Site icon Vistara News

Padma Awards 2023: ಮುಖ್ಯಮಂತ್ರಿಯಿಂದ ಪದ್ಮ ಪುರಸ್ಕೃತರ ಭೇಟಿ; ಸನ್ಮಾನ, ಅಭಿನಂದನೆ

ಮೈಸೂರು: ಪದ್ಮಭೂಷಣ ಪ್ರಶಸ್ತಿಗೆ (Padma Awards 2023) ಆಯ್ಕೆಯಾಗಿರುವ ಕಾದಂಬರಿಕಾರ ಎಸ್.ಎಲ್.ಭೈರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಭೇಟಿಯಾಗಿ ಅಭಿನಂದಿಸಿದರು. ಕುವೆಂಪು ನಗರದ ಅವರ ನಿವಾಸಕ್ಕೆ ತೆರಳಿ ಅಭಿನಂದಿಸಿದ ಸಿಎಂ, ಇದೇ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಿದರು.

ಜತೆಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಿರಿಧಾನ್ಯ ತಜ್ಞ ಡಾ.ಖಾದರ್ ವಲ್ಲಿ, ಪ್ರಾಚ್ಯವಸ್ತು ಸಂಶೋಧನೆ ಹಿನ್ನೆಲೆಯಲ್ಲಿ ಪದ್ಮಶ್ರೀ ಪುರಸ್ಕೃತರಾದ ಮೈಸೂರಿನ ಎಸ್‌. ಸುಬ್ಬರಾಮನ್ ಅವರ ನಿವಾಸಕ್ಕೆ ಭೇಟಿ ನೀಡಿ ಸಿಎಂ ಅಭಿನಂದಿಸಿ ಸನ್ಮಾನಿಸಿದರು.

ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ್, ಶಾಸಕರಾದ ಎಸ್.ಎ. ರಾಮದಾಸ್, ಎಲ್.ನಾಗೇಂದ್ರ, ಸಂಸದ ಪ್ರತಾಪ ಸಿಂಹ, ಸಾಹಿತಿ ಪ್ರಧಾನ ಗುರುದತ್, ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಉಪಸ್ಥಿತರಿದ್ದರು.

Exit mobile version