಇದರಲ್ಲಿ ಬಿಜೆಪಿ ಸರ್ಕಾರದ ಯಾವುದೇ ಪಾತ್ರವಿಲ್ಲ. ಈ ನಿವೇಶನ ಮಂಜೂರನ್ನು ಮೊದಲು ರದ್ದುಪಡಿಸಬೇಕು ಎಂದು ಅವರು ಆಗ್ರಹಿಸಿದರು.

ಇದನ್ನೂ ಓದಿ: Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

86 ಸಾವಿರ ಜನರು ನಿವೇಶನ ಕೊಡಿ ಎಂದು ಮನವಿ ಮಾಡಿದ್ದರೂ ಕಾಂಗ್ರೆಸ್‌ ನಾಯಕರಿಗೆ ಮಾತ್ರ ಸೈಟುಗಳು ಸಿಕ್ಕಿದೆ. ಸರ್ಕಾರದ ಆಸ್ತಿಗಳನ್ನು ಯಾರ‍್ಯಾರೋ ಲೂಟಿ ಮಾಡುತ್ತಿದ್ದಾರೆ ಎಂದು ದೂರಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Road Accident: ರಾಜಕಾಲುವೆಗೆ ಬಿದ್ದ ಬೈಕ್‌ ಸವಾರನ ಮೃತದೇಹ ಪತ್ತೆ

Road Accident: ರಾಜಕಾಲುವೆಗೆ ಬಿದ್ದ ಬೈಕ್‌ ಸವಾರನ ಮೃತದೇಹ ಮೂರು ದಿನಗಳ ಬಳಿಕ ಪತ್ತೆಯಾಗಿದೆ. ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಹೇಮಂತ ಕುಮಾರ್ (27) ಜ್ಞಾನ ಭಾರತಿ ಮೆಟ್ರೋ ಸ್ಟೆಷನ್ ಬಳಿ ರಾಜಕಾಲುವೆಗೆ ಬಿದ್ದಿದ್ದರು. ಶುಕ್ರವಾರದಿಂದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಹೇಮಂತ ಕುಮಾರ್‌ಗಾಗಿ ಸತತವಾಗಿ ಹುಡುಕಾಟ ನಡೆಸುತ್ತಿದ್ದರು. ಇದೀಗ ಬಿದ್ದ ಸ್ಥಳದಲ್ಲಿಯೇ ಯುವಕನ ಮೃತದೇಹ ಪತ್ತೆಯಾಗಿದೆ.

VISTARANEWS.COM


on

Road Accident
Koo

ಬೆಂಗಳೂರು: ರಾಜಕಾಲುವೆ (Rajakaluve)ಗೆ ಬಿದ್ದ ಬೈಕ್‌ ಸವಾರನ ಮೃತದೇಹ ಮೂರು ದಿನಗಳ ಬಳಿಕ ಪತ್ತೆಯಾಗಿದೆ. ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಹೇಮಂತ ಕುಮಾರ್ (27) ಜ್ಞಾನ ಭಾರತಿ ಮೆಟ್ರೋ ಸ್ಟೆಷನ್ ಬಳಿ ರಾಜಕಾಲುವೆಗೆ ಬಿದ್ದಿದ್ದರು. ಡಿವೈಡರ್‌ಗೆ ಗುದ್ದಿದ ಪರಿಣಾಮ ಹೇಮಂತ ಕುಮಾರ್ ಚಿಮ್ಮಿ ವೃಷಭಾವತಿ ನದಿ‌ ರಾಜಕಾಲುವೆ ಒಳಗೆ ಬಿದ್ದಿದ್ದರು. ವೇಗವಾಗಿ ಬೈಕ್‌ ಚಲಾಯಿಸಿದ್ದರಿಂದ, ಬೈಕ್‌ ಡಿವೈಡರ್‌ಗೆ ಗುದ್ದಿದ ಪರಿಣಾಮ ಅವರು ಚಿಮ್ಮಿ ರಾಜಕಾಲುವೆ ಒಳಗೆ ಬಿದ್ದಿದ್ದಾರೆ ಎಂದು ಊಹಿಸಲಾಗಿದೆ. ಸಣ್ಣದಾಗಿ ಮಳೆ ಬರುತ್ತಿದ್ದುದರಿಂದ ಡಿವೈಡರ್‌ ಗುರುತಿಸಲು ಸಾಧ್ಯವಾಗದೆ ಈ ಅವಘಡ ಸಂಭವಿಸಿದೆ. ಆದರೆ ಮೂರು ದಿನಗಳಿಂದ ಅವರು ಪತ್ತೆಯಾಗಿರಲಿಲ್ಲ. ಇದೀಗ ಮೃತದೇಹ ಕಂಡು ಬಂದಿದೆ (Road Accident).

ಸತತ ಶೋಧ ಕಾರ್ಯ

ಶುಕ್ರವಾರದಿಂದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಹೇಮಂತ ಕುಮಾರ್‌ಗಾಗಿ ಸತತವಾಗಿ ಹುಡುಕಾಟ ನಡೆಸುತ್ತಿದ್ದರು. ಇದೀಗ ಬಿದ್ದ ಸ್ಥಳದಲ್ಲಿಯೇ ಯುವಕನ ಮೃತದೇಹ ಪತ್ತೆಯಾಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಮೃತದೇಹವನ್ನು ಮೇಲಕ್ಕೆ ಎತ್ತಿ ಅಂಬ್ಯುಲೆನ್ಸ್ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

ಯಾದಗಿರಿ: ಬಾವಿಗೆ ಎಸೆದು ಹಸುಗೂಸನ್ನು ಕೊಲೆ (Murder case) ಮಾಡಲಾಗಿದೆ. ಯಾದಗಿರಿ ನಗರದ ಅಂಬೇಡ್ಕರ್ ಬಡಾವಣೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಮೀನಾಕ್ಷಿ (2 ತಿಂಗಳು) ಮೃತ ದುರ್ದೈವಿ. ನಾಗೇಶ್ ಹಾಗೂ ಚಿಟ್ಟೆಮ್ಮ ದಂಪತಿಯ ಮಗು ಮೀನಾಕ್ಷಿಯನ್ನು ಕೊಲೆ ಯಾರು ಮಾಡಿದ್ದಾರೆ? ಯಾಕೆ‌‌ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಬಡಾವಣೆಯ ಹೊರ ಭಾಗದ ನಿರ್ಜನ ಪ್ರದೇಶದಲ್ಲಿರುವ ಬಾವಿಗೆ ಬಿಸಾಡಿ ಹೋಗಿದ್ದಾರೆ.

ಹೆಣ್ಣು ಮಗು ಎಂಬ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಮಗುವಿನ ಪೋಷಕರು ಕಣ್ಣೀರು ಹಾಕುತ್ತಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಯಾದಗಿರಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಮೃತದೇಹವನ್ನು ಮೇಲೆ ಎತ್ತಿದ್ದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಯಾದಗಿರಿ ನಗರ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಬನ್ನೇರುಘಟ್ಟ ಸಫಾರಿ ವೇಳೆ ಸಿಬ್ಬಂದಿ ಮೇಲೆ ಕರಡಿ ದಾಳಿ

ಬೆಂಗಳೂರು ಗ್ರಾಮಾಂತರ: ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಫಾರಿ ವೇಳೆ ಕರಡಿಯೊಂದು (Bear Attack) ಸಿಬ್ಬಂದಿ ಮೇಲೆ ದಾಳಿ (Wild Animal Attack) ಮಾಡಿದೆ. ಬೆಂಗಳೂರು ಹೊರವಲಯ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಘಟನೆ ನಡೆದಿದೆ.ಬೆಟ್ಟಪ್ಪ (54) ಕರಡಿ ದಾಳಿಗೊಳಗಾದವರು. ಬೆಟ್ಟಪ್ಪ ಕಳೆದ ಇಪ್ಪತ್ತು ವರ್ಷಗಳಿಂದ ಬನ್ನೇರುಘಟ್ಟದಲ್ಲಿ ಸಫಾರಿಯ ಗೇಟ್‌ ಆಪರೇಟರ್‌ ಕೆಲಸ ಮಾಡುತ್ತಿದ್ದಾರೆ. ಶನಿವಾರ ಸಫಾರಿಯಲ್ಲಿ ಗೇಟ್ ಆಪರೇಟ್ ಮಾಡುವಾಗ ಏಕಾಏಕಿ ಕರಡಿ ದಾಳಿ ಮಾಡಿದೆ. ಬೆಟ್ಟಪ್ಪ ಗಂಭೀರ ಗಾಯಗೊಂಡಿದ್ದು. ಅಪೋಲೋ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಾವು ಬದುಕಿನ ನಡುವೆ ಬೆಟ್ಟಪ್ಪ ಹೋರಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ | Viral News: ಮದುವೆಯಾಗಲು ನಿರಾಕರಿಸಿದ ಪ್ರಿಯಕರನ ಆ ʼಅಂಗʼಕ್ಕೆ ಕತ್ತರಿ ಹಾಕಿದ ಪ್ರಿಯತಮೆ

Continue Reading

ಕ್ರೈಂ

Road Accident: ಲಾರಿಗೆ ಬೈಕ್‌ ಡಿಕ್ಕಿ ಹೊಡೆದು ಪತ್ರಕರ್ತ ಸಾವು: ಇಬ್ಬರನ್ನು ಬಲಿ ಪಡೆದ ಅಪರಿಚಿತ ಕಾರು

Road Accident: ಪ್ರತ್ಯೇಕ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಮಂಡ್ಯದಲ್ಲಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದು ಸ್ಥಳದಲ್ಲೇ ಪ್ರತಕರ್ತರೊಬ್ಬರು ಅಸುನೀಗಿದರೆ ಚಾಮರಾಜನಗರದಲ್ಲಿ ಹಿಟ್ ಆ್ಯಂಡ್ ರನ್‌ಗೆ ಎರಡು ಜೀವಗಳು ಬಲಿಯಾಗಿವೆ. ಮೃತ ಪತ್ರಕರ್ತರನ್ನು ಬಿ.ಎ.ಮಧು ಕುಮಾರ್ ಎಮದು ಗುರುತಿಸಲಾಗಿದೆ.

VISTARANEWS.COM


on

Road Accident
Koo

ಮಂಡ್ಯ / ಚಾಮರಾಜನಗರ: ಪ್ರತ್ಯೇಕ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಮಂಡ್ಯದಲ್ಲಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದು ಸ್ಥಳದಲ್ಲೇ ಪ್ರತಕರ್ತರೊಬ್ಬರು ಅಸುನೀಗಿದರೆ ಚಾಮರಾಜನಗರದಲ್ಲಿ ಹಿಟ್ ಆ್ಯಂಡ್ ರನ್‌ಗೆ ಎರಡು ಜೀವಗಳು ಬಲಿಯಾಗಿವೆ (Road Accident)

ಮಂಡ್ಯ: ಪತ್ರಕರ್ತ ಸಾವು

ಶನಿವಾರ ರಾತ್ರಿ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಟಿ.ಬಿ.ವೃತ್ತದಲ್ಲಿ ನಿಂತಿದ್ದ ಲಾರಿಯ ಹಿಂಬದಿಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಪತ್ರಕರ್ತ ಬಿ.ಎ.ಮಧು ಕುಮಾರ್ (34) ಮೃತಪಟ್ಟಿದ್ದಾರೆ. ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ವಾಸವಿದ್ದ ಮೃತ ಮಧು ಕುಮಾರ್ ಅವರು ಪ್ರಾದೇಶಿಕ ದಿನಪತ್ರಿಕೆ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವಾಗ ಮದ್ದೂರು ಟಿ.ಬಿ. ವೃತ್ತದ ಬಳಿ ನಿಂತಿದ್ದ ಲಾರಿಯ ಹಿಂಬದಿಗೆ ಮಧು ಕುಮಾರ್‌ ಚಲಾಯಿಸುತ್ತಿದ್ದ ಬೈಕ್‌ ಡಿಕ್ಕಿಯಾಗಿ ಈ ಅನಾಹುತ ಸಂಭವಿಸಿತ್ತು. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಮರಾಜನಗರ: ಹಿಟ್ ಆ್ಯಂಡ್ ರನ್

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ಹಿಟ್ ಆ್ಯಂಡ್ ರನ್ ಕೇಸ್‌ಗೆ ಎರಡು ಜೀವಗಳು ಬಲಿಯಾಗಿವೆ. ಬೈಕ್‌ಗೆ ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸೋಮಹಳ್ಳಿ ಗ್ರಾಮದ ಮಹಾದೇವಸ್ವಾಮಿ, ನಾಗೇಂದ್ರ ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಬಳಿಕ ಕಾರನ್ನು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದ. ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳು ಗುಂಡ್ಲುಪೇಟೆ ಆಸ್ಪತ್ರೆಗೆ ರವಾನಿಸಲಾಗಿದೆ.

ಬೆಂಗಳೂರು: ಬೈಕ್ ಸವಾರನಿಗಾಗಿ ಶೋಧ ಕಾರ್ಯ

ಬೆಂಗಳೂರು: ಡಿವೈಡರ್‌ಗೆ ಡಿಕ್ಕಿ ಹೊಡೆದು ರಾಜಕಾಲುಗೆ ಬಿದ್ದ ಬೈಕ್ ಸವಾರನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಮೈಸೂರು ರಸ್ತೆ ಯೂನಿವರ್ಸಿಟಿ ಗೇಟ್‌ನಿಂದ ಕೆಂಗೇರಿ ಮಾರ್ಗದಲ್ಲಿ ಶೋಧ ನಡೆಸಲಾಗುತ್ತಿದೆ. ಶುಕ್ರವಾರ ರಾತ್ರಿ ಬೈಕ್ ಸವಾರ ಹೇಮಂತ್ ರಾಜಕಾಲುವೆಗೆ ಬಿದ್ದಿದ್ದರು. ಬೈಕ್ ಸವಾರ ಹೇಮಂತ್‌ಗಾಗಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸುಮಾರು 25 ಗಂಟೆಗೂ ಹೆಚ್ಚು ಸಮಯದಿಂದ ಶೋಧ ನಡೆಸುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ವೃಷಭಾವತಿ ಕಾಲುವೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಶುಕ್ರವಾರ ರಾತ್ರಿ 10.30 ಸುಮಾರಿಗೆ ಹೇಮಂತ್‌ ರಾಜಕಾಲುಗೆ ಬಿದ್ದಿದ್ದರು.

ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ರಾತ್ರಿ ಸುಮಾರು 10:30ಕ್ಕೆ ಈ ದುರ್ಘಟನೆ ನಡೆದಿದೆ. ಜ್ಞಾನ ಭಾರತಿ ಮೆಟ್ರೋ ಸ್ಟೆಷನ್ ಬಳಿ ವೇಗವಾಗಿ ಬೈಕ್‌ ಚಲಾಯಿಸಿದ್ದರಿಂದ, ಬೈಕ್‌ ಡಿವೈಡರ್‌ಗೆ ಗುದ್ದಿದ ಪರಿಣಾಮ ಸವಾರ ಚಿಮ್ಮಿ ರಾಜಕಾಲುವೆ ಒಳಗೆ ಬಿದ್ದಿದ್ದಾರೆ. ಸಣ್ಣದಾಗಿ ಮಳೆ ಬರುತ್ತಿದ್ದುದರಿಂದ ಡಿವೈಡರ್‌ ಗುರುತಿಸಲು ಸಾಧ್ಯವಾಗಿರಲಿಕ್ಕಿಲ್ಲ. ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿಯನ್ನು ಕರೆಸಿ ಕಾರ್ಯಾಚರಣೆ ನಡೆಸಲಾಯಿತಾದರೂ, ಸವಾರನ ಪತ್ತೆಯಾಗಲಿಲ್ಲ. ರಾಜಕಾಲುವೆಯಲ್ಲಿ ಸುಮಾರು 4 ಅಡಿ ನೀರು ತುಂಬಿದ್ದು, ಈ ನೀರಿನಲ್ಲಿ ವ್ಯಕ್ತಿ ಕೊಚ್ಚಿ ಹೋಗಲು ಸಾಧ್ಯವೇ ಎಂಬ ಅನುಮಾನವೂ ಮೂಡಿದೆ.

ಇದನ್ನೂ ಓದಿ: Road Accident : ಶಿವಮೊಗ್ಗದಲ್ಲಿ ಕಾರುಗಳ ನಡುವೆ ಭೀಕರ ಅಪಘಾತ; ಮೂವರು ಸಾವು, ಮತ್ತಿಬ್ಬರು ಗಂಭೀರ

Continue Reading

ಕರ್ನಾಟಕ

Boiler Blast: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ; ತಪ್ಪಿದ ಬಹುದೊಡ್ಡ ಅನಾಹುತ

Boiler Blast: ಮತ್ತೆ ರಾಜ್ಯದಲ್ಲಿ  ಬಾಯ್ಲರ್ ಸ್ಫೋಟದ ಸದ್ದು ಕೇಳಿಸಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಭಾನುವಾರ ಮುಂಜಾನೆ ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ನಸುಕಿನ ಜಾವ ಚಹಾ ಕುಡಿಯಲು 15 ಕಾರ್ಮಿಕರು ತೆರಳಿದ್ದ ವೇಳೆ ಬಾಯ್ಲರ್ ಸ್ಫೋಟಗೊಂಡಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

VISTARANEWS.COM


on

Boiler Blast
Koo

ವಿಜಯಪುರ: ಮತ್ತೆ ರಾಜ್ಯದಲ್ಲಿ  ಬಾಯ್ಲರ್ ಸ್ಫೋಟದ ಸದ್ದು ಕೇಳಿಸಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಭಾನುವಾರ ಮುಂಜಾನೆ ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ (Boiler Blast).

ನಸುಕಿನ ಜಾವ ಚಹಾ ಕುಡಿಯಲು 15 ಕಾರ್ಮಿಕರು ತೆರಳಿದ್ದ ವೇಳೆ ಬಾಯ್ಲರ್ ಸ್ಫೋಟಗೊಂಡಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಹಿಂದೆಯೂ ನಡೆದಿತ್ತು

ಮುಂದಿನ ಸೀಸನ್‌ಗೆ ಕಬ್ಬು ನುರಿಸಲು ಸಿದ್ಧತೆ ನಡೆಸುತ್ತಿದ್ದ ವೇಳೆ ಕಾರ್ಖಾನೆಯ ಬಾಯ್ಲರ್ ಬ್ಲಾಸ್ಟ್ ಆಗಿದೆ. ಈ‌ ಹಿಂದೆಯೂ ಇಲ್ಲಿ ಇದೇ ರೀತಿಯ ಅನಾಹುತ ಸಂಭವಿಸಿತ್ತು. 2023ರ ಮಾರ್ಚ್ 4ರಂದು ಬಾಯ್ಲರ್ ಸ್ಫೋಟಗೊಂಡು
ಓರ್ವ ಕಾರ್ಮಿಕ ಮೃತಪಟ್ಟು ಇತರ ನಾಲ್ಕು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿದ್ದವು. ಅದಾಗಿ ಒಂದೂವರೆ ವರ್ಷ ಕಳೆಯುವಷ್ಟರಲ್ಲಿ ಮತ್ತೆ ಬಾಯ್ಲರ್ ಸ್ಫೋಟಗೊಂಡಿದೆ.

ಇಂದು ಮತ್ತೆ ಬಾಯ್ಲರ್ ಸ್ಫೋಟಗೊಂಡಿರುವ ಘಟನೆಗೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳಪೆ ಬಾಯ್ಲರ್ ಅಳವಡಿಸಿರುವುದೇ ಅವಘಡಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಈ‌ ಹಿಂದಿನ ಆಡಳಿತ ಮಂಡಳಿ ಅಧ್ಯಕ್ಷ ಶಶಿಕಾಂತಗೌಡ ಪಾಟೀಲ್ ಕಳಪೆ ಗುಣಮಟ್ಟದ ಬಾಯ್ಲರ್ ನಿರ್ಮಾಣ ಮಾಡಿದ್ದಾರೆ ಎನ್ನುವ ದೂರು ಕೂಡ ಕೇಳಿ ಬಂದಿದೆ. 50 ಕೋಟಿ ರೂ. ವೆಚ್ಚದಲ್ಲಿ ಬಾಯ್ಲರ್ ನಿರ್ಮಾಣ ಮಾಡಲಾಗಿತ್ತು. ಶಶಿಕಾಂತಗೌಡ ಪಾಟೀಲ್ ಅವರು ನಿರ್ಮಾಣದ ಅನುಭವ ಇಲ್ಲದ‌ ಪೂನಾ ಮೂಲದ ಎಸ್‌.ಎಸ್. ಎಂಜಿನಿಯರಿಂಗ್‌ಗೆ ಬಾಯ್ಲರ್ ನಿರ್ಮಾಣ ಕಾಮಗಾರಿ ನೀಡಿದ್ದರು ಎನ್ನಲಾಗಿದೆ.

ತನಿಖೆಗೆ ಆಗ್ರಹ

ಶಶಿಕಾಂತಗೌಡ ಪಾಟೀಲ್ ಅಧ್ಯಕ್ಷತೆ ಅವಧಿಯ ಕಾಮಗಾರಿಗಳು ಹಾಗೂ ಬಾಯ್ಲರ್ ಸ್ಫೋಟದ ಕುರಿತು ಉನ್ನತ ಮಟ್ಟದ ತನಿಖೆಗೆ ಆಗ್ರಹ ಕೇಳಿ ಬಂದಿದೆ. ಪ್ರಕರಣವನ್ನು ಸಿಐಡಿ ಅಥವಾ ಸಿಬಿಐ ತನಿಖೆಗೆ ವಹಿಸಿಬೇಕು ಎನ್ನುವ ಕೂಗು ಜೋರಾಗಿದೆ.

ಅಥಣಿ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ

ಕೆಲವು ದಿನಗಳ ಹಿಂದೆ ಚಿಕ್ಕೋಡಿಯಲ್ಲಿ ಬಾಯ್ಲರ್ ಸ್ಫೋಟವಾಗಿ ಮಹಿಳೆ ಮೃತಪಟ್ಟಿದ್ದ ಘಟನೆ ನಡೆದಿತ್ತು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ನಡೆದ ಈ ಘಟನೆಯಲ್ಲಿ ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ಪ್ರಿಯಾ ಎಕ್ಸ್‌ಪೋರ್ಟ್ಸ್‌ ಕೈಗಾರಿಕಾ ಘಟಕದ ಬಾಯ್ಲರ್ ಸ್ಫೋಟಗೊಂಡು ಈ ಅವಘಡ ಸಂಭವಿಸಿತ್ತು. ಅಥಣಿ ತಾಲೂಕಿನ ಸತ್ತಿ ಗ್ರಾಮದ ನಿವಾಸಿ ಸುನಂದಾ ಸಿದಪ್ಪ ತೇಲಿ (36) ಮೃತಪಟ್ಟಿದ್ದರು. ಗಾಯಗೊಂಡವರನ್ನು ಅಥಣಿ ಪಟ್ಟಣದ ಹಾಗೂ ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಗೋಡೆ ನುಜ್ಜುಗೊಜ್ಜಾಗಿದ್ದು, ಕೆಲ ಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: Boiler blast : ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ, ಐವರು ಕಾರ್ಮಿಕರಿಗೆ ಗಂಭೀರ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

Continue Reading

ಕ್ರೈಂ

Crime News: ಗಾಂಜಾ ಮತ್ತಿನಲ್ಲಿ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಚಾಲಕ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

Crime News: ಗಾಂಜಾ ಮತ್ತಿನಲ್ಲಿ ಚಾಲಕನೋರ್ವ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಘಟನೆ ಕೊಪ್ಪಳ ನಗರದ ಸಿಂಪಿ ಲಿಂಗಣ್ಣ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಇತ್ತ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ಕೆಲವು ತಿಂಗಳಿಂದ ಸಾರ್ವಜನಿಕರ ನೆಮ್ಮದಿ ಕೆಡಿಸಿದ್ದ ಕಳ್ಳರು ಕೊನೆಗೂ ಸಿಕ್ಕಿ ಬಿದ್ದಿದ್ದಾರೆ. ಮಾತ್ರವಲ್ಲ ಅವರನ್ನು ಕೈಯಾರೆ ಹಿಡಿದು ಗ್ರಾಮಸ್ಥರು ಕೂಡಿ ಹಾಕಿ ಪೊಲೀಸರ ವಶಕ್ಕೆ ನೀಡಿದ್ದಾರೆ.

VISTARANEWS.COM


on

Crime News
Koo

ಕೊಪ್ಪಳ: ಗಾಂಜಾ ಮತ್ತಿನಲ್ಲಿ ಚಾಲಕನೋರ್ವ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಘಟನೆ ಕೊಪ್ಪಳ ನಗರದ ಸಿಂಪಿ ಲಿಂಗಣ್ಣ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದ್ದು, ಪೊಲೀಸರು ಕಾರು ಚಾಲಕನ್ನು ವಶಕ್ಕೆ ಪಡೆದಿದ್ದಾರೆ (Crime News).

ಕಾರು ಚಾಲಕನನ್ನು ವಿಶ್ವಾಸ್‌ ಎಂದು ಗುರುತಿಸಲಾಗಿದೆ. ಈತ ಕಾರು ಚಲಾಯಿಸಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಮುಂದೆ‌ ನಿಲ್ಲಿಸಿದ್ದ ಬೈಕ್‌ಗಳಿಗೆ ಗುದ್ದಿದ್ದಾನೆ. ಈ ವೇಳೆ ಈತ ಅಮಲಿನಲ್ಲಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಘಟನೆ ವಿವರ

ಶನಿವಾರ ರಾತ್ರಿ ವಿಶ್ವಾಸ್‌ ಕಾರು ಚಲಾಯಿಸಿಕೊಂಡು ಬಂದಿದ್ದು, ಈ ವೇಳೆ ಆತ ಅಮಲಿನಲ್ಲಿದ್ದುದರಿಂದ ನಿಯಂತ್ರಣ ಸಿಗದೆ ಬಾರ್‌ ಮುಂದೆ ನಿಲ್ಲಿಸಿದ್ದ ಸುಮಾರು 10 ಬೈಕ್‌ಗಳಿಗೆ ಗುದ್ದಿದ್ದಾನೆ. ಇದರಿಂದ ಬೈಕ್‌ಗಳಿಗೆ ಹಾನಿಯಾಗಿದ್ದು, ಬೈಕ್‌ ಸವಾರರು ಆತನೊಂದಿಗೆ ವಾಗ್ವಾದ ನಡೆಸಿದರು. ವಿಶ್ವಾಸ್‌ ಗಾಂಜಾ ಸೇವಿಸಿದ ಮತ್ತಿನಲ್ಲಿ ಕಾರು ಚಲಾಯಿಸಿ ಗುದ್ದಿದ್ದಾನೆ ಎಂದು ಆರೋಪಿಸಿ ಬೈಕ್‌ ಸವಾರರು ಆತನನ್ನು ತರಾಟೆಗೆ ತೆಗೆದುಕೊಂಡರು.

ಬಳಿಕ ಘಟನಾ ಸ್ಥಳಕ್ಕೆ ನೂತನ ಎಸ್‌ಪಿ ಡಾ. ರಾಮ್ ಅರಸಿದ್ದಿ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದರು. ಸದ್ಯ ಕಾರು ಚಾಲಕ ವಿಶ್ವಾಸನನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಗದಗ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ಕೆಲವು ತಿಂಗಳಿಂದ ಸಾರ್ವಜನಿಕರ ನೆಮ್ಮದಿ ಕೆಡಿಸಿದ್ದ ಕಳ್ಳರು ಕೊನೆಗೂ ಸಿಕ್ಕಿ ಬಿದ್ದಿದ್ದಾರೆ. ಮಾತ್ರವಲ್ಲ ಅವರನ್ನು ಕೈಯಾರೆ ಹಿಡಿದು ಗ್ರಾಮಸ್ಥರು ಕೂಡಿ ಹಾಕಿ ಪೊಲೀಸರ ವಶಕ್ಕೆ ನೀಡಿ ತಕ್ಕ ಪಾಠ ಕಲಿಸಿದ್ದಾರೆ.

ಹಮ್ಮಿಗಿ ಗ್ರಾಮದಲ್ಲಿ ಕೆಲವು ತಿಂಗಳಿಂದ ಕಳ್ಳತನ ನಿರಂತವಾಗಿ ನಡೆಯುತ್ತಿತ್ತು. ರೈತರ ಟ್ರ್ಯಾಕ್ಟರ್ ಸಾಮಗ್ರಿ, ಮೋಟರ್, ಪಂಪ್ ಸೆಟ್ ಕಳವಾಗುತ್ತಿದ್ದವು. ಮಾತ್ರವಲ್ಲ ಮೇಕೆ, ಕುರಿಗಳನ್ನೂ ಕಳ್ಳರು ಹೊತ್ತೊಯ್ಯುತ್ತಿದ್ದರು. ಇದು ಗ್ರಾಮಸ್ಥರಿಗೆ ತಲೆ ನೋವಾಗಿ ಪರಿಣಮಿಸಿತ್ತು. ಮುಂಡರಗಿ ಪೊಲೀಸ್ ಠಾಣೆಗೆ ಸಾಕಷ್ಟು ಬಾರಿ ದೂರು ನೀಡಿದ್ದರೂ ಕಳವು ಪ್ರಕರಣ ನಿಯಂತ್ರಣಕ್ಕೆ ಬಂದಿರಲಿಲ್ಲ.

ಪ್ರತಿ ಬಾರಿಯೂ ತಪ್ಪಿಸಿಕೊಳ್ಳುತ್ತಿದ್ದ ಕಳ್ಳರ ಅದೃಷ್ಟ ಶನಿವಾರ ಕೈಕೊಟ್ಟಿತ್ತು. ಎಂದಿನಂತರ ಕಳ್ಳತನಕ್ಕೆ ಇಳಿದ ಗ್ಯಾಂಗ್‌ ಅನ್ನು ಗ್ರಾಮಸ್ಥರು ರೆಡ್‌ ಹ್ಯಾಂಡಾಗಿ ಹಿಡಿದು ಗ್ರಾಮ ಪಂಚಾಯತ್‌ನಲ್ಲಿ ಕೂಡಿ ಹಾಕಿ ಬಳಿಕ ಪೊಲೀಸರಿಗೆ ಒಪ್ಪಿಸಿದರು. ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ತನಿಖೆ ನಡೆಲಾಗುತ್ತಿದೆ. ʼʼಗ್ರಾಮದಲ್ಲಿ ಕೆಲವು ತಿಂಗಳಿಂದ ನಿರಂತರ ಕಳ್ಳತನ ನಡೆಯುತ್ತಿತ್ತು. ಪೊಲೀಸ್‌ ಠಾಣೆಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಆದರೆ ಇದೀಗ ಕಳ್ಳರ ಗ್ಯಾಂಗ್‌ ಸಿಕ್ಕಿ ಬಿದ್ದಿದೆ. ಅವರನ್ನು ರೆಡ್‌ ಹ್ಯಾಂಡಾಗಿ ಹಿಡಿದು ಗ್ರಾಮ ಪಂಚಾಯತ್‌ ಕಚೇರಿಯಲ್ಲಿ ಕೂಡಿ ಹಾಕಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದೇವೆʼʼ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Indecent Behaviour: ಮಹಿಳೆಯರಿಗೆ ಮರ್ಮಾಂಗ ತೋರಿಸಿ, ಅಸಭ್ಯ ವರ್ತನೆ; ಕಾಮುಕನಿಗೆ ಹಿಗ್ಗಾಮುಗ್ಗಾ ಬಾರಿಸಿದ ಜನ!

Continue Reading
Advertisement
Pavithra Gowda was a challenge for Darshan
ಕ್ರೈಂ20 mins ago

Actor Darshan: ಪವಿತ್ರಾಗೌಡ ಮುನಿಸು ಶಮನ‌‌ ಮಾಡೋದೇ ಚಾಲೆಂಜ್‌ ಆಗಿತ್ತು ದರ್ಶನ್‌ಗೆ!

Vinesh Phogat
ಕ್ರೀಡೆ30 mins ago

Vinesh Phogat: ಕೊನೆಯ ಕ್ಷಣದಲ್ಲಿ ವೀಸಾ ಪಡೆದು ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಟೂರ್ನಿಯಲ್ಲಿ ಚಿನ್ನ ಗೆದ್ದ ವಿನೇಶ್ ಫೋಗಟ್

Road Accident
ಬೆಂಗಳೂರು49 mins ago

Road Accident: ರಾಜಕಾಲುವೆಗೆ ಬಿದ್ದ ಬೈಕ್‌ ಸವಾರನ ಮೃತದೇಹ ಪತ್ತೆ

MS Dhoni Birthday
ಕ್ರೀಡೆ1 hour ago

MS Dhoni Birthday: ಧೋನಿ ನಾಯಕರಾಗಿದ್ದಾಗ ಬಳಸಿದ ಮಹತ್ವದ ಗೆಲುವಿನ ತಂತ್ರಗಳು ಇಲ್ಲಿವೆ

Road Accident
ಕ್ರೈಂ2 hours ago

Road Accident: ಲಾರಿಗೆ ಬೈಕ್‌ ಡಿಕ್ಕಿ ಹೊಡೆದು ಪತ್ರಕರ್ತ ಸಾವು: ಇಬ್ಬರನ್ನು ಬಲಿ ಪಡೆದ ಅಪರಿಚಿತ ಕಾರು

actor darshan wife vijayalakshmi conducted a special pooja at bande mahakali last year goes viral
ಸ್ಯಾಂಡಲ್ ವುಡ್2 hours ago

Actor Darshan: ದರ್ಶನ್‌ಗಾಗಿ ವಿಶೇಷ ಪೂಜೆ ಮಾಡಿಸಿದ್ರಾ ವಿಜಯಲಕ್ಷ್ಮಿ? ಅಸಲಿ ಕಥೆ ಬೇರೆಯೇ ಇದೆ!

MS Dhoni Birthday
ಕ್ರಿಕೆಟ್2 hours ago

MS Dhoni Birthday: ಸಲ್ಮಾನ್​ ಖಾನ್​ ಜತೆ ಕೇಕ್​ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಧೋನಿ

Building Collapse
ದೇಶ2 hours ago

Building Collapse: ಐದು ಅಂತಸ್ತಿನ ಕಟ್ಟಡ ಧರಾಶಾಹಿ- ಏಳು ಜನ ದಾರುಣ ಸಾವು

Kannada New Movie Not Out Trailer out
ಸ್ಯಾಂಡಲ್ ವುಡ್2 hours ago

Kannada New Movie: ಕುತೂಹಲ ಮೂಡಿಸಿದೆ ʻನಾಟ್ ಔಟ್ʼ ಚಿತ್ರದ ಟ್ರೈಲರ್‌!

Boiler Blast
ಕರ್ನಾಟಕ2 hours ago

Boiler Blast: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ; ತಪ್ಪಿದ ಬಹುದೊಡ್ಡ ಅನಾಹುತ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ4 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ16 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ19 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ20 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು22 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ23 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ2 days ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ಟ್ರೆಂಡಿಂಗ್‌