OPS News: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ - Vistara News

ಕರ್ನಾಟಕ

OPS News: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ

OPS News: ಅರ್ಹ ನೌಕರರನ್ನು ಖಚಿತಪಡಿಸಿಕೊಂಡು ಜುಲೈ 31ರೊಳಗೆ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ (ಒಪಿಎಸ್‌) ಒಳಪಡಿಸಲು ಶಿಫಾರಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಥಿಕ ಇಲಾಖೆ ಸೂಚಿಸಿದೆ.

VISTARANEWS.COM


on

OPS News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ (Old Pension Scheme) ಮರು ಜಾರಿ ಮಾಡಬೇಕು ಎಂದು ಹಲವು ವರ್ಷಗಳಿಂದ ಆಗ್ರಹಿಸುತ್ತಾ ಬಂದಿರುವ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. 2006ಕ್ಕೂ ಮುನ್ನ ನೇಮಕಾತಿಯಾದ ನೌಕರರನ್ನು ಹಳೆಯ ಡಿಫೈನ್ಡ್‌ ಪಿಂಚಣಿ ಯೋಜನೆಗೆ(ಒಪಿಎಸ್‌) ಒಳಪಡಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅರುಳ್‌ ಕುಮಾರ್‌ ಸುತ್ತೋಲೆ ಹೊರಡಿಸಿದ್ದಾರೆ. ಅರ್ಹ ನೌಕರರನ್ನು ಖಚಿತಪಡಿಸಿಕೊಂಡು ಜುಲೈ 31ರೊಳಗಾಗಿ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಿಸಲು ಶಿಫಾರಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

2006ರ ಏಪ್ರಿಲ್‌ 1ಕ್ಕೂ ಮೊದಲು ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ, 006ರ ಏಪ್ರಿಲ್‌ 1ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ-ಎನ್‌ಪಿಎಸ್‌) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಅವರ ಅಭಿಮತದ ಮೇರೆಗೆ ಕೆಲವು ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಯ(OPS) ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | CM Siddaramaiah: ರಾಜ್ಯದಲ್ಲಿ ಶೇ.80 ಬಿಪಿಎಲ್‌ ಕಾರ್ಡ್‌! ಕಡಿತ ಮಾಡಲು ಸಿಎಂ ಸೂಚನೆ

ಈ ಆದೇಶದನ್ವಯ ನೌಕರರು ತಮ್ಮ ಅಭಿಮತವನ್ನು ಚಲಾಯಿಸಲು ಕೊನೆಯ ದಿನಾಂಕ ಜೂನ್ 30‌ ಆಗಿತ್ತು. ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೊಳಪಡಲು ನಿಗದಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ಜುಲೈ 31ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಎಲ್ಲಾ ಇಲಾಖೆಗಳ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ಆಗಸ್ಟ್‌ 31ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸಬೇಕು.

ಇದನ್ನೂ ಓದಿ | CM Siddaramaiah: ಆಗಸ್ಟ್‌ನಲ್ಲಿ ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಜನಸ್ಪಂದನ

ಆದರೆ, ಪ್ರಸ್ತುತ ಕೆಲವು ಇಲಾಖೆಗಳು ನೌಕರರು ಒಪಿಎಸ್‌ಗೆ ಒಳಪಡುತ್ತಾರೆ ಎಂದು ಶಿಫಾರಸು ಮಾಡದೇ, ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸದೇ, ಸ್ವೀಕೃತವಾಗಿರುವ ನೌಕರರ ಮನವಿಗಳನ್ನು ಮತ್ತು ಕೇವಲ ಒಂದು ಶಾಖೆಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಮಾತ್ರ ಆರ್ಥಿಕ ಇಲಾಖೆಯ ಅಭಿಪ್ರಾಯ ಕೋರುತ್ತಿರುವುದು ಕಂಡುಬಂದಿರುತ್ತದೆ. ಆದ್ದರಿಂದ, 2024ರ ಜ.1ರ ಆದೇಶದನ್ವಯ ಎನ್.ಪಿ.ಎಸ್.ನಿಂದ ಒಪಿಎಸ್‌ಗೆ ಒಳಪಡಲು ಅಭಿಮತ ಸಲ್ಲಿಸಿರುವ ಎಲ್ಲಾ ವೃಂದಗಳ ಅಂದರೆ, ಗ್ರೂಪ್ ಎ, ಬಿ, ಸಿ ಮತ್ತು ಡಿ ಅಧಿಕಾರಿ/ನೌಕರರುಗಳ ಕ್ರೋಡೀಕೃತ ಪ್ರಸ್ತಾವನೆಗಳನ್ನು ಲಗತ್ತಿಸಿರುವ ನಮೂನೆಗಳಲ್ಲಿ ಇಲಾಖಾ ಮುಖ್ಯಸ್ಥರು ದೃಢೀಕರಿಸಿ ಆಗಸ್ಟ್‌ 31ರೊಳಗೆ ಸಲ್ಲಿಸುವಂತೆ ಕೋರಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಕರಾವಳಿ, ಮಲೆನಾಡು ಸೇರಿ ಒಳನಾಡಲ್ಲಿ ಭಾರಿ ಮಳೆ; ಗಾಳಿಯ ಶರವೇಗ 50 ಕಿ.ಮೀ!

Karnataka Weather Forecast : ರಾಜ್ಯದಲ್ಲಿ ಈ ವಾರ ಪೂರ್ತಿ ಮಳೆಯು (Karnataka Rain) ಅಬ್ಬರಿಸಲಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದ್ದು, ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

VISTARANEWS.COM


on

By

karnataka Weather Forecast
ಭಾರಿ ಮಳೆಗೆ ಶಿರಸಿಯ ಚೌಡೇಶ್ವರಿ ಕಾಲೋನಿಯಲ್ಲಿ ನೀರು ನಿಂತ ಪರಿಣಾಮ ಮನೆಯಲ್ಲೇ ಲಾಕ್‌ ಆದ ಮಂದಿ
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜನ-ಜೀವನ (Karnataka Weather Forecast) ಅಸ್ತವ್ಯಸ್ತಗೊಂಡಿದೆ. ಶುಕ್ರವಾರವೂ ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮಲೆನಾಡು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭರ್ಜರಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಕಡೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ

ಇದನ್ನೂ ಓದಿ: Kiccha Sudeep: ಸೆಲ್ಫಿಗಾಗಿ 2 ಗಂಟೆ ಕಾದ ಅಭಿಮಾನಿಗೆ ಕಿಚ್ಚ ಸುದೀಪ್ ಅವಮಾನ! ವಿಡಿಯೊ ನೋಡಿ

karnataka weather Forecast
ಭಾರಿ ಮಳೆಗೆ ಶಿರಸಿಯ ಬಡಾವಣೆಯೊಂದರಲ್ಲಿ ನೀರು ನಿಂತ ದೃಶ್ಯ

ಬೆಳಗಾವಿಯಲ್ಲಿ ಭಾರಿ ಮಳೆ ಎಚ್ಚರಿಕೆ

ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಬೆಳಗಾವಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸುತ್ತಮುತ್ತ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿಗೆ 40-50 ಕಿ.ಮೀ ತಲುಪಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಯಾದಗಿರಿ, ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Karnataka Assembly : ಗದ್ದಲದಲ್ಲೇ ಮುಕ್ತಾಯಗೊಂಡ ಮೂರನೇ ದಿನದ ವಿಧಾನಮಂಡಲ ಅಧಿವೇಶನ

Karnataka Assembly :ವಾಲ್ಮಿಕಿ ನಿಗಮದ ಹಗರಣ ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್​ ಎಂಬುವರ ಡೆತ್ ನೋಟ್​ ಓದುವಾಗ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೆಸರನ್ನೇ ಬಿಟ್ಟಿದ್ದಾರೆ ಎಂಬುದ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅರೋಪಿಸಿದರು. ಬಳಿಕ ಬಿಜೆಪಿ ಹಾಗೂ ಜೆಡಿಎಸ್​ ಕಾರ್ಯಕರ್ತರು ಸದನದ ಬಾವಿಗೆ ಇಳಿದ ಪ್ರತಿಭಟನೆ ನಡೆಸಿದರು.

VISTARANEWS.COM


on

Karnataka Assembly
Koo

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣ ಹಾಗೂ ಮುಡಾ ಸೈಟ್​ ಪ್ರಕರಣದ ವಿಧಾನ ಮಂಡಲ ಅಧಿವೇಶನದ (Karnataka Assembly) ಮೂರನೇ ದಿನವನ್ನೂ ಹಾಳುಗಡೆವಿತು. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್​ ಮುಂದಾದರೆ, ಕಾಂಗ್ರೆಸ್​ ಮುಜುಗರದಿಂದ ತಪ್ಪಿಸಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡಿತು. ಆದರೆ ಪ್ರತಿಭಟನೆ ಹಾಗೂ ಪ್ರತಿರೋಧಗಳಿಂದಾಗಿ ಕಲಾಪದ ಅವಧಿ ನಷ್ಟವಾಯಿತು.

ವಾಲ್ಮಿಕಿ ನಿಗಮದ ಹಗರಣ ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್​ ಎಂಬುವರ ಡೆತ್ ನೋಟ್​ ಓದುವಾಗ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೆಸರನ್ನೇ ಬಿಟ್ಟಿದ್ದಾರೆ ಎಂಬುದ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅರೋಪಿಸಿದರು. ಬಳಿಕ ಬಿಜೆಪಿ ಹಾಗೂ ಜೆಡಿಎಸ್​ ಕಾರ್ಯಕರ್ತರು ಸದನದ ಬಾವಿಗೆ ಇಳಿದ ಪ್ರತಿಭಟನೆ ನಡೆಸಿದರು.

ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್​ ಸದಸ್ಯರು ವಿಧಾನ ಸೌಧದ ಗೇಟ್ ಬಳಿಯೂ ಪ್ರತಿಭಟನೆ ನಡೆಸಿದರು. ಸರ್ಕಾರವು ಹಗರಣಗಳನ್ನು ಮುಚ್ಚಿ ಹಾಕಲು ಯತ್ನಿಸುತ್ತಿದೆ ಎಂದು ವಿಪಕ್ಷಗಳ ಸದಸ್ಯರು ಈ ವೇಳೆ ಆರೋಪಿಸಿದರು.

ಸಂಧಾನ ಸಭೆ

ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕೊಡುವಾಗ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿರುವ ಹಿನ್ನೆಲೆಯಲ್ಲಿಯ ಸ್ಪೀಕರ್​ ಯುಟಿ ಖಾದರ್ ಸಂಧಾನ ಸಭೆ ಕರೆದರು. ಆಡಳಿತ ಪಕ್ಷದ ಕಡೆಯಿಂದ ಸಿದ್ದರಾಮಯ್ಯ, ಎಚ್ ಕೆ ಪಾಟೀಲ್ ,ಜಾರ್ಜ್ ಹಾಗೂ ವಿಪಕ್ಷಗಳಿಂದ ಆರ್ ಆಶೋಕ್, ವಿಜೇಯೇಂದ್ರ, ಸುರೇಶ್ ಬಾಬು ಇದ್ದರು.

ಸಂಧಾನ ಸಭೆ ನಡೆಸಿದ ಬಳಿಕವೂ ವಿಪಕ್ಷಗಳ ಸದಸ್ಯರು ತಮ್ಮ ಹೋರಾಟವನ್ನ ಮುಂದುವರಿಸಿದ ಕಾರಣ ಕಲಾಪ ಬಹುತೇಕ ಗದ್ದಲದಲ್ಲಿಯೇ ಅಂತ್ಯಗೊಂಡಿತು.

ಅಹಿಂದಕ್ಕೆ ಅನ್ಯಾಯ ಮಾಡುವ ಕೆಲಸ ಸಿಎಂ ಮಾಡಿದ್ದಾರೆ. ವಾಲ್ಮೀಕಿ ನಿಗಮದ ಹಣದಿಂದ ಹೆಂಡ ಹಚ್ಚಿದ್ದಾರೆ. ಡೆತ್ ನೋಟ್ ನಲ್ಲಿ ಅಧಿಕಾರಿಗಳ ಹೆಸರನ್ನು ಮಾತ್ರ ಉಲ್ಲೇಖ ಮಾಡ್ತಾರೆ. ಸಚಿವರ ಹೆಸರು ಉಲ್ಲೇಖ ಮಾಡುತ್ತಾರೆ. ಇದೇ ವೇಳೆ ನಾಗೇಂದ್ರ ಕ್ಲಿನ್ ಚಿಟ್ ಪಡೆದು ಹೊರಗೆ ಬರ್ತಾರೆ ಅಂತ ಡಿಕೆ ಶಿವಕುಮಾರ್ ಹೇಳ್ತಾರೆ. ಸರ್ಕಾರದ ಮುಖವಾಡ ಬಯಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: Karnataka Job Reservation : ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಮೀಸಲು ವಿಚಾರ ಮುನ್ನೆಲೆಗೆ ತಂದ ಸರ್ಕಾರ; ಸಿಟಿ ರವಿ ಆರೋಪ

ವಿಧಾನ ಪರಿಷತ್​ನಲ್ಲೂ ಇದೇ ರೀತಿ ಪರಿಸ್ಥಿತಿ ಮುಂದುವರಿಯಿತು. ಹೆಚ್ಚು ಚರ್ಚೆಗಳು ನಡೆಯದೇ ಆರೋಪಗಳಲ್ಲೇ ಕೊನೆಯಾಯಿತು.

ಸಿಎಂ ಉತ್ತರ

ನಿಯಮ‌ 69ರ ಅಡಿಯಲ್ಲಿ ನಡೆದ ವಾಲ್ಮೀಕಿ ಅಭಿವೃದ್ಧಿ ನಿಗಮ ಕುರಿತಾದ ಚರ್ಚೆಗೆ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ನೀಡಿದ್ದಾರೆ. ಆರ್.ಅಶೋಕ್, ವಿಜಯೇಂದ್ರ ನನ್ನ ರಾಜೀನಾಮೆ ಕೇಳಿದ್ದಾರೆ. ಆರಗ ಜ್ಞಾನೇಂದ್ರ ಮಾಜಿ ಗೃಹ ಸಚಿವರು. ಇವರು ಎಸ್​ಐಟಿ ಹಿಂದಕ್ಕೆ ಪಡೆಯಿರಿ ಎಂದು ಹೇಳಿದ್ದಾರೆ. ನೀವು ಗೃಹ ಮಂತ್ರಿ ಆಗಿದ್ದಾಗಲೂ ಎಸ್​ಐಟಿ ಬಗ್ಗೆ ಹೀಗೆ ಹೇಳಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

26-5-2024 ರಂದು ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡರು. ಇವರು ತಮಿಳುನಾಡಿನ ಬೋವಿ ಸಮುದಾಯದವರು. ವಿರೋಧ ಪಕ್ಷದವರು ಸಾವಿರ ಸಾರಿ ದಲಿತ, ದಲಿತ ಅಂತ ಹೇಳುತ್ತಿದ್ದಾರೆ ಎಂದರು.

ಈ ಎಲ್ಲಾ ನಿಗಮಗಳ ಉದ್ದೇಶ ಆಯಾ ಸಮುದಾಯಗಳನ್ನು ಆರ್ಥಿಕವಾಗಿ ಬಲಿಷ್ಠರನ್ನಾಗಿಸುವುದೇ ಆಗಿದೆ. 2013 ಡಿಸೆಂಬರ್ ನಲ್ಲಿ ಎಸ್​​ಸಿಪಿ, ಟಿಸಿಪಿ ಕಾಯ್ದೆ ಜಾರಿ ಮಾಡಿದೆ. ನಾನು ಮುಖ್ಯಮಂತ್ರಿಯಾಗಿಯೇ ಜಾರಿ ಮಾಡಿದೆ. 24.1% ಅಭಿವೃದ್ಧಿ ಹಣ ಈ ಸಮುದಾಯದ ಅಭಿವೃದ್ಧಿಗೆ ಮೀಸಲಿಡಬೇಕು ಎಂದು ಕಡ್ಡಾಯ ಮಾಡಿದ್ದು ನಾನು. ಪ್ರತಿಪಕ್ಷಗಳು ಬರಿ ಮೊಸಳೆ ಕಣ್ಣೀರು ಹರಿಸುತ್ತವೆ ಎಂದರು.

ನಾನು ಹಿಂದಿನ ಸಿದ್ದರಾಮಯ್ಯ ಅಲ್ಲ ಅಂತ ಯತ್ನಾಳ್ ಅವರು ಹೇಳಿದರು. ಯತ್ನಾಳ್ ಅವರು ಕೂಡ ವಾಜಪೇಯಿ ಅವರ ಸಂಪುಟದಲ್ಲಿದ್ದ ಯತ್ನಾಳ್ ಆಗಿ ಉಳಿದಿಲ್ಲ ಎಂದರು. ಆರ್.ಅಶೋಕ್ ಮೂರು ಗಂಟೆ ನಾಲ್ಕು ನಿಮಿಷ ಸದನದಲ್ಲಿ ಆರೋಪಿಸಿದ್ದೆಲ್ಲಾ ಪತ್ರಿಕಾ ಸುದ್ದಿಗಳ ಆಧಾರದಲ್ಲಿ ಮಾತ್ರ. ಪರಿಶಿಷ್ಠ ಸಮುದಾಯಗಳ ಬಗ್ಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ಕೇಂದ್ರದ ಬಿಜೆಪಿಯಾಗಲಿ, ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಾಗಲಿ ಕಾಯ್ದೆಯನ್ನು ಏಕೆ ಜಾರಿಗೆ ತಂದಿಲ್ಲ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ದರು. ನಿಮ್ಮಿಂದ ಸಾಮಾಜಿಕ ನ್ಯಾಯದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.

Continue Reading

ಕರ್ನಾಟಕ

Police Suspended : ಠಾಣೆಯಲ್ಲೇ ಕೈಮಿಲಾಯಿಸಿದ ಪೊಲೀಸ್​ ಅಧಿಕಾರಿಗಳಿಬ್ಬರು ಸಸ್ಪೆಂಡ್​​

Police Suspended :ಹೆಡ್​ಕಾನ್​ಸ್ಟೇಬಲ್​ ನೇತ್ರಾವತಿ ಎಂಬುವರ ಜತೆ ಅತ್ಯಾಚಾರ ಪ್ರಕರಣವೊಂದರ ಕುರಿತು ಮಂಜುನಾಥ್ ಮಾತನಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಬಂದ ಅಂಜನಾಮೂರ್ತಿ ಅವರು ಲೈನ್ ಕಂಪ್ಯೂಟರ್​ನಲ್ಲಿ ಟೈಪ್ ಮಾಡಿ ಪುಕ್ಸಟ್ಟೆ ಸಂಬಳ ತಗೋತಿದ್ದೀಯ ಎಂದು ಹೇಳಿದ್ದರು. ಈ ವೇಳೆ ಸಿಟ್ಟಿಗೆದ್ದ ಮಂಜುನಾಥ್​, ಬೇರೆಯವರಿಗೆ ಹೆದರಿಸಿದಂತಲ್ಲ. ನೀನೇ ಬಂದು ಇನ್ವೆಷ್ಟಿಗೇಷನ್ ಮಾಡು ಎಂದು ಮರುತ್ತರ ನೀಡಿದ್ದರು.

VISTARANEWS.COM


on

Police Suspended
Koo

ಬೆಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲೇ ಕಿತ್ತಾಡಿಕೊಂಡಿದ್ದ ಪೊಲೀಸ್ ಅಧಿಕಾರಿಗಳಿಬ್ಬರನ್ನು ದಕ್ಷಿಣ ವಿಭಾಗ ಡಿಸಿಪಿ ಲೋಕೇಶ್ ಜಗಲಾಸರ್ ಅಮಾನತು (Police Suspended) ಮಾಡಿದ್ದಾರೆ. ವಿಚಾರದ ಬಗ್ಗೆ ಇಲಾಖಾ ತನಿಖೆ ನಡೆಸುವಂತೆ ಆದೇಶಿಸಲಾಗಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಎಎಸ್​ಐ ಮಂಜುನಾಥ್ ಹಾಗೂ ಹೆಡ್​ಕಾನ್​​ಸ್ಟೇಬಲ್​ ಅಂಜನಾಮೂರ್ತಿ ಅಮಾನತುಗೊಂಡವರು.

ಠಾಣೆಯಲ್ಲಿ ಹೊಡೆದಾಡಿಕೊಂಡ ಕುರಿತು ತನಿಖೆ ನಡೆಸಿದಾಗ ಇಬ್ಬರ ತಪ್ಪೂ ಸಾಬೀತಾಗಿತ್ತು. ಹೀಗಾಗಿ ಅವರಿಬ್ಬರನ್ನೂ ಅಮಾನತು ಮಾಡಲು ಡಿಸಿಪಿ ಲೋಕೇಶ್ ಜಗಲಾಸರ್ ಆದೇಶ ಹೊರಡಿಸಿದ್ದಾರೆ. ಇವರಿಬ್ಬರೂ ಜುಲೈ 16ರಂದು ಠಾಣೆಯಲ್ಲಿ ಕರ್ತವ್ಯದ ಅವಧಿಯಲ್ಲಿ ಹೊಡೆದಾಡಿಕೊಂಡ ಬಗ್ಗೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ಇದು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬಂದಿತ್ತು.

ಏನಿದು ಗಲಾಟೆ?

ಪುಟ್ಟೇನಹಳ್ಳಿ ಪೊಲೀಸ್ ಸಿಬ್ಬಂದಿಗಳಾದ ಅವರಿಬ್ಬರೂ ಸಾರ್ವಜನಿಕರ ಮುಂದೆಯೇ ಕಿತ್ತಾಟ ನಡೆಸಿಕೊಂಡಿದ್ದರು. ಈ ವೇಳೆ ಪರಸ್ಪರ ಅವಾಚ್ಯ ಪದಗಳಿಂದ ನಿಂದಿಸಿಕೊಂಡಿದ್ದರು. ಹೊರಗಡೆ ಬಂದ್ರೆ ಬೀದಿ ಹೆಣ ಮಾಡ್ತಿನಿ ಎಂದು ಪೊಲೀಸ್ ಠಾಣೆಯಲ್ಲಿಯೇ ಬೆದರಿಕೆ ಹಾಕಿಕೊಂಡಿದ್ದರು. ಈ ಬಗ್ಗೆ ಹೆಡ್​ಕಾನಸ್ಟೇಬಲ್​ ಅಂಜನಾಮೂರ್ತಿ ಜೀವ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ದಾಖಲಾಗಿತ್ತು.

ಹೆಡ್​ಕಾನ್​ಸ್ಟೇಬಲ್​ ನೇತ್ರಾವತಿ ಎಂಬುವರ ಜತೆ ಅತ್ಯಾಚಾರ ಪ್ರಕರಣವೊಂದರ ಕುರಿತು ಮಂಜುನಾಥ್ ಮಾತನಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಬಂದ ಅಂಜನಾಮೂರ್ತಿ ಅವರು ಲೈನ್ ಕಂಪ್ಯೂಟರ್​ನಲ್ಲಿ ಟೈಪ್ ಮಾಡಿ ಪುಕ್ಸಟ್ಟೆ ಸಂಬಳ ತಗೋತಿದ್ದೀಯ ಎಂದು ಹೇಳಿದ್ದರು. ಈ ವೇಳೆ ಸಿಟ್ಟಿಗೆದ್ದ ಮಂಜುನಾಥ್​, ಬೇರೆಯವರಿಗೆ ಹೆದರಿಸಿದಂತಲ್ಲ. ನೀನೇ ಬಂದು ಇನ್ವೆಷ್ಟಿಗೇಷನ್ ಮಾಡು ಎಂದು ಮರುತ್ತರ ನೀಡಿದ್ದರು.

ಇದನ್ನೂ ಓದಿ: Natasa Stankovic : ಹಾರ್ದಿಕ್ ಪಾಂಡ್ಯಗೆ ಡೈವೋರ್ಸ್​ ನೀಡಿದ್ದೇನೆ; ಪತ್ನಿ ನತಾಶಾ ಹೇಳಿಕೆ

ಕೋಪಗೊಂಡ ಅಂಜನಾಮೂರ್ತಿ ಕಾಲೆತ್ತಿ ಒದಿಯಲು ಮುಂದಾಗಿದ್ದರು ಎನ್ನಲಾಗಿದೆ. ಅಲ್ಲದೆ, ಪೆನ್ಷನ್ ಬರದೇ ಇರೋ ಮಾಡ್ತಿನಿ ಎಂದು ಹೇಳಿ ಅವಾಚ್ಯ ಪದಗಳಿಂದ ನಿಂದಿಸಿದ್ದರಂತೆ. ಈ ಬಗ್ಗೆ ಮಂಜುನಾಥ್ ಅವರು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ತಮಗೆ ಹೃದಯ ಸಂಬಂಧಿ ಕಾಯಿಲೆ ಇದೆ. ಎರಡು ಸಲ ಸ್ಟಂಟ್ ಹಾಕಿದ್ದೇನೆ. ಅಂಜನಾಮೂರ್ತಿಯಿಂದ ತೊಂದರೆ ಆಗುತ್ತಿದೆ ಎಂದು ಬರೆದುಕೊಂಡಿದ್ದರು.

Continue Reading

ಶಿವಮೊಗ್ಗ

Shivamogga News: ಕೂಡಲೇ ಬೆಳೆ ವಿಮೆ ಮಾಡಿಸಿಕೊಳ್ಳಲು ಸಂಸದ ಬಿ.ವೈ. ರಾಘವೇಂದ್ರ ಮನವಿ

Shivamogga News: ಪ್ರಸಕ್ತ ಸಾಲಿನಲ್ಲಿ ಅಧಿಕ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಈ ಕಾರಣದಿಂದ ನದಿಪಾತ್ರದ ಜಮೀನುಗಳಿಗೆ ಪ್ರವಾಹ ಎದುರಾಗಿದ್ದು, ರೈತ ಸಮೂಹ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಆದ್ದರಿಂದ ಬೆಳೆ ವಿಮೆ ಮಾಡಿಸದ ರೈತರು ಕೂಡಲೇ ಬೆಳೆ ವಿಮೆಗೆ ಮುಂದಾಗಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

VISTARANEWS.COM


on

Farmers should get crop insurance immediately says MP BY Raghavendra
Koo

ಸೊರಬ: ಪ್ರಸಕ್ತ ಸಾಲಿನಲ್ಲಿ ಅಧಿಕ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಈ ಕಾರಣದಿಂದ ನದಿಪಾತ್ರದ ಜಮೀನುಗಳಿಗೆ ಪ್ರವಾಹ ಎದುರಾಗಿದ್ದು, ರೈತ ಸಮೂಹ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಆದ್ದರಿಂದ ಬೆಳೆ ವಿಮೆ ಮಾಡಿಸದ ರೈತರು ಕೂಡಲೇ ಬೆಳೆ ವಿಮೆಗೆ ಮುಂದಾಗಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ (Shivamogga News) ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಮಳೆ ಹಾನಿ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆ ಕಳೆದ ಬಾರಿ ಬರಗಾಲ ಪರಿಸ್ಥಿತಿಯನ್ನು ಎದುರಿಸುವಂತಾಗಿತ್ತು. ಆದರೆ ಈ ಬಾರಿ ಮುಂಗಾರು ತಡವಾಗಿ ಪ್ರಾರಂಭವಾದರೂ ಉತ್ತಮ ಮಳೆಯಾಗುತ್ತಿದೆ. ಜಿಲ್ಲೆಯ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ ಎಂದರು.

ಇದನ್ನೂ ಓದಿ: Uttara Kannada News: ಗೋಕರ್ಣದ ʼಅಶೋಕೆʼಯಲ್ಲಿ ಜು. 21ರಿಂದ ರಾಘವೇಶ್ವರಶ್ರೀ ಚಾತುರ್ಮಾಸ್ಯ

ತಾಲೂಕಿನ ದಂಡಾವತಿ ಮತ್ತು ವರದಾ ನದಿಗಳು ಈಗಾಗಲೇ ತುಂಬಿ ಹರಿಯುತ್ತಿದ್ದು, ಅಪಾಯದ ಮಟ್ಟ ತಲುಪಿವೆ. ವಿಶೇಷವಾಗಿ ವರದಾ ನದಿ ಪ್ರವಾಹದಿಂದ ತಾಲೂಕಿನ ಅಬಸೆ, ಕಡಸೂರು, ಹೊಳೆಜೋಳದಗುಡ್ಡೆ, ತಟ್ಟಿಕೆರೆ, ಹೆಚ್ಚೆ, ಹಿರೇನೆಲ್ಲೂರು, ಸೈದೂರು, ತಾಳಗುಪ್ಪ ಗ್ರಾಮಗಳ ರೈತರ ಜಮೀನುಗಳು ಜಲಾವೃತವಾಗಿವೆ. ಸುಮಾರು 650 ಹೆಕ್ಟೇರ್ ಭತ್ತ ಮುಳುಗಡೆಯಾಗಿದೆ ಎಂದು ಹೇಳಿದರು.

ಇನ್ನೂ ಬೆಳೆ ವಿಮೆ ಮಾಡಿಸದ ರೈತರಿಗೆ ಜುಲೈ 31 ರವರೆಗೆ ಅವಕಾಶವಿದೆ. ರೈತರು ಇದರ ಸದುಪಯೋಗ ಪಡೆಯಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಹಾನಿಯಾದ ವರದಿ ಸರ್ಕಾರಕ್ಕೆ ಸಲ್ಲಿಸಿ

ಜಿಲ್ಲೆಯಲ್ಲಿ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಶೇ. 36ರಷ್ಟು ಮಳೆ ಕೊರತೆ ಎದುರಾಗಿತ್ತು. ಜುಲೈ ತಿಂಗಳ ವಾಡಿಕೆ ಮಳೆ 423 ಮಿ.ಮೀ. ಆದರೆ 577 ಮಿ.ಮೀ. ಮಳೆಯಾಗಿದ್ದು, ಶೇ. 36ರಷ್ಟು ಅಧಿಕ ಮಳೆಯಾಗಿದೆ. ತಾಲೂಕಿನಾದ್ಯಂತ 21 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 2 ಎಮ್ಮೆ, 1 ಹಸು ಮೃತಪಟ್ಟಿವೆ. ಈ ಕಾರಣ ತಹಸೀಲ್ದಾರ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ನೆರೆ ಪ್ರದೇಶದ ಗ್ರಾಮ ಮತ್ತು ಜಮೀನುಗಳಿಗೆ ಭೇಟಿ ನೀಡಿ ಮಳೆಯಿಂದ ಹಾನಿಯಾದ ಬಗ್ಗೆ ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ ಎಂದರು.

ಮಳೆಯಿಂದ ಮನೆಯ ಒಂದು ಭಾಗದ ಗೋಡೆ ಬಿದ್ದರೆ ಇಡೀ ಮನೆಗೆ ಹಾನಿಯಾದಂತೆ. ಹಾಗಾಗಿ ಅಧಿಕಾರಿಗಳು ಸಂಪೂರ್ಣ ಪರಿಹಾರಕ್ಕೆ ಇಂತಹ ಮನೆಗಳನ್ನೂ ಪರಿಗಣಿಸಬೇಕು ಎಂದ ಅವರು, ರಸ್ತೆಗಳಲ್ಲಿ ಸರಾಗವಾಗಿ ನೀರು ಹರಿಯದೇ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ಜಿ.ಪಂ. ಮತ್ತು ಪಿ.ಡಬ್ಲ್ಯೂ.ಡಿ. ಇಲಾಖೆ ಹೆಚ್ಚಿನ ಗಮನ ಹರಿಸಿ, ರಸ್ತೆಯ ಎರಡೂ ಬದಿಗಳಲ್ಲಿ ಕಾಲುವೆ ನಿರ್ಮಿಸುವ ಮೂಲಕ ನೀರು ಸರಾಗವಾಗಿ ಹರಿಯಲು ಹೆಚ್ಚಿನ ನಿಗಾ ವಹಿಸಬೇಕು ಎಂದರು.

ಇದನ್ನೂ ಓದಿ: Kannada New Movie: ಹಾರರ್ ಜಾನರ್‌ನ ʼಹಗ್ಗʼ ಚಿತ್ರದ ಟೀಸರ್ ಅನಾವರಣ

ಸುದ್ದಿಗೋಷ್ಠಿಯಲ್ಲಿ ತಹಸೀಲ್ದಾರ್ ಮಂಜುಳಾ ಹೆಗಡಾಳ್, ಕೃಷಿ ಸಹಾಯಕ ನಿರ್ದೇಶಕ ಕೆ.ಜಿ. ಕುಮಾರ್ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಮತ್ತು ಮಾಜಿ ಶಾಸಕ ಕುಮಾರ ಬಂಗಾರಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲುಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ಜಿಲ್ಲಾ ಕಾರ್ಯದರ್ಶಿ ದೇವೇಂದ್ರಪ್ಪ ಚನ್ನಾಪುರ, ಮುಖಂಡರಾದ ಗುರುಕುಮಾರ ಪಾಟೀಲ್, ಪ್ರಕಾಶ್ ಅಗಸನಹಳ್ಳಿ ಹಾಗೂ ಇತರರು ಇದ್ದರು.

Continue Reading
Advertisement
Tax Free Income
ವಾಣಿಜ್ಯ21 mins ago

Tax Free Income: ತೆರಿಗೆ ಮುಕ್ತವಾಗಿರುವ ಆದಾಯ ಮೂಲಗಳಿವು; ಇದರ ಪ್ರಯೋಜನ ಪಡೆಯುವುದು ಹೇಗೆ?

karnataka Weather Forecast
ಮಳೆ36 mins ago

Karnataka Weather : ಕರಾವಳಿ, ಮಲೆನಾಡು ಸೇರಿ ಒಳನಾಡಲ್ಲಿ ಭಾರಿ ಮಳೆ; ಗಾಳಿಯ ಶರವೇಗ 50 ಕಿ.ಮೀ!

Belly Fat Loss Drinks
ಆರೋಗ್ಯ1 hour ago

Belly Fat Loss Drinks: ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಐದು ಪಾನೀಯಗಳನ್ನು ಸೇವಿಸಿ

Dina Bhavishya
ಭವಿಷ್ಯ2 hours ago

Dina Bhavishya : ಈ ದಿನ ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡವೇ ಬೇಡ

Bangladesh Violence
ವಿದೇಶ7 hours ago

Bangladesh Violence: ಬಾಂಗ್ಲಾ ಧಗ ಧಗ; ಭುಗಿಲೆದ್ದ ಹಿಂಸಾಚಾರಕ್ಕೆ 35 ಮಂದಿ ಬಲಿ

Karnataka Assembly
ಪ್ರಮುಖ ಸುದ್ದಿ7 hours ago

Karnataka Assembly : ಗದ್ದಲದಲ್ಲೇ ಮುಕ್ತಾಯಗೊಂಡ ಮೂರನೇ ದಿನದ ವಿಧಾನಮಂಡಲ ಅಧಿವೇಶನ

Udhayanidhi Stalin
ದೇಶ8 hours ago

Udhayanidhi Stalin: ತಮಿಳುನಾಡು ಉಪ ಮುಖ್ಯಮಂತ್ರಿಯಾಗಿ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್?

The Ambani family gave a wedding special reception to the staff and housekeepers
ದೇಶ8 hours ago

Anant Radhika Wedding: ಸಿಬ್ಬಂದಿ, ಮನೆಗೆಲಸದವರಿಗೆ ಮದುವೆಯ ಭರ್ಜರಿ ಔತಣಕೂಟ ನೀಡಿದ ಅಂಬಾನಿ ಫ್ಯಾಮಿಲಿ!

Police Suspended
ಕರ್ನಾಟಕ8 hours ago

Police Suspended : ಠಾಣೆಯಲ್ಲೇ ಕೈಮಿಲಾಯಿಸಿದ ಪೊಲೀಸ್​ ಅಧಿಕಾರಿಗಳಿಬ್ಬರು ಸಸ್ಪೆಂಡ್​​

Train Derail
ದೇಶ9 hours ago

Train Derail: “ಪ್ರಚಾರದ ಗೀಳು ಬಿಟ್ಟು ರೈಲುಗಳ ಸುರಕ್ಷತೆ ಬಗ್ಗೆ ಗಮನ ಹರಿಸಿ”- ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ14 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ16 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ5 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ5 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌