Padma Awards 2023: ಮುಖ್ಯಮಂತ್ರಿಯಿಂದ ಪದ್ಮ ಪುರಸ್ಕೃತರ ಭೇಟಿ; ಸನ್ಮಾನ, ಅಭಿನಂದನೆ - Vistara News

ಕರ್ನಾಟಕ

Padma Awards 2023: ಮುಖ್ಯಮಂತ್ರಿಯಿಂದ ಪದ್ಮ ಪುರಸ್ಕೃತರ ಭೇಟಿ; ಸನ್ಮಾನ, ಅಭಿನಂದನೆ

Padma Awards 2023: ಕೇಂದ್ರ ಸರ್ಕಾರ ಘೋಷಿಸಿರುವ ಪದ್ಮ ಪ್ರಶಸ್ತಿ ಪುರಸ್ಕೃತರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖುದ್ದು ಅವರ ನಿವಾಸಕ್ಕೆ ತೆರಳಿ ಭೇಟಿ ಮಾಡಿದರು. ಬಳಿಕ ಅವರಿಗೆ ಸನ್ಮಾನಿಸಿ, ಅಭಿನಂದನೆಯನ್ನು ಸಲ್ಲಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಪದ್ಮಭೂಷಣ ಪ್ರಶಸ್ತಿಗೆ (Padma Awards 2023) ಆಯ್ಕೆಯಾಗಿರುವ ಕಾದಂಬರಿಕಾರ ಎಸ್.ಎಲ್.ಭೈರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಭೇಟಿಯಾಗಿ ಅಭಿನಂದಿಸಿದರು. ಕುವೆಂಪು ನಗರದ ಅವರ ನಿವಾಸಕ್ಕೆ ತೆರಳಿ ಅಭಿನಂದಿಸಿದ ಸಿಎಂ, ಇದೇ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಿದರು.

Padma Awards 2023

ಜತೆಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಿರಿಧಾನ್ಯ ತಜ್ಞ ಡಾ.ಖಾದರ್ ವಲ್ಲಿ, ಪ್ರಾಚ್ಯವಸ್ತು ಸಂಶೋಧನೆ ಹಿನ್ನೆಲೆಯಲ್ಲಿ ಪದ್ಮಶ್ರೀ ಪುರಸ್ಕೃತರಾದ ಮೈಸೂರಿನ ಎಸ್‌. ಸುಬ್ಬರಾಮನ್ ಅವರ ನಿವಾಸಕ್ಕೆ ಭೇಟಿ ನೀಡಿ ಸಿಎಂ ಅಭಿನಂದಿಸಿ ಸನ್ಮಾನಿಸಿದರು.

Padma Awards 2023

ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ್, ಶಾಸಕರಾದ ಎಸ್.ಎ. ರಾಮದಾಸ್, ಎಲ್.ನಾಗೇಂದ್ರ, ಸಂಸದ ಪ್ರತಾಪ ಸಿಂಹ, ಸಾಹಿತಿ ಪ್ರಧಾನ ಗುರುದತ್, ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮುಂದಿನ 3 ದಿನ ಏರುತ್ತೆ ಟೆಂಪ್ರೇಚರು

Temperature rising : ಒಂದೆಡೆ ಗರಿಷ್ಠ ತಾಪಮಾನ ಏರಿಕೆ ಆಗುತ್ತಿದ್ದರೆ, ಮತ್ತೊಂದು ಕಡೆ ಶಾಖ ತರಂಗಗಳು (Heat Wave) ಅಪ್ಪಿಳಿಸಿ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಇದು ಆರೋಗ್ಯದ ಮೇಲೂ ಪರಿಣಾಮ ಬೀರಲಿದ್ದು, ಹುಷಾರಾಗಿರಿ ಅಂತಿದ್ದಾರೆ ವೈದ್ಯರು.

VISTARANEWS.COM


on

By

Karnataka Weather
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬಿಸಿಲಿನ ಶಾಖಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಬರಿಗಾಲಿನಲ್ಲಿ ಏನಾದರೂ ಹೊರಗೆ ಕಾಲಿಟ್ಟರೆ ಸುಟ್ಟು ಹೋಗುವುದು ಗ್ಯಾರಂಟಿ. ಮುಂದಿನ ಮೂರು ದಿನಗಳು ತಾಪಮಾನ ಏರಿಕೆ (Temperature rising) ಆಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಇದರೊಟ್ಟಿಗೆ ಹೀಟ್‌ ವೇವ್‌ (Heat Wave Warning) ಎಚ್ಚರಿಕೆಯನ್ನು ನೀಡಲಾಗಿದೆ.

ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಣಹವೆ (Dry Weather) ಇರುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳು ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು 2-3 ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ. ಜತೆಗೆ ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಉಷ್ಣ ಅಲೆ ಪರಿಸ್ಥಿತಿ ಇರಲಿದೆ.

ರಾಜಧಾನಿ ಬೆಂಗಳೂರಲ್ಲಿ ನಿರ್ಮಲ ಆಕಾಶ ಇರಲಿದೆ. ಗರಿಷ್ಠ ಉಷ್ಣಾಂಶವು 36 ಹಾಗೂ ಕನಿಷ್ಠ ಉಷ್ಣಾಂಶವು 22 ಡಿ.ಸೆ ಇರಲಿದೆ. ಇದರಿಂದ ಬಿಸಿಲ ಧಗೆ ಹೆಚ್ಚಿರಲಿದೆ.

Karnataka Weather

ಕಾದ ಕೆಂಡವಾಗುತ್ತಿದೆ ಉತ್ತರ ಕರ್ನಾಟಕ

ಕರ್ನಾಟಕದಲ್ಲಿ ಒಣ ಹವೆ ಮುಂದುವರಿದಿದ್ದು, ಗರಿಷ್ಠ ಉಷ್ಣಾಂಶವು ಕಲಬುರಗಿಯಲ್ಲಿ 40.9 ಡಿ.ಸೆ ದಾಖಲಾಗಿತ್ತು. ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶವು 19.5 ಡಿ.ಸೆ ನಷ್ಟು ದಾಟಿತ್ತು. ಕೋಲಾರ ಜಿಲ್ಲೆಯಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 18.0 ಡಿ.ಸೆ ಹಾಗೂ ರಾಯಚೂರಿನಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 41.9 ಡಿ.ಸೆ ದಾಖಲಾಗಿದೆ.

karnataka Weather

ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್‌ನಿಂದ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ಬಾಗಲಕೋಟೆ ಮತ್ತು ಬಳ್ಳಾರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್‌ನಿಂದ 44 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಇದನ್ನೂ ಓದಿ: Karnataka Weather: 28 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ತಾಪಮಾನ; ಇನ್ನೊಂದು ವಾರ ಕಾದ ಕೆಂಡ

ಸಮ್ಮರ್‌ ಸೀಸನ್‌ನಲ್ಲಿ ಬದಲಾಯ್ತು ನೇಲ್‌ ಕಲರ್ಸ್‌ ಟ್ರೆಂಡ್‌


ಬೇಸಿಗೆ ಬಂದಾಯ್ತು, ಇನ್ನೇನಿದ್ದರೂ ಲೈಟ್‌ ಹಾಗೂ ಬ್ರೈಟ್‌ ನೇಲ್‌ ಕಲರ್‌ಗಳ ಹಾವಳಿ. ಯಾವ ಫ್ಯಾಷನ್‌ ಪ್ರಿಯ ಹೆಣ್ಮಕ್ಕಳನ್ನು ನೋಡಿದರೂ ಸಾಕು, ಟ್ರೆಂಡಿಯಾಗಿರುವ ನೇಲ್‌ ಕಲರ್‌ ಹಾಗೂ ಶೇಡ್‌ಗಳನ್ನು ಹಚ್ಚಿರುವ ಉಗುರುಗಳು ಮನ ಸೆಳೆಯುತ್ತವೆ. ಆ ಮಟ್ಟಿಗೆ ಈ ಬಾರಿ ಭಿನ್ನ-ವಿಭಿನ್ನ ಮಾನೋಕ್ರೋಮಾಟಿಕ್‌ ಶೇಡ್‌ಗಳು ಹಾಗೂ ಲೈಟ್‌ ವರ್ಣಗಳು ಬ್ಯೂಟಿ ಲೋಕಕ್ಕೆ ಕಾಲಿಟ್ಟಿವೆ.

Nail Colours

ಟ್ರೆಂಡ್‌ನಲ್ಲಿ ಕಾಲಿಟ್ಟ ನೇಲ್‌ ಬಣ್ಣಗಳು

ನನಗೆ ಅತಿಯಾಗಿರುವ ನೇಲ್‌ ಡಿಸೈನ್‌ ಬೇಡ. ನೋಡಲು ಆಕರ್ಷಕವಾಗಿ ಕಾಣಬೇಕು ಹಾಗೂ ಸಿಂಪಲ್ಲಾಗಿರಬೇಕು ಎನ್ನುವವರಿಗೆ ಈ ಸೀಸನ್‌ನ ಸಾಕಷ್ಟು ನೇಲ್‌ ಕಲರ್‌ಗಳು ಹೊಂದುತ್ತವೆ ಎನ್ನುವ ನೇಲ್‌ ಆರ್ಟಿಸ್ಟ್‌ ರಿಚಾ ಪ್ರಕಾರ, ಇವು ಡಿಫರೆಂಟ್‌ ಆಗಿ ಹಚ್ಚಿದಲ್ಲಿ ಮೋಡಲು ವಿಭಿನ್ನವಾಗಿ ಕಾಣುತ್ತವೆ. ಇದಕ್ಕೆ ಉದಾಹರಣೆ ಮಾನೋಕ್ರೋಮ್ಯಾಟಿಕ್‌ ನೇಲ್‌ ಡಿಸೈನ್‌ ಎನ್ನುತ್ತಾರೆ.

Nail Colours

ಕಲರ್‌ಫುಲ್‌ ನೇಲ್‌ ಶೇಡ್ಸ್

ಸಾವಿರಗಟ್ಟಲೇ ಕೊಟ್ಟು ನೇಲ್‌ ಆರ್ಟ್ ಮಾಡಿಸಲು ಸಾಧ್ಯವಾಗದು ಎನ್ನುವವರಿಗೆ ಈ ನೇಲ್‌ ಶೇಡ್ಸ್ ಹೊಸ ಲುಕ್‌ ನೀಡುತ್ತವೆ ಎನ್ನಬಹುದು. ಹಚ್ಚುವವರ ಕ್ರಿಯಾತ್ಮಕತೆ ಮೇಲೆ ಡಿಪೆಂಡ್‌ ಆಗುತ್ತದೆ ಎನ್ನುತ್ತಾರೆ ನೇಲ್‌ ಆರ್ಟ್ ಡಿಸೈನರ್‌. ಇನ್ನು ಇದೀಗ ಒಂದೊಂದು ಉಗುರುಗಳಿಗೂ ಒಂದೊಂದು ಬಗೆಯ ಬಣ್ಣ ಹಚ್ಚುವುದು ಕೂಡ ಫ್ಯಾಷನ್‌ ಆಗಿದೆ. ಇದರೊಂದಿಗೆ ಇದೀಗ ಈ ಬಣ್ಣಗಳನ್ನು ಅಡ್ಡಡ್ಡ, ಉದ್ದುದ್ದವಾಗಿ ಹಚ್ಚುವ ಫ್ಯಾಷನ್‌ ಕೂಡ ಆರಂಭವಾಗಿದೆಯಂತೆ ಎನ್ನುತ್ತಾರೆ. ಇನ್ನು ಯಾವುದೇ ನೇಲ್‌ ವರ್ಣಗಳು ಚೆನ್ನಾಗಿ ಕಾಣಬೇಕೆಂದಲ್ಲಿ ಒಂದಿಷ್ಟು ಸಲಹೆಗಳನ್ನು ಪಾಲಿಸಲೇಬೇಕು ಎಂಬುದು ಬ್ಯೂಟಿ ಎಕ್ಸ್ಪಟ್ರ್ಸ್ ಅಭಿಪ್ರಾಯ. ಇದಕ್ಕಾಗಿ ಉಗುರುಗಳಿಗೆ ಆಕಾರ ನೀಡುವುದು ಅಗತ್ಯ ಎನ್ನುತ್ತಾರೆ.

red Nail Colour

ಮರೆಯಾದ ನೇಲ್‌ ಶೇಡ್ಸ್‌

ಬೋಲ್ಡ್‌ ಕಲರ್‌ಗಳಾದ ಬರ್ಗ್ಯಾಂಡಿ, ರೆಡ್‌ವೈನ್‌, ಶೇಡಿ ಬ್ಲಾಕ್‌, ಗೋಲ್ಡನ್‌ ಟ್ರೆಂಡಿ ಕಲರ್‌ಗಳು ಕಳೆದ ಸಾಲಿಗೆ ಕೊನೆಯಾಗಿವೆ. ಆದರೆ, ಮೆಟಾಲಿಕ್‌ ಕಲರ್ಸ್‌ ಈ ಸೀಸನ್‌ನ ನೇಲ್‌ ಫ್ಯಾಷನ್‌ನಲ್ಲಿಮಾತ್ರವಲ್ಲ, ಈ ಸಾಲಿಗೂ ಮುಂದುವರೆದಿವೆ. ನೀಲಿ, ಹಸಿರು, ಗೋಲ್ಡ್‌, ಸಿಲ್ವರ್‌ ಕಲರ್‌ಗಳು ಕಾಂಟ್ರಾಸ್ಟ್‌ ಮ್ಯಾಚ್‌ನೊಂದಿಗೆ ಮುಂದುವರೆದಿವೆ ಎನ್ನುತ್ತಾರೆ ನೇಲ್‌ ಆರ್ಟ್ ಡಿಸೈನರ್‌ ರಕ್ಷಾ.

Nail Colour at Nails Salon

ನೇಲ್‌ ಕಲರ್ಸ್ ಪ್ರಿಯರಿಗೆ ಟಿಪ್ಸ್‌

  • ನಿಮ್ಮ ಸ್ಕಿನ್‌ ಟೋನ್‌ಗೆ ಮ್ಯಾಚ್‌ ಆಗುವುದನ್ನು ಆಯ್ಕೆ ಮಾಡಿ.
  • ಪ್ರತಿ ಬಾರಿ ರಿಮೂವರ್‌ನಿಂದ ಹಳೆಯದ್ದನ್ನು ಅಳಿಸಿ.
  • ಡಬ್ಬಲ್‌ ಶೇಡ್ಸ್‌ ಹಚ್ಚಿ, ಹೊಸ ಲುಕ್‌ ನೀಡಿ.
  • ಅಲಂಕಾರಕ್ಕೆ ಸ್ಟಿಕ್ಕರ್‌ ಕ್ರಿಸ್ಟಲ್‌ ಬಳಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Blast in Bangalore : ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತರ ಸುಳಿವು ಕೊಟ್ಟರೆ 10 ಲಕ್ಷ ರೂ. ಇನಾಮು; ಇಲ್ಲಿದೆ ಉಗ್ರರ ಪೋಟೊ ಸಮೇತ ವಿವರ

Blast in Bangalore: ಸ್ಫೋಟ ನಡೆಸಿದ ಪ್ರಮುಖ ಆರೋಪಿಯನ್ನು ಮುಸ್ಸಾವಿರ್ ಶಾಜಿಬ್ ಹುಸೇನ್ ಎಂದು ತನಿಖಾ ಸಂಸ್ಥೆ ಗುರುತಿಸಿದ್ದು, ರಾಮೇಶ್ವರಂ ಕೆಫೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಎನ್ಐಎ ಪ್ರಕಾರ, ಆತ ಸುಮಾರು 6 ಅಡಿ 2 ಇಂಚು ಎತ್ತರವಿರುವ 30 ವರ್ಷದ ವ್ಯಕ್ತಿ. ಬಾಲಕರ ಹಾಸ್ಟೆಲ್, ಪಿಜಿ ಅಥವಾ ಯಾವುದೇ ಕಡಿಮೆ ಬಜೆಟ್ ಹೋಟೆಲ್​ಗಳಲ್ಲಿ ವಾಸಿಸುತ್ತಿದ್ದು, ಮೊಹಮ್ಮದ್ ಜುನೇದ್ ಸಯೀದ್ ಹೆಸರಿನಲ್ಲಿ ನಕಲಿ ಚಾಲನಾ ಪರವಾನಗಿ ಬಳಸುತ್ತಿದ್ದಾನೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ. ಆರೋಪಿ ತನ್ನ ಮೂಲ ಗುರುತನ್ನು ಮರೆಮಾಚಲು ಮುಖಗವಸು, ನಕಲಿ ಗಡ್ಡ ಅಥವಾ ವಿಗ್ ಧರಿಸುತ್ತಾನೆ ಎಂದು ಹೇಳಿದೆ.

VISTARANEWS.COM


on

Mussavir Hussain
Koo

ಬೆಂಗಳೂರು : ನಗರದ ರಾಮೇಶ್ವರಂ ಕೆಫೆ ಸ್ಫೋಟ (Blast in Bangalore) ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿದ ಬಳಿಕ, ತಲೆಮರೆಸಿಕೊಂಡಿರುವ ಇತರ ಇಬ್ಬರು ಆರೋಪಿಗಳ ಬಗ್ಗೆ ಯಾವುದೇ ರೀತಿಯ ಮಾಹಿತಿ ನೀಡುವವರಿಗೆ 10 ಲಕ್ಷ ರೂ.ಗಳ ನಗದು ಬಹುಮಾನವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶುಕ್ರವಾರ ಘೋಷಿಸಿದೆ. ಪತ್ತೆ ಮಾಡುವ ಉದ್ದೇಶಕ್ಕಾಗಿ ಎನ್​ಐಎ ಇಬ್ಬರೂ ಶಂಕಿತರ ಮೂಲ ವಿವರಗಳನ್ನು ನೀಡಿದೆ ಮತ್ತು ಆರೋಪಿಗಳನ್ನು ಬಂಧಿಸಲು ಸಾರ್ವಜನಿಕರ ನೆರವು ಕೋರಿದೆ.

ಸ್ಫೋಟ ನಡೆಸಿದ ಪ್ರಮುಖ ಆರೋಪಿಯನ್ನು ಮುಸ್ಸಾವಿರ್ ಶಾಜಿಬ್ ಹುಸೇನ್ ಎಂದು ತನಿಖಾ ಸಂಸ್ಥೆ ಗುರುತಿಸಿದ್ದು, ಆತನ ಚಲನವಲನಗಳು ರಾಮೇಶ್ವರಂ ಕೆಫೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಎನ್ಐಎ ಪ್ರಕಾರ, ಆತ ಸುಮಾರು 6 ಅಡಿ 2 ಇಂಚು ಎತ್ತರವಿರುವ 30 ವರ್ಷದ ವ್ಯಕ್ತಿ. ಬಾಲಕರ ಹಾಸ್ಟೆಲ್, ಪಿಜಿ ಅಥವಾ ಯಾವುದೇ ಕಡಿಮೆ ಬಜೆಟ್ ಹೋಟೆಲ್​ಗಳಲ್ಲಿ ವಾಸಿಸುತ್ತಿದ್ದಾನೆ. ಮೊಹಮ್ಮದ್ ಜುನೇದ್ ಸಯೀದ್ ಹೆಸರಿನಲ್ಲಿ ನಕಲಿ ಚಾಲನಾ ಪರವಾನಗಿ ಬಳಸುತ್ತಿದ್ದಾನೆ ಎಂದೂ ತನಿಖಾಧಿಕಾರಿಗಳು ಹೇಳಿದ್ದಾರೆ. ಆರೋಪಿ ತನ್ನ ಮೂಲ ಗುರುತನ್ನು ಮರೆಮಾಚಲು ಮುಖಗವಸು, ನಕಲಿ ಗಡ್ಡ ಅಥವಾ ವಿಗ್ ಧರಿಸುತ್ತಾನೆ ಎಂದು ಹೇಳಿದೆ.

ಇದನ್ನೂ ಓದಿ: Juice Jacking: ಸಾರ್ವಜನಿಕ ಸ್ಥಳಗಳ ಮೊಬೈಲ್​ ಚಾರ್ಜರ್​ ಬಳಸುವಾಗ ಎಚ್ಚರಿಕೆ; ಸೈಬರ್ ಕಳ್ಳರಿದ್ದಾರೆ!

ಸ್ಫೋಟದ ಇನ್ನೋರ್ವ ಆರೋಪಿ ಅಬ್ದುಲ್ ಮತೀನ್ ಅಹ್ಮದ್ ತಾಹಾ, ಸ್ಫೋಟ ನಡೆಸಲು ಮುಸ್ಸಾವಿರ್​ಗೆ ಸಹಾಯ ಮಾಡಿದ್ದನೆಂದು ಹೇಳಲಾಗಿದ್ದು, ಆತನಿಗೂ ಹುಡುಕಾಟ ನಡೆಯುತ್ತಿದೆ. ಈತ ತನ್ನ ಮೂಲ ಗುರುತನ್ನು ಮರೆಮಾಚಲು ವಿಘ್ನೇಶ್ ಡಿ ಮತ್ತು ಸುಮಿತ್ ಎಂಬ ಹಿಂದೂ ಹೆಸರನ್ನೂ ಬಳಸುತ್ತಿದ್ದಾನೆ ಎಂದು ಎನ್​​ಐಎ ಹೇಳಿದೆ. ಆತ ಬಹುಶಃ ಹುಡುಗರ ಹಾಸ್ಟೆಲ್ ಗಳು, ಪಿಜಿಗಳು ಅಥವಾ ಯಾವುದೇ ಕಡಿಮೆ ಬಜೆಟ್ ಹೋಟೆಲ್ ಗಳಲ್ಲಿ ವಾಸಿಸುತ್ತಿದ್ದಾನೆ ಎಂದು ಹೇಳಿದ್ದಾರೆ. ಇಬ್ಬರೂ ಆರೋಪಿಗಳು ತೀರ್ಥಹಳ್ಳಿ ಮೂಲದವರು.

ಪ್ರಕರಣದ ಆರೋಪಿಗಳ ಬಗ್ಗೆ ವಿವರಗಳನ್ನು ನೀಡುವವರಿಗೆ ಎನ್ಐಎ ಈ ಹಿಂದೆಯೂ 10 ಲಕ್ಷ ರೂ.ಗಳ ಬಹುಮಾನ ಘೋಷಿಸಿತ್ತು. ಶಂಕಿತರ ರೇಖಾಚಿತ್ರಗಳನ್ನು ಈ ಹಿಂದೆ ಬಿಡುಗಡೆ ಮಾಡಿತ್ತು. ಮಾರ್ಚ್ 1 ರಂದು ರೆಸ್ಟೋರೆಂಟ್​ನಲ್ಲಿ ಸಂಭವಿಸಿದ ಐಇಡಿ ಸ್ಫೋಟದ ಸಹ ಸಂಚುಕೋರ ಮುಜಮ್ಮಿಲ್ ಶರೀಪ್​ನನ್ನು ಎನ್ಐಎ ಗುರುವಾರ ಬಂಧಿಸಿದೆ. ಸ್ಫೋಟ ಸಂಭವಿಸಿದ ನಂತರ ಕಳೆದ ತಿಂಗಳಲ್ಲಿ ಎನ್ಐಎ ನಡೆಸಿದ ಮೊದಲ ಬಂಧನ ಇದಾಗಿದೆ.

Continue Reading

ಕೊಪ್ಪಳ

Koppala News: ಮತಗಟ್ಟೆಗಳಲ್ಲಿ ಮೂಲಸೌಕರ್ಯ ಕಲ್ಪಿಸಿ; ಜಿ.ಪಂ‌ ಉಪಕಾರ್ಯದರ್ಶಿ

Koppala News: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಹಿನ್ನಲೆಯಲ್ಲಿ ಕನಕಗಿರಿ ತಾಲೂಕಿನ ಹಿರೇಖೇಡಾ ಗ್ರಾ.ಪಂ ವ್ಯಾಪ್ತಿಯ ಮತಗಟ್ಟೆಗಳನ್ನು ಜಿ.ಪಂ‌ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಗುರುವಾರ ಪರಿಶೀಲನೆ ನಡೆಸಿದರು.

VISTARANEWS.COM


on

Provide infrastructure in polling booths says ZP Deputy Secretary Mallikarjuna thodalabagi
Koo

ಕನಕಗಿರಿ: ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದಲ್ಲಿರುವ ಎಲ್ಲಾ ಮತಗಟ್ಟೆಗಳಲ್ಲಿ ಮೂಲಸೌಕರ್ಯ (Infrastructure) ಕಲ್ಪಿಸಲು ಅಧಿಕಾರಿಗಳಿಗೆ ಜಿ.ಪಂ‌ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ (Koppala News) ಸೂಚಿಸಿದರು.

ಇದನ್ನೂ ಓದಿ: Utthana Essay Competition 2023: ಉತ್ಥಾನ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬೆಂಗಳೂರಿನ ಕಾವ್ಯಜೋಗಿ ಪ್ರಥಮ

ತಾಲೂಕಿನ ಹಿರೇಖೇಡಾ ಗ್ರಾ.ಪಂ ವ್ಯಾಪ್ತಿಯ ಮತಗಟ್ಟೆಗಳನ್ನು ಗುರುವಾರ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಮತಗಟ್ಟೆಗಳಲ್ಲಿ ಮೂಲಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ವ್ಯವಸ್ಥೆ ಕಲ್ಪಿಸಲು ತಿಳಿಸಿದರು. ಜತೆಗೆ ಎಲ್ಲಾ ಮತಗಟ್ಟೆಗಳಿಗೆ ನಂಬರ್ ಹಾಗೂ ಸಹಾಯವಾಣಿ ಸಂಖ್ಯೆಯನ್ನು ಬರೆಸಲು ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಗ್ರಾ.ಪಂ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಕಾಮಗಾರಿಗಳಾದ ದನದ ಶೆಡ್, ಸಿಸಿ ರಸ್ತೆ, ಚರಂಡಿ ಕಾಮಗಾರಿಗಳನ್ನು ಈ ವೇಳೆ ವೀಕ್ಷಿಸಿದರು.

ಇದನ್ನೂ ಓದಿ: Income Tax : ತೆರಿಗೆ ಉಳಿತಾಯ ಮಾಡಲು ಇನ್ನೆರಡೇ ದಿನ ಅವಕಾಶ, ಏನೇನು ಮಾಡಬಹುದು ಇನ್ನು?

ಈ ಸಂದರ್ಭದಲ್ಲಿ ತಹಸೀಲ್ದಾರ್ ವಿಶ್ವನಾಥ ಮುರುಡಿ, ತಾ.ಪಂ ಇಒ ಎಲ್.ವಿರೇಂದ್ರಕುಮಾರ್, ಸಹಾಯಕ ನಿರ್ದೇಶಕ (ಗ್ರಾ.ಉ) ಚಂದ್ರಶೇಖರ್ ಕಂದಕೂರ್, ಗ್ರಾ.ಪಂ ಪಿಡಿಒ ಯು.ಮಲ್ಲಿಕಾರ್ಜುನ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.

Continue Reading

ಬೆಂಗಳೂರು

Bengaluru News: ಸಿಎಸ್‌ಆರ್‌ ಮಹತ್ವದ ಸಾಧನೆಗಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ಗೆ ಪ್ರಶಂಸೆ

Bengaluru News: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ತನ್ನ ಅತ್ಯುತ್ತಮ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ) ಕಾರ್ಯಗಳಿಗೆ ಈಚೆಗೆ ನಡೆದ 18 ನೇ ಸಿಐಐ-ಐಟಿಸಿ ಸಸ್ಟೈನಬಲ್ ಅವಾರ್ಡ್ ಸಮಾರಂಭದ ’ಮಹತ್ವದ ಸಾಧನೆಗೆ ಪ್ರಶಂಸೆ”ವಿಭಾಗದಲ್ಲಿ ಗುರುತಿಸಿಕೊಂಡಿದೆ.

VISTARANEWS.COM


on

18th CII ITC Sustainable Award Ceremony
Koo

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ತನ್ನ ಅತ್ಯುತ್ತಮ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ) ಕಾರ್ಯಗಳಿಗೆ ಈಚೆಗೆ ನಡೆದ 18ನೇ ಸಿಐಐ-ಐಟಿಸಿ ಸಸ್ಟೈನಬಲ್ ಅವಾರ್ಡ್ ಸಮಾರಂಭದ ’ಮಹತ್ವದ ಸಾಧನೆಗೆ ಪ್ರಶಂಸೆ” ವಿಭಾಗದಲ್ಲಿ (Bengaluru News) ಗುರುತಿಸಿಕೊಂಡಿದೆ.

ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ (ಟಿಕೆಎಂ) ನ ಸಿಎಸ್‌ಆರ್ ಚಟುವಟಿಕೆಗಳನ್ನು ಸಿಐಐ-ಐಟಿಸಿ ಮೌಲ್ಯಮಾಪಕರು ಹಲವು ಮಾನದಂಡಗಳ ಆಧಾರದಲ್ಲಿ ಮೌಲ್ಯಮಾಪನ ಮಾಡಲಾಗಿದ್ದು, ಎಲ್ಲಾ ಸಿಎಸ್‌ಆರ್ ಯೋಜನೆಗಳಲ್ಲಿ ಅಳವಡಿಸಿಕೊಂಡ ಕಲಿಕೆ ಮತ್ತು ಇನ್ನೋವೇಷನ್‌ಗಳು ಇದರಲ್ಲಿ ಸೇರಿವೆ. ಕಂಪನಿಯ ಸಾಮಾಜಿಕ ಕಾರ್ಯಕ್ರಮಗಳು ಈ ಮಾನದಂಡಗಳಿಗೆ ಅನುಗುಣವಾಗಿ ಅನುಷ್ಠಾನವಾಗಿವೆ. ಇದಲ್ಲದೆ, ಟಿಕೆಎಂ ತನ್ನ ಸಿಎಸ್‌ಆರ್ ಅನುಷ್ಠಾನದ ಭಾಗವಾಗಿ, ಪರಿಣಾಮಗಳನ್ನು ಸಕ್ರೀಯವಾಗಿ ಮೇಲ್ವಿಚಾರಣೆ ಮಾಡುವುದು ಮತ್ತು ಸಮಗ್ರ ಅಧ್ಯಯನ, ವಸ್ತುನಿಷ್ಠತೆ, ವಿಶ್ವಾಸಾರ್ಹತೆ ಮತ್ತು ಅನುಷ್ಠಾನದ ಬದ್ಧತೆಯನ್ನು ಬೋರ್ಡ್ ಮಟ್ಟದ ಸಿಎಸ್‌ಆರ್ ಸಮಿತಿಯ ಮೇಲ್ವಿಚಾರಣೆಗೆ ಒಳಪಡಲಿದ್ದು, ಮೌಲ್ಯಮಾಪನವನ್ನೂ ಸಹ ಮಾಡಲಾಗುತ್ತದೆ.

ಹಲವು ವರ್ಷಗಳಲ್ಲಿ ಕಂಪನಿಯು ತನ್ನ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಲು ಮತ್ತು ಸುಸ್ಥಿರ ಕಾರ್ಯಕ್ರಮಗಳ ಮೂಲಕ ಸಮುದಾಯ ವರ್ಧನೆ ಮತ್ತು ಪರಿಸರ ನಿರ್ವಹಣೆಯನ್ನು ಹೆಚ್ಚಿಸಲು ವಿಶೇಷ ಮೌಲ್ಯಮಾಪನ ಸಾಧನ ಮತ್ತು ವ್ಯವಸ್ಥೆಗಳನ್ನು ಜಾರಿಗೆ ತಂದಿದೆ.

ಇದನ್ನೂ ಓದಿ: Income Tax : ತೆರಿಗೆ ಉಳಿತಾಯ ಮಾಡಲು ಇನ್ನೆರಡೇ ದಿನ ಅವಕಾಶ, ಏನೇನು ಮಾಡಬಹುದು ಇನ್ನು?

ಟಿಕೆಎಂನ ಸಿಎಸ್‌ಆರ್ “ಸಮುದಾಯಗಳನ್ನು ಸಬಲೀಕರಣಗೊಳಿಸುವುದು” ಮತ್ತು “”ಪರಿಸರವನ್ನು ಸಮೃದ್ಧಗೊಳಿಸುವುದು” ಎಂಬ ಎರಡು ಅಂಶಗಳನ್ನು ಒಳಗೊಂಡಿದ್ದು, ನಾವೀನ್ಯತೆಯಿಂದ ಚಾಲನೆ ಪಡೆದುಕೊಳ್ಳುವ ಮತ್ತು ನಿರಂತರ ಸುಧಾರಣೆ ತತ್ವದಿಂದ ಮಾರ್ಗದರ್ಶನ ಪಡೆದ ಟಿಕೆಎಂನ ಸಿಎಸ್‌ಆರ್ ಯೋಜನೆಗಳು ಕೌಶಲ್ಯ ಅಭಿವೃದ್ಧಿ, ರಸ್ತೆ ಸುರಕ್ಷತೆ, ಶಿಕ್ಷಣ, ಪರಿಸರ, ಆರೋಗ್ಯ ಮತ್ತು ನೈರ್ಮಲ್ಯ ಮತ್ತು ವಿಪತ್ತು ನಿರ್ವಹಣೆ ಎಂಬ ಆರು ಪ್ರಮುಖ ಕ್ಷೇತ್ರಗಳಲ್ಲಿ ಅನುಷ್ಠಾನಗೊಳ್ಳುತ್ತವೆ. ಟಿಕೆಎಂನ ಸುಸ್ಥಿರ ಸಿಎಸ್‌ಆರ್ ಮಾದರಿಯು ಸಮುದಾಯ ಮಾಲೀಕತ್ವ, ಏಕೀಕೃತ ಮಧ್ಯಸ್ಥಿಕೆಗಳು, ವರ್ತನೆಯ ಬದಲಾವಣೆಗಳು (Behavior Changes) ಮತ್ತು ಭಾಗೀದಾರರ ಪಾಲ್ಗೊಳ್ಳುವಿಕೆಯನ್ನು ಸಾರಿ ಹೇಳಿದೆ.

ಟಿಕೆಎಂನ ಕಾರ್ಪೊರೇಟ್ ವ್ಯವಹಾರಗಳು ಮತ್ತು ಆಡಳಿತದ ಕಂಟ್ರಿ ಹೆಡ್ ಮತ್ತು ಕಾರ್ಯನಿರ್ವಾಹಕ ಉಪಾಧ್ಯಕ್ಷ ವಿಕ್ರಮ್ ಗುಲಾಟಿ ಈ ಕುರಿತು ಮಾತನಾಡಿ, “18 ನೇ ಸಿಐಐ-ಐಟಿಸಿ ಸುಸ್ಥಿರತೆ ಪ್ರಶಸ್ತಿಯನ್ನು ಸ್ವೀಕರಿಸಲು ನಮಗೆ ಗೌರವವಿದೆ. ವ್ಯಾಪಾರ ಬೆಳವಣಿಗೆ ಮತ್ತು ಸಾಮಾಜಿಕ ಪ್ರಗತಿಯ ನಡುವೆ ಇರುವ ಬಲವಾದ ಸಂಪರ್ಕ ಮತ್ತು ಪಾಲ್ಗೊಳ್ಳುವಿಕೆಯನ್ನು ನಾವು ದೃಢವಾಗಿ ನಂಬುತ್ತೇವೆ. ಶಾಶ್ವತ ಮಧ್ಯಸ್ಥಿಕೆಗಳ ಮೇಲೆ ಗಮನ ಹರಿಸಿರುವ ನಾವು ವಿಶೇಷವಾಗಿ ಚೈಲ್ಡ್ ಟು ಕಮ್ಯೂನಿಟಿ ವಿಧಾನದ ಮೂಲಕ ಸಕಾರಾತ್ಮಕ ವರ್ತನೆಯ ಬದಲಾವಣೆಗಳನ್ನು ಹೆಚ್ಚಿಸಲು ಮುಂದಾಗಿದ್ದೇವೆ.

ಇದನ್ನೂ ಓದಿ: Utthana Essay Competition 2023: ಉತ್ಥಾನ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬೆಂಗಳೂರಿನ ಕಾವ್ಯಜೋಗಿ ಪ್ರಥಮ

ಸಮಾಜದೊಂದಿದೆ ಸಕ್ರೀಯವಾಗಿ ತೊಡಗಿಸಿಕೊಳ್ಳುವುದು, ಅವರ ಅಗತ್ಯಗಳು, ಆಕಾಂಕ್ಷೆಗಳು ಮತ್ತು ಸವಾಲುಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಸುಸ್ಥಿರತೆಯೊಂದಿಗೆ ಅವರು ಎದುರಿಸುತ್ತಿರುವ ನಿರ್ದಿಷ್ಟ ಸಮಸ್ಯೆಗಳನ್ನು ಪರಿಹರಿಸಲು ಉತ್ತಮ ಚಿಂತನೆಯ ಕಾರ್ಯಕ್ರಮಗಳನ್ನು ರೂಪಿಸುವುದು ನಮ್ಮ ನಿರಂತರ ಪ್ರಯತ್ನಗಳಾಗಿವೆ ಎಂದು ತಿಳಿಸಿದ್ದಾರೆ.

ದೀರ್ಘಕಾಲೀನ ಕಾರ್ಯತಂತ್ರ ಯೋಜನೆಯನ್ನು ಅಳವಡಿಸಿಕೊಳ್ಳುವ ಮೂಲಕ ಸಹಯೋಗ ಮತ್ತು ಬೆಂಬಲಕ್ಕಾಗಿ ಮಧ್ಯಸ್ಥಗಾರರನ್ನು ತೊಡಗಿಸಿಕೊಳ್ಳುವುದು, ಸಮಯೋಚಿತ ಯೋಜನೆಯ ಕಾರ್ಯಗತಗೊಳಿಸುವಿಕೆ, ಯೋಜನೆಯ ಪ್ರಗತಿಯನ್ನು ಪತ್ತೆಹಚ್ಚಲು ಪರಿಣಾಮಕಾರಿ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಕಾರ್ಯವಿಧಾನಗಳನ್ನು ಜಾರಿಗೆ ತರುವ ಮೂಲಕ ಸಿಎಸ್‌ಆರ್‌ನಲ್ಲಿ ಸುಸ್ಥಿರತೆಯನ್ನು ಸಾಧಿಸುವಲ್ಲಿ ಟಿಕೆಎಂ ಯಶಸ್ವಿಯಾಗಿದೆ.

ಸಮುದಾಯದಲ್ಲಿ ಅರ್ಥಪೂರ್ಣ ಸಕಾರಾತ್ಮಕ ಬದಲಾವಣೆಯನ್ನು ತರುವ ಟೊಯೋಟಾದ ಬದ್ಧತೆಯನ್ನು ಈ ಪ್ರಶಸ್ತಿ ಪುನರುಚ್ಚರಿಸುತ್ತದೆ. ಈವರೆಗೆ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ನಾವು 2.3 ದಶಲಕ್ಷಕ್ಕೂ ಹೆಚ್ಚು ಫಲಾನುಭವಿಗಳನ್ನು ತಲುಪಿದ್ದೇವೆ. ನಾವು ವಿಕಸನ ಮತ್ತು ಹೊಂದಿಕೊಳ್ಳುವುದನ್ನು ಮುಂದುವರೆವರೆಸುತ್ತೇವೆ. ಸಾಮಾಜಿಕ ಅಭಿವೃದ್ಧಿಗೆ ಬಲವಾದ ಮತ್ತು ಅರ್ಥಪೂರ್ಣ ಮಧ್ಯಸ್ಥಿಕೆಯ ಮೂಲಕ ನಮ್ಮ ಎಲ್ಲಾ ಸಿಎಸ್‌ಆರ್ ಯೋಜನೆಗಳಿಗೆ ಗರಿಷ್ಠ ಸಂಪನ್ಮೂಲ ಹಂಚಿಕೆ ಮತ್ತು ಪರಿಣಾಮಕಾರಿ ಅನುಷ್ಠಾನಕ್ಕೆ ನಾವು ಬದ್ಧರಾಗಿದ್ದೇವೆ.

ಇದನ್ನೂ ಓದಿ: Heat Stroke: ನೀರು ಕುಡಿದು ತಂಪಾಗಿರಿ, ಹೀಟ್‌ ಸ್ಟ್ರೋಕ್‌ ತಪ್ಪಿಸಿಕೊಳ್ಳಿ

ಜಾಗತಿಕ ದೃಷ್ಟಿಕೋನದಲ್ಲಿ ಬೇರೂರಿರುವ ಟಿಕೆಎಂನ ಸಿಎಸ್‌ಆರ್ ಕಾರ್ಯಕ್ರಮಗಳು ಸ್ಥಿತಿಸ್ಥಾಪಕ ಮತ್ತು ಸುಸ್ಥಿರ ಸಮಾಜವನ್ನು ಬೆಳೆಸಲು ಸಮರ್ಪಿತವಾಗಿವೆ ಎಂದು ಅವರು ತಿಳಿಸಿದ್ದಾರೆ.

Continue Reading
Advertisement
Karnataka Weather
ಮಳೆ5 mins ago

Karnataka Weather : ಮುಂದಿನ 3 ದಿನ ಏರುತ್ತೆ ಟೆಂಪ್ರೇಚರು

Mussavir Hussain
ಪ್ರಮುಖ ಸುದ್ದಿ8 mins ago

Blast in Bangalore : ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತರ ಸುಳಿವು ಕೊಟ್ಟರೆ 10 ಲಕ್ಷ ರೂ. ಇನಾಮು; ಇಲ್ಲಿದೆ ಉಗ್ರರ ಪೋಟೊ ಸಮೇತ ವಿವರ

Provide infrastructure in polling booths says ZP Deputy Secretary Mallikarjuna thodalabagi
ಕೊಪ್ಪಳ10 mins ago

Koppala News: ಮತಗಟ್ಟೆಗಳಲ್ಲಿ ಮೂಲಸೌಕರ್ಯ ಕಲ್ಪಿಸಿ; ಜಿ.ಪಂ‌ ಉಪಕಾರ್ಯದರ್ಶಿ

18th CII ITC Sustainable Award Ceremony
ಬೆಂಗಳೂರು12 mins ago

Bengaluru News: ಸಿಎಸ್‌ಆರ್‌ ಮಹತ್ವದ ಸಾಧನೆಗಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ಗೆ ಪ್ರಶಂಸೆ

Car collided with electric pole The photographer died on the spot
ಕ್ರೈಂ14 mins ago

Road Accident: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ; ಫೋಟೋಗ್ರಾಫರ್‌ ಸ್ಥಳದಲ್ಲೇ ಸಾವು

Ash Gourd Juice Benefits
ಆರೋಗ್ಯ15 mins ago

Ash Gourd Juice Benefits: ಬೂದುಕುಂಬಳಕಾಯಿ ಜ್ಯೂಸ್‌ ಕುಡಿಯುವುದರಿಂದ ಆಗುವ 10 ಪ್ರಯೋಜನಗಳಿವು

Lok Sabha Election 2024
ಕರ್ನಾಟಕ16 mins ago

Lok Sabha Election 2024: ಜೆಡಿಎಸ್ ಪಟ್ಟಿ ಬಿಡುಗಡೆ; ಮಂಡ್ಯದಿಂದ ಎಚ್‌ಡಿಕೆ, ಕೋಲಾರ, ಹಾಸನಕ್ಕೆ ಯಾರು?

Lok Sabha Election 2024 Women are only for cook says Shamanur Shivashankarappa and Gayatri says women knows how to fly in the sky
Lok Sabha Election 202417 mins ago

Lok Sabha Election 2024: ಮಹಿಳೆಯರು ಅಡುಗೆ ಮಾಡಲು ಲಾಯಕ್ಕು ಎಂದ ಶಾಮನೂರು; ಆಕಾಶದಲ್ಲಿ ಹಾರಾಡೋಕೂ ಗೊತ್ತೆಂದ ಗಾಯತ್ರಿ

Juce Jacking
ಪ್ರಮುಖ ಸುದ್ದಿ31 mins ago

Juice Jacking: ಸಾರ್ವಜನಿಕ ಸ್ಥಳಗಳ ಮೊಬೈಲ್​ ಚಾರ್ಜರ್​ ಬಳಸುವಾಗ ಎಚ್ಚರಿಕೆ; ಸೈಬರ್ ಕಳ್ಳರಿದ್ದಾರೆ!

Lok Sabha Election 2024
ಕರ್ನಾಟಕ54 mins ago

Lok Sabha Election 2024: ಅನುಮಾನ ಬೇಡ, ಮೋದಿ ಮತ್ತೊಮ್ಮೆ ಪ್ರಧಾನಿಯಾಗ್ತಾರೆ: ಸಾಹಿತಿ ಎಸ್.ಎಲ್. ಭೈರಪ್ಪ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ14 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌