ಸರ್ಕಾರಿ ಶಾಲೆಗೆ ಬೀಗ ಹಾಕಿ ದನ ಕಟ್ಟಿದ ಮೂಲ ಮಾಲೀಕರು; ಈಗ ಬೀದಿಯಲ್ಲೇ ಮಕ್ಕಳಿಗೆ ಪಾಠ! - Vistara News

ಕರ್ನಾಟಕ

ಸರ್ಕಾರಿ ಶಾಲೆಗೆ ಬೀಗ ಹಾಕಿ ದನ ಕಟ್ಟಿದ ಮೂಲ ಮಾಲೀಕರು; ಈಗ ಬೀದಿಯಲ್ಲೇ ಮಕ್ಕಳಿಗೆ ಪಾಠ!

Government School: ಜಾಗದ ವಿವಾದ ಹಾಗೂ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯವು ಈಗ ಮಕ್ಕಳನ್ನು ಬೀದಿಗೆ ತಂದಿದೆ. ಈ ಹಿಂದೆ ಶಾಲೆಗೆ ಜಾಗ ನೀಡಿದ್ದ ಮಾಲೀಕರು ಈಗ ಶಾಲೆಗೆ ಬೀಗ ಹಾಕಿದ್ದಾರೆ. ತಮಗೆ ಪರ್ಯಾಯ ಜಾಗದ ವ್ಯವಸ್ಥೆ ಮಾಡಿಕೊಡುವವರೆಗೂ ಈ ಜಾಗವನ್ನು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

VISTARANEWS.COM


on

Mundaragi government school
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗದಗ: ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ಸರ್ಕಾರಿ ಶಾಲೆಗೆ (Government School) ಜಾಗದ ಸಮಸ್ಯೆಯೊಂದು (Land Issue) ಕೇಳಿ ಬಂದಿದೆ. ಈ ಹಿಂದೆ ತಮಗೆ ಸರ್ಕಾರ ಕೊಟ್ಟಿದ್ದ ಜಾಗದ ಬಗ್ಗೆ ನೈಜ ಮಾಲೀಕ ತಗಾದೆ ತೆಗೆದಿದ್ದರಿಂದ ತಮ್ಮ ಜಾಗದಲ್ಲಿ ಕಟ್ಟಲಾಗಿದ್ದ ಸರ್ಕಾರಿ ಶಾಲೆಗೆ ಕುಟುಂಬವೊಂದು ಬೀಗ ಜಡಿದಿದೆ. ಅಲ್ಲದೆ, ಶಾಲೆಯ ಆವರಣದಲ್ಲಿ ದನ-ಕರುಗಳನ್ನು ಕಟ್ಟಿದೆ. ಹೀಗಾಗಿ ಈಗ ಶಾಲೆಯ ಮಕ್ಕಳು ಬೀದಿಗೆ ಬಂದಿದ್ದಾರೆ. ಮರದ ಕೆಳಗೆ ಪಾಠ ಮಾಡಲಾಗುತ್ತಿದೆ.

ಈಗ ಜಾಗದ ಮೂಲ ಮಾಲೀಕರು ಶಾಲೆಯ ಗೇಟ್‌ಗೆ ಬೀಗ ಹಾಕಿ, ದಾರಿಗೆ ಮುಳ್ಳಿನ‌ ಬೇಲಿಯನ್ನು ಹಾಕಿದ್ದಾರೆ. ಲಕ್ಷ್ಮವ್ವ ತಳವಾರ ಎಂಬುವವರ ಕುಟುಂಬದಿಂದ ಶಾಲಾ‌ ಜಾಗದ ಬಗ್ಗೆ ತಗಾದೆ ತಗೆಯಲಾಗಿದೆ. ಸರ್ಕಾರಿ ಶಾಲೆಗೆಂದು ಹದಿನಾಲ್ಕು ಗುಂಟೆ ಜಾಗವನ್ನು ಈ ಕುಟುಂಬದವರು ನೀಡಿದ್ದರು. ಆದರೆ, ತಮಗೆ ಕೊಟ್ಟಿದ್ದ ಪರ್ಯಾಯ ಜಾಗ ಈಗ ತಮ್ಮ ಕೈತಪ್ಪಿ ಹೋಗುತ್ತಿರುವುದರಿಂದ ಶಾಲೆಯ ಜಾಗಕ್ಕೆ ಪಟ್ಟು ಹಿಡಿದಿದ್ದಾರೆ. ತಮಗೆ ಈ ಜಾಗವನ್ನು ಬಿಟ್ಟು ಕೊಡಿ ಇಲ್ಲವೇ ಪರ್ಯಾಯ ಜಾಗವನ್ನು ಮಾಡಿಕೊಡಿ ಎಂದು ಆಗ್ರಹಿಸಿದ್ದಾರೆ.

mundaragi government school
ಶಾಲೆ ಗೇಟ್‌ಗೆ ಬೀಗ ಹಾಕಲಾಗಿರುವುದು. ಜತೆಗೆ ಮುಳ್ಳಿನ ಗಿಡವನ್ನು ಅಡ್ಡಲಾಗಿ ಹಾಕಿರುವುದು

ಸಾರ್ವಜನಿಕ ಸಮಸ್ಯೆಯಾಗಿ ಬದಲಾಯ್ತು!

24 ವರ್ಷದ ಹಿಂದೆ ಸರ್ಕಾರಿ ಶಾಲೆ ಕಟ್ಟಿಕೊಂಡು ಮಕ್ಕಳಿಗೆ ಶಿಕ್ಷಣ ದೊರೆಯುವಂತಾಗಲಿ ಎಂಬ ಸದುದ್ದೇಶದಿಂದ ತನ್ನ ಹೆಸರಿನಲ್ಲಿದ್ದ 14 ಗುಂಟೆ ಜಮೀನನ್ನು ಮಾಲೀಕರೊಬ್ಬರು ಬಿಟ್ಟುಕೊಟ್ಟಿದ್ದರು. ಇದರ ಬದಲಾಗಿ ಅವರಿಗೆ ಅರ್ಧ ಗುಂಟೆ ಜಾಗವನ್ನು ಕೊಡಲಾಗಿತ್ತು. ಆದರೆ, ಈಗ ಆ ಜಾಗದ ಸಮಸ್ಯೆಯು ಸಾರ್ವಜನಿಕರ ಸಮಸ್ಯೆಯಾಗಿ ಮಾರ್ಪಟ್ಟಿದೆ.

mundaragi government school
ಶಾಲಾ ಮೈದಾನದಲ್ಲಿಯೇ ದನಕರುಗಳನ್ನು ಕಟ್ಟಿಹಾಕಲಾಗಿದೆ.

ಶಾಲೆಗೆ ಜಾಗವನ್ನು ನೀಡಿದ್ದ ಕುಟುಂಬಸ್ಥರಿಗೆ ಪರ್ಯಾಯವಾಗಿ ವಾಸಿಸಲು ಶಾಲೆ ಹಿಂಭಾಗದಲ್ಲಿ ಅರ್ಧ ಗುಂಟೆ ಜಾಗದ ವ್ಯವಸ್ಥೆಯನ್ನು ಮಾಡಿಕೊಡಲಾಗಿತ್ತು. ಆದರೆ, ಅದು ಖಾಸಗಿ‌ ಮಾಲೀಕರ ಜಾಗವಾಗಿದೆ ಎಂಬುದು ಈಗ ಗೊತ್ತಾಗಿದೆ. ಆ ಜಾಗದ ಮಾಲೀಕರು ಈಗ “ಇದು ತಮ್ಮ ಜಾಗ, ನೀವು ಇಲ್ಲಿಂದ ಖಾಲಿ ಮಾಡಿ” ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ಇದರಿಂದ ಲಕ್ಷ್ಮವ್ವ ತಳವಾರ ಕುಟುಂಬಸ್ಥರಿಗೆ ದಿಕ್ಕು ತೋಚದಂತೆ ಆಗಿದೆ.

mundaragi government school and teacher and children
ಶಾಲೆಯ ಆವರಣದಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿರುವ ಶಿಕ್ಷಕರು

ಸಾರ್ವಜನಿಕ ಉಪಯೋಗಕ್ಕಾಗಿ ತಮ್ಮ ಜಾಗವನ್ನು ತಾವು ಬಿಟ್ಟುಕೊಟ್ಟಿದ್ದೇವೆ. ಆದರೆ, ನಮಗೆ ಕೊಟ್ಟ ಜಾಗವನ್ನು ನಮಗೆ ಖಾತೆಯನ್ನಾಗಿ ಮಾಡಿಕೊಡಲೂ ಇಲ್ಲ. ಈಗ ಆ ಜಾಗದ ಮಾಲೀಕರು ತಮ್ಮ ಜಾಗವನ್ನು ಬಿಟ್ಟು ಕೊಡಿ ಎಂದು ನಮ್ಮ ಬೆನ್ನು ಬಿದ್ದಿದ್ದಾರೆ. ನಾವೀಗ ಎಲ್ಲಿಗೆ ಹೋಗಬೇಕು? ನಾವು ಬಡವರು, ಕಷ್ಟಪಟ್ಟು ದುಡಿದು ಜೀವನ ಸಾಗಿಸುವವರು. ನಮಗೆ ಈಗ ನೆಲೆಯೇ ಇಲ್ಲವಾದರೆ ಹೇಗೆ? ಎಂದು ಸಂಕಷ್ಟದಲ್ಲಿರುವ ಲಕ್ಷ್ಮವ್ವ ತಳವಾರ ಕುಟುಂಬದವರು ಪ್ರಶ್ನೆ ಮಾಡುತ್ತಿದ್ದಾರೆ.

mundaragi government school and land owner family
ಶಾಲೆಗೆ ಜಾಗ ನೀಡಿದ್ದ ಕುಟುಂಬದವರು

ಖಾತೆ ಬದಲಾವಣೆಯೂ ಆಗಿಲ್ಲ

ಇಲ್ಲಿ ಇನ್ನೊಂದು ಪ್ರಮಾದದ ಸಂಗತಿ ಎಂದರೆ ಲಕ್ಷ್ಮವ್ವ ತಳವಾರ ಕುಟುಂಬದವರು ಈ ಜಾಗವನ್ನು ಬಿಟ್ಟು ಕೊಟ್ಟು ಸರ್ಕಾರ ಸೂಚಿಸಿದ ಜಾಗಕ್ಕೆ ಹೋದರು. ಅವರು ಬಿಟ್ಟುಕೊಟ್ಟ ಜಾಗದಲ್ಲಿ ಸರ್ಕಾರಿ ಶಾಲೆ ನಿರ್ಮಾಣವೂ ಆಯಿತು, ಪಾಠವೂ ಶುರುವಾಯಿತು. ಆ ಕುಟುಂಬದವರೂ ತಮಗೆ ಸೂಚಿಸಿದ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸವಾಗಿದ್ದರು. ಈ ಮಧ್ಯೆ ಶಿಕ್ಷಣ ಇಲಾಖೆಯಿಂದ ಸಹ ಖಾತೆ ಬದಲಾವಣೆಗೆ ಮುಂದಾಗಿಲ್ಲ. ಆ ಕುಟುಂಬದವರಿಗೆ ನೀಡಿದ ಜಾಗದ ಖಾತೆ ಮಾಡಿಸುವುದನ್ನೂ ಮರೆತುಬಿಟ್ಟಿದ್ದರು. ಈಗ ಇವರು ಮನೆ ಕಟ್ಟಿಕೊಂಡಿರುವ ಜಾಗದ ಮಾಲೀಕ ತನ್ನ ಹಕ್ಕಿನ ಜಾಗವನ್ನು ಕೇಳಿದ್ದೇ ಇಷ್ಟೆಲ್ಲ ಸಮಸ್ಯೆಗೆ ಕಾರಣವಾಗಿದೆ.

mundaragi government school
ಮರದ ನೆರಳಿನಲ್ಲಿ ಕುಳಿತಿರುವ ಮುಂಡರಗಿ ಸರ್ಕಾರಿ ಶಾಲೆ ಮಕ್ಕಳು

ನಮಗೆ ಶಾಲೆಯ ಜಾಗವನ್ನು ಬಿಟ್ಟುಕೊಡಿ

ತಮಗೆ ಜಾಗ ಇಲ್ಲದೇ ಹೇಗೆ ಜೀವನ ಸಾಗಿಸುವುದು? ಹೀಗಾಗಿ ಶಾಲೆಗೆ ನೀಡಿದ್ದ ಜಾಗವನ್ನು ಮರಳಿ ನಮಗೆ ಬಿಟ್ಟುಕೊಡಿ. ಇಲ್ಲವಾದಲ್ಲಿ ನಮಗೆ ಬೇರೆ ಕಡೆ ಜಾಗ ನೀಡಿ‌ ನಮ್ಮ ಹೆಸರಿಗೆ ಮಾಡಿ ಎಂದು ತಳವಾರ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ತಹಸೀಲ್ದಾರ್‌ವರೆಗೂ ಮನವಿಯನ್ನು ನೀಡಲಾಗಿತ್ತು. ತಹಸೀಲ್ದಾರ್‌ ಸಹ ಕ್ಷೇತ್ರ ಶಿಕ್ಷಣಾಧಿಕಾರಿಯವರನ್ನು ಕರೆಸಿ ಸಮಸ್ಯೆಯನ್ನು ಬಗೆಹರಿಸುವಂತೆ ಸೂಚನೆ ನೀಡಿದ್ದರು. ಆದರೆ, ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದರು. ಐದು ದಿನಗಳೊಳಗೆ ಮಾಡುತ್ತೇವೆಂದವರು ಏನೂ ಕ್ರಮ ಕೈಗೊಳ್ಳದೇ ಇದ್ದ ಕಾರಣ, ಲಕ್ಷ್ಮವ್ವ ತಳವಾರ ಕುಟುಂಬದವರು ಶಾಲೆಗೆ ಬೀಗ ಹಾಕಿದ್ದಾರೆ. ಶಾಲಾ ಆವರಣದಲ್ಲಿ ದನ ಕರುಗಳನ್ನು ಕಟ್ಟಿದ್ದಾರೆ. ತಮಗೆ ಪರ್ಯಾಯ ಜಾಗವನ್ನು ಕಲ್ಪಿಸುವವರೆಗೂ ಬೀಗ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

mundaragi government school
ದನದ ಕೊಟ್ಟಿಗೆಯಂತೆ ಆಗಿರುವ ಮುಂಡರಗಿ ಸರ್ಕಾರಿ ಶಾಲೆ

ಇದನ್ನೂ ಓದಿ: Tungabhadra Dam: ಬರಿದಾದಳೇ ತುಂಗಭದ್ರೆ? 105 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲೀಗ 5 ಟಿಎಂಸಿ ನೀರೂ ಇಲ್ಲ!

ಇನ್ನಾದರೂ ಅಧಿಕಾರಿಗಳು ತುರ್ತು ಕ್ರಮವನ್ನು ಕೈಗೊಳ್ಳುವ ಮೂಲಕ ಮಕ್ಕಳು ಬಿಸಿಲಿನಲ್ಲಿ ಪಾಠ ಕೇಳುವುದನ್ನು ತಪ್ಪಿಸುತ್ತಾರೆಯೇ ಎಂಬ ಪ್ರಶ್ನೆ ಸಾರ್ವಜನಿಕರದ್ದಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

Women Slapped : ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಅವರ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Women Slapped
Koo

ಬೆಂಗಳೂರು: ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದ (PTI) ಮಹಿಳಾ ವರದಿಗಾರರ (Female Journalist) ಮೇಲೆ ಮತ್ತೊಂದು ಸುದ್ದಿ ಸಂಸ್ಥೆ ಎಎನ್ಐನಲ್ಲಿ (ANI) ಕೆಲಸ ಮಾಡುತ್ತಿರುವ ಪತ್ರಕರ್ತನೊಬ್ಬ (Male Journalist) ದೈಹಿಕವಾಗಿ ಹಲ್ಲೆ ನಡೆಸಿದ ಘಟನೆ ಗುರುವಾರ ನಡೆದಿದೆ. ಉಪ ಮುಖ್ಯಮಂತ್ರಿ ಡಿ . ಕೆ. ಶಿವಕುಮಾರ್ ಅವರು ನಡೆಸಿದ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಇಬ್ಬರೂ ವರದಿಗಾರರು ತೀವ್ರ ವಾಗ್ವಾದ ನಡೆಸಿದ್ದು, ಅಂತಿಮವಾಗಿ ಎಎನ್ಐ ವರದಿಗಾರ ಪಿಟಿಐ ವರದಿಗಾರ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇತರ ಸುದ್ದಿ ಸಂಸ್ಥೆಗೆ ಸೇರಿದವರು ಎಎನ್ಐ ವರದಿಗಾರನನ್ನು ದೂರ ತಳ್ಳಿ ಇನ್ನಷ್ಟು ಗಲಾಟೆಯಾಗದಂತೆ ನೋಡಿಕೊಂಡಿದ್ದಾರೆ. ಇವೆಲ್ಲವು ವಿಡಿಯೊದಲ್ಲಿ ದಾಖಲಾಗಿದೆ.

“ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಿಟಿಐ ಯುವ ವರದಿಗಾರ್ತಿಯೊಬ್ಬರ ಮೇಲೆ ದೈಹಿಕ ಹಲ್ಲೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿ, ಲೈಂಗಿಕ ಕಿರುಕುಳ ನೀಡಲಾಗಿದೆ. ಇದು ಎಎನ್ಐ ವರದಿಗಾರನ ಅಸಹ್ಯಕರ ವರ್ತನೆ. ಎಎನ್ಐ ತನ್ನ ಸಿಬ್ಬಂದಿಯ ಇಂತಹ ನಡವಳಿಕೆಯನ್ನು ಖಂಡಿಸುತ್ತದೆಯೇ? ಎಂದು ಪಿಟಿಐ ವಿಡಿಯೊ ಸಮೇತ ಟ್ವೀಟ್ ಮಾಡಿದೆ.

ಪಿಟಿಐ ಈ ಘಟನೆಯನ್ನು ಖಂಡಿಸಿದೆ ಮತ್ತು ವೀಡಿಯೊದಲ್ಲಿ ಕಾಣಿಸಿಕೊಂಡ ತಮ್ಮ ಉದ್ಯೋಗಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಎನ್ಐ ಆಡಳಿತ ಮಂಡಳಿಗೆ ಮನವಿ ಮಾಡಿದೆ. ಎಫ್ಐಆರ್ ಕೂಡ ದಾಖಲಾಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡುವುದಾಗಿ ಸುದ್ದಿ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ : Xiaomi Car: ಎಲೆಕ್ಟ್ರಿಕ್​ ಕಾರು ಮಾರುಕಟ್ಟೆಗೆ ಇಳಿಸಿದ ಮೊಬೈಲ್ ಕಂಪನಿ ರೆಡ್​ಮಿ

“ನಮ್ಮ ಆಡಳಿತ ಮಂಡಳಿ ಮತ್ತು ಪತ್ರಕರ್ತೆಯ ಸಹೋದ್ಯೋಗಿಗಳು ಆಕ್ರೋಶಗೊಂಡಿದ್ದಾರೆ ಮತ್ತು ಈ ಅಪ್ರಚೋದಿತ ಹಲ್ಲೆಯನ್ನು ಬಲವಾಗಿ ಖಂಡಿಸಿದ್ದಾರೆ. ಪಿಟಿಐ ತನ್ನ ಉದ್ಯೋಗಿಗಳನ್ನು ರಕ್ಷಿಸಲು ಬದ್ಧವಾಗಿದೆ. ಆಘಾತಕಾರಿ ಘಟನೆಯ ಬಗ್ಗೆ ಎಫ್ಐಆರ್ ದಾಖಲಿಸಲಾಗಿದೆ. ಪಿಟಿಐ ರಾಷ್ಟ್ರೀಯ ಮಹಿಳಾ ಆಯೋಗಕ್ಕೂ ದೂರು ಸಲ್ಲಿಸಿದ್ದೇವೆ” ಎಂದು ಪಿಟಿಐ ಹೇಳಿಕೆ ಬಿಡುಗಡೆ ಮಾಡಿದೆ.

ಘಟನೆಯ ಬಗ್ಗೆ ಅನೇಕ ನಾಯಕರು ಕಳವಳ ವ್ಯಕ್ತಪಡಿಸಿದರು ಮತ್ತು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ಮತ್ತು ಬಿಜೆಪಿ ನಾಯಕಿ ಖುಷ್ಬೂ ಸುಂದರ್, “ಇಂದು ಬೆಂಗಳೂರಿನಲ್ಲಿ ಪಿಟಿಐ ಪತ್ರಕರ್ತೆಯನ್ನು ದೈಹಿಕವಾಗಿ ಮತ್ತು ಮೌಖಿಕವಾಗಿ ನಿಂದಿಸಿದ ಪುರುಷ ಪತ್ರಕರ್ತನ ನಡವಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಬಯಸುತ್ತೇನೆ ಎಂದು ಬರೆದಿದ್ದಾರೆ.

ಏತನ್ಮಧ್ಯೆ, ಎಎನ್ಐ ವರದಿಗಾರ ತನ್ನ ಮೇಲೆ ಮೊದಲು ಮಹಿಳಾ ಪತ್ರಕರ್ತೆ ಹಲ್ಲೆ ನಡೆಸಿದ್ದರು ಎಂದು ಪ್ರತಿ ಎಫ್ಐಆರ್ ದಾಖಲಿಸಲಿದ್ದಾರೆ. ಅದಕ್ಕೆ ಪೂರಕವಾಗಿ ಪರಚಿದ ಮುಖದ ಚಿತ್ರ ಹಾಕಿದ್ದಾರೆ. ಆದಾಗ್ಯೂ, ಎಎನ್ಐ ಪತ್ರಕರ್ತ ನವೀನ್ ಕಪೂರ್ ನೀಡಿದ ಸ್ಪಷ್ಟೀಕರಣದ ಪ್ರಕಾರ, ಉದ್ಯೋಗದಾತರು ಅವರನ್ನು ತಾತ್ಕಾಲಿಕವಾಗಿ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.

Continue Reading

ಕರ್ನಾಟಕ

Road Accident: ಟಾಟಾ ಏಸ್ ವಾಹನ ಪಲ್ಟಿ; ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

Road Accident: ಟಾಟಾ ಏಸ್‌ ವಾಹನದ ಟೈರ್‌ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಣೇಬೆನ್ನೂರು ತಾಲೂಕಿನ ಹಲಗೇರಿ ಬಳಿ ಈ ಘಟನೆ ನಡೆದಿದೆ.

VISTARANEWS.COM


on

Tata Ace vehicle overturned Two persons dead five seriously injured
Koo

ಹಾವೇರಿ: ಟಾಟಾ ಏಸ್‌ ವಾಹನದ ಟೈರ್‌ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಣೇಬೆನ್ನೂರು ತಾಲೂಕಿನ ಹಲಗೇರಿ ಬಳಿ (Road Accident) ಗುರುವಾರ ಸಂಜೆ ಈ ಘಟನೆ ನಡೆದಿದೆ.

ಲಕ್ಷ್ಮಣ ಗುಡ್ಡಪ್ಪ ಕುಳಗಟ್ಟಿ (50), ಸೈನಾಜಬೇಗಂ ಅಮಾನುಲ್ಲಾ (30) ಮೃತ ದುರ್ದೈವಿಗಳು. ಗದಿಗೆಮ್ಮ ಕುಳಗಟ್ಟಿ (40), ಬೀರಪ್ಪ ಬುಳ್ಳಾಪುರ (80), ಅಮಾನುಲ್ಲಾ ದಿವಾನ ಅಜ್ಜಣ್ಣನವರ (38), ಅನಿಶಾಬಾನು ದಿವಾನ ಅಜ್ಜಣ್ಣನವರ (11), ಜೀಶಾನ ಗುಡ್ಡಮ್ಮನವರ (9) ಎಂಬುವವರಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: SBI Debit Cards: ಎಸ್‌ಬಿಐ ಡೆಬಿಟ್‌ ಕಾರ್ಡ್‌ದಾರರಿಗೆ ಬ್ಯಾಡ್‌ ನ್ಯೂಸ್‌; ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

ಚಿಕ್ಕಕಬ್ಬಾರ ಗ್ರಾಮದಿಂದ ರಾಣೆಬೆನ್ನೂರಿನ ಎಪಿಎಂಸಿಗೆ ಸೂರ್ಯಕಾಂತಿ ಸಾಗಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಹಲಗೇರಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Continue Reading

ಬೆಂಗಳೂರು

Bengaluru News: ಭಯೋತ್ಪಾದನೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ: ಮಾಳವಿಕಾ ಅವಿನಾಶ್ ಟೀಕೆ

Bengaluru News: ಭಯೋತ್ಪಾದನೆ ಚಟುವಟಿಕೆಗಳು ನಡೆಯುತ್ತಿದ್ದರೂ ಏನೂ ಆಗಿಲ್ಲವೇನೋ ಎಂಬ ಸ್ಥಿತಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಟೀಕಿಸಿದ್ದಾರೆ.

VISTARANEWS.COM


on

BJP State Vice President Malavika Avinash latest statement
Koo

ಬೆಂಗಳೂರು: ಕರ್ನಾಟಕವು (Karnataka) ಅತ್ಯಂತ ದುರ್ದೈವದ ಪರಿಸ್ಥಿತಿಯಲ್ಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಕಳವಳ (Bengaluru News) ವ್ಯಕ್ತಪಡಿಸಿದರು.

ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯೋತ್ಪಾದನೆಯ ಚಟುವಟಿಕೆಗಳು ನಡೆಯುತ್ತಿದ್ದರೂ ಏನೂ ಆಗಿಲ್ಲವೇನೋ ಎಂಬ ಸ್ಥಿತಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಇದೆ ಎಂದು ಟೀಕಿಸಿದರು.

ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಮತ್ತು ಆ ಸ್ಫೋಟದ ಕುರಿತು ಎನ್‍ಐಎ ತನಿಖೆ ನಡೆಯುತ್ತಿದೆ. ಮೊದಲಿಗೆ ಪೊಲೀಸ್ ತನಿಖೆ ನಡೆಯುತ್ತಿತ್ತು. ಇದೀಗ ಸಿಸಿಬಿ ಮತ್ತು ಎನ್‍ಐಎ ತನಿಖೆ ನಡೆಯುತ್ತಿದೆ ಎಂದು ವಿವರಿಸಿದರು.

ಇದನ್ನೂ ಓದಿ: Karnataka Weather : ಕಲಬುರಗಿಯಲ್ಲಿ 40ರ ಗಡಿದಾಟಿದ ತಾಪಮಾನ; 4 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌

ಎನ್‍ಐಎ, ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ನಿನ್ನೆ ದಾಳಿ ನಡೆಸಿದೆ. ಶಿವಮೊಗ್ಗದವರಾದ ಇಬ್ಬರು ಪ್ರಮುಖ ಆರೋಪಿಗಳ ಕುರಿತು ಮಾಹಿತಿ ಲಭಿಸಿದೆ. ಇಲ್ಲಿನ ಸ್ಫೋಟಕ್ಕೂ ಮಂಗಳೂರಿನ ಸ್ಫೋಟಕ್ಕೂ ಸಂಬಂಧ ಇದೆ ಎಂದು ತಿಳಿಸಿದರೂ, ಮುಖ್ಯಮಂತ್ರಿಯವರು ಅದನ್ನು ಅಲ್ಲಗಳೆದಿದ್ದಾರೆ ಎಂದು ಆರೋಪಿಸಿದ ಅವರು, ಭಯೋತ್ಪಾದನೆ ನಿಗ್ರಹಕ್ಕೆ ಪ್ರಯತ್ನ ಮಾಡದೆ ಸರ್ಕಾರವು ಜನರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ ಎಂದು ತಿಳಿಸಿದರು.

ತರಬೇತಿ ಪಡೆದದವರೇ ರಾಮೇಶ್ವರಂ ಕೆಫೆ ಸ್ಫೋಟ ಮಾಡಿದ್ದಾರೆ. ಇದಕ್ಕೆ ಪೂರ್ವ ತಯಾರಿ ಮಾಡಿಕೊಂಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಬೇಕಿದ್ದ ಸರ್ಕಾರವು ತುಷ್ಟೀಕರಣದ ರಾಜಕಾರಣ ಮಾಡುತ್ತಿರುವಂತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್ ಇತಿಹಾಸದಲ್ಲಿ ವಿಭಿನ್ನ ಸಾಧನೆ ಮಾಡಿದ ಎಸ್​ಆರ್​​ಎಚ್​​ ಬೌಲರ್​ ಉನಾದ್ಕಟ್​

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಬೆಂಗಳೂರು ಉತ್ತರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಆಶಾ ರಾವ್, ಬೆಂಗಳೂರು ಕೇಂದ್ರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ರೇಖಾ ಗೋವಿಂದ ಮತ್ತು ಬಿಬಿಎಂಪಿ ಮಾಜಿ ಸದಸ್ಯೆ ಹೇಮಲತಾ ಶೇಟ್ ಉಪಸ್ಥಿತರಿದ್ದರು.

Continue Reading

Lok Sabha Election 2024

Lok Sabha Election 2024: ಪ್ರಜ್ವಲ್‌ ರೇವಣ್ಣ 40 ಕೋಟಿ ರೂ. ಒಡೆಯ; ಇದೆ ಕೆಜಿಗಟ್ಟಲೆ ಚಿನ್ನ!

Lok Sabha Election 2024: 40 ಕೋಟಿ 94 ಲಕ್ಷ ರೂ. ಮೌಲ್ಯರ ಚರ – ಸ್ಥಿರಾಸ್ಥಿಯನ್ನು ಪ್ರಜ್ವಲ್‌ ರೇವಣ್ಣ ಹೊಂದಿದ್ದಾರೆ. ಇದರಲ್ಲಿ 5.44 ಕೋಟಿ ರೂಪಾಯಿ ಚರ ಹಾಗೂ 35.40 ಕೋಟಿ ರೂಪಾಯಿ ಸ್ಥಿರ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯ 9.29 ಲಕ್ಷ ರೂಪಾಯಿ ನಗದು ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೆ, ಸರ್ಕಾರಕ್ಕೆ 3.04 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ತೆರಿಗೆ ಸಲ್ಲಿಕೆ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವ ಬಗ್ಗೆಯೂ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

VISTARANEWS.COM


on

Lok Sabha Election 2024 Prajwal Revanna gets Rs 40 crore worth asset
Koo

ಹಾಸನ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಒಬ್ಬೊಬ್ಬರೇ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ಗುರುವಾರ (ಮಾ. 28) ಹಾಸನ ಲೋಕಸಭಾ ಕ್ಷೇತ್ರಕ್ಕೆ (Hassan Lok Sabha constituency) ಜೆಡಿಎಸ್‌ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ (Prajwal Revanna) ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ 40.94 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ.

40 ಕೋಟಿ 94 ಲಕ್ಷ ರೂ. ಮೌಲ್ಯರ ಚರ – ಸ್ಥಿರಾಸ್ಥಿಯನ್ನು ಪ್ರಜ್ವಲ್‌ ರೇವಣ್ಣ ಹೊಂದಿದ್ದಾರೆ. ಇದರಲ್ಲಿ 5.44 ಕೋಟಿ ರೂಪಾಯಿ ಚರ ಹಾಗೂ 35.40 ಕೋಟಿ ರೂಪಾಯಿ ಸ್ಥಿರ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯ 9.29 ಲಕ್ಷ ರೂಪಾಯಿ ನಗದು ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವಿವಿಧ ಬ್ಯಾಂಕ್‌ಗಳ ಉಳಿತಾಯ ಖಾತೆಯಲ್ಲಿ 56 ಲಕ್ಷ ರೂ. ನಗದನ್ನು ಹೊಂದಿರುವ ಪ್ರಜ್ವಲ್‌ ರೇವಣ್ಣ, ಕಳೆದ ಐದು ವರ್ಷದಲ್ಲಿ ಕೃಷಿಯಿಂದ 2.75 ಕೋಟಿ ರೂಪಾಯಿ ಆದಾಯ ಗಳಿಸಿದ್ದಾರೆ. ಕೃಷಿಯೇತರ ಮೂಲದಿಂದ 1.33 ಕೋಟಿ ರೂಪಾಯಿ ಆದಾಯವನ್ನು ಗಳಿಕೆ ಮಾಡಿದ್ದಾರೆ.

ಬೆಂಗಳೂರಲ್ಲಿ ವಾಣಿಜ್ಯ ಮಳಿಗೆ

31 ಹಸು, ನಾಲ್ಕು ಎತ್ತು, ಒಂದು ಟ್ರ್ಯಾಕ್ಟರ್ ಅನ್ನು ಪ್ರಜ್ವಲ್ ರೇವಣ್ಣ ಹೊಂದಿದ್ದಾರೆ. ಬೆಂಗಳೂರು, ಮೈಸೂರು ಸೇರಿ ವಿವಿಧೆಡೆ ವಾಣಿಜ್ಯ ಕಟ್ಟಡಗಳನ್ನು ಸಹ ಇವರು ಹೊಂದಿದ್ದಾರೆ. ಹೊಳೆನರಸೀಪುರ ಹಾಗೂ ಬೆಂಗಳೂರಿನ ನೆಲಮಂಗಲದಲ್ಲಿ ಆಸ್ತಿ ಹೊಂದಿರುವ ಎಚ್‌.ಡಿ. ರೇವಣ್ಣ ಪುತ್ರ ಕೋಟಿಗಳ ಒಡೆಯರಾಗಿದ್ದಾರೆ.

ಇದನ್ನೂ ಓದಿ: Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

ಕುಟುಂಬದವರಿಂದ 4.48 ಕೋಟಿ ರೂ. ಸಾಲ

ಅತ್ತೆ ಅನುಸೂಯ ಅವರಿಂದ 22 ಲಕ್ಷ ರೂ., ಅತ್ತೆ ಶೈಲಜಾರಿಂದ 10 ಲಕ್ಷ ರೂಪಾಯಿ ಹಾಗೂ ಅಜ್ಜಿ ಚನ್ನಮ್ಮರಿಂದ 23 ಲಕ್ಷ ರೂಪಾಯಿ, ತಂದೆ ರೇವಣ್ಣ ಅವರಿಂದ 86 ಲಕ್ಷ ರೂಪಾಯಿ, ಸಹೋದರ ಡಾ. ಸೂರಜ್ ಅವರಿಂದ 1 ಕೋಟಿ ರೂಪಾಯಿ ಸಾಲವನ್ನು ಪ್ರಜ್ವಲ್‌ ರೇವಣ್ಣ ಪಡೆದಿದ್ದಾರೆ. ಒಟ್ಟು 4.48 ಕೋಟಿ ರೂಪಾಯಿ ಸಾಲವನ್ನು ಹೊಂದಿದ್ದಾಗಿ ಅಫಿಡವಿಟ್‌ನಲ್ಲಿ ಘೋಷಿಸಿದ್ದಾರೆ.

ಸರ್ಕಾರಕ್ಕೆ 3.04 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ತೆರಿಗೆ ಸಲ್ಲಿಕೆ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವ ಬಗ್ಗೆಯೂ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕೆಜಿಗಟ್ಟಲೆ ಚಿನ್ನ ಬೆಳ್ಳಿ ಹೊಂದಿರುವ ಪ್ರಜ್ವಲ್

ಪ್ರಜ್ವಲ್‌ ರೇವಣ್ಣ ಅವರ ಬಳಿ ಒಟ್ಟು 67 ಲಕ್ಷ ರೂಪಾಯಿ ಮೌಲ್ಯದ 1 ಕೆಜಿ 100 ಗ್ರಾಂ ಚಿನ್ನವಿದೆ. ಅಲ್ಲದೆ, 17.48 ಲಕ್ಷ ರೂಪಾಯಿ ಮೌಲ್ಯದ 23 ಕೆಜಿ ಬೆಳ್ಳಿ ಹಾಗೂ 1.90 ಲಕ್ಷ ರೂಪಾಯಿ ಮೌಲ್ಯದ ವಜ್ರದ ಆಭರಣವನ್ನು ಸಹ ಹೊಂದಿದ್ದಾರೆ.

Continue Reading
Advertisement
crime news
ಕ್ರೈಂ8 mins ago

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ಪಾಪಿ; ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

Women Slapped
ಪ್ರಮುಖ ಸುದ್ದಿ11 mins ago

Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

Tata Ace vehicle overturned Two persons dead five seriously injured
ಕರ್ನಾಟಕ25 mins ago

Road Accident: ಟಾಟಾ ಏಸ್ ವಾಹನ ಪಲ್ಟಿ; ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

Xiaomi Car in China
ಪ್ರಮುಖ ಸುದ್ದಿ1 hour ago

Xiaomi Car: ಎಲೆಕ್ಟ್ರಿಕ್​ ಕಾರು ಮಾರುಕಟ್ಟೆಗೆ ಇಳಿಸಿದ ಮೊಬೈಲ್ ಕಂಪನಿ ರೆಡ್​ಮಿ

viral video
ವೈರಲ್ ನ್ಯೂಸ್1 hour ago

Viral Video: ಶಾಲೆಗೆ ಕುಡಿದು ಬಂದ ಶಿಕ್ಷಕನಿಗೆ ʼಪಾಠʼ ಕಲಿಸಿದ ವಿದ್ಯಾರ್ಥಿಗಳು; ಹೇಗೆಂದು ನೀವೇ ನೋಡಿ

BJP State Vice President Malavika Avinash latest statement
ಬೆಂಗಳೂರು1 hour ago

Bengaluru News: ಭಯೋತ್ಪಾದನೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ: ಮಾಳವಿಕಾ ಅವಿನಾಶ್ ಟೀಕೆ

Lok Sabha Election 2024 Prajwal Revanna gets Rs 40 crore worth asset
Lok Sabha Election 20241 hour ago

Lok Sabha Election 2024: ಪ್ರಜ್ವಲ್‌ ರೇವಣ್ಣ 40 ಕೋಟಿ ರೂ. ಒಡೆಯ; ಇದೆ ಕೆಜಿಗಟ್ಟಲೆ ಚಿನ್ನ!

Uttara Kannada Lok Sabha constituency Congress candidate Dr Anjali Nimbalkar latest statement
ಉತ್ತರ ಕನ್ನಡ1 hour ago

Uttara Kannada News: ಚುನಾವಣೆಯನ್ನು ಸುಲಭವಾಗಿ ಪರಿಗಣಿಸದಿರಿ: ನಿಂಬಾಳ್ಕರ್

Rameswaram cafe bomb blast case
ಬೆಂಗಳೂರು2 hours ago

Rameswaram cafe: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ಮುಖ್ಯ ಸಂಚುಕೋರ NIA ಬಲೆಗೆ

Rajasthan Royals
ಪ್ರಮುಖ ಸುದ್ದಿ2 hours ago

IPL 2024 : ಬದಲಿ ಆಟಗಾರರನ್ನು ಘೋಷಿಸಿದ ರಾಜಸ್ಥಾನ್​ ರಾಯಲ್ಸ್​, ಕೆಕೆಆರ್​​

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20249 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202410 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ18 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌