Site icon Vistara News

Bus Accident: ಹೊಸಕೋಟೆಯಲ್ಲಿ ಖಾಸಗಿ ಬಸ್‌ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯ

Bus accident

ಹೊಸಕೋಟೆ: ಚಿಂತಾಮಣಿ-ಹೊಸಕೋಟೆ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಂಗಳವಾರ ನಡೆದಿದೆ. ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆ ಚಾಲನೆಯಿಂದ ಅಪಘಾತ (Bus Accident) ನಡೆದಿದೆ.

ಬೆಂಗಳೂರಿನಿಂದ ಚಿಂತಾಮಣಿ ಕಡೆಗೆ ಹೊರಟಿದ್ದ ಖಾಸಗಿ ಬಸ್, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬನಹಳ್ಳಿ ಗೇಟ್ ಬಳಿ ಪಲ್ಟಿಯಾಗಿದೆ. ವೇಗವಾಗಿ ಬಂದು ರಸ್ತೆಯಲ್ಲಿನ ಸ್ಪೀಡ್ ಬ್ರೇಕರ್ ಬಳಿ ಬ್ರೇಕ್‌ ಹಾಕಿದ್ದರಿಂದ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಾಳುಗಳನ್ನು ಹೊಸಕೋಟೆಯ ವಿವಿಧ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Bengaluru News : ಕುಡಿತ ತಂದ ಆಪತ್ತು; ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು

ಸ್ಕೂಲ್ ವ್ಯಾನ್ ಡಿಕ್ಕಿ; ಮಹಿಳೆ‌ ಸ್ಥಳದಲ್ಲೇ ದುರ್ಮರಣ

ಚಿಕ್ಕಬಳ್ಳಾಪುರ: ಸ್ಕೂಲ್ ವ್ಯಾನ್ ಡಿಕ್ಕಿಯಾಗಿ ಮಹಿಳೆ‌ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಚಿಂತಾಮಣಿ ತಾಲೂಕಿನ ಚಲಂಕೋಟೆ ಗ್ರಾಮದಲ್ಲಿ ನಡೆದಿದೆ. ಮುರುಗಮಲ್ಲ ಗ್ರಾಮದ ನಿವಾಸಿ ನಜ್ಮಾತಾಜ್ (38) ಮೃತರು. ಮನೆಗೆ ಸೌದೆ ಹೊತ್ತೊಯ್ಯುವಾಗ ಮಹಿಳೆಗೆ, ಚಿಂತಾಮಣಿಯ ಪ್ರತಿಷ್ಠಿತ ಎಸ್‌ಎನ್‌ಆರ್ ಸ್ಕೂಲ್ ವ್ಯಾನ್ ಡಿಕ್ಕಿಯಾಗಿದೆ. ಸ್ಥಳಕ್ಕೆ ಕೆಂಚಾರ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸಾವು

ಚಿಕ್ಕೋಡಿ: ನಿಯಂತ್ರಣ ತಪ್ಪಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಚಾಲಕ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಹಂಜಾನಟ್ಟಿ ಗ್ರಾಮದ ಚಾಲಕ ಮಹಾರುದ್ರ ಸಂಕೇಶ್ವರಿ (24) ಮೃತ.

ಹಂಜಾನಟ್ಟಿ ಗ್ರಾಮದಿಂದ ಸಂಕೇಶ್ವರ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಾಟ ಮಾಡುತ್ತಿದ್ದಾಗ ದುರಂತ ನಡೆದಿದೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Killer Bmtc : ಎರಡು ದಿನದ ಅಂತರದಲ್ಲಿ ಬಿಎಂಟಿಸಿಗೆ ಮತ್ತೊಂದು ಬಲಿ

ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ,; ಸವಾರ ಸಾವು

ವಿಜಯಪುರ: ಜಿಲ್ಲೆಯ ತಾಳಿಕೋಟೆ ತಾಲೂಕಿನ ಮಿಣಜಗಿ ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮಿಣಜಗಿ ಗ್ರಾಮದ ಶ್ರೀಧರ ಮಾದರ (24) ಮೃತ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version