Site icon Vistara News

ಪ್ರಾಂಶುಪಾಲರಿಗೆ ಕಪಾಳಮೋಕ್ಷ; ಶಾಸಕರ ಕ್ಷಮೆಯಾಚನೆಗೆ ವಿದ್ಯಾರ್ಥಿಗಳ ಪಟ್ಟು

ಪ್ರತಿಭಟನೆ

ಮಂಡ್ಯ: ಪ್ರಾಂಶುಪಾಲರ ಮೇಲೆ ಶಾಸಕರ ಹಲ್ಲೆ ವಿರೋಧಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ನೇತೃತ್ವದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಐಟಿಐ ಕಾಲೇಜು ವಿದ್ಯಾರ್ಥಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಎರಡು ದಿನದ ಹಿಂದೆ ಐಟಿಐ ಕಾಲೇಜಿಗೆ ಶಾಸಕ ಎಂ. ಶ್ರೀನಿವಾಸ್ ಕಾಲೇಜಿಗೆ ಭೇಟಿ ನೀಡಿದ್ದಾಗ ಕಂಪ್ಯೂಟರ್‌ ಲ್ಯಾಬ್‌ ಸಂಬಂಧಿಸಿದ ಮಾಹಿತಿ ನೀಡಲಿಲ್ಲ ಎಂದು ಪ್ರಾಂಶುಪಾಲ ನಾಗಾನಂದ್ ಅವರ ಕಪಾಲಕ್ಕೆ ಬಾರಿಸಿದ್ದರು. ಹೀಗಾಗಿ ಶಾಸಕರ ವರ್ತನೆಯನ್ನು ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿ ಶಾಸಕರ ವಿರುದ್ಧ ಧಿಕ್ಕಾರ ಕೂಗಿದರು.
ಪ್ರಾಂಶುಪಾಲರ ಮೇಲೆ ಹಲ್ಲೆ ಮಾಡಿರುವ ಶಾಸಕರು ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಶಾಸಕರ ವಿರುದ್ಧ ಸ್ಪೀಕರ್ ಕಠಿಣ ಕ್ರಮ ಜರುಗಿಸಬೇಕೆಂದು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಇದನ್ನೂ ಓದಿ | ಮಂಡ್ಯ ಪೊಲೀಸರನ್ನು ಪೂರ್ತಿ ಹೈರಾಣಾಗಿಸಿದ ಅರ್ಧ ದೇಹ: ಊರೂರು ಅಲೆಯುತ್ತಿರುವ ಖಾಕಿ ಪಡೆ

Exit mobile version